Tag: ತಿಪ್ಪಸಂದ್ರ

  • ಬೆಂಗಳೂರಿನಲ್ಲಿ ಎರಡು ಅಂತಸ್ತಿನ ಮನೆ ಕುಸಿತ

    ಬೆಂಗಳೂರಿನಲ್ಲಿ ಎರಡು ಅಂತಸ್ತಿನ ಮನೆ ಕುಸಿತ

    ಬೆಂಗಳೂರು: ಮತ್ತೊಂದು ಕಟ್ಟಡಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಎರಡು ಅಂತಸ್ತಿನ ಮನೆ (Home) ಕುಸಿದ ಘಟನೆ ಬೆಂಗಳೂರಿನ (Bengaluru) ಭೀಮಾ ನಗರದ ತಿಪ್ಪಸಂದ್ರದಲ್ಲಿ (Thippasandra) ನಡೆದಿದೆ.

    ಕಟ್ಟಡದ ಪಕ್ಕದಲ್ಲಿ ಮತ್ತೊಂದು ಕಟ್ಟಡಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಸದ್ಯ ಮನೆಯಲ್ಲಿದ್ದ ಎಲ್ಲರನ್ನೂ ಪೊಲೀಸರು ಹೊರ ಕಳುಹಿಸಿದ್ದಾರೆ. ಸಂಜೆ 4:15ರ ಸುಮಾರಿಗೆ ಕಟ್ಟಡ ಕುಸಿದಿದೆ. ಕಟ್ಟಡದಲ್ಲಿ ಐದು ಬಾಡಿಗೆ ಮನೆಗಳಿದ್ದವು. ಕಟ್ಟಡ ಕುಸಿದ ವೇಳೆ ಮನೆಯಲ್ಲಿದ್ದವರು ಹೊರಗೆ ಓಡಿದ್ದಾರೆ. ಇದನ್ನೂ ಓದಿ: ಅಮಾನವೀಯವಾಗಿ ಮೃತ ಕಾರ್ಮಿಕನ ಶವ ಎಳೆದೊಯ್ದ 6 ಮಂದಿ ವಿರುದ್ಧ ಎಫ್ಐಆರ್

    ಬೇಸ್‌ಮೆಂಟ್‌ನಲ್ಲಿ ಐದಕ್ಕೂ ಹೆಚ್ಚು ಬೈಕ್‌ಗಳು ಜಖಂಗೊಂಡಿವೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ತಿಳಿದುಬಂದಿದೆ. ಕಟ್ಟಡ ಕುಸಿಯುವ ವೇಳೆ ಆರು ಜನರಿದ್ದರು. ಸದ್ಯ ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. ಕಟ್ಟಡ ಮತ್ತಷ್ಟು ಕುಸಿಯುವ ಸಾಧ್ಯತೆಯಿದ್ದು, ಮನೆಯ ಎರಡೂ ಕಡೆ ಬ್ಯಾರಿಕೇಡ್‌ ಹಾಕಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.  ಇದನ್ನೂ ಓದಿ: ಬೋನಿ ದಾಖಲೆ ಮುರಿಯಲು ಸಜ್ಜಾದ ಸ್ನೇಹಿತೆ – 1,000 ಪುರುಷರೊಟ್ಟಿಗೆ ಸೆಕ್ಸ್‌ ಮಾಡಲು ಅನ್ನಿ ನೈಟ್ ತಯಾರಿ

  • ಬೆಂಜ್ ಗುದ್ದಿದ ರಭಸಕ್ಕೆ 3 ವಾಹನಗಳು ಜಖಂ – 1 ಸಾವು, ಇಬ್ಬರು ಗಂಭೀರ

    ಬೆಂಜ್ ಗುದ್ದಿದ ರಭಸಕ್ಕೆ 3 ವಾಹನಗಳು ಜಖಂ – 1 ಸಾವು, ಇಬ್ಬರು ಗಂಭೀರ

    ಬೆಂಗಳೂರು: ಬೆಂಜ್ ಗುದ್ದಿದ ರಭಸಕ್ಕೆ 4 ವಾಹನಗಳು ಜಖಂಗೊಂಡು ಓರ್ವ ಸಾವನ್ನಪ್ಪಿದ ಘಟನೆ ಬೆಂಗಳೂರಿನ ತಿಪ್ಪಸಂದ್ರ ಮುಖ್ಯ ರಸ್ತೆಯಲ್ಲಿ ನಡೆದಿದೆ.

    ಆಲ್ಟೋ ಕಾರಿನಲ್ಲಿದ್ದ ಹರಿ ಮಂಹತ್ ಮೃತರಾಗಿದ್ದಾರೆ. ವೇಗವಾಗಿ ಬಂದ ಬೆಂಜ್ ಮೊದಲಿಗೆ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ಆ ಬಳಿಕ ಎರಡು ಬೈಕ್‍ಗಳಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಆಲ್ಟೊ ಕಾರು ನುಜ್ಜುಗುಜ್ಜಾಗಿದೆ. ಏರ್ ಬ್ಯಾಗ್ ಓಪನ್ ಹಿನ್ನೆಲೆ ಸಣ್ಣಪುಟ್ಟ ಗಾಯಗಳೊಂದಿಗೆ ಬೆಂಜ್ ಕಾರ್‌ನಲ್ಲಿದ್ದವರು ಪಾರಾಗಿದ್ದಾರೆ. ಇದನ್ನೂ ಓದಿ: ವಿಚ್ಛೇದನದ ಬಳಿಕ ಕುಗ್ಗಿಹೋಗಿ, ಸಾಯುವ ಹಂತ ತಲುಪುತ್ತೇನೆ ಎಂದುಕೊಂಡಿದ್ದೆ: ಸಮಂತಾ

    ನಂದಿತಾ ಚೌಂದ್ರಿ ಅವರಿಗೆ ಈ ಬೆಂಜ್ ಕಾರು ಸೇರಿದೆ. ಬೆಂಜ್ ಕಾರಿನ ಚಾಲಕನ ಅತಿ ವೇಗದಿಂದಲೇ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ. ಘಟನಾ ಸ್ಥಳಕ್ಕೆ ಇಂದಿರಾ ನಗರ ಪೊಲೀಸರು ದೌಡಾಯಿಸಿ ರಕ್ತ ಸಿಕ್ತವಾಗಿರೋ ಚಾಲಕರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಇದನ್ನೂ ಓದಿ  ಕೊರೊನಾ ಆತಂಕ- ಯಾದಗಿರಿಯಲ್ಲಿ ಸಿದ್ಧವಾಯ್ತಿ ಹೈಟೆಕ್ ಐಸಿಯು ವಾರ್ಡ್

    ಬೆಂಜ್ ಕಾರು ಗುದ್ದಿದ ರಭಸಕ್ಕೆ ಮುಂದೆ ಇದ್ದ  ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿ ಹೋಗಿವೆ. ಅಪಘಾತದಲ್ಲಿ ಒಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ.