Tag: ತಿರುವಂತನಪುರಂ

  • ಟಿಕ್‍ಟಾಕ್ ಖ್ಯಾತಿಯ ಬಾಲ ನಟಿ ದುರ್ಮರಣ

    ಟಿಕ್‍ಟಾಕ್ ಖ್ಯಾತಿಯ ಬಾಲ ನಟಿ ದುರ್ಮರಣ

    ತಿರುವನಂತಪುರಂ: ಮಲಯಾಳಂನ ಬಾಲ ನಟಿ, ಟಿಕ್‍ಟಾಕ್ ವಿಡಿಯೋಗಳ ಮೂಲಕ ಖ್ಯಾತಿ ಪಡೆದಿದ್ದ ಆರುಣಿ ಎಸ್. ಕುರುಪ್(9) ಆರೋಗ್ಯ ಸಮಸ್ಯೆಯಿಂದ ಮೃತಪಟ್ಟಿದ್ದಾಳೆ.

    ಮೃತ ಆರುಣಿ ಅಪರಿಚಿತ ಕಾಯಿಲೆಯಿಂದ ಬಳಲುತ್ತಿದ್ದಳು. ಆ ಕಾಯಿಲೆ ಆಕೆಯ ಮೆದುಳಿನ ಮೇಲೆ ಪರಿಣಾಮ ಬೀರಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ.

    ಕಳೆದ ಕೆಲವು ದಿನಗಳ ಹಿಂದೆ ಆರುಣಿಗೆ ಜ್ವರ ಮತ್ತು ತಲೆನೋವು ಕಾಣಿಸಿಕೊಂಡಿದೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆರುಣಿಯನ್ನು ತಿರುವನಂತಪುರದ ಎಸ್.ಐ.ಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರುಣಿಯ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಸಾನ್ನಪ್ಪಿದ್ದಾಳೆ.

    ಕಳೆದ ವರ್ಷ ಸೌದಿ ಅರೇಬಿಯಾದಲ್ಲಿ ನಡೆದ ಅಪಘಾತದಲ್ಲಿ ಆರುಣಿಯ ತಂದೆ ಮೃತಪಟ್ಟಿದ್ದರು ಎಂದು ವರದಿಯಾಗಿದೆ. ಮೃತ ಆರುಣಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆದರೆ ಅನೇಕ ಟಿಕ್‍ಟಾಕ್ ವಿಡಿಯೋಗಳನ್ನು ಮಾಡಿ ಯೂಟ್ಯೂಬ್‍ನಲ್ಲಿ ಖ್ಯಾತಿ ಪಡೆದಿದ್ದಳು.

    ಆರುಣಿ ಅಪಾರ ಅಭಿಮಾನಿಯ ಬಳಗವನ್ನು ಹೊಂದಿದ್ದು, ಸಾಮಾಜಿಕ ತಾಣಗಳಲ್ಲಿ ಸುಮಾರು 14 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಇದ್ದರು. ಆರುಣಿಯ ಸಾವಿನ ಸುದ್ದಿ ತಿಳಿದ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

    https://www.youtube.com/watch?v=OiSVXu97pNI

  • ತಿರುವನಂತಪುರಂ ಕ್ಷೇತ್ರದಿಂದ ಮೋಹನ್‍ಲಾಲ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ?

    ತಿರುವನಂತಪುರಂ ಕ್ಷೇತ್ರದಿಂದ ಮೋಹನ್‍ಲಾಲ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ?

    ತಿರುವಂತನಪುರಂ: ಇತ್ತೀಚೆಗೆ ಸಿನಿಮಾರಂಗದ ನಾಯಕರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಈಗಾಗಲೇ ಆಂಧ್ರ, ತಮಿಳುನಾಡು ಆಗಿ ಈಗ ಕೇರಳದ ಸರದಿಯಾಗಿದ್ದು, ರಾಜಕೀಯ ರಂಗಕ್ಕೆ ಧುಮುಕಲು ಖ್ಯಾತ ನಟ ಮೋಹನ್ ಲಾಲ್ ಸಜ್ಜಾಗಿದ್ದಾರೆ.

    ಶೀಘ್ರವೇ ಮಲಯಾಳಂ ನಟ ಮೋಹನ್‍ಲಾಲ್ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಿರುವನಂತಪುರಂ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆಯಿದೆ. ಮೋಹನ್ ಲಾಲ್ ಬಿಜೆಪಿ ಸೇರ್ಪಡೆಗೆ ಆರ್‍ಎಸ್‍ಎಸ್‍ನಿಂದ ಭಾರೀ ಕಸರತ್ತು ನಡೆಯುತ್ತಿದ್ದು, ಮೋಹನ್‍ಲಾಲ್ ಮೂಲಕ ಕೇರಳದಲ್ಲಿ ನೆಲೆ ಕಂಡುಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ. ಆದರೆ ರಾಜಕೀಯಕ್ಕೆ ಸೇರ್ಪಡೆಯಾಗುವ ಬಗ್ಗೆ ಮೋಹನ್ ಲಾಲ್ ಇದೂವರೆಗೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

    ಇತ್ತೀಚೆಗೆ ಮೋಹನ್ ಲಾಲ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಮೋಹಲ್ ಲಾಲ್ ಸರಣಿ ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿ ಕೂಡ ಟ್ವಿಟ್ಟರ್ ನಲ್ಲಿ ಮೋಹನ್ ಲಾಲ್ ಭೇಟಿ ಕುರಿತು ಬರೆದುಕೊಂಡಿದ್ದಾರೆ.

    ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿರನ್ನು ಶ್ರೀಕೃಷ್ಣ ಜನ್ಮಾಷ್ಟಮಿ ದಿನದಂದು ಭೇಟಿ ಮಾಡಿದ್ದೇನೆ. ಈ ವೇಳೆ ವಿಶ್ವಶಾಂತಿ ಫೌಂಡೇಶನ್ ಹಾಗೂ ನಮ್ಮ ಬಹುಮುಖಿ ಸಾಮಾಜಿಕ ಕಾರ್ಯಗಳ ಬಗ್ಗೆ ವಿವರಿಸಲಾಗಿದೆ ಎಂದು ಮೋಹನ್ ಲಾಲ್ ಬರೆದುಕೊಂಡಿದ್ದಾರೆ.

    ಮತ್ತೊಂದು ಟ್ವೀಟ್ ನಲ್ಲಿ ಪ್ರಧಾನಿ ಮೋದಿ ಅವರು ಗ್ಲೋಬಲ್ ಮಲಯಳಿ ರೌಂಡ್ ಟೇಬಲ್ ಕಾರ್ಯಕ್ರಮದಲ್ಲಿ ಭಾವಹಿಸಲು ಆಹ್ವಾನ ನೀಡಿದ್ದೇನೆ. ಪ್ರಧಾನಿ ಮೋದಿ ಕೇರಳಕ್ಕೆ ಬೇಕಾದ ಎಲ್ಲಾ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ವೇಳೆ ಮೋದಿ ಭಾರತ ವಿಶ್ವಶಾಂತಿ ಫೌಂಡೇಶನ್ ಅಡಿಯಲ್ಲಿ ಕ್ಯಾನ್ಸರ್ ಕೇರ್ ಸೆಂಟರ್ ಅನ್ನು ಸ್ಥಾಪಿಸುವ ನಮ್ಮ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

    ತಿರುವನಂಪುರ ಕೇಂದ್ರದ ಮಾಜಿ ಮಂತ್ರಿ ಶಶಿ ತರೂರ್ ಅವರ ಕ್ಷೇತ್ರವಾಗಿದ್ದು, 2014ರ ಚುನಾವಣೆಯಲ್ಲಿ 15,470 ಮತಗಳ ಅಂತರದಿಂದ ಜಯಗಳಿಸಿದ್ದರು. ಶಶಿ ತರೂರ್ ಅವರಿಗೆ 2,97,806 ಮತಗಳು ಬಿದ್ದಿದ್ದರೆ, ಬಿಜೆಪಿ ಸಿ. ರಾಜಗೋಪಾಲ್ ಅವರಿಗೆ 2,82,336 ಮತಗಳು ಬಿದ್ದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv