Tag: ತಿದ್ದುಪಡಿ

  • ಇನ್ಮುಂದೆ ನಿರ್ಬಂಧ ಇಲ್ಲದೇ ಎನ್‌ಆರ್‌ಐಗಳು 10 ಲಕ್ಷ ಕಳುಹಿಸಬಹುದು: ಮೊದಲು FCRA ನಿಯಮ ಏನಿತ್ತು? ಏನು ಬದಲಾವಣೆಯಾಗಿದೆ?

    ಇನ್ಮುಂದೆ ನಿರ್ಬಂಧ ಇಲ್ಲದೇ ಎನ್‌ಆರ್‌ಐಗಳು 10 ಲಕ್ಷ ಕಳುಹಿಸಬಹುದು: ಮೊದಲು FCRA ನಿಯಮ ಏನಿತ್ತು? ಏನು ಬದಲಾವಣೆಯಾಗಿದೆ?

    ನವದೆಹಲಿ: ಇನ್ಮುಂದೆ ನಿರ್ಬಂಧ ಇಲ್ಲದೇ  ಅನಿವಾಸಿ ಭಾರತೀಯರು(ಎನ್‌ಆರ್‌ಐ) ವಾರ್ಷಿಕವಾಗಿ 10 ಲಕ್ಷ ರೂ. ಕಳುಹಿಸಬಹುದು.

    ವಿದೇಶಿ ದೇಣಿಗೆ ನಿಯಂತ್ರಣ ಕಾಯಿದೆಯ (FCRA) ಕೆಲವು ನಿಯಮಗಳಿಗೆ ಕೇಂದ್ರ ಗೃಹ ಸಚಿವಾಲಯ ತಿದ್ದುಪಡಿಗಳನ್ನು ಮಾಡಿದೆ. ದೇಣಿಗೆ ಮೊತ್ತ ಹೆಚ್ಚಳ ಮತ್ತು ಸ್ವೀಕಾರದ ಮಾಹಿತಿ ಸಲ್ಲಿಸುವ ಅವಧಿಯನ್ನು ಹೆಚ್ಚಿಸಲಾಗಿದೆ. ಈ ತಿದ್ದುಪಡಿಯಿಂದ ಸಂಬಂಧಿಕರಿಂದ ವಿದೇಶಿ ದೇಣಿಗೆ ಪಡೆಯುವ ವ್ಯಕ್ತಿಗಳು ಹಾಗೂ ಸಂಘ ಸಂಸ್ಥೆಗಳಿಗೆ ಅನುಕೂಲವಾಗಲಿದೆ.

    ತಿದ್ದುಪಡಿ ಏನು?
    ಕೇಂದ್ರ ಗೃಹ ಸಚಿವಾಲಯ ಶುಕ್ರವಾರವೇ ಗೆಜೆಟ್‌ ಅಧಿಸೂಚನೆ ಪ್ರಕಟಿಸಿ 2022ರ ವಿದೇಶಿ ದೇಣಿಗೆ ನಿಯಂತ್ರಣ ತಿದ್ದುಪಡಿ ನಿಯಮಗಳನ್ನು ಜಾರಿಗೆ ತಂದಿದೆ. 2011ರ ವಿದೇಶಿ ದೇಣಿಗೆ ನಿಯಂತ್ರಣ ನಿಯಮಗಳ ಪ್ರಕಾರ ‘1 ಲಕ್ಷ ರೂಪಾಯಿ‘ ಪದವನ್ನು ‘10 ಲಕ್ಷ ರೂಪಾಯಿ‘ ಮತ್ತು ‘30 ದಿನಗಳು’ ಪದವನ್ನು ‘3 ತಿಂಗಳು‘ ಎಂದು ತಿದ್ದುಪಡಿ ಮಾಡಲಾಗಿದೆ.

    ಈ ಮೊದಲು ಹಣಕಾಸು ವರ್ಷವೊಂದರಲ್ಲಿ ಯಾವುದೇ ವ್ಯಕ್ತಿಯು 1 ಲಕ್ಷ ರೂ. ಅಥವಾ ಅದಕ್ಕಿಂತಲೂ ಹೆಚ್ಚಿನ ಮೊತ್ತದ ವಿದೇಶಿ ದೇಣಿಗೆಯನ್ನು ಸ್ವೀಕರಿಸಿದ್ದಲ್ಲಿ ದೇಣಿಗೆ ಪಡೆದ ದಿನದಿಂದ 30 ದಿನದ ಒಳಗೆ ಕೇಂದ್ರ ಸರಕಾರಕ್ಕೆ ಪೂರ್ಣ ವಿವರಗಳನ್ನು ಸಲ್ಲಿಸುವುದು ಕಡ್ಡಾಯವಾಗಿತ್ತು. ತಿದ್ದುಪಡಿಯಾದ ಬಳಿಕ ವಿದೇಶದಲ್ಲಿರುವ ಸಂಬಂಧಿಕರು ತಮ್ಮ ಕುಟುಂಬಸ್ಥರು ಅಥವಾ ಬೇರೆಯವರಿಗೆ ಕೇಂದ್ರದ ಗಮನಕ್ಕೆ ತರದೇ ಗರಿಷ್ಟ 10 ಲಕ್ಷ ರೂ.ವರೆಗೆ ದೇಣಿಗೆ ಕಳುಹಿಸಲು ಅನುಮತಿ ನೀಡಲಾಗಿದೆ. 10 ಲಕ್ಷ ರೂ.ಗಿಂತ ಹೆಚ್ಚಿನ ದೇಣಿಗೆ ಕಳಹಿಸಿದ್ದಲ್ಲಿ ದೇಣಿಗೆ ಸ್ವೀಕಾರದ ದಿನಾಂಕದಿಂದ 30 ದಿನಗಳ ಬದಲಿಗೆ 3 ತಿಂಗಳೊಳಗಾಗಿ ಕೇಂದ್ರಕ್ಕೆ ಮಾಹಿತಿಯನ್ನು ಸಲ್ಲಿಸಬೇಕಾಗುತ್ತದೆ.

    ದೇಣಿಗೆ ಸ್ವೀಕರಿಸಲು ‘ನೋಂದಣಿ’ ಮಾಹಿತಿ ಅಥವಾ ‘ಪೂರ್ವ ಅನುಮತಿ’ಗೆ ಸಂಬಂಧಿಸಿದಂತೆ ನಿಯಮ 9ಕ್ಕೆ ಕೂಡ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ಇಲ್ಲಿಯವರೆಗೆ ದೇಣಿಗೆ ಪಡೆದ ಹಣದ ವಹಿವಾಟಿಗೆ ಬಳಸಲಾಗುವ ಬ್ಯಾಂಕ್‌ ಅಕೌಂಟ್‌ ಕುರಿತು 30 ದಿನದೊಳಗೆ ಕೇಂದ್ರಕ್ಕೆ ವಿವರ ಸಲ್ಲಿಸಬೇಕಿತ್ತು. ಈ ನಿಯಮವನ್ನು ಸಡಿಲಗೊಳಿಸಿದ್ದು, 45 ದಿನಗಳವರೆಗೆ ಹೆಚ್ಚಿಸಲಾಗಿದೆ.  ಇದನ್ನು ಓದಿ: 12 ಸಾವಿರ NGOಗಳ ವಿದೇಶಿ ದೇಣಿಗೆ ಸ್ವೀಕಾರ ಪರವಾನಿಗೆ ರದ್ದು

    ಹೊಸ ನಿಯಮಗಳಲ್ಲಿ ವಿದೇಶಿ ದೇಣಿಗೆ ಸ್ವೀಕರಿಸುವ ಸಂಸ್ಥೆಗಳು ಆ ಮೊತ್ತದಲ್ಲಿ ಶೇ. 20ಕ್ಕಿಂತಲೂ ಹೆಚ್ಚಿನ ಹಣವನ್ನು ಆಡಳಿತಾತ್ಮಕ ಕೆಲಸಗಳಿಗೆ ಬಳಸುವಂತಿಲ್ಲ ಎಂಬ ಷರತ್ತನ್ನು ಸೇರಿಸಲಾಗಿದೆ. ಈ ಮೊದಲು ಇದರ ಮಿತಿ ಶೇ. 50 ರಷ್ಟಿತ್ತು.

    ವಿದೇಶದಿಂದ ನೆರವು ಪಡೆದು ದೇಶದ ಒಳಗಡೆ ಉಗ್ರ ಚಟುವಟಿಕೆ, ರೈತರ ಪ್ರತಿಟಭನೆ, ಬಂದ್‌ ಇತ್ಯಾದಿ ಚಟುವಟಿಕೆಗಳಿಗೆ ಎನ್‍ಜಿಒಗಳ ಹಣ ಬಳಕೆಯಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ FCRA ಗೆ ತಿದ್ದುಪಡಿ ತಂದಿತ್ತು. ಎನ್‌ಜಿಒಗಳು ಯಾವುದೇ ರಾಜಕೀಯ ಪಕ್ಷಗಳ ಜೊತೆ ನೇರವಾದ ನಂಟು ಹೊಂದಿರಬಾರದು ಎಂದು ಸೂಚಿಸಲಾಗಿದೆ.

    ವಿದೇಶದಿಂದ ಹಣ ಪಡೆಯುವ ಎನ್‍ಜಿಒಗಳು ದೆಹಲಿಯ ಎಸ್‍ಬಿಐ ಕಚೇರಿಯಲ್ಲಿ ಖಾತೆ ತೆರೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೇ ಹಣದ ಲೆಕ್ಕಪತ್ರ ಸಂಬಂಧ ಹಲವು ಬಿಗಿ ನಿಯಮಗಳನ್ನು ಪಾಲನೆ ಮಾಡಬೇಕೆಂದು ಎನ್‍ಜಿಒಗಳಿಗೆ ಗೃಹ ಇಲಾಖೆ ಸೂಚಿಸಿದೆ.

    Live Tv

  • ಸರ್ಕಾರದ ಭೂಸುಧಾರಣಾ ಕಾಯ್ದೆಯ ತಿದ್ದುಪಡಿಗೆ ಆರ್‌ಎಸ್‌ಎಸ್ ವಲಯದಲ್ಲಿ ಆಕ್ಷೇಪ

    ಸರ್ಕಾರದ ಭೂಸುಧಾರಣಾ ಕಾಯ್ದೆಯ ತಿದ್ದುಪಡಿಗೆ ಆರ್‌ಎಸ್‌ಎಸ್ ವಲಯದಲ್ಲಿ ಆಕ್ಷೇಪ

    ಬೆಂಗಳೂರು: ಯಾರು ಬೇಕಾದರೂ ಕೃಷಿಭೂಮಿ ಖರೀದಿಸಬಹುದೆಂಬ ನಿಯಮವನ್ನು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಜಾರಿ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಶಾಕಿಂಗ್ ನ್ಯೂಸ್. ಬಿಜೆಪಿ ಸರ್ಕಾರದ ಈ ನಿರ್ಧಾರಕ್ಕೆ ಆರ್‌ಎಸ್‌ಎಸ್ ಚಿಂತನೆಗಳಿಂದ ಪ್ರೇರಿತರಾಗಿರುವ ಇತರೇ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.

    ಭಾರತೀಯ ಕಿಸಾನ್ ಸಂಘ, ಸ್ವದೇಶಿ ಜಾಗರಣ ಮಂಚ್ ಮತ್ತು ಕೃಷಿ ಪ್ರಯೋಗ ಪರಿವಾರಗಳಿಂದ ಕಾಯ್ದೆಯ ತಿದ್ದುಪಡಿಗೆ ಆಕ್ಷೇಪ ವ್ಯಕ್ತವಾಗಿದೆ. ಇಂದು ಸಂಜೆ ಸಿಎಂ ಯಡಿಯೂರಪ್ಪ ಭೇಟಿ ಮಾಡಿದ ಸಂಘಟನೆಗಳ ಮುಖ್ಯಸ್ಥರ ನಿಯೋಗ, ಭೂ ಸುಧಾರಣಾ ತಿದ್ದುಪಡಿ ಬಗ್ಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಿದೆ.

    ಭಾರತೀಯ ಕಿಸಾನ್ ಸಂಘ ದ ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ್ ಕಾಸರಘಟ್ಟ, ಸ್ವದೇಶಿ ಜಾಗರಣ ಮಂಚ್ ನ ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಜಗದೀಶ್, ಅಖಿಲ ಭಾರತ ಸಂಯೋಜಕ್ ಪ್ರೊ.ಕುಮಾರಸ್ವಾಮಿ, ಕೃಷಿ ಪ್ರಯೋಗ ಪರಿವಾರದ ಅರುಣ ಮತ್ತು ವೃಷಾಂಕ್ ಭಟ್ ಇದ್ದ ನಿಯೋಗ ಸಿಎಂ ಯಡಿಯೂರಪ್ಪ ಅವರನ್ನು ಅವರ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿತ್ತು.

    ಸಂಘಟನೆಗಳ ಒತ್ತಾಯ ಮತ್ತು ಆಕ್ಷೇಪಣೆಗಳೇನು?
    1. 79 ಎ, ಬಿ ತಿದ್ದುಪಡಿ ಮೂಲಕ ರೈತರಲ್ಲದವರಿಗೆ ಕೃಷಿ ಭೂಮಿ ಖರೀದಿಸಲು ಅವಕಾಶ ಕೊಡುವುದು, ಸ್ವಾಗತಾರ್ಹ. ಕೃಷಿಗೆ ಹೆಸರು, ವಿದ್ಯಾವಂತರು ಬರುವುದು ಒಳ್ಳೆಯದೇ ಆದರೆ ಹಾಗೆ ಕೃಷಿ ಭೂಮಿ ಪಡೆದವರು ಅಲ್ಲಿ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಯನ್ನು ಮಾಡಬೇಕು ಕೈಗಾರಿಕಾ ಉದ್ದೇಶಕ್ಕೆ ಈ ಭೂಮಿಯನ್ನು ಬಳಸಬಾರದು ಮತ್ತು ಮುಂದೆ ಸದರಿ ಭೂಮಿಯನ್ನು ಕೈಗಾರಿಕೆ ಉದ್ದೇಶಕ್ಕೆ ಮಾರುವ ಅವಕಾಶವೂ ಇರಬಾರದು ಎಂಬುದು ಆಗ್ರಹ.
    2. ಆದರೆ ಸರ್ಕಾರದ ಈ ಕಾಯ್ದೆ ತಿದ್ದುಪಡಿ ಪ್ರಸ್ತಾಪ ಕೈಗಾರಿಕೆಗಳಿಗೆ, ರಿಯಲ್ ಎಸ್ಟೇಟ್ ಉದ್ಯಮಕ್ಕೆ ಪೂರಕವಾಗಿದೆ ಎಂಬ ವಾದ ಕೇಳಿಬರುತ್ತಿದೆ. ಸರ್ಕಾರ ರೈತರ ಪರವಾಗಿ ಸ್ಪಷ್ಟ ನಿಲುವು ಪ್ರಕಟಿಸದಿರುವುದು ಆತಂಕಕ್ಕೆ ಕಾರಣವಾಗಿದೆ.
    3. ಹೀಗಾಗಿ ಕಾಯ್ದೆಗೆ ತಿದ್ದುಪಡಿ ತರುವ ಮೊದಲು ನೀವು ರೈತ ಸಂಘಟನೆಗಳೊಂದಿಗೆ ಚರ್ಚಿಸಬೇಕು. ವಿಷಯ ಪರಿಣಿತರ ಸಮಿತಿ ರಚಿಸಿ ಸಲಹೆ ಪಡೆಯಬೇಕು.


    4 ಹೊಸದಾಗಿ ಕೃಷಿ ಭೂಮಿ ಖರೀದಿಸುವರಿಗೆ ಗರಿಷ್ಠ ಮಿತಿಯನ್ನು ಹಿಂದಿನಂತೆಯೇ 54 ಎಕರೆಗೆ ಮುಂದುವರಿಸುವುದು ಮತ್ತು ಹೊಸದಾಗಿ ಕೃಷಿ ಭೂಮಿ ಖರೀದಿಸಿದರು ಕನಿಷ್ಠ 8 ವರ್ಷ ಮಾರುವಂತಿಲ್ಲ ಎಂಬ ಷರತ್ತಿರಲಿ.
    5, ಕೃಷಿ ಭೂಮಿಯಲ್ಲಿ ಇಂತಹ ಕೃಷಿ ಪೂರಕ ಘಟಕಗಳನ್ನು ನಿರ್ಮಿಸಲು ಕಂದಾಯ ಇಲಾಖೆಯ ಅನುಮತಿಯ ಅಗತ್ಯ ಇರಕೂಡದು. ರೈತರಿಗೆ ಮನೆ, ಕೊಟ್ಟಿಗೆ, ಕೃಷಿ ಸಂಸ್ಕರಣಾ ಘಟಕ, ಗೋದಾಮು, ಹೋಮ್ ಸ್ಟೇ, ಒಂದು ಎಕರೆಗಿಂತ ಹೆಚ್ಚಿನ ಜಾಗದಲ್ಲಿ ಘಟಕಗಳು ಬಂದಲ್ಲಿ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳ ಅನುಮತಿ ಅಗತ್ಯ ಎಂದು ನಮೂದಿಸಬೇಕು.
    6 ಟ್ರಸ್ಟ್, ಕಂಪನಿ, ರಾಜ್ಯದ ಕೇಂದ್ರದ ಬಹುರಾಜ್ಯ ಸಹಕಾರಿ ಕಾಯ್ದೆಗಳಲ್ಲಿ ನೋಂದಣಿ ಮಾಡುವ ಸಂಸ್ಥೆಗಳು ರೈತರಿಂದ ಭೂಮಿ ಖರೀದಿಸುವಾಗ ಖರೀದಿಸುವವರ ಪೂರ್ತಿ ವಿವರ ಮತ್ತು ಖರೀದಿಸುವ ಉದ್ದೇಶ ಮಾರುವ ರೈತರಿಗೆ ತಿಳಿಯುವಂತಾಗಬೇಕು.


    6 ಪ್ಲಾನೇಷನ್ ಕಾಯ್ದೆ ಅಡಿಯಲ್ಲಿ ಸಾವಿರಾರು ಎಕರೆ ಭೂಮಿ ಹೊಂದಲು ಅವಕಾಶವಿದೆ. ಈ ಕಾಯ್ದೆಯನ್ನು ಮರುಪರಿಶೀಲಿಸಬೇಕು.
    8 ನೀರಾವರಿ ಕಲ್ಪಿಸಲಾಗಿದೆ ಸರ್ಕಾರ ಸಾವಿರಾರು ಕೋಟಿ ಹಣ ಖರ್ಚು ಮಾಡಿದೆ. ಈಗ ಅದೆ ನೀರಾವರಿ ಭೂಮಿಯನ್ನು ಕೈಗಾರಿಕೆಗೆ ನೀಡುವ ಬಗ್ಗೆ ಬಿಗಿ ನೀತಿ ಬೇಕು.
    9. ಭೂ ಸುಧಾರಣಾ ಕಾಯಿಯಲ್ಲಿ ತರುವ ಮಾರ್ಪಾಡುಗಳನ್ನು ಪುರ್ವಾನ್ವಯದಿಂದ ಜಾರಿಗೊಳಿಸುವುದು ಬೇಡ. ಹೀಗೆ ಮಾಡುವುದರಿಂದ ಸರ್ಕಾರ ಹೊಸಬರನ್ನು ಕೃಷಿ ಕ್ಷೇತ್ರಕ್ಕೆ ಹಿತ ರಕ್ಷಣೆಗೆ ಬದ್ಧವಾಗಿದೆ ಎಂಬ ಸಂದೇಶ ಸಮಾಜಕ್ಕೆ ಹೋಗುತ್ತದೆ.

  • ಆಟೋ ಚಾಲಕನಿಗೆ ಬಿತ್ತು ಬರೋಬ್ಬರಿ 47,500 ರೂ. ದಂಡ

    ಆಟೋ ಚಾಲಕನಿಗೆ ಬಿತ್ತು ಬರೋಬ್ಬರಿ 47,500 ರೂ. ದಂಡ

    ಭುವನೇಶ್ವರ: ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ.

    ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಭುವನೇಶ್ವರದ ಟ್ರಾಫಿಕ್ ಪೊಲೀಸ್ ಹಾಗೂ ಆರ್‍ಟಿಓ ಸಿಬ್ಬಂದಿ ಬುಧವಾರ ನಗರದ ಆಚಾರ್ಯ ವಿಹಾರ ಚೌಕ್‍ನಲ್ಲಿ ಆಟೋ ರಿಕ್ಷಾ ತಡೆದು, ಸಂಚಾರಿ ನಿಯಮ ಕಾಯ್ದೆಯನ್ನು ಉಲ್ಲಂಘಿಸಿದ್ದಕ್ಕಾಗಿ ಚಾಲಕನಿಗೆ 47,500 ರೂ.ಗಳ ಚಲನ್ ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಸಾಮಾನ್ಯ ಅಪರಾಧ 500ರೂ., ಅಮಾನ್ಯಗೊಂಡ ಡ್ರೈವಿಂಗ್ ಲೈಸೆನ್ಸ್ 5000 ರೂ., ಪರ್ಮಿಟ್ ನಿಯಮ ಉಲ್ಲಂಘಿಸಿದ್ದಕ್ಕೆ 10,000 ರೂ., ಕುಡಿದು ವಾಹನ ಚಲಾಯಿಸಿದ್ದಕ್ಕೆ 10,000ರೂ., ಗಾಳಿ, ಶಬ್ದ ಮಾಲಿನ್ಯ ನಿಯಮ ಉಲ್ಲಂಘಿಸಿದ್ದಕ್ಕೆ 10,000, ಅನಧಿಕೃತ ವ್ಯಕ್ತಿಗೆ ಚಾಲನೆ ಮಾಡಲು ಬಿಟ್ಟಿದ್ದಕ್ಕೆ 5,000 ರೂ. ನೋಂದಣಿ ಮಾಡದೆ ಹಾಗೂ ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲದೆ ವಾಹನ ಚಲಾಯಿಸಿದ್ದಕ್ಕೆ 5,000 ರೂ., ಇನ್ಶುರೆನ್ಸ್ ಇಲ್ಲದೆ ವಾಹನ ಚಲಾಯಿಸಿದ್ದಕ್ಕೆ 2,000 ರೂ. ಒಟ್ಟು 47,500 ರೂ. ದಂಡವನ್ನು ವಿಧಿಸಲಾಗಿದೆ.

    ಮದ್ಯ ಸೇವಿಸಿರುವುದಾಗಿ ಒಪ್ಪಿಕೊಂಡ ಆಟೋ ಚಾಲಕ ಹರಿಬಂಧು ಕನ್ಹಾರ್ ಈ ಕುರಿತು ಪ್ರತಿಕ್ರಿಯಿಸಿದ್ದು, ನನಗೆ ಅಷ್ಟು ದೊಡ್ಡ ಪ್ರಮಾಣದ ದಂಡವನ್ನು ಪಾವತಿಸಲು ಸಾಧ್ಯವಿಲ್ಲ. ಅವರು ನನ್ನ ವಾಹನವನ್ನು ವಶಪಡಿಸಿಕೊಳ್ಳಲಿ ಅಥವಾ ಜೈಲಿಗೆ ಕಳುಹಿಸಲಿ, ನಾನು ಅಷ್ಟು ಮೊತ್ತವನ್ನು ಪಾವತಿಸಲು ಸಾಧ್ಯವಿಲ್ಲ. ಅಲ್ಲದೆ, ಎಲ್ಲ ದಾಖಲೆಗಳು ನನ್ನ ಮನೆಯಲ್ಲಿವೆ ಎಂದು ತಿಳಿಸಿದ್ದಾರೆ.

    ಚಾಲಕ ಹಾಗೂ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಸೆಪ್ಟೆಂಬರ್ 1ರಿಂದ ಜಾರಿಯಾಗಿರುವ ಹೊಸ ಸಂಚಾರಿ ನಿಯಮಗಳ ನಿಬಂಧನೆ ಪ್ರಕಾರ ದಂಡ ವಿಧಿಸಲಾಗಿದೆ. ಒಟ್ಟು 47,500 ರೂ. ದಂಡವನ್ನು ಚಂದ್ರಶೇಖರಪುರದ ಚಾಲನಾ ಪರೀಕ್ಷಾ ಕೇಂದ್ರದಲ್ಲಿ ಪಾವತಿಸುವಂತೆ ಆಟೋ ಚಾಲಕನಿಗೆ ಸೂಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

  • ರಜೆಯಲ್ಲೂ ಕೆಲ್ಸಕ್ಕೆ ಹಾಜರ್: ಪಬ್ಲಿಕ್ ಟಿವಿ ಕ್ಯಾಮೆರಾ ನೋಡಿದ್ದೆ ತಡ ಎದ್ನೋ ಬಿದ್ನೋ ಎಂಬಂತೆ ದಾಖಲೆ ಎತ್ತಿಟ್ಟ ಸಿಬ್ಬಂದಿ!

    ರಜೆಯಲ್ಲೂ ಕೆಲ್ಸಕ್ಕೆ ಹಾಜರ್: ಪಬ್ಲಿಕ್ ಟಿವಿ ಕ್ಯಾಮೆರಾ ನೋಡಿದ್ದೆ ತಡ ಎದ್ನೋ ಬಿದ್ನೋ ಎಂಬಂತೆ ದಾಖಲೆ ಎತ್ತಿಟ್ಟ ಸಿಬ್ಬಂದಿ!

    ಬೆಂಗಳೂರು: ಗಾಂಧಿ ಜಯಂತಿಯ ಅಂಗವಾಗಿ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಸಹ ರಜೆ ಘೋಷಣೆ ಮಾಮೂಲಿ. ಆದರೆ ರಾಜಧಾನಿಯ ಕಂದಾಯ ಇಲಾಖೆಯ ಸಿಬ್ಬಂದಿ ಮಾತ್ರ ಇವತ್ತೂ ಕೆಲಸದಲ್ಲಿ ನಿರತರಾಗಿದ್ದರು. ಆದರೆ ಪಬ್ಲಿಕ್ ಟಿವಿಯ ಕ್ಯಾಮೆರಾ ನೋಡಿ ಸಿಬ್ಬಂದಿ ಕಕ್ಕಾಬಿಕ್ಕಿಯಾಗಿದ್ದಾರೆ.

    ಹೌದು, ಕೆಲಸದ ದಿನಗಳಲ್ಲೇ ಸರ್ಕಾರಿ ಸಿಬ್ಬಂದಿ ಸರಿಯಾಗಿ ಕೆಲಸ ಮಾಡುವುದಿಲ್ಲ ಎನ್ನುವ ಮಾತುಗಳು ಕೇಳಿಬರುವುದು ಸಹಜ. ಆದರೆ ಕಂದಾಯ ಇಲಾಖೆಯ ಸಿಬ್ಬಂದಿ ಮಾತ್ರ ಗಾಂಧಿ ಜಯಂತಿಯ ದಿನದಂದು ಸಹ ಕಛೇರಿಯಲ್ಲಿ ಬಿಡುವಿಲ್ಲದ ರೀತಿ ಕೆಲಸ ಮಾಡಿದ್ದಾರೆ. ಆದರೆ ಪಬ್ಲಿಕ್ ಟಿವಿ ಕ್ಯಾಮೆರಾ ಕಂಡಿದ್ದೆ ತಡ ಕಕ್ಕಾಬಿಕ್ಕಿಯಾದ ಸಿಬ್ಬಂದಿ ಎದ್ನೋ, ಬಿದ್ನೋ ಎನ್ನುವ ರೀತಿಯಲ್ಲಿ ದಾಖಲೆಗಳನ್ನು ಎತ್ತಿಡಲು ಪ್ರಯತ್ನಿಸಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

    ರಜಾ ದಿನವೂ ಸಹ ಕಂದಾಯ ಭವನದಲ್ಲಿ ನಾಲ್ವರು ಸಿಬ್ಬಂದಿ ತಿದ್ದುಪಡಿ ಕೆಲಸವನ್ನು ಮಾಡಿದ್ದಾರೆ. ಕೈಯಲ್ಲಿ ಫೈಲ್‍ಗಳನ್ನು ಹಿಡಿದು, ಕಂಪ್ಯೂಟರ್ ಮುಂದೆ ಕೆಲಸ ಮಾಡುತ್ತಿದ್ದರು. ಇದಲ್ಲದೇ ಉಪನೋಂದಣಿ ವಿಭಾಗದ ವ್ಯವಸ್ಥಾಪಕ ನಿರ್ದೇಶಕರ(ಎಂಡಿ) ಕಛೇರಿಯನ್ನು ಸಹ ಓಪನ್ ಮಾಡಿದ್ದರು. ಎಂಡಿ ರಜಾದಲ್ಲಿದ್ದರೂ, ಅವರ ಛೇಂಬರ್ ಮಾತ್ರ ಓಪನ್ ಆಗಿತ್ತು.

    ರಜಾ ದಿನದಲ್ಲೂ ಕೆಲಸ ಮಾಡುತ್ತಿರುವ ವಿಚಾರ ತಿಳಿದು ಸ್ಥಳಕ್ಕೆ ತೆರಳಿದ ಪಬ್ಲಿಕ್ ಟಿವಿ ಕ್ಯಾಮೆರಾ ನೋಡಿದ್ದೆ ತಡ ಸಿಬ್ಬಂದಿ ತಬ್ಬಿಬ್ಬು ಆಗಿದ್ದಾರೆ. ಅಲ್ಲದೇ ತರಾತುರಿಯಲ್ಲಿ ಫೈಲುಗಳನ್ನು ಎತ್ತಿಡಲು ಮುಂದಾಗಿದ್ದಾರೆ.

    ರಜಾ ಇದ್ದರೂ ಕೆಲಸ ಮಾಡುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಕ್ಕೆ ಸಿಬ್ಬಂದಿ ಒಬ್ಬರು, ಪೆಂಡಿಂಗ್ ಕೆಲಸ ಇದ್ದ ಕಾರಣ ಬಂದಿದ್ದೇವೆ. ನಾವು ಯಾವುದೇ ದಾಖಲೆ ತಿದ್ದುವ ಕೆಲಸ ಮಾಡುತ್ತಿಲ್ಲ ಎನ್ನುವ ಹಾರಿಕೆಯ ಉತ್ತರ ನೀಡಿದ್ದಾರೆ. ವಿಚಿತ್ರ ಏನೆಂದರೆ ಎಂಡಿ ಕಚೇರಿಗೆ ಬಾರದೇ ಇದ್ದರೂ ಅವರ ಕಛೇರಿ ಓಪನ್ ಆಗಿತ್ತು. ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

    ಉಪನೋಂದಣಿ ವಿಭಾಗದ ಎಂಡಿ ಕಛೇರಿಯ ಲಾಕರ್ ನಲ್ಲಿ ಅನೇಕ ಇಲಾಖೆಗಳಿಗೆ ಸಂಬಂಧಪಟ್ಟಂತೆ ದಾಖಲೆಗಳು ಇವೆ. ಒಂದು ವೇಳೆ ಈ ದಾಖಲೆಗಳು ಏನಾದರೂ ತಿದ್ದುಪಡಿಯಾದರೆ, ಇದಕ್ಕೆ ಯಾರು ಹೊಣೆ ಎನ್ನುವ ಪ್ರಶ್ನೆಗಳು ಎದುರಾಗಿದೆ.

    ಕಂದಾಯ ಇಲಾಖೆಯ ಗುಪ್ತ್ ಗುಪ್ತ್ ಕಳ್ಳ ಕೆಲಸದ ಸಂಪೂರ್ಣ ಚಿತ್ರಣ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ ಕೂಡಲೇ ಸಿಎಂ ಕುಮಾರಸ್ವಾಮಿಯವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು- ತಿದ್ದುಪಡಿ ಮಸೂದೆಗೆ ಲೋಕಸಭೆ ಅಸ್ತು

    ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು- ತಿದ್ದುಪಡಿ ಮಸೂದೆಗೆ ಲೋಕಸಭೆ ಅಸ್ತು

    ನವದೆಹಲಿ: 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸುವ ಕಾಮುಕರಿಗೆ ಗಲ್ಲು ಶಿಕ್ಷೆ ಹಾಗೂ ಪ್ರಕರಣದ ತ್ವರಿತ ವಿಚಾರಣೆ ನಡೆಸುವ ಅಂಶವಿರುವ ಕ್ರಿಮಿನಲ್ ಕಾಯ್ದೆಯ ತಿದ್ದುಪಡಿ ಮಸೂದೆ ಸೋಮವಾರ ಲೋಕಸಭೆಯಲ್ಲಿ ಪಾಸ್ ಆಗಿದೆ.

    ಜಮ್ಮು ಕಾಶ್ಮೀರ ಬಾಲಕಿ ಮೇಲಿನ ರೇಪ್ ಪ್ರಕರಣ ಸೇರಿದಂತೆ ದೇಶಾದ್ಯಂತ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಸಲಾಗಿತ್ತು. ಅಲ್ಲದೇ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸುವಂತೆ ಹಲವು ಹೋರಾಟಗಾರು ಆಗ್ರಹಿಸಿದ್ದರು. ಸದ್ಯ ಈ ಹೋರಾಟಗಳಿಗೆ ಫಲ ಸಿಕ್ಕಿದೆ.

    2018 ಏಪ್ರಿಲ್ 21 ರಂದು ಕೇಂದ್ರ ಸರ್ಕಾರ ಅಪರಾಧ ಕಾನೂನು (ತಿದ್ದುಪಡಿ) ಸುಗ್ರೀವಾಜ್ಞೆ ಹೊರಡಿಸಿದಾಗ ಹಲವರು ಒಪ್ಪಿಗೆ ನೀಡಿದ್ದರೂ ಸಹ ಮತ್ತಷ್ಟು ಕಠಿಣ ಕಾನೂನು ಅಳವಡಿಸಲು ಪ್ರತಿಭಟನಾಕಾರರು ಆಗ್ರಹಿಸಿದ್ದರು. ಇದರಂತೆ ತಿದ್ದುಪಡಿ ಮಸೂದೆಯಲ್ಲಿ ಬದಲಾವಣೆ ಮಾಡಲಾಗಿದೆ.

    ಸದ್ಯ ಸದನದಲ್ಲಿ ಒಪ್ಪಿಗೆ ನೀಡಿರುವ ಮಸೂದೆಯಲ್ಲಿ 12 ವರ್ಷ ವಯಸ್ಸಿನ ಕೆಳಗಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರೆ ಗಲ್ಲು ಶಿಕ್ಷೆ ಹಾಗೂ ಇಂತಹ ಪ್ರಕರಣಗಳ ವಿಚಾರಣೆ ವೇಗವಾಗಿ ನಡೆಯಬೇಕೆಂಬ ಅಂಶವನ್ನು ಸೇರಿಸಲಾಗಿದೆ. ಜೊತೆಗೆ 16ರ ಕೆಳಗಿನ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರೆ ಇದುವರೆಗೂ ವಿಧಿಸುತ್ತಿದ್ದ 10 ವರ್ಷಗಳ ಕನಿಷ್ಠ ಶಿಕ್ಷೆಯನ್ನು 20 ವರ್ಷಗಳಿಗೆ ಹೆಚ್ಚಿಸಲಾಗಿದ್ದು. ಗರಿಷ್ಠ ಪ್ರಮಾಣದ ಶಿಕ್ಷೆಯಾಗಿ ಜೀವವಾಧಿ ಶಿಕ್ಷೆ ವಿಧಿಸಬಹುದಾಗಿದೆ.

  • ಸಾರಿಗೆ ನೌಕರರ ಮುಷ್ಕರಕ್ಕೆ ಕಾರಣವಾಗಿರುವ ಮಸೂದೆಯಲ್ಲಿ ಏನಿದೆ? ಎಷ್ಟಿದ್ದ ದಂಡ ಎಷ್ಟು ಏರಿಕೆ ಆಗುತ್ತೆ?

    ಸಾರಿಗೆ ನೌಕರರ ಮುಷ್ಕರಕ್ಕೆ ಕಾರಣವಾಗಿರುವ ಮಸೂದೆಯಲ್ಲಿ ಏನಿದೆ? ಎಷ್ಟಿದ್ದ ದಂಡ ಎಷ್ಟು ಏರಿಕೆ ಆಗುತ್ತೆ?

    ನವದೆಹಲಿ: ಕೇಂದ್ರ ಸರ್ಕಾರ ಸಿದ್ಧಪಡಿಸಿರುವ ನೂತನ ಮೋಟಾರು ವಾಹನ ತಿದ್ದುಪಡಿ ಮಸೂದೆಯ ವಿರುದ್ಧ ದೇಶಾದ್ಯಂತ ಸಾರಿಗೆ ಸಂಘಟನೆಗಳು ಆಗಸ್ಟ್ 7 ರಂದು ಮುಷ್ಕರಕ್ಕೆ ಕರೆ ನೀಡಿವೆ. ಈ ಶಾಸನ ಕಾಯ್ದೆಯಾಗಿ ಜಾರಿಯಾದರೆ ಮರಣಶಾಸನ ಎಂದು ಸಂಘಟನೆಗಳು ಆರೋಪಿಸಿವೆ. ಸಂಘಟನೆಗಳ ಆಕ್ರೋಶಕ್ಕೆ ತುತ್ತಾಗಿರುವ ತಿದ್ದುಪಡಿ ಮಸೂದೆಯಲ್ಲಿ ಏನಿದೆ ಎನ್ನುವುದಕ್ಕೆ ಇಲ್ಲಿ 18 ಪ್ರಮುಖ ವಿಚಾರಗಳನ್ನು ನೀಡಲಾಗಿದೆ.

    ಮಸೂದೆಯಲ್ಲಿರುವ ಪ್ರಮುಖ ಅಂಶಗಳು:
    1. ಚಾಲನಾ ಪರವಾನಿಗೆ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ.

    2. ಹಿಟ್-ಅಂಡ್-ರನ್ ಪ್ರಕರಣಗಳಲ್ಲಿ ಸಾವನ್ನಪ್ಪಿದ ಕುಟುಂಬದವರಿಗೆ ಈಗ ಸರ್ಕಾರದಿಂದ ಸಿಗುವ ಪರಿಹಾರ ಧನದ ಮೊತ್ತ 25 ಸಾವಿರ ರೂ ನೀಡುವ ಬದಲು 2 ಲಕ್ಷ ರೂಪಾಯಿಗೆ ಹೆಚ್ಚಳ.

    3. ಅಪ್ರಾಪ್ತರು ವಾಹನ ಚಾಲನೆ ನಡೆಸಿ ಅಪಘಾತ ನಡೆಸಿದರೆ ವಾಹನ ಮಾಲೀಕರು ಅಥವಾ ಪೋಷಕರ ಮೇಲೆ ಕೇಸ್ ದಾಖಲಿಸುವುದು. ಒಂದು ವೇಳೆ ಪೋಷಕರಿಗೆ ತಿಳಿಯದೇ ಕೃತ್ಯ ಎಸಗಿದರೆ ಕೇಸ್ ದಾಖಲಿಸದೇ ಇರುವುದು. ಬಾಲನ್ಯಾಯ ಕಾಯ್ದೆಯ ಅಡಿಯಲ್ಲಿ ಈ ಪ್ರಕರಣಗಳನ್ನು ವಿಚಾರಣೆ ನಡೆಸುವುದು.

    4. ಅಪಘಾತಗಳಲ್ಲಿ ಗಾಯಗೊಂಡವರ ರಕ್ಷಣೆಗೆ ಧಾವಿಸುವವರ ಮೇಲೆ ಯಾವುದೇ ಕೇಸುಗಳನ್ನು ದಾಖಲಿಸಬಾರದು, ಪೊಲೀಸರು ಮತ್ತು ಆಸ್ಪತ್ರೆಗಳು ರಕ್ಷಿಸಿದವರ ಮಾಹಿತಿಯನ್ನು ಕೇಳಬಾರದು.

    5. ಕುಡಿದು ವಾಹನ ಚಾಲನೆ ಎಸಗಿದರೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣ 10 ಸಾವಿರ ರೂ.ಗೆ ಏರಿಕೆ. ಈಗ 2 ಸಾವಿರ ರೂ. ವಿಧಿಸಲಾಗುತ್ತಿದೆ.

    6. ನಿರ್ಲಕ್ಷ್ಯ ವಾಹನ ಚಾಲನೆಗೆ ವಿಧಿಸಲಾಗುತ್ತಿದ್ದ ದಂಡದ ಮೊತ್ತ 1 ಸಾವಿರ ರೂ. ನಿಂದ 5 ಸಾವಿರ ರೂ.ಗೆ ಏರಿಕೆ.

    7. ಚಾಲನಾ ಪರವಾನಿಗೆ ಇಲ್ಲದೆ, ವಾಹನ ಚಲಾಯಿಸಿದರೆ 500 ರೂ. ದಂಡದ ಬದಲು 5 ಸಾವಿರಕ್ಕೆ ಏರಿಕೆ.

    8. ಓವರ್ ಸ್ಪೀಡಿಂಗ್ ಗೆ ವಿಧಿಸಲಾಗುತ್ತಿದ್ದ ದಂಡ 400 ರೂ. ಬದಲು 1 ಸಾವಿರ ರೂ, 2 ಸಾವಿರ ರೂ.ಗೆ ಏರಿಕೆ.

    9. ಸೀಟ್ ಬೆಲ್ಟ್ ಧರಿಸದೇ ವಾಹನ ಚಲಾಯಿಸಿದರೆ 100 ರೂ. ಇದ್ದ ದಂಡವನ್ನು 1 ಸಾವಿರಕ್ಕೆ ಏರಿಕೆ.

    10. ವಾಹನ ಚಾಲನೆ ವೇಳೆ ಮೊಬೈಲ್ ಬಳಸಿ ಸಿಕ್ಕಿಬಿದ್ದಲ್ಲಿ 1 ಸಾವಿರದಿಂದ 5 ಸಾವಿರ ರೂ.ಗೆ ದಂಡ ಏರಿಕೆ.

    11. ಅಪಘಾತ ಸಂದರ್ಭಗಳಲ್ಲಿ ಎಲ್ಲಾ ಗಾಯಗೊಂಡ, ಸಾವನ್ನಪ್ಪಿದ ವ್ಯಕ್ತಿಗಳಿಗೆ ಕಡ್ಡಾಯ ವಿಮೆ.

    12.ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳ ಅಗತ್ಯಕ್ಕೆ ತಕ್ಕಂತೆ ವಾಹನ ಬದಲಾವಣೆ ಮಾಡಿಕೊಡಲು ಅನುಮತಿ ನೀಡಬೇಕು.

    13. ಕಳಪೆ ಕಾಮಗಾರಿ ಹಾಗೂ ರಸ್ತೆಯನ್ನು ಸರಿಯಾಗಿ ನಿರ್ಮಾಣ ಮಾಡದೇ ಸಂಭವಿಸುವ ಅಪಘಾತಗಳಲ್ಲಿ ಕಾಮಗಾರಿ ನಡೆಸಿದ ಕಂಟ್ರಾಕ್ಟರ್, ಎಂಜಿನಿಯರ್ ಹಾಗೂ ಅಧಿಕಾರಿಗಳನ್ನು ಹೊಣೆಯಾಗಿಸುವುದು.

    14. ಅಪಘಾತ ಸಂಭವಿಸಿದ 6 ತಿಂಗಳ ಒಳಗಡೆ ಸಂತ್ರಸ್ತರಿಗೆ ವಿಮೆ ಮೊತ್ತ ಪಾವತಿ ಮಾಡುವಂತೆ ಅವಧಿ ನಿಗದಿ.

    15. 2016ರ ಮಸೂದೆಯಲ್ಲಿದ್ದ ಮೂರನೇ ವ್ಯಕ್ತಿ ವಿಮಾ ಯೋಜನೆ ರದ್ದು. ಈ ಹಿಂದಿನ ಮಸೂದೆಯಲ್ಲಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ 5 ಲಕ್ಷ ರೂ. ಹಾಗೂ ಸಾವನ್ನಪ್ಪಿದ್ದ ವ್ಯಕ್ತಿಗೆ 10 ಲಕ್ಷ ರೂ. ವಿಮೆ ನೀಡಬೇಕಿತ್ತು.

    16. ಚಾಲನಾ ಪರವಾನಗಿ ಅವಧಿ ನವೀಕರಣವನ್ನು ಸುಲಭಗೊಳಿಸಲು ಅವಧಿ ಮುಗಿಯುವ ಒಂದು ತಿಂಗಳ ಮೊದಲು ಅಥವಾ ಅವಧಿ ಮುಗಿದ ಒಂದು ವರ್ಷದವರೆಗೆ ನವೀಕರಣಕ್ಕೆ ಅನುಮತಿ.

    17. ನಿಗದಿಪಡಿಸಿದ ಮಾನದಂಡದ ಪ್ರಕಾರ ಗುಣಮಟ್ಟದ ಭಾಗಗಳು ಅಥವಾ ಎಂಜಿನ್‍ಗಳು ಇಲ್ಲದೇ ಇದ್ದಲ್ಲಿ ಆ ವಾಹನಗಳನ್ನು ಸರ್ಕಾರ ಹಿಂದಕ್ಕೆ ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೇ ಉತ್ಪಾದಕಾ ಕಂಪೆನಿಗಳಿಗೆ 500 ಕೋಟಿ ರೂ. ದಂಡ ವಿಧಿಸಲು ಅವಕಾಶ.

    18. ವಾಣಿಜ್ಯ ವಾಹನಗಳ ಗರಿಷ್ಠ ಬಳಕೆ ಅವಧಿ 20 ವರ್ಷಕ್ಕೆ ಸೀಮಿತಗೊಳಿಸಿರುವುದು

  • ಬಾಲ್ ಟ್ಯಾಂಪರಿಂಗ್ – ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಿದ ಐಸಿಸಿ

    ಬಾಲ್ ಟ್ಯಾಂಪರಿಂಗ್ – ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಿದ ಐಸಿಸಿ

    ದುಬೈ: ಸಂಭಾವಿತರ ಕ್ರೀಡೆ ಎಂದು ಹೆಸರು ಪಡೆದಿರುವ ಕ್ರಿಕೆಟ್ ನ ಕೆಲ ನಿಯಮಗಳಿಗೆ ಐಸಿಸಿ (ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ) ಹೊಸ ತಿದ್ದುಪಡಿ ತರುವ ಮೂಲಕ ಕಳ್ಳಾಟಕ್ಕೆ ಮತ್ತಷ್ಟು ಕಠಿಣ ಶಿಕ್ಷೆ ನೀಡಲು ಮುಂದಾಗಿದೆ.

    ಮಾರ್ಚ್ ನಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಟೂರ್ನಿ ವೇಳೆ ಬಾಲ್ ಟ್ಯಾಂಪರಿಂಗ್ ನಡೆಸಿ ಆಸೀಸ್ ಆಟಗಾರರು ಸಿಕ್ಕಿಬಿದ್ದ ಬಳಿಕ ಕ್ರಿಕೆಟ್ ಅಭಿಮಾನಿಗಳಿಗೆ ಆಘಾತ ಎದುರಾಗಿತ್ತು. ಅಲ್ಲದೇ ಆಟಗಾರರ ವೃತ್ತಿ ಬದುಕಿನ ಮೇಲೆಯೂ ವ್ಯತಿರಿಕ್ತ ಪರಿಣಾಮ ಉಂಟು ಮಾಡಿತ್ತು. ಇದರಿಂದ ಎಚ್ಚೆತ್ತಿರುವ ಐಸಿಸಿ ಐರ್ಲೆಂಡ್‍ನ ಡಬ್ಲಿನ್‍ನಲ್ಲಿ ನಡೆದ ವಾರ್ಷಿಕ ಸಭೆಯ ಬಳಿಕ ಕಠಿಣ ನಿಯಮಗಳ ತಿದ್ದುಪಡಿ ಕುರಿತು ತೀರ್ಮಾನಿಸಿದೆ. ಇದರಿಂದ ಕ್ರೀಡಾಸ್ಫೂರ್ತಿ ಹೆಚ್ಚಿಸುವ ಕುರಿತು ಗಮನಹರಿಸಿದೆ.

    ಈ ಕುರಿತಂತೆ ಹೊಸ ತಿದ್ದುಪಡಿಗಳ ಅನ್ವಯ ಮೋಸದಾಟ, ಬಾಲ್ ಟ್ಯಾಂಪರಿಂಗ್, ವೈಯಕ್ತಿಕ ನಿಂದನೆ ಕೃತ್ಯಗಳನ್ನು ಲೆವೆಲ್ 2 ಮತ್ತು 3 ಅಪರಾಧಗಳ ಅಡಿ ಶಿಕ್ಷೆ ನೀಡಲು ನಿರ್ಧರಿಸಿದೆ. ಅಶ್ಲೀಲ ಪದ ಬಳಕೆ, ಅಂಪೈರ್ ತೀರ್ಮಾನಕ್ಕೆ ವಿರೋಧ ಕೃತ್ಯಗಳನ್ನು ಲೆವೆಲ್ 1 ಅಪರಾಧ ಅಡಿ ಹಾಗೂ ವಿಶೇಷವಾಗಿ ಬಾಲ್ ಟ್ಯಾಂಪರಿಂಗ್ ಮಾಡಿದರೆ ಲೆವೆಲ್ 3 ಅಡಿ ಶಿಕ್ಷೆ ವಿಧಿಸಬಹುದಾಗಿದೆ.

    ಸಮಿತಿಯ ತೆಗೆದುಕೊಂಡಿರುವ ನೂತನ ತಿದ್ದುಪಡಿ ಅನ್ವಯ ಲೆವೆಲ್ 3ರ ಕೃತ್ಯಗಳಿಗೆ 8 ಋಣಾತ್ಮಕ ಅಂಕಗಳಿಂದ 12 ಅಂಕಗಳಿಗೆ ಹೆಚ್ಚಿಸಿದೆ. ಇದು 6 ಟೆಸ್ಟ್ ಅಥವಾ 12 ಏಕದಿನ ಪಂದ್ಯಗಳ ನಿಷೇಧಕ್ಕೆ ಸಮಾನಾಗಿರುತ್ತದೆ. ಅಲ್ಲದೇ ಸ್ಟಂಪ್ ನಲ್ಲಿ ಅಳವಡಿಸುವ ಮೈಕ್ರೊಫೋನನ್ನು ಸಹ ನವೀಕರಿಸುವ ಕುರಿತು ತೀರ್ಮಾನ ಕೈಗೊಂಡಿದ್ದು, ಇದರಲ್ಲಿ ದಾಖಲಾದ ಅಂಶಗಳನ್ನು ಯಾವುದೇ ಸಮಯದಲ್ಲಿ ಬಹಿರಂಗ ಪಡಿಸುವ ಕುರಿತು ಮಾಹಿತಿ ನೀಡಿದೆ.

    ವಿಶೇಷವಾಗಿ ಸದ್ಯ ಕೈಗೊಡಿರುವ ತಿದ್ದುಪಡಿಗಳು ಕ್ರಿಕೆಟ್ ಬೋರ್ಡ್ ಗಳಿಗೂ ಅನ್ವಯ ಆಗಲಿದ್ದು, ಒಂದೊಮ್ಮೆ ನಿರ್ದಿಷ್ಟ ಸಮಿತಿ ಆಟಗಾರರ ನಿಯಮಗಳ ಮಿತಿ ಮೀರಿದರೆ ಕ್ರಿಕೆಟ್ ಮಂಡಳಿ ಸಹ ನಿರ್ಬಂಧಗಳನ್ನು ಎದುರಿಸಬಹುದು ಎಂದು ತಿಳಿಸಿದೆ. ಸದ್ಯ ಮಂಡಳಿ ತೆಗೆದುಕೊಂಡಿರುವ ನಿರ್ಧಾರಗಳು 21ನೇ ಶತಮಾನದಲ್ಲಿ ಕ್ರಿಕೆಟ್ ಆಟದಲ್ಲಿ ಹೊಸ ಚೈತನ್ಯವನ್ನು ತುಂಬಲು ಸಾಧ್ಯವಿದೆ. ಅಲ್ಲದೇ ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದೆ ಎಂದು ಐಸಿಸಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಿಚರ್ಡ್ ಸನ್ ತಿಳಿಸಿದ್ದಾರೆ.