Tag: ತುರ್ತುಪರಿಸ್ಥಿತಿ

  • ಪ್ರತಿವರ್ಷ ಜೂನ್‌ 25ರಂದು ʻಸಂವಿಧಾನ ಹತ್ಯಾ ದಿವಸ್‌ʼ ಆಚರಣೆ – ಅಮಿತ್‌ ಶಾ ಘೋಷಣೆ

    ಪ್ರತಿವರ್ಷ ಜೂನ್‌ 25ರಂದು ʻಸಂವಿಧಾನ ಹತ್ಯಾ ದಿವಸ್‌ʼ ಆಚರಣೆ – ಅಮಿತ್‌ ಶಾ ಘೋಷಣೆ

    ನವದೆಹಲಿ: ಪ್ರತಿವರ್ಷ ಜೂನ್‌ 25ರ ದಿನವನ್ನು ʻಸಂವಿಧಾನ ಹತ್ಯಾ ದಿವಸ್‌ʼ (Samvidhaan Hatya Diwas) ಆಗಿ ಆಚರಿಸಲಾಗುವುದು ಎಂದು ಸಚಿವ ಅಮಿತ್‌ ಶಾ (Amit Shah) ಘೋಷಣೆ ಮಾಡಿದ್ದಾರೆ.

    ತುರ್ತು ಪರಿಸ್ಥಿತಿಯ (Emergency Day) ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಅಮಿತ್‌ ಶಾ ಅವರಿಂದು ʻಸಂವಿಧಾನ ಹತ್ಯಾ ದಿವಸ್‌ʼ ಆಚರಣೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಕೇಂದ್ರ ಸಚಿವರು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದು, ಸುತ್ತೋಲೆ ಪ್ರತಿಯನ್ನೂ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಜು.15ರಿಂದ ವಿಧಾನಸಭೆ ಅಧಿವೇಶನ ಶುರು; ವಿಧಾನಸೌಧ ವಾಸ್ತುಪ್ರಕಾರವಾಗಿಯೇ ಇದೆ ಎಂದ ಹೊರಟ್ಟಿ

    ಪ್ರಜಾಪ್ರಭುತ್ವದ ಆತ್ಮದ ಕತ್ತು ಹಿಸುಕಿದರು:
    ಪ್ರತಿ ವರ್ಷ ʻಸಂವಿಧಾನ ಹತ್ಯಾ ದಿವಸ್ʼ ಆಚರಣೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. 1975ರ ಜೂನ್ 25 ರಂದು, ಅಂದಿನ ಪ್ರಧಾನಿ ಇಂದಿರಾಗಾಂಧಿ  (Indira Gandhi) ಸರ್ವಾಧಿಕಾರಿ ಮನಸ್ಥಿತಿಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದರು. ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ನಮ್ಮ ಪ್ರಜಾಪ್ರಭುತ್ವದ ಆತ್ಮದ ಕತ್ತು ಹಿಸುಕಿದರು. ಯಾವುದೇ ತಪ್ಪಿಲ್ಲದೇ ಲಕ್ಷಾಂತರ ಜನರನ್ನ ಕಂಬಿಯ ಹಿಂದೆ ಎಸೆಯಲಾಯಿತು. ಮಾಧ್ಯಮಗಳ ಧ್ವನಿಯನ್ನು ಮೌನಗೊಳಿಸಲಾಯಿತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪ್ರತಿ ವರ್ಷ ಜೂನ್ 25ರ ದಿನವನ್ನು ʻಸಂವಿಧಾನ ಹತ್ಯಾ ದಿವಸ್ʼ ಎಂದು ಆಚರಿಸಲು ನಿರ್ಧರಿಸಿದೆ ಎಂದು ಘೋಷಣೆ ಮಾಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ದಿನವು 1975ರ ತುರ್ತು ಪರಿಸ್ಥಿತಿಯ ಅಮಾನವೀಯ ನೋವುಗಳನ್ನು ಸಹಿಸಿಕೊಂಡ ಎಲ್ಲರ ಬೃಹತ್ ಕೊಡುಗೆಗಳನ್ನು ಸ್ಮರಿಸುತ್ತದೆ ಎಂದು ಅಮಿತ್‌ ಶಾ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಮೋದಿಯಿಂದಲೂ ವಾಗ್ದಾಳಿ:
    ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತುಪರಿಸ್ಥಿತಿಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ತುರ್ತು ಪರಿಸ್ಥಿತಿಯಿಂದ ಕಾಂಗ್ರೆಸ್ ಪಕ್ಷವು (Congress Party) ಮೂಲಭೂತ ಸ್ವಾತಂತ್ರ್ಯವನ್ನು ಹೇಗೆ ಬುಡಮೇಲು ಮಾಡಿತ್ತು? ಹಾಗೂ ಪ್ರತಿಯೊಬ್ಬ ಭಾರತೀಯರು ಗೌರವಿಸುವ ಸಂವಿಧಾನವನ್ನು (Constitution Of India) ಹೇಗೆ ತುಳಿಯಿತು? ಎಂಬುದನ್ನು ನಮಗೆ ನೆನಪಿಸುತ್ತದೆ. ಅಸಂಖ್ಯಾತ ಸಂದರ್ಭಗಳಲ್ಲಿ 356ನೇ ವಿಧಿ ಹೇರಿದವರು, ಪತ್ರಿಕಾ ಸ್ವಾತಂತ್ರ್ಯ ನಾಶಮಾಡುವ ಮಸೂದೆಯನ್ನು ಪಡೆದವರು, ಫೆಡರಲಿಸಂ ಅನ್ನು ನಾಶಪಡಿಸಿದರು ಮತ್ತು ಸಂವಿಧಾನದ ಪ್ರತಿಯೊಂದು ಅಂಶವನ್ನು ಉಲ್ಲಂಘಿಸಿದವರು ಇದೇ ಜನರು.

    ತುರ್ತು ಪರಿಸ್ಥಿತಿಯನ್ನು ಹೇರಲು ಕಾರಣವಾದ ಮನಸ್ಥಿತಿಯು ಇನ್ನೂ ಕಾಂಗ್ರೆಸ್ ಪಕ್ಷದಲ್ಲಿ ಜೀವಂತವಾಗಿದೆ. ಅವರು ತಮ್ಮ ಟೋಕನಿಸಂ ಮೂಲಕ ಸಂವಿಧಾನದ ಬಗ್ಗೆ ತಮ್ಮ ತಿರಸ್ಕಾರ ಮನೋಭಾವವನ್ನು ಮರೆಮಾಚುತ್ತಾರೆ. ತುರ್ತು ಪರಿಸ್ಥಿತಿ ಹೇರಿದವರಿಗೆ ನಮ್ಮ ಸಂವಿಧಾನದ ಮೇಲಿನ ಪ್ರೀತಿಯನ್ನು ಹೇಳಿಕೊಳ್ಳುವ ಹಕ್ಕು ಇಲ್ಲ. ಆದ್ರೆ ದೇಶದ ಜನರು ಅವರ ಭಾವನೆಗಳನ್ನು ವರ್ತನೆಗಳ ಮೂಲಕ ನೋಡಿಕೊಂಡಿದ್ದಾರೆ. ಅದಕ್ಕಾಗಿಯೇ ಅವರು ದೇಶದಲ್ಲಿ ಕಾಂಗ್ರೆಸ್‌ ಪಕ್ಷವನ್ನ ತಿರಸ್ಕಾರ ಮಾಡಿದ್ದಾರೆ ಎಂದು ಕಿಡಿ ಕಾರಿದ್ದರು. ಇದನ್ನೂ ಓದಿ: ಅದಿರು ಕೊರತೆ ಆಗದಿರಲಿ; NMDC ಅಧಿಕಾರಿಗಳಿಗೆ ಕೇಂದ್ರ ಸಚಿವ ಹೆಚ್‌ಡಿಕೆ ನಿರ್ದೇಶನ

    ತುರ್ತುಪರಿಸ್ಥಿತಿ ಕರಾಳ ನೆನಪು:
    ʻತುರ್ತು ಪರಿಸ್ಥಿತಿʼಯು (Emergency 1975) ಸ್ವತಂತ್ರ ಭಾರತದ ಇತಿಹಾಸದಲ್ಲೊಂದು ಕರಾಳ ಅಧ್ಯಾಯವಾಗಿ ಉಳಿದುಕೊಂಡಿದೆ. 1975ರ ಜೂನ್‌ 25ರಂದು ಅಂದಿನ ರಾಷ್ಟ್ರಪತಿ ಫಕ್ರುದ್ದೀನ್‌ ಅಲಿ ಅಹಮದ್‌ ಅವರು ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ್ದರು. ಅಂದಿನ ಪ್ರಧಾನಿ ಇಂದಿರಾಗಾಂಧಿ (Indira Gandhi) ಅವರ ಸಲಹೆ ಮೇರೆಗೆ ಈ ಕ್ರಮ ತೆಗೆದುಕೊಂಡಿದ್ದರು. ತುರ್ತು ಪರಿಸ್ಥಿತಿ ಜಾರಿಯಾಗಿ ಕಳೆದ ಜೂನ್‌ 25ಕ್ಕೆ 49 ವರ್ಷ ತುಂಬಿದ್ದು, 50ನೇ ವರ್ಷ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನೆದು ಅಮಿತ್‌ ಶಾ ಅವರು, ʻಸಂವಿಧಾನ ಹತ್ಯಾ ದಿವಸ್‌ʼ ಆಚರಣೆ ಮಾಡುವಂತೆ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ‘ಕೈ’ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ – ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

  • ಮಂಕಿಪಾಕ್ಸ್ ಜಾಗತಿಕ ಆರೋಗ್ಯ ತುರ್ತುಪರಿಸ್ಥಿತಿಯಲ್ಲ, ಆದರೆ ಹರಡುವ ಭೀತಿಯಿದೆ: WHO

    ಮಂಕಿಪಾಕ್ಸ್ ಜಾಗತಿಕ ಆರೋಗ್ಯ ತುರ್ತುಪರಿಸ್ಥಿತಿಯಲ್ಲ, ಆದರೆ ಹರಡುವ ಭೀತಿಯಿದೆ: WHO

    ಬರ್ನ್: ಮಂಕಿಪಾಕ್ಸ್ ಪ್ರಸ್ತುತ ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿಯಲ್ಲ ಆದರೆ, ಇದು ವಿಕಸನಗೊಳ್ಳುತ್ತಿರುವುದು ಭೀತಿಗೆ ಕಾರಣವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ತಿಳಿಸಿದೆ.

    WHO ಡೈರೆಕ್ಟರ್ ಜನರಲ್, ಹಲವು ದೇಶಗಳಲ್ಲಿ ಏಕಾಏಕಿ ಹರಡುತ್ತಿರುವ ಮಂಕಿಪಾಕ್ಸ್ ಕುರಿತು ಐಹೆಚ್‌ಆರ್ ತುರ್ತು ಸಮಿತಿ ನೀಡಿದ ಸಲಹೆಯನ್ನು ಒಪ್ಪುತ್ತದೆ ಹಾಗೂ ಪ್ರಸ್ತುತ ಇದು ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯಾಗಿಲ್ಲ ಎಂದು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಯವಿಟ್ಟು ಸಹಾಯ ಮಾಡೋದನ್ನ ನಿಲ್ಲಿಸಬೇಡಿ- ಅಮೆರಿಕಾಗೆ ತಾಲಿಬಾನ್ ಬೇಡಿಕೆ

    who

    ಆದರೂ WHO ಮಹಾನಿರ್ದೇಶಕ ಟೆಡ್ರೋಸ್ ಅಧಾನೊಮ್ ಘೆಬ್ರೆಯೆಸಸ್ ಈ ಬಗ್ಗೆ ಆಳವಾದ ಕಳವಳ ವ್ಯಕ್ತಪಡಿಸಿದ್ದಾರೆ. ಮಂಕಿಪಾಕ್ಸ್ ವೈರಸ್ ಹರಡುವುದನ್ನು ತಡೆಯಲು ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಬಳಸಿಕೊಳ್ಳಬೇಕು, ಅಪಾಯದಲ್ಲಿರುವ ಪ್ರದೇಶಗಳಲ್ಲಿ ಆರೋಗ್ಯದ ಉಪಕರಣಗಳು ಲಭ್ಯವಿದೆ. ಇದನ್ನು ತುರ್ತಾಗಿ ಹಂಚಿಕೊಳ್ಳುವ ಮೂಲಕ ರೋಗದಿಂದ ಪಾರಾಗುವ ಅಗತ್ಯವಿದೆ ಎಂದು ಟ್ವಿಟ್ಟರ್‌ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ಸ್ಕೂಲ್ ಡೇಸ್‍ನಿಂದ ಪ್ರೀತಿಸಿದವಳ ಮೇಲೆ ಗುಂಡು ಹಾರಿಸಿದ – ಯುವತಿಗೆ ಗಂಭೀರ ಗಾಯ

    ಮಂಕಿಪಾಕ್ಸ್ ಇದೀಗ 50ಕ್ಕೂ ಹೆಚ್ಚು ದೇಶಗಳಲ್ಲಿ ಕಂಡುಬಂದಿದ್ದು, ಮೇ ತಿಂಗಳ ಆರಂಭದಿಂದ ಇಲ್ಲಿಯವರೆಗೆ ಸುಮಾರು 3,000 ಪ್ರಕರಣಗಳು ವರದಿಯಾಗಿದೆ.

    Live Tv

  • ಫ್ರೀಡಂ ಪಾರ್ಕಿಗೆ ಭೇಟಿ ನೀಡಿ ಜೈಲುವಾಸದ ದಿನಗಳ ನೆನಪಿಸಿಕೊಂಡ ಸಚಿವ ಅಶೋಕ್

    ಫ್ರೀಡಂ ಪಾರ್ಕಿಗೆ ಭೇಟಿ ನೀಡಿ ಜೈಲುವಾಸದ ದಿನಗಳ ನೆನಪಿಸಿಕೊಂಡ ಸಚಿವ ಅಶೋಕ್

    – ತುರ್ತುಪರಿಸ್ಥಿತಿ ಹೇರಿಕೆ ವಿರೋಧಿಸಿ ಕರಾಳ ದಿನ ಆಚರಣೆ

    ಬೆಂಗಳೂರು: ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ದೇಶದ ಮೇಲೆ ಹೇರಿದ್ದ ತುರ್ತುಪರಿಸ್ಥಿತಿಯನ್ನ ವಿರೋಧಿಸಿ ಇಂದು ಫ್ರೀಡಂ ಪಾರ್ಕ್ ನಲ್ಲಿ ಕಂದಾಯ ಸಚಿವ ಆರ್ ಅಶೋಕ್ ಅವರು ಕರಾಳ ದಿನ ಆಚರಣೆ ಮಾಡಿದರು.

    ಈ ವೇಳೆ ಅಂದಿನ ದಿನಗಳನ್ನ ನೆನಪಿಸಿಕೊಂಡು ಸಚಿವರು, ಜಯಪ್ರಕಾಶ್ ನಾರಾಯಣ್ ಅವರ ಕರೆಯ ಮೇರೆಗೆ ನಾನು ಮತ್ತು ನಮ್ಮ ಕಾಲೇಜಿನ ವಿದ್ಯಾರ್ಥಿ ನಾಯಕರುಗಳು ಯಶವಂತಪುರ ವೃತ್ತದ ಬಳಿ ತುರ್ತುಪರಿಸ್ಥಿತಿಯನ್ನ ವಿರೋಧಿಸಿ ಹೋರಾಟ ಮಾಡಿದ್ದೇವು. ಆ ವೇಳೆ ನಮ್ಮನ್ನ ಬಂಧಿಸಿ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು(ಇಂದಿನ ಫ್ರೀಡಂ ಪಾರ್ಕ್). ನಮ್ಮನ್ನ ಜೈಲಿಗೆ ಕರೆದುಕೊಂಡು ಬಂದ ನಂತರ ಕಂಬಳಿ ಹಾಗೂ ಅಲ್ಯೂಮಿನಿಯಂ ತಟ್ಟೆ ನೀಡಲಾಗಿತ್ತು. ನೆಲದ ಮೇಲೆ ಮಲಗುತ್ತಿದ್ದೇವು.

    ತಿನ್ನುವುದಕ್ಕೆ ರಾಗಿ ಮುದ್ದೆ ನೀಡುತ್ತಿದ್ದರು. ಅದು ಅಲ್ಪ ಆಹಾರ. ನಮಗೆಲ್ಲಾ ಒಂದೇ ಶೌಚಾಲಯವಿತ್ತು. ತುರ್ತುಪರಿಸ್ಥಿತಿಯಲ್ಲಿ ಗರ್ಭಿಣಿಯರನ್ನು ಕೂಡಾ ಶಿಕ್ಷಿಸಲಾಗಿತ್ತು. ನಮಗೆಲ್ಲಾ ಭವಿಷ್ಯವೇ ಮಸುಕಾಗಿತ್ತು. ಆ ವೇಳೆ 5 ರಿಂದ 6 ಸಾವಿರ ಜನ ಪ್ರಾಣ ಕಳೆದುಕೊಂಡರು. ಎಲ್.ಕೆ.ಅಡ್ವಾಣಿ, ವಾಜಪೇಯಿ, ದೇವೇಗೌಡರಂಥಹ ಹಿರಿಯ ನಾಯಕರು ಅಂದು ಜೈಲುವಾಸ ಅನುಭವಿಸಿದರು. ಅವರಿಂದೆಲ್ಲಾ ನಾವು ಸ್ಫೂರ್ತಿ ಪಡೆದೆವು. ಅಧಿಕಾರದಿಂದ ಕಾಂಗ್ರೆಸ್ ನ್ನು ಉಚ್ಛಾಟಿಸಿದ ನಂತರವಷ್ಟೇ ಜೈಲಿನಿಂದ ಬಿಡುಗಡೆ ಮಾಡಲಾಯಿತು. ನನ್ನ ಪ್ರಕಾರ ಆ ಹೋರಾಟ ಎರಡನೇ ಸ್ವಾತಂತ್ರ ಸಂಗ್ರಾಮ. ಅಂದು ಮತ್ತೊಮ್ಮೆ ಪ್ರಜಾಪ್ರಭುತ್ವವನ್ನ ಮರುಸ್ಥಾಪನೆ ಮಾಡಲಾಯಿತು ಎಂದು ಹೇಳಿದರು.

    ಅಂದು ತಾವು ಕಳೆದಿದ್ದ ಬಂಧಿಖಾನೆಗೆ ಭೇಟಿ ನೀಡಿದ ಅಶೋಕ, ತುರ್ತುಪರಿಸ್ಥಿತಿಯ ದಿನಗಳಲ್ಲಿ ಪೊಲೀಸರು ಅಮಾನವೀಯವಾಗಿ ವರ್ತನೆಗೆ ಪ್ರಾಣ ತೆತ್ತ ಸಾವಿರಾರು ಜನರಿಗೆ ಇಂದು ಮತ್ತೊಮ್ಮೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ. ಅಂದು ಕೇಂದ್ರ ಕಾರಾಗೃಹವನ್ನ ಸ್ಥಳಾಂತರಿಸಿ, ಫ್ರೀಡಂ ಪಾರ್ಕ್ ಎಂದು ಪರಿವರ್ತನೆ ಮಾಡಿದಾಗ ನಾನು ಗೃಹ ಸಚಿವ ಹಾಗೂ ಬೆಂಗಳೂರು ಉಸ್ತುವಾರಿ ಸಚಿವನಾಗಿದ್ದೆ. ಆ ನೆನಪಿಗಾಗಿ ಅಂದು ನಾವು ವಾಸವಿದ್ದ ಕೆಲ ಬಂಧಿಖಾನೆಗಳನ್ನ ಹಾಗೆಯೇ ಉಳಿಸಿಕೊಳ್ಳುವಂತೆ ಕೋರಿಕೊಂಡಿದ್ದೆ. ಇವುಗಳು ನಮ್ಮ ಮುಂದಿನ ಪೀಳಿಗೆಗೆ ಇತಿಹಾಸದಲ್ಲಿ ನಡೆದಿದ್ದ ಘೋರ ಘಟನೆಗಳಿಗೆ ಸಾಕ್ಷಿಯಾಗಿ ಉಳಿಯಲಿವೆ ಎಂಬುದು ನನ್ನ ಭಾವ ಎಂದರು.

    ನಂತರದಲ್ಲಿ ಸಚಿವ ಆರ್ ಅಶೋಕ್ ಅವರನ್ನು ಸೇರಿದಂತೆ ಅಂದು ಜೈಲುವಾಸ ಅನುಭವಿಸಿದ ಕೆಲವರಿಗೆ ಸನ್ಮಾನಿಸಿ ಗೌರವಿಸಲಾಯಿತು.