Tag: ತಿರುವಳ್ಳೂರು

  • ಹೋಗಿ ಓದಿಕೋ ಎಂದು ಗದರಿದ ತಂದೆ – 9ರ ಬಾಲಕಿ ನೇಣಿಗೆ ಶರಣು

    ಹೋಗಿ ಓದಿಕೋ ಎಂದು ಗದರಿದ ತಂದೆ – 9ರ ಬಾಲಕಿ ನೇಣಿಗೆ ಶರಣು

    ಚೆನ್ನೈ: ಆಡಿದ್ದು ಸಾಕು, ಹೊಗಿ ಓದಿಕೋ ಎಂದು ತಂದೆ ಗದರಿದ್ದಕ್ಕೆ 9 ವರ್ಷದ ಬಾಲಕಿ (Girl) ನೊಂದು ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ (Tamil Nadu) ವರದಿಯಾಗಿದೆ.

    ತಮಿಳುನಾಡಿದ ತಿರುವಳ್ಳೂರಿನಲ್ಲಿ ಬಾಲಕಿ ತನ್ನ ಮನೆಯಲ್ಲಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸೋಮವಾರ ಬಾಲಕಿ ತನ್ನ ಸಂಬಂಧಿಕರ ಮನೆಯ ಬಳಿ ಆಟವಾಡುತ್ತಿದ್ದುದನ್ನು ನೋಡಿದ ತಂದೆ ಕೃಷ್ಣಮೂರ್ತಿ, ಆಡಿದ್ದು ಸಾಕು, ಹೋಗಿ ಓದಿಕೋ ಎಂದು ಮಗಳಿಗೆ ಗದರಿದ್ದಾರೆ. ಬಳಿಕ ಮನೆಯ ಬೀಗವನ್ನು ಮಗಳ ಕೈಯಲ್ಲಿ ನೀಡಿ ಅಲ್ಲಿಂದ ಹೊರಟು ಹೋಗಿದ್ದಾರೆ.

     

    ಬೈಕ್‌ಗೆ ಇಂಧನ ತುಂಬಲು ತೆರಳಿದ್ದ ಕೃಷ್ಣಮೂರ್ತಿ ರಾತ್ರಿ 8:15ರ ವೇಳೆಗೆ ಮನೆಗೆ ವಾಪಸಾಗಿದ್ದಾರೆ. ಆದರೆ ಮನೆ ಒಳಗಿಂದ ಬೀಗ ಹಾಕಲಾಗಿದ್ದು, ಮಗಳನ್ನು ಎಷ್ಟೇ ಕರೆದರೂ ಆಕೆ ಪ್ರತಿಕ್ರಿಯಿಸಿರಲಿಲ್ಲ. ಬಳಿಕ ಗಾಬರಿಗೊಂಡ ಕೃಷ್ಣಮೂರ್ತಿ ಮನೆಯ ಕಿಟಕಿಯನ್ನು ಒಡೆದು ಒಳಗೆ ಹೋಗಿದ್ದಾರೆ. ಇದನ್ನೂ ಓದಿ: ಕಳ್ಳನೆಂದು ಶಂಕಿಸಿ ಹತ್ಯೆ- ಇಬ್ಬರ ಬಂಧನ

    ಈ ವೇಳೆ ಬಾಲಕಿ ನೇಣಿಗೆ ಕೊರಳೊಡ್ಡಿರುವ ಆಘಾತಕಾರಿ ದೃಶ್ಯ ತಂದೆಯ ಕಣ್ಣಿಗೆ ಬಿದ್ದಿದೆ. ಬಾಲಕಿ ಹತ್ತಿಯ ಟವೆಲ್‌ನಲ್ಲಿ ನೇತಾಡುತ್ತಿದ್ದು, ಉಸಿರಾಡಲು ಕಷ್ಟಪಡುತ್ತಿದ್ದಳು ಎನ್ನಲಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಕೆ ಅಲ್ಲಿ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ರಾಮ ಮಂದಿರದ ಹೊರಗೆ ಗಲಾಟೆ- ಉದ್ರಿಕ್ತರಿಂದ ಪೊಲೀಸ್ ವಾಹನಕ್ಕೆ ಬೆಂಕಿ

    ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬಾಲಕಿ ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯವಾಗಿದ್ದು, ವೀಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದಳು ಎನ್ನಲಾಗಿದೆ. ಆಕೆಯನ್ನು ನೆರೆಹೊರೆಯವರು ಇನ್‌ಸ್ಟಾ ಕ್ವೀನ್ ಎಂದು ಕರೆಯುತ್ತಿದ್ದರು ಎಂಬುದು ತಿಳಿದುಬಂದಿದೆ.

    
    
  • ತಮಿಳುನಾಡಿನ ಹಾಸ್ಟೆಲ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ

    ತಮಿಳುನಾಡಿನ ಹಾಸ್ಟೆಲ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ

    ಚೆನ್ನೈ: ತಮಿಳುನಾಡಿನ ಚಿನ್ನಸೇಲಂನ ಕಣಿಯೂರು ಪ್ರದೇಶದ ಖಾಸಗಿ ವಸತಿ ಶಾಲೆಯಲ್ಲಿ 2 ವಾರಗಳ ಹಿಂದೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಆತ್ಮಹತ್ಯೆಯಿಂದಾಗಿ ಶಾಲೆಯ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದವು. ಆ ಘಟನೆ ಮಾಸುವುದಕ್ಕೂ ಮೊದಲೇ ಇನ್ನೊಂದು ವಿದ್ಯಾರ್ಥಿನಿ ಸೋಮವಾರ ವಸತಿ ಶಾಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

    ತಮಿಳುನಾಡಿನ ತಿರುವಳ್ಳೂರು ಜಿಲ್ಲೆ, ಕಿಲಚೇರಿ ಬಳಿಯ ಸರ್ಕಾರಿ ಅನುದಾನಿತ ಬಾಲಕಿಯರ ಹೈಯರ್ ಸೆಕೆಂಡರಿ ಶಾಲೆಯ ಹಾಸ್ಟೆಲ್‌ನಲ್ಲಿ ಇಂದು ಬೆಳಗ್ಗೆ 12ನೇ ತರಗತಿಯ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಇದನ್ನೂ ಓದಿ: ನಾಲ್ವರು ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಅಮಾನತು

    Crime-Scene

    ಇಂದು ಬೆಳಗ್ಗೆ ಶಾಲೆಯಿಂದ ಹಾಸ್ಟೆಲ್‌ಗೆ ಮರಳಿದ್ದ ವಿದ್ಯಾರ್ಥಿನಿ ಮತ್ತೆ ಶಾಲೆಗೆ ಹೋಗದೇ ಇರುವ ಬಗ್ಗೆ ಶಾಲೆಯ ಶಿಕ್ಷಕರು ಹಾಸ್ಟೆಲ್ ವಾರ್ಡನ್ ಬಳಿ ತಿಳಿಸಿದ್ದಾರೆ. ಬಳಿಕ ಹಾಸ್ಟೆಲ್ ಸಿಬ್ಬಂದಿ ಆಕೆಯ ಕೊಠಡಿ ತೆರೆದು ನೋಡಿದಾಗ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಆಲಮಟ್ಟಿ ಡ್ಯಾಂ ಆವರಣಕ್ಕೆ ನುಗ್ಗಿದ ಬುರ್ಖಾಧಾರಿ – ಅವಳಲ್ಲ ಅವನು

    ಘಟನೆ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ, ವಿದ್ಯಾರ್ಥಿನಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ಹಾಗೂ ಸಂಬಂಧಿಕರು ಶಾಲೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಘಟನೆ ನಡೆದ ಪ್ರದೇಶದಲ್ಲಿ ಹಿಂಸಾಚಾರ ನಡೆಯದಂತೆ ಪೊಲೀಸರು ಎಚ್ಚರ ವಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]