Tag: ತುಳು

  • ‘ಕಾಂತಾರ’ ತುಳುವಿನಲ್ಲಿ ಬಿಡುಗಡೆ ಆಗುವುದು ಪಕ್ಕಾ ಎಂದ ರಿಷಬ್ ಶೆಟ್ಟಿ

    ‘ಕಾಂತಾರ’ ತುಳುವಿನಲ್ಲಿ ಬಿಡುಗಡೆ ಆಗುವುದು ಪಕ್ಕಾ ಎಂದ ರಿಷಬ್ ಶೆಟ್ಟಿ

    ನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಕಾಂತಾರ (Kantara) ಸಿನಿಮಾ ರಿಲೀಸ್ ಆಗಿದೆ. ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಡಬ್ (Dubbed) ಆಗಿ ಸಿನಿಮಾ ಬಿಡುಗಡೆ ಆಗಿದ್ದು, ಬಹುತೇಕ ಕಡೆ ಹೌಸ್ ಫುಲ್ ಪ್ರದರ್ಶನ ಕಂಡಿದೆ. ತುಳುನಾಡಿನ ಆರಾದ್ಯ ದೈವದ ಕುರಿತಾದ ಸಿನಿಮಾ ಇದಾಗಿದ್ದರಿಂದ, ಈ ಸಿನಿಮಾವನ್ನು ತುಳುವಿಗೂ ಡಬ್ ಮಾಡಬೇಕು ಎನ್ನುವುದು ನಿರ್ಮಾಪಕ ವಿಜಯ್ ಕಿರಗಂದೂರು ಆಸೆಯಂತೆ. ಹಾಗಾಗಿ ಈ ಸಿನಿಮಾವನ್ನು ತುಳುವಿಗೂ ಡಬ್ ಮಾಡುತ್ತಾರಂತೆ ಚಿತ್ರತಂಡ.

    ಈ ಕುರಿತು ಧರ್ಮಸ್ಥಳದಲ್ಲಿ ಮಾತನಾಡಿದ ರಿಷಬ್ ಶೆಟ್ಟಿ (Rishabh Shetty), ‘ಕಾಂತಾರ ಸಿನಿಮಾವನ್ನು ತುಳು ಭಾಷೆಗೆ ಡಬ್ ಮಾಡಬೇಕು ಎನ್ನುವುದು ನಿರ್ಮಾಪಕರ ಆಸೆ. ಹಾಗಾಗಿ ಈ ಚಿತ್ರವನ್ನು ತುಳುಗೆ (Tulu) ಡಬ್ ಮಾಡಲಾಗುತ್ತದೆ. ಈಗಾಗಲೇ ಸಿನಿಮಾ ಎಲ್ಲ ಕಡೆ ಪ್ರದರ್ಶನ ಕಂಡಿದೆ. ದಾಖಲೆ ರೀತಿಯಲ್ಲಿ ಗೆಲುವು ಸಾಧಿಸಿದೆ. ಇದೆಲ್ಲ ಸಾಧ್ಯವಾಗಿದ್ದು ದೈವದ ಕಾರಣದಿಂದ. ಹಾಗಾಗಿ ಈ ಸಿನಿಮಾವನ್ನು ತುಳುವಿನಲ್ಲೂ ಡಬ್ ಮಾಡಲ ಯೋಚನೆ ಮಾಡಿದ್ದೇವೆ. ಆದಷ್ಟು ಬೇಗ ಮಾಡಲಾಗುವುದು’ ಎಂದಿದ್ದಾರೆ. ಇದನ್ನೂ ಓದಿ:ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ವಿಜಯ್ ದೇವರಕೊಂಡ- ರಶ್ಮಿಕಾ

    ಕಾಂತಾರ ಸಿನಿಮಾದಲ್ಲಿ ಕ್ಲೈಮ್ಯಾಕ್ಸ್ ನಲ್ಲಿ ಬರುವ ವರಾಹ ರೂಪಂ ಹಾಡಿನ ವಿವಾದ ಕುರಿತು ಈ ಸಂದರ್ಭದಲ್ಲಿ ಮಾತನಾಡಿರುವ ರಿಷಬ್, ‘ನಾವು ಕದ್ದಿಲ್ಲ. ಸುಖಾಸುಮ್ಮನೆ ಜನರನ್ನು ಹಾದಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಯಾರೇ ಕೇಳಿದರೂ, ನಾವು ಅದನ್ನು ಕದ್ದ ಹಾಡಲ್ಲ ಎಂದು ಸಾಬೀತು ಪಡಿಸುತ್ತೇವೆ ಎಂದು ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಧರ್ಮಸ್ಥಳದ ಮಂಜುನಾಥನ ದರ್ಶನಕ್ಕೆ ಆಗಮಿಸಿದ್ದ ರಿಷಬ್ ಶೆಟ್ಟಿ ದಂಪತಿ, ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಯಾವುದೇ ಕಾರಣಕ್ಕೂ ಅದು ಕದ್ದ ಮ್ಯೂಸಿಕ್ ಅಲ್ಲ ಎಂದು ನುಡಿದಿದ್ದಾರೆ.

    ಕಾಂತಾರ ಸಿನಿಮಾ ಅಂದಾಕ್ಷಣ ಥಟ್ಟನೆ ನೆನಪಾಗುವ ಹಾಡು ‘ವರಾಹ ರೂಪಂ’ ಗೀತೆ. ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಬರುವ ಈ ಗೀತೆಯು ಸಿನಿಮಾದ ಗಟ್ಟಿತನವನ್ನು ಮತ್ತಷ್ಟು ಹೆಚ್ಚಿಸಿತ್ತು. ಕ್ಲೈಮ್ಯಾಕ್ಸ್ ಜನರ ಮನಸ್ಸಿನಲ್ಲಿ ಉಳಿದುಕೊಳ್ಳಲು ಕಾರಣವೂ ಆಗಿತ್ತು. ಈ ಹಾಡಿನ ವಿರುದ್ಧ ಟ್ಯೂನ್ ಕದ್ದ ಆರೋಪ ಕೇಳಿ ಬಂದಿತ್ತು. ಇತ್ತೀಚೆಗಷ್ಟೇ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್‍ ನ ಸದಸ್ಯರು ಕೋರ್ಟಿಗೆ ಮೊರೆ ಹೋಗಿದ್ದರು. ಹಾಗಾಗಿ ಕೋಯಿಕ್ಕೋಡ್ ಕೋರ್ಟ್ ಸಿನಿಮಾದಲ್ಲಿ ಈ ಹಾಡು ಬಳಸದಂತೆ ತಡೆಯಾಜ್ಞೆ ನೀಡಿತ್ತು.

    ಆದರೂ, ಕಾಂತರ ಸಿನಿಮಾದ ತಂಡ ನಾವು ಯಾವುದೇ ರೀತಿಯಲ್ಲಿ ಹಾಡನ್ನು ಕಾಪಿ ಮಾಡಿಲ್ಲ. ಹಾಗಾಗಿ ಚಿತ್ರದಲ್ಲಿ ಆ ಹಾಡು ಇರತ್ತೆ ಎಂದು ಈವರೆಗೂ ಥಿಯೇಟರ್ ನಲ್ಲಿ ಅದನ್ನು ಮುಂದುವರೆಸಿಕೊಂಡು ಬಂದಿದ್ದರು. ಇದೀಗ ಮತ್ತೊಂದು ಕೇಸ್ ದಾಖಲಾಗಿದ್ದು, ಮಾತೃಭೂಮಿ ಮ್ಯೂಸಿಕ್ ಸಂಸ್ಥೆಯು ಮತ್ತೆ ಕೋರ್ಟ್ ಮೊರೆ ಹೋಗಿದೆ. ಹಾಗಾಗಿ ಅರ್ಜಿಯ ವಿಚಾರಣೆ ನಡೆಸಿರುವ ಪಾಲಕ್ಕಾಡ್ ಕೋರ್ಟ್ ಮುಂದಿನ ಆದೇಶ ಬರುವವರೆಗೂ ಈ ಹಾಡನ್ನು ಎಲ್ಲಿಯೂ ಹಂಚಿಕೆ ಮಾಡುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • ತಮಿಳು, ತೆಲುಗಿನಲ್ಲಿ ಇಂದು ‘ಕಾಂತಾರ’ದ ಅಬ್ಬರ: ಬಾಲಿವುಡ್ ಈಗಾಗಲೇ ಫಿದಾ

    ತಮಿಳು, ತೆಲುಗಿನಲ್ಲಿ ಇಂದು ‘ಕಾಂತಾರ’ದ ಅಬ್ಬರ: ಬಾಲಿವುಡ್ ಈಗಾಗಲೇ ಫಿದಾ

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾ ಇಂದಿನಿಂದ ತಮಿಳು ಮತ್ತು ತೆಲುಗಿನಲ್ಲಿ ಪ್ರದರ್ಶನ ಕಾಣುತ್ತಿದೆ. ನೂರಾರು ಚಿತ್ರಮಂದಿರಗಳಲ್ಲಿ ರಿಲೀಸ್ (Release) ಆಗಿರುವ ಚಿತ್ರವನ್ನು ಕಣ್ತುಂಬಿಕೊಳ್ಳಲು ತೆಲುಗು ಹಾಗೂ ತಮಿಳು ಪ್ರೇಕ್ಷಕರು ತುದಿಗಾಲಲ್ಲಿ ಕಾಯುತ್ತಿದ್ದರು. ಎರಡೂ ಸಿನಿಮಾ ರಂಗದ ಅನೇಕ ಕಲಾವಿದರು ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸಿದ್ದರಿಂದ ಸಹಜವಾಗಿಯೇ ಸಿನಿಮಾದ ಬಗ್ಗೆ ಕ್ರೇಜ್ ಕ್ರಿಯೇಟ್ ಆಗಿತ್ತು. ಇಂದು ಕುತೂಹಲಕ್ಕೆ ತೆರೆ ಬಿದ್ದಿದೆ.

    ಕನ್ನಡದಲ್ಲಿ ಕಾಂತಾರ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ. ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳು ಕಳೆಯುತ್ತಿದ್ದರೂ, ಇವತ್ತಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸದ್ಯದಲ್ಲೇ ನೂರು ಕೋಟಿ ಕ್ಲಬ್ ಸೇರುವ ಸಿನಿಮಾವಾಗಿಯೂ ಹೊರ ಹೊಮ್ಮಲಿದೆ. ಈ ಹೊತ್ತಿನಲ್ಲಿ ನಿನ್ನೆ ಹಿಂದಿಯಲ್ಲಿ (Hindi), ಇಂದು ತಮಿಳು ಮತ್ತು ತೆಲುಗಿನಲ್ಲಿ ಈ ಸಿನಿಮಾ ರಿಲೀಸ್ ಆಗಿದೆ. ತಮಿಳು ಮತ್ತು ತೆಲುಗಿಗಿಂತ ಹಿಂದಿಯಲ್ಲೇ ಅಧಿಕ ಸಂಖ್ಯೆಯಲ್ಲಿ ಚಿತ್ರಮಂದಿರಗಳು ಸಿಕ್ಕಿವೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ರೂಪೇಶ್ ರಾಜಣ್ಣ ಮೇಲೆ ಪ್ರಶಾಂತ್ ಸಂಬರ್ಗಿ ವಾಗ್ದಾಳಿ

    ತನ್ನ ಇಡೀ ಟೀಮ್ ಕಟ್ಟಿಕೊಂಡು ರಿಷಬ್ ಶೆಟ್ಟಿ ಬಾಲಿವುಡ್ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈಗಾಗಲೇ ಭಾರತೀಯ ಸಿನಿಮಾ ರಂಗದ ಬಹುತೇಕ ನಟರು ಕಾಂತಾರದ ಬಗ್ಗೆ ಮಾತನಾಡುತ್ತಿರುವುದರಿಂದ ದಕ್ಷಿಣದ ಅಷ್ಟೂ ಭಾಷೆಗಳಲ್ಲೂ ಸಿನಿಮಾ ಗೆಲ್ಲಲಿದೆ ಎನ್ನುವುದು ಸದ್ಯಕ್ಕಿರುವ ಲೆಕ್ಕಾಚಾರ. ಅದರಲ್ಲೂ ಮಲಯಾಳಂನಲ್ಲಿ ದೈವಾರಾಧನೆ, ಭೂತಕೋಲ ಸೇರಿದಂತೆ ಇತರ ಆಚರಣೆಗಳು ಇರುವುದರಿಂದ ಅಲ್ಲಿಗೆ ಈ ಸಿನಿಮಾ ಇನ್ನೂ ಹತ್ತಿರವಾಗಲಿದೆ.

    ನಿರ್ಮಾಪಕ ವಿಜಯ್ ಕಿರಗಂದೂರು (Vijay Kiraganduru) ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಿಂದಿಯಲ್ಲೂ ಚಿತ್ರ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ. ಈ ಎಲ್ಲ ಸಿನಿಮಾಗಳಿಗೆ ಕೆಜಿಎಫ್ ಯಶಸ್ಸು ಮುನ್ನುಡಿ ಬರೆದಿತ್ತು. ಕಾಂತಾರದ ಮೂಲಕ ಆ ನಂಬಿಕೆ ಇನ್ನಷ್ಟು ಗಟ್ಟಿಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ತುಳು ಭಾಷೆಯಲ್ಲೂ ಬರಲಿದೆ ‘ಕಾಂತಾರ’: ಶೆಟ್ರೇ ಉಡಲ್ ಗೆಂದಿಯರ್

    ತುಳು ಭಾಷೆಯಲ್ಲೂ ಬರಲಿದೆ ‘ಕಾಂತಾರ’: ಶೆಟ್ರೇ ಉಡಲ್ ಗೆಂದಿಯರ್

    ನ್ನಡದಲ್ಲಿ ಸೂಪರ್ ಹಿಟ್ ಆಗಿ, ಸದ್ಯ ಹಿಂದಿಯಲ್ಲಿ (Hindi) ಬಿಡುಗಡೆ ಆಗಿರುವ, ನಾಳೆ ತಮಿಳು ಮತ್ತು ತೆಲುಗಿನಲ್ಲೂ ಅಬ್ಬರಿಸಲಿರುವ ಕಾಂತಾರ (Kantara) ಸಿನಿಮಾ ತುಳು ಭಾಷೆಗೂ ಡಬ್ ಆಗಲಿದೆ. ಇಂಥದ್ದೊಂದು ಖುಷಿ ಸಂಗತಿಯನ್ನು ಕೊಡಲು ಚಿತ್ರತಂಡ ನಿರ್ಧರಿಸಿದೆ. ಕರಾವಳಿಯ ಭಾಷೆ, ಆಚಾರ ವಿಚಾರ, ಅಲ್ಲಿನ ಸಂಸ್ಕೃತಿಯನ್ನು ಈ ಸಿನಿಮಾದ ಮೂಲಕ ಎಳೆ ಎಳೆಯಾಗಿ ಬಿಚ್ಚಿಡಲಾಗಿದೆ. ಅಲ್ಲದೇ ಕೆಲ ಕಡೆ ತುಳು (Tulu) ಭಾಷೆಯನ್ನೂ ಬಳಸಲಾಗಿದೆ. ಹೀಗಾಗಿ ಕಾಂತಾರ ಮುಂದಿನ ದಿನಗಳಲ್ಲಿ ತುಳು ಭಾಷೆಯಲ್ಲೇ ನೋಡಬಹುದಾಗಿದೆ.

    ಕನ್ನಡದಲ್ಲಿ ಕಾಂತಾರ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ. ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳು ಕಳೆಯುತ್ತಿದ್ದರೂ, ಇವತ್ತಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸದ್ಯದಲ್ಲೇ ನೂರು ಕೋಟಿ ಕ್ಲಬ್ ಸೇರುವ ಸಿನಿಮಾವಾಗಿಯೂ ಹೊರ ಹೊಮ್ಮಲಿದೆ. ಈ ಹೊತ್ತಿನಲ್ಲಿ ಇಂದು ಹಿಂದಿಯಲ್ಲಿ, ನಾಳೆ ತಮಿಳು ಮತ್ತು ತೆಲುಗಿನಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದೆ. ತಮಿಳು ಮತ್ತು ತೆಲುಗಿಗಿಂತ ಹಿಂದಿಯಲ್ಲೇ ಅಧಿಕ ಸಂಖ್ಯೆಯಲ್ಲಿ ಚಿತ್ರಮಂದಿರಗಳು ಸಿಕ್ಕಿವೆ. ಇದನ್ನೂ ಓದಿ:ಮೊನ್ನೆ ತುಟಿ, ಈಗ ಮಚ್ಚೆ ನೋಡಿ ಭವಿಷ್ಯ ಹೇಳಿದ ಆರ್ಯವರ್ಧನ್ ಗುರೂಜಿ

    ತನ್ನ ಇಡೀ ಟೀಮ್ ಕಟ್ಟಿಕೊಂಡು ರಿಷಬ್ ಶೆಟ್ಟಿ (Rishabh Shetty) ಬಾಲಿವುಡ್ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈಗಾಗಲೇ ಭಾರತೀಯ ಸಿನಿಮಾ ರಂಗದ ಬಹುತೇಕ ನಟರು ಕಾಂತಾರದ ಬಗ್ಗೆ ಮಾತನಾಡುತ್ತಿರುವುದರಿಂದ ದಕ್ಷಿಣದ ಅಷ್ಟೂ ಭಾಷೆಗಳಲ್ಲೂ ಸಿನಿಮಾ ಗೆಲ್ಲಲಿದೆ ಎನ್ನುವುದು ಸದ್ಯಕ್ಕಿರುವ ಲೆಕ್ಕಾಚಾರ. ಅದರಲ್ಲೂ ಮಲಯಾಳಂನಲ್ಲಿ ದೈವಾರಾಧನೆ, ಭೂತಕೋಲ ಸೇರಿದಂತೆ ಇತರ ಆಚರಣೆಗಳು ಇರುವುದರಿಂದ ಅಲ್ಲಿಗೆ ಈ ಸಿನಿಮಾ ಇನ್ನೂ ಹತ್ತಿರವಾಗಲಿದೆ.

    ನಿರ್ಮಾಪಕ ವಿಜಯ್ ಕಿರಗಂದೂರು (Vijay Kiraganduru) ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಿಂದಿಯಲ್ಲೂ ಚಿತ್ರ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ. ಈ ಎಲ್ಲ ಸಿನಿಮಾಗಳಿಗೆ ಕೆಜಿಎಫ್ ಯಶಸ್ಸು ಮುನ್ನುಡಿ ಬರೆದಿತ್ತು. ಕಾಂತಾರದ ಮೂಲಕ ಆ ನಂಬಿಕೆ ಇನ್ನಷ್ಟು ಗಟ್ಟಿಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ತವರೂರಿಗೆ ಬಂದಿಳಿದ ‘ಮಿಸ್ ಇಂಡಿಯಾ ವರ್ಲ್ಡ್’ ಸಿನಿ ಶೆಟ್ಟಿ: ತುಳುವಿನಲ್ಲಿ ಧನ್ಯವಾದ ಹೇಳಿದ ಸುಂದರಿ

    ತವರೂರಿಗೆ ಬಂದಿಳಿದ ‘ಮಿಸ್ ಇಂಡಿಯಾ ವರ್ಲ್ಡ್’ ಸಿನಿ ಶೆಟ್ಟಿ: ತುಳುವಿನಲ್ಲಿ ಧನ್ಯವಾದ ಹೇಳಿದ ಸುಂದರಿ

    ಮಂಗಳೂರು ಮೂಲದ ಮಿಸ್ ಇಂಡಿಯಾ ವರ್ಲ್ಡ್‍ 2022 ಕಿರೀಟ ಮುಡಿಗೇರಿಸಿಕೊಂಡಿರುವ ಸಿನಿ ಶೆಟ್ಟಿ ಇಂದು ಮಂಗಳೂರಿಗೆ ಆಗಮಿಸಿದ್ದರು. ತವರು ನೆಲಕ್ಕೆ ಸಿನಿ ಶೆಟ್ಟಿ ಕಾಲಿಡುತ್ತಿದ್ದಂತೆಯೇ ಅದ್ಧೂರಿ ಸ್ವಾಗತ ದೊರೆಯಿತು. ಮಂಗಳೂರು ಜನತೆ ಪ್ರೀತಿಯಿಂದಲೇ ಸಿನಿ ಶೆಟ್ಟಿ ಅವರನ್ನು ಬರಮಾಡಿಕೊಂಡು ತನ್ನೂರಿನ ಹುಡುಗಿಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.

    ಸಿನಿ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆಯ ಇನ್ನಂಜೆ ಅವರು. ಮಿಸ್ ಇಂಡಿಯಾ ಆದ ಬಳಿಕ ಇದೇ ಮೊದಲ ಬಾರಿಗೆ ಅವರು ಮಂಗಳೂರಿಗೆ ಆಗಮಿಸಿದ್ದರು. ಮಂಗಳೂರಿನ ಜನತೆ ಮನೆ ಮಗಳಿಗೆ ಆರತಿ ಎತ್ತಿ, ಹೂ ಮಾಲೆ ಹಾಕಿ ಸಡಗರದಿಂದಲೇ ಬರಮಾಡಿಕೊಂಡರು. ಕಿರೀಟ ಸಮೇತ ಸಿನಿ ಶೆಟ್ಟಿ ಮಂಗಳೂರಿಗೆ ಆಗಮಿಸಿದ್ದು ವಿಶೇಷವಾಗಿತ್ತು. ಮಿಸ್‍ ಇಂಡಿಯಾ ವರ್ಲ್ದ್ ಕಿರೀಟ ಕಂಡು ಹಲವರು ಸಂಭ್ರಮಿಸಿದರು. ಇದನ್ನೂ ಓದಿ:ಪೊನ್ನಿಯನ್ ಸೆಲ್ವನ್ ವಿವಾದ : ಮಣಿರತ್ನಂ ಮತ್ತು ವಿಕ್ರಮ್ ಗೆ ನೋಟಿಸ್

    ನಂತರ ಮಾಧ್ಯಮಗಳ ಜೊತೆ ಮಾತನಾಡಿರದ ಸಿನಿ ಶೆಟ್ಟಿ  ತುಳುವಿನಲ್ಲೇ ಕನ್ನಡಿಗರಿಗೆ ಮತ್ತು ಅಭಿಮಾನಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು. ಒಳ್ಳೆಯ ಪಾತ್ರಗಳು ಮತ್ತು ಕಥೆಗಳು ಸಿಕ್ಕರೆ ಸಿನಿಮಾದಲ್ಲಿ ನಟಿಸುವುದಾಗಿತೂ ಅವರು ತಿಳಿಸಿದರು. ಆನಂತರ ಅವರು ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

    Live Tv
    [brid partner=56869869 player=32851 video=960834 autoplay=true]

  • ದಿಯಾ ಖ್ಯಾತಿಯ ಪೃಥ್ವಿ ಅಂಬಾರ್‌ಗೆ ಮಾತೃ ವಿಯೋಗ

    ದಿಯಾ ಖ್ಯಾತಿಯ ಪೃಥ್ವಿ ಅಂಬಾರ್‌ಗೆ ಮಾತೃ ವಿಯೋಗ

    ಚಂದನವನದ ನಟ ಪೃಥ್ವಿ ಅಂಬಾರ್ ಪ್ರಧಾನವಾಗಿ ಕನ್ನಡ ಮತ್ತು ತುಳು ಚಲನಚಿತ್ರೋದ್ಯಮಗಳಲ್ಲಿ ನಟಿಸುತ್ತಿದ್ದಾರೆ. ಪೃಥ್ವಿ ಅಂಬಾರ್ ಅವರ ತಾಯಿ ಸುಜಾತ ವೀರಪ್ಪ ಅಂಬಾರ್ ಹೃದಯ ಸಂಬಂಧಿ ಕಾಯಿಲೆಯಿಂದ ಇಂದು(ಜುಲೈ 15) ಮಂಗಳೂರಿನಲ್ಲಿ ನಿಧನರಾಗಿದ್ದಾರೆ.

    ಸುಜಾತ ಅವರು ವೀರಪ್ಪ ಅಂಬಾರ್ ಅವರ ಧರ್ಮಪತ್ನಿಯಾಗಿದ್ದು, ಹಾರ್ಟ್ ಪ್ರಾಬ್ಲಮ್‍ನಿಂದ ಬಳಲುತ್ತಿದ್ದರು. ಆದರೆ ಇಂದು ಈ ಸಮಸ್ಯೆ ಹೆಚ್ಚಾಗಿ ಸುಜಾತ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಅಂತ್ಯಕ್ರಿಯೆ ಮಂಗಳೂರಿನಲ್ಲಿ ಇಂದು ನಡೆಯಲಿದೆ. ದುರ್ಗಾಪರಮೇಶ್ವರಿ ಮಹಿಳಾ ಸಂಘದ ಕಾರ್ಯದರ್ಶಿಯಾಗಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಗಳನ್ನು ಮಾಡಿದ್ದಾರೆ.

    ಸುಜಾತ ಅವರ ಪುತ್ರ ಪೃಥ್ವಿ ಅಂಬಾರ್ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದು, ದಿಯಾ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ಬೈರಾಗಿ ಮತ್ತು ಶುಗರ್ ಲೆಸ್ ಚಿತ್ರದಲ್ಲಿ ಪೃಥ್ವಿ ನಟಿಸಿದ್ದಾರೆ. ಇವರ ಸಿನಿಮಾಗಳು ಪ್ರೇಕ್ಷಕರಿಗೆ ಹತ್ತಿರವಾಗುತ್ತಿದ್ದು, ಈ ಖುಷಿಯಲ್ಲಿ ಇರಬೇಕಾದ ಕುಟುಂಬ ದುಃಖದಲ್ಲಿ ಮುಳುಗಿದೆ. ಇದನ್ನೂ ಓದಿ: ಪುನೀತ್ ರಾಜ್ ಕುಮಾರ್ ಗಂಧದ ಗುಡಿ ರಿಲೀಸ್ ಡೇಟ್ ಘೋಷಣೆ : ಅಕ್ಟೋಬರ್ 28ಕ್ಕೆ ತೆರೆಗೆ

    ಪೃಥ್ವಿ ಅಂಬಾರ್ ಅವರು ಸಿನಿಮಾರಂಗಕ್ಕೆ ಪ್ರವೇಶಿಸುವ ಮೊದಲು ಮಂಗಳೂರಿನಲ್ಲಿ ರೇಡಿಯೊ ಜಾಕಿಯಾಗಿಯೂ ಕೆಲಸ ಮಾಡುತ್ತಿದ್ದರು. ಇವರು 2014ರಲ್ಲಿ ಬಿಡುಗಡೆಯಾದ ಬರ್ಕೆ ಎಂಬ ತುಳು ಚಲನಚಿತ್ರದ ಮೂಲಕ ದೊಡ್ಡ ಪರದೆಗೆ ಪ್ರವೇಶ ಮಾಡಿದ್ದರು. ಅವರ ಎರಡನೆಯ ಚಿತ್ರ ಬ್ಲಾಕ್ ಬಸ್ಟರ್ ಪಿಲಿಬೈಲ್ ಯಮುನಕ್ಕ, ಇದನ್ನು ಕೆ.ಸೂರಜ್ ಶೆಟ್ಟಿ ನಿರ್ದೇಶಿಸಿದ್ದಾರೆ. ಕನ್ನಡ ಧಾರವಾಹಿ ‘ಜೊತೆ ಜೊತೆಯಲಿ’ಯಲ್ಲಿ ‘ನೀಲ್’ ಪಾತ್ರದಲ್ಲಿ ಇವರು ನಟಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಸಂಸ್ಕೃತ ಭಾಷೆಯ ಮೇಲಿನ ಮಮತೆಯನ್ನು ತುಳು, ಕೊಡವ ಭಾಷೆಗಳ ಮೇಲೂ ತೋರಿಸಿ: ಬಿ.ಕೆ. ಹರಿಪ್ರಸಾದ್

    ಸಂಸ್ಕೃತ ಭಾಷೆಯ ಮೇಲಿನ ಮಮತೆಯನ್ನು ತುಳು, ಕೊಡವ ಭಾಷೆಗಳ ಮೇಲೂ ತೋರಿಸಿ: ಬಿ.ಕೆ. ಹರಿಪ್ರಸಾದ್

    ಬೆಂಗಳೂರು: ಬಿಜೆಪಿ ಸರ್ಕಾರ ರಾಜ್ಯದ ಕೇವಲ 24,821 ಸಂಸ್ಕೃತ ಭಾಷಿಗರ ಮೇಲೆ ತೋರಿಸುತ್ತಿರುವ ಅಗಾಧ ಮಮತೆಯನ್ನು ನಮ್ಮ ರಾಜ್ಯದಲ್ಲಿ ಮೂಲೆ ಗುಂಪಾಗಿರುವ ತುಳು ಮತ್ತು ಕೊಡವ ಭಾಷೆಗಳ ಮೇಲೆ ತೋರಿಸಲಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ.

    ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, 2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿರುವ ಒಟ್ಟು ತುಳುವರ ಸಂಖ್ಯೆ 18,46,427 ಹಾಗೆಯೇ ಕೊಡವ ಭಾಷೆಯನ್ನಾಡುವವರ ಸಂಖ್ಯೆ 1,13,857. ಆದರೆ, ಸಂಸ್ಕೃತ ಭಾಷೆಯನ್ನು ತಮ್ಮ ಮಾತೃಭಾಷೆಯೆಂದು ದಾಖಲಿಸಿದವರ ಸಂಖ್ಯೆ 24,821 ಮಾತ್ರ. ಇಷ್ಟು ಕಡಿಮೆ ಜನಸಂಖ್ಯೆಯ ಮೇಲೆ ಬಿಜೆಪಿ ಸರ್ಕಾರ ತನ್ನ ಅಗಾಧ ಪ್ರೀತಿಯನ್ನು ತೋರಿಸುತ್ತಾ ಬಂದಿದೆ. ಈಗಾಗಲೇ ರಾಜ್ಯದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯವಿದೆ. ಅದಕ್ಕೆ ಬೇಕಾದಂತಹ ಎಲ್ಲಾ ಸೌಕರ್ಯಗಳನ್ನು ನೀಡಲಾಗಿದೆ. ಆದರೆ, ನಮ್ಮ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ತುಳು ಮತ್ತು ಕೊಡವ ಭಾಷೆಗಳ ಅಭಿವೃದ್ದಿಯತ್ತ ಮಾತ್ರ ದಿವ್ಯ ನಿರ್ಲಕ್ಷವನ್ನು ತೋರಿಸುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ‘ಆಕ್ಟ್ -1978’ ಸಿನಿಮಾ ಪ್ರೇರಣೆ – ಬ್ಯಾಂಕ್ ಮುಂದೆ ಪ್ರತಿಭಟಿಸಿ ನ್ಯಾಯ ಪಡೆದ ಮಹಿಳೆ

    ಭಾಷಾವಾರು ಪ್ರಾಂತ್ಯಗಳ ರಚನೆಯಾದಾಗ ಪ್ರಭಾವಿ ಪ್ರಾದೇಶಿಕ ಭಾಷೆಗಳಿಗೆ ಮಹತ್ವ ಬಂದವು. ಆದರೆ ಈ ಹಂತದಲ್ಲಿ ಪ್ರಾದೇಶಿಕ ಭಾಷೆಗಳ ಆಶ್ರಯದಲ್ಲಿರುವ, ಆದರೆ ಯಾವುದೇ ರಾಜ್ಯದ ಅಧಿಕೃತ ಭಾಷೆಗಳಲ್ಲದ ಸಣ್ಣ ಭಾಷೆಗಳು ತೀವ್ರ ಉಪೇಕ್ಷೆಗೆ ಒಳಗಾಗಿವೆ. ದೇಶದಲ್ಲಿ ಹಲವಾರು ರಾಜ್ಯಗಳು ತಮ್ಮ ಒಂದಕ್ಕೂ ಹೆಚ್ಚು ಭಾಷೆಗಳನ್ನು ಅಧಿಕೃತವಾಗಿ ಘೋಷಿಸಿಕೊಂಡಿವೆ. ಆದರೆ ಕರ್ನಾಟಕ ರಾಜ್ಯ ಕನ್ನಡವನ್ನು ಹೊರತುಪಡಿಸಿ ಬೇರೆ ಭಾಷೆಗಳಿಗೆ ಅಧಿಕೃತ ಸ್ಥಾನ ನೀಡಿಲ್ಲ. ಬಹುಜನರು ದಿನನಿತ್ಯ ಉಪಯೋಗಿಸುವ ಕೊಡವ, ತುಳು ಭಾಷೆಗಳನ್ನು ಕರ್ನಾಟಕದ ಅಧಿಕೃತ ಭಾಷೆಗಳೆಂದು ಮಾನ್ಯ ಮಾಡಬಹುದಾಗಿದೆ. ಮಾನ್ಯ ಮಾಡದೇ ಇರುವುದರಿಂದ ಕೇಂದ್ರ ಸರ್ಕಾರ ಸುಲಭವಾಗಿ ನುಣುಚಿಕೊಳ್ಳುತ್ತಿದೆ. ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಭಾಷೆಗಳಾದ ತುಳು ಮತ್ತು ಕೊಡವ ಭಾಷೆಗಳನ್ನು ರಾಜ್ಯ ಸರ್ಕಾರ ಮೊದಲು ತನ್ನ ಅಧಿಕೃತ ಭಾಷೆಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ

    ಸಂಸ್ಕೃತಕ್ಕೆ ನೀಡುತ್ತಿರುವಷ್ಟೇ ಮಹತ್ವವನ್ನು ನಮ್ಮ ಕನ್ನಡ, ತುಳು ಹಾಗೂ ಕೊಡವ ಭಾಷೆಗೂ ನೀಡುವ ಮೂಲಕ ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿಯನ್ನು ಬಿಡಬೇಕು. ಹಾಗೆಯೇ ನಮ್ಮ ಭಾಷೆಗಳ ಅಭಿವೃದ್ದಿಗೆ ಪ್ರೋತ್ಸಾಹ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನೆಚ್ಚಿನ ಶಿಕ್ಷಕನ ವರ್ಗಾವಣೆ – ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿಗಳು

  • ಹಂತ ಹಂತವಾಗಿ ತುಳು, ಬ್ಯಾರಿ, ಕೊಂಕಣಿ ಭವನಗಳ ನಿರ್ಮಾಣ: ಕೋಟ

    ಹಂತ ಹಂತವಾಗಿ ತುಳು, ಬ್ಯಾರಿ, ಕೊಂಕಣಿ ಭವನಗಳ ನಿರ್ಮಾಣ: ಕೋಟ

    ಮಂಗಳೂರು: ಹಂತ ಹಂತವಾಗಿ ತುಳು, ಬ್ಯಾರಿ, ಕೊಂಕಣಿ ಸಾಂಸ್ಕೃತಿಕ ಭವನಗಳನ್ನು ನಿರ್ಮಾಣ ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದು ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತುಳು ಬ್ಯಾರಿ, ಕೊಂಕಣಿ ಅಕಾಡೆಮಿ ಅಧ್ಯಕ್ಷರೊಂದಿಗೆ ಭವನಗಳ ನಿರ್ಮಾಣ ಕುರಿತ ಸಭೆಯಲ್ಲಿ ಮಾತನಾಡಿದರು. ಜಿಲ್ಲಾ ರಂಗಮಂದಿರದ ಜೊತೆಗೆ ತುಳು, ಬ್ಯಾರಿ ಹಾಗೂ ಕೊಂಕಣಿ ಸಾಂಸ್ಕೃತಿಕ ಭವನದ ನಿರ್ಮಾಣಕ್ಕೆ ಸರ್ಕಾರದಿಂದ ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ಆಯಾ ಅಕಾಡೆಮಿ ಭವನಗಳ ನಿರ್ಮಾಣಕ್ಕೆ ಸಂಬಂಧಿಸಿದವರು ಒಪ್ಪಿಗೆ ನೀಡಿದ್ದಾರೆ ಎಂದರು. ಇದನ್ನೂ ಓದಿ: ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ- ಅರವಿಂದ ಲಿಂಬಾವಳಿ

    ಜಿಲ್ಲಾ ರಂಗಮಂದಿರಕ್ಕೆ ಮೊದಲ ಹಂತದಲ್ಲಿ 5 ಕೋಟಿರೂ., ತುಳು ಭವನ ನಿರ್ಮಾಣಕ್ಕೆ ಎರಡನೇ ಹಂತದಲ್ಲಿ 3.5 ಕೋಟಿ ರೂ., ಕೊಂಕಣಿ ಮತ್ತು ತುಳು ಅಕಾಡೆಮಿಯ ಭವನಕ್ಕಾಗಿ ಮೊದಲ ಹಂತದಲ್ಲಿ ತಲಾ 3 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದರು.

    ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಶಾಸಕ ಡಾ.ಭರತ್ ಶೆಟ್ಟಿ, ಉಪವಿಭಾಗಾಧಿಕಾರಿ ಮದನ್ ಮೋಹನ್, ತುಳು ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್‍ಸಾರ್, ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ, ಕೊಂಕಣಿ ಅಕಾಡೆಮಿ ಅಧ್ಯಕ್ಷ ಡಾ.ಜಗದೀಶ್ ರೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ತಹಶೀಲ್ದಾರರು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

  • ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ- ಅರವಿಂದ ಲಿಂಬಾವಳಿ

    ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ- ಅರವಿಂದ ಲಿಂಬಾವಳಿ

    ಬೆಂಗಳೂರು: ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್‌ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

    ಈ ಕ್ರಮದಿಂದಾಗಿ ತುಳು ಲಿಪಿಯು ಯುನಿಕೋಡ್‌ ನಕಾಶೆಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗುವ ಕಾರ್ಯವು ವೇಗ ಪಡೆಯಲಿದೆ ಎಂದು ಹೇಳಿರುವ ಅವರು ಸುಮಾರು ಹತ್ತು ವರ್ಷಗಳಿಂದ ತುಳು ಲಿಪಿಯನ್ನು ರೂಪಿಸುವ ಬಗ್ಗೆ ಹಲವು ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ತುಳು ಭಾಷಾ ಮತ್ತು ಲಿಪಿ ತಜ್ಞರು ಸರ್ವಾನುಮತಿಯಿಂದ ರೂಪಿಸಿದ ತುಳು ಲಿಪಿ ಪಟ್ಟಿಯನ್ನು ಅಕಾಡೆಮಿಯು ಅಂಗೀಕರಿಸಿ ಯುನಿಕೋಡ್‌ ನಕಾಶೆಗೆ ಸೇರಿಸಲು ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

    ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತುಳು ಲಿಪಿ ಪಟ್ಟಿಯನ್ನು ಪರಾಮರ್ಶಿಸಿ ಅನುಮೋದಿಸಲು ಮೈಸೂರಿನಲ್ಲಿರುವ ಕೇಂದ್ರ ಸರ್ಕಾರದ ಭಾರತೀಯ ಭಾಷಾ ಸಂಸ್ಥಾನಕ್ಕೆ ಕರ್ನಾಟಕ ಸರ್ಕಾರದಿಂದ ಕೋರಲಾಗಿತ್ತು. ಭಾಭಾ ಸಂಸ್ಥಾನವು ಇದಕ್ಕಾಗಿ ಭಾಷಾ ತಜ್ಞರ ಸಮಿತಿಯನ್ನು ರಚಿಸಿ, ಚರ್ಚಿಸಿ ಲಿಪಿ ಪಟ್ಟಿಯನ್ನು ಅನುಮೋದಿಸಿ, ಯುನಿಕೋಡ್‌ ಕನ್ಸಾರ್ಶಿಯಂಗೆ ಸಲ್ಲಿಸಲು ಶಿಫಾರಸು ಮಾಡಿತು. ಅದರಂತೆ ಈಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತುಳು ಅಕಾಡೆಮಿಗೆ ಪತ್ರ ಬರೆಯಲಾಗಿದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಅಲ್ಲದೆ ಯುನಿಕೋಡ್‌ ನಕಾಶೆಗೆ ಸೇರಿಸಲು ಅಗತ್ಯವಿರುವ ಇನ್ನಿತರೆ ತಾಂತ್ರಿಕ ಅಂಶಗಳ ಬಗ್ಗೆಯೂ ಗಮನ ಕೊಡುವಂತೆ ತಿಳಿಸಲಾಗಿದೆ ಎಂದು ಅವರು ತಿಳಿಸಿದರು.

    ತುಳು ಲಿಪಿಯನ್ನು ಯುನಿಕೋಡ್‌ ನಕಾಶೆಗೆ ತಕ್ಕಂತೆ ರೂಪಿಸುವಲ್ಲಿ ಶ್ರಮವಹಿಸಿದ ಎಲ್ಲ ತಜ್ಞರಿಗೂ ಸಚಿವ ಅರವಿಂದ ಲಿಂಬಾವಳಿ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ : 8ನೇ ಪರಿಚ್ಛೇದಕ್ಕೆ ತುಳು – ಸರ್ಕಾರದ ಜೊತೆ ಮಾತುಕತೆ ನಡೆಯುತ್ತಿದೆ ಎಂದ ಕಟೀಲ್ 

    ಡಿಜಿಟಲ್‌ ವೇದಿಕೆಗಳಲ್ಲಿ, ಮುದ್ರಿತ ಸಾಹಿತ್ಯದಲ್ಲಿ, ಪ್ರಚಾರ ಸಾಹಿತ್ಯದಲ್ಲಿ – ಹೀಗೆ ತುಳು ಲಿಪಿಯು ಹೆಚ್ಚು ಹೆಚ್ಚು ಬಳಕೆಗೆ ಬಂದರೆ ಲಿಪಿಯನ್ನು ರೂಪಿಸಿದ್ದಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ ಎಂದಿರುವ ಅವರು  ಕರ್ನಾಟಕದ ಇತಿಹಾಸದಲ್ಲಿ ಒಂಬತ್ತು ಶತಮಾನಗಳ ಅತಿದೀರ್ಘವಾದ ಆಡಳಿತವನ್ನು ನಡೆಸಿದ ಖ್ಯಾತಿಯನ್ನು ಹೊಂದಿದ ತುಳು ಸಂಸ್ಕೃತಿಯ ಪ್ರತೀಕವಾದ ತುಳು ಲಿಪಿಯು ಯುನಿಕೋಡ್‌ಗೆ ಸೇರುತ್ತಿರುವುದಕ್ಕೆ ಲಕ್ಷಾಂತರ ತುಳು ಭಾಷಿಗರು ತೋರಿದ ಸಂಭ್ರಮದಲ್ಲಿ ಭಾಗಿಯಾಗಲು ನನಗೂ ಹರ್ಷವಾಗುತ್ತಿದೆ ಎಂದು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.

    ಕನ್ನಡ ನಾಡಿನ ಉಳಿದೆಲ್ಲ ಭಾಷೆಗಳಂತೆಯೇ ತುಳು ಭಾಷೆ, ಸಂಸ್ಕೃತಿಯ ಉಳಿವು, ಬೆಳವಣಿಗೆಗಾಗಿ ನಮ್ಮ ಸರ್ಕಾರದ ಪ್ರಯತ್ನವು ನಿರಂತರವಾಗಿ ನಡೆಯುತ್ತದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

  • ಜುಲೈ 10ರಂದು ತುಳುನಾಡ್ದ ಕಟ್ಟು ಕಟ್ಟಲೆ ವಿಚಾರಗೋಷ್ಠಿ

    ಜುಲೈ 10ರಂದು ತುಳುನಾಡ್ದ ಕಟ್ಟು ಕಟ್ಟಲೆ ವಿಚಾರಗೋಷ್ಠಿ

    ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ವಿಶ್ವದ ಎಲ್ಲಾ ತುಳು ಕೂಟ-ಸಂಘಟನೆಯ ಒಟ್ಟು ಕೂಡುವಿಕೆಯಲ್ಲಿ ‘ತುಳುನಾಡ್ದ ಕಟ್ಟು ಕಟ್ಟಲೆ’ ಎಂಬ ವಿಷಯದಲ್ಲಿ ಪ್ರಪ್ರಥಮವಾಗಿ ಅಂತರ್ಜಾಲ ತುಳು ವಿಚಾರಗೋಷ್ಠಿ ನಡೆಯಲಿದೆ.

    ಜುಲೈ 10ರಂದು ಸಂಜೆ 7 ಗಂಟೆಗೆ ಈ ಕಾರ್ಯಕ್ರಮವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವ ಅವರು ಉದ್ಘಾಟಿಸಲಿದ್ದಾರೆ. ಎಲ್ಲಾ ತುಳು ಕೂಟ-ಸಂಘಟನೆಯ ಪ್ರಮುಖರಿಂದ ಅಭಿಪ್ರಾಯ ಮಂಡನೆ ನಡೆಯಲಿದೆ.

    ಸಾಹಿತಿ ಮತ್ತು ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ.ಕತ್ತಲ್‍ಸಾರ್ ವಹಿಸಲಿದ್ದಾರೆ. ಇದನ್ನೂ ಓದಿ: ಸುಮಲತಾರಿಗೆ ರಾಜಕಾರಣದಲ್ಲಿ ಅನುಭವದ ಕೊರತೆ ಇದೆ: ನಿಖಿಲ್

  • ‘ಕೊಪ್ಪರಿಗೆ’ ಎಂಬ ಆನ್‍ಲೈನ್ ತುಳು ಶಬ್ದಕೋಶ ಬಿಡುಗಡೆ

    ‘ಕೊಪ್ಪರಿಗೆ’ ಎಂಬ ಆನ್‍ಲೈನ್ ತುಳು ಶಬ್ದಕೋಶ ಬಿಡುಗಡೆ

    ಮಂಗಳೂರು: ತುಳು ಭಾಷೆಯ ಉಳಿವಿಗಾಗಿ ಮತ್ತು ತುಳು ಪದಗಳ ಪುನರ್ ಬಳಕೆಗೆ ಹಾಗೂ ಜನರಿಗೆ ಪರಿಚಯಿಸಲೆಂದು ಶಬ್ದಕೋಶ ಬಿಡುಗಡೆ ಮಾಡಲಾಯಿತ್ತು.

    ‘ಕೊಪ್ಪರಿಗೆ’ ಎಂಬ ಆನ್‍ಲೈನ್ ತುಳು ಶಬ್ದಕೋಶದ ಬಿಡುಗಡೆ ಸಮಾರಂಭವು ಮಂಗಳೂರಿನ ಊರ್ವ ಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಇಂದು ನಡೆಯಿತು. ಕೊಪ್ಪರಿಗೆ ಆನ್‍ಲೈನ್ ತುಳು ಡಿಕ್ಷನರಿಯನ್ನು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ಬಿಜೆಪಿ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ಬಿಡುಗಡೆ ಮಾಡಿದರು. ಕೊಪ್ಪರಿಗೆ ಡಿಕ್ಷನರಿಯ ಡೆವೆಲಪರ್ ಸುಮಂತ್ ಪೂಜಾರಿ ಹೆಬ್ರಿಯವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.

    ಇದೇ ವೇಳೆ ಮಾತನಾಡಿದ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ ಕತ್ತಲ್‍ಸಾರ್, ಕೊಪ್ಪರಿಗೆ ತುಳು ಶಬ್ದಕೋಶದ ಉಪಯೋಗವೂ ಜಗತ್ತಿನ ಎಲ್ಲಾ ತುಳುವರಿಗೂ ಸಿಗಲಿ. ಈ ಮೂಲಕ ಕೊಪ್ಪರಿಗೆ ತುಳುನಾಡಿನ ಕೊಪ್ಪರಿಗೆ ಯಾಗಲಿ. ತುಳುಭಾಷೆಯನ್ನು ರಾಜ್ಯದಲ್ಲಿ ಅಧಿಕೃತ ಮಾಡುವ ಸರ್ವ ಪ್ರಯತ್ನವನ್ನು ನಾವೆಲ್ಲರೂ ಸೇರಿ ಮಾಡೋಣ ಎಂದು ಕರೆ ನೀಡಿದರು.

    ವೇದಿಕೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ ಕತ್ತಲ್ ಸರ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಪಟ್ಲ ಸತೀಶ್ ಶೆಟ್ಟಿ, ಸನಾ ಗ್ರೂಪ್ ಮಾಲಕ ಸಾಗರ್, ಜೈ ತುಳುನಾಡ್ (ರಿ.) ಸಂಘಟನೆಯ ಅಧ್ಯಕ್ಷ ಸುದರ್ಶನ ಸುರತ್ಕಲ್, ಕೊಪ್ಪರಿಗೆ ಡಿಕ್ಷನರಿಯ ಡೆವೆಲಪರ್ ಸುಮಂತ್ ಪೂಜಾರಿ ಹೆಬ್ರಿ ಉಪಸ್ಥಿತರಿದ್ದರು. ಅರುಣ್ ಸುರತ್ಕಲ್ ಕಾರ್ಯಕ್ರಮ ನಿರೂಪಿಸಿದರು.