Tag: ತೂಮಕೂರು

  • ಪೊಲೀಸ್ ಠಾಣೆಯ ಎದುರು ಮಲಗಿ ಬಿಜೆಪಿ ನಾಯಕನ ರಂಪಾಟ!

    ಪೊಲೀಸ್ ಠಾಣೆಯ ಎದುರು ಮಲಗಿ ಬಿಜೆಪಿ ನಾಯಕನ ರಂಪಾಟ!

    ತುಮಕೂರು: ಗ್ರಾಮಾಂತರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡರು ಪೊಲೀಸ್ ಠಾಣೆಯ ಮುಂದೆ ಮಲಗಿ ಪ್ರತಿಭಟನೆ ಮಾಡಿದ್ದು, ಚಿಕ್ಕಪುಟ್ಟ ವಿಚಾರಕ್ಕೆಲ್ಲ ಪ್ರತಿಭಟನೆ ನಡೆಸಿ ಪೊಲೀಸರಿಗೆ ತೊಂದರೆ ಮಾಡಿದ್ದಾರೆ.

    ಬಿಜೆಪಿ ಮುಖಂಡನನ್ನು ಜಿಲ್ಲೆಯ ಕ್ಯಾತಸಂದ್ರದ ಪೊಲೀಸರು ದೂರೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆತಂದಿದ್ದರು. ಇದರಿಂದ ಸಿಡಿಮಿಡಿಗೊಂಡ ಬಿ. ಸುರೇಶ್ ಗೌಡ, ಕ್ಯಾತಸಂದ್ರದ ಪೊಲೀಸ್ ಠಾಣೆಯ ದ್ವಾರದ ಮೆಟ್ಟಿಲಿನಲ್ಲಿ ಮಲಗಿ ಅತಿರೇಕದ ಪ್ರತಿಭಟನೆ ಮಾಡಿದ್ದಾರೆ.

    ದ್ವಾರದಲ್ಲಿ ಮಲಗಿದಲ್ಲದೆ ಪಿಎಸ್‍ಐ ರಾಜು ಅವರನ್ನು ಒಳಗೆ ಬಿಡದೆ ಕೆಲಕಾಲ ಹೊರಗಡೆಯೇ ನಿಲ್ಲುವಂತೆ ಮಾಡಿ ಪೊಲೀಸರಿಗೆ ತೊಂದರೆಯನ್ನು ನೀಡಿದ್ದಾರೆ. ಬಳಿಕ ಬಿಜೆಪಿ ಕಾರ್ಯಕರ್ತ ಹನುಮಂತರಾಜು ಅವರನ್ನು ಬಿಟ್ಟುಕಳಿಸುವ ಭರವಸೆ ನೀಡಿದಾಗ ಮಲಗಿದ್ದ ಗೌಡರು ಎದ್ದು ಪಿಎಸ್‍ಐ ಅವರನ್ನು ಒಳಗಡೆ ಬಿಟ್ಟಿದ್ದಾರೆ.

    ತಾಲೂಕು ಪಂಚಾಯ್ತಿಯ ಬಿಜೆಪಿ ಮಾಜಿ ಸದಸ್ಯ ಹನುಮಂತರಾಜು ವಿರುದ್ಧ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಶಿವು ಎಂಬವರ ನಡುವೆ ಪೈಪ್ ಲೈನ್ ವಿಚಾರದಲ್ಲಿ ಗಲಾಟೆ ನಡೆದಿತ್ತು. ಆದ್ದರಿಂದ ಶಿವು ಅವರು ಹನುಮಂತರಾಜು ಅವರ ಮೇಲೆ ದೂರು ನೀಡಿದ್ದರು. ಹೀಗಾಗಿ ಹನುಮಂತರಾಜು ಅವರನ್ನು ಪೊಲೀಸರು ವಿಚಾರಣೆಗೆ ಠಾಣೆಗೆ ಕರೆದುಕೊಂಡು ಹೋಗಿದ್ದರು.

    ಜೆಡಿಎಸ್ ಶಾಸಕ ಗೌರಿಶಂಕರ್ ಒತ್ತಡದಿಂದ ಬಿಜೆಪಿ ಮುಖಂಡನ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ ಅನ್ನೋದು ಸುರೇಶ್ ಗೌಡರ ಆರೋಪವಾಗಿತ್ತು. ಅದಕ್ಕಾಗಿಯೆ ತಮ್ಮ ಪಕ್ಷದವರನ್ನು ಬಿಡಿಸಲು ಸುರೇಶ್ ಗೌಡ ಅವರು ಈ ರೀತಿ ರಂಪಾಟ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಹಿಳೆ ಜೊತೆ ಅಕ್ರಮ ಸಂಬಂಧ, ಆಕೆಯ ಅಪ್ರಾಪ್ತ ಮಗಳ ಮೇಲೂ ಪೇದೆಯಿಂದ ನಿರಂತರ ಅತ್ಯಾಚಾರ

    ಮಹಿಳೆ ಜೊತೆ ಅಕ್ರಮ ಸಂಬಂಧ, ಆಕೆಯ ಅಪ್ರಾಪ್ತ ಮಗಳ ಮೇಲೂ ಪೇದೆಯಿಂದ ನಿರಂತರ ಅತ್ಯಾಚಾರ

    ತುಮಕೂರು: ಪೊಲೀಸ್ ಮುಖ್ಯಪೇದೆಯೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಘಟನೆ ತೂಮಕೂರಿನಲ್ಲಿ ನಡೆದಿದೆ.

    ನಗರದ ಜಯನಗರ ಠಾಣೆಯ ಮುಖ್ಯ ಪೇದೆ ಮೋಹನ್ ಅತ್ಯಾಚಾರ ನಡೆಸಿದ ಆರೋಪಿ. ಈ ಸಂಬಂಧ ಪೋಕ್ಸೋ ಅಡಿ ಕೇಸ್ ದಾಖಲಾಗಿದೆ. ಮುಖ್ಯ ಪೇದೆಯನ್ನು ವಶಕ್ಕೆ ಪಡೆದು ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಎಸ್‍ಪಿ ದಿವ್ಯಾ ಗೋಪಿನಾಥ್ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಖಚಿತಪಡಿಸಿದ್ದಾರೆ.

    ವ್ಯಕ್ತಿಯೊಬ್ಬರ ಮನೆಗೆ ಊಟ ಮಾಡಲು ಹೋದ ಪೇದೆ ಮೋಹನ್ ಆತನ ಪತ್ನಿಯೊಂದಿಗೆ ಸಂಬಂಧ ಬೆಳೆಸಿದ್ದ. ಕಳೆದ 6 ವರ್ಷಗಳಿಂದ ಈ ಅನೈತಿಕ ಸಂಬಂಧ ನಡೆದುಕೊಂಡು ಬಂದಿದೆ. ಇವರ ಅನೈತಿಕ ಸಂಬಂಧ ಗೊತ್ತಾಗಿ ಆ ವ್ಯಕ್ತಿ ಪತ್ನಿಯನ್ನು ಬಿಟ್ಟು ದೂರ ಉಳಿದಿದ್ರು.

    ಮಹಿಳೆಗೆ 15 ವರ್ಷದ ಮಗಳು ಕೂಡಾ ಇದ್ದು, ಪೇದೆ ಮೋಹನ್ ಆಕೆಯ ಮೇಲೂ ಕೂಡ ಅತ್ಯಾಚಾರ ನಡೆಸಿದ್ದಾನೆ. ಇದು ತಾಯಿಗೆ ಗೊತ್ತಾದಾಗ ಮನೆಗೆ ಬರದಂತೆ ಮೋಹನ್‍ಗೆ ತಾಕೀತು ಮಾಡಿದ್ದರು. ಆಗ ಇಬ್ಬರ ನಡುವೆ ಜಗಳ ನಡೆದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

     

  • ವರ್ಗಾವಣೆ ಪತ್ರ ಕೇಳಿದ್ದಕ್ಕೆ ವಿದ್ಯಾರ್ಥಿನಿಗೆ ಆಶ್ಲೀಲ ಪದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಸಿಬ್ಬಂದಿ

    ವರ್ಗಾವಣೆ ಪತ್ರ ಕೇಳಿದ್ದಕ್ಕೆ ವಿದ್ಯಾರ್ಥಿನಿಗೆ ಆಶ್ಲೀಲ ಪದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಸಿಬ್ಬಂದಿ

    ತೂಮಕೂರು: ವರ್ಗಾವಣೆ ಪತ್ರ ಕೇಳಿದಕ್ಕೆ ವಿದ್ಯಾರ್ಥಿನಿ ಮೇಲೆ ಕಾಲೇಜು ಸಿಬ್ಬಂದಿ ಆಶ್ಲೀಲ ಪದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ತುಮಕೂರು ನಗರದ ವಿವೇಕಾನಂದ ಕಾಮರ್ಸ್ ಕಾಲೇಜಿನಲ್ಲಿ ನಡೆದಿದೆ.

    ರಂಜಿತಾ(ಹೆಸರು ಬದಲಾಯಿಸಲಾಗಿದೆ) ಎಂಬ ವಿದ್ಯಾರ್ಥಿನಿ ಮೇಲೆ, ಕಾಲೇಜು ಮುಖ್ಯಸ್ಥರ ಕಾರು ಚಾಲಕ ಯದುಕುಮಾರ್ ಅವಾಚ್ಯ ಶಬ್ಧಗಳಿಂದ ಅವಹೇಳನ ಮಾಡಿ ಹಲ್ಲೆ ನಡೆಸಿದ್ದಾನೆ.

    ಎಂಕಾಂ ಮೊದಲ ವರ್ಷ ಪೂರೈಸಿದ ವಿದ್ಯಾರ್ಥಿನಿ ರಂಜಿತಾ ದ್ವಿತೀಯ ವರ್ಷದ ವ್ಯಾಸಾಂಗಕ್ಕಾಗಿ ಬೇರೆ ಕಾಲೇಜಿಗೆ ಹೋಗಲು ನಿರ್ಧರಿಸಿದ್ದಳು. ಈ ಕಾರಣಕ್ಕೆ ಪ್ರಾಂಶುಪಾಲರಾಗಿರುವ ಸುಮಾ ಅವರ ಬಳಿ ವರ್ಗಾವಣೆ ಪತ್ರವನ್ನು ನೀಡುವಂತೆ ಕೇಳಿದ್ದಾಳೆ.

    ಈ ವೇಳೆ ಪಕ್ಕದಲ್ಲಿದ್ದ ಕಾರು ಚಾಲಕ ಯದುಕುಮಾರ್ ವಿದ್ಯಾರ್ಥಿನಿಗೆ ಅಶ್ಲೀಲವಾಗಿ ಬೈದಿದ್ದಾನೆ. ಹಾಗಾಗಿ ಇವರಿಬ್ಬರ ನಡುವೆ ಮಾತಿನ ಚಕಮಕಿ ನಡೆದು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ನಡೆದ ಬಳಿಕ ರಶ್ಮಿ ಪೋಷಕರ ಜೊತೆ ಕಾಲೇಜಿಗೆ ಬಂದು ಪ್ರಶ್ನೆ ಮಾಡಿದ್ದಾಳೆ.

    ಪರಿಣಾಮವಾಗಿ ಕಾಲೇಜು ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕಾಲೇಜಿನ ಮುಖ್ಯಸ್ಥ ಬಿಜೆಪಿ ಮುಖಂಡರಾದ ಬ್ಯಾಟರಂಗೇಗೌಡರು ರಾಜಿ ಸಂಧಾನ ನಡೆಸಿ, ಕಾರು ಚಾಲಕನಿಂದ ವಿದ್ಯಾರ್ಥಿನಿಗೆ ಕ್ಷಮೆ ಕೇಳಿಸಿ ಆ ಜಗಳವನ್ನು ಮುಗಿಸಿದರು.