Tag: ತುಳು

  • ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಪ್ರಧಾನಿಗೆ ಧರ್ಮಾಧಿಕಾರಿ ಮನವಿ

    ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಪ್ರಧಾನಿಗೆ ಧರ್ಮಾಧಿಕಾರಿ ಮನವಿ

    ಮಂಗಳೂರು: ತುಳುವನ್ನು 8 ನೇ ಪರಿಚ್ಚೇದಕ್ಕೆ ಸೇರ್ಪಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮನವಿ ಮಾಡಿದ್ದಾರೆ.

    ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆಯುತ್ತಿರೋ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಿದ್ದು, ಈ ವೇಳೆ ತುಳು ಭಾಷೆಯಲ್ಲಿಯೇ ಪ್ರಧಾನಿಯವರನ್ನು ಸ್ವಾಗತಿಸಿದ ವೀರೇಂದ್ರ ಹೆಗ್ಗಡೆಯವರು ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

    ಬಳಿಕ ಸಂಸದ ನಳೀನ್ ಕುಮಾರ್ ಕಟೀಲ್ ಹಾಗೂ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರು ಮೈಸೂರು ಪೇಟ ತೊಡಿಸಿ, ಧರ್ಮಾಧಿಕಾರಿಯ ಪರವಾಗಿ ಪ್ರಾದೇಶಿಕ ಕ್ರೀಡೆ ಕಂಬಳದ ನೊಗದ ಮಾದರಿಯನ್ನು ಸಮರ್ಪಣೆ ಮಾಡಿದ್ರು. ವೀರೇಂದ್ರ ಹೆಗಡೆ ಅವರು ಪ್ರಧಾನಿಯನ್ನು ಶಾಲು ಹೊದಿಸಿ ಸನ್ಮಾನಿಸಿ, ಓಂ ನಮೋ ಶ್ರೀ ಮಂಜುನಾಥಃ ನಮೋ ನಮಃ ಎಂದು ಹೇಳುವ ಮೂಲಕ ಸ್ವಾಗತ ಕೋರಿದ್ರು.

    ಉಜಿರೆಯ ಜನ್ ಧನ್ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಿದ್ದು, ಡಾ. ವಿರೇಂದ್ರ ಹೆಗಡೆ ಅವರ 50 ನೇ ವರ್ಷದ ಧರ್ಮಾಧಿಕಾರಿ ಪೂರೈಸಿದ ಅವಧಿಯಲ್ಲಿ ಆಗಮಿಸಿರುವ ಮೋದಿ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗಡೆಯವರಿಗೆ ಶಾಲು ಹೊದಿಸಿ ಗೌರವ ಸಲ್ಲಿಸಿದ್ರು.

    ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿಯವರು ಬಳಿಕ ಅಲ್ಲಿಂದ ನೇರವಾಗಿ ಧರ್ಮಸ್ಥಳಕ್ಕೆ ಬಂದು ಅಲ್ಲಿ ಶ್ರೀ ದೇವರ ದರ್ಶನ ಪಡೆದು, ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸೇವಿಸಿದ್ದಾರೆ. ಈ ವೇಳೆ ಪ್ರಧಾನಿ ಜೊತೆ ವೀರೇಂದ್ರ ಹೆಗ್ಗಡೆಯವರು ಮಾತನಾಡುತ್ತಾ ಆರೋಗ್ಯದ ಬಗ್ಗೆ ಗಮನಹರಿಸುವಂತೆ ಕೇಳಿಕೊಂಡ್ರು. ಇದಕ್ಕುತ್ತರಿಸಿದ ಪ್ರಧಾನಿ ನನಗೆ ಕೆಲಸ ಮಾಡುವುದು ಅಭ್ಯಾಸವಾಗಿದೆ ಅಂತ ಹೇಳಿದ್ರು.

    ನಂತರ ಪ್ರಧಾನಿಯವರು ಅಲ್ಲಿಂದ ಉಜಿರೆಯ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಪ್ರಧಾನಿ ಮೋದಿ ಕಾರ್ಯಕ್ರಮದತ್ತ ಆಗಮಿಸುತ್ತಿದ್ದಂತೆ ನೆರೆದಿದ್ದ ಜನರ ಮೋದಿ…ಮೋದಿ… ಎಂದು ಹರ್ಷದ್ಗೊರ ಎಲ್ಲಡೆಯಿಂದ ಕೇಳಿ ಬಂತು.

  • `ಬೊಂಬೆ ಹೇಳುತೈತೆ’ ಹಾಡನ್ನು ತುಳು ಭಾಷೆಯಲ್ಲಿ ಒಂದ್ಸಲ ಕೇಳಿ

    `ಬೊಂಬೆ ಹೇಳುತೈತೆ’ ಹಾಡನ್ನು ತುಳು ಭಾಷೆಯಲ್ಲಿ ಒಂದ್ಸಲ ಕೇಳಿ

    ಬೆಂಗಳೂರು: ಯಶಸ್ವಿ ಚಲನಚಿತ್ರ `ರಾಜಕುಮಾರ’ ಸ್ಯಾಂಡಲ್‍ವುಡ್ ನಲ್ಲಿ ತನ್ನದೇ ಆದ ಚಾಪನ್ನು ಮೂಡಿಸಿದೆ. ಸಿನಿಮಾದ ಹಾಡುಗಳು ಸೇರಿದಂತೆ ಎಲ್ಲಾ ವಿಭಾಗದಲ್ಲಿಯೂ ಸಿನಿರಸಿಕರನ್ನು ಸೆಳೆಯುವಲ್ಲಿ ರಾಜಕುಮಾರ ಯಶಸ್ವಿಯಾಗಿತ್ತು.

    ಇದೇ ಸಿನಿಮಾದ `ಬೊಂಬೆ ಹೇಳುತೈತೆ’ ಹಾಡು ಇನ್ನೂ ಜನ-ಮನದಲ್ಲಿ ಉಳಿದಿದೆ. ಇದೇ ಹಾಡನ್ನು ಹಲವರು ತಮ್ಮದೆ ಶೈಲಿಯಲ್ಲಿ ಹಾಡುವ ಮೂಲಕ ಪ್ರೀತಿಯನ್ನು ಪಡೆದುಕೊಂಡಿದ್ದಾರೆ. ಈಗ ಇದೇ ಹಾಡನ್ನು ತುಳು ಭಾಷೆಯಲ್ಲಿ ಹಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

    ಉಡುಪಿಯ ಸುಹಾನ್ ಶೇಖ್ ಎಂಬವರು ತುಳು ಭಾಷೆಯಲ್ಲಿ ಹಾಡಿದ್ದಾರೆ. ಸುಂದರ ಕಡಲತೀರದಲ್ಲಿ ಕುಳಿತಿರುವ ಯುವಕ ಭಾವನಾಭರಿತವಾಗಿ ಹಾಡುವುದನ್ನು ನೋಡಲು ಇಷ್ಟವಾಗುತ್ತದೆ.

    ಮೂಲ ಹಾಡನ್ನು ಗಾಯಕ ವಿಜಯ್ ಪ್ರಕಾಶ್ ಹಾಡಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜನೆಯಲ್ಲಿ ಹಾಡು ಮೂಡಿ ಬಂದಿದ್ದು, ಯೂಟ್ಯೂಬ್ ನಲ್ಲಿ ಇದೂವರೆಗೂ ಈ ಹಾಡು 36 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಯಾಗಿದೆ.

     

  • ವೈರಲ್ ಆಗಿದೆ ನೈಜ ಘಟನೆ ಆಧಾರಿತ ತುಳು ಹಾರರ್ ಕಿರು ಚಿತ್ರ

    ವೈರಲ್ ಆಗಿದೆ ನೈಜ ಘಟನೆ ಆಧಾರಿತ ತುಳು ಹಾರರ್ ಕಿರು ಚಿತ್ರ

    ಬೆಂಗಳೂರು: ನೈಜ ಘಟನೆಯನ್ನು ಆಧಾರಿಸಿದ ತುಳು ಹಾರರ್ ಚಿತ್ರ ‘ಪರೋಕ್ಷ್’ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ದೃಶ್ಯಂ ಫಿಲ್ಮ್ ನವರು ಈ ಚಿತ್ರವನ್ನು ನಿರ್ಮಿಸಿದ್ದು, ಏಪ್ರಿಲ್ 12ರಂದು ಫೇಸ್‍ಬುಕ್‍ನಲ್ಲಿ ಅಪ್‍ಲೋಡ್ ಮಾಡಿರುವ 12 ನಿಮಿಷದ ಕಿರು ಚಿತ್ರವನ್ನು 3.72 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದರೆ, ಯೂ ಟ್ಯೂಬ್‍ನಲ್ಲಿ 2.85 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

    ಗಣೇಶ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಅಮಿತ್ ಸಿಯಲ್, ಪೂಜಾ ಉಪಾಸನ, ಯತೀನ್ ಮುಂತಾದವರು ಅಭಿನಯಿಸಿದ್ದಾರೆ. ತುಳು ಚಿತ್ರವಾದರೂ ಇಂಗ್ಲಿಷ್‍ನಲ್ಲಿ ಸಬ್ ಟೈಟಲ್ ಹಾಕಲಾಗಿದೆ.

    ಚಿತ್ರದ ಕಥೆ ಏನು?
    ತೆಂಗಿನ ಮರದಲ್ಲಿ ಮಗು ಆಳುತ್ತಿರುವ ಧ್ವನಿ ಕೇಳುತ್ತಿರುತ್ತದೆ. ಯಾವುದೇ ಅತೀಂದ್ರಿಯ ಶಕ್ತಿ ತೆಂಗಿನ ಮರದಲ್ಲಿ ಇದೆ ಎಂದು ಭಾವಿಸಿ ಅಲ್ಲಿಗೆ ಹೋಗಲು ಜನ ಹೆದರುತ್ತಾರೆ. ಅಷ್ಟೇ ಅಲ್ಲದೇ ಮಂತ್ರವಾದಿಯನ್ನು ಕರೆಸಿ ಅತೀಂದ್ರಿಯ ಶಕ್ತಿಯನ್ನು ಹೋಗಲಾಡಿಸಲು ಪ್ರಯತ್ನವನ್ನು ನಡೆಸಲಾಗುತ್ತದೆ. ಆದರೆ ಕೊನೆಯಲ್ಲಿ ಧ್ವನಿಯ ರಹಸ್ಯ ಬಯಲಾಗುತ್ತದೆ.

    ಈ ಚಿತ್ರವನ್ನು ವೀಕ್ಷಿಸಿದ ಬಳಿಕ ಫೇಸ್‍ಬುಕ್‍ನಲ್ಲಿ ಜನ ತುಂಬಾ ಸರಳವಾಗಿರುವ ಕಥಾವಸ್ತುವನ್ನು ಚೆನ್ನಾಗಿ ನಿರೂಪಣೆ ಮಾಡಲಾಗಿದೆ. 12 ನಿಮಿಷದಲ್ಲಿ ಪ್ರತಿ ಕ್ಷಣವೂ ಕುತೂಹಲವನ್ನು ಹುಟ್ಟಿಸುತ್ತಾ ಹೋಗುತ್ತದೆ ಎಂದು ಎಂದು ಹೊಗಳಿ ಕಮೆಂಟ್ ಹಾಕಿದ್ದಾರೆ.