Tag: ತುಂಗಾ ಜಲಾಶಯ

  • ಭಾರೀ ಮಳೆಗೆ ತುಂಗಾ ಜಲಾಶಯ ಭರ್ತಿ

    ಭಾರೀ ಮಳೆಗೆ ತುಂಗಾ ಜಲಾಶಯ ಭರ್ತಿ

    ಶಿವಮೊಗ್ಗ: ಮಲೆನಾಡಿನ (Malenadu) ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ (Rain) ಹಿನ್ನೆಲೆ ಶಿವಮೊಗ್ಗದ (Shivamogga) ಗಾಜನೂರಿನ (Gajanur) ತುಂಗಾ ಜಲಾಶಯ (Tunga Reservoir) ಭರ್ತಿಯಾಗಿದೆ.

    ಭರ್ತಿಯಾದ ಹಿನ್ನೆಲೆ ಜಲಾಶಯದ 10 ಗೇಟ್‌ಗಳಿಂದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ನೀರು ಭರ್ತಿಯಾಗಿದ್ದರಿಂದ ಜಲಾಶಯದ ಅಧಿಕಾರಿಗಳು ಗುರುವಾರ ಮುಂಜಾನೆ 2 ಗೇಟ್‌ಗಳನ್ನು ಓಪನ್ ಮಾಡಿದ್ದರು. ಆದರೆ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ನೀರು ಹೆಚ್ಚಳವಾದ್ದರಿಂದ 10 ಗೇಟ್‌ಗಳಿಂದ ನದಿ ಪಾತ್ರಗಳಿಗೆ ನೀರನ್ನು ಬಿಡಲಾಗುತ್ತಿದೆ. ಇದನ್ನೂ ಓದಿ: ಹಾಸನ ಜಿಲ್ಲೆಗೆ ಮುಂಗಾರು ಆಗಮನ- ಜಿಲ್ಲೆಯ ಹಲವೆಡೆ ಹಾನಿ

    ರಾಜ್ಯಕ್ಕೆ ಮುಂಗಾರು ಲಗ್ಗೆ ಇಟ್ಟಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಅಂತೆಯೇ ಶಿವಮೊಗ್ಗದಲ್ಲಿ ಧಾರಕಾರ ಮಳೆ ಸುರಿದ ಪರಿಣಾಮ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು, ಇಂದು ಮುಂಜಾನೆ 2 ಗೇಟ್‌ಗಳ ಮೂಲಕ 2 ಸಾವಿರ ಕ್ಯೂಸೆಕ್ ಹೆಚ್ಚುವರಿ ನೀರನ್ನು ಜಲಾಶಯದಿಂದ ಬಿಡುಗಡೆ ಮಾಡಲಾಗಿತ್ತು. ಜಲಾಶಯದ ಗರಿಷ್ಠ ಮಟ್ಟ 584.24 ಮೀಟರ್ ಇದ್ದು, ಇಂದು ಜಲಾಶಯ ಗರಿಷ್ಠ ಮಟ್ಟವನ್ನು ತಲುಪಿದೆ. ಇದನ್ನೂ ಓದಿ: ದೆಹಲಿಗೆ ಮಾನ್ಸೂನ್ ಎಂಟ್ರಿ- ರಾಷ್ಟ್ರ ರಾಜಧಾನಿ ಕೂಲ್ ಕೂಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದಲ್ಲಿ ಮೊದಲ ಡ್ಯಾಂ ಭರ್ತಿ – 22 ಗೇಟ್‍ಗಳ ಮೂಲಕ ನೀರು ಹೊರಕ್ಕೆ

    ರಾಜ್ಯದಲ್ಲಿ ಮೊದಲ ಡ್ಯಾಂ ಭರ್ತಿ – 22 ಗೇಟ್‍ಗಳ ಮೂಲಕ ನೀರು ಹೊರಕ್ಕೆ

    – ತುಂಬಿದ ತುಂಗೆಯಲ್ಲಿ ಐವರು ಸಾಹಸಿಗಳಿಂದ ರ‍್ಯಾಪ್ಟಿಂಗ್

    ಶಿವಮೊಗ್ಗ: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಈಗಾಗಲೇ ಅನೇಕ ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ಇದೀಗ ರಾಜ್ಯದಲ್ಲಿ ಮೊದಲ ಡ್ಯಾಂ ಭರ್ತಿ ಯಾಗಿದ್ದು, ಜಲಾಶಯದಿಂದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.

    ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು, 22 ಗೇಟ್‍ಗಳ ಮೂಲಕ 71 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಮಲೆನಾಡಿನಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಡ್ಯಾಂ ನಿಂದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.

    ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯಕ್ಕೆ ಯಥೇಚ್ಛ ನೀರು ಹರಿದು ಬಂದಿದೆ. ಇದರಿಂದ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ನೀರಿನ ಮಟ್ಟ 588.24 ಮೀಟರ್‌ಗಿಂತಲೂ ಹೆಚ್ಚು ತಲುಪಿದೆ. ಗಾಜನೂರು ಡ್ಯಾಂ 588.24 ಮೀಟರ್ ಎತ್ತರ ಇದೆ. ಶೃಂಗೇರಿ, ತೀರ್ಥಹಳ್ಳಿ ಭಾಗಗಳಲ್ಲಿ ಮಳೆ ಬೀಳುತ್ತಿರುವ ಕಾರಣ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ಡ್ಯಾಂಗೆ 70 ಸಾವಿರ ಕ್ಯೂಸೆಕ್ ಒಳ ಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ಜನರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

    ತುಂಬಿದ ತುಂಗೆಯಲ್ಲಿ ಐವರು ಸಾಹಸಿಗಳಿಂದ ರ‍್ಯಾಪ್ಟಿಂಗ್
    ಮಲೆನಾಡಿನ ಭಾಗದಲ್ಲಿ ಅತಿ ಹೆಚ್ಚು ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ. ಜಲಾಶಯ ಭರ್ತಿಯಾಗಿರುವ ಕಾರಣ 71 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಈ ತುಂಬಿ ಹರಿಯುತ್ತಿರುವ ತುಂಗೆಯಲ್ಲಿ ಯೂತ್ ಹಾಸ್ಟೆಲ್ ಅಸೋಸಿಯೇಷನ್ ಮತ್ತು ಸಾಹಸಿಗರ ತಂಡದಿಂದ ರ‍್ಯಾಪ್ಟಿಂಗ್ ಆರಂಭಿಸಿದ್ದಾರೆ.

    ಮೂರು ಬೋಟಿನಲ್ಲಿ ಐವರು ರ್‍ಯಾಪ್ಟಿಂಗ್‌ನಲ್ಲಿ ಭಾಗವಹಿಸಿದ್ದು, ಶಿವಮೊಗ್ಗದ ತುಂಗಾನದಿ ಹೊಸ ಸೇತುವೆಯಿಂದ ಪಯಣ ಆರಂಭಿಸಿದ್ದಾರೆ. ಈ ಸಾಹಸಿಗರ ತಂಡ ಪ್ರತಿವರ್ಷ ತುಂಗಾನದಿ ಭರ್ತಿಯಾದ ವೇಳೆ ಈ ರೀತಿಯ ಸಾಹಸ ಕಾರ್ಯದಲ್ಲಿ ತೊಡಗುತ್ತಾರೆ. ಅದೇ ರೀತಿ ಈ ಬಾರಿ ಸಹ ಸಾಹಸ ಪಯಣದಲ್ಲಿ ತೊಡಗಿದ್ದಾರೆ. ಶಿವಮೊಗ್ಗದಿಂದ ಹೊರಟು ಹೊನ್ನಾಳಿ ತಾಲೂಕಿನ ರಾಂಪುರಕ್ಕೆ ತೆರಳಲಿದೆ. ಸುಮಾರು 50 ಕಿ.ಮೀ. ಪಯಣ ಇದಾಗಿದೆ.

  • ತುಂಗಾ ಜಲಾಶಯದ 4 ಗೇಟ್ ಓಪನ್- 2 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ

    ತುಂಗಾ ಜಲಾಶಯದ 4 ಗೇಟ್ ಓಪನ್- 2 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ

    – ಮಹಾ ಮಳೆಗೆ ಬೆಳಗಾವಿ ಜಿಲ್ಲೆಯ 6 ಸೇತುವೆಗಳು ಜಲಾವೃತ

    ಶಿವಮೊಗ್ಗ/ ಬೆಳಗಾವಿ: ಮಲೆನಾಡು ಹಾಗೂ ತುಂಗಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆ ಗಾಜನೂರು ಸಮೀಪದ ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದೆ. ಹೀಗಾಗಿ ಇಂದು 4 ಕ್ರಸ್ಟ್ ಗೇಟ್ ಮೂಲಕ 2 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ.

    ತುಂಗಾ ಜಲಾಶಯ 3.25 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, 100 ಮೀ. ಎತ್ತರವಿದೆ. ಮುಂಗಾರು ಆರಂಭದಲ್ಲಿಯೇ ಜಲಾಶಯ ಭರ್ತಿಯಾಗಿದ್ದು, ಜಲಾಶಯಕ್ಕೆ ಪ್ರತಿದಿನ 7 ಸಾವಿರ ಕ್ಯೂಸೆಕ್ ಒಳಹರಿವು ಬರುತ್ತಿದೆ. ಒಳಹರಿವು ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇರುವುದರಿಂದ 7 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರಗೆ ಬಿಡಲಾಗುತ್ತಿದೆ. ಜಲಾಶಯದ 4 ಕ್ರಸ್ಟ್ ಗೇಟ್‍ಗಳ ಮೂಲಕ 2 ಸಾವಿರ ಕ್ಯೂಸೆಕ್ ನೀರನ್ನು ನದಿ ಪಾತ್ರಕ್ಕೆ ಹಾಗೂ 4,750 ಕ್ಯೂಸೆಕ್ ನೀರನ್ನು ವಿದ್ಯುತ್ ಉತ್ಪಾದನೆಗೆ ಬಿಡುಗಡೆ ಮಾಡಲಾಗಿದೆ.

    ಮುಂದಿನ ದಿನಗಳಲ್ಲಿ ಮಳೆ ಮತ್ತಷ್ಟು ಹೆಚ್ಚಳವಾದರೆ ಕ್ರಸ್ಟ್ ಗೇಟ್ ಮೂಲಕ ಮತ್ತಷ್ಟು ನೀರನ್ನು ನದಿಗೆ ಬಿಡಲು ಚಿಂತಿಸಲಾಗುವುದು. ಈಗಾಗಿ ಜಲಾನಯನ ನದಿಪಾತ್ರದ ಜನರು ಮುಂಜಾಗ್ರತೆಯಿಂದ ಇರುವಂತೆ ಜಲಾಶಯದ ಕಾರ್ಯಪಾಲಕ ಅಭಿಯಂತರರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನದಿಂದ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ಪರಿಣಾಮ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪ ವಿಭಾಗದಲ್ಲಿ ಮತ್ತೆರಡು ಸೇತುವೆಗಳು ಜಲಾವೃತಗೊಂಡಿದ್ದು, ಈವರೆಗೂ ಒಟ್ಟು 6 ಸೇತುವೆಗಳು ಜಲಾವೃತಗೊಂಡಿವೆ.

    ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಕೃಷ್ಣಾ ನದಿ ಮೂಲಕ ರಾಜ್ಯಕ್ಕೆ 60 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹೀಗಾಗಿ ಕಲ್ಲೋಳ-ಯಡೂರ ಹಾಗೂ ಮಲಿಕವಾಡ-ದತ್ತವಾಡ ಸೇತುವೆಗಳು ಜಲಾವೃತಗೊಂಡಿವೆ. ವೇದಗಂಗಾ, ದೂಧಗಂಗಾ, ಕೃಷ್ಣಾ ನದಿಯ ಹರಿಯುವಿನಲ್ಲಿ ಹೆಚ್ಚಳವಾಗಿರವುದರಿಂದ ನದಿ ಪಾತ್ರದ ಜನರಲ್ಲಿ ಆತಂಕ ಮೂಡಿದೆ.

    ಜಲಾವೃತವಾದ ಕಲ್ಲೋಳ ಸೇತುವೆ ಮೇಲೆಯೆ ಬೈಕ್, ಕಾರು, ಟ್ರ್ಯಾಕ್ಟರ್ ವಾಹನಗಳು ಹಾಗೂ ಬೆಕಾ ಬಿಟ್ಟಿಯಾಗಿ ಜನರು ಸಂಚಾರಿಸುತ್ತಿದ್ದಾರೆ. ಜೊತೆಗೆ ನದಿಗಿಳಿದು ಯುವಕರು ಸ್ನಾನ ಮಾಡುತ್ತಿದ್ದರೆ, ಮಹಿಳೆಯರು ಬಟ್ಟೆ ತೊಳೆಯುತ್ತಿದ್ದಾರೆ. ಇತ್ತ ಜಿಲ್ಲಾಡಳಿತ ಕಂದಾಯ ಹಾಗೂ ಪೊಲಿಸ್ ಇಲಾಖೆಯ ಯಾವುದೇ ಸಿಬ್ಬಂದಿಯನ್ನು ಪ್ರವಾಹ ಪ್ರದೇಶದಲ್ಲಿ ನಿಯೋಜನೆ ಮಾಡಿಲ್ಲ. ಅಷ್ಟೇ ಅಲ್ಲದೆ ಬ್ಯಾರಿಕೆಡ್ ಸಹ ಅಳವಡಿಸಿಲ್ಲ.

    ಬುಧವಾರ ಹಾಗೂ ಇಂದು ಮಹಾ ಮಳೆಗೆ ಚಿಕ್ಕೋಡಿ ಭಾಗದ ಕೆಳಹಂತದ ಆರು ಸೇತುವೆಗಳು ಜಲಾವೃತಗೊಂಡಿವೆ.  ದೂಧಗಂಗಾ ನದಿಗೆ ಅಡ್ಡಲಾಗಿರುವ ಕಾರದಗಾ-ಭೋಜ, ಕುನ್ನೂರ- ಬಾರವಾಡ, ಭೊಜ- ಹುನ್ನರಗಿ ಕಲ್ಲೋಳ- ಯಡೂರ, ಮಲಿಕವಾಡ-ದತ್ತವಾಡ ಹಾಗೂ ಬಾ.ಸೌಂದತ್ತಿ- ಮಾಂಜರಿ ಸೇತುವೆಗಳು ಜಲಾವೃತಗೊಂಡಿದ್ದು, ಮಳೆಗಾಲ ಆರಂಭವಾಗುತ್ತಿದ್ದಂತಯೇ ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಿದೆ.