Tag: ತುಳು ಸಿನಿಮಾ

  • ‘ಗಜಾನನ ಕ್ರಿಕೆಟರ್ಸ್’ ಚಿತ್ರೀಕರಣ ಮೇ18ರಿಂದ ಶುರು

    ‘ಗಜಾನನ ಕ್ರಿಕೆಟರ್ಸ್’ ಚಿತ್ರೀಕರಣ ಮೇ18ರಿಂದ ಶುರು

    ಪ್ರಜ್ವಲ್ ಫಿಲಂಸ್ ನಿರ್ಮಾಣದ ಕೀರ್ತನ್ ಭಂಡಾರಿ (Keerthan Bhandary) ರಚಿಸಿ ನಿರ್ದೇಶಿಸುತ್ತಿರುವ ‘ಗಜಾನನ ಕ್ರಿಕೆಟರ್ಸ್’ ತುಳು ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಸೋಮವಾರ (ಮೇ 15)ರಂದು ಸಂಜೆ ಲಾಲ್ ಭಾಗ್‌ನಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ನಡೆಯಿತು.

    ಚಿತ್ರರಂಗದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಅಂಡರ್ ಆರ್ಮ್ ಕ್ರಿಕೆಟ್ ಜಗತ್ತನ್ನು ತೆರೆದಿಡುವಂತಹ ಪ್ರಯತ್ನವನ್ನು ಈ ಚಿತ್ರತಂಡ ಮಾಡುತ್ತಿದ್ದು, ಚಿತ್ರವು ಹಾಸ್ಯಮಯ ಕಥಾಹಂದರವನ್ನು ಹೊಂದಿದ್ದು ಕುಟುಂಬ ಸಮೇತ ನೋಡುವಂತಹ ಚಿತ್ರ ಇದಾಗಿರುತ್ತದೆ. ಕ್ರಿಕೆಟ್ ಪ್ರೇಮಿಗಳಿಗೆ ಮನೋರಂಜನೆ ನೀಡುವಂತಹ ಹಲವಾರು ಸನ್ನಿವೇಶಗಳು ಚಿತ್ರದಲ್ಲಿದೆ. ಈ ಚಿತ್ರದ ಚಿತ್ರೀಕರಣವು ಮೇ 18ರಿಂದ ಮಂಗಳೂರಿನಾದ್ಯಂತ ನಡೆಯಲಿದ್ದು, ಅತೀ ಶೀಘ್ರದಲ್ಲಿ ಬೆಳ್ಳಿತರೆಗೆ ಬರಲಿದೆ. ನಾನು ಚಿತ್ರದ ಕಥೆಯನ್ನು ಒಪ್ಪಿಕೊಂಡು ಅದರ ಭಾಗವಾಗಿದ್ದೇನೆ ಎಂದು ತುಳು ರಂಗಭೂಮಿಯ ಹಿರಿಯ ನಟ ಭೋಜರಾಜ್ ವಾಮಂಜೂರ್ ಹೇಳಿದರು. ಇದನ್ನೂ ಓದಿ:ಮುರಿದು ಬಿತ್ತಾ ತೆಲುಗು ನಟ ಶರ್ವಾನಂದ್ ನಿಶ್ಚಿತಾರ್ಥ?

    ಚಿತ್ರದ ನಾಯಕ ನಟನಾಗಿ ವಿನೀತ್ ಕುಮಾರ್ (Vineeth Kumar) ನಟಿಸುತ್ತಿದ್ದು, ಇವರಿಗೆ ನಾಯಕಿಯರಾಗಿ ಅನ್ವಿತಾ ಸಾಗರ್ – ಸಮತ ಅಮೀನ್ ಜೊತೆಯಾಗಲಿದ್ದಾರೆ. ತಾರಾಗಣದಲ್ಲಿ ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ ವಾಮಂಜೂರು, ಪ್ರಕಾಶ್ ತುಮಿನಾಡು, ದೀಪಕ್ ರೈ, ಉಮೇಶ್ ಮಿಜಾರ್, ಸಂದೀಪ್ ಶೆಟ್ಟಿ ಮಾಣಿಬೆಟ್ಟು ಕಾಣಿಸಿಕೊಳ್ಳಲಿದ್ದಾರೆ. ಪ್ರಸನ್ನ ಶೆಟ್ಟಿ ಬೈಲೂರು ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ಮಾಡಲಿಂಗ್ ಕ್ಷೇತ್ರದಲ್ಲಿ ಖ್ಯಾತಿ ಪಡೆದಿರುವ 2018ರ ಮಿಸ್ಟರ್ ದುಬೈ ಕಿರೀಟ ಮುಡಿಗೇರಿಸಿಕೊಂಡಿರುವ ಪ್ರಜ್ವಲ್ ಶೆಟ್ಟಿ ಅವರು ಮೊಟ್ಟ ಮೊದಲ ಬಾರಿಗೆ ಖಳನಾಯಕರಾಗಿ ನಟಿಸಲಿದ್ದಾರೆ ಎಂದು ಚಿತ್ರ ನಿರ್ದೇಶಕ ಕೀರ್ತನ್ ಭಂಡಾರಿ ಮಾಹಿತಿ ನೀಡಿದರು.

    ಚಾರ್ಲಿ 777, ಒಂದು ಮೊಟ್ಟೆಯ ಕಥೆ, ಗಿರಿಗಿಟ್ (Girgit) ಹಾಗೂ ಹಲವಾರು ಕನ್ನಡ ಮತ್ತು ತುಳು ಚಿತ್ರಗಳಿಗೆ (Tulu Films) ಸಾಹಿತ್ಯ ಬರೆದಿರುವ ಕೀರ್ತನ್ ಭಂಡಾರಿ ಅವರು ಮೊದಲ ಬಾರಿಗೆ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ 5 ಹಾಡುಗಳಿದ್ದು ಸೃಜನ್ ಕುಮಾರ್ ತೋನ್ಸೆ ಸಂಗೀತ ಸಂಯೋಜನೆ ಮಾಡುತ್ತಿದ್ದು, ಚಿತ್ರಕ್ಕೆ ನಿರಂಜನ್ ದಾಸ್ ಛಾಯಾಗ್ರಹಣ ಇರಲಿದೆ.

  • ಕನ್ನಡದ `ಕಾಂತಾರ’ ತುಳು ಭಾಷೆಯಲ್ಲಿ ಇಂದು ರಿಲೀಸ್

    ಕನ್ನಡದ `ಕಾಂತಾರ’ ತುಳು ಭಾಷೆಯಲ್ಲಿ ಇಂದು ರಿಲೀಸ್

    ರಿಷಬ್ ಶೆಟ್ಟಿ (Rishab Shetty)ನಿರ್ದೇಶನದ ‘ಕಾಂತಾರ’ (Kantara) ಕನ್ನಡ ಚಿತ್ರ ದೇಶ, ವಿದೇಶಗಳಲ್ಲೂ ಭಾರಿ ಪ್ರಮಾಣದಲ್ಲಿ ಗಲ್ಲಾಪೆಟ್ಟಿಗೆ ಕಲೆಕ್ಷನ್ ಮಾಡಿ, ಮುಂದುವರಿಯುತ್ತಿದ್ದಂತೆ ಇತ್ತ ಕರಾವಳಿಯ ತುಳು ಭಾಷೆಗೂ ಡಬ್ಬಿಂಗ್ ಆಗಿ ‘ಕಾಂತಾರ’ ಹೆಸರಿನಲ್ಲೆ (ಡಿ.2) ಇಂದಿನಿಂದ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ.

    ಈಗಾಗಲೇ ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತಿತರ ಭಾಷೆಗಳಲ್ಲಿ ಡಬ್ ಆಗಿ ಕೋಟ್ಯಾಂತರ ಮೊತ್ತ ಬಾಚುತ್ತಿರುವ, ಹಿಂದಿನ ಎಲ್ಲ ಸಿನಿಮಾಗಳ ದಾಖಲೆ ಹಿಂದಿಕ್ಕುತ್ತಿರುವ `ಕಾಂತಾರ’ ಸಿನಿಮಾ ಕರಾವಳಿ ನೆಲದ ಭಾಷೆಯಲ್ಲಿ ಇದೇ ಮೊದಲ ಬಾರಿಗೆ ತೆರೆ ಕಾಣುತ್ತಿದೆ. ಅದು ಕೂಡ ಕರಾವಳಿ ಹಾಗೂ ಕರಾವಳಿಗರೇ ಹೆಚ್ಚಾಗಿ ಇರುವ ವಿದೇಶಿ ಟಾಕೀಸ್‌ಗಳಲ್ಲಿ ಎಂಬುದು ಗಮನಾರ್ಹ. ದುಬೈನಲ್ಲಿ ಈಗಾಗಲೇ ತುಳುವಿನಲ್ಲಿ ತೆರೆ ಕಂಡಿದೆ. ಇದನ್ನೂ ಓದಿ: `ಬಿಗ್ ಬಾಸ್’ ಜಯಶ್ರೀ ಆರಾಧ್ಯ ಮನೆ ಗೃಹಪ್ರವೇಶದ ಸಂಭ್ರಮ

     

    View this post on Instagram

     

    A post shared by Hombale Films (@hombalefilms)

    ಬುಕ್ ಮೈ ಶೋದಲ್ಲಿ `ಕಾಂತಾರ’ ತುಳು ಪೋಸ್ಟರ್ ಸದ್ದು ಮಾಡುತ್ತಿದೆ. ಟಿಕೆಟ್ ಸೋಲ್ಡ್ ಔಟ್ ಆಗಿದೆ. ದಕ್ಷಿಣ ಕನ್ನಡದಲ್ಲಿ ಮಂಗಳೂರು, ಉಡುಪಿ ಸೇರಿದಂತೆ ಎಲ್ಲಾ ಭಾಗಗಳಲ್ಲೂ ಸಿನಿಮಾ ತೆರೆ ಕಂಡಿದ್ದು, ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಬೆಂಗಳೂರಿನ ಹಲವು ಮಾಲ್‌ಗಳಲ್ಲಿ `ಕಾಂತಾರ’ (Kanatara Tulu) ತುಳುವಿನಲ್ಲಿ ರಿಲೀಸ್ ಆಗಿದೆ.

     

    View this post on Instagram

     

    A post shared by Hombale Films (@hombalefilms)

    ದೈವದ ಕಥೆ ಹೊತ್ತ `ಕಾಂತಾರ’ ತುಳು ನಾಡಿನಲ್ಲಿಯೇ ತೆರೆ ಕಂಡಿದೆ. ರಿಷಬ್ ಶೆಟ್ಟಿ ನಟನೆಯ ಮೊದಲ ಸಿನಿಮಾ ಇದಾಗಿದ್ದು, ಅದೆಷ್ಟರ ಮಟ್ಟಿಗೆ ಸೌಂಡ್ ಮಾಡಲಿದೆ ಎಂಬುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ತುಳುವಿನಲ್ಲೂ ರಿಲೀಸ್ ಆಗಲಿದೆ `ಕಾಂತಾರ’: ರಿಲೀಸ್ ಡೇಟ್ ಫಿಕ್ಸ್

    ತುಳುವಿನಲ್ಲೂ ರಿಲೀಸ್ ಆಗಲಿದೆ `ಕಾಂತಾರ’: ರಿಲೀಸ್ ಡೇಟ್ ಫಿಕ್ಸ್

    ರಿಷಬ್ ಶೆಟ್ಟಿ(Rishab Shetty) ನಿರ್ದೇಶಿಸಿ, ನಟಿಸಿರುವ `ಕಾಂತಾರ'(Kantara Film) ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕೋಟಿ ಕೋಟಿ ಲೂಟಿ ಮಾಡುತ್ತಿದೆ. `ಕಾಂತಾರ’ ಕನ್ನಡದಲ್ಲಿ ಕಮಾಲ್ ಮಾಡಿದ ಬೆನ್ನಲ್ಲೇ ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲೂ ಡಬ್ ಆಗಿ ತೆರೆಕಂಡಿತ್ತು. ಇದೀಗ ತುಳು ಭಾಷೆಯಲ್ಲೂ ಡಬ್ ಆಗಲಿದೆ. ಸದ್ಯದಲ್ಲೇ ತೆರೆಗೆ ಅಪ್ಪಳಿಸಲಿದೆ.

    ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ `ಕಾಂತಾರ’ ಸೂಪರ್ ಸಕ್ಸಸ್ ಖುಷಿಯಲ್ಲಿದ್ದಾರೆ. ಕನ್ನಡದ `ಕಾಂತಾರ'(Kantara Film) ಕಂಪು ಪಸರಿಸಿದ ಮೇಲೆ ಬಹುಭಾಷೆಯಲ್ಲಿ ಡಬ್ ಆಗಿ ರಿಲೀಸ್ ಬಳಿಕ ಗಲ್ಲಾಪೆಟ್ಟಿಗೆ ಕೋಟಿಗಟ್ಟಲ್ಲೇ ಕಲೆಕ್ಷನ್ ಮಾಡಿತ್ತು. ದೈವದ ಕಥೆಯಾಗಿರುವ `ಕಾಂತಾರ’ ತುಳುವಿನಲ್ಲಿಯೂ ತೆರೆ ಕಾಣುತ್ತಿದೆ. ಇದನ್ನೂ ಓದಿ:ಧ್ರುವ ಸರ್ಜಾ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ರಾಧನಾ ರಾಮ್ ನಾಯಕಿ

    ಹೊಂಬಾಳೆ ಬ್ಯಾನರ್‌ನ `ಕಾಂತಾರ’ ಸಿನಿಮಾ ತುಳು ಭಾಷೆಯಲ್ಲೂ ಕೂಡ ಡಬ್ ಆಗಲಿದೆ. ಈಗಾಗಲೇ ಡಬ್ಬಿಂಗ್ ಪ್ರಕ್ರಿಯೆ ಕೂಡ ಶುರುವಾಗಿದೆ. ಸೆನ್ಸಾರ್ ಬಳಿಕ ಡಿಸೆಂಬರ್ ಮೊದಲ ವಾರದಲ್ಲಿ `ಕಾಂತಾರ’ ತುಳುವಿನಲ್ಲಿ ತೆರೆ ಕಾಣಲಿದೆ.

    ಇನ್ನೂ `ಕಾಂತಾರ’ ದೇಶದ ಎಲ್ಲೆಡೆ ಸಂಚಲನ ಮೂಡಿಸುತ್ತಿದೆ. ವರ್ಲ್ಡ್ ವೈಡ್ ಕಲೆಕ್ಷನ್ 367 ಕೋಟಿ ರೂ. ಕಲೆಕ್ಷನ್ ಮಾಡಿ 400 ಕೋಟಿ ರೂ. ಕಲೆಕ್ಷನ್ ಮಾಡುತ್ತ ರಿಷಬ್ ಶೆಟ್ಟಿ ಸಿನಿಮಾ ಮುನ್ನುಗ್ಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಸುರೇಂದ್ರನನ್ನ ನಾನೇ ಕೊಂದಿದ್ದು – ಪೊಲೀಸರಿಗೆ ಆಡಿಯೋ ಕಳುಹಿಸಿದ ಆರೋಪಿ

    ಸುರೇಂದ್ರನನ್ನ ನಾನೇ ಕೊಂದಿದ್ದು – ಪೊಲೀಸರಿಗೆ ಆಡಿಯೋ ಕಳುಹಿಸಿದ ಆರೋಪಿ

    ಮಂಗಳೂರು: ತುಳು ಚಿತ್ರ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಆರೋಪಿ ಸತೀಶ್ ಕುಲಾಲ್ ಎಂಬಾತ ಪೊಲೀಸರಿಗೆ ಆಡಿಯೋ ಕಳುಹಿಸಿದ್ದಾನೆ. ಆಡಿಯೋದಲ್ಲಿ ಸುರೇಂದ್ರನನ್ನ ಕೊಲೆ ಮಾಡಿರೋದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ

    ಆಡಿಯೋದಲ್ಲಿ ಏನಿದೆ?
    ನಮಸ್ತೆ ನಾನು ಸತೀಶ್ ಮಾತನಾಡೋದು. ನಿನ್ನೆ ರಾತ್ರಿ ವಸ್ತಿ ಅಪಾರ್ಟ್ ಮೆಂಟ್ ನಲ್ಲಿ ಸುರೇಂದ್ರನ ಹತ್ಯೆಯಾಗಿದೆ. ಇದನ್ನು ನಾನೇ ಮಾಡಿದ್ದು. ಇದು ಕಿಶನ್ ಹೆಗ್ಡೆ ಸಾವಿನ ಪ್ರತೀಕಾರ. ಸುರೇಂದ್ರ ಬಡ್ಡಿ ವ್ಯವಹಾರ ಮಾಡಿ ಇಂತಹ ಪಾಪದ ಜನರ ಸಾವಿಗೆ ಉಪಯೋಗಿಸುತ್ತಿದ್ದ. ನಾನು 22 ವರ್ಷದಿಂದ ಸುರೇಂದ್ರನ ಒಟ್ಟಿಗೆ ಇದ್ದವನು. ಅವನ ಎಲ್ಲ ಅವ್ಯವಹಾರಗಳು ಗೊತ್ತಿತ್ತು. ಮೊನ್ನೆ ನಡೆದ ಕಿಶನ್ ಹೆಗ್ಡೆ ಕೊಲೆಯಲ್ಲಿ ಇವನು ಹಣದ ಸಹಾಯ ಮಾಡಿದ್ದ ವಿಷಯ ನನಗೆ ತಿಳಿದಿತ್ತು.

    ನಾನು ಅವನ ಹತ್ತಿರ ಹೇಳಿದ್ದೆ. ನೀನು ತಪ್ಪು ಮಾಡ್ತಾ ಇದ್ದೀಯ ಸುರೇಂದ್ರ. ನಿನಗೆ ಬೇಡದ ವಿಷಯ. ಆಗ ಈ ವಿಷಯ ಹೊರಗಡೆ ಹೇಳಿದ್ರೆ ನಿನ್ನನ್ನು ಸಾಯಿಸುತ್ತೇನೆ ಅಂತಾ ಬೆದರಿಕೆ ಹಾಕಿದ್ದ. ಮೊನ್ನೆ ಅನಾಮಿಕನಿಗೆ ಕರೆ ಮಾಡಿ ಜೈಲಿನಲ್ಲಿರೋ ಮನೋಜನಿಗೆ ಹಣ, ಬಟ್ಟೆ ಕೊಡಲಿಕ್ಕಿದೆ. ಇದಕ್ಕೆ ನಿಮ್ಮ ಸಹಾಯ ಬೇಕು ಅಂತಾ ಹೇಳುತ್ತಿದ್ದ. ಮತ್ತೊಂದು ದಿನ ಅವರಿಗೆ ಕರೆ ಮಾಡಿ ಬಟ್ಟೆ, ಹಣ ತಲುಪಿಸಿದ್ದೇನೆ. ಸಹಾಯ ಮಾಡಿದ್ದಕ್ಕಾಗಿ ಥ್ಯಾಂಕ್ಸ್ ಅಂತಾ ಹೇಳಿದ್ದನ್ನು ನಾನು ಕೇಳಿದ್ದೇನೆ. ಇದನ್ನೂ ಓದಿ: ಹಾಡಹಗಲೇ ಕಿಶನ್ ಹೆಗ್ಡೆ ಕತ್ತು ಕತ್ತರಿಸಿ ಬರ್ಬರ ಕೊಲೆ

    ಈ ವಿಚಾರದಲ್ಲಿ ನಾನು ಕಿಶನ್ ಜೊತೆ ಇದ್ದ ನನ್ನ ಗೆಳೆಯನಿಗೆ ಕರೆ ಮಾಡಿ ತಿಳಿಸಿದೆ. ಅವನಿಗೆ ಈ ವಿಚಾರದಲ್ಲಿ ಕೋಪ ಮತ್ತು ಬೇಸರ ಕೂಡ ಇತ್ತು. ಇವನು ಇದೇ ರೀತಿ ಇದ್ದರೆ ಸುರೇಂದ್ರ ಮತ್ತು ಕೋಡಿಕೆರೆ ಮನೋಜನಿಂದ ಹಲವು ಯುವಕರ ಕೊಲೆಯಾಗುವುದರಲ್ಲಿ ಸಂಶಯವಿಲ್ಲ. ಅದಕ್ಕಾಗಿ ನಾವು ಈ ಕೊಲೆ ಮಾಡಿದ್ದೇವೆ. ನಾವೀಗ ಕಾರವಾರದಲ್ಲಿದ್ದೇವೆ. ನಮಗೆ ಏನು ಮಾಡಬೇಕೆಂದು ತೋಚದೆ ಇಲ್ಲಿಗೆ ಬಂದಿದ್ದೇವೆ. ಇನ್ನೊಂದೆರಡು ದಿವಸದಲ್ಲಿ ಪೊಲೀಸರಿಗೆ ಶರಣಾಗತ್ತೇವೆ ಎಂದು ಸತೀಶ್ ಹೇಳಿದ್ದಾನೆ.

    ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಲ್ಲಿ ಸುರೇಂದ್ರ ಅವರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕನ್ನಡ ಚಿತ್ರ ಸವರ್ಣದೀರ್ಘ ಸಂಧಿ ಸೇರಿದಂತೆ ಹಲವು ತುಳು ಚಿತ್ರಗಳಲ್ಲಿ ನಟಿಸಿದ್ದ ಸುರೇಂದ್ರ ಬಂಟ್ವಾಳ್ ಕಳೆದ 2018ರ ಜೂನ್‍ನಲ್ಲಿ ಪ್ರಕರಣವೊಂದರಲ್ಲಿ ಜೈಲು ಸೇರಿದ್ದರು. ಬಂಟ್ವಾಳ ಪೇಟೆಯಲ್ಲಿ ತಲವಾರು ಹಿಡಿದು ಬಿಜೆಪಿ ಕಾರ್ಯಕರ್ತರಿಗೆ ಬಂಟ್ವಾಳ್ ಬೆದರಿಕೆ ಹಾಕಿದ್ದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಸುರೇಂದ್ರ ಹೊರಬಂದಿದ್ದರು.