Tag: ತೀರ್ಪು

  • ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ- ಯುವಕನಿಗೆ 20 ವರ್ಷ ಜೈಲು, 1 ಲಕ್ಷದ 10 ಸಾವಿರ ರೂ. ದಂಡ

    ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ- ಯುವಕನಿಗೆ 20 ವರ್ಷ ಜೈಲು, 1 ಲಕ್ಷದ 10 ಸಾವಿರ ರೂ. ದಂಡ

    ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ (Sexual Assault) ಎಸಗಿದ್ದ ಯುವಕನಿಗೆ ಶಿವಮೊಗ್ಗ (Shivamogga) ಜಿಲ್ಲಾ ನ್ಯಾಯಾಲಯವು (District Court) 20 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷದ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

    2020ರಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ (Bhadravathi) ತಾಲೂಕಿನ 21 ವರ್ಷದ ಯುವಕನೋರ್ವ 17 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಬಗ್ಗೆ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಇದನ್ನೂ ಓದಿ: ಕೊಲೆ ಪಾತಕಿಗೆ ಜೀವಾವಧಿ ಶಿಕ್ಷೆ – 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯ

    ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆಯೊಂದಿಗೆ 1 ಲಕ್ಷದ 10 ಸಾವಿರ ರೂ. ದಂಡ (Penalty) ವಿಧಿಸಿ ನ್ಯಾಯಾಲಯ ತೀರ್ಪು (Judgement) ನೀಡಿದೆ. ಇದನ್ನೂ ಓದಿ: 10 ಜನ ದಲಿತರ ಹತ್ಯೆಗೈದಿದ್ದ ಅಪರಾಧಿಗೆ 42 ವರ್ಷಗಳ ಬಳಿಕ ಶಿಕ್ಷೆ ಕೊಟ್ಟ ಕೋರ್ಟ್

  • ನಟಿ ಜಿಯಾ ಖಾನ್ ಆತ್ಮಹತ್ಯೆ ಪ್ರಕರಣ: ಸತ್ಯಕ್ಕೆ ಜಯ ಎಂದ ಸೂರಜ್ ಪಂಚೋಲಿ

    ನಟಿ ಜಿಯಾ ಖಾನ್ ಆತ್ಮಹತ್ಯೆ ಪ್ರಕರಣ: ಸತ್ಯಕ್ಕೆ ಜಯ ಎಂದ ಸೂರಜ್ ಪಂಚೋಲಿ

    ಬಾಲಿವುಡ್ ನಟಿ ಜಿಯಾ ಖಾನ್ (Jiah Khan) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ತೀರ್ಪು ಬಂದಿದ್ದು, ಈ ಪ್ರಕರಣದಿಂದ ಜಿಯಾ ಬಾಯ್ ಫ್ರೆಂಡ್ ಸೂರಜ್ ಪಂಚೋಲಿಗೆ (Suraj Pancholi) ದೊಡ್ಡ ರಿಲೀಫ್ ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸೂರಜ್ ಪಂಚೋಲಿಯನ್ನು ನಿರ್ದೋಷಿ ಎಂದು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಸೂರಜ್, ‘ಸತ್ಯಕ್ಕೆ ಜಯ’ ಎಂದಿದ್ದಾರೆ. ಆದರೆ, ಈ ತೀರ್ಪಿನ ವಿರುದ್ಧ ಮತ್ತೆ ಕೋರ್ಟ್ ಮೆಟ್ಟಿಲು ಏರುವುದಾಗಿ ಜಿಯಾ ಖಾನ್ ತಾಯಿ ರಬಿಯಾ ತಿಳಿಸಿದ್ದಾರೆ.

    ಏನಿದು ಜಿಯಾ ಖಾನ್ ಸಾವಿನ ಪ್ರಕರಣ?

    ಬಾಲಿವುಡ್ ನಟಿ ಜಿಯಾ ಖಾನ್ ಸಾವಿನ ಪ್ರಕರಣ ಬಾಲಿವುಡ್ ಸಿನಿಮಾ ರಂಗದಲ್ಲಿ ಭಾರೀ ಆಘಾತ ಮೂಡಿಸಿತ್ತು. ಚಿತ್ರರಂಗದಲ್ಲಿ ಆಗ ತಾನೆ ಮಿಂಚುತ್ತಿದ್ದ ಜಿಯಾ ಏಕಾಏಕಿ 2013ರ ಜೂನ್ 3ರಂದು ಮುಂಬೈನ ಜುಹೂ ಅಪಾರ್ಟ್‍ ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿತ್ತು. ಈ ಸಾವಿಗೆ ಅವರ ಬಾಯ್ ಫ್ರೆಂಡ್ ಸೂರಜ್ ಪಾಂಚೋಲಿ ಕಾರಣ ಎಂದು ಹೇಳಲಾಗಿತ್ತು.

    ಜಿಯಾ ಖಾನ್ ಬರೆದ ಡೆತ್ ನೋಟ್ ಆಧರಿಸಿ ಪ್ರಿಯಕರ ಸೂರಜ್ ಪಾಂಚೋಲಿ ಮೇಲೆ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲಾಗಿತ್ತು. ಆನಂತರ ಜುಲೈನಲ್ಲಿ ಸೂರಜ್ ಜಾಮೀನು ಪಡೆದರು. ಜಿಯಾ ಖಾನ್ ಅವರ ತಾಯಿ ರಬಿಯಾ ನಂತರ ವಿಶೇಷ ಮನವಿ ಸಲ್ಲಿಸಿದ ಮೇರೆಗೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು. ಇದನ್ನೂ ಓದಿ:ಸಂಪತ್ ಪತ್ನಿ 5 ತಿಂಗಳ ಗರ್ಭಿಣಿ- ಸಹನಟನ ನೆನೆದು ಕಣ್ಣೀರಿಟ್ಟ ವೈಷ್ಣವಿ

    ಜಿಯಾ ಖಾನ್ ತಾಯಿ ರಬಿಯಾ ತಮ್ಮ ವಿರುದ್ಧ ಮಾನಹಾನಿ ಮಾಡುವಂತಹ ಕೆಲಸಗಳಿಗೆ ಕೈ ಹಾಕಿದ್ದಾರೆ ಎಂದು ಸೂರಜ್ ಪಾಂಚೋಲಿ, ಜಿಯಾ ತಾಯಿಯ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ ಕೂಡ ದಾಖಲಿಸಿದ್ದರು. ರಬಿಯಾ ನೀಡಿದ ದೂರಿನ ಮೇಲೆ ಸಿಬಿಐ ಅಧಿಕಾರಿಗಳು ಸೂರಜ್ ಮನೆಯ ಮೇಲೆ ದಾಳಿ ಮಾಡಿದರು. ನಂತರ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಲ್ಲಿ ಮತ್ತೆ ಸಪ್ಲಿಮೆಂಟರಿ ಚಾರ್ಜ್ ಶೀಟ್ ದಾಖಲಿಸಿದ್ದರು.

    ತನ್ನ ಮಗಳಿಗೆ ನ್ಯಾಯ ಸಿಗಬೇಕು ಎಂದು ಹಲವಾರು ಪ್ರಯತ್ನಗಳನ್ನು ಮಾಡಿದ್ದರು ರುಬಿಯಾ. ವಿಶೇಷ ತನಿಖಾ ದಳ ರಚಿಸುವಂತೆ ಕೋರ್ಟಿಗೆ ಮೊರೆ ಹೋದರು. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದರು. ಕೇಸ್ ವಿಚಾರಣೆ ಬೇಗ ಮುಗಿಸುವಂತೆ ಮುಂಬೈ ಕೋರ್ಟಿಗೂ ಮನವಿ ಮಾಡಿಕೊಂಡಿದ್ದರು.

    ಸೂರಜ್ ಪಾಂಚೋಲಿ ಕೂಡ ಈ ಪ್ರಕರಣದಲ್ಲಿ ಅಷ್ಟೇ ಹೋರಾಟ ಮಾಡಿದ್ದರು. ಆ ಸಾವಿಗೂ ನನಗೂ ಸಂಬಂಧವಿಲ್ಲ ಎಂದು ವಾದಿಸುತ್ತಲೇ ಬಂದರು. ಸುದೀರ್ಘ ಹತ್ತು ವರ್ಷಗಳ ನಂತರ 2023 ಏಪ್ರಿಲ್ 20 ರಂದು ಅಂತಿವ ವಾದ- ಪ್ರತಿವಾದ ಆಲಿಸಿದ್ದ ವಿಶೇಷ ನ್ಯಾಯಮೂರ್ತಿಗಳಾದ ಎ.ಎಸ್. ಸಯ್ಯದ್ ಅವರು ತೀರ್ಪು ಕಾಯ್ದಿರಿಸಿದ್ದರು. ಇಂದು ತೀರ್ಪು ಪ್ರಕಟವಾಗಿದೆ. ಸೂರಜ್ ಪಾಂಚೋಲಿ ಪರವಾಗಿ ಮಾನ್ಯ ನ್ಯಾಯಾಲಯ ತೀರ್ಪು ನೀಡಿದೆ.

  • ನಟಿ ಜಿಯಾ ಖಾನ್ ಆಗಿದ್ದು ಕೊಲೆ: ಹೈಕೋರ್ಟ್ ಮೆಟ್ಟಿಲು ಏರುವೆ ಎಂದ ಜಿಯಾ ತಾಯಿ

    ನಟಿ ಜಿಯಾ ಖಾನ್ ಆಗಿದ್ದು ಕೊಲೆ: ಹೈಕೋರ್ಟ್ ಮೆಟ್ಟಿಲು ಏರುವೆ ಎಂದ ಜಿಯಾ ತಾಯಿ

    ಬಾಲಿವುಡ್ ನಟಿ ಜಿಯಾ ಖಾನ್ (Zia Khan) ಆತ್ಮಹತ್ಯೆಯ ಕುರಿತಂತೆ ಹತ್ತು ವರ್ಷಗಳ ನಂತರ ಇಂದು ಸಿಬಿಐ ವಿಶೇಷ ಕೋರ್ಟ್ ತೀರ್ಪು (Judgment) ಪ್ರಕಟಿಸಿದೆ. ಪ್ರಮುಖ ಆರೋಪಿ ಹಾಗೂ ಜಿಯಾ ಗೆಳೆಯ ಸೂರಜ್ ಪಂಚೋಲಿ (Suraj Pancholi) ಯನ್ನು ನಿರ್ದೋಷಿ ಎಂದು ತೀರ್ಪು ನೀಡಿದೆ. ಈ ತೀರ್ಪಿನ ವಿರುದ್ಧ ಹೈಕೋರ್ಟ್ (High Court) ಮೆಟ್ಟಿಲು ಏರುವುದಾಗಿ ಜಿಯಾ ತಾಯಿ ರಬಿಯಾ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮಗು ಹೇಗೆ ಸತ್ತಿತು ಎನ್ನುವುದರ ಸತ್ಯ ನನಗೆ ಗೊತ್ತಾಗಬೇಕು. ಇದೊಂದು ಕೊಲೆ ಎಂದು ಮತ್ತೆ ರಬಿಯಾ (Rabia)  ನುಡಿದಿದ್ದಾರೆ.

    ಏನಿದು ಜಿಯಾ ಖಾನ್ ಸಾವಿನ ಪ್ರಕರಣ?

    ಬಾಲಿವುಡ್ ನಟಿ ಜಿಯಾ ಖಾನ್ ಸಾವಿನ ಪ್ರಕರಣ ಬಾಲಿವುಡ್ ಸಿನಿಮಾ ರಂಗದಲ್ಲಿ ಭಾರೀ ಆಘಾತ ಮೂಡಿಸಿತ್ತು. ಚಿತ್ರರಂಗದಲ್ಲಿ ಆಗ ತಾನೆ ಮಿಂಚುತ್ತಿದ್ದ ಜಿಯಾ ಏಕಾಏಕಿ 2013ರ ಜೂನ್ 3ರಂದು ಮುಂಬೈನ ಜುಹೂ ಅಪಾರ್ಟ್‍ ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿತ್ತು. ಈ ಸಾವಿಗೆ ಅವರ ಬಾಯ್ ಫ್ರೆಂಡ್ ಸೂರಜ್ ಪಾಂಚೋಲಿ ಕಾರಣ ಎಂದು ಹೇಳಲಾಗಿತ್ತು.

    ಜಿಯಾ ಖಾನ್ ಬರೆದ ಡೆತ್ ನೋಟ್ ಆಧರಿಸಿ ಪ್ರಿಯಕರ ಸೂರಜ್ ಪಾಂಚೋಲಿ ಮೇಲೆ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲಾಗಿತ್ತು. ಆನಂತರ ಜುಲೈನಲ್ಲಿ ಸೂರಜ್ ಜಾಮೀನು ಪಡೆದರು. ಜಿಯಾ ಖಾನ್ ಅವರ ತಾಯಿ ರಬಿಯಾ ನಂತರ ವಿಶೇಷ ಮನವಿ ಸಲ್ಲಿಸಿದ ಮೇರೆಗೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು.

    ಜಿಯಾ ಖಾನ್ ತಾಯಿ ರಬಿಯಾ ತಮ್ಮ ವಿರುದ್ಧ ಮಾನಹಾನಿ ಮಾಡುವಂತಹ ಕೆಲಸಗಳಿಗೆ ಕೈ ಹಾಕಿದ್ದಾರೆ ಎಂದು ಸೂರಜ್ ಪಾಂಚೋಲಿ, ಜಿಯಾ ತಾಯಿಯ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ ಕೂಡ ದಾಖಲಿಸಿದ್ದರು. ರಬಿಯಾ ನೀಡಿದ ದೂರಿನ ಮೇಲೆ ಸಿಬಿಐ ಅಧಿಕಾರಿಗಳು ಸೂರಜ್ ಮನೆಯ ಮೇಲೆ ದಾಳಿ ಮಾಡಿದರು. ನಂತರ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಲ್ಲಿ ಮತ್ತೆ ಸಪ್ಲಿಮೆಂಟರಿ ಚಾರ್ಜ್ ಶೀಟ್ ದಾಖಲಿಸಿದ್ದರು.

    ತನ್ನ ಮಗಳಿಗೆ ನ್ಯಾಯ ಸಿಗಬೇಕು ಎಂದು ಹಲವಾರು ಪ್ರಯತ್ನಗಳನ್ನು ಮಾಡಿದ್ದರು ರುಬಿಯಾ. ವಿಶೇಷ ತನಿಖಾ ದಳ ರಚಿಸುವಂತೆ ಕೋರ್ಟಿಗೆ ಮೊರೆ ಹೋದರು. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದರು. ಕೇಸ್ ವಿಚಾರಣೆ ಬೇಗ ಮುಗಿಸುವಂತೆ ಮುಂಬೈ ಕೋರ್ಟಿಗೂ ಮನವಿ ಮಾಡಿಕೊಂಡಿದ್ದರು.

    ಸೂರಜ್ ಪಾಂಚೋಲಿ ಕೂಡ ಈ ಪ್ರಕರಣದಲ್ಲಿ ಅಷ್ಟೇ ಹೋರಾಟ ಮಾಡಿದ್ದರು. ಆ ಸಾವಿಗೂ ನನಗೂ ಸಂಬಂಧವಿಲ್ಲ ಎಂದು ವಾದಿಸುತ್ತಲೇ ಬಂದರು. ಸುದೀರ್ಘ ಹತ್ತು ವರ್ಷಗಳ ನಂತರ 2023 ಏಪ್ರಿಲ್ 20 ರಂದು ಅಂತಿವ ವಾದ- ಪ್ರತಿವಾದ ಆಲಿಸಿದ್ದ ವಿಶೇಷ ನ್ಯಾಯಮೂರ್ತಿಗಳಾದ ಎ.ಎಸ್. ಸಯ್ಯದ್ ಅವರು ತೀರ್ಪು ಕಾಯ್ದಿರಿಸಿದ್ದರು. ಇಂದು ತೀರ್ಪು ಪ್ರಕಟವಾಗಿದೆ. ಸೂರಜ್ ಪಾಂಚೋಲಿ ಪರವಾಗಿ ಮಾನ್ಯ ನ್ಯಾಯಾಲಯ ತೀರ್ಪು ನೀಡಿದೆ.

  • Breaking -ನಟಿ ಜಿಯಾ ಖಾನ್ ಸಾವಿನ ಪ್ರಕರಣ : ಸ್ನೇಹಿತ ಸೂರಜ್ ಪಾಂಚೋಲಿ ನಿರಪರಾಧಿ

    Breaking -ನಟಿ ಜಿಯಾ ಖಾನ್ ಸಾವಿನ ಪ್ರಕರಣ : ಸ್ನೇಹಿತ ಸೂರಜ್ ಪಾಂಚೋಲಿ ನಿರಪರಾಧಿ

    ತತ ಹತ್ತು ವರ್ಷಗಳಿಂದ ನಡೆಯುತ್ತಿದ್ದ ಬಾಲಿವುಡ್ ನಟಿ ಜಿಯಾ ಖಾನ್ (Zia Khan) ಸಾವಿನ ಪ್ರಕರಣದ ಮಹತ್ವದ ತೀರ್ಪು ಇಂದು ಪ್ರಕಟವಾಗಿದೆ. ಜಿಯಾ ಮತ್ತು ಸೂರಜ್ (Suraj Pancholi) ರಿಲೇಶನ್ ಶಿಪ್ ನಲ್ಲಿ ಇರುವಾಗ ನಟಿ ಜಿಯಾ ಖಾನ್ ಆತ್ಮಹತ್ಯೆಗೆ (Suicide) ಶರಣಾಗಿದ್ದರು. ಈ ಸಾವಿಗೆ ಸೂರಜ್ ಕಾರಣವೆಂದು ಜಿಯಾ ಮನೆಯವರು ಆರೋಪಿಸಿದ್ದರು. ಸಿಕ್ಕಿರುವ ಡೆತ್ ನೋಟ್ ಆಧರಿಸಿದ ಸೂರಜ್ ಮೇಲೆ ಪ್ರಕರಣ ದಾಖಲಾಗಿತ್ತು. ಇದೀಗ ಸೂರಜ್ ನಿರಪರಾಧಿ ಎಂದು ಕೋರ್ಟ್ ತೀರ್ಪು (Verdict) ನೀಡಿದೆ.

    ಏನಿದು ಜಿಯಾ ಖಾನ್ ಸಾವಿನ ಪ್ರಕರಣ?

    ಬಾಲಿವುಡ್ ನಟಿ ಜಿಯಾ ಖಾನ್ ಸಾವಿನ ಪ್ರಕರಣ ಬಾಲಿವುಡ್ ಸಿನಿಮಾ ರಂಗದಲ್ಲಿ ಭಾರೀ ಆಘಾತ ಮೂಡಿಸಿತ್ತು. ಚಿತ್ರರಂಗದಲ್ಲಿ ಆಗ ತಾನೆ ಮಿಂಚುತ್ತಿದ್ದ ಜಿಯಾ ಏಕಾಏಕಿ 2013ರ ಜೂನ್ 3ರಂದು ಮುಂಬೈನ ಜುಹೂ ಅಪಾರ್ಟ್‍ ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿತ್ತು. ಈ ಸಾವಿಗೆ ಅವರ ಬಾಯ್ ಫ್ರೆಂಡ್ ಸೂರಜ್ ಪಾಂಚೋಲಿ ಕಾರಣ ಎಂದು ಹೇಳಲಾಗಿತ್ತು.

    ಜಿಯಾ ಖಾನ್ ಬರೆದ ಡೆತ್ ನೋಟ್ ಆಧರಿಸಿ ಪ್ರಿಯಕರ ಸೂರಜ್ ಪಾಂಚೋಲಿ ಮೇಲೆ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲಾಗಿತ್ತು. ಆನಂತರ ಜುಲೈನಲ್ಲಿ ಸೂರಜ್ ಜಾಮೀನು ಪಡೆದರು. ಜಿಯಾ ಖಾನ್ ಅವರ ತಾಯಿ ರಬಿಯಾ ನಂತರ ವಿಶೇಷ ಮನವಿ ಸಲ್ಲಿಸಿದ ಮೇರೆಗೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು.

    ಜಿಯಾ ಖಾನ್ ತಾಯಿ ರಬಿಯಾ (Rabia) ತಮ್ಮ ವಿರುದ್ಧ ಮಾನಹಾನಿ ಮಾಡುವಂತಹ ಕೆಲಸಗಳಿಗೆ ಕೈ ಹಾಕಿದ್ದಾರೆ ಎಂದು ಸೂರಜ್ ಪಾಂಚೋಲಿ, ಜಿಯಾ ತಾಯಿಯ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ ಕೂಡ ದಾಖಲಿಸಿದ್ದರು. ರಬಿಯಾ ನೀಡಿದ ದೂರಿನ ಮೇಲೆ ಸಿಬಿಐ ಅಧಿಕಾರಿಗಳು ಸೂರಜ್ ಮನೆಯ ಮೇಲೆ ದಾಳಿ ಮಾಡಿದರು. ನಂತರ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಲ್ಲಿ ಮತ್ತೆ ಸಪ್ಲಿಮೆಂಟರಿ ಚಾರ್ಜ್ ಶೀಟ್ ದಾಖಲಿಸಿದ್ದರು.

    ತನ್ನ ಮಗಳಿಗೆ ನ್ಯಾಯ ಸಿಗಬೇಕು ಎಂದು ಹಲವಾರು ಪ್ರಯತ್ನಗಳನ್ನು ಮಾಡಿದ್ದರು ರುಬಿಯಾ. ವಿಶೇಷ ತನಿಖಾ ದಳ ರಚಿಸುವಂತೆ ಕೋರ್ಟಿಗೆ ಮೊರೆ ಹೋದರು. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದರು. ಕೇಸ್ ವಿಚಾರಣೆ ಬೇಗ ಮುಗಿಸುವಂತೆ ಮುಂಬೈ ಕೋರ್ಟಿಗೂ ಮನವಿ ಮಾಡಿಕೊಂಡಿದ್ದರು.

    ಸೂರಜ್ ಪಾಂಚೋಲಿ ಕೂಡ ಈ ಪ್ರಕರಣದಲ್ಲಿ ಅಷ್ಟೇ ಹೋರಾಟ ಮಾಡಿದ್ದರು. ಆ ಸಾವಿಗೂ ನನಗೂ ಸಂಬಂಧವಿಲ್ಲ ಎಂದು ವಾದಿಸುತ್ತಲೇ ಬಂದರು. ಸುದೀರ್ಘ ಹತ್ತು ವರ್ಷಗಳ ನಂತರ 2023 ಏಪ್ರಿಲ್ 20 ರಂದು ಅಂತಿವ ವಾದ- ಪ್ರತಿವಾದ ಆಲಿಸಿದ್ದ ವಿಶೇಷ ನ್ಯಾಯಮೂರ್ತಿಗಳಾದ ಎ.ಎಸ್. ಸಯ್ಯದ್ ಅವರು ತೀರ್ಪು ಕಾಯ್ದಿರಿಸಿದ್ದರು. ಇಂದು ತೀರ್ಪು ಪ್ರಕಟವಾಗಿದೆ. ಸೂರಜ್ ಪಾಂಚೋಲಿ ಪರವಾಗಿ ಮಾನ್ಯ ನ್ಯಾಯಾಲಯ ತೀರ್ಪು ನೀಡಿದೆ.

  • ಅತ್ಯಾಚಾರ, 10 ವರ್ಷ ಜೈಲು – ಕೋರ್ಟ್‍ನಿಂದ ನಗುತ್ತಾ ಹೊರಬಂದ ಕಾಮುಕ

    ಅತ್ಯಾಚಾರ, 10 ವರ್ಷ ಜೈಲು – ಕೋರ್ಟ್‍ನಿಂದ ನಗುತ್ತಾ ಹೊರಬಂದ ಕಾಮುಕ

    ಲಕ್ನೋ: ಮಹಿಳೆ ಮೇಲೆ ಅತ್ಯಾಚಾರ ಹಾಗೂ ಬೆದರಿಕೆ ಹಾಕಿದ್ದಕ್ಕಾಗಿ ಮುಸ್ಲಿಂ ಧರ್ಮಗುರುವಿಗೆ 10 ವರ್ಷಗಳ ಜೈಲು (Jail) ಶಿಕ್ಷೆ ಹಾಗೂ 10,000 ರೂ. ದಂಡವನ್ನು ವಿಧಿಸಲಾಗಿದೆ. ಆದರೆ ತೀರ್ಪು ಪ್ರಕಟವಾಗುತ್ತಿದ್ದಂತೆ ಮುಸ್ಲಿಂ ಧರ್ಮಗುರು (Muslim Cleric) ಮುಗಳ್ನಗುತ್ತಾ ನ್ಯಾಯಾಲಯದಿಂದ ಹೊರಬಂದಿದ್ದಾನೆ.

    ನ್ಯಾಯಮೂರ್ತಿ ನೀರಜ್ ಶ್ರೀವಾಸ್ತವ ಈ ಆದೇಶವನ್ನು ಪ್ರಕಟಿಸಿದರು. ಉತ್ತರ ಪ್ರದೇಶದ ವಾರಣಾಸಿಯಲ್ಲಿ (Varanasi) ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಬೆದರಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಟವಾ ಮೂಲದ ಮುಸ್ಲಿಂ ಧರ್ಮಗುರು ಮೌಲಾನಾಗೆ ಶಿಕ್ಷೆ ವಿಧಿಸಲಾಗಿದೆ.

    2016ರಲ್ಲಿ ವಾರಣಾಸಿಯ ಮಹಿಳೆಯೊಬ್ಬರು ವಿವಾಹದ ನೆಪದಲ್ಲಿ ಧರ್ಮಗುರು ತನ್ನ ಮೇಲೆ ಅತ್ಯಾಚಾರವೆಸಗಿದ್ದು, ನಂತರ ಬ್ಲ್ಯಾಕ್ ಮೇಲ್ ಮಾಡಿದ್ದಾನೆ ಎಂದು ಆರೋಪಿಸಿದ್ದರು. ಮಹಿಳೆಯ ದೂರಿನ ಪ್ರಕಾರ, 2013ರಲ್ಲಿ ಮೌಲಾನಾ ಮಹಿಳೆಯನ್ನು ಭೇಟಿಯಾಗಿದ್ದ. ಆತ ವಾರಣಾಸಿಗೆ ಬಂದಾಗಲೆಲ್ಲಾ ಮದುವೆಯ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ಈ ಎಲ್ಲಾ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದ. ಆನಂತರದಲ್ಲಿ ಆತ ಬ್ಲ್ಯಾಕ್ ಮೇಲ್ ಮಾಡಲು ಪ್ರಾರಂಭಿಸಿದ್ದಾನೆ. ಇದನ್ನೂ ಓದಿ: ಬಿಎಸ್‍ವೈಗೆ ಸುಪ್ರೀಂಕೋರ್ಟ್‍ನಿಂದ ತಾತ್ಕಾಲಿಕ ರಿಲೀಫ್ – ಬಿ.ವೈ. ವಿಜಯೇಂದ್ರಗೆ ಸಂಕಷ್ಟ

    ಈ ಹಿನ್ನೆಲೆಯಲ್ಲಿ ಮಹಿಳೆಯು ಮೌಲಾನಾ ಜಾರ್ಜಿಸ್ ವಿರುದ್ಧ ಅತ್ಯಾಚಾರ, ಬ್ಲ್ಯಾಕ್ ಮೇಲ್ ಮಾಡುತ್ತಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಾರಣಾಸಿಯ ಜೈತ್‍ಪುರ ಪೊಲೀಸ್ ಠಾಣೆಯಲ್ಲಿ 2016ರ ಜನವರಿ 17ರಂದು ಮೌಲನಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ನ್ಯಾಯಾಲಯ ತೀರ್ಪನ್ನು ನೀಡಿದೆ. ಇದನ್ನೂ ಓದಿ: ಕಾಡಿನಲ್ಲಿ ಗ್ಯಾಂಗ್‌ರೇಪ್ – ಬೆತ್ತಲಾಗಿ ಓಡಿಬಂದ ಹುಡುಗಿಗೆ ಹುಚ್ಚಿಯೆಂದು ಕಲ್ಲೆಸೆದ ಜನ

    Live Tv
    [brid partner=56869869 player=32851 video=960834 autoplay=true]

  • ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ತಾಯಿ-ಇಬ್ಬರು ಮಕ್ಕಳ ಕೊಲೆ; ಸಾಕ್ಷಿಗಳ ಕೊರತೆ ಆರೋಪಿ ನಿರ್ದೋಷಿ

    ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ತಾಯಿ-ಇಬ್ಬರು ಮಕ್ಕಳ ಕೊಲೆ; ಸಾಕ್ಷಿಗಳ ಕೊರತೆ ಆರೋಪಿ ನಿರ್ದೋಷಿ

    ಬೆಳಗಾವಿ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ತಾಯಿ-ಇಬ್ಬರು ಮಕ್ಕಳ ತ್ರಿವಳಿ ಕಗ್ಗೊಲೆ ಪ್ರಕರಣದಲ್ಲಿ ಸ್ಯಾಕ್ಷಾಧಾರಗಳ ಕೊರತೆಯಿಂದ ಧಾರವಾಡ ಹೈಕೋರ್ಟ್ ಪೀಠ  ಆರೋಪಿಯನ್ನು ಖಲಾಸೆ ಮಾಡಿದೆ.

    ಬೆಳಗಾವಿಯ ಕುವೆಂಪು ನಗರದಲ್ಲಿ 2015ರ ಆಗಸ್ಟ್ 16ರಂದು ನಸುಕಿನ ಜಾವ ತಾಯಿ, ಇಬ್ಬರು ಮಕ್ಕಳು ಸೇರಿ ಮೂವರ ಬರ್ಬರ ಹತ್ಯೆಯಾಗಿತ್ತು. ಘಟನೆಯಲ್ಲಿ ರೀನಾ ಮಾಲಗತ್ತಿ, ಆದಿತ್ಯ ಮಾಲಗತ್ತಿ, ಸಾಹಿತ್ಯ ಮಾಲಗತ್ತಿ ಕೊಲೆಯಾಗಿತ್ತು. ಕೊಲೆಯಾದ 24 ಗಂಟೆಯಲ್ಲೇ ಆರೋಪಿಯನ್ನು ಬಂಧಿಸಿದ್ದ ಬೆಳಗಾವಿ ಎಪಿಎಂಸಿ ಪೊಲೀಸರು ತನಿಖೆ ನಡೆಸಿ ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

    ವಾದ ಆಲಿಸಿದ ಬೆಳಗಾವಿ ಕೋರ್ಟ್ 2018ರ ಏಪ್ರಿಲ್ 16ರಂದು ಪ್ರವೀಣ್ ಭಟ್‍ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಆ ಬಳಿಕ ತೀರ್ಪು ಪ್ರಶ್ನಿಸಿ ಆರೋಪಿ ಪರ ವಕೀಲರು ಹೈಕೊರ್ಟ್ ಮೆಟ್ಟಿಲೇರಿದ್ದರು. ಇದೀಗ ಧಾರವಾಡ ಹೈಕೋರ್ಟ್ ಪೀಠ  ಸಾಕ್ಷಿಗಳ ಕೊರತೆ ಹಿನ್ನೆಲೆ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ತೀರ್ಪು ನೀಡಿದೆ. ಇದನ್ನೂ ಓದಿ: ಮರಾಠಿ ಬೋರ್ಡ್ ಹಾಕಿ ಇಲ್ಲದಿದ್ದರೆ ಕನ್ನಡ ನಾಮಫಲಕ ಇರಲ್ಲ ಎಂದು MES ಪುಂಡಾಟ – ಸ್ವಯಂ ದೂರು ದಾಖಲಿಸಿಕೊಂಡ ಪೊಲೀಸರು

    ಘಟನೆ ಹಿನ್ನೆಲೆ: ಬೆಳಗಾವಿಯ ಕುವೆಂಪು ನಗರದಲ್ಲಿ 2015ರ ಆಗಸ್ಟ್ 16 ರಂದು ನಸುಕಿನ ಜಾವ ತ್ರಿವಳಿ ಕೊಲೆ ನಡೆದಿತ್ತು. ಘಟನೆಯಲ್ಲಿ ರೀನಾ ಮಾಲಗತ್ತಿ, ಆದಿತ್ಯ ಮಾಲಗತ್ತಿ, ಸಾಹಿತ್ಯ ಮಾಲಗತ್ತಿಯನ್ನು ಕೊಲೆಗೈಯ್ಯಲಾಗಿತ್ತು. 24 ಗಂಟೆಯಲ್ಲೇ ಎಪಿಎಂಸಿ ಪೊಲೀಸರು ಪ್ರವೀಣ್ ಭಟ್‍ನನ್ನು ಬಂಧಿಸಿದ್ದರು. ತ್ರಿವಳಿ ಕೊಲೆಗೆ ರೀನಾ ಹಾಗೂ ಪ್ರವೀಣ್ ಭಟ್ ನಡುವಿನ ಅನೈತಿಕ ಸಂಬಂಧವೇ ಕಾರಣ ಎನ್ನಲಾಗಿತ್ತು. ಆರೋಪಿ ಪರವಾಗಿ ನ್ಯಾಯವಾದಿ ಪ್ರವೀಣ್ ಕರೋಶಿ ವಾದ ಮಂಡಿಸಿದ್ದಾರೆ. ಇದನ್ನೂ ಓದಿ: ಸತೀಶ್ ಪಾಟೀಲ್ ಹತ್ಯೆಗೆ ಪೊಲೀಸರ ವೈಫಲ್ಯವೇ ಕಾರಣ: ಸತೀಶ್ ಜಾರಕಿಹೊಳಿ

    Live Tv

  • ಕುತುಬ್‌ ಮಿನಾರ್‌ ಬಳಿ ಹಿಂದೂ ಮೂರ್ತಿಗಳ ಪುನರ್‌ಸ್ಥಾಪನೆಗೆ ಮನವಿ – ತೀರ್ಪು ಕಾಯ್ದಿರಿಸಿದ ಕೋರ್ಟ್‌

    ನವದೆಹಲಿ: ಕುತುಬ್ ಮಿನಾರ್ ಸಂಕೀರ್ಣದಲ್ಲಿ ಹಿಂದೂ ಮತ್ತು ಜೈನರ ಆರಾಧನಾ ಮೂರ್ತಿಗಳನ್ನು ಪುನರ್‌ಸ್ಥಾಪಿಸಲು ಕೋರಿರುವ ಮೇಲ್ಮನವಿಗೆ ಸಂಬಂಧಿಸಿದ ಆದೇಶವನ್ನು ದೆಹಲಿಯ ಸಾಕೇತ್ ಕೋರ್ಟ್ ಮಂಗಳವಾರ ಕಾಯ್ದಿರಿಸಿದೆ.

    ಮೆಹ್ರೌಲಿಯಲ್ಲಿರುವ ಕುತುಬ್ ಮಿನಾರ್ ಸಂಕೀರ್ಣದೊಳಗೆ ಇರುವ ಕುವ್ವಾತ್-ಉಲ್-ಇಸ್ಲಾಂ ಮಸೀದಿಯನ್ನು ದೇವಾಲಯದ ಸಂಕೀರ್ಣದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಮೇಲ್ಮನವಿಯಲ್ಲಿ ಆರೋಪಿಸಲಾಗಿದೆ. ಇದನ್ನೂ ಓದಿ: ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ

    court order law

    ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ನಿಖಿಲ್ ಚೋಪ್ರಾ ಅವರು ಮಂಗಳವಾರ ಮೇಲ್ಮನವಿ ಆಲಿಸಿದ ನಂತರ ತೀರ್ಪನ್ನು ಕಾಯ್ದಿರಿಸಿದರು. ಮೇಲ್ಮನವಿಗೆ ಸಂಬಂಧಿಸಿದಂತೆ ಜೂನ್ 9ರಂದು ತೀರ್ಪು ನೀಡಲಾಗುವುದು ಎಂದು ತಿಳಿಸಿದ್ದಾರೆ.

    ಮಹಮ್ಮದ್‌ ಘೋರಿ ಆಡಳಿತದಲ್ಲಿ ಸೇನಾ ನಾಯಕನಾಗಿದ್ದ ಕುತುಬುದ್ದೀನ್‌ ಐಬಕ್‌ 27 ದೇವಾಲಯಗಳನ್ನು ಭಾಗಶಃ ಧ್ವಂಸ ಮಾಡಿದ್ದು, ಇವುಗಳ ಸಾಮಗ್ರಿಗಳನ್ನು ಬಳಸಿ ಕುತುಬ್‌ ಮಿನಾರ್‌ ಸಂಕೀರ್ಣದೊಳಗೆ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಜೈನ ತೀರ್ಥಂಕರ ವೃಷಭದೇವ ಮತ್ತು ಹಿಂದೂ ದೇವರು ವಿಷ್ಣುವಿನ ಮೂರ್ತಿಯನ್ನು ಸಂಕೀರ್ಣದಲ್ಲಿ ಪುನರ್‌ ಪ್ರತಿಷ್ಠಾಪಿಸಬೇಕು ಎಂದು ಕೋರಲಾಗಿದೆ. ಇದನ್ನೂ ಓದಿ: ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ

    ಕುತುಬ್ ಮಿನಾರ್ ಬಳಿ ದೇವಸ್ಥಾನದ ಉತ್ಖನನ ನಡೆಸಲು ಒತ್ತಡ ಕೇಳಿ ಬಂದ ಬೆನ್ನಲ್ಲೇ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಾಕೇತ್ ಕೋರ್ಟ್‍ಗೆ ತನ್ನ ವರದಿಯನ್ನು ಸಲ್ಲಿಕೆ ಮಾಡಿದ್ದು, ತೀವ್ರ ವಿರೋಧವನ್ನು ವ್ಯಕ್ತಪಡಿಸಿದೆ.

    ಕುತುಬ್ ಮಿನಾರ್ 1914 ರಿಂದ ಸಂರಕ್ಷಿತ ಸ್ಮಾರಕವಾಗಿದೆ. ಅದರ ರಚನೆಯನ್ನು ಈಗ ಬದಲಾಯಿಸಲಾಗುವುದಿಲ್ಲ. “ಸಂರಕ್ಷಿತ” ಸ್ಥಾನಮಾನವನ್ನು ನೀಡುವ ಸಮಯದಲ್ಲಿ ಅಂತಹ ಆಚರಣೆಯು ಪ್ರಚಲಿತದಲ್ಲಿರಲಿಲ್ಲ. ಈಗ ಸ್ಮಾರಕದಲ್ಲಿ ಆರಾಧನೆಯ ಪುನರುಜ್ಜೀವನವನ್ನು ಅನುಮತಿಸಲಾಗುವುದಿಲ್ಲ ಎಂದು ವರದಿಯಲ್ಲಿ ಎಎಸ್‍ಐ ಉಲ್ಲೇಖಿಸಿದೆ. ಇದನ್ನೂ ಓದಿ: ವಂದೇ ಮಾತರಂಗೂ ರಾಷ್ಟ್ರಗೀತೆಯಷ್ಟೇ ಗೌರವ ಕೋಡಿ – ದೆಹಲಿ ಹೈಕೋರ್ಟ್‌ಗೆ ಪಿಐಎಲ್

  • ಕೆಲವೇ ಹೊತ್ತಿನಲ್ಲಿ ಮಲಯಾಳಂ ಸ್ಟಾರ್ ನಟ ದಿಲೀಪ್ ಪ್ರಕರಣ ತೀರ್ಪು

    ಕೆಲವೇ ಹೊತ್ತಿನಲ್ಲಿ ಮಲಯಾಳಂ ಸ್ಟಾರ್ ನಟ ದಿಲೀಪ್ ಪ್ರಕರಣ ತೀರ್ಪು

    ನಟಿ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಲಯಾಳಂ ಸ್ಟಾರ್ ನಟ ದಿಲೀಪ್ ಪ್ರಕರಣದ ತೀರ್ಪು ಇಂದು ಮಧ್ಯಾಹ್ನ 1.45ಕ್ಕೆ ಪ್ರಕಟವಾಗಲಿದೆ. ನಟಿ ಮೇಲಿನ ದೌರ್ಜನ್ಯ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಗಳು ದಿಲೀಪ್ ವಿರುದ್ಧ ಕೊಲೆ ಸಂಚು ಆರೋಪ ಹೊರಿಸಿದ್ದರು. ಇವತ್ತು ಈ ಪ್ರಕರಣದ ತೀರ್ಪು ಹೊರಡಿಸಲಿದೆ ಕೇರಳ ಹೈಕೋರ್ಟ್. ಇದನ್ನೂ ಓದಿ : ವಿಜಯ್ ದುನಿಯಾದಲ್ಲಿ ‘ಭೀಮ’ ಎಂಟ್ರಿ : ನಟಿ ಮಾಲಾಶ್ರೀ ಬಳಿ ಇತ್ತು ಭೀಮ ಟೈಟಲ್

    ಕೇರಳ ಹೈಕೋರ್ಟ್ ಏಕ ಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಿಯಾದ್ ರೆಹಮಾನ್ ಇಂದು ತೀರ್ಪು ಪ್ರಕಟಿಸಲಿದ್ದು, ಕೇರಳ ಚಿತ್ರೋದ್ಯಮ ತೀರ್ಪಿಗಾಗಿ ಎದುರು ನೋಡುತ್ತಿದೆ. ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲೀಪ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪುನ್ನು ಕೂಡ ಕೇರಳ ಹೈಕೋರ್ಟ್ ಪ್ರಕಟಿಸಿತ್ತು. ಎರಡು ವಾರಗಳ ವಿಸ್ತ್ರತ ವಿಚಾರಣೆಯ ನಂತರ ನ್ಯಾಯಮೂರ್ತಿ ಗೋಪಿನಾಥ್ ನೇತೃತ್ವದ ಪೀಠ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿತ್ತು. ಇದನ್ನೂ ಓದಿ : ಕನ್ನಡದಲ್ಲೂ ಬಂತು ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ

    ಮೊನ್ನೆಯಷ್ಟೇ ಆ ನಟಿಯ ತಮಗಾದ ಅನ್ಯಾಯದ ಕುರಿತು ಮೊದಲ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಪ್ರಕರಣದ ಕುರಿತು ಎಳೆ ಎಳೆಯಾಗಿ ಘಟನೆಗಳನ್ನು ಬಿಚ್ಚಿಟ್ಟಿದ್ದರು. ಅಂದಿನ ಪರಿಸ್ಥಿತಿಯನ್ನೂ ವಿವರಿಸಿದ್ದರು. ಈಗ ಆ ಪ್ರಕರಣವೆಲ್ಲ ಏನಾಗಲಿವೆ ಎನ್ನುವ ಕುತೂಹಲ ಹೆಚ್ಚಿದೆ. ಇದನ್ನೂ ಓದಿ : ಮಗನೊಂದಿಗೆ ನಿಖಿಲ್ ಕುಮಾರ್ ಸ್ವಾಮಿ ಜಾಲಿ ಟ್ರೀಪ್

    ನಟಿಗೆ ಆದ ದೌರ್ಜನ್ಯದ ಕುರಿತಾಗಿ ಕೇರಳ ಚಿತ್ರೋದ್ಯಮ ವಿಷಾದ ವ್ಯಕ್ತ ಪಡಿಸಿತ್ತು. ನಟಿಯ ಬೆನ್ನಿಗೆ ನಿಂತು ಧೈರ್ಯ ತುಂಬಿತ್ತು. ನಿಮ್ಮೊಂದಿಗೆ ನಾವಿದ್ದೇವೆ ಎನ್ನುವ ಸಂದೇಶವನ್ನೂ ನೀಡಲಾಗಿತ್ತು. ಇವೆಲ್ಲ ಕಾರಣದಿಂದಾಗಿ ದಿಲೀಪ್ ಮೇಲಿನ ಪ್ರಕರಣ ಮಹತ್ವ ಪಡೆದುಕೊಂಡಿದೆ.

  • ಆರ್.ಎನ್ ನಾಯಕ ಕೊಲೆ ಕೇಸ್ – ಭೂಗತಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ

    ಆರ್.ಎನ್ ನಾಯಕ ಕೊಲೆ ಕೇಸ್ – ಭೂಗತಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ

    ಬೆಳಗಾವಿ: ಅಂಕೋಲಾ ಉದ್ಯಮಿ ಆರ್.ಎನ್ ನಾಯಕ ಕೊಲೆ ಪ್ರಕರಣ ಸಂಬಂಧ ಬೆಳಗಾವಿ ಕೋಕಾ ನ್ಯಾಯಾಲಯ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿತರನ್ನು ದೋಷಿ ಎಂದು ಮಹತ್ವದ ತೀರ್ಪು ಪ್ರಕಟಿಸಿದೆ.

    ಶಿಕ್ಷೆಯ ಪ್ರಮಾಣ ಕಾಯ್ದಿರಿಸಿ ನ್ಯಾಯಾಧೀಶ ಸಿ.ಎಂ. ಜೋಶಿ ತೀರ್ಪು ನೀಡಿದ್ದಾರೆ. ಎಪ್ರಿಲ್ 4 ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಾಧೀಶ ಸಿ.ಎಂ ಜೋಶಿ ತಿಳಿಸಿದ್ದಾರೆ.

    ಪ್ರಕರಣದ 6, 11 ಹಾಗೂ 16 ನೇ ಆರೋಪಿಗಳನ್ನು ನಿರ್ದೋಷಿ ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ ಆರನೇ ಆರೋಪಿ ಕೇರಳದ ರಬ್ದಿನ್ ಫಿಚೈ, 11ನೇ ಆರೋಪಿ ಬೆಂಗಳೂರಿನ ಮಹ್ಮದ್ ಶಾಬಂದರಿ ಹಾಗೂ 16ನೇ ಆರೋಪಿ ಉತ್ತರ ಕನ್ನಡದ ಆನಂದ ರಮೇಶ್ ನಾಯಕ ಈ ಪ್ರಕರಣದಿಂದ ದೋಷಮುಕ್ತರಾಗಿದ್ದಾರೆ. ಇದನ್ನೂ ಓದಿ: ಆನ್‍ಲೈನ್ ಗೇಮ್ ನಿಷೇಧ ರದ್ದು: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ

    ಉಳಿದಂತೆ ಎರಡನೇ ಆರೋಪಿ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಮೂರನೇ ಆರೋಪಿ ಬೆಂಗಳೂರಿನ ಅಭಿ ಭಂಡಗಾರ, ನಾಲ್ಕನೇ ಆರೋಪಿ ಉಡುಪಿಯ ಗಣೇಶ ಭಜಂತ್ರಿ, ಐದನೇ ಆರೋಪಿ ಕೇರಳದ ಕೆ.ಎಂ ಇಸ್ಮಾಯಿಲ್, ಏಳನೇ ಆರೋಪಿ ಹಾಸನದ ಮಹೇಶ ಅಚ್ಛಂಗಿ, ಎಂಟನೇ ಆರೋಪಿ ಕೇರಳದ ಸಂತೋಷ ಎಂ.ಬಿ, ಒಂಬತ್ತನೇ ಆರೋಪಿ ಉಡುಪಿ ಮೂಲದ ಬನ್ನಂಜೆ ರಾಜಾ, ಹತ್ತನೇ ಆರೋಪಿ ಬೆಂಗಳೂರಿನ ಜಗದೀಶ್ ಚಂದ್ರರಾಜ್, 12 ಆರೋಪಿ ಉತ್ತರ ಪ್ರದೇಶದ ಅಂಕಿತಕುಮಾರ್ ಕಶ್ಯಪ್ ದೋಷಿಗಳೆಂದು ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.  ಇದನ್ನೂ ಓದಿ: ಇಂದು ರಾಜ್ಯದ ಮೊದಲ ಕೋಕಾ ಕೇಸ್‍ನ ತೀರ್ಪು ಪ್ರಕಟ- ಪಾತಕಿ ಬನ್ನಂಜೆ ರಾಜಾ ಸೇರಿ 13 ಪಾತಕಿಗಳ ಭವಿಷ್ಯ ನಿರ್ಧಾರ

    2013 ಡಿಸೆಂಬರ್ 21ರಂದು ಅಂಕೋಲಾದಲ್ಲಿ ನಡೆದ ಆರ್.ಎನ್ ನಾಯಕ ಕೊಲೆ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಕೋಕಾ ಕೇಸ್ ದಾಖಲಿಸಲಾಗಿತ್ತು. ಇದು ರಾಜ್ಯದ ಮೊದಲ ಕೋಕಾ ಪ್ರಕರಣವಾಗಿತ್ತು. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಕೆ.ಜಿ. ಪುರಾಣಿಕಮಠ ಹಾಗೂ ಹೆಚ್ಚುವರಿ ಅಭಿಯೋಜಕ ಶಿವಪ್ರಸಾದ್ ಆಳ್ವಾ ವಕಾಲತ್ತು ವಹಿಸಿದ್ದರು.

  • ಪಟಾಕಿ ಸಂಪೂರ್ಣ ನಿಷೇಧ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

    ಪಟಾಕಿ ಸಂಪೂರ್ಣ ನಿಷೇಧ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

    ನವದೆಹಲಿ: ಹಸಿರು ಪಟಾಕಿ ಮತ್ತು ಕಡಿಮೆ ಮಾಲಿನ್ಯಕಾರಕ ವಸ್ತುಗಳನ್ನು ಬಳಸಿ ತಯಾರಿಸಿದ ಪಟಾಕಿಗಳನ್ನು ದೀಪಾವಳಿ ಹಬ್ಬದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಳಸಬಹುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

    FIREWORKS

    ಕೋವಿಡ್ ಸಾಂಕ್ರಾಮಿಕ ಹಾಗೂ ವಾಯುಮಾಲಿನ್ಯದ ನಡುವೆ ಪಟಾಕಿ ಸಂಪೂರ್ಣ ನಿಷೇಧಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಹೇಳಿತ್ತು. ಈ ಆದೇಶವನ್ನು ಪ್ರಶ್ನಿಸಿ ಪಟಾಕಿ ಉತ್ಪಾದಿಸುವ ಕಂಪನಿಗಳು ಸುಪ್ರೀಂ ಮೊರೆ ಹೋಗಿದ್ದವು.

    ಪಟಾಕಿ ಸಿಡಿಸುವುದನ್ನು ಸಂಪೂರ್ಣ ನಿಷೇಧಿಸಲು ಆಗುವುದಿಲ್ಲ. ದುರುಪಯೋಗವನ್ನು ತಡೆಯಲು ಕಾರ್ಯವಿಧಾನವನ್ನು ಬಲಪಡಿಸಿ ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

    ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್, ಅಜಯ್ ರಸ್ತೋಗಿ ಅವರಿದ್ದ ಪೀಠ,  ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿಷೇಧಿತ ಪಟಾಕಿ ಮತ್ತು ಸಂಬಂಧಿತ ವಸ್ತುಗಳನ್ನು ರಾಜ್ಯದಲ್ಲಿ ಆಮದು ಮಾಡಿಕೊಳ್ಳದಿರುವುದನ್ನು ಖಚಿತಪಡಿಸಿಕೊಳ್ಳುವ ಸಾಧ್ಯತೆ ಕುರಿತು ಪರಿಶೀಲಿಸುವಂತೆ ಸೂಚಿಸಿತು. ಇದನ್ನೂ ಓದಿ: ಟೋಂಗಾ ದೇಶದಲ್ಲಿ ಮೊದಲ ಬಾರಿ ಕೊರೊನಾ ಕೇಸ್ ಪತ್ತೆ

    ಹಸಿರು ಪಟಾಕಿಗಳ ಬಗ್ಗೆ ಸುಪ್ರೀಂ ಕೋರ್ಟ್‍ನ ಮೂರು ಆದೇಶಗಳು ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಎರಡು ಆದೇಶಗಳ ಹೊರತಾಗಿಯೂ ಕೋಲ್ಕತ್ತಾ ಹೈಕೋರ್ಟ್ ಹಸಿರು ಪಟಾಕಿಗಳನ್ನು ನಿಷೇಧಿಸಿದೆ. ಗಾಳಿಯ ಗುಣಮಟ್ಟ ಮಧ್ಯಮ ಅಥವಾ ಉತ್ತಮವಾಗಿದ್ದರೆ ಹಸಿರು ಪಟಾಕಿಗಳನ್ನು ಬಳಸಲು ಅನುಮತಿ ನೀಡುಬಹುದು ಎಂದು ಸುಪ್ರೀಂ ಕೋರ್ಟ್ ಆದೇಶಗಳು ಹೇಳುತ್ತವೆ ಎಂದು ಪಟಾಕಿ ತಯಾಕರ ಪರ ಹಾಜರಾದ ಹಿರಿಯ ವಕೀಲ ಸಿದ್ಧಾರ್ಥ್ ಭಟ್ನಾಗರ್ ಸೋಮವಾರ  ಹೇಳಿದರು.

    ಪರಿಸರ ಸಂರಕ್ಷಣೆ ಹಾಗೂ ಜನರ ಹಕ್ಕುಗಳ ರಕ್ಷಣೆ ಉದ್ದೇಶದಿಂದ ಪಟಾಕಿ ಮಾರಾಟ ಮತ್ತು ಬಳಕೆ ನಿಷೇಧಿಸುವಂತೆ ಕೋರಿ ಪರಿಸರ ಕಾರ್ಯಕರ್ತೆ ರೋಶನಿ ಅಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮೇಲೆ ಕೋಲ್ಕತ್ತಾ ಹೈಕೋರ್ಟ್ ಆದೇಶ ಬಂದಿತ್ತು.  ಇದನ್ನೂ ಓದಿ: ಜಿನ್ನಾಗೂ ಭಾರತೀಯ ಮುಸ್ಲಿಮರಿಗೂ ಸಂಬಂಧವಿಲ್ಲ : ಓವೈಸಿ

    ಭಾರತದ ಅನೇಕ ನಗರಗಳಂತೆ ಬಂಗಾಳದ ರಾಜಧಾನಿ ಕೋಲ್ಕತ್ತಾವು ಇತ್ತೀಚಿನ ವರ್ಷಗಳಲ್ಲಿ ಅತ್ಯಧಿಕ ವಾಯುಮಾಲಿನ್ಯ ಮಟ್ಟವನ್ನು ದಾಖಲಿಸಿದೆ. 2019ರಲ್ಲಿ ದಾಖಲಾದ ಗುಣಮಟ್ಟವು ಹಾಗೆಯೇ ಮುಂದುವರಿದರೆ ಇಲ್ಲಿನ ಜನತೆ 9 ವರ್ಷಗಳ ಜೀವಿತಾವಧಿಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಚಿಕಾಗೋ ವಿಶ್ವವಿದ್ಯಾಲಯದ ಸಂಶೋಧಕರ ನಡೆಸಿದ ಅಧ್ಯಯನದಿಂದ ಬಹಿರಂಗವಾಗಿತ್ತು.