Tag: ತುಂಗಾನಗರ

  • ಶಿವಮೊಗ್ಗ ಹರ್ಷ ಕೊಲೆ ಕೇಸ್‌| ಸಾಕ್ಷಿಗೆ ಬೆದರಿಕೆ ಹಾಕಿದ ಯುವಕನ ಮೇಲೆ ಎಫ್‌ಐಆರ್‌

    ಶಿವಮೊಗ್ಗ ಹರ್ಷ ಕೊಲೆ ಕೇಸ್‌| ಸಾಕ್ಷಿಗೆ ಬೆದರಿಕೆ ಹಾಕಿದ ಯುವಕನ ಮೇಲೆ ಎಫ್‌ಐಆರ್‌

    ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ (Harsha Murder Case) ಸಂಬಂಧಿಸಿಂತೆ ಸಾಕ್ಷಿಗೆ (Witness) ಬೆದರಿಕೆ ಹಾಕಿದ ಯುವಕನ ವಿರುದ್ಧ ಕೇಸ್‌ ದಾಖಲಾಗಿದೆ.

    ಎನ್‌ಐಎ ನ್ಯಾಯಾಲಯದ ಸೂಚನೆ ಮೇರೆಗೆ ಶಿವಮೊಗ್ಗದ (Shivamogga) ತುಂಗಾನಗರ ಠಾಣೆಯಲ್ಲಿ ಅನಾಮಿಕ ವ್ಯಕ್ತಿಯ ಮೇಲೆ ಸಾಕ್ಷಿಯೊಬ್ಬರು ದೂರು ನೀಡಿದ ನಂತರ ಎಫ್‌ಐಆರ್‌ (FIR) ದಾಖಲಾಗಿದೆ.

    ಏನಿದು ಪ್ರಕರಣ?
    ಶಿವಮೊಗ್ಗದ ಸೀಗೆಹಟ್ಟಿ ಬಳಿ ಎರಡು ವರ್ಷದ ಹಿಂದೆ ಹರ್ಷ ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆಟ್ರೋಲ್‌ ಬಂಕ್‌ ಉದ್ಯೋಗಿಯೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (NIA) ಸಾಕ್ಷಿಯಾಗಿ ಪರಿಗಣಿಸಿತ್ತು.  ಇದನ್ನೂ ಓದಿ: ಇವಿಎಂ ದೂರೋದನ್ನು ನಿಲ್ಲಿಸಿ, ಫಲಿತಾಂಶವನ್ನು ಸ್ವೀಕರಿಸಿ – ಕಾಂಗ್ರೆಸ್‌ಗೆ ಉಮರ್ ಅಬ್ದುಲ್ಲಾ ಕಿವಿಮಾತು

    ಈಗ ಆತನಿಗೆ ಅಪರಿಚಿತನೊಬ್ಬ ಬೆದರಿಕೆ ಒಡ್ಡಿರುವ ಆರೋಪ ಕೇಳಿ ಬಂದಿದೆ. ಹಿಂದೂ ಹರ್ಷ ಹತ್ಯೆಯಾದ ದಿನ ಆರೋಪಿಗಳು ಶಿವಮೊಗ್ಗದ ಪೆಟ್ರೋಲ್‌ ಬಂಕ್‌ನಲ್ಲಿ ತಮ್ಮ ಕಾರಿಗೆ ಇಂಧನ ಭರ್ತಿ ಮಾಡಿಸಿಕೊಂಡಿದ್ದರು. ಪೆಟ್ರೋಲ್‌ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಪೆಟ್ರೋಲ್‌ ಭರ್ತಿ ಮಾಡಿದ್ದ. ಈ ಕಾರಣಕ್ಕೆ ಆತನನ್ನು ಸಾಕ್ಷಿಯಾಗಿ ಪರಿಗಣಿಸಲಾಗಿತ್ತು.

    ಸದ್ಯ ಆ ಯುವಕ ಪೆಟ್ರೋಲ್‌ ಬಂಕ್‌ ತೊರೆದು ಬೇರೆ ಕೆಲಸ ಮಾಡುತ್ತಿದ್ದಾನೆ. ಕೆಲ ದಿನಗಳ ಹಿಂದೆ ಪೆಟ್ರೋಲ್‌ ಬಂಕ್‌ಗೆ ಸ್ಕೂಟಿಯಲ್ಲಿ ತೆರಳಿದ್ದ ವ್ಯಕ್ತಿಯೊಬ್ಬ ಆ ಯುವಕ ಯಾರು ಎಂದು ವಿಚಾರಿಸಿದ್ದ. ಆತ ಕೆಲಸ ಬಿಟ್ಟಿರುವುದಾಗಿ ತಿಳಿಸಿದಾಗ, ‘ಕೋರ್ಟ್‌ಗೆ ಹೋಗುವುದು ಬೇಡ ಎಂದು ಹೇಳಿ’ ಎಂದು ಬಂಕ್‌ ಸಿಬ್ಬಂದಿಗೆ ತಿಳಿಸಿ ಹೋಗಿದ್ದ ಎಂದು ಆರೋಪಿಸಲಾಗಿದೆ.

    ಈ ವಿಷಯ ಸ್ನೇಹಿತರಿಂದ ಯುವಕನಿಗೆ ಗೊತ್ತಾಗಿದೆ. ಡಿ.12ರಂದು ಎನ್‌ಐಎ ನ್ಯಾಯಾಲಯದಲ್ಲಿ ಯುವಕ ಸಾಕ್ಷಿ ನುಡಿದಿದ್ದಾನೆ. ಮರುದಿನ ಕೋರ್ಟ್‌ ಸೂಚನೆ ಮೇರೆಗೆ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಒಂಟಿ ಮಹಿಳೆ ಕೊಲೆ ಪ್ರಕರಣ – ಆರೋಪಿಯ ತಾಯಿಯಿಂದ ಆತ್ಮಹತ್ಯೆ ಯತ್ನ

    ಒಂಟಿ ಮಹಿಳೆ ಕೊಲೆ ಪ್ರಕರಣ – ಆರೋಪಿಯ ತಾಯಿಯಿಂದ ಆತ್ಮಹತ್ಯೆ ಯತ್ನ

    ಶಿವಮೊಗ್ಗ: ಶಿವಮೊಗ್ಗದಲ್ಲಿ  (Shivamogga) ಇತ್ತೀಚೆಗೆ ನಡೆದಿದ್ದ ಒಂಟಿ ಮಹಿಳೆಯ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ನಡೆದಿದೆ.

    ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಸೀತಾಬಾಯಿ (50) ಎಂದು ಗುರುತಿಸಲಾಗಿದೆ. ನಗರದ ಹುಣಸೋಡು ನಿವಾಸಿಯಾದ ಮಹಿಳೆ ಅಬ್ಬಲಗೆರೆಯ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಆಕೆಯನ್ನು ರಕ್ಷಿಸಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಕೋಲಾರದಲ್ಲಿ ಮಹಿಳೆಯರ ಶಕ್ತಿ ಪ್ರದರ್ಶನ – ಸಾಲ ವಸೂಲಿಗೆ ಬಂದಿದ್ದಕ್ಕೆ ಬೈಕ್‍ಗೆ ಬೆಂಕಿ ಹಚ್ಚಿ ಆಕ್ರೋಶ

    ಜೂನ್ 17ರಂದು ಶಿವಮೊಗ್ಗದ ವಿಜಯನಗರದಲ್ಲಿ ಎಂಜಿನಿಯರ್ ಒಬ್ಬರ ಪತ್ನಿ ಕಮಲಮ್ಮ ಎಂಬುವರ ಕೊಲೆ ನಡೆದಿತ್ತು. ಈ ಪ್ರಕರಣ ನಡೆದ ಮೇಲೆ ಕಾರು ಚಾಲಕ ಹನುಮಂತ ನಾಯ್ಕ ನಾಪತ್ತೆಯಾಗಿದ್ದ. ಕಮಲಮ್ಮ ಅವರನ್ನು ಕೊಲೆಗೈದು ಸುಮಾರು 35 ಲಕ್ಷ ರೂ. ಹಣವನ್ನು ದೋಚಿಕೊಂಡು ಹೋಗಿದ್ದಾನೆ ಎಂದು ಆತನ ವಿರುದ್ಧ ಎಫ್‍ಐಆರ್ ಕೂಡ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಕೊಲೆಗಾರನ ಸುಳಿವು ಪಡೆದ ಶಿವಮೊಗ್ಗ ತುಂಗಾನಗರ (Tunga Nagar) ಪೊಲೀಸರು ಆರೋಪಿ ಹನುಮಂತನಾಯ್ಕನ ಬೆನ್ನು ಬಿದ್ದಿದ್ದರು.

    ಅಲ್ಲದೇ ಆರೋಪಿಯ ತಂದೆ ರೂಪ್ಲಾ ನಾಯ್ಕ ಕೂಡ ಮನೆ ಬಿಟ್ಟು ಪರಾರಿಯಾಗಿದ್ದ. ಇದರಿಂದ ಮನನೊಂದ ಸೀತಾಬಾಯಿ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯಕ್ಕೆ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೋಲಾರದಲ್ಲಿ ಮಹಿಳೆಯರ ಶಕ್ತಿ ಪ್ರದರ್ಶನ – ಸಾಲ ವಸೂಲಿಗೆ ಬಂದಿದ್ದಕ್ಕೆ ಬೈಕ್‍ಗೆ ಬೆಂಕಿ ಹಚ್ಚಿ ಆಕ್ರೋಶ

  • ಶ್ರೀಗಂಧ ಕಳ್ಳನ ಬಂಧನ – 910 ಕೆಜಿ ಶ್ರೀಗಂಧ ವಶ

    ಶ್ರೀಗಂಧ ಕಳ್ಳನ ಬಂಧನ – 910 ಕೆಜಿ ಶ್ರೀಗಂಧ ವಶ

    ಶಿವಮೊಗ್ಗ: ತುಂಗಾನಗರ ಠಾಣೆ ಪೊಲೀಸರು ಹಾಗು ಅರಣ್ಯಾಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 910 ಕೆಜಿ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

    ಶಿವಮೊಗ್ಗ ಜಿಲ್ಲೆಯ ಟಿಪ್ಪುನಗರದ 7ನೇ ತಿರುವಿನ ಗೋಡೌನ್‍ವೊಂದರಲ್ಲಿ, ಆರೋಪಿ ಅಪ್ಸರ್ 910 ಕೆಜಿ ಗಂಧದ ತುಂಡುಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ:  ಮಾಜಿ ಶಾಸಕ, ಜೆಡಿಎಸ್ ನಾಯಕ ಕೋನರೆಡ್ಡಿ ಕಾಂಗ್ರೆಸ್ ಸೇರ್ಪಡೆ

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್, ಬಂಧಿತ ಆರೋಪಿ ಅಪ್ಸರ್ ಬೇರೆ-ಬೇರೆ ಕಡೆಯಿಂದ ಶ್ರೀಗಂಧದ ತುಂಡುಗಳನ್ನು ತೆಗೆದುಕೊಂಡು ಬಂದು ಸಂಗ್ರಹಿಸಿಟ್ಟಿದ್ದ. ಇದನ್ನು ಅಮರಾವತಿಗೆ ಮಾರಾಟ ಮಾಡಲು ಯತ್ನಿಸಿದ್ದ ಎಂಬುದು ತನಿಖೆ ವೇಳೆ ಬಹಿರಂಗವಾಗಿದೆ ಎಂದರು.

    ಬಂಧಿತ ಆರೋಪಿ ಅಪ್ಸರ್ ವಿರುದ್ಧ ಈ ಹಿಂದೆ ಯಾವುದೇ ಕೃತ್ಯಗಳಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ಯಾವುದೇ ಮಾಹಿತಿ ಇಲ್ಲ. ಅರಣ್ಯ ಇಲಾಖೆಯಲ್ಲಿ ಮಾಹಿತಿ ಇದ್ದು, ಈತನ ವಿರುದ್ಧ ಅರಣ್ಯ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿಸಿದರು.