Tag: ತಿಮಿಂಗಿಲ

  • ತಿಮಿಂಗಿಲದ ಬಗ್ಗೆ ಹೆಚ್‌ಡಿಕೆ ಮಾಹಿತಿ ಕೊಡಲಿ: ಪರಮೇಶ್ವರ್‌

    ತಿಮಿಂಗಿಲದ ಬಗ್ಗೆ ಹೆಚ್‌ಡಿಕೆ ಮಾಹಿತಿ ಕೊಡಲಿ: ಪರಮೇಶ್ವರ್‌

    ಬೆಂಗಳೂರು: ಪೆನ್ ಡ್ರೈವ್ ಹಂಚಿದ ತಿಮಿಂಗಿಲ ಯಾರು ಅಂತ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (HD Kumaraswamy) ಅವರಿಗೆ ಗೊತ್ತಿದ್ದರೆ ಮಾಹಿತಿ ಕೊಡಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Dr.G Parameshwar) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಿಮಿಂಗಿಲ ಯಾರು ಅಂತ ಗೊತ್ತಿದ್ದರೆ ಹೇಳಬಹುದಲ್ವ. ಕುಮಾರಸ್ವಾಮಿ ತಿಮಿಂಗಿಲ ಯಾರೂ ಅಂತ ಹೇಳಿದರೆ ಮುಗಿದು ಹೋಗುತ್ತದೆ. ತಿಮಿಂಗಿಲ ಯಾರೂ ಅಂತ ಕುಮಾರಸ್ವಾಮಿ ಗೆ ಗೊತ್ತಿದೆ ಹಾಗಾದರೆ ಅದನ್ನು ಹೇಳದೇ ಇರೋದೇ ದೊಡ್ಡ ತಪ್ಪಲ್ವಾ?. ತಿಮಿಂಗಿಲ ಯಾರೂ ಅಂತ ಕುಮಾರಸ್ವಾಮಿ ಹೇಳಿಬಿಡಲಿ. ಅಲ್ಲಿಗೆ ಎಲ್ಲವೂ ಮುಗಿದು ಹೋಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ, ಬಿಜೆಪಿ ಮೇಲೆ ಆರೋಪ ಹೊರಿಸುವ ಪ್ರಯತ್ನ: ಅಶೋಕ್

    ಪ್ರಜ್ವಲ್ ಎಲ್ಲಿದ್ದಾನೆ ಎಂಬುದು ಎಸ್ಐಟಿಗೆ (SIT) ಗೊತ್ತಿದೆ. ನಿಮಗೇನಾದರೂ ಮಾಹಿತಿ ಇದೆಯಾ ನಿಮಗೆ? ಪ್ರಜ್ವಲ್ ಎಲ್ಲಿದ್ದಾನೆ ಅಂತ ನಿಮಗೇನಾದರೂ ಗೊತ್ತಿದೆಯಾ?. ಗೊತ್ತಿದ್ದರೆ ಹೇಳಿ ನೀವೇ, ನಮಗೂ ಸಹಾಯ ಆಗುತ್ತದೆ. ಸಿಎಂ ಜೊತೆಗೆ ಸಭೆ ಬಗ್ಗೆ ನಿಮಗೆ ಹೇಳುವ ವಿಚಾರ ಏನೂ ಇಲ್ಲ. ಸಿಎಂ ಕಡೆಯಿಂದ ಕೆಲ ಸೂಚನೆಗಳು ಇದ್ದಾವೆ. ಆದರೆ ನಿಮಗೆ ಹೇಳಲ್ಲ. ಜಾರಕಿಹೊಳಿ ಅವರ ಮನೆಗೆ ಹೋಗಿದ್ದೆ.ಅವರ ಮಗಳು ಚುನಾವಣೆಗೆ ನಿಂತಿದ್ರು. ಅದರ ಬಗ್ಗೆ ಹೋಗಿ ಚರ್ಚೆ ಮಾಡಿದ್ದೆ. ಸಮುದಾಯವಾರು ಡಿಸಿಎಂ ಬಗ್ಗೆ ಚರ್ಚೆ ಮಾಡಿಲ್ಲ. ಭ್ರಷ್ಟಾಚಾರದ ಪೆನ್ ಡ್ರೈವ್ ಇದೆ. ತನಿಖೆ ಮಾಡಿಸುವುದಾದರೆ ಕೊಡ್ತೀನಿ ಎಂದು ದಿನಾ ಹೇಳುತ್ತಿರುತ್ತಾರೆ. ಮೊದಲು ಕೊಡಲಿ. ಕೊಡುವುದಕ್ಕೂ ಮೊದಲು ಹೇಳಿದ್ರೆ ಹೆಂಗೆ ಎಂದು ಹೇಳಿದರು.

  • 80 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ ಮಾರಾಟಕ್ಕೆ ಯತ್ನ – ನಾಲ್ವರು ಅರೆಸ್ಟ್

    80 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ ಮಾರಾಟಕ್ಕೆ ಯತ್ನ – ನಾಲ್ವರು ಅರೆಸ್ಟ್

    ಬೆಂಗಳೂರು: 80 ಕೋಟಿ ರೂ. ಮೌಲ್ಯದ ತಿಮಿಂಗಿಲದ ವಾಂತಿಯನ್ನು ಮಾರಾಟ ಮಾಡಲು ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಪಾಷ, ಮಹಮ್ಮದ್ ಮುನ್ನಾ, ಸಂತೋಷ್, ಜಗನ್ನಾಥಚರ್ ಬಂಧಿತ ಆರೋಪಿಗಳು. ನಗರದ ಬಗಲಗುಂಟೆ ಸಮೀಪ ನಾಲ್ವರು ಆರೋಪಿಗಳು 80.ಕೋಟಿ ಮೌಲ್ಯದ ತಿಮಿಂಗಿಲ ವಾಂತಿ(ಅಂಬರ್ ಗ್ರಿಸ್ ಗಟ್ಟಿ) ಮತ್ತು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ಮರ್ಕ್ಯೂರಿ ತಾಮ್ರದ ಬಾಟಲ್ ಗಳನ್ನು ಮಾರಾಟಕ್ಕೆ ಮುಂದಾಗಿದ್ದರು.

    ಈ ವೇಳೆ ಖಚಿತ ಮಾಹಿತಿ ಆಧಾರಿಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅಪರೂಪದ ಅಂಬರ್ ಗ್ರಿಸ್ ಮತ್ತು ಪುರಾತನ ಕಾಲದ ಮರ್ಕ್ಯೂರಿ ತಾಮ್ರದ ಬಾಟಲ್, ಈಸ್ಟ್ ಇಂಡಿಯಾ ಕಂಪನಿಯ ಪುರಾತನ ಸ್ಟೀಮ್ ಫ್ಯಾನ್ ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ. ಇದನ್ನೂ ಓದಿ: ಏನಿದು ತಿಮಿಂಗಿಲ ವಾಂತಿ? ವಿಶೇಷತೆ ಏನು?

    ಇನ್ನೂ ಅಂಬರ್ ಗ್ರಿಸ್ ಗೆ ವಿದೇಶದಲ್ಲಿ ಬಾರಿ ಬೇಡಿಕೆಯಿದ್ದು, ಸುಗಂಧ ದ್ರವ್ಯಕ್ಕೆ ಇದನ್ನು ಉಪಯೋಗ ಮಾಡುತ್ತಾರೆ ಎನ್ನುವ ಬಗ್ಗೆ ಮಾಹಿತಿ ಸಿಕ್ಕಿದೆ. ಇದೇ ಕಾರಣಕ್ಕೆ ಅಂಬರ್ ಗ್ರಿಸ್ ಒಂದು ಕೆಜಿಗೆ ಬರೋಬ್ಬರಿ ಒಂದು ಕೋಟಿ ರೂಪಾಯಿ ಬೆಲೆ ಇದೆ ಎನ್ನಲಾಗಿದೆ. ಸದ್ಯ ಈ ನಾಲ್ವರು ಆರೋಪಿಗಳಿಗೆ ಇಷ್ಟು ಅಮೂಲ್ಯವಾದ ವಸ್ತುಗಳು ಸಿಕ್ಕಿದಾದಾದರೂ ಹೇಗೆ ಎನ್ನುವುದರ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಸಮುದ್ರದಲ್ಲಿ ಸಿಕ್ತು ಕೋಟಿ ಬೆಲೆಬಾಳುವ ತಿಮಿಂಗಿಲ ವಾಂತಿ!

    ಸಮುದ್ರದಲ್ಲಿ ಸಿಕ್ತು ಕೋಟಿ ಬೆಲೆಬಾಳುವ ತಿಮಿಂಗಿಲ ವಾಂತಿ!

    ಕಾರವಾರ: ಕೋಟ್ಯಂತರ ಬೆಲೆ ಬಾಳುವ ಅತ್ಯಂತ ವಿರಳವಾಗಿ ಸಿಗುವ ‘ತಿಮಿಂಗಿಲದ ವಾಂತಿ’ಯ (ಅಂಬೇರ್ಗ್ರಿಸ್) ಸುಮಾರು ಒಂದು ಕೆ.ಜಿ. ತೂಕದ ತುಣುಕು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲತೀರದಲ್ಲಿ ಮೀನುಗಾರನಿಗೆ ದೊರೆತಿದ್ದು, ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ.

    ಮುರುಡೇಶ್ವರದ ಕಡಲತೀರದಲ್ಲಿ ಮೀನುಗಾರಿಕೆ ನಡೆಸುತಿದ್ದ ಜನಾರ್ಧನ್ ಹರಿಕಾಂತ್ ಅವರಿಗೆ ಕಡಲತೀರದಲ್ಲಿ ತೆರಳುವಾಗ ತಿಮಿಂಗಿಲದ ವಾಂತಿ ಕಂಡಿದ್ದು ಕಲ್ಲಿನಾಕಾರದಲ್ಲಿತ್ತು. ಇದನ್ನು ಮನೆಗೆ ತಂದು ತಿಳಿದವರ ಮೂಲಕ ಪರೀಕ್ಷಿಸಿದಾಗ ಇದು ತಿಮಿಂಗಿಲದ ವಾಂತಿ ಎಂದು ಗೊತ್ತಾಗಿದ್ದು, ಕೋಟ್ಯಂತರ ರೂಪಾಯಿ ಬೆಲೆಬಾಳುತ್ತದೆ ಎಂದು ತಿಳಿದಿದ್ದಾರೆ. ನಂತರ ನಮ್ಮ ದೇಶದಲ್ಲಿ ಇದನ್ನು ಮಾರಲು ಅನುಮತಿ ಇಲ್ಲ ಎಂಬುದನ್ನು ತಿಳಿದ ಅವರು, ಹೊನ್ನಾವರ ವಿಭಾಗದ ಅರಣ್ಯಾಧಿಕಾರಿ ರಂಗನಾಥ್ ರವರಿಗೆ ಹಸ್ತಾಂತರಿಸಿದ್ದಾರೆ.

    ಏನಿದು ತಿಮಿಂಗಿಳದ ವಾಂತಿ? ವಿಶೇಷ ಏನು?
    ಅಂಬೇರ್ಗ್ರಿಸ್ ಎಂದು ಇಂಗ್ಲೀಷ್ ನಲ್ಲಿ ಹೇಳುವ ಹಾಗೂ ಕನ್ನಡದಲ್ಲಿ ತಿಮಿಂಗಿಲ ವಾಂತಿ ಎಂದರೆ ತಿಮಿಂಗಿಲ ಸೇವಿಸಿದ ಆಹಾರ ಜೀರ್ಣವಾಗದೇ ಹೊರಕ್ಕೆ ಹಾಕಿದಾಗ ದ್ರವ ಮಿಶ್ರಿತ ಘನ ವಸ್ತುವಿಗೆ ಅಂಬೇರ್ಗ್ರಿಸ್ ಅಥವಾ ತಿಮಿಂಗಿಲ ವಾಂತಿ ಎಂದು ಹೇಳುತ್ತಾರೆ.

    ಈ ಕುರಿತು ಕಾರವಾರದ ಕಡಲಜೀವ ವಿಜ್ಞಾನ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ಶಿವಕುಮಾರ ಹರಗಿ ಮಾಹಿತಿ ನೀಡಿದ್ದು, ಎಲ್ಲ ತಿಮಿಂಗಿಲಗಳ ವಾಂತಿ ಹೆಚ್ಚು ಬೆಲೆಬಾಳದು. ಸ್ಪೆರ್ಮ್ ವೇಲ್ ಪ್ರಭೇದದ ತಿಮಿಂಗಿಲಗಳಿಂದ ಮಾತ್ರ ಅಂಬೇರ್ಗ್ರಿಸ್ ಹೊರ ಬರುತ್ತದೆ. ಪಶ್ಚಿಮ ಕರಾವಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲೇ ಇದ್ದು, ಪಶ್ಚಿಮ ಭಾಗದಿಂದಲೇ ವಲಸೆ ಹೋಗುತ್ತವೆ. ಅವು ಮಣಕಿ (ಸ್ಕ್ವಿಡ್), ಕಪ್ಪೆ ಬೊಂಡಾಸ್ (ಕಟಲ್ ಫಿಶ್) ಮೀನುಗಳನ್ನು ಬೇಟೆಯಾಡಿ ತಿನ್ನುತ್ತವೆ.

    ಕೆಲವೊಮ್ಮೆ ಈ ಮೀನುಗಳ ಗಟ್ಟಿಯಾದ ಎಲುಬುಗಳು ತಿಮಿಂಗಿಲದಲ್ಲಿ ಸಂಪೂರ್ಣವಾಗಿ ಜೀರ್ಣವಾಗುವುದಿಲ್ಲ. ಅದು ಜೀರ್ಣಾಂಗದಲ್ಲೇ ತಿಂಗಳು, ವರ್ಷಗಟ್ಟಲೇ ಉಳಿಯುತ್ತದೆ. ಇದರಿಂದ ತಿಮಿಂಗಿಲ ಕಿರಿಕಿರಿ ಅನುಭವಿಸುತ್ತದೆ. ಕೊನೆಗೆ ವಾಂತಿ ಮಾಡಿ ಹೊರ ಹಾಕುತ್ತದೆ. ಕೆಲವೊಮ್ಮೆ ಮಲದಲ್ಲೂ ಸೇರಿರುತ್ತದೆ. ಮೀನಿನ ಮೂಳೆಗಳು ತಿಮಿಂಗಿಲದ ಹೊಟ್ಟೆಯಲ್ಲಿ ತಿಂಗಳುಗಟ್ಟಲೆ ಸಂಗ್ರಹವಾಗಿದ್ದಾಗ ಹಲವು ರಾಸಾಯನಿಕ ಪ್ರಕ್ರಿಯೆಗಳಿಗೆ ಒಳಗಾಗುತ್ತದೆ. ಅದು ಮೇಣದಂಥ ರಚನೆಯಾಗಿ ಪರಿವರ್ತನೆಯಾಗುತ್ತದೆ ಎಂದು ವಿವರಿಸಿದರು.

    ಈ ಹಂತದಲ್ಲಿ ಆ ವಸ್ತು ಸುಗಂಧ ಪಡೆದುಕೊಂಡಿರುತ್ತದೆ. ತಿಮಿಂಗಿಲ ಹೊರಹಾಕಿದ ವಾಂತಿಯು ಮೊದಲು ಭಾರವಾಗಿದ್ದು, ನಂತರ ಸಮುದ್ರದಲ್ಲಿ ರಾಸಾಯನಿಕ ಪ್ರಕ್ರಿಯೆಯಲ್ಲಿ ಗಟ್ಟಿಯಾಗಿ, ನಿಧಾನ ಗತಿಯಲ್ಲಿ ನೀರಿನಲ್ಲಿ ತೇಲುತ್ತದೆ. ಕೆಲವೊಮ್ಮೆ ಪ್ರಖರ ಬಿಸಿಲಿಗೆ ಕರಗುವ ಸಾಧ್ಯತೆಯೂ ಇರುತ್ತದೆ. ಒಂದು ವೇಳೆ ತಿಮಿಂಗಿಲ ಮೀನುಗಳನ್ನು ತಿಂದ ಒಂದೆರಡು ವಾರಗಳಲ್ಲೇ ಎಲುಬುಗಳನ್ನು ಹೊರ ಹಾಕಿದರೆ ಅದು ಅಸಹನೀಯ ವಾಸನೆಯಿಂದ ಕೂಡಿರುತ್ತದೆ ಎಂದು ತಿಳಿಸಿದರು.

    ಕೋಟಿ ಬೆಲೆ ಏಕೆ?
    ಬಲು ಅಪರೂಪಕ್ಕೆ ಒಂದು ಬಾರಿ ಮಾತ್ರ ತಿಮಿಂಗಿಲಗಳು ವಾಂತಿ ಮಾಡಿಕೊಳ್ಳುತ್ತವೆ. ಒಂದು ತಿಮಿಂಗಿಲ ಒಂದು ಕೆ.ಜಿ. ಇಂದ ಹತ್ತು ಕೆ.ಜಿ.ಗೂ ಹೆಚ್ಚು ವಾಂತಿ ಮಾಡಿಕೊಳ್ಳುತ್ತದೆ. ಹೊಟ್ಟೆಯಲ್ಲಿ ಇದ್ದಾಗಲೇ ಜೀರ್ಣಾಂಗದಲ್ಲಿ ಇವು ರಾಸಾಯನಿಕಕ್ಕೆ ಒಳಗಾಗುವುದರಿಂದ ಇದರ ವಾಂತಿ ಯಲ್ಲಿ ಸುಗಂಧ ಭರಿತವಾಗಿರುತ್ತದೆ. ಮೊದಲು ಇದನ್ನು ಸುಟ್ಟಾಗ ವ್ಯಾಕ್ಸ್ ನಂತೆ ಕರಗಿ ಕೆಟ್ಟ ವಾಸನೆ ಬರುತ್ತದೆ. ಆದರೆ ನಂತರ ಸುಂಗಂಧಭರಿತವಾಗಿರುತ್ತದೆ.

    ಸುಗಂಧ ದ್ರವ್ಯ ಉತ್ಪಾದನೆಯಲ್ಲಿ ಇದಕ್ಕೆ ಅತೀ ಬೇಡಿಕೆ ಇದೆ. ಹೀಗಾಗಿ ಪಾಶ್ಚಿಮಾತ್ಯ ದೇಶಗಳಲ್ಲಿ ಇದಕ್ಕೆ ಒಂದು ಕೆ.ಜಿ.ಗೆ ಕೋಟಿ ಬೆಲೆ ಇರುತ್ತದೆ. ಹೀಗಾಗಿ ವೇಲ್ ಗಳ ಮಾರಣ ಹೋಮ ಸಹ ನಡೆಯುತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಡಬ್ಲ್ಯೂಡಬ್ಲ್ಯೂಎಫ್ ಹಾಗೂ ನಮ್ಮ ದೇಶದ ಅರಣ್ಯ ಕಾಯ್ದೆ ಪ್ರಕಾರ ಇವುಗಳನ್ನು ಸಂಗ್ರಹಿಸುವುದು, ಮಾರುವುದು ಕಾನೂನು ಬಾಹಿರ, ಶಿಕ್ಷಾರ್ಹ ಅಪರಾಧವಾಗಿದೆ. ಹಲವು ದೇಶಗಳಲ್ಲಿ ಇವುಗಳ ಮಾರಾಟ, ಆಮದಿಗೆ ಅನುಮತಿ ಇದೆ. ಹೀಗಾಗಿ ಇದರ ಮೌಲ್ಯ ಹೆಚ್ಚು ಪಡೆದುಕೊಂಡಿದ್ದು, ಕಳ್ಳಹಾದಿಯಲ್ಲಿ ಸಹ ಮಾರಾಟವಾಗುತ್ತದೆ.

  • ಬಂಡೆಯಾಕಾರದ ಬೃಹತ್ ತಿಮಿಂಗಿಲದ ಮೃತದೇಹ ಬೀಚ್‍ನಲ್ಲಿ ಪತ್ತೆ

    ಬಂಡೆಯಾಕಾರದ ಬೃಹತ್ ತಿಮಿಂಗಿಲದ ಮೃತದೇಹ ಬೀಚ್‍ನಲ್ಲಿ ಪತ್ತೆ

    – ನೋಡಲು ಮುಗಿಬಿದ್ದ ಜನರು

    ಚೆನ್ನೈ: ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ವಾಲಿನೋಕ್ಕಂ ಬೀಚ್‍ನಲ್ಲಿ ಬಂಡೆಯಾಕಾರದ ಬೃಹತ್ ತಿಮಿಂಗಿಲವೊಂದು ಪತ್ತೆಯಾಗಿದೆ.

    ವಾಲಿನೋಕ್ಕಂ ಬೀಚ್‍ನಲ್ಲಿ ಬೃಹತ್ ತಿಮಿಂಗಿಲ ನೋಡಿ ಜನರು ಅದನ್ನು ನೋಡಲು ಹತ್ತಿರ ಹೋಗಿದ್ದಾರೆ. ಆಗ ತಿಮಿಂಗಿಲ ಮೃತಪಟ್ಟಿರುವುದು ತಿಳಿದು ಬಂದಿದೆ.  ತಿಮಿಂಗಿಲಕ್ಕೆ ಸಮುದ್ರದಲ್ಲಿ ಹಡಗು ಡಿಕ್ಕಿ ಹೊಡೆದಿರಬಹುದು. ತಿಮಿಂಗಿಲದ ವಯಸ್ಸನ್ನು ಲೆಕ್ಕಹಾಕಲು ಸಾಧ್ಯವಾಗುತ್ತಿಲ್ಲ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

    “ಇದು ಬೃಹತ್ ತಿಮಿಂಗಿಲ. ನಾವು ಇದೀಗ ತಿಮಿಂಗಿಲದ ಮರಣೋತ್ತರ ಪರೀಕ್ಷೆಯನ್ನು ಮುಗಿಸಿದ್ದೇವೆ. ತಿಮಿಂಗಿಲಕ್ಕೆ ದೊಡ್ಡ ಹಡಗು ಹೊಡೆದಿರಬಹದು ಎಂದು ಶಂಕಿಸಿದ್ದೇವೆ. ಆದರೆ ತಿಮಿಂಗಿಲ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ” ಎಂದು ಅರಣ್ಯ ಅಧಿಕಾರಿ ಸಿಕ್ಕಾಂತರ್ ಬಾಷಾ ತಿಳಿಸಿದ್ದಾರೆ.

    ಈ ಭಾಗದಲ್ಲಿ ಇಷ್ಟು ಬೃಹತ್ ತಿಮಿಂಗಿಲಗಳು ಕಾಣುವುದಿಲ್ಲ. ಆದರೆ ಜೂನ್‍ನಲ್ಲಿ ಇದೇ ಜಿಲ್ಲೆಯಲ್ಲಿ 18 ಅಡಿ ಉದ್ದದ, ಒಂದು ಕಾಲಿನ ಶಾರ್ಕ್‍ನ ಮೃತದೇಹ ತೀರಕ್ಕೆ ಬಂದಿತ್ತು. ಶವಪರೀಕ್ಷೆ ನಡೆಸಿದ ನಂತರ ಅರಣ್ಯ ಅಧಿಕಾರಿಗಳು ಅದನ್ನು ಕಡಲತೀರದಲ್ಲಿ ಸಮಾಧಿ ಮಾಡಿದ್ದರು.

    ಇಂತಹ ಅಪರೂಪದ ಜೀವಿಗಳನ್ನು ಹಿಡಿಯುವುದು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಪ್ರಕಾರ ಅಪರಾಧ. ಒಂದು ವೇಳೆ ಅಪರೂಪದ ತಿಮಿಂಗಿಲಗಳನ್ನು ಹಿಡಿಯುವುದಾಗಲಿ, ಕೊಲ್ಲುವುದಾಗಲಿ ಮಾಡಿದರೆ ಕಾಯ್ದೆಯಡಿಯಲ್ಲಿ 3 ವರ್ಷದಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಬಾಷಾ ತಿಳಿಸಿದ್ದಾರೆ.

  • ಸಮುದ್ರ ತೀರದಲ್ಲಿ 36 ಅಡಿ ಉದ್ದದ ಬೃಹತ್ ತಿಮಿಂಗಿಲದ ಶವ ಪತ್ತೆ

    ಸಮುದ್ರ ತೀರದಲ್ಲಿ 36 ಅಡಿ ಉದ್ದದ ಬೃಹತ್ ತಿಮಿಂಗಿಲದ ಶವ ಪತ್ತೆ

    ಕೊಲ್ಕತ್ತಾ: ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪೋರ್ ಜಿಲ್ಲೆಯ ಸಮುದ್ರ ತೀರವೊಂದರಲ್ಲಿ 36 ಅಡಿ ಉದ್ದದ ಬೃಹತ್ ತಿಮಿಂಗಿಲದ ಶವವೊಂದು ಪತ್ತೆಯಾಗಿದೆ.

    ಮಿಡ್ನಾಪೋರ್ ಜಿಲ್ಲೆಯ ಮಂದಾರಮಣಿ ಬೀಚ್‍ನಲ್ಲಿ ಸೋಮವಾರ ಬೃಹತ್ ತಿಮಿಂಗಿಲದ ಶವ ಪತ್ತೆಯಾಗಿದೆ. ತಿಮಿಂಗಿಲದ ದೇಹ ಮತ್ತು ಬಾಲದ ಮೇಲೆ ಅನೇಕ ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ತಿಮಿಂಗಿಲದ ಸಾವಿಗೆ ಕಾರಣ ತಿಳಿದುಬಂದಿಲ್ಲ.

    ತಿಮಿಂಗಿಲದ ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಸ್ಥಳೀಯ ಮಂದಾರಮಣಿ ಪೊಲೀಸ್ ಠಾಣೆ ಮತ್ತು ರಾಜ್ಯ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸುತ್ತಿದ್ದಾರೆ.

    ಇನ್ನೂ ಬೃಹತ್ ತಿಮಿಂಗಿಲವನ್ನು ಕಂಡು ಅಚ್ಚರಿಗೊಂಡ ಸ್ಥಳೀಯರು ಕಡಲತೀರದ ಬಳಿ ಜಮಾಯಿಸಿದ್ದು, ತಿಮಿಂಗಿಲದ ಮೃತದೇಹದೊಂದಿಗೆ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದರು. ಮಂದಾರಮಣಿ ಬೀಚ್‍ ಮಿಡ್ನಾಪೋರ್ ನ ಜನಪ್ರಿಯ ಪ್ರವಾಸಿ ತಾಣವಾಗಿದೆ.

  • ಹಾಡು ಹಾಡುವ ಅಪರೂಪದ ಹಂಪ್ ಬ್ಯಾಕ್ ತಿಮಿಂಗಿಲ ಮುರಡೇಶ್ವರದಲ್ಲಿ ಪತ್ತೆ

    ಹಾಡು ಹಾಡುವ ಅಪರೂಪದ ಹಂಪ್ ಬ್ಯಾಕ್ ತಿಮಿಂಗಿಲ ಮುರಡೇಶ್ವರದಲ್ಲಿ ಪತ್ತೆ

    ಕಾರವಾರ: ವಿಶ್ವದಲ್ಲೇ ಅಪರೂಪ ಹಾಗೂ ಅಳವಿನಂಚಿನಲ್ಲಿರುವ ಹಂಪ್ ಬ್ಯಾಕ್ ವೇಲ್ ಉತ್ತರ ಕನ್ನಡ ಜಿಲ್ಲೆಯ ಮುರಡೇಶ್ವರದ ನೇತ್ರಾಣಿ ನಡುಗಡ್ಡೆಯ ಅರಬ್ಬಿ ಸಮುದ್ರದಲ್ಲಿ ಪತ್ತೆಯಾಗಿದೆ. ಮುರಡೇಶ್ವರದ ನೇತ್ರಾಣಿ ನಡುಗಡ್ಡೆಯ ಸಮುದ್ರದಾಳದಲ್ಲಿ ಸ್ಕೂಬಾ ಡೈ ಮಾಡುತಿದ್ದವರಿಗೆ ಈ ಬೃಹತ್ ತಿಮಿಂಗಿಲ ಕಾಣಿಸಿದ್ದು ಇದರ ವಿಡಿಯೋ ತುಣುಕುಗಳು ಪಬ್ಲಿಕ್ ಟಿವಿಗೆ ದೊರೆತಿದೆ.

    ಮುರಡೇಶ್ವರದಿಂದ ಅರಬ್ಬಿ ಸಮುದ್ರದಲ್ಲಿ 20 ಕಿಲೋ ಮೀಟರ್ ಕ್ರಮಿಸಿದರೆ ನೇತ್ರಾಣಿ ನಡುಗಡ್ಡೆ ದ್ವೀಪ ಬರುತ್ತದೆ. ಈ ದ್ವೀಪದ ಸುತ್ತಮುತ್ತಲೂ ಮೂವತ್ತಕ್ಕೂ ಹೆಚ್ಚು ಪ್ರಬೇದದ ಮೀನುಗಳು, ಹವಳದ ದಿಬ್ಬಗಳು, ಸಮುದ್ರದ ಆಮೆಗಳ ಆವಾಸ ಸ್ಥಾನವಾಗಿದ್ದು ಭಾರತೀಯ ನೌಕಾದಳವು ಈ ದ್ವೀಪದಲ್ಲಿ ಸಮರಾಭ್ಯಾಸ ನಡೆಸುತ್ತದೆ. ಕಳೆದ ಮೂರು ವರ್ಷದ ಹಿಂದೆ ರಾಜ್ಯ ಸರ್ಕಾರ ಪ್ರವಾಸೋದ್ಯಮ ಇಲಾಖೆಯ ಸಹಭಾಗಿತ್ವದಲ್ಲಿ ಈ ಪ್ರದೇಶದಲ್ಲಿ ಪ್ರವಾಸಿಗರಿಗೆ ಸ್ಕೂಬಾ ಡೈ ಮಾಡಲು ಅವಕಾಶ ಮಾಡಿಕೊಟ್ಟಿದೆ.

    ಅರಬ್ಬಿ ಸಮುದ್ರದ ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈ ಮಾಡುತ್ತಿದ್ದ ವೇಳೆ ಸುಮಾರ್ 100 ಮೀಟರ್ ಆಳದಲ್ಲಿ ಹಂಪ್ ಬ್ಯಾಕ್ ಗಂಡು ತಿಮಿಂಗಿಲ ಪತ್ತೆಯಾಗಿದೆ. ಈ ವೇಳೆ ಈ ತಿಮಿಂಗಿಲದ ಬಾಲಕ್ಕೆ ಪೆಟ್ಟು ಬಿದ್ದಿದ್ದರಿಂದ ಈ ಬೃಹತ್ ತಿಮಿಂಗಿಲ ಈ ಭಾಗದಲ್ಲಿ ವಿಶಾಂತ್ರಿ ಸ್ಥಿತಿಯಲ್ಲಿತ್ತು.

    ಈ ವೇಲ್‍ಗಳ ವಿಶೇಷತೆ ಏನು ಗೊತ್ತಾ?
    ವಿಶ್ವದಲ್ಲೇ ಅಪರೂಪವಾದ ಈ ತಿಮಿಂಗಿಲವು ಅರಬ್ಬಿ ಸಮುದ್ರದಲ್ಲಿ ವಾಸಿಸುವ ಅತೀ ಅಪರೂಪದ ಸಮುದ್ರ ಸಸ್ತನಿ ಜೀವಿ. ಇಡೀ ವಿಶ್ವದಲ್ಲಿ ಇದರ ಸಂಖ್ಯೆ ನೂರು ಮಾತ್ರ. ಓಮಾನ್ ದೇಶದಿಂದ ಭಾರತದವರೆಗೆ, ಶ್ರೀಲಂಕದಿಂದ ಓಮಾನ್‍ವರೆಗೆ ಅರಬ್ಬಿ ಸಮುದ್ರದಲ್ಲಿ ಸಂಚರಿಸುತ್ತವೆ. ಜಗತ್ತಿನ ಅತೀ ದೊಡ್ಡ ತಿಮಿಂಗಿಲಗಳಲ್ಲಿ ಇದು ನಾಲ್ಕನೇ ಸ್ಥಾನ ಪಡೆದಿದೆ.

    ಈ ತಿಮಿಂಗಿಲಗಳಲ್ಲಿ ಗಂಡು ತಿಮಿಂಗಿಲ 15 ರಿಂದ 20 ನಿಮಿಷ ತನ್ನ ವಿಶಿಷ್ಟ ಧ್ವನಿಯಲ್ಲಿ ಮನುಷ್ಯರಂತೆ ಹಾಡು ಹೇಳುತ್ತದೆ. ಹೀಗಾಗಿಯೇ ಈ ತಿಮಿಂಗಿಲಗಳನ್ನು ಅದರ ಧ್ವನಿಯ ಮೂಲಕವೇ ಸಂಶೋಧಕರು ಗುರುತಿಸುತ್ತಾರೆ. ಇದು ಉಸಿರಾಟ ಮಾಡುವಾಗ ಅದರ ಮೂಗಿಂದ ಮೂರು ಮೀಟರ್ ಎತ್ತರ ನೀರು ಚಿಮ್ಮುತ್ತವೆ. ಸುಮಾರು 15 ಮೀಟರ್‍ನಿಂದ 18 ಮೀಟರ್ ಹೆಣ್ಣು ತಿಮಿಂಗಿಲ ಉದ್ದವಿದ್ದರೆ 13 ರಿಂದ 14 ಮೀಟರ್ ಉದ್ದ ಗಂಡು ತಿಮಿಂಗಿಲವಿರುತ್ತದೆ. ಸುಮಾರು 30 ಮೆಟ್ರಿಕ್ ಟನ್ ನಷ್ಟು ಭಾರವನ್ನು ಇದರ ದೇಹ ಹೊಂದಿದ್ದು ನೂರು ವರ್ಷಕ್ಕೂ ಹೆಚ್ಚು ಕಾಲ ಬದುಕುತ್ತವೆ.

    ಆಳ ಸಮುದ್ರದಲ್ಲಿ ಹೆಚ್ಚು ಓಡಾಡುವ ಈ ತಿಮಿಂಗಿಲಗಳು ಮುರಡೇಶ್ವರದ ನೇತ್ರಾಣಿ ನಡುಗಡ್ಡೆಯಲ್ಲಿ ಮೊದಲ ಬಾರಿ ಕಾಣಿಸಿಕೊಂಡಿದೆ. ಈ ಹಿಂದೆ 2017 ರಲ್ಲಿ ಕೇರಳದಲ್ಲಿ ಕಾಣಿಸಿಕೊಂಡಿತ್ತು. ಹೆಚ್ಚಾಗಿ ಕಾಣಿಸಿಕೊಳ್ಳದ ಇವು ಸಮುದ್ರದಾಳದಲ್ಲೇ ತನ್ನ ಜೀವಿತ ಅವಧಿಯನ್ನು ಕಳೆಯುವ ಜೊತೆಗೆ ಅರಬ್ಬಿ ಸಮುದ್ರದುದ್ದಕ್ಕೂ ವಲಸೆ ಹೋಗುತ್ತವೆ. ಹಲವು ಬಾರಿ ತನ್ನ ವಲಸೆ ಪ್ರವೃತ್ತಿಯಿಂದ ದೊಡ್ಡ ದೊಡ್ಡ ಹಡಗುಗಳಿಗೆ ಸಿಲುಕಿ ಗಾಯಗೊಂಡು ಸಾವನ್ನಪ್ಪುತ್ತವೆ. ಮನುಷ್ಯನ ದುರಾಸೆಗೆ ತಿಮಿಂಗಿಲಗಳ ಮಾಂಸಕ್ಕಾಗಿ ಇವುಗಳನ್ನು ಭೇಟೆ ಆಡುತ್ತಿದ್ದು ಇವುಗಳ ಸಂತತಿ ಕ್ಷೀಣವಾಗಲು ಮತ್ತೊಂದು ಕಾರಣವಾಗಿದೆ.

    ನೇತ್ರಾಣಿ ನಡುಗಡ್ಡೆಯಲ್ಲಿ ಈ ತಿಮಿಂಗಿಲಗಳು ಪತ್ತೆಯಾಗಿದ್ದು ಈ ವಿಷಯವನ್ನು ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಗೆ ಮಾಹಿತಿ ರವಾನೆ ಮಾಡಲಾಗಿದೆ. ಇದಕ್ಕೆ ಕೇಂದ್ರ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿದ್ದು ಇವುಗಳ ಸಂಶೋಧನೆಗಾಗಿ ನುರಿತ ತಜ್ಞರ ನೇಮಕ ಮಾಡಿದೆ. ಹೆಚ್ಚಿನ ಸಂಶೋಧನೆಗಾಗಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ 60:40 ಸಹಭಾಗಿತ್ವದಲ್ಲಿ 42 ಲಕ್ಷ ಹಣ ಮಂಜೂರು ಮಾಡಲಾಗಿದೆ. ಈ ವರೆಗೂ ಈ ತಿಮಿಂಗಿಲಗಳ ಬಗ್ಗೆ ಹೆಚ್ಚು ಸಂಶೋಧನೆಗಳು ನಡೆದಿಲ್ಲ. ಈ ಕಾರಣದಿಂದ ಮುರಡೇಶ್ವರ ಭಾಗದಲ್ಲಿ ಇವು ಕಾಣಿಸಿದ್ದು ಹೆಚ್ಚಿನ ಸಂಶೋಧನೆಗೆ ಸಹಕಾರಿಯಾಗಲಿದೆ.

  • ಸುರತ್ಕಲ್ ನಲ್ಲಿ ಬೃಹತ್ ಗಾತ್ರದ ತಿಮಿಂಗಿಲದ ಮೃತದೇಹ ಪತ್ತೆ

    ಸುರತ್ಕಲ್ ನಲ್ಲಿ ಬೃಹತ್ ಗಾತ್ರದ ತಿಮಿಂಗಿಲದ ಮೃತದೇಹ ಪತ್ತೆ

    ಮಂಗಳೂರು: ಬೃಹತ್ ಗಾತ್ರದ ತಿಮಿಂಗಿಲದ ಮೃತದೇಹ ಮಂಗಳೂರು ಸಮೀಪದ ಸುರತ್ಕಲ್ ದೊಡ್ಡಕೊಪ್ಲ ಕಡಲ ತೀರದಲ್ಲಿ ಪತ್ತೆಯಾಗಿದೆ.

    ಬೆಳಗ್ಗಿನ ವಾಯುವಿಹಾರಕ್ಕೆ ಸಮುದ್ರದ ದಡಕ್ಕೆ ಹೋದ ವಿಹಾರಿಗಳಿಗೆ ಮೃತ ತಿಮಿಂಗಿಲದ ದರ್ಶನವಾಗಿದೆ. ಅರಬ್ಬೀ ಸಮುದ್ರದ ಕಡಲಿನಲ್ಲಿ ಗಜ ಗಾತ್ರದ ತಿಮಿಂಗಿಲಗಳಿದ್ದರೂ ಬಹಳ ವಿರಳವಾಗಿ ಕಾಣಸಿಗುತ್ತದೆ.

    ಈ ತಿಮಿಂಗಿಲ ಮೃತಪಟ್ಟು ಕೆಲ ದಿನಗಳ ಬಳಿಕ ಸಮುದ್ರದ ದಡ ಸೇರಿದೆ. ತಿಮಿಂಗಿಲವನ್ನ ನೋಡಲು ಜನ ತಂಡೋಪತಂಡವಾಗಿ ತೀರಕ್ಕೆ ಬಂದು ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಮೃತದೇಹ ಕೊಳೆತು ನಾರುತ್ತಿದ್ದು ಮಹಾನಗರ ಪಾಲಿಕೆ ಮಣ್ಣು ಮಾಡಲಿದೆ.

    ಒಂದು ತಿಂಗಳ ಬಳಿಕ ಪಣಂಬೂರು ಬೀಚ್ ಅಭಿವೃದ್ಧಿ ಮಂಡಳಿ ತಿಮಿಂಗಿಲದ ಅಸ್ಥಿಪಂಜರವನ್ನು ಹೊರ ತೆಗೆದು ವಸ್ತು ಸಂಗ್ರಹಾಲಯಕ್ಕೆ ನೀಡಲು ತೀರ್ಮಾನಿಸಿದೆ.