Tag: ತಿರುಪತಿ ತಿಮ್ಮಪ್ಪ

  • ಬೆಂಗಳೂರು | ದರ್ಶನಕ್ಕೆ ಪಾಸ್‌ ಸಿಗದಿದ್ದಕ್ಕೆ ತಿರುಪತಿ ತಿಮ್ಮಪ್ಪನನ್ನೇ ಮನೆಗೆ ಕರೆಸಿದ ಭಕ್ತ!

    ಬೆಂಗಳೂರು | ದರ್ಶನಕ್ಕೆ ಪಾಸ್‌ ಸಿಗದಿದ್ದಕ್ಕೆ ತಿರುಪತಿ ತಿಮ್ಮಪ್ಪನನ್ನೇ ಮನೆಗೆ ಕರೆಸಿದ ಭಕ್ತ!

    – ವೈಕುಂಠ ದ್ವಾರ, ಲಕ್ಷಿ-ಶ್ರೀನಿವಾಸನ ತೂಗು-ಉಯ್ಯಾಲೆ…!

    ಬೆಂಗಳೂರು: ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದೆ. ತಿರುಪತಿ ತಿಮ್ಮಪ್ಪನ ದರ್ಶನ ಮಾಡಬೇಕು ಅನ್ನೋ ನಂಬಿಕೆ ಲಕ್ಷಾಂತರ ಭಕ್ತಾದಿಗಳಲ್ಲಿ ಇದ್ದೇ ಇರುತ್ತೆ. ಆದ್ರೆ ವೆಂಕಟೇಶ್ವರನ ಪಾಸ್ ಸಿಗದೇ ಇದ್ದಿದ್ದಕ್ಕೆ ಬೆಂಗಳೂರಿನ ಭಕ್ತನೊಬ್ಬ ತಿರುಪತಿ ತಿಮ್ಮಪ್ಪನನ್ನೇ ಮನೆಗೆ ಕರೆಸಿದ್ದಾನೆ.

    ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಆದ್ದರಿಂದಲೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ. ಅದರಂತೆ ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇದನ್ನೂ ಓದಿ: Tirupati Stampede: ಗಾಯಗೊಂಡ ಗಾಯಾಳುಗಳಿಗೆ ವಿಶೇಷ ದರ್ಶನ, ಅಧಿಕಾರಿಗಳು ಅಮಾನತು

    ಇಂದು ತಿರುಪತಿ ತಿಮ್ಮಪ್ಪನ ದರ್ಶನ ಮಾಡಬೇಕು ಅನ್ನೋ ನಂಬಿಕೆ ಲಕ್ಷಾಂತರ ಭಕ್ತಾದಿಗಳಲ್ಲಿ ಇರುತ್ತದೆ. ಆದ್ರೆ ಟಿಕೆಟ್ ಎಲ್ಲರಿಗೂ ಸಿಗಲ್ಲ. ಈ ಹಿನ್ನಲೆ, ಬೆಂಗಳೂರಿನ ತಿರುಪತಿ ತಿಮ್ಮಪ್ಪನ ಅಪ್ಪಟ್ಟ ಭಕ್ತನೊಬ್ಬ, ಟಿಕೆಟ್ ಸಿಗದೇ ಇದ್ದಿದ್ದಕ್ಕೆ ಬೆಂಗಳೂರಿನ ತನ್ನ ಮನೆಯಲ್ಲೇ ವೆಂಕಟೇಶ್ವರ ಮೂರ್ತಿಯನ್ನು ನಿರ್ಮಿಸಿದ್ದಾರೆ. ಸುಮಾರು 8 ಅಡಿ ಎತ್ತರದಲ್ಲಿ ಬಾಲಾಜಿ ಮೂರ್ತಿಯನ್ನು ನಿರ್ಮಾಣ ಮಾಡಿದ್ದಾರೆ. ಹತ್ತಿ, ಬಟ್ಟೆ, ಪೇಯಿಂಟ್‌ ಮೂಲಕ ಬಾಲಾಜಿಯನ್ನು ಅಲಂಕರಿಸಲಾಗಿದೆ.

    ಜಯನಗರದ ಉಷಾ ಅಪಾರ್ಟ್ಮೆಂಟ್ ನಿವಾಸಿಯಾಗಿರೋ ದೀಪಕ್, ಕಳೆದ 9 ವರ್ಷದಿಂದ ಪ್ರತಿ ತಿಂಗಳು ತಿರುಪತಿ ಬೆಟ್ಟ ಹತ್ತಿಕೊಂಡು ದರ್ಶನ ಮಾಡುತ್ತಿದ್ದರು. ಆದ್ರೇ ಇಂದು ಬಾಲಾಜಿ ದರ್ಶನ ಸಿಗದ ಹಿನ್ನೆಲೆ ಮನೆಯಲ್ಲೇ ದೇಗುಲ ನಿರ್ಮಿಸಿದ್ದಾರೆ. ವೆಂಕಟೇಶ್ವರ ಮೂರ್ತಿ ಜೊತೆ ಲಕ್ಷ್ಮಿ, ವೆಂಕಟೇಶ್ವರ ತೂಗು ಉಯ್ಯಾಲೆ, ವೈಕುಂಠ ದ್ವಾರ ನಿರ್ಮಿಸಿದ್ದಾರೆ. ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಸ್ಥಳೀಯ ಜನ ಬರುತ್ತಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನಲ್ಲಿ ದೇವಸ್ಥಾನಗಳಲ್ಲಿ ಏಕಾದಶಿ ಸಂಭ್ರಮ – ರಾತ್ರಿ 11 ಗಂಟೆ ವರೆಗೆ ಇಸ್ಕಾನ್‌ನಲ್ಲಿ ದರ್ಶನಕ್ಕೆ ಅವಕಾಶ

  • ತಿಮ್ಮಪ್ಪನ ಹುಂಡಿಗೆ ವಾಚ್ ಹಾಕಿ ಬಂದ ಮೇಲೆ ಕೇಂದ್ರಮಂತ್ರಿಯಾಗಿದ್ದ ಎಸ್‌ಎಂಕೆ!

    ತಿಮ್ಮಪ್ಪನ ಹುಂಡಿಗೆ ವಾಚ್ ಹಾಕಿ ಬಂದ ಮೇಲೆ ಕೇಂದ್ರಮಂತ್ರಿಯಾಗಿದ್ದ ಎಸ್‌ಎಂಕೆ!

    ಎಸ್‌ಎಂ ಕೃಷ್ಣ ಅವರು ತಿರುಪತಿ ತಿಮ್ಮಪ್ಪನ ಹುಂಡಿಗೆ ವಾಚ್ ಹಾಕಿದ್ದೇ ತಡ ಅದು ಅವರ ಜೀವನದಲ್ಲಿ ಒಂದು ವಿಶೇಷ ಬೆಳವಣಿಗೆಗೆ ನಾಂದಿ ಹಾಡಿತ್ತು. ಈ ಮೂಲಕ ಕೇಂದ್ರ ಸಚಿವರಾಗುವ ಸುದ್ದಿ ಸಿಕ್ಕಿತ್ತು.

    ಹೌದು, 1983ರಲ್ಲಿ ಎಸ್.ಎಂ.ಕೃಷ್ಣ ಅವರು ತಿರುಪತಿ ದೇವಸ್ಥಾನಕ್ಕೆ ತೆರಳಿದ್ದರು. ಆ ಸಮಯದಲ್ಲಿ ಮಂಗಳಾರತಿ ತೆಗೆದುಕೊಳ್ಳಬೇಕಾದರೆ ಅವರ ವಾಚು ಕೈಯಿಂದ ಕಳಚಿ ಬಿತ್ತು. ಇದನ್ನು ದೇವಾಲಯದ ಅರ್ಚಕರು ಗಮನಿಸಿ, ಕೃಷ್ಣರ ಸ್ನೇಹಿತರಾಗಿದ್ದ ಸಿಂಗಾರಿಗೌಡರಿಗೆ ಕಳಚಿದ ವಾಚ್‌ನ್ನು ಹುಂಡಿಗೆ ಹಾಕಿಸಿ ಎಂದು ಹೇಳಿದರು.ಇದನ್ನೂ ಓದಿ: ದಿನ ಭವಿಷ್ಯ 11-12-2024

    ಅದಾದ ಬಳಿಕ ಮತ್ತೆ ಅವರ ಪತ್ನಿ ಪ್ರೇಮಾ ಅವರ ಜೊತೆ ತಿರುಪತಿ ಹೋಗಿದ್ದರು. ಆಗ ತಮ್ಮ ವಾಚ್‌ನ್ನು ತಿಮ್ಮಪ್ಪನ ಹುಂಡಿಗೆ ಹಾಕಿ ಬಂದಿದ್ದರು. ಅಂದು ಮರಳಿ ಬೆಂಗಳೂರಿಗೆ ಬಂದು, ಮತ್ತೆ ಸಂಜೆ ವಿಮಾನದಲ್ಲಿ ಹೈದರಾಬಾದ್‌ಗೆ ತೆರಳಿದ್ದರು. ಟೆನಿಸ್ ಕ್ಲಬ್‌ಗೆ ತೆರಳಿ ಆಡುತ್ತಿದ್ದರು. ಆ ದಿನ ರಾತ್ರಿ ದೆಹಲಿ ಬರುವಂತೆ ತುರ್ತು ಕರೆ ಬಂದಿದೆ.

    ದೆಹಲಿಗೆ ತೆರಳಿದ ಎಸ್‌ಎಂ ಕೃಷ್ಣ ಅವರು ಪ್ರಧಾನಿ ಇಂದಿರಾ ಗಾಂಧಿ ಭೇಟಿಯಾದರು. ಆಗ ಪ್ರಧಾನಿಯವರು ಕೃಷ್ಣ ಅವರನ್ನು ಕೇಂದ್ರ ಸಚಿವರನ್ನಾಗಿ ಮಾಡುವ ಸುದ್ದಿ ಸಿಕ್ಕಿತ್ತು. ಬಳಿಕ ಪ್ರಮಾಣವಚನ ಸ್ವೀಕಾರ ಮಾಡಿ ಕೇಂದ್ರ ಸಚಿವರೂ ಆದರು. ಇದು ಅವರ ಜೀವನದಲ್ಲಾದ ವಿಶೇಷ ಬೆಳವಣಿಗೆ. ತಿರುಪತಿ ದೇವರ ಸನ್ನಿಧಿಯಲ್ಲಿ ಮಾತ್ರ ಇಂತಹ ಪವಾಡ ನಡೆಯಲು ಸಾಧ್ಯ ಎಂದು ಎಸ್‌ಎಂಕೆ ನಂಬಿದ್ದರು. ಅವರಿಗೆ ದೇವರಲ್ಲಿ ಅಪಾರ ನಂಬಿಕೆ ಇತ್ತು. ಆದರೆ ಅದನ್ನು ಬಹಿರಂಗವಾಗಿ ಎಲ್ಲಿಯೂ ತೋರಿಸಿಕೊಡುತ್ತಿರಲಿಲ್ಲ.ಇದನ್ನೂ ಓದಿ: ರಾಜ್ಯದ ಹವಾಮಾನ ವರದಿ 11-12-2024

  • ಇನ್ಮುಂದೆ ಎರಡರಿಂದ ಮೂರು ಗಂಟೆಯಲ್ಲೇ ತಿರುಪತಿ ತಿಮ್ಮಪ್ಪನ ದರ್ಶನ!

    ಇನ್ಮುಂದೆ ಎರಡರಿಂದ ಮೂರು ಗಂಟೆಯಲ್ಲೇ ತಿರುಪತಿ ತಿಮ್ಮಪ್ಪನ ದರ್ಶನ!

    ಅಮರಾವತಿ: ತಿರುಪತಿ ತಿಮ್ಮಪ್ಪನ (Tirupati Timmappa) ಭಕ್ತರಿಗೆ ಟಿಟಿಡಿ ಗುಡ್ ನ್ಯೂಸ್ ನೀಡಿದೆ. ಇನ್ನೂ ಕೇವಲ ಎರಡರಿಂದ ಮೂರು ಗಂಟೆಗಳಲ್ಲಿ ಸಾಮಾನ್ಯ ಭಕ್ತರಿಗೂ ದರ್ಶನ ನೀಡುವ ರೀತಿಯಲ್ಲಿ ಟಿಟಿಡಿ (Tirumala Tirupati Devasthanams Trust) ಕ್ರಮ ಕೈಗೊಂಡಿದೆ.

    ಕೇವಲ 2ರಿಂದ 3 ಗಂಟೆಯೊಳಗೆ ಸಾಮಾನ್ಯ ಭಕ್ತರು ದೇವರ ದರ್ಶನ ಪಡೆಯುವಂತೆ ಬದಲಾವಣೆ ತರಲು ಎಐ ಮತ್ತು ಆಧುನಿಕ ತಂತ್ರಜ್ಞಾನ ಬಳಸಲು ಕ್ರಮಕೈಗೊಳ್ಳಲಾಗಿದೆ. ಕಂಪಾರ್ಟ್‌ಮೆಂಟ್‌ಗಳಲ್ಲಿ ಭಕ್ತರಿಗೆ ತೊಂದರೆ, ಕಿರಿಕಿರಿ ಉಂಟಾಗದಂತೆ ದರ್ಶನ ಲಭ್ಯವಾಗಲು ಈ ಯೋಜನೆ ರೂಪಿಸಲಾಗಿದೆ.

    ಟಿಟಿಡಿ ಆಡಳಿತ ಮಂಡಳಿ ಹಲವು ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಶ್ರೀವಾಣಿ ಟ್ರಸ್ಟ್ (Srivani Trust) ಅನ್ನು ವಜಾಗೊಳಿಸಿದೆ. ಟಿಟಿಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅನ್ಯಧರ್ಮೀಯ ನೌಕರರನ್ನು ವಿಆರ್‌ಎಸ್ ಅಥವಾ ಸರ್ಕಾರಿ ಇಲಾಖೆಗಳಿಗೆ ವರ್ಗಾಯಿಸಲು ನಿರ್ಧರಿಸಲಾಗಿದೆ. ಈ ಕುರಿತು ಟಿಟಿಡಿ ಅಧ್ಯಕ್ಷ ಬಿಆರ್ ನಾಯ್ಡು ಸ್ಪಷ್ಟಪಡಿಸಿದ್ದಾರೆ.

    ತಿರುಮಲ ಪರಿಸರಲ್ಲಿ ರಾಜಕೀಯ ಮಾತಾಡದಂತೆ ನಿಷೇಧ ವಿಧಿಸಿದ್ದಾರೆ. ಸ್ಥಳೀಯರಿಗೆ ಪ್ರತಿ ತಿಂಗಳ ಮೊದಲ ಮಂಗಳವಾರ ದೇವರ ದರ್ಶನ ಕಲ್ಪಿಸಲು ತೀರ್ಮಾನ ತೆಗೆದುಕೊಂಡಿದೆ. ದೇವರ ದುಡ್ಡನ್ನು ಖಾಸಗಿ ಬ್ಯಾಂಕ್ ಬದಲಿಗೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್‍ಗಳಲ್ಲಿ ಜಮೆ ಮಾಡಲು ಟಿಟಿಡಿ ನಿರ್ಣಯ ತೆಗೆದುಕೊಂಡಿದೆ.

  • ಮೊಣಕಾಲಿನಿಂದ ತಿರುಪತಿ ತಿಮ್ಮಪ್ಪನ ಮೆಟ್ಟಿಲೇರಿದ ಜಾಹ್ನವಿ ಕಪೂರ್

    ಮೊಣಕಾಲಿನಿಂದ ತಿರುಪತಿ ತಿಮ್ಮಪ್ಪನ ಮೆಟ್ಟಿಲೇರಿದ ಜಾಹ್ನವಿ ಕಪೂರ್

    ತಿರುಪತಿ ತಿಮ್ಮಪ್ಪನ (Tirupati Thimmappa) ದರ್ಶನವನ್ನು ಕಠಿಣ ವ್ರತ ಮಾಡಿ ಪಡೆದುಕೊಂಡಿದ್ದಾರೆ ಬಾಲಿವುಡ್ ನಟಿ ಜಾಹ್ನವಿ ಕಪೂರ್. ಮೊಣಕಾಲಿನಿಂದಲೇ ಮೆಟ್ಟಿಲುಗಳನ್ನು ಏರಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇಷ್ಟೊಂದು ಭಕ್ತಿ ಹೊಂದಿರುವ ನಟಿಗೆ ಒಳ್ಳೆಯದು ಆಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

    ಈ ನಡುವೆ ಜಾಹ್ನವಿಗೆ ಸಾಕಷ್ಟು ಆಫರ್ಸ್ ಬರುತ್ತಿವೆ. ನಿನ್ನೆಯಷ್ಟೇ ರಾಮ್ ಚರಣ್ (Ram Charan) ಮತ್ತು ಜಾಹ್ನವಿ ಕಪೂರ್ (Jahnavi Kapoor) ಕಾಂಬಿನೇಷನ್ ನ ಹೊಸ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಈ ಮುಹೂರ್ತ ಸಮಾರಂಭಕ್ಕೆ ರಾಮ್ ಚರಣ್ ತಂದೆ ಚಿರಂಜೀವಿ (Chiranjeevi), ಜಾಹ್ನವಿ ಕಪೂರ್ ತಂದೆ ಬೋನಿ ಕಪೂರ್ (Boney Kapoor) ಸಾಕ್ಷಿಯಾಗಿದ್ದು ವಿಶೇಷವಾಗಿತ್ತು. ತಮ್ಮ ಮಕ್ಕಳಿಗೆ ಈ ಸಿನಿಮಾ ಸಾಕಷ್ಟು ಗೆಲುವು ತಂದು ಕೊಡಲಿ ಎಂದು ಇಬ್ಬರೂ ತಮ್ಮ ತಮ್ಮ ಮಕ್ಕಳಿಗೆ ಹಾರೈಸಿದ್ದಾರೆ.

    ತ್ರಿಬಲ್ ಆರ್ ಸಿನಿಮಾದ ಯಶಸ್ಸಿನ ಬಳಿಕ ರಾಮ್ ಚರಣ್ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಸದ್ಯ ಚೆರ್ರಿ ಶಂಕರ್ ನಿರ್ದೇಶನದ ಗೇಮ್ ಚೇಂಜರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಪ್ರಾಜೆಕ್ಟ್ ನಲ್ಲಿ ಬ್ಯುಸಿಯಾಗಿರುವ ರಾಮ್ ಚರಣ್ ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ RC 16 ಎಂದು ಟೈಟಲ್ ಇಡಲಾಗಿದೆ. ಈ ಹೊಸ ಸಿನಿಮಾದ ಮುಹೂರ್ತ ಸಮಾರಂಭ  ನಿನ್ನೆ ಹೈದ್ರಾಬಾದ್ ನಲ್ಲಿ ನೆರವೇರಿದೆ.

     

    ನಿರ್ಮಾಪಕ ಅಲ್ಲು ಅರವಿಂದ್ ಅವರು ಬೌಂಡ್ ಸ್ಕ್ರಿಪ್ಟ್ ಅನ್ನು ನಿರ್ದೇಶಕ ಬುಚ್ಚಿ ಬಾಬು ಸನಾ ಅವರಿಗೆ ಹಸ್ತಾಂತರಿಸಿದರು. ರಾಮ್ ಚರಣ್ ಅವರ ಗೇಮ್ ಚೇಂಜರ್ ಚಿತ್ರವನ್ನು ನಿರ್ದೇಶಿಸುತ್ತಿರುವ ಸ್ಟಾರ್ ನಿರ್ದೇಶಕ ಶಂಕರ್ ಅವರು ಬೋನಿ ಕಪೂರ್ ಮತ್ತು ಅನ್ಮೋಲ್ ಶರ್ಮಾ ಕ್ಯಾಮೆರಾ ಚಾಲನೆ ನೀಡಿದರು.  ಮೆಗಾ ಸ್ಟಾರ್ ಚಿರಂಜೀವಿ ಕ್ಲಾಪ್ ಬೋರ್ಡ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.

  • ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಮೋಹನ್ ಲಾಲ್

    ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಮೋಹನ್ ಲಾಲ್

    ಲಯಾಳಂ ಚಿತ್ರೋದ್ಯಮದ ಹೆಸರಾಂತ ನಟ ಮೋಹನ್ ಲಾಲ್ (Mohan Lal) ಇಂದು ತಿರುಪತಿ ತಿಮ್ಮಪ್ಪನ (Tirupati Thimmappa) ಸನ್ನಿಧಾನಕ್ಕೆ ಆಗಮಿಸಿದ್ದರು. ತಮ್ಮ ಟೀಮ್ ಜೊತೆ ಬಂದಿದ್ದ ಮೋಹನ್ ಲಾಲ್ ಪೂಜೆ ಸಲ್ಲಿಸಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಕೆಲ ಹೊತ್ತು ದೇವಸ್ಥಾನದ ಆವರಣದಲ್ಲೇ ನಟ ಇದ್ದರು. ನಂತರ ಅಭಿಮಾನಿಗಳ ಜೊತೆ ಸಮಯ ಕಳೆದರು.

    ಈ ನಡುವೆ ಮೋಹನ್ ಲಾಲ್ ಸದ್ಯ ವೃಷಭ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದೊಂದು ಬೃಹತ್ ಸಾಹಸಮಯ ಚಿತ್ರವಾಗಿದ್ದು, ಮೈ ಜುಂ ಎನಿಸುವಂತಹ ಸಾಹಸ ಮತ್ತು ರೋಚಕ ದೃಶ್ಯಗಳು ಇವೆ. ಮೋಹನ್ ಲಾಲ್ ಜೊತೆಗೆ ರೋಶನ್ ಮೇಕಾ, ಶನಾಯ ಕಪೂರ್, ಝಾರಾ ಖಾನ್, ಶ್ರೀಕಾಂತ್ ಮೇಕಾ ಮುಂತಾದವರು ನಟಿಸುತ್ತಿದ್ದಾರೆ. ಕನ್ನಡದ ರಾಗಿಣಿ ದ್ವಿವೇದಿ ಸಹ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

     

    ‘ಕಾಂದಹಾರ್’ ನಂತರ ಇದೇ ಎರಡನೆಯ ಬಾರಿಗೆ ಮೋಹನ್ ಲಾಲ್ ಜೊತೆಗೆ ರಾಗಿಣಿ (Ragini Dwivedi) ನಟಿಸುತ್ತಿದ್ದಾರೆ. ಕನ್ನಡದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ನಂದಕಿಶೋರ್ (Nandakishor) ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

  • ‘ಕಾಟೇರ’ ಟೀಮ್ ಟೆಂಪಲ್ ರನ್ : ತಿರುಪತಿಯಲ್ಲಿ ದರ್ಶನ್

    ‘ಕಾಟೇರ’ ಟೀಮ್ ಟೆಂಪಲ್ ರನ್ : ತಿರುಪತಿಯಲ್ಲಿ ದರ್ಶನ್

    ಕಾಟೇರ (Katera) ಸಿನಿಮಾದ ಸಕ್ಸಸ್ ಬೆನ್ನಲ್ಲೇ ಕಾಟೇರ ಟೀಮ್ ದೇವಸ್ಥಾನಗಳಿಗೆ ಭೇಟಿ ನೀಡಿ, ಭಗವಂತನ ದರ್ಶನ ಮಾಡುತ್ತಿದೆ. ಮೊನ್ನೆಯಷ್ಟೇ ನಿರ್ದೇಶಕ ತರುಣ್ ಸುಧೀರ್ ಕೊರಗಜ್ಜನ ದೇವಸ್ಥಾನಕ್ಕೆ ಮತ್ತು ಧರ್ಮಸ್ಥಳದ ಮಂಜುನಾಥ ಟೆಂಪಲ್ ಗೆ ಭೇಟಿ ನೀಡಿ, ದೇವರ ದರ್ಶನ ಪಡೆದುಕೊಂಡಿದ್ದರು. ಇದೀಗ ದರ್ಶನ್ (Darshan) ಕೂಡ ತಿರುಪತಿಯಲ್ಲಿ (Tirupati Thimmappa) ಕಾಣಿಸಿಕೊಂಡಿದ್ದಾರೆ.

    ಮುಂದಿನ ವಾರದ ದರ್ಶನ್ ಅವರ ಹುಟ್ಟು ಹಬ್ಬ. ಅದಕ್ಕೂ ಮುನ್ನ ಅವರು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಹುಟ್ಟು ಹಬ್ಬ ಮತ್ತು ಕಾಟೇರ ಸಿನಿಮಾದ ಸಕ್ಸಸ್ ಪ್ರಯುಕ್ತವಾಗಿ ದೇವಸ್ಥಾನಕ್ಕೆ ತೆರಳಿದ್ದಾರೆ ಎನ್ನುವ ಮಾಹಿತಿ ಇದೆ.

    ಈಗಾಗಲೇ ಹುಟ್ಟು ಹಬ್ಬಕ್ಕೆ ತಮ್ಮ ಅಭಿಮಾನಿಗಳಿಗೆ ಸಂದೇಶವೊಂದನ್ನು ರವಾಣಿಸಿದ್ದಾರೆ ದರ್ಶನ್. ಕೇಕ್, ಹಾರು, ತುರಾಯಿ ಬದಲು ದವಸ ಧಾನ್ಯಗಳನ್ನು ನೀಡುವಂತೆ ಕೇಳಿದ್ದಾರೆ. ಅನಾಥಾಶ್ರಮಗಳಿಗೆ ಅಕ್ಕಿ, ಬೆಳೆ, ಆಹಾರ ಪದಾರ್ಥಗಳನ್ನು ಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ.

     

    ಪ್ರತಿ ಬಾರಿಯೂ ತಮ್ಮ ಅಭಿಮಾನಿಗಳಿಗೆ ಈ ಸಂದೇಶವನ್ನು ಕೊಡುತ್ತಾ ಬಂದಿದೆ. ನೆಚ್ಚಿನ ನಟನ ಮಾತಿನಂತೆ ಅಭಿಮಾನಿಗಳು ಕೂಡ ಆ ಕೆಲಸವನ್ನು ಮಾಡುತ್ತಾ ಬಂದು, ಮಾದರಿಯಾಗಿದ್ದಾರೆ.

  • ಹೊಸ ಸಿನಿಮಾದ ಶೂಟಿಂಗ್ ಬೆನ್ನಲ್ಲೇ ತಿಮ್ಮಪ್ಪನ ದರ್ಶನ ಪಡೆದ ಸುದೀಪ್

    ಹೊಸ ಸಿನಿಮಾದ ಶೂಟಿಂಗ್ ಬೆನ್ನಲ್ಲೇ ತಿಮ್ಮಪ್ಪನ ದರ್ಶನ ಪಡೆದ ಸುದೀಪ್

    ನ್ನೇನು ಕೆಲವೇ ದಿನಗಳಲ್ಲಿ ಸುದೀಪ್ ನಟನೆಯ ಹೊಸ ಸಿನಿಮಾದ ಚಿತ್ರೀಕರಣ ಶುರುವಾಗಲಿದೆ. ಅದಕ್ಕೂ ಮುನ್ನ ಸುದೀಪ್ ತಿರುಪತಿಗೆ (Thirupathi Thimmappa) ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಹಲವು ದಿನಗಳಿಂದ ಕಿರಿಕಿರಿ ಅನುಭವಿಸುತ್ತಿದ್ದ ಕಿಚ್ಚ, ದೇವರ ದರ್ಶನ ಪಡೆದುಕೊಂಡು ನಿರಾಳರಾಗಿದ್ದಾರೆ.

    ಕಿಚ್ಚ ಸುದೀಪ್(Kiccha Sudeep)- ನಿರ್ಮಾಪಕ ಕುಮಾರ್ ಕಾಲ್‌ಶೀಟ್ ಕದನಕ್ಕೆ ಪೂರ್ಣ ವಿರಾಮ ಬೀಳುವ ಮುಂಚಯೇ ಕಿಚ್ಚನ 46 ಸಿನಿಮಾಗೆ ಸಿದ್ಧತೆ ನಡೆಯುತ್ತಿದೆ. ಕುಮಾರ್ ಜೊತೆಗಿನ ಸಂಧಾನದ ಮಾತುಕತೆ ನಡೆಯುತ್ತಿದೆ. ಈ ವಾರದ ಅಂತ್ಯದಲ್ಲಿ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದು ಹೇಳಲಾಗಿತ್ತು. ಅದು ಸಾಧ್ಯವಾಗಿಲ್ಲ. ವಿವಾದ ಬದಿಗಿಟ್ಟು ಕಾಯಕವೇ ಕೈಲಾಸ ಅಂತಾ ಸುದೀಪ್ ಹೊಸ ಸಿನಿಮಾದ ಶೂಟಿಂಗ್‌ನತ್ತ ಮುಖ ಮಾಡಿದ್ದಾರೆ.‌ ಇದನ್ನೂ ಓದಿ:ಮಗಳ ವಯಸ್ಸಿನ ನಟಿ ಜೊತೆ ಅನಿಲ್ ಕಪೂರ್ ಲಿಪ್‌ಲಾಕ್- ನೆಟ್ಟಿಗರಿಂದ ಛೀಮಾರಿ

    ‘ವಿಕ್ರಾಂತ್ ರೋಣ’ ಸಿನಿಮಾದ ಬಳಿಕ ತನ್ನ ಜೊತೆ ಸಿನಿಮಾ ಮಾಡ್ತಾರೆ ಅಂತಾ ಮಾತುಕತೆ ಆಗಿತ್ತು. ಹಣ ಪಡೆದು ಸಾಕಷ್ಟು ಸಮಯದಿಂದ ಕಾಲ್‌ಶೀಟ್ ನೀಡದೇ ಸುದೀಪ್ ಸತಾಯಿಸುತ್ತಿದ್ದಾರೆ ಎಂದು ನಿರ್ಮಾಪಕ ಕುಮಾರ್ (Producer Kumar) ಆರೋಪಿಸಿದ್ದರು. ಇದಾದ ಬಳಿಕ ಸುದೀಪ್ ಕಾನೂನು ಸಮರ ಸಾರಿದ್ದರು. ಬಳಿಕ ರವಿಚಂದ್ರನ್ (Ravichandran) ಅವರ ಜೊತೆ ಕುಮಾರ್-ಸುದೀಪ್ ಇಬ್ಬರ ಸಂಧಾನ ಸಭೆ ನಡೆದಿತ್ತು. ಆದರೆ ಇದು ಇನ್ನೂ ಅಂತಿಮ ಹಂತಕ್ಕೆ ತಲುಪಿಲ್ಲ. ಕೊನೆಯ ಮೀಟಿಂಗ್‌ನಲ್ಲಿ ಶಿವಣ್ಣ (Shivarajkumar) ಕೂಡ ಭಾಗಿಯಾಗಲಿದ್ದಾರೆ. ಬಳಿಕ ಕಾಲ್‌ಶೀಟ್ ಕದನಕ್ಕೆ ಬ್ರೇಕ್ ಸಿಗಲಿದೆ.

    ʼವಿಕ್ರಾಂತ್ ರೋಣ’ (Vikrant Rona) ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ಸುದೀಪ್ ಒಂದು ಬ್ರೇಕ್ ಪಡೆದರು. ವೃತ್ತಿ ಜೀವನದಲ್ಲಿ ಅವರು ಪಡೆದ ಮೊದಲ ಬ್ರೇಕ್ ಇದು ಅನ್ನೋದು ವಿಶೇಷ. ಈ ಸಮಯದಲ್ಲಿ ಸುದೀಪ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ಕೊಟ್ಟರು. ಚುನಾವಣಾ ಪ್ರಚಾರದಲ್ಲಿ ಭಾಗಿ ಆದರು. ಬಿಜೆಪಿ ಕ್ಷೇತ್ರದ ಪರ ಪ್ರಚಾರಕ್ಕೆ ಕಣಕ್ಕೆ ಇಳಿದರು. ಈಗ ಅವರು ಶೂಟಿಂಗ್ ಹೊರಡೋಕೆ ರೆಡಿ ಆಗಿದ್ದಾರೆ.

     

    ‘K 46’ ಚಿತ್ರದ ಶೂಟಿಂಗ್ ಆಗಸ್ಟ್ ಮೊದಲ ವಾರದಿಂದ ಪ್ರಾರಂಭ ಆಗಲಿದೆ. 55 ದಿನಗಳ ಸುದೀರ್ಘ ಶೆಡ್ಯೂಲ್‌ನಲ್ಲಿ ಚಿತ್ರೀಕರಣ ನಡೆಯಲಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಯಲಿದೆ. ಸಿನಿಮಾದ ಮೊದಲ ಝಲಕ್ ಸಂಚಲನ ಮೂಡಿಸಿದೆ. ನಾನು ಮನುಷ್ಯನಲ್ಲ ರಾಕ್ಷಸ ಎನ್ನುವ ಕಿಚ್ಚನ ಖಡಕ್ ಡೈಲಾಗ್ ಫ್ಯಾನ್ಸ್ ಕಿಕ್ ಕೊಟ್ಟಿತ್ತು. ಈಗ ಸಿನಿಮಾ ಚಿತ್ರೀಕರಣಕ್ಕೆ ಕೌಂಟ್‌ಡೌನ್ ಶುರುವಾಗಿದೆ. ವಿಜಯ್ ಕಾರ್ತಿಕೇಯ ಅವರು ‘K 46ʼ ಚಿತ್ರಕ್ಕೆ ನಿರ್ದೇಶನ ಮಾಡ್ತಿದ್ದಾರೆ. ವಿ ಕ್ರಿಯೇಷನ್ಸ್ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತ್ನಿ, ಮಗಳ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಪ್ರಭುದೇವ್

    ಪತ್ನಿ, ಮಗಳ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಪ್ರಭುದೇವ್

    ಟ, ನಿರ್ದೇಶಕ ಪ್ರಭುದೇವ್ (Prabhudev) ನಿನ್ನೆ ತಿರುಪತಿಗೆ ಆಗಮಿಸಿ ತಿಮ್ಮಪ್ಪನ ದರ್ಶನ (Tirupati Thimmappa) ಮಾಡಿದ್ದಾರೆ. ಮೊದಲ ಬಾರಿಗೆ ಮಗಳು ಹಾಗೂ ಪತ್ನಿಯೊಂದಿಗೆ ತಿಮ್ಮಪ್ಪನ ಸನ್ನಿಧಿಗೆ ಆಗಮಿಸಿದ್ದ ಪ್ರಭುದೇವ ಪೂಜೆ ಸಲ್ಲಿಸಿ ದರ್ಶನ ಪಡೆದಿದ್ದಾರೆ. ಪತ್ನಿ ಹಿಮಾನಿ ಸಿಂಗ್ (Himani Sing) ಮತ್ತು ಪ್ರಭುದೇವ್ ಪುತ್ರಿ ಈ ಸಂದರ್ಭದಲ್ಲಿ ಜೊತೆಯಾಗಿದ್ದರು.

    ಮಗಳು ಹುಟ್ಟಿದ ನಂತರ ಪ್ರಭುದೇವ್ ಈವರೆಗೂ ಸಾರ್ವಜನಿಕವಾಗಿ ಮಗಳನ್ನು ತೋರಿಸಿರಲಿಲ್ಲ. ಇದೇ ಮೊದಲ ಬಾರಿಗೆ ಪುತ್ರಿಯು ಕ್ಯಾಮೆರಾಗಳ ಕಣ್ಣಿಗೆ ಬಿದಿದ್ದಾರೆ. ಪ್ರಭುದೇವ್ ತಿರುಪತಿಗೆ ಬಂದ ಸುದ್ದಿ ಕೇಳಿ, ಅನೇಕ ಅಭಿಮಾನಿಗಳು ಕೂಡ ಜಮಾಯಿಸಿದ್ದರು. ನೆಚ್ಚಿನ ನಟನನ್ನು ನೋಡಿ ಕಣ್ತುಂಬಿಕೊಂಡರು. ಇದನ್ನೂ ಓದಿ:ಜುಲೈ 23ಕ್ಕೆ ವಿಶ್ವಕುಂದಾಪ್ರ ಕನ್ನಡ ದಿನಕ್ಕೆ ಸಿಎಂ, ರಿಷಬ್ ಶೆಟ್ಟಿ- ಪ್ರಮೋದ್ ಶೆಟ್ಟಿ ಸಾಥ್

    ಪ್ರಭುದೇವ್ ಸದ್ಯ ಕನ್ನಡದಲ್ಲೂ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಅವರು ಶಿವರಾಜ್ ಕುಮಾರ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ಸಿನಿಮಾದ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿದೆ. ಒಂದಷ್ಟು ದಿನ ಪ್ರಭುದೇವ್ ಬೆಂಗಳೂರಿನಲ್ಲೇ ಇದ್ದುಕೊಂಡು ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದರು.

     

    ಪ್ರಭುದೇವ್ ಮತ್ತು ಶಿವರಾಜ್ ಕುಮಾರ್ ಕಾಂಬಿನೇಷನ್ ನ ಆ ಸಿನಿಮಾಗೆ ಕರಟಕ ದಮನಕ ಎಂದು ಹೆಸರಿಡಲಾಗಿದೆ. ಯೋಗರಾಜ್ ಭಟ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ರಾಕ್ ಲೈನ್ ವೆಂಕಟೇಶ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾದ ಬಹುತೇಕ ಶೂಟಿಂಗ್ ಮುಗಿದಿದೆ ಎಂದು ಹೇಳಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಿರುಪತಿ ತಿಮ್ಮಪ್ಪನಿಗೆ ‘ಮುಡಿ’ ಕೊಟ್ಟ ಖ್ಯಾತ ನಟ ಧನುಷ್

    ತಿರುಪತಿ ತಿಮ್ಮಪ್ಪನಿಗೆ ‘ಮುಡಿ’ ಕೊಟ್ಟ ಖ್ಯಾತ ನಟ ಧನುಷ್

    ಮಿಳಿನ ಖ್ಯಾತ ನಟ ಧನುಷ್ (Dhanush) ಇಂದು ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಕಾಣಿಸಿಕೊಂಡರು. ತಿಮ್ಮಪ್ಪನಿಗೆ (Tirupathi Thimmappa) ಮುಡಿ ಕೊಡುವ ಮೂಲಕ ಹರಕೆ ತೀರಿಸಿಕೊಂಡಿದ್ದಾರೆ. ಬೆಳ್ಳಂ ಬೆಳಗ್ಗೆ ತಿರುಪತಿಗೆ ಆಗಮಿಸಿದ್ದ ಧನುಷ್, ಮುಡಿ ಕೊಟ್ಟು ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಧನುಷ್ ಮಾತ್ರವಲ್ಲ ಅವರ ಮಕ್ಕಳಾದ ಯಾತ್ರಾ ಮತ್ತು ಲಿಂಗ ಕೂಡ ಮುಡಿ ನೀಡಿದ್ದಾರೆ.

    ಸಾಮಾನ್ಯರಂತೆ ಸರದಿ ಸಾಲಿನಲ್ಲಿ ಮಕ್ಕಳೊಂದಿಗೆ ನಿಂತು ತಿಮ್ಮಪ್ಪನ ದರ್ಶನ ಮಾಡಿದ ಧನುಷ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ. ಮಕ್ಕಳೊಂದಿಗೆ ಮುಡಿಕೊಟ್ಟು ಸಾಮಾನ್ಯ ಭಕ್ತರಂತೆ ನಡೆದುಕೊಂಡ ರೀತಿಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಅಲ್ಲದೇ, ಧನುಷ್ ಬಗ್ಗೆ ಅನೇಕರು ಮೆಚ್ಚುಗೆಯಿಂದ ಮಾತನಾಡುತ್ತಿದ್ದಾರೆ. ಇದನ್ನೂ ಓದಿ:ಗೋಲ್ಡನ್ ಟೆಂಪಲ್‌ನಲ್ಲಿ ಪಾತ್ರೆ ತೊಳೆದು ಸೇವೆ ಸಲ್ಲಿಸಿದ ರಾಘವ್- ಪರಿಣಿತಿ ಜೋಡಿ

    ಕ್ಯಾಪ್ಟನ್ ಮಿಲ್ಲರ್ (Captain Miller) ಚಿತ್ರಕ್ಕಾಗಿ ಧನುಷ್ ಉದ್ದನೆಯ ಕೂದಲು ಬೆಳೆಸಿದ್ದರು. ಇದೀಗ ಸಿನಿಮಾದ ಕಂಪ್ಲೀಟ್ ಶೂಟಿಂಗ್ ಮುಗಿದಿದೆ. ಮೊನ್ನೆಯಷ್ಟೇ ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ಫಸ್ಟ್ ಲುಕ್ ಗೆ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿದೆ. ಈ ಸಿನಿಮಾದಲ್ಲಿ ಧನುಷ್ ಅಪರೂಪದ ಪಾತ್ರವನ್ನು ಮಾಡಿದ್ದಾರೆ.

     

    ಈ ಸಿನಿಮಾದ ಮತ್ತೊಂದು ವಿಶೇಷ ಅಂದರೆ ಇದೇ ಮೊದಲ ಬಾರಿಗೆ ಕನ್ನಡದ ನಟ ಶಿವರಾಜ್ ಕುಮಾರ್ (Shivaraj Kumar) ಈ ಚಿತ್ರದಲ್ಲಿ ನಟಿಸಿದ್ದಾರೆ. ಧನುಷ್ ಮತ್ತು ಶಿವರಾಜ್ ಕುಮಾರ್ ಕಾಂಬಿನೇಷನ್ ನ ಮೊದಲ ಸಿನಿಮಾವಿದು. ಈ ಚಿತ್ರದ ಮೂಲಕ ಶಿವಣ್ಣ ತಮಿಳು ಚಿತ್ರರಂಗಕ್ಕೆ ಹಾರಿದ್ದಾರೆ. ಧನುಷ್ ಮತ್ತು ಶಿವರಾಜ್ ಕುಮಾರ್ ಸಹೋದರರಾಗಿ ಈ ಸಿನಿಮಾದಲ್ಲಿ ನಟಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೊರಟ ‘ಕಬ್ಜ’ ಟೀಮ್ : ವಿಮಾನ ಏರಿದ ಆರ್.ಚಂದ್ರು

    ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೊರಟ ‘ಕಬ್ಜ’ ಟೀಮ್ : ವಿಮಾನ ಏರಿದ ಆರ್.ಚಂದ್ರು

    ನಾಳೆ ವಿಶ್ವದಾದ್ಯಂತ ಕಬ್ಜ ಸಿನಿಮಾ ರಿಲೀಸ್ ಆಗುತ್ತಿದೆ. ಬಿಡುಗಡೆಗೂ ಒಂದು ದಿನ ಮುನ್ನ ಕಬ್ಜ (Kabzaa) ಟೀಮ್ ತಿರುಪತಿಯತ್ತ ಪ್ರಯಾಣ ಬೆಳೆಸಿದೆ. ವಿಶೇಷ ವಿಮಾನದಲ್ಲಿ ನಟ ಉಪೇಂದ್ರ (Upendra), ನಿರ್ದೇಶಕ ಆರ್.ಚಂದ್ರು (R. Chandru), ಕೆ.ಪಿ ಶ್ರೀಕಾಂತ್ ಸೇರಿದಂತೆ ಹಲವರು ಬೆಳಗ್ಗೆ ಪ್ರಯಾಣ ಬೆಳೆಸಿದ್ದಾರೆ. ತಿರುಪತಿ ತಿಮ್ಮಪ್ಪನ (Tirupati Thimmappa) ದರ್ಶನ ಪಡೆದು, ಅಧಿಕೃತವಾಗಿ ಚಿತ್ರದ ಬಿಡುಗಡೆಗೆ ಚಾಲನೆ ನೀಡಲಿದ್ದಾರೆ.

    ಮೊನ್ನೆಯಷ್ಟೇ ಈ ಸಿನಿಮಾದ ಪ್ರಿ ಇವೆಂಟ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದ್ದು, ಆ ಕಾರ್ಯಕ್ರಮದಲ್ಲಿ ಚಿತ್ರತಂಡ ಹಲವಾರು ವಿಷಯಗಳನ್ನು ಹಂಚಿಕೊಂಡಿದೆ. ವಿಶ್ವದಾದ್ಯಂತ ನಾಲ್ಕು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಐದು ಭಾಷೆಗಳಲ್ಲಿ ಚಿತ್ರ ರಿಲೀಸ್ ಆಗುತ್ತಿದೆ. ಈ ಸಮಯದಲ್ಲಿ ಕಬ್ಜ 2 ಸಿನಿಮಾದ ಬಗ್ಗೆ ಸುಳಿವು ನೀಡಿದ್ದಾರೆ ನಟ ಉಪೇಂದ್ರ. ನಿನ್ನೆ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ನಡೆದ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಬ್ಜ 2 ಸಿನಿಮಾದಲ್ಲಿ ನನಗೆ ಅತಿಥಿ ಪಾತ್ರ ಕೊಡಿ, ಸುದೀಪ್ ಅವರನ್ನು ಹೀರೋ ಆಗಿ ಮಾಡಿ ಎಂದು ನಿರ್ದೇಶಕರಲ್ಲಿ ಮನವಿ ಮಾಡಿಕೊಂಡರು. ಇದನ್ನೂ ಓದಿ: ಆಸ್ಕರ್‌ನಲ್ಲಿ ಜ್ಯೂ.ಎನ್‌ಟಿಆರ್-ಚರಣ್ ಡ್ಯಾನ್ಸ್ ಮಾಡಿಲ್ಲ ಯಾಕೆ? ಇಲ್ಲಿದೆ ಅಸಲಿ ಕಾರಣ

    ‘ಕಬ್ಜ ಇದು ನಟರ ಸಿನಿಮಾವಲ್ಲ, ಟೆಕ್ನಿಷಿಯನ್ಸ್ ಸಿನಿಮಾ. ಈ ಸಿನಿಮಾದಲ್ಲಿ ನಿರ್ದೇಶಕರು, ಸಂಗೀತ ನಿರ್ದೇಶಕರ, ಕಲಾ ನಿರ್ದೇಶಕ, ಸಿನಿಮಾಟೋಗ್ರಾಫರ್ ಕಾಣುತ್ತಾರೆ. ನಟರು ಕೇವಲ ಹಿಂದಿನ ಶಕ್ತಿ ಅಷ್ಟೇ. ಇಂತಹ ಸಿನಿಮಾಗಳನ್ನು ಪ್ರೇಕ್ಷಕರು ಗೆಲ್ಲಿಸುತ್ತಾರೆ. ಕಬ್ಜ 2 ಸಿನಿಮಾ ಕೂಡ ಆಗಲಿ. ಆ ಸಿನಿಮಾದಲ್ಲಿ ಸುದೀಪ್ ಮುಖ್ಯ ಪಾತ್ರ ಮಾಡಲಿ’ ಎಂದು ಹಾರೈಸಿದರು ಹಾಗೂ ಕಬ್ಜ 2 ಬರುವ ಕುರಿತು ಸುಳಿವನ್ನೂ ಅವರು ನೀಡಿದರು.

    ಪ್ರಿ ರಿಲೀಸ್ ಇವೆಂಟ್ ನಲ್ಲಿ ಭಾಗಿಯಾಗಿದ್ದ ಡಾಲಿ ಧನಂಜಯ್, ‘ಕಬ್ಜ ಸಿನಿಮಾದಲ್ಲಿ ನನಗೆ ಅವಕಾಶ ನೀಡಿಲ್ಲ. ನಿರ್ದೇಶಕರು ಬಹುಶಃ ನನ್ನನ್ನು ಮರೆತಿದ್ದಾರೆ. ಕಬ್ಜ 2 ನಲ್ಲಾದರೂ ಅವಕಾಶ ಕೊಡಲಿ ಎಂದರು. ಅಲ್ಲದೇ ಮೊದಲ ಶೋ ರಾತ್ರಿಯೇ ಇರಲಿ, ಬೆಳಗ್ಗೆ ಆಯೋಜನೆ ಆಗಿರಲಿ ಒಬ್ಬ ಅಭಿಮಾನಿಯಾಗಿ ಬಂದು ಥಿಯೇಟರ್ ನಲ್ಲಿ ಸಂಭ್ರಮಿಸುತ್ತೇನೆ’ ಎಂದರು.

    ನಿರ್ದೇಶಕ ಆರ್.ಚಂದ್ರು ಅವರನ್ನು ಹಾಡಿ ಹೊಗಳಿದ ಕಿಚ್ಚ ಸುದೀಪ್, ‘ಇಂಥದ್ದೊಂದು ಸಿನಿಮಾದಲ್ಲಿ ನಾನು ಭಾಗಿಯಾಗಿದ್ದೇನೆ ಎನ್ನುವುದು ಸಂತಸ ತಂದಿದೆ. ನಿರ್ದೇಶಕರು ಸಿನಿಮಾವನ್ನು ತುಂಬಾ ಚೆನ್ನಾಗಿ ಮಾಡಿದ್ದಾರೆ. ಪ್ರೇಕ್ಷಕರು ಕೂಡ ಅಷ್ಟೇ ಈ ಸಿನಿಮಾವನ್ನು ಒಪ್ಪಿಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ. ಒಳ್ಳೊಳ್ಳೆ ಸಿನಿಮಾಗಳು ಹಾಗೂ ಹೃದಯಕ್ಕೆ ಹತ್ತಿರ ಇದ್ದವರು ಸಿನಿಮಾ ಮಾಡಿದಾಗ, ಅವರಿಗೆ ಸಪೋರ್ಟ್ ಮಾಡುವುದು ನನ್ನ ಕರ್ತವ್ಯ. ನಾನು ಮಾಡಿದ್ದೇನೆ’ ಎಂದು ಹೇಳಿದರು.