Tag: ತಿರುಪತಿ ಲಡ್ಡು ವಿವಾದ

  • ತಿಮ್ಮಪ್ಪನ ದರ್ಶನಕ್ಕೆ ಹೆಚ್ಚಾಯ್ತು ಡಿಮ್ಯಾಂಡ್ – ಪ್ರತಿದಿನ 1,000 ಜನರಿಗೆ ನೇರ ದರ್ಶನಕ್ಕೆ ಅವಕಾಶ ನೀಡುವಂತೆ KSTDC ಮನವಿ

    ತಿಮ್ಮಪ್ಪನ ದರ್ಶನಕ್ಕೆ ಹೆಚ್ಚಾಯ್ತು ಡಿಮ್ಯಾಂಡ್ – ಪ್ರತಿದಿನ 1,000 ಜನರಿಗೆ ನೇರ ದರ್ಶನಕ್ಕೆ ಅವಕಾಶ ನೀಡುವಂತೆ KSTDC ಮನವಿ

    – ಆಂಧ್ರಪ್ರದೇಶದ ಸಿಎಂಗೆ ಕೆಎಸ್‌ಟಿಡಿಸಿ ಅಧ್ಯಕ್ಷ ಬೇಡಿಕೆ
    – ಭಕ್ತಾದಿಗಳಿಗೆ 350 ರೂಮ್‌ಗಳ ವ್ಯವಸ್ಥೆ

    ಅಮರಾವತಿ/ಬೆಂಗಳೂರು: ಭಾರತದ ಅತೀ ಶ್ರೀಮಂತ ದೇಗುಲಗಳಲ್ಲಿ ತಿರುಪತಿ ವೆಂಕಟೇಶ್ವರ ದೇವಾಲಯವೂ (Tirumala Tirupati Devasthanam) ಒಂದು. ತಿರುಪತಿ ತಿಮ್ಮಪ್ಪನಿಗೆ ಲಕ್ಷಾಂತರ ಭಕ್ತರಿದ್ದು, ತಿರುಪತಿ ಲಡ್ಡು ವಿವಾದದ (Tirupati Laddu Row) ನಂತರವೂ ಭಕ್ತಾದಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಅದರಲ್ಲೂ ಕರ್ನಾಟಕದಿಂದಲೂ (Karnataka) ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆ (KSTDC), ಆಂಧ್ರ ಸಿಎಂಗೆ ಹೊಸ ಮನವಿ ಮಾಡಿದೆ.

    ತಿರುಪತಿ ಭಕ್ತರ ಪಾಲಿಗೆ ಕಲಿಯುಗದ ವೈಕುಂಠ. ತಿರುಮಲಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಎರಡು ತೆಲುಗು ರಾಜ್ಯಗಳಲ್ಲದೆ, ವಿವಿಧ ರಾಜ್ಯಗಳು ಮತ್ತು ವಿದೇಶಗಳಿಂದಲೂ ಭಕ್ತರು ಇಲ್ಲಿಗೆ ಬರುತ್ತಾರೆ. ಆಪತ್ತುಗಳನ್ನು ನಿವಾರಿಸುವ ಏಡುಕೊಂಡಲವಾಡ ದರ್ಶನ ಪಡೆಯಲು ಜನ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಥವಾ ಕೆಎಸ್‌ಟಿಡಿಸಿಯ ಸೀಟ್‌ಗಳಿಗಾಗಿ ಪ್ರತಿದಿನ ಕಾಯುತ್ತಾರೆ. ಪ್ರತಿದಿನ ಟಿಟಿಡಿಯು ಕೆಎಸ್‌ಟಿಡಿಸಿಗೆ ಕರ್ನಾಟಕದ 250 ಭಕ್ತಾದಿಗಳಿಗೆ ನೇರ ದರ್ಶನಕ್ಕೆ ಸದ್ಯ ಅವಕಾಶ ನೀಡಿದೆ. ಆದರೂ ನೇರ ದರ್ಶನಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಇದು ತಿರುಪತಿ ಲಡ್ಡು ವಿವಾದದ ನಂತರವೂ ಮುಂದುವರೆದಿದೆ. ಈ ನಿಟ್ಟಿನಲ್ಲಿ ಕೆಎಸ್‌ಟಿಡಿಸಿಯು ಪ್ರತಿದಿನ 250 ಜನರಿಗೆ ನೇರ ದರ್ಶನದ ಸಂಖ್ಯೆಯನ್ನು, ಒಂದು ಸಾವಿರಕ್ಕೆ ಹೆಚ್ಚಿಸಬೇಕೆಂದು ಆಂಧ್ರ ಸಿಎಂಗೆ ಮನವಿ ಮಾಡಿದ್ದು, ಸದ್ಯ ಮಾತುಕತೆ ನಡೆದಿದೆ. ಇದನ್ನೂ ಓದಿ: ದೇಶದ ರೈತರಿಗೆ ನವರಾತ್ರಿ ಗಿಫ್ಟ್‌ – ಶನಿವಾರ ಪ್ರಧಾನಿ ಮೋದಿಯಿಂದ 20,000 ಕೋಟಿ ರೂ. ಬಿಡುಗಡೆ

    ಇನ್ನೂ ಸದ್ಯ 250 ಜನ ಭಕ್ತಾದಿಗಳಿಗೆ ನಿಗಮದಿಂದ ಪ್ರತಿನಿತ್ಯ 5-6 ಬಸ್‌ಗಳು ರಾಜ್ಯದಿಂದ ತೆರಳುತ್ತಿದ್ದವು. ಸಾವಿರ ಜನರಿಗೆ ಅವಕಾಶ ಸಿಕ್ಕರೇ, ರಾಜ್ಯದಿಂದ ತಿರುಪತಿಯತ್ತ 10-12 ಬಸ್‌ಗಳು ಪ್ರವಾಸೋದ್ಯಮ ಇಲಾಖೆಯಿಂದ ಸಂಚರಿಸಲಿವೆ. ಭಕ್ತಾದಿಗಳ ಸಂಖ್ಯೆ ಹೆಚ್ಚಾದರೂ ಅಲ್ಲಿನ ವಸತಿ ವ್ಯವಸ್ಥೆಗೆ ಆತಂಕಪಡಬೇಕಿಲ್ಲ. ಏಕೆಂದರೆ ತಿರುಪತಿಯಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ 350 ರೂಮ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ ಭಿನ್ನಮತ ಸ್ಫೋಟ – ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ರಾಜೀನಾಮೆ

  • ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಬಳಕೆ ವಿವಾದ – ಇಂದಿನಿಂದ ಟಿಟಿಡಿ ದೇವಾಲಯ ಪವಿತ್ರೋತ್ಸವ

    ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಬಳಕೆ ವಿವಾದ – ಇಂದಿನಿಂದ ಟಿಟಿಡಿ ದೇವಾಲಯ ಪವಿತ್ರೋತ್ಸವ

    – ಬೆಂಗಳೂರಿಗೆ ತಿರುಪತಿ ಅರ್ಚಕರ ಆಗಮನ

    ಬೆಂಗಳೂರು: ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮಿಶ್ರಣ ವಿವಾದಕ್ಕೆ ಸಂಬಂಧಿಸಿದಂತೆ ಟಿಟಿಡಿ ಅಧೀನದ ದೇವಾಲಯದಲ್ಲಿ ಮತ್ತೆ ಶುದ್ಧೀಕರಣ ಕಾರ್ಯ ನಡೆಯುತ್ತಿದೆ. ಇಂದಿನಿಂದ ನಾಲ್ಕು ದಿನ ತಿರುಪತಿ ದೇವಾಲಯದ ಪವಿತ್ರೋತ್ಸವ ನಡೆಯುತ್ತಿದೆ.

    ತಿರುಪತಿ ತಿರುಮಲ ದೇವಸ್ಥಾನಂ (ಟಿಟಿಡಿ) ದೇಗುಲದ ಪಾವಿತ್ರ್ಯತೆಗೆ ಧಕ್ಕೆಯಾದ ಹಿನ್ನೆಲೆಯಲ್ಲಿ ಇಂದಿನಿಂದ ಸೋಮವಾರದವರೆಗೆ, ಪ್ರತಿ ದಿನ ಸಂಜೆ 6:30 ರ ಹೊತ್ತಿಗೆ ಶುದ್ಧಿಕಾರ್ಯ ನಡೆಯಲಿದೆ. ವೈಯಾಲಿಕಾವಲ್‌ನಲ್ಲಿರುವ ಟಿಟಿಡಿ ದೇವಾಲಯದಲ್ಲಿ ಶುದ್ಧಿಕಾರ್ಯ ನಡೆಯಲಿದೆ.

    ಮೊದಲ ದಿನ ಆಚಾರ್ಯವರನಮ್, ಎರಡನೇ ದಿನ ಹೋಮ, ಮೂರನೇ ದಿನ ಪವಿತ್ರ ಸಮರ್ಪಣ ಮತ್ತು ನಾಲ್ಕನೇ ದಿನ ಪವಿತ್ರೋತ್ಸವ ನಡೆಸಲಾಗುವುದು. ಈ ಕಾರ್ಯಕ್ರಮಗಳಿಗೆ ತಿರುಪತಿಯಿಂದ 10 ಅರ್ಚಕರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅರ್ಚಕರು ಮೂರು ದಿನದ‌ ಪೂಜೆ, ಹೋಮ, ಹವನ ಮಾಡಲಿದ್ದಾರೆ.

    ಈಗಾಗಲೇ ಟಿಟಿಡಿ ದೇವಾಲಯದಲ್ಲಿ ಅಗ್ನಿಕುಂಡ ಹೋಮಕುಂಡಗಳ ತಯಾರಿ ಮಾಡಿಕೊಳ್ಳಲಾಗಿದೆ. ಪವಿತ್ರೋತ್ಸವ ಶುದ್ಧಿ ಕಾರ್ಯದಲ್ಲಿ ದೇವಾಲಯದ ಆಡಳಿತ ಮಂಡಳಿ ಭಕ್ತರಿಗೂ ಅವಕಾಶ ನೀಡಿದೆ. ಇಬ್ಬರು 1 ಸಾವಿರ ರೂ. ರಶೀದಿ ಪಡೆದು ಪೂಜೆಯಲ್ಲಿ ಭಾಗಿಯಾಗಲು ಕಲ್ಪಿಸಲಾಗಿದೆ.

  • ಸನಾತನ ಧರ್ಮದ ಬಗ್ಗೆ 100 ಬಾರಿ ಯೋಚಿಸಿ ಮಾತನಾಡಿ: ಕಾರ್ತಿ ವಿರುದ್ಧ ಪವನ್‌ ಕಲ್ಯಾಣ್‌ ಕಿಡಿ

    ಸನಾತನ ಧರ್ಮದ ಬಗ್ಗೆ 100 ಬಾರಿ ಯೋಚಿಸಿ ಮಾತನಾಡಿ: ಕಾರ್ತಿ ವಿರುದ್ಧ ಪವನ್‌ ಕಲ್ಯಾಣ್‌ ಕಿಡಿ

    ತಿರುಪತಿ ತಿರುಮಲ ದೇವಸ್ಥಾನದಲ್ಲಿ (Tirupati Tirumala Temple) ಭಕ್ತರಿಗೆ ಪ್ರಸಾದವಾಗಿ ನೀಡಿದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂಬುದು ದೃಢವಾಗಿರುವುದು ವರದಿಗಳಿಂದ ತಿಳಿದು ಬಂದಿದೆ. ಈ ಬೆನ್ನಲ್ಲೇ ಇದರ ವಿವಾದ ದೇಶದೆಲ್ಲೆಡೆ ಸಂಚಲನ ಮೂಡಿಸಿದೆ. ಹೀಗಿರುವಾಗ ಸಮಾರಂಭವೊಂದರಲ್ಲಿ ‘ಲಡ್ಡು ವಿಷಯ ಈಗ ಬೇಡ’ ಎಂದ ಕಾರ್ತಿ (Karthi) ಹೇಳಿಕೆಗೆ ಪವನ್ ಕಲ್ಯಾಣ್ (Pawan Kalyan) ಎಚ್ಚರಿಕೆ ಕೊಟ್ಟಿದ್ದಾರೆ. ಸನಾತನ ಧರ್ಮದ ವಿಚಾರದಲ್ಲಿ 100 ಬಾರಿ ಯೋಚಿಸಿ ಮಾತನಾಡಿ ಎಂದು ಗುಡುಗಿದ್ದಾರೆ. ಇದನ್ನೂ ಓದಿ:ಲೈಂಗಿಕ ಕಿರುಕುಳ ಆರೋಪ: ನಟ, ರಾಜಕಾರಣಿ ಮುಕೇಶ್ ಬಂಧನ

    ಸಿನಿಮಾ ಸಮಾರಂಭವೊಂದರಲ್ಲಿ ಲಡ್ಡು ವಿಷಯ ಈಗ ಬೇಡ, ಅದು ಬಹಳ ಸೆನ್ಸಿಟಿವ್ ವಿಷಯ ಆಗಿದೆ ಎಂದ ತಮಿಳು ನಟ ಕಾರ್ತಿ ಹೇಳಿಕೆಯನ್ನು ಪವನ್ ಕಲ್ಯಾಣ್ ಖಂಡಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿ, ನಾನು ಸಿನಿಮಾ ಮಂದಿಗೆ ಎಚ್ಚರಿಕೆ ನೀಡಲು ಬಯಸುತ್ತೇನೆ. ನೀವು ಅದರ ಬಗ್ಗೆ ಮಾತನಾಡಲು ಹೋದರೆ, ಗೌರವದಿಂದ ಮಾತನಾಡಿ. ಅಥವಾ ಸ್ವಲ್ಪವೂ ಮಾತನಾಡಬೇಡಿ. ಆದರೆ ನೀವು ಅದರ ಬಗ್ಗೆ ತಮಾಷೆ ಮಾಡಿದರೆ ಅಥವಾ ಮೀಮ್ಸ್ ಮಾಡಿದರೆ ಜನರು ನಿಮ್ಮನ್ನು ಕ್ಷಮಿಸುವುದಿಲ್ಲ. ಇದು ಹಲವರಿಗೆ ತೀವ್ರ ನೋವಾಗಿದೆ ಎಂದಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಆರಂಭಕ್ಕೂ ಮೊದಲೇ ಕಂಟೆಸ್ಟೆಂಟ್ ಅನೌನ್ಸ್- ಯಾರದು?

    ಬಳಿಕ ನೀವು ಲಡ್ಡುವಿನ ಬಗ್ಗೆ ತಮಾಷೆ ಮಾಡುತ್ತಿದ್ದೀರಿ. ನಿನ್ನೆಯ ಸಿನಿಮಾ ಸಮಾರಂಭದಲ್ಲಿ ಲಡ್ಡು ಹೇಗೆ ಸೂಕ್ಷ್ಮ ವಿಷಯವಾಗಿದೆ ಎಂದು ನಾನು ನೋಡಿದೆ. ನೀವು ಅದನ್ನು ಎಂದಿಗೂ ಹೇಳಬೇಡಿ, ಇಲ್ಲ. ದಯವಿಟ್ಟು ನೀವು ಎಂದಿಗೂ ಹೇಳುವ ಧೈರ್ಯ ಮಾಡಬೇಡಿ. ನಾನು ನಿಮ್ಮನ್ನು ನಟರಾಗಿ ಗೌರವಿಸುತ್ತೇನೆ, ಆದರೆ ಸನಾತನ ಧರ್ಮದ ವಿಷಯಕ್ಕೆ ಬಂದಾಗ, ದಯವಿಟ್ಟು ಒಂದು ಮಾತು ಹೇಳುವ ಮೊದಲು ನೀವು ನೂರು ಬಾರಿ ಯೋಚಿಸಿ ಮಾತನಾಡಿ ಎಂದು ಕಾರ್ತಿಗೆ ಪವನ್ ಕಲ್ಯಾಣ್ ಎಚ್ಚರಿಕೆ ನೀಡಿದ್ದಾರೆ.

    ಇತ್ತ ಪವನ್ ಕಲ್ಯಾಣ್ ಗರಂ ಆಗುತ್ತಿದ್ದಂತೆ ಕಾರ್ತಿ ಕ್ಷಮೆ ಕೇಳಿದ್ದಾರೆ. ಪ್ರೀತಿಯ ಪವನ್ ಕಲ್ಯಾಣ್ ಅವರೇ ನಿಮ್ಮ ಬಗ್ಗೆ ನನಗೆ ಅತೀವ ಗೌರವವಿದೆ. ಉದ್ದೇಶಪೂರ್ವಕವಲ್ಲದೆ ನಡೆದ ಘಟನೆಗಳಿಗಾಗಿ ಕ್ಷಮೆಯನ್ನು ಕೇಳುತ್ತೇನೆ. ನಾನೂ ಒಬ್ಬ ವೆಂಕಟೇಶ್ವರನ ಭಕ್ತನಾಗಿ ಸಂಪ್ರದಾಯವನ್ನು ಹಿಡಿದಿಟ್ಟುಕೊಳ್ಳುತ್ತೇನೆ ಎಂದು ತನ್ನ ಎಕ್ಸ್ ಖಾತೆಯಲ್ಲಿ ನಟ ಬರೆದುಕೊಂಡಿದ್ದಾರೆ.

    ಅಷ್ಟಕ್ಕೂ ಆಗಿದ್ದೇನು?

    ಸಿನಿಮಾ ಸಮಾರಂಭವೊಂದರಲ್ಲಿ ಕಾರ್ತಿಗೆ ನಿರೂಪಕಿ ಲಡ್ಡು ಕುರಿತು ಮಾತನಾಡಿದರು. ಲಡ್ಡು ಬೇಕಾ ಎಂದು ಜಾಹೀರಾತಿನ ಡೈಲಾಗ್ ಒಂದನ್ನು ತಮಾಷೆಗೆ ಹೇಳಿದರು. ಅದಕ್ಕೆ ಕಾರ್ತಿ, ಲಡ್ಡು ವಿಷಯ ಈಗ ಬೇಡ, ಅದು ಬಹಳ ಸೆನ್ಸಿಟಿವ್ ವಿಷಯ ಆಗಿದೆ, ಲಡ್ಡು ಈಗ ಬೇಡ ಎಂದು ನಗುತ್ತಾ ಹೇಳಿದರು, ಅದಕ್ಕೆ ನಿರೂಪಕಿ, ನಿಮಗಾಗಿ ಮೋತಿಚೂರ್ ಲಡ್ಡು ತರಿಸಿ ಕೊಡುತ್ತೇವೆ ಎನ್ನುತ್ತಾರೆ. ಈಗ ಬೇಡ, ಲಡ್ಡು ಈಗ ಬೇಡ ಎಂದು ನಗುತ್ತಾ ಕಾರ್ತಿ ಹೇಳಿದ್ದರು.

  • ತಿರುಪತಿ ಲಡ್ಡು ವಿವಾದ – ತುಪ್ಪ ಪೂರೈಸುತ್ತಿದ್ದ ಎಆರ್ ಡೈರಿಗೆ ನೋಟಿಸ್

    ತಿರುಪತಿ ಲಡ್ಡು ವಿವಾದ – ತುಪ್ಪ ಪೂರೈಸುತ್ತಿದ್ದ ಎಆರ್ ಡೈರಿಗೆ ನೋಟಿಸ್

    ನವದೆಹಲಿ: ತಿರುಪತಿ ಲಡ್ಡು ವಿವಾದದ (Tirupati Laddoo Row) ವಿಚಾರವಾಗಿ ಕೇಂದ್ರ ಆರೋಗ್ಯ ಸಚಿವಾಲಯವು (Health Ministry) ಲಡ್ಡುಗಳನ್ನು ತಯಾರಿಸಲು ತುಪ್ಪದ ಪೂರೈಕೆ ಮಾಡುತ್ತಿದ್ದ ಎಆರ್ ಡೈರಿಗೆ ಶೋಕಾಸ್ ನೋಟಿಸ್ ನೀಡಿದೆ.

    ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‍ಎಸ್‍ಎಸ್‍ಎಐ) ರವಾನಿಸಿದ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಡೈರಿ ಉತ್ಪನ್ನಗಳನ್ನು ಪರೀಕ್ಷಿಸುವ ಖಾಸಗಿ ಪ್ರಯೋಗಾಲಯ ಒಂದರಲ್ಲಿ ತುಪ್ಪದ ಮಾದರಿ ಪರೀಕ್ಷಿಸಲಾಗಿತ್ತು. ಈ ವೇಳೆ ತಿರುಪತಿ ಲಡ್ಡು ತಯಾರಿಕೆಯಲ್ಲಿ ಬಳಸುವ ತುಪ್ಪದ ಮಾದರಿಗಳಲ್ಲಿ ತಾಳೆ ಎಣ್ಣೆ, ಮೀನಿನ ಎಣ್ಣೆ, ಬೀಫ್ ಟ್ಯಾಲೋ, ಹಂದಿ ಕೊಬ್ಬು ಸೇರಿದೆ ಎಂದು ವರದಿ ನೀಡಿತ್ತು. ಇದನ್ನೂ ಓದಿ: ಮುನಿರತ್ನ ವಿರುದ್ಧದ ಕೇಸ್‌ಗಳು ಅಧಿಕೃತವಾಗಿ ಎಸ್‌ಐಟಿಗೆ ವರ್ಗ

    ವಿವಾದದ ಬೆನ್ನಲ್ಲೇ ಕಲಬೆರಕೆ ತುಪ್ಪವನ್ನು ಸರಬರಾಜು ಮಾಡಿದ ಆರೋಪದ ಮೇಲೆ ದೇವಾಲಯದ ಮಂಡಳಿಯು ಎಆರ್ ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್‍ನ್ನು ಕಪ್ಪು ಪಟ್ಟಿಗೆ ಸೇರಿಸಿದೆ. ಕಂಪನಿಯ ವಿರುದ್ಧ ಕಾನೂನು ಕ್ರಮಗಳನ್ನು ಪ್ರಾರಂಭಿಸಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಜೆ.ಶ್ಯಾಮಲಾ ರಾವ್ ಘೋಷಿಸಿದ್ದರು.

    ತಮಿಳುನಾಡು ಮೂಲದ ಎಆರ್ ಡೈರಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಕಲಬೆರಕೆ ಆರೋಪಗಳನ್ನು ಬಲವಾಗಿ ನಿರಾಕರಿಸಿದೆ. ದೇವಾಲಯಕ್ಕೆ ಪ್ರತಿ ದಿನ 10 ಟನ್ ತುಪ್ಪದ ಅವಶ್ಯಕತೆಯಿದೆ. ನಾವು 0.1% ಅಗತ್ಯವನ್ನು ಪೂರೈಸಿಲ್ಲ ಎಂದು ಹೇಳಿಕೊಂಡಿದೆ.

    ಆಂಧ್ರಪ್ರದೇಶದ ಆಡಳಿತಾರೂಢ ಟಿಡಿಪಿ, ಜಗನ್ ಮೋಹನ್ ರೆಡ್ಡಿ ಆಡಳಿತದ ಅವಧಿಯಲ್ಲಿ ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಿದ ತುಪ್ಪ ಬಳಕೆ ಮಾಡಲಾಗಿದೆ ಎಂದು ಆರೋಪಿಸಿತ್ತು. ಇದನ್ನೂ ಓದಿ: ಬದ್ಲಾಪುರ ಶಾಲೆಯಲ್ಲಿ ದೌರ್ಜನ್ಯ – ಕಾಮುಕನನ್ನು ಗುಂಡಿಕ್ಕಿ ಹತ್ಯೆಗೈದ ಪೊಲೀಸರು

  • ಪ್ರಸಾದದಲ್ಲಿ ಕಲಬೆರಕೆ, ಅಪವಿತ್ರಕ್ಕೆ ಡೋಂಟ್ ಕೇರ್ – ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಕ್ಕೆ ಮುಗಿಬಿದ್ದ ಭಕ್ತರು

    ಪ್ರಸಾದದಲ್ಲಿ ಕಲಬೆರಕೆ, ಅಪವಿತ್ರಕ್ಕೆ ಡೋಂಟ್ ಕೇರ್ – ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಕ್ಕೆ ಮುಗಿಬಿದ್ದ ಭಕ್ತರು

    – ‘ನಂದಿನಿ’ ತುಪ್ಪ ಬಳಕೆ ಬಳಿಕ ಸ್ವಾಧಿಷ್ಟ, ಗುಣಮಟ್ಟ ಕಾಯ್ದುಕೊಂಡ ತಿರುಪತಿ ಲಡ್ಡು
    – ಪರಸ್ಪರರಿಗೆ ಲಡ್ಡು ತಿನ್ನಿಸಿ ಭಕ್ತರ ಸಂಭ್ರಮ

    ಕೋಲಾರ/ಅಮರಾವತಿ: ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ ಗೊಂದಲ, ಅಪವಿತ್ರದ ಸುದ್ದಿಗಳಿಗೆ ತಲೆಕೆಡಿಸಿಕೊಳ್ಳದ ಭಕ್ತರು ಸೋಮವಾರ ತಿರುಪತಿ ತಿಮ್ಮಪ್ಪನ (Tirupati) ದರ್ಶನ ಪಡೆದು ಲಡ್ಡುಗಾಗಿ ಮುಗಿಬಿದ್ದರು.

    ತಿರುಪತಿ ಲಡ್ಡು ಪ್ರಸಾದ (Tirupati Laddu Row) ಅಪವಿತ್ರ ಭಾವನೆಯನ್ನು ಭಕ್ತರಿಂದ ತೊಡೆದುಹಾಕಲು, ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು ಶುದ್ಧೀಕರಣ ಮಾಡಲಾಯಿತು. ಜೊತೆಗೆ ಮಹಾಶಾಂತಿ ಹೋಮ ಕೂಡ ನೆರವೇರಿಸಲಾಯಿತು. ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ಇದನ್ನೂ ಓದಿ: ತಿರುಪತಿ ದೇವಾಲಯ ಪವಿತ್ರೋತ್ಸವ – ಹಾಲು, ಮೊಸರು, ತುಪ್ಪ, ಗೋಮೂತ್ರ, ಸಗಣಿ ಬಳಸಿ ದೇವಸ್ಥಾನ ಶುದ್ಧೀಕರಣ

    ಪ್ರಸಾದದ ವಿಚಾರವಾಗಿ ಸಾಕಷ್ಟು ವಿವಾದ ಎದ್ದಿದ್ದರೂ ಅದ್ಯಾವುದಕ್ಕೂ ಭಕ್ತರು ತಲೆಕೆಡೆಸಿಕೊಳ್ಳದೇ ಅಪಾರ ಸಂಖ್ಯೆಯಲ್ಲಿ ದೇವಾಲಯಕ್ಕೆ ಭೇಟಿ ನೀಡಿದ್ದರು. ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿ-ಭಾವ ಮೆರೆದರು.

    ತಿಮ್ಮಪ್ಪನ ದರ್ಶನ ಬಳಿಕ ಲಡ್ಡು ತೆಗೆದುಕೊಳ್ಳಲು ಭಕ್ತರ ದಂದೇ ಸರತಿ ಸಾಲಿನಲ್ಲಿ ನಿಂತಿತ್ತು. ದರ್ಶನದ ಮಾದರಿಯಲ್ಲೇ ಲಡ್ಡುಗಾಗಿ ಉದ್ದುದ್ದ ಕ್ಯೂ ನಿಂತಿದ್ದರು. ಪ್ರಸಾದ ಕಲಬೆರಕೆ, ಅಪವಿತ್ರದ ಸುದ್ದಿಗಳಿಗೆ ಜನ ಡೋಂಟ್ ಕೇರ್ ಎಂದಿರುವಂತೆ ಕಂಡುಬಂತು. ಎಂದಿನಂತೆ ಲಡ್ಡು ಖರೀದಿ ಭರಾಟೆ ಜೋರಾಗಿತ್ತು. ಇದನ್ನೂ ಓದಿ: ಅಪವಿತ್ರ ಆರೋಪ ನಡುವೆಯೂ ತಿರುಪತಿ ಲಡ್ಡುಗೆ ಬೇಡಿಕೆ – ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಲಡ್ಡು ಮಾರಾಟ

    ಅದರಲ್ಲೂ ಕೆಎಂಎಫ್ ನಂದಿನಿ ತುಪ್ಪ ಬಳಕೆ ಬಳಿಕ ಸ್ವಾಧಿಷ್ಟ, ಗುಣಮಟ್ಟವನ್ನು ಲಡ್ಡು ಕಾಯ್ದುಕೊಂಡಿದೆ. ಲಡ್ಡು ಸ್ವೀಕರಿಸಿ ಭಕ್ತರು ಖುಷಿ ಹಂಚಿಕೊಂಡರು. ಕೆಲವರು ಅಲ್ಲೇ ಪರಸ್ಪರ ಲಡ್ಡು ತಿನ್ನಿಸಿ ಭಕ್ತಿ ಮೆರೆದರು.

  • ತಿರುಪತಿ ದೇವಾಲಯ ಪವಿತ್ರೋತ್ಸವ – ಹಾಲು, ಮೊಸರು, ತುಪ್ಪ, ಗೋಮೂತ್ರ, ಸಗಣಿ ಬಳಸಿ ದೇವಸ್ಥಾನ ಶುದ್ಧೀಕರಣ

    ತಿರುಪತಿ ದೇವಾಲಯ ಪವಿತ್ರೋತ್ಸವ – ಹಾಲು, ಮೊಸರು, ತುಪ್ಪ, ಗೋಮೂತ್ರ, ಸಗಣಿ ಬಳಸಿ ದೇವಸ್ಥಾನ ಶುದ್ಧೀಕರಣ

    – ಅನ್ನ ಪ್ರಸಾದ, ಲಡ್ಡು ತಯಾರಿಕಾ ಸ್ಥಳ, ಗೋದಾಮಿನಲ್ಲಿ ಸಂಪ್ರೋಕ್ಷಣೆ
    – ಶಾಂತಿ, ವಾಸ್ತು ಹೋಮ ನೆರವೇರಿಸಿದ ಅರ್ಚಕರು
    – ದೇವಾಲಯ ಶುದ್ಧೀಕರಣ ಬಳಿಕ ತಿಮ್ಮಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ

    ತಿರುಪತಿ: ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಹಿನ್ನೆಲೆಯಲ್ಲಿ ತಿರುಪತಿ ದೇವಾಲಯ ಶುದ್ಧೀಕರಣ ಕಾರ್ಯ ಸೋಮವಾರ ನಡೆಯಿತು. ತಿರುಮಲದ ದೇವಾಲಯದ ಸುತ್ತ ಅರ್ಚಕರು ಸಂಪ್ರೋಕ್ಷಣೆ ಮಾಡಿದರು. ಹಾಲು, ತುಪ್ಪ, ಮೊಸರು, ಗಂಜಲ, ಸಗಣಿ ಬಳಸಿ ದೇವಾಲಯ ಶುದ್ಧೀಕರಣ ಮಾಡಿದರು.

    ಟಿಟಿಡಿ ಇಓ ಜೆ ಶ್ಯಾಮಲಾ ರಾವ್ ಈ ಬಗ್ಗೆ ಮಾಹಿತಿ ನೀಡಿದರು. ಇಂದಿನಿಂದ ಶ್ರೀನಿವಾಸನ ದೇವಾಲಯದ ಶುದ್ಧೀಕರಣದ ಯಾಗ ನಡೆಯುತ್ತಿದೆ. ಶುದ್ದೀಕರಣ ಸಂದರ್ಭದಲ್ಲಿ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಪವಿತ್ರೋತ್ಸವ ಮುಗಿದ ಬಳಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

    ಬೆಳಗ್ಗೆ 6 ಗಂಟೆಯಿಂದ ದೇವಾಲಯ ಪವಿತ್ರೋತ್ಸವ, ಮಹಾಶಾಂತಿ ಯಾಗ ಆರಂಭವಾಯಿತು. ವಿವಿಧ ಪಂಡಿತರು, ವೇದಶಾಸ್ತ್ರ ವಿದ್ವಾಂಸರು ಶುದ್ಧೀಕರಣದಲ್ಲಿ ಭಾಗಿಯಾಗಿದ್ದರು. ತಿರುಪತಿ ತಿರುಮಲದ ಪ್ರಧಾನ ಅರ್ಚಕರು, ಆಗಮ ಪಂಡಿತರಿಂದ ಪವಿತ್ರೋತ್ಸವ ನೆರವೇರಿತು. ದೇವಾಲಯದ ಸುತ್ತ ಸಂಪ್ರೋಕ್ಷಣೆ ಮಾಡಲಾಯಿತು. ಭಕ್ತರ ಮನಸ್ಸಿನಲ್ಲಿರುವ ಅಪವಿತ್ರತೆ ಹೋಗಲಾಡಿಸಲು ಟಿಟಿಡಿಯಿಂದ ಯಾಗ ನಡೆಯಿತು.

    ದೇವಾಲಯ ಆವರಣದಲ್ಲಿ ವೇದ ಶಾಸ್ತ್ರ ಪಂಡಿತರು, ಆಗಮಿಕರಿಂದ ಮಹಾ ಶಾಂತಿ ಯಾಗ ಜರುಗಿತು. ಯಾಗದಲ್ಲಿ ನೂರಾರು ಆಗಮಿಕರು, ಅರ್ಚಕರು ಭಾಗಿಯಾಗಿದ್ದರು. ಶುದ್ದೀಕರಣ ಬಳಿಕ ಎಂದಿನಂತೆ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ದೇವರ ದರ್ಶನ ಮಾಡಿ ಭಕ್ತರು ಪುನೀತರಾದರು.

    ಮೊದಲಿಗೆ ಶಾಂತಿ ಹೋಮ ನಡೆಯಿತು. ಬಳಿಕ ಅರ್ಚಕರು ವಾಸ್ತು ಹೋಮ ನಡೆಸಿದರು. ಹೋಮ ಬಳಿಕ ತುಪ್ಪ ಬಳಕೆ ಮಾಡಿದ್ದ ಸ್ಥಳದಲ್ಲಿ ಸಂಪ್ರೋಕ್ಷಣೆ ಸಿಂಪಡಣೆ ಮಾಡಲಾಯಿತು. ಅನ್ನ ಪ್ರಸಾದ, ಲಡ್ಡು ತಯಾರಿಕೆ ಸ್ಥಳ, ಗೋದಾಮು ಸೇರಿದಂತೆ ಎಲ್ಲೆಡೆ ಸಂಪ್ರೋಕ್ಷಣೆ ಮಾಡಿದರು.

    ಹೋಮ, ಯಾಗ, ಶುದ್ಧೀಕರಣದಲ್ಲಿ ಭಾಗಿಯಾಗಿದ್ದ ಅರ್ಚಕರ ತಂಡವನ್ನು ಟಿಟಿಡಿ ಬೀಳ್ಕೊಟ್ಟಿತು. ಎರಡು ಆನೆಗಳ ಸಹಿತ ಅರ್ಚಕರನ್ನು ಬೀಳ್ಕೊಡಲಾಯಿತು. ಮಹಾ ಶಕ್ತಿ ಹೋಮದ ಬಳಿಕ ಹೊಸ ಬಟ್ಟೆ, ಆಭರಣಗಳನ್ನ ಅರ್ಚಕರು ತೊಡಿಸಿದರು. ಶಾಸ್ತ್ರೋಕ್ತವಾಗಿ ಅರ್ಚಕರು ಶಾಂತಿ ಹೋಮ ನೆರವೇರಿಸಿದರು. ಅದರಂತೆ ತಿಮ್ಮಪನಿಗೆ ಹೊಸ ಬಟ್ಟೆ, ಆಭರಣ ತೊಡಿಸಲಾಯಿತು. ಬಳಿಕ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

  • ಮಠ, ದೇವಾಲಯಗಳನ್ನ ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಬೇಕು: ಮಂತ್ರಾಲಯ ಶ್ರೀ ಒತ್ತಾಯ

    ಮಠ, ದೇವಾಲಯಗಳನ್ನ ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಬೇಕು: ಮಂತ್ರಾಲಯ ಶ್ರೀ ಒತ್ತಾಯ

    – ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಗೆ ಸ್ವಾಮೀಜಿ ಖಂಡನೆ

    ರಾಯಚೂರು: ಮಠಮಾನ್ಯಗಳು, ದೇವಾಲಯಗಳು, ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನ ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಬೇಕು ಎಂದು ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ (Subhudendra Theertha Swamiji) ಒತ್ತಾಯಿಸಿದ್ದಾರೆ.

    ರಾಯಚೂರಿನಲ್ಲಿ (Raichuru) ರಾಷ್ಟ್ರಧರ್ಮ ಪಾಲನಾ ಸಮಿತಿ ರಚನೆ ವಿಚಾರವಾಗಿ ಮಾತನಾಡಿದ ಮಂತ್ರಾಲಯ ಶ್ರೀಗಳು, ಸ್ವಾತಂತ್ರ್ಯ ಪೂರ್ವದಲ್ಲಿ ಆಯಾ ದೇವಸ್ಥಾನ, ಮಠಗಳ ಆಯಾ ಶಿಷ್ಯರು, ಭಕ್ತರ, ಸಮುದಾಯ ಮುಖಂಡರ ನೇತೃತ್ವದಲ್ಲಿ ನಿರ್ವಹಣೆ, ಕಾರ್ಯಚಟುವಟಿಕೆ ನಡೆಯುತ್ತಿತ್ತು. ಈಗ ಲೌಕಿಕ ಕಾನೂನುಗಳಿಂದ ಇದೆಲ್ಲಾ ಸರ್ಕಾರದ ವಶದಲ್ಲಿ ಹೋಗಿದೆ. ಸರ್ಕಾರದ ರಾಜಕೀಯ ಹಿನ್ನೆಲೆಯಲ್ಲಿ ತಿರುಪತಿ ಲಡ್ಡುವಿನ (Tirupati Laddu Row) ಪ್ರಕರಣದಂತ ತೊಂದರೆಗಳು ಆಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತಿರುಪತಿ ಪ್ರಸಾದದಲ್ಲಿ ಅಪವಿತ್ರ – ಶೃಂಗೇರಿ ಮಹಾಸ್ವಾಮಿಗಳಿಂದ ಉಪವಾಸ, ಮೌನ ವ್ರತ

    ಆಯಾ ಪ್ರಾಂತದ ಮಠ, ದೇವಾಲಯಗಳು ಅಲ್ಲಿನ ಜನರ ನೇತೃತ್ವದಲ್ಲಿ ನಡೆಯಬೇಕು. ಇದಕ್ಕೆ ಸನಾತನ ಧರ್ಮ‌ ಪರಿರಕ್ಷಣ ಸಂಬಂಧ ಯೋಜನೆಯನ್ನ ನಾವು ಕೂಡ ಬೆಂಬಲಿಸುತ್ತೇವೆ. ನಮ್ಮ ಊರಿನ ಆಚಾರ-ಸಂಪ್ರದಾಯ ಬಗ್ಗೆ ಬೇರೆ ಯಾರೋ ಬಂದು ಹೇಳುವುದಲ್ಲಾ. ನಮ್ಮ ಊರಿನ ಹಿರಿಯರು, ಸಮುದಾಯದ ಹಿರಿಯರು, ವಿದ್ವಾಂಸರು, ಮಠಾಧೀಶರ ನೇತೃತ್ವದಲ್ಲಿ ನಡೆಯಬೇಕು ಎಂದಿದ್ದಾರೆ.

    ಮುಜರಾಯಿ ಇಲಾಖೆಯಿಂದ ಮಠ ಮಾನ್ಯಗಳು, ದೇವಾಲಯ, ಧಾರ್ಮಿಕ ಶ್ರದ್ಧಾ ಕೇಂದ್ರಗಳು ಮುಕ್ತವಾಗಬೇಕು ಅಂತಾ ಒತ್ತಾಯಿಸುತ್ತೇವೆ ಎಂದು ಮಂತ್ರಾಲಯ ಶ್ರೀಗಳು ಹೇಳಿದ್ದಾರೆ. ಇದನ್ನೂ ಓದಿ: ಅಪವಿತ್ರ ಆರೋಪ ನಡುವೆಯೂ ತಿರುಪತಿ ಲಡ್ಡುಗೆ ಬೇಡಿಕೆ – ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಲಡ್ಡು ಮಾರಾಟ

  • ತಿರುಪತಿ ಲಡ್ಡು ವಿವಾದ: ತಿಮ್ಮಪ್ಪನ ಕ್ಷಮೆ ಕೋರಿ 11 ದಿನಗಳ ಉಪವಾಸ ಕೈಗೊಂಡ ಪವನ್ ಕಲ್ಯಾಣ್

    ತಿರುಪತಿ ಲಡ್ಡು ವಿವಾದ: ತಿಮ್ಮಪ್ಪನ ಕ್ಷಮೆ ಕೋರಿ 11 ದಿನಗಳ ಉಪವಾಸ ಕೈಗೊಂಡ ಪವನ್ ಕಲ್ಯಾಣ್

    ತಿರುಪತಿ ತಿರುಮಲ ದೇವಸ್ಥಾನದಲ್ಲಿ (ಟಿಟಿಡಿ) ಭಕ್ತರಿಗೆ ಪ್ರಸಾದವಾಗಿ ನೀಡಿದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂಬುದು ದೃಢವಾಗಿರುವುದು ವರದಿಗಳಿಂದ ತಿಳಿದುಬಂದಿದೆ. ಈ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ (Tirupati Tirumala) ಕ್ಷಮೆ ಕೋರಿ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ಇಂದಿನಿಂದ (ಸೆ.22) 11 ದಿನದ ಪ್ರಾಯಶ್ಚಿತ ದೀಕ್ಷೆ ಕೈಗೊಳ್ಳಲಿದ್ದಾರೆ. ಇದನ್ನೂ ಓದಿ:ತೆಲುಗಿನತ್ತ ರವೀನಾ ಟಂಡನ್- ವಿಲನ್ ಆದ ‘ಕೆಜಿಎಫ್ 2’ ನಟಿ

    ತಿರುಪತಿ ಲಡ್ಡು ವಿವಾದದ (Tirupati laddu Controversy) ಬಗ್ಗೆ ಎಕ್ಸ್‌ನಲ್ಲಿ ಪವನ್ ಕಲ್ಯಾಣ್ ಪ್ರತಿಕ್ರಿಯಿಸಿ, ತಿರುಪತಿ ಲಡ್ಡು ಅಂದರೆ ಅಮೃತಕ್ಕೆ ಸಮನಾಗಿ ನೋಡುತ್ತೇವೆ. ತಿರುಮಲ ಲಡ್ಡು ಪ್ರಸಾದ ಅಶುದ್ಧವಾಗಿದೆ. ಈ ಪಾಪವನ್ನು ಆರಂಭದಲ್ಲೇ ಪತ್ತೆ ಹಚ್ಚಲು ಸಾಧ್ಯವಾಗದಿರುವುದು ಹಿಂದೂ ಜನಾಂಗಕ್ಕೆ ಕಳಂಕ. ಲಡ್ಡು ಪ್ರಸಾದದಲ್ಲಿ ಪ್ರಾಣಿ ಕೊಬ್ಬು ಬೆರಸಿರುವುದು ಗೊತ್ತಾದ ಕ್ಷಣವೇ ಬೆಚ್ಚಿಬಿದ್ದೆ. ತಪ್ಪಿತಸ್ಥ ಎಂಬ ಭಾವನೆ, ಜನರ ಹಿತಕ್ಕಾಗಿ ಹೋರಾಟ ನಡೆಸುತ್ತಿರುವ ನನಗೆ ಆರಂಭದಲ್ಲಿ ಇಂತಹ ತೊಂದರೆಗಳು ಗಮನಕ್ಕೆ ಬಾರದಿರುವುದು ನೋವು ತಂದಿದೆ. ಸನಾತನ ಧರ್ಮವನ್ನು ನಂಬಿ ಆಚರಿಸುವ ಎಲ್ಲರೂ ಇದಕ್ಕೆ ತಕ್ಕ ಪ್ರಾಯಶ್ಚಿತ್ತವನ್ನು ಮಾಡಿಕೊಳ್ಳಬೇಕು ಎಂದಿದ್ದಾರೆ.

    ಅದರ ಭಾಗವಾಗಿ ನಾನು ಪ್ರಾಯಶ್ಚಿತ್ತ ದೀಕ್ಷೆಯನ್ನು ಮಾಡುವ ಸಂಕಲ್ಪವನ್ನು ಕೈಗೊಂಡಿದ್ದೇನೆ. 22 ಸೆಪ್ಟೆಂಬರ್ 2024ರಂದು ಅಂದರೆ ಭಾನುವಾರದ ಬೆಳಗ್ಗೆ ಗುಂಟೂರು ಜಿಲ್ಲೆಯ ನಂಬೂರಿನಲ್ಲಿ ಶ್ರೀ ದಶಾವತಾರ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೀಕ್ಷೆಯನ್ನು ಕೈಗೊಳ್ಳುತ್ತಿದ್ದೇನೆ. ಅಂದಿನಿಂದ 11 ದಿನಗಳ ಕಾಲವು ದೀಕ್ಷೆಯನ್ನು ಮಾಡುತ್ತೇನೆ. ಬಳಿಕ ತಿರುಮಲಕ್ಕೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು.

    ಇನ್ನೂ ಲಡ್ಡು ತಯಾರಿಯಲ್ಲಿ ಪ್ರಾಣಿಗಳ ಕೊಬ್ಬು ಬೆರೆಸಿದ ತುಪ್ಪವನ್ನು ಬಳಸಿದರೆಂಬ ವಿಚಾರವು ತಿಳಿದಾಗಿನಿಂದ ಎಲ್ಲರೂ ಕಂಗಾಲಾದರು. ಹಿಂದೂಧರ್ಮವನ್ನು ಅದರ ಸಂಸ್ಕೃತಿಯನ್ನು ಉದ್ದರಿಸಬೇಕಾದ ಕಾಲವಿದು. ನಮ್ಮ ಧರ್ಮವನ್ನು ನಾವು ಕಾಪಾಡಿಕೊಳ್ಳಬೇಕಾದ ಕಾಲವಿದು. ನಮ್ಮ ಧರ್ಮವನ್ನು ನಾವು ಕಾಪಾಡಿಕೊಳ್ಳೋಣ ಎಂದಿದ್ದಾರೆ. ಸನಾತನ ಧರ್ಮದ ಮೇಲೆ ದಾಳಿ ನಡೆಸಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಪವನ್ ಕಲ್ಯಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ತಿರುಪತಿ ಲಡ್ಡು ವಿವಾದ; ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ – ಪೇಜಾವರ ಶ್ರೀ

    ತಿರುಪತಿ ಲಡ್ಡು ವಿವಾದ; ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ – ಪೇಜಾವರ ಶ್ರೀ

    – ಸರ್ಕಾರವೇ ಈ ಕೃತ್ಯ ನಡೆಸಿರುವುದು ಖಂಡನಾರ್ಹ

    ಅಯೋಧ್ಯೆ/ಉಡುಪಿ: ಲಡ್ಡು ಪ್ರಸಾದಕ್ಕೆ ಹಸುವಿನ ತುಪ್ಪದ ಬದಲು ಕಲಬೆರಕೆ ತುಪ್ಪ ಹಾಕಿದ್ದಾರೆ. ಅದನ್ನು ತುಪ್ಪ ಎಂದು ಕರೆಯಲು ಸಾಧ್ಯವಿಲ್ಲ. ಪ್ರಾಣಿಯ ಕೊಬ್ಬಿನ ಮಿಶ್ರಣದಿಂದ ಪ್ರಸಾದ ತಯಾರಿಸಿದ್ದಾರೆ. ಈ ಬೆಳವಣಿಗೆಯಿಂದ ಖೇದವಾಗಿದೆ ಎಂದು ಅಯೋಧ್ಯೆಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ಸ್ವಾಮೀಜಿ (Pejavara Shree) ಹೇಳಿದ್ದಾರೆ.

    ತಿರುಪತಿ ಲಡ್ಡು ವಿವಾದದ (Tirupati Laddu Row) ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸಾದದಲ್ಲಿ ಮೀನಿನ ಎಣ್ಣೆ, ಹಂದಿಯ ಕೊಬ್ಬು, ಹಸುವಿನ ಕೊಬ್ಬು ಬಳಸಿದ್ದಾರೆ. ಇದು ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ. ಇದು ದೇವರಿಗೆ ಬಗೆದಿರುವ ಅಪಚಾರ. ಸರ್ಕಾರವೇ ಈ ಕೃತ್ಯ ನಡೆಸಿರುವುದು ಖಂಡನಾರ್ಹ ಎಂದು ಕಿಡಿಕಾರಿದರು. ಇದನ್ನೂ ಓದಿ: ತಿರುಪತಿ ಲಡ್ಡಿಗೆ ದನದ ಕೊಬ್ಬು ಬೆರಸುವುದು ಘೋರ ಅಪರಾಧ – ಎಂ.ಬಿ ಪಾಟೀಲ್‌ ವಿಷಾದ

     

    ತಿರುಪತಿಯ ಶ್ರೀನಿವಾಸ ದೇವರು, ಗೋವಿನ ರಕ್ಷಣೆಗೆ ಅವತರಿಸಿದವ. ಕ್ಷೇತ್ರದಲ್ಲಿ ಹಸು ಹುತ್ತಕ್ಕೆ ಹಾಲು ಎರೆಯುತ್ತಿತ್ತಂತೆ. ಮಾಲೀಕ ಹಸುವಿನ ಮೂಲಕ ಹುತ್ತವನ್ನು ಹೊಡೆಯಲು ಬಂದನಂತೆ. ಆಗ ಹುತ್ತದಿಂದ ಮೇಲೆ ಬಂದ ಶ್ರೀನಿವಾಸ ಮಾಲೀಕನ ಏಟಿಗೆ ಮೈಯೊಡ್ಡಿದನಂತೆ. ಹಸುವನ್ನು ರಕ್ಷಿಸಿದ ಶ್ರೀನಿವಾಸ ಅನ್ನೋದು ಇತಿಹಾಸ. ಅಂತಹ ಶ್ರೀನಿವಾಸ ದೇವರಿಗೆ ಹಸುವಿನ ಕೊಬ್ಬಿನ ಪ್ರಸಾದ ನೀಡಿದ್ದೀರಿ. ಇದೊಂದು ಬಹುದೊಡ್ಡ ಅಪರಾಧವಾಗಿದೆ. ಹಿಂದೂಗಳ ಧಾರ್ಮಿಕ ಶ್ರದ್ಧೆಯ ಮೇಲಿನ ಹಲ್ಲೆ ಇದಾಗಿದೆ. ಮನೆಗಳಲ್ಲಿ ಕೂಡ ಇಂತಹ ತುಪ್ಪ ಬಳಸುವುದಿಲ್ಲ. ಉಪಯೋಗಕ್ಕೆ ಅನರ್ಹವಾದ ತುಪ್ಪವನ್ನು ದೇವಾಲಯಕ್ಕೆ ಬಳಸಿದ್ದೀರಿ. ಇಂತಹ ತುಪ್ಪ ತಯಾರಿಸುವ ಅಡ್ಡಗಳನ್ನು ಕಂಡುಹಿಡಿದು ತನಿಖೆ ನಡೆಸುವುದು ಸರ್ಕಾರದ ಕರ್ತವ್ಯ ಎಂದರು. ಇದನ್ನೂ ಓದಿ: ಹಿಂದೂಗಳ ಶ್ರದ್ಧೆಗೆ ಭಂಗ, ಜಗನ್ ಮೋಹನ್ ರೆಡ್ಡಿಯನ್ನು ಬಂಧಿಸಬೇಕು: ಈಶ್ವರಪ್ಪ ಆಗ್ರಹ

    ಧಾರ್ಮಿಕ ಶ್ರದ್ಧಾ ಕೇಂದ್ರಗಳು, ಸರ್ಕಾರದ ಹಿಡಿತದಲ್ಲಿ ಇರಬಾರದು. ಶ್ರದ್ಧಾ ಕೇಂದ್ರಗಳು ಹಿಂದೂ ಸಮಾಜದ ಕೈಯಲ್ಲಿರಬೇಕು. ಸರ್ವೋಚ್ಚ ನ್ಯಾಯಾಲಯದ ತೀರ್ಪು ಹೀಗೆ ಹೇಳಿದೆ. ತಡ ಮಾಡದೆ ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ. ಹಿಂದೂಗಳ ಸಂಸ್ಥೆಗೆ ತಿರುಪತಿ ದೇವಾಲಯದ (Tirupati Temple) ಆಡಳಿತ ನೀಡಿ. ಇನ್ನು ಮುಂದೆ ಇಂತಹ ಘಟನೆ ಮರುಕಳಿಸಬಾರದು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಆಡಳಿತ ಯಂತ್ರದ ಮೇಲೆ ಹದ್ದಿನ ಕಣ್ಣು – ಅನಗತ್ಯ ಸಿಬ್ಬಂದಿಗೆ ಗೇಟ್‌ಪಾಸ್‌ ಕೊಡಲು ಸರ್ಕಾರ ಪ್ಲ್ಯಾನ್!‌