Tag: ತಾಲೂಕು ಪಂಚಾಯ್ತಿ

  • ನರೇಗಾ ಕಾಮಗಾರಿಯಲ್ಲಿ ಕೋಟ್ಯಂತರ ರೂ. ಗೋಲ್ಮಾಲ್- ಅಧಿಕಾರಿಗಳಿಬ್ಬರ ವಿರುದ್ಧ ಎಫ್‌ಐಆರ್

    ನರೇಗಾ ಕಾಮಗಾರಿಯಲ್ಲಿ ಕೋಟ್ಯಂತರ ರೂ. ಗೋಲ್ಮಾಲ್- ಅಧಿಕಾರಿಗಳಿಬ್ಬರ ವಿರುದ್ಧ ಎಫ್‌ಐಆರ್

    ರಾಯಚೂರು: ಜಿಲ್ಲೆಯ ದೇವದುರ್ಗ (Devadurga) ತಾಲೂಕಿನಲ್ಲಿ 2020-21 ರಿಂದ 2022-23ರವರೆಗೆ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ಮಹಾ ಲೂಟಿ ನಡೆದಿರುವುದು ವಿಶೇಷ ಸಾಮಾಜಿಕ ಲೆಕ್ಕ ಪರಿಶೋಧನಾ ಸಮಿತಿ ವರದಿಯಲ್ಲಿ ಬಯಲಾದ ಬೆನ್ನಲ್ಲೇ ದೇವದುರ್ಗ ತಾಲೂಕು ಪಂಚಾಯ್ತಿಯ (Taluk Panchayat) ಹಿಂದಿನ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

    ಹಿಂದಿನ ಇಓ ಪಂಪಾಪತಿ ಹಿರೇಮಠ ಹಾಗೂ ಸಹಾಯಕ ನಿರ್ದೇಶಕ ಬಸಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ನರೇಗಾ ಕಾಮಗಾರಿಗಳ ಒಟ್ಟು 49.29 ಕೋಟಿ ರೂ. ಸರ್ಕಾರದ ಹಣ ನಷ್ಟ ಮಾಡಿದ ಆರೋಪ ಹಿನ್ನೆಲೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವದುರ್ಗ ತಾಲೂಕಿನ 33 ಗ್ರಾ.ಪಂ ನರೇಗಾ (NREGA) ಕಾಮಗಾರಿಯಲ್ಲಿ ಲೂಟಿಯಾಗಿರುವುದು ಬಯಲಾಗಿದ್ದು, ದೇವದುರ್ಗ ತಾ.ಪಂ ಸಹಾಯಕ ನಿರ್ದೇಶಕ ಅಣ್ಣಾರಾವ್ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಇಂದು ಬೆಂಗಳೂರಲ್ಲಿ 2ನೇ ದಿನದ ಕಂಬಳ – ಏನೇನಿದೆ ಕಾರ್ಯಕ್ರಮ?

    115 ಕಾಮಗಾರಿಗಳು ಅನುಷ್ಠಾನಗೊಳ್ಳದೇ ಇದ್ದರೂ 66.86 ಕೋಟಿ ರೂ. ಪಾವತಿ ಮಾಡಲಾಗಿದೆ. ಅಸ್ತಿತ್ವದಲ್ಲೇ ಇರದ ಮಾರುತೇಶ್ವರ ಎಂಟರ್ಪ್ರೈಸ್ ಸಾಮಗ್ರಿ ಖರೀದಿ ಅಂತ 102 ಕೋಟಿ ರೂ. ಪಾವತಿ ಮಾಡಿದ್ದು, 19.26 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಕಡತಗಳೇ ಇಲ್ಲಾ. ಈ ಎಲ್ಲಾ ಗೋಲ್‌ಮಾಲ್‌ಗಳ ಹಿನ್ನೆಲೆ ಜಿಲ್ಲಾ ಪಂಚಾಯ್ತಿ ಸಿಇಓ ನಿರ್ದೇಶನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಹಣ ಲಪಟಾಯಿಸಿದ್ರೂ ಬಿಡದಿ ಇನ್ಸ್‌ಪೆಕ್ಟರ್‌ ಸಸ್ಪೆಂಡ್ ಯಾಕಿಲ್ಲ?- ಭ್ರಷ್ಟನಿಗೆ ರಾಜಕೀಯ ರಕ್ಷಣೆ ಎಂದ ಮಾಜಿ ಶಾಸಕ

  • ಮದ್ಯದ ಅಮಲಿನಲ್ಲಿ ತಾ.ಪಂ. ಸದಸ್ಯನಿಂದ ಸಹ ಸದಸ್ಯನ ಮೇಲೆ ಹಲ್ಲೆ

    ಮದ್ಯದ ಅಮಲಿನಲ್ಲಿ ತಾ.ಪಂ. ಸದಸ್ಯನಿಂದ ಸಹ ಸದಸ್ಯನ ಮೇಲೆ ಹಲ್ಲೆ

    ಮೈಸೂರು: ಮದ್ಯದ ನಶೆಯಲ್ಲಿದ್ದ ತಾಲೂಕು ಪಂಚಾಯ್ತಿ ಸದಸ್ಯ ಮತ್ತೊಬ್ಬ ಸದಸ್ಯನ ಮೇಲೆ ಹಲ್ಲೆ ಮಾಡಿರುವ ಘಟನೆ ಮೈಸೂರಿನ ಮಿನಿ ವಿಧಾನಸೌಧದಲ್ಲಿರುವ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದಿದೆ.

    ವಾಜಮಂಗಲ ತಾಲೂಕು ಪಂಚಾಯ್ತಿ ಕ್ಷೇತ್ರದ ಸದಸ್ಯ ಮಂಜುನಾಥ್, ಶ್ರೀರಾಂಪುರ ತಾಲೂಕು ಪಂಚಾಯ್ತಿ ಕ್ಷೇತ್ರದ ಸದಸ್ಯ ಹನುಮಂತು ಮೇಲೆ ಹಲ್ಲೆ ನಡೆಸಿದ್ದಾರೆ. ಸದಸ್ಯ ಹನುಮಂತು ಮೇಲೆ ಮಂಜುನಾಥ್ ಹೆಲ್ಮೆಟ್ ನಿಂದ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ತಾಲೂಕು ಪಂಚಾಯ್ತಿ ಕಚೇರಿಯ ಒಳಗೆ ಕುಳಿತಿದ್ದ ವೇಳೆಯೇ ಏಕಾಏಕಿ ಕಚೇರಿ ಒಳಗೆ ಬಂದ ಮಂಜುನಾಥ್, ಸದಸ್ಯ ಹನುಮಂತು ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಹನುಮಂತು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ದಿಢೀರ್ ನಡೆದ ಘಟನೆಯಿಂದ ಇತರೆ ತಾಲೂಕು ಪಂಚಾಯ್ತಿ ಸದಸ್ಯರು ತಬ್ಬಿಬ್ಬಾಗಿದ್ದಾರೆ. ಈ ಬಗ್ಗೆ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv