Tag: ತುಷಾರ್‌ ಗಿರಿನಾಥ್‌

  • ಇನ್ಮುಂದೆ ಮನೆ ಪಾರ್ಕಿಂಗ್‌ಗೂ ಟ್ಯಾಕ್ಸ್

    ಇನ್ಮುಂದೆ ಮನೆ ಪಾರ್ಕಿಂಗ್‌ಗೂ ಟ್ಯಾಕ್ಸ್

    -ಚದರಡಿ ಲೆಕ್ಕದಲ್ಲಿ ತೆರಿಗೆ ವಿಧಿಸಲು ಮುಂದಾದ ಬಿಬಿಎಂಪಿ

    ಬೆಂಗಳೂರು: ಬೆಲೆ ಏರಿಕೆಯಿಂದ ಬೇಸತ್ತ ಬೆಂಗಳೂರಿಗರಿಗೆ (Bengaluru) ಬಿಬಿಎಂಪಿ (BBMP) ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಇದೀಗ ಮನೆ ಪಾರ್ಕಿಂಗ್ ಸ್ಥಳಕ್ಕೆ ಚದರಡಿ ಲೆಕ್ಕದಲ್ಲಿ ತೆರಿಗೆ ವಿಧಿಸಲು ಬಿಬಿಎಂಪಿ ನಿರ್ಧರಿಸಿದೆ.ಇದನ್ನೂ ಓದಿ:ರಾಜೇಂದ್ರ ಕೊಲೆ ಸಂಚು ಪ್ರಕರಣ – ಮುಖ್ಯ ಆರೋಪಿ ಸೋಮ ಪೊಲೀಸರಿಗೆ ಶರಣು

    ವಸತಿ ಸ್ವತ್ತುಗಳಿಗೆ ಚದರ ಅಡಿಗೆ 2 ರೂ. ಹಾಗೂ ಕಮರ್ಷಿಯಲ್ ಸಂಸ್ಥೆಗಳಿಗೆ ಚದರ ಅಡಿಗೆ 3 ರೂ.ಯೆಂದು ನಿರ್ಧರಿಸಿದೆ.

    ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಮಾತನಾಡಿ, ಬೆಂಗಳೂರಿನ ಯಾವುದೇ ಮೂಲೆಯಲ್ಲಿ ಮನೆಯಿದ್ದರೂ 2 ರೂ. ದರ ನಿಗದಿ ಮಾಡಲಾಗಿದೆ. ಈ ಹೊಸ ಪಾರ್ಕಿಂಗ್ ನೀತಿಯಿಂದ 45 ಕೋಟಿ ರೂ. ನಷ್ಟವಾಗಲಿದೆ. ಒಂದು ವೇಳೆ ಈ ನೀತಿಗೆ ಆಕ್ಷೇಪಣೆಗಳು ಹೆಚ್ಚಾಗಿ ಬಂದರೆ ಪಾರ್ಕಿಂಗ್ ನೀತಿ ಬದಲಾಗಬಹುದು ಎಂದು ಹೇಳಿದ್ದಾರೆ.ಇದನ್ನೂ ಓದಿ:6 ವಾರಗಳಲ್ಲಿ ಓಲಾ, ಉಬರ್ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶ

  • ಟ್ರಾಫಿಕ್‌ಗೆ ಮುಕ್ತಿ ಹಾಡಲು ಮುಂದಾದ ಬಿಬಿಎಂಪಿ – 10,000 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ

    ಟ್ರಾಫಿಕ್‌ಗೆ ಮುಕ್ತಿ ಹಾಡಲು ಮುಂದಾದ ಬಿಬಿಎಂಪಿ – 10,000 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ

    – ಮುಂದಿನ 25 ವರ್ಷ ಗುರಿಯಾಗಿಸಿ ಪಾಲಿಕೆ ಪ್ಲ್ಯಾನ್

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಟ್ರಾಫಿಕ್‌ನಿಂದ (Traffic) ಮುಕ್ತಿ ಯಾವಾಗಪ್ಪ ಅಂತ ದೇವರತ್ತ ಮುಖ ಮಾಡುವ ಸ್ಥಿತಿ ವಾಹನ ಸವಾರರದ್ದು. ಇತ್ತ ಬೆಂಗಳೂರಿನ ಅಭಿವೃದ್ಧಿ ಸಚಿವ, ಡಿಸಿಎಂ ಡಿಕೆ ಶಿವಕುಮಾರ್ ದೇವರೇ ಧರೆಗೆ ಇಳಿದು ಬಂದ್ರೂ ಮುಂದಿನ ಮೂರು ವರ್ಷದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸೋಕೆ ಆಗಲ್ಲ ಎಂದು ಹೇಳಿದ್ದಾರೆ. ಈ ಹೇಳಿಕೆ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಇದರ ಬೆನ್ನಲ್ಲೇ ಬಿಬಿಎಂಪಿ (BBMP) ಈ ವರ್ಷ ಟ್ರಾಫಿಕ್ ಸಮಸ್ಯೆ ನಿವಾರಣೆಗೆ 10,000 ಕೋಟಿ ರೂ. ಖರ್ಚು ಮಾಡಲು ಮುಂದಾಗಿದೆ.

    ಮುಂದಿನ 25 ವರ್ಷದವರೆಗೂ ರಸ್ತೆಗಳ ಸಮಸ್ಯೆ ಉದ್ಭವವಾಗದಂತೆ ಬಿಬಿಎಂಪಿ ಹಲವು ಯೋಜನೆ ರೂಪಿಸಿದೆ. 80 ರಿಂದ 90 ಕಿಲೋಮೀಟರ್ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಮಾಡಲು ಪ್ಲ್ಯಾನ್ ಹಾಕಿಕೊಂಡಿದೆ. ಇದನ್ನೂ ಓದಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ – 9,000 ನರ್ಸ್‌ಗಳಿಂದ ಅಹೋರಾತ್ರಿ ಧರಣಿ

    ಬೆಂಗಳೂರಿನಲ್ಲಿ ಇರುವ ಎಲ್ಲಾ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಿಗೆ ವೈಟ್ ಟಾಪಿಂಗ್ ಕಾಮಗಾರಿ ಮಾಡೋದಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜೊತೆಗೆ ಈ ವರ್ಷ ಒಂದೆರಡು ಫ್ಲೈ ಓವರ್‌ಗೆ ಚಾಲನೆ ನೀಡೋದಲ್ಲದೇ ಟನಲ್‌ಗೂ ಚಾಲನೆ ಕೊಡುತ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ಪಕ್ಷಿಗಳ ನಿಗೂಢ ಸಾವು – ಹಕ್ಕಿ ಜ್ವರದ ಶಂಕೆ

  • ಬೆಂಗಳೂರಿನಲ್ಲಿ ಮಳೆ ಅವಾಂತರ – 60 ಮನೆಗಳಿಗೆ ಪರಿಹಾರ ನೀಡಲು ಬಿಬಿಎಂಪಿ ಪಟ್ಟಿ ಸಿದ್ಧ

    ಬೆಂಗಳೂರಿನಲ್ಲಿ ಮಳೆ ಅವಾಂತರ – 60 ಮನೆಗಳಿಗೆ ಪರಿಹಾರ ನೀಡಲು ಬಿಬಿಎಂಪಿ ಪಟ್ಟಿ ಸಿದ್ಧ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಶನಿವಾರ ಹಾಗೂ ಭಾನುವಾರ ಸುರಿದ ಮಳೆಗೆ (Rain) ದೊಡ್ಡ ಅವಾಂತರಗಳು ಸೃಷ್ಟಿ ಆಗಿದೆ. ನೀರು ನುಗ್ಗಿ ಮನೆಗಳು ಕುಸಿದಿದ್ದವು. ಈಗ ಬಿಬಿಎಂಪಿ (BBMP) ಮಳೆಯಿಂದ ಆದ ಹಾನಿಗೆ ಪರಿಹಾರ (Relief) ಕೊಡಲು ಮುಂದಾಗಿದೆ.

    ಬೆಂಗಳೂರಿನಲ್ಲಿ ಒಂದು ಗಂಟೆ, ಎರಡು ಗಂಟೆ ಮಳೆ ಬಂತು ಎಂದರೆ ಬೆಂಗಳೂರಿಗರು ನರಕ ಅನುಭವಿಸುತ್ತಾರೆ. ಶನಿವಾರ ಬೆಂಗಳೂರಿನಲ್ಲಿ 115 ಮಿ.ಮೀ ಮಳೆ ಆಗಿತ್ತು. ಬೆಂಗಳೂರಿನ 43ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಜೋರು ಮಳೆ ಆಗಿತ್ತು. ಗಾಂಧಿ ನಗರ ವಿಧಾನಸಭಾ ಕ್ಷೇತ್ರ, ಯಲಹಂಕ ಸೇರಿದಂತೆ ಹಲವು ಕಡೆ ಮಳೆಯಾಗಿ 60ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿತ್ತು. ಈಗ ಪಾಲಿಕೆ ಮಳೆಯಿಂದ ಆದ ಹಾನಿಗೆ ಪರಿಹಾರ ನೀಡಲು ನಿರ್ಧರಿಸಿದೆ. 60 ಮನೆಗಳನ್ನು ಗುರುತು ಮಾಡಿದ್ದು, ಪ್ರತಿ ಮನೆಗೆ 10 ರಿಂದ 15 ಸಾವಿರ ಪರಿಹಾರ ನೀಡಲು ಮುಂದಾಗಿದೆ. ಇದನ್ನೂ ಓದಿ: ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತುಳು ನಾಡಿದ ದೈವ ನರ್ತನ – ಕಾನೂನು ಸಮರಕ್ಕೆ ಮುಂದಾಗಿರುವ ಕೊಡಗು ದೈವ ನರ್ತಕರ ಸಂಘ

    ಇನ್ನೂ ಬಿಬಿಎಂಪಿ ಪಶ್ಚಿಮ ವಲಯ, ಯಲಹಂಕ ವಲಯದಲ್ಲಿ ಹೆಚ್ಚು ಹಾನಿಯಾಗಿದೆ ಎಂದು ಹೇಳಲಾಗುತ್ತಿದೆ. ಮನೆಗೆ ನೀರು ನುಗ್ಗಿ 48 ಗಂಟೆಗಳ ಕಾಲ ಜನ ಸಮಸ್ಯೆಗೆ ಒಳಗಾಗುತ್ತಿದ್ದರೆ ಪರಿಹಾರಕ್ಕೆ ಅರ್ಹರು ಎಂದು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿದೆ. ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಮುಳುಗಡೆ ಸಂಬಂಧ ನೀರು ಹಾದು ಹೋಗಲು ಹೊಸ ಕಾಲುವೆ ನಿರ್ಮಾಣಕ್ಕೆ ಚಿಂತನೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಇದನ್ನೂ ಓದಿ: ಒಂದೇ ಗಂಟೆಯೊಳಗೆ 120ಕ್ಕೂ ಹೆಚ್ಚು ಹಿಜ್ಬುಲ್ಲಾ ಉಗ್ರರ ತಾಣಗಳನ್ನು ಧ್ವಂಸ ಮಾಡಿದ ಇಸ್ರೇಲ್

  • ವೈಟ್ ಟಾಪಿಂಗ್‌ಗೆ ಬಿಬಿಎಂಪಿ ಸಿದ್ಧತೆ- ಯಾವೆಲ್ಲಾ ರಸ್ತೆಗಳಲ್ಲಿ ಕಾಮಗಾರಿ?

    ವೈಟ್ ಟಾಪಿಂಗ್‌ಗೆ ಬಿಬಿಎಂಪಿ ಸಿದ್ಧತೆ- ಯಾವೆಲ್ಲಾ ರಸ್ತೆಗಳಲ್ಲಿ ಕಾಮಗಾರಿ?

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಬಿಬಿಎಂಪಿ (BBMP) ವೈಟ್ ಟಾಪಿಂಗ್ ಕಾಮಗಾರಿ ಮಾಡಲು ತಯಾರಿ ನಡೆಸುತ್ತಿದೆ. 15 ಪ್ಯಾಕೇಜ್‌ಗಳಲ್ಲಿ 43 ರಸ್ತೆಗಳಲ್ಲಿ ವೈಟ್ ಟಾಪಿಂಗ್ ಮಾಡಲು ಬ್ಲೂಪ್ರಿಂಟ್ ರೆಡಿ ಮಾಡಿದೆ. ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಈಗಾಗಲೇ ಎಂಜಿನಿಯರ್‌ಗಳ ಜೊತೆ ಸಭೆ ಮಾಡಿದ್ದು, ಭೂಮಿ ಪೂಜೆ ಮಾಡೋದಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

    ನಗರದಲ್ಲಿ ವೈಟ್ ಟಾಪಿಂಗ್ (White Topping) ಕಾಮಗಾರಿ ಅನುಷ್ಠಾನಗೊಳಿಸುವ ಸಂಬಂಧ ಜಲಮಂಡಳಿಯ ನೀರಿನ ಹಾಗೂ ಒಳಚರಂಡಿ ಕೊಳವೆ, ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಸಂಸ್ಥೆಯ ಕೇಬಲ್‌ಗಳು, ಗೇಲ್ ಗ್ಯಾಸ್ ಪೈಪ್ ಲೈನ್‌ಗಳ ಬದಲಾವಣೆ ಸೇರಿದಂತೆ ಇನ್ನಿತರೆ ಇಲಾಖೆಗಳು ಸ್ಥಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: PublicTV Explainer: ರಾಜ್ಯದಲ್ಲಿ ಆತಂಕ ಮೂಡಿಸಿದ ‘ಡೇಂಜರ್ ಡೆಂಗ್ಯೂ’

    ಬೆಂಗಳೂರು ಪಶ್ಚಿಮ ವಲಯ, ಪೂರ್ವ ವಲಯ, ದಕ್ಷಿಣ ವಲಯ, ರಾಜರಾಜೇಶ್ವರಿ ನಗರ ವಲಯ ಸೇರಿದಂತೆ ಇನ್ನೂ ಕೆಲವು ವಲಯದ 43 ರಸ್ತೆಗಳನ್ನು ಗುರುತು ಮಾಡಿದ್ದು, ವೈಟ್ ಟಾಪಿಂಗ್ ಮಾಡಲು ತಯಾರಿ ನಡೆದಿದೆ. ಈ ವರ್ಷ ಅಥವಾ ಮುಂದಿನ ವರ್ಷದ ಒಳಗೆ ಕಾಮಗಾರಿ ಮುಕ್ತಾಯ ಆಗಲಿದೆ. ಇದನ್ನೂ ಓದಿ: ಹತ್ರಾಸ್‌ ಕಾಲ್ತುಳಿತ ದುರಂತ; ಹೆಣಗಳ ರಾಶಿ ಕಂಡು ಹೃದಯಾಘಾತದಿಂದ ಪೊಲೀಸ್‌ ಕಾನ್‌ಸ್ಟೇಬಲ್‌ ಸಾವು

    ವೈಟ್ ಟಾಪಿಂಗ್ ಕಾಮಗಾರಿ ನಡೆಯೋ ರಸ್ತೆಗಳು:
    ನಾಗಾವರ ಮೈನ್ ರೋಡ್ ಟು ಶಾಂಪುರ್ ರೋಡ್ ಜಂಕ್ಷನ್
    ವೆಸ್ಟಾಫ್ ಕಾರ್ಡ್ ಜಂಕ್ಷನ್ ಟು ವಿಜಯನಗರ ಟಿಟಿಎಂಸಿ
    ಮಲ್ಲೇಶ್ವರಂ 18 ಮುಖ್ಯ ರಸ್ತೆ ಟು ಚಿತ್ತಾಪುರ ಮಠ ಸರ್ಕಲ್
    ಜಕ್ಕೂರು ರೋಡ್
    100 ಫಿಟ್ ರಿಂಗ್ ರೋಡ್ ಜಾಲಹಳ್ಳಿ ಕ್ರಾಸ್ ಟು – ಟಿವಿಎಸ್ ಕ್ರಾಸ್
    ಸಿಬಿಐ ರೋಡ್ ಫ್ರಮ್ ಬಳ್ಳಾರಿ ಟು ಆರ್‌ಟಿ ನಗರ ಮೈನ್ ರೋಡ್
    ರೇಸ್ ಕೋರ್ಸ್ ರೋಡ್ ಜಂಕ್ಷನ್ ಟು ಮೌರ್ಯ ಸರ್ಕಲ್ ರೋಡ್
    ಓಲ್ಡ್ ಪೋಸ್ಟ್ ಆಫೀಸ್ ರೋಡ್ ಟು ಸಿಟಿ ಸಿವಿಲ್ ಕೋರ್ಟ್ ಟು ಮೈಸೂರು ಬ್ಯಾಂಕ್ ಸರ್ಕಲ್
    ಮಹಾತ್ಮ ಗಾಂಧಿ ರೋಡ್ ಟು ಮಹಾತ್ಮ ಗಾಂಧಿ ಸರ್ಕಲ್ ಟ್ರಿನಿಟಿ ರೋಡ್
    ರೆಸಿಡೆನ್ಸಿ ರೋಡ್ ಟು ರಿಚ್ಮಂಡ್ ಎಂಜಿ ರೋಡ್

    ವೈಟ್ ಟಾಪಿಂಗ್ ಮಾಡುತ್ತೇವೆ ಎಂದು ಬಿಬಿಎಂಪಿ ಸಿದ್ಧತೆ ಮಾಡಿಕೊಂಡರೆ ಇನ್ನೊಂದೆಡೆ ಟ್ರಾಫಿಕ್ ಸಮಸ್ಯೆ ಕೂಡ ಆಗಲಿದೆ. ಜೊತೆಗೆ ಕಾಮಗಾರಿ ಆರಂಭ ಮಾಡಿದರೆ ಟ್ರಾಫಿಕ್ ಡೈವರ್ಶನ್ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಹತ್ರಾಸ್‌ ಕಾಲ್ತುಳಿತಕ್ಕೆ 116 ಮಂದಿ ಬಲಿ – ಅಂದು ಹೆಡ್‌ ಕಾನ್‌ಸ್ಟೇಬಲ್‌ ಈಗ ಸ್ವಯಂಘೋಷಿತ ಗುರು!

  • ಬೆಂಗಳೂರಿನಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಆರಂಭ : ತುಷಾರ್‌ ಗಿರಿನಾಥ್‌

    ಬೆಂಗಳೂರಿನಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಆರಂಭ : ತುಷಾರ್‌ ಗಿರಿನಾಥ್‌

    ಬೆಂಗಳೂರು: ಕೆಲವೊಂದು ಕಡೆ ಇವಿಎಂನಲ್ಲಿ (EVM) ಸಣ್ಣಪುಟ್ಟ ಸಮಸ್ಯೆ ಇತ್ತು. ಬೆಳಗ್ಗೆ 7 ಗಂಟೆಯ ಒಳಗಡೆ ಎಲ್ಲಾ ಸಮಸ್ಯೆ ಪರಿಹಾರ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಹೇಳಿದ್ದಾರೆ.

    ಮತದಾನ ಮಾಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಎಲ್ಲಾ ಕಡೆ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಶುರುವಾಗಿದೆ. ಮತದಾನ ಹೆಚ್ಚಾಗಲು ಎಲ್ಲಾ ರೀತಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.  ಇದನ್ನೂ ಓದಿ: ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ ಮೇಲೆ ದಾಳಿ ಕೇಸ್‌ – ಖಲಿಸ್ತಾನಿ ಪರ ಆರೋಪಿ ಬಂಧನ

     

    ನಮಗೂ ಇದೊಂದು ಪರೀಕ್ಷೆ. ಈ ಬಾರಿ ಮತದಾನ ಹೆಚ್ಚಾಗುವ ನಿರೀಕ್ಷೆಯಿದೆ. ಬೆಂಗಳೂರು ಜನತೆ ಬಂದು ಮತ ಹಾಕಬೇಕು ಎಂದು ತುಷಾರ್ ಗಿರಿನಾಥ್ ಕೈ ಮುಗಿದು ಮನವಿ ಮಾಡಿದರು.

    ಬೆಂಗಳೂರಿನಲ್ಲಿ ಉತ್ತಮ ಪತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಳಗ್ಗೆ ಹಲವು ಮತಗಟ್ಟೆಗಳಲ್ಲಿ ಮತದಾರರು ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.

     

  • ಮತದಾನಕ್ಕೆ ಮೂರೇ ದಿನ ಬಾಕಿ- ಬೆಂಗ್ಳೂರಿನಲ್ಲಿ ತಯಾರಿ ಬಗ್ಗೆ ಚುನಾವಣಾಧಿಕಾರಿಗಳು ಹೇಳಿದ್ದು ಹೀಗೆ

    ಮತದಾನಕ್ಕೆ ಮೂರೇ ದಿನ ಬಾಕಿ- ಬೆಂಗ್ಳೂರಿನಲ್ಲಿ ತಯಾರಿ ಬಗ್ಗೆ ಚುನಾವಣಾಧಿಕಾರಿಗಳು ಹೇಳಿದ್ದು ಹೀಗೆ

    ಬೆಂಗಳೂರು: ಮತದಾನಕ್ಕೆ (Loksabha Elections 2024) ಕೇವಲ ಮೂರು ದಿನ ಬಾಕಿ ಇರುವಾಗ ಚುನಾವಣಾಧಿಕಾರಿಗಳಿಂದ ಅಂತಿಮ ಹಂತದ ಸಿದ್ಧತೆಯ ಸಭೆ ಇಂದು ನಡೆಸಲಾಗಿದೆ. ಸಭೆಯಲ್ಲಿ ಮತದಾನದ ಪೂರ್ವ ದಿನ ಹೇಗೆಲ್ಲ ತಯಾರಿ ಆಗಬೇಕು ಅಂತಾ ಸಿದ್ಧತೆ ಬಗ್ಗೆ ಚರ್ಚೆ ನಡೆಸಲಾಗಿದೆ.

    ಸಭೆಯ ಬಳಿಕ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ (Tushar Girinath) ಹಾಗೂ ಪೊಲೀಸ್ ಆಯುಕ್ತ ದಯಾನಂದ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್ ಹಾಗೂ ಬೆಂಗಳೂರು ಗ್ರಾಮಾಂತರ ಹೀಗೆ ಒಟ್ಟು 5 ಲೋಕಸಭಾ ಕ್ಷೇತ್ರಗಳಿವೆ. ಜೊತೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಕೆಲ ಏರಿಯಾಗಳು ಸೇರ್ಪಡೆಗೊಂಡಿವೆ ಎಂದರು.

    ಬಂದೋಬಸ್ತ್: ಬೆಂಗಳೂರು ನಗರ ಪೊಲೀಸ್ ಘಟಕದಿಂದ 9397 ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. 3,919 ಗೃಹ ರಕ್ಷಕ ಸಿಬ್ಬಂದಿ, 54 ಸಶಸ್ತ್ರ ತುಕಡಿ ಹಾಗೂ 11 ಕೇಂದ್ರಿಯ ಪೊಲೀಸ್ ತುಕಡಿ ಇದೆ. ಇವತ್ತಿಂದ ಮತದಾನಕ್ಕೆ 72 ಗಂಟೆ ಇದೆ. ಮತದಾನ 7 ಗಂಟೆಗೆ ಆರಂಭವಾಗಿ ಸಂಜೆ 6 ಗಂಟೆಗೆ ಕ್ಲೋಸ್ ಆಗಲಿದೆ. ಈ ಸಮಯದಲ್ಲಿ ಹಣ ಹಂಚಿಕೆ ಆಗಲಿ, ಆಮಿಷ ಮಾಡೋದು ನಡೆಯಬಾರದು. ಮತದಾರರ ಮೇಲೆ ಪ್ರಭಾವ ಬೀರುವ ಚಟುವಟಿಕೆ ಮೇಲೆ ನಿಗಾ ವಹಿಸಲಾಗಿದೆ. ಇವತ್ತಿನ ಸಭೆಯಲ್ಲಿ ಕೋಡ್ ಆಫ್ ಕಂಡೆಕ್ಟ್ ಸ್ಟ್ರಾಟಜಿ ಬಗ್ಗೆ ಮಾತಾಡಿರುವುದಾಗಿ ತಿಳಿಸಿದ ಅವರು, ಈ ಮೂರು ದಿನದಲ್ಲಿ ಹೆಚ್ಚು ನಿಗಾ ವಹಿಸಬೇಕು ಅಂತ ಎಫ್ ಎಸ್ ಟಿ ಗೆ ತಿಳಿಸಿದ್ದೇವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹೇಳಿದರು.

    ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 8,984 ಮತಗಟ್ಟೆಗಳಿವೆ. ಇದರಲ್ಲಿ 2003 ಕ್ರಿಟಿಕಲ್ ಮತಗಟ್ಟೆ ಗಳು, 253 ವಲ್ನರಬಲ್ ಮತಗಟ್ಟೆಗಳು, 30 ಎಕ್ಸ್ ಪೆಂಡೀಚರ್ ಸೆನ್ಸಿಟಿವ್ ಮತಗಟ್ಟೆಗಳು, 305 ಮೈಕ್ರೋ ಅಬ್ಸವರ್ಸರ್‍ಗಳಿವೆ. ಸೂಕ್ಷ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ 11794 ಸಿಎಪಿಎಫ್ ಮತ್ತು ನಾನ್ ಸಿಎಪಿಎಫ್ ತಂಡಗಳ ನಿಯೋಜನೆ ಮಾಡಲಾಗುತ್ತದೆ. 103 ಚೆಕ್ ಪೋಸ್ಟ್ ಗಳು, 91 ಪ್ಲೇಯಿಂಗ್ ಸ್ಕ್ವಾಡ್ ಗಳು ಇರಲಿವೆ. ಇನ್ನು 5,117 ರೌಡಿಶೀಟರ್ ಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುವುದು. 7,533 ಪರವಾನಿಗೆ ಇರುವ ಶಸ್ತ್ರಾಸ್ತ್ರಗಳನ್ನು ಜಮಾ ಮಾಡಲಾಗಿದೆ. ಏ. 24 ಸಂಜೆ ಆರು ಗಂಟೆಯಿಂದ – ಏ. 26 ರಾತ್ರಿ 12 ಗಂಟೆ ತನಕ ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವುದಾಗಿ ಹೇಳಿದರು.

    ಮದ್ಯ ನಿಷೇಧ: ಕರ್ನಾಟಕದಲ್ಲಿ ಮೊದಲನೇ ಹಂತದ ಲೋಕಸಭಾ ಚುನಾವಣೆಯ ಹಿನ್ನೆಲೆ ಬೆಂಗಳೂರಿನ ಒಟ್ಟು ಐದು ಲೋಕಸಭಾ ಕ್ಷೇತ್ರಗಳಿದ್ದು, 8088 ಒಟ್ಟು ಮತಗಟ್ಟೆಗಳಿವೆ. ಇದರಲ್ಲಿ 6,351 ಸಾಮಾನ್ಯ ಮತಗಟ್ಟೆಗಳಿದ್ದು, 1,737 ಸೂಕ್ಷ್ಮ ಮತಗಟ್ಟೆಗಳಿವೆ. ಮತದಾನ ಮುಗಿಯುವ ಅವಧಿಯ ಹಿಂದಿನ 48 ಗಂಟೆಗಳ ಕಾಲ ಮದ್ಯ ನಿಷೇಧ ಮಾಡಲಾಗುತ್ತದೆ. ಮಾದಕ ವಸ್ತುಗಳ ಮಾರಾಟ ಮಾಡುವಂತಿಲ್ಲ. ಮದ್ಯ ಮಾರಾಟ ಮಾಡದಿರಲು ನಿಷೇಧಾಜ್ಞೆ ಜಾರಿಗೆ ತರಲಾಗುತ್ತದೆ ಎಂದರು.

    ಬೆಂಗಳೂರಿನಲ್ಲಿ 1.10 ಕೋಟಿಗೂ ಹೆಚ್ಚು ಮತದಾರರು ಇದ್ದಾರೆ. 31 ಸಾವಿರ ವಿಶೇಷ ಚೇತನರು, 1,685 ಸೇವಾ ಮತದಾರರು, 1,60,232 ಒಟ್ಟು ಯುವ ಮತದಾರರು, 2,158 ಎನ್ ಆರ್ ಐ ಮತದಾರರು ಇದ್ದಾರೆ. ಇನ್ನು 105 ಚೆಕ್ ಪೋಸ್ಟ್, 28 ಮಸ್ಟರಿಂಗ್ ಕೇಂದ್ರಗಳಿವೆ ಎಂದು ತಿಳಿಸಿದರು. ಸಭೆಯಲ್ಲಿ ಮಸ್ಟರಿಂಗ್ ಅಧಿಕಾರಿಗಳು, ಮತಗಟ್ಟೆ ಅಧಿಕಾರಿಗಳು, ಎಂಸಿಸಿ ನೋಡಲ್ ಆಫೀಸರ್ ಗಳು ಮತ್ತು ಬೆಂಗಳೂರು ನಾಲ್ಕು ಲೋಕಸಭಾ ಕ್ಷೇತ್ರಗಳ ಆರ್ ಓಗಳು ಮತ್ತು ಚುನಾವಣಾಧಿಕಾರಿಗಳು ಉಪಸ್ಥಿತರಿದ್ದರು.

  • ಕಡ್ಡಾಯ ಕನ್ನಡ ನಾಮಫಲಕ ಗಡುವು ಒಂದು ದಿನ ವಿಸ್ತರಣೆ

    ಕಡ್ಡಾಯ ಕನ್ನಡ ನಾಮಫಲಕ ಗಡುವು ಒಂದು ದಿನ ವಿಸ್ತರಣೆ

    – ನಾಳೆಯೊಳಗೆ ನಾಮಫಲಕ ಹಾಕದಿದ್ದರೆ ನಾವೇ ತೆರವು ಮಾಡ್ತೀವಿ
    – ಅಂಗಡಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಎಚ್ಚರಿಕೆ

    ಬೆಂಗಳೂರು: ಕಡ್ಡಾಯ ಕನ್ನಡ ನಾಮಫಲಕ (Kannada Name Board) ಅಳವಡಿಕೆಗೆ ಇಂದು ಕೊನೆಯ ದಿನವಾಗಿದ್ದು, ಈ ಗಡುವನ್ನು ಒಂದು ದಿನ ವಿಸ್ತರಣೆ ಮಾಡಿ ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಆದೇಶ ಹೊರಡಿಸಿದ್ದಾರೆ.

    ಇಂದು ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಗಡುವು ನೀಡಲಾಗಿತ್ತು. ಆದರೆ ಇದನ್ನು ಕಮೀಷನರ್ ಒಂದು ದಿನ ವಿಸ್ತರಣೆ ಮಾಡಿದ್ದಾರೆ. 3,000 ಅಂಗಡಿಗಳು ಇನ್ನೂ ಕನ್ನಡ ನಾಮಫಲಕ ಹಾಕಿಲ್ಲ. ನಾಳೆಯೊಳಗೆ (ಫೆ.29) ನಾಮಫಲಕ ಹಾಕದಿದ್ದರೆ ನಾವೇ ತೆರವು ಮಾಡುತ್ತೇವೆ. ಕೂಡಲೇ ನಾಮಫಲಕ ಬದಲಾಯಿಸಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ಕೇಸ್‌ – ಅಖಿಲೇಶ್‌ ಯಾದವ್‌ಗೆ ಸಿಬಿಐ ಸಮನ್ಸ್‌

    ಕಡ್ಡಾಯ ಕನ್ನಡ ನಾಮಫಲಕ ಬಳಸದವರಿಗೆ ಮತ್ತೊಂದು ದಿನ ಅವಕಾಶ ನೀಡಲಾಗಿದೆ. ನಾಳೆ ಸಂಜೆಯವರೆಗೆ ನಾಮಫಲಕ ಬದಲಾವಣೆಗೆ ಅವಕಾಶ ನೀಡಿದ್ದು, ನಾಳೆಯೊಳಗೆ ಬದಲಾಯಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ಕೊಡಲಾಗಿದೆ. ಈಗಾಗಲೇ 90% ರಷ್ಟು ನಾಮಫಲಕ ಬದಲಾಗಿದೆ. ಇನ್ನು ಉಳಿದಿರೋದು 3 ಸಾವಿರ ನಾಮಫಲಕ ಮಾತ್ರ. ಅವರು ನಾಳೆ ಸಂಜೆಯೊಳಗೆ ಬದಲಾಯಿಸಬೇಕು. ಕೆಲವು ಅಂತಾರಾಷ್ಟ್ರೀಯ ಕಂಪನಿಗಳು ಹಾಗೂ ಎಸ್‌ಬಿಐ, ಕೆನರಾ ಬ್ಯಾಂಕ್ ಮನವಿ ಕೊಟ್ಟಿವೆ. ನಾಮಫಲಕ ಅಳವಡಿಕೆಗೆ ಮತ್ತಷ್ಟು ಗಡುವು ಕೇಳಿದ್ದಾರೆ. ಈ ಬಗ್ಗೆ ನಾಳೆ ಸಂಜೆ ತೀರ್ಮಾನ ಮಾಡುತ್ತೇವೆ ಎಂದು ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರದಲ್ಲಿ ವಿದೇಶದಲ್ಲಿ ನೆಲೆಸಿರೋ ಭಾರತೀಯರಿಗೂ ರಕ್ಷಣೆ ಸಿಕ್ತಿದೆ: ಜೈಶಂಕರ್ ಶ್ಲಾಘನೆ

    ಇನ್ನು ಈ ಕುರಿತು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಮಾತನಾಡಿದ್ದು, ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಮೂಲಕ ಬಿಬಿಎಂಪಿ ಹಾಗೂ ಸರ್ಕಾರ ನಾಮಫಲಕ ಜಾರಿಗೊಳಿಸಲು ಇವತ್ತಿನವರೆಗೂ ಗಡುವು ಕೇಳಿತ್ತು. ಒಟ್ಟು 50,216ಗಳಲ್ಲಿ 40,600 ಉದ್ಯಮಿಗಳಿಗೆ ನೋಟಿಸ್ ಕೊಟ್ಟಿದ್ದೇವೆ. 3,600 ಉದ್ಯಮಿಗಳು ಕನ್ನಡ ನಾಮಫಲಕ ಹಾಕಿಕೊಳ್ಳಬೇಕು. ಒಂದು ವೇಳೆ ನಾಳೆಯೊಳಗೆ ಕನ್ನಡ ನಾಮಫಲಕ ಜಾರಿಯಾಗದಿದ್ದರೆ ಅವರ ಲೈಸನ್ಸ್ ರದ್ದು ಮಾಡಲಾಗುವುದು ಎಂದು ಬಿಬಿಎಂಪಿ ಕಮೀಷನರ್ ಹೇಳಿದ್ದಾರೆ. 100% ಕನ್ನಡೀಕರಣ ಆಗದಿದ್ದರೇ ಮತ್ತೆ ಬೀದಿಗೆ ಇಳಿಯುತ್ತೇವೆ ಎಂದರು. ಇದನ್ನೂ ಓದಿ: ಲೋಕಸಭಾ ಚುನಾವಣೆಗೂ ಮುನ್ನ I.N.D.I.A ಒಕ್ಕೂಟದಲ್ಲಿ ಒಡಕು – ಚೂರನ್ನು ಮತ್ತೆ ಜೋಡಿಸುತ್ತಾ ಕಾಂಗ್ರೆಸ್‌?

    ಇದು ಬೆಂಗಳೂರಿಗೆ ಮಾತ್ರ ಸೀಮಿತವಾಗಬಾರದು. ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಕನ್ನಡ ನಾಮಫಲಕಗಳು ಇರಬೇಕು. ಇಲ್ಲದಿದ್ದರೆ ಎಲ್ಲಾ ಜಿಲ್ಲೆಗಳಲ್ಲಿ ಕರವೇ ಕಾರ್ಯಕರ್ತರು ಬೀದಿಗಿಳಿಯುತ್ತಾರೆ. ಬೆಂಗಳೂರಲ್ಲಿ 3,500-4,000 ಉದ್ಯಮಿಗಳು ಕನ್ನಡ ಬಳಸದೇ ಇರೋರು ನಾಮಫಲಕದಲ್ಲಿ 60% ಕನ್ನಡ ನಾಮಫಲಕ ಹಾಕಬೇಕು. ನುಡಿದಂತೆ ನಡೆಯದಿದ್ದರೇ, ಕನ್ನಡ ಬಳಸದೇ ಇದ್ದರೇ ಮತ್ತೆ ಬೆಂಗಳೂರಲ್ಲಿ ಕರವೇ ಕಾರ್ಯಕರ್ತರು ಬೀದಿಗೆ ಇಳಿಯುತ್ತೇವೆ. ನಾಮಫಲಕ ಹಾಕದೇ ಇರೋರ ಮೇಲೆ ಮಾರ್ಚ್ 1 ರವರೆಗೂ ಬಿಬಿಎಂಪಿ ಯಾವ ಕ್ರಮ ಕೈಗೊಳ್ಳುತ್ತದೆ ಎಂದು ಕಾದುನೋಡುತ್ತೇವೆ. ಬಿಬಿಎಂಪಿಯಿಂದ ಯಾವುದೇ ಕ್ರಮ ಆಗದಿದ್ದರೇ ಮತ್ತೆ ಮಾರ್ಚ್ 5 ರಂದು ಬೀದಿಗಿಳಿಯುತ್ತೇವೆ. ಮಾರ್ಚ್ 5 ರಂದು ಬಿಬಿಎಂಪಿ ವಿರುದ್ಧ ಕರವೇ ಪ್ರೊಟೆಸ್ಟ್ ಮಾಡುವುದಾಗಿ ನಾರಾಯಣ ಗೌಡರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶ: 15 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಸ್ಪೀಕರ್‌

  • ವಿಶೇಷ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿ: ಬಿಬಿಎಂಪಿ ಕಮಿಷನರ್‌ ಕರೆ

    ವಿಶೇಷ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿ: ಬಿಬಿಎಂಪಿ ಕಮಿಷನರ್‌ ಕರೆ

    ಬೆಂಗಳೂರು: ನವೆಂಬರ್‌ 1 ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವವನ್ನು (Kannada Rajyotsava) ವಿಶೇಷ ರೀತಿಯಲ್ಲಿ ಮನೆಯಲ್ಲಿ ಆಚರಿಸುವಂತೆ ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ (Tushar Girinath) ಕರೆ ನೀಡಿದ್ದಾರೆ.

    ಈ ಕುರಿತು ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ ಆಯುಕ್ತರು, ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿ ಎಂದು ಜನತೆಗೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: KSRTC ನೌಕರರ ಕುಟುಂಬ ಕಲ್ಯಾಣ ಯೋಜನೆ ಪರಿಹಾರ ಮೊತ್ತ 3 ರಿಂದ 10 ಲಕ್ಷಕ್ಕೆ ಹೆಚ್ಚಳ

    ಬಿಬಿಎಂಪಿ ಸಲಹೆ ಏನು?
    * ಬಿಬಿಎಂಪಿ ವ್ಯಾಪ್ತಿಯಲ್ಲಿ ನವೆಂಬರ್ 01 ರಂದು ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮ ವೇಳಾಪಟ್ಟಿಯಲ್ಲಿರುವಂತೆ ಧ್ವಜಾರೋಹಣ ರಾಷ್ಟ್ರಗೀತೆ, ನಾಡಗೀತೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯಾದ ನಂತರ ಐದು ಕನ್ನಡ ಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸುವುದು.

    * ನವೆಂಬರ್ 1 ರಂದು ಬೆಂಗಳೂರು ನಗರದ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 “ಹೆಸರಾಯಿತು. ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷ ವಾಕ್ಯವನ್ನು ಬರೆಯುವಂತೆ ನಾಗರಿಕರಲ್ಲಿ ಮನವಿ ಮಾಡುವುದು. ಇದನ್ನೂ ಓದಿ: ಹೀಗೆ ಆದ್ರೆ ಮುಂದೆ ಕುಡಿಯೋಕು ಸಹ ನೀರು ಇರಲ್ಲ: ಕಾವೇರಿ ಹೋರಾಟದಲ್ಲಿ ಅಜ್ಜಿ ಕಣ್ಣೀರು

    * ನವೆಂಬರ್ 1 ರ ಬೆಳಗ್ಗೆ 9 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡಗೀತೆಯನ್ನು ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡಗೀತೆಗೂ ಗೌರವ ಸಲ್ಲಿಸಲು ಮನವಿ ಮಾಡುವುದು.

    ನವೆಂಬರ್ 1ರ ಸಂಜೆ 50 ಗಂಟೆಗೆ ಬೆಂಗಳೂರು ನಗರದ ಎಲ್ಲಾ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸಲು ಮನವಿ ಮಾಡುವುದು. ಇದನ್ನೂ ಓದಿ: ಮುಂದಿನ 15 ದಿನ ನಿತ್ಯ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡಿ – ಕರ್ನಾಟಕಕ್ಕೆ CWRC ನಿರ್ದೇಶನ

    * ನವೆಂಬರ್ 1ರ ಸಂಜೆ 7 ಗಂಟೆಗೆ ಬೆಂಗಳೂರು ನಗರದ ಎಲ್ಲಾ ಮನೆಗಳ ಮುಂದೆ, ಕಚೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಿಸಬೇಕು ಎಂದು ಸಲಹೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ವಿರುದ್ಧ ತನಿಖೆಗೆ ಆದೇಶ

    ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ವಿರುದ್ಧ ತನಿಖೆಗೆ ಆದೇಶ

    ಬೆಂಗಳೂರು: ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ (Tushar Girinath) ವಿರುದ್ಧ ರಾಜ್ಯ ಸರ್ಕಾರ ತನಿಖೆಗೆ ಮುಂದಾಗಿದೆ.

    ಚಿಲುಮೆ (Chilume) ಸಂಸ್ಥೆಗೆ ಮತದಾರ ಖಾಸಗಿ ಮಾಹಿತಿ ಸಂಗ್ರಹಕ್ಕೆ ಅವಕಾಶ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ತನಿಖೆ ನಡೆಸಲು ಸೂಚಿಸಿದ್ದಾರೆ.

    ಮಾಜಿ ಪರಿಷತ್‌ ಸದಸ್ಯ ರಮೇಶ್ ಬಾಬು (Ramesh Babu) ಅವರು ಬರೆದ ಪತ್ರದ ಮೇರೆಗೆ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ತನಿಖೆ ನಡೆಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಈಗ ಮುಖ್ಯ ಕಾರ್ಯದರ್ಶಿಗಳು ಪರಿಶೀಲನೆ ನಡೆಸಿ ವರದಿ ನೀಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದ್ದಾರೆ.  ಇದನ್ನೂ ಓದಿ: ಶಿವಮೊಗ್ಗ ಗಲಭೆಗೆ ಟ್ವಿಸ್ಟ್ – ರಾಗಿಗುಡ್ಡದ ಗಲಾಟೆ ಪೂರ್ವನಿಯೋಜಿತ?

    ಖಾಸಗಿ ಸಂಸ್ಥೆಯಾದ ಚಿಲುಮೆಗೆ ಮತದಾರರ ಖಾಸಗಿ ವಿಷಯ ಸಂಗ್ರಹಣೆಗೆ ಅವಕಾಶ ನೀಡಿ, ಕರ್ತವ್ಯಲೋಪ ಎಸಗಿರುವ ಸಂಬಂಧ ಹಾಗೂ ಚಿಲುಮೆ ಸಂಸ್ಥೆಯ ಲೋಪದ ಬಗ್ಗೆ ಪೂರ್ಣ ಪ್ರಮಾಣದ ತನಿಖೆ ನಡೆಸುವಂತೆ ರಮೇಶ್ ಬಾಬು ಜುಲೈ 3 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬ್ಯಾರಿಕೇಡ್ ಯಾಕೆ ಹಾಕಿಲ್ಲ?- ಪೊಲೀಸರಿಗೆ ಸಿದ್ದರಾಮಯ್ಯ ಕ್ಲಾಸ್

    ಬ್ಯಾರಿಕೇಡ್ ಯಾಕೆ ಹಾಕಿಲ್ಲ?- ಪೊಲೀಸರಿಗೆ ಸಿದ್ದರಾಮಯ್ಯ ಕ್ಲಾಸ್

    ಬೆಂಗಳೂರು: ಅಂಡರ್ ಪಾಸ್‍ನಲ್ಲಿ ನೀರು ನಿಂತುಕೊಳ್ಳುತ್ತೆ ಅಂದಾಗ ಬ್ಯಾರಿಕೇಡ್ ಹಾಕಬೇಕಿತ್ತು. ಯಾಕೆ ಬ್ಯಾರಿಕೇಡ್ ಹಾಕಿಲ್ಲ ಎಂದು ನೂತನ ಸಿಎಂ ಸಿದ್ದರಾಮಯ್ಯ (Siddaramaiah) ಪೊಲೀಸರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಅಂಡರ್ ಪಾಸ್ (Underpass) ದುರಂತ ಸಂಬಂಧ ಸಿಎಂ ಅವರು ತಮ್ಮ ನಿವಾಸಕ್ಕೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ (Tushar Giri Nath) ಅವರನ್ನು ಕರೆಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ಆಯುಕ್ತರಿಂದ ಮಾಹಿತಿ ಪಡೆದಿದ್ದಾರೆ. ಮಳೆ ಅವಾಂತರ ಎಲ್ಲೆಲ್ಲಿ ಆಗಿದೆ ಅಲ್ಲಿ ಅಧಿಕಾರಿಗಳು ಕೂಡಲೇ ತೆರಳಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು ಎಂದು ಇದೇ ವೇಳೆ ಸಿಎಂ ಸೂಚಿಸಿದರು. ಇದನ್ನೂ ಓದಿ: ಭಾರೀ ಮಳೆಗೆ ಪ್ರವಾಹದಂತಾದ ಜ್ಯುವೆಲ್ಲರಿ ಶಾಪ್ – ಕೊಚ್ಚಿ ಹೋಯ್ತು 2.5 ಕೋಟಿಯ ಆಭರಣ

    ಅಧಿಕಾರಿಗಳಿಗೆ ಸಿಎಂ ಸೂಚನೆ ಏನು..?: ಎಲ್ಲೆಲ್ಲಿ ಮರ ಬಿದ್ದಿದೆ ಅದನ್ನ ತಕ್ಷಣವೇ ತೆರವು ಮಾಡಿ. ತಕ್ಷಣವೇ ಟ್ರಾಫಿಕ್ ಕ್ಲಿಯರ್ ಮಾಡಲಿ ಟ್ರಾಫಿಕ್ ಪೊಲೀಸರಿಗೆ ಸೂಚನೆ ನೀಡಿದರು. ನೀರು ನುಗ್ಗಿರೋ ಮನೆಗಳಿಗೆ ಕೂಡಲೇ ಬಿಬಿಎಂಪಿ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಪರಿಹಾರ ಮಾಡಬೇಕು. ವಸತಿ ಸಮಸ್ಯೆ ಆಗಿರೋರಿಗೆ ತಕ್ಷಣವೇ ತಾತ್ಕಾಲಿಕ ವ್ಯವಸ್ಥೆ ಮಾಡಿ. ಹೂಳು ತುಂಬಿರೋ ರಾಜಕಾಲುವೆಗಳನ್ನ ಹುಡುಕಿ ಕೂಡಲೇ ಹೂಳೆತ್ತಲು ಅಗತ್ಯ ಕ್ರಮ ತೆಗೆದುಕೊಳ್ಳಿ ಎಂದಿದ್ದಾರೆ.

    ಯಾವ ಭಾಗದಿಂದ ದೂರು ಬರುತ್ತೆ ತಕ್ಷಣವೇ ಅಲ್ಲಿಗೆ ತೆರಳಿ ಸಮಸ್ಯೆ ಪರಿಹಾರ ಮಾಡಿ. ಬಿಬಿಎಂಪಿ ಸಹಾಯವಾಣಿ ಆಕ್ಟೀವ್ ಆಗಿ ಇರುವಂತೆ ನೋಡಿಕೊಳ್ಳಿ. ದೂರುಗಳಿಗೆ ತಕ್ಷಣವೇ ಸ್ಪಂದಿಸಬೇಕು. ಅಧಿಕಾರಿಗಳು ನಿರ್ಲಕ್ಷ್ಯ ಮಾಡಬಾರದು ಎಂದು ಬಿಬಿಎಂಪಿ ಆಯುಕ್ತ, ನಗರ ಪೆÇಲೀಸ್ ಆಯುಕ್ತರಿಗೆ ಸಿಎಂ ಸೂಚನೆ ನೀಡಿದರು.