Tag: ತೆಪ್ಪ

  • ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿದ ಪ್ರಕರಣ – ಐವರ ಮೃತದೇಹ ಪತ್ತೆ, ಕಾರ್ಯಾಚರಣೆ ಮುಕ್ತಾಯ

    ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿದ ಪ್ರಕರಣ – ಐವರ ಮೃತದೇಹ ಪತ್ತೆ, ಕಾರ್ಯಾಚರಣೆ ಮುಕ್ತಾಯ

    ವಿಜಯಪುರ: ಕೃಷ್ಣಾ ನದಿಯಲ್ಲಿ (Krishna River) ತೆಪ್ಪ (Raft) ಮಗುಚಿ ಐವರು ಜಲಸಮಾಧಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಐವರ ಮೃತದೇಹವನ್ನೂ ಪತ್ತೆ ಮಾಡಿ ನೀರಿನಿಂದ ಹೊರತೆಗೆದಿದ್ದು, ಕಾರ್ಯಾಚರಣೆ ಮುಕ್ತಾಯಗೊಂಡಿದೆ.

    ಜಲ ಸಮಾಧಿಯಾಗಿದ್ದ ಐವರ ಪೈಕಿ ಮೂವರ ಶವಗಳ್ನು ಬುಧವಾರ ಹೊರ ತೆಗೆಯಲಾಗಿದೆ. ಪುಂಡಲಿಕ ಯಂಕಂಚಿ, ತಯ್ಯಬ್ ಚೌಧರಿ ಹಾಗೂ ದಶರಥ ಗೌಡರ್ ಶವಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ. ಇನ್ನುಳಿದ ಇಬ್ಬರಿಗಾಗಿ ಶೋಧಕಾರ್ಯ ಮುಂದುವರೆದಿತ್ತು. ಇಂದು 30 ಜನ ಸಿಬ್ಬಂದಿ ಹಾಗೂ ಐದು ಬೋಟ್‌ಗಳ ಸಹಾಯದಿಂದ ಶೋಧಕಾರ್ಯ ಪ್ರಾರಂಭಿಸಿದ್ದು, ರಫೀಕ್ ಆಲಮೇಲ (40) ಹಾಗೂ ಮೆಹಬೂಬ್ ವಾಲಿಕಾರ್ (35) ಮೃತದೇಹವನ್ನು ಪತ್ತೆಹಚ್ಚಿ ನೀರಿನಿಂದ ಹೊರತೆಗೆದಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಪ್ರಾಪ್ತರ ಬಳಕೆ ಆಗಿಲ್ಲ- ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ಪಷ್ಟನೆ

    ಜುಲೈ 2ರ ಮಂಗಳವಾರ ಸಂಜೆ 4:30ರ ಸುಮಾರಿಗೆ ಘಟನೆ ನಡೆದಿತ್ತು. ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ ಏಳು ಜನ ನೀರುಪಾಲಾಗಿದ್ದರು. ಈ ಪೈಕಿ ಓರ್ವ ಈಜಿ ದಡ ಸೇರಿದ್ದರೆ ಮತ್ತೊರ್ವನನ್ನು ರಕ್ಷಣೆ ಮಾಡಲಾಗಿತ್ತು. ಇನ್ನು ಘಟನೆಯಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ತವರಿಗೆ ಮರಳಿದ ʼವಿಶ್ವʼ ಚಾಂಪಿಯನ್ಸ್‌! – ಇಂದು ಸಂಜೆ ಮುಂಬೈನಲ್ಲಿ ರೋಡ್‌ ಶೋ

  • ಚಿಕ್ಕಮಗಳೂರಿನಲ್ಲಿ ತೆಪ್ಪ ಮುಳುಗಿ ಮೂವರು ಪ್ರವಾಸಿಗರು ದುರ್ಮರಣ

    ಚಿಕ್ಕಮಗಳೂರಿನಲ್ಲಿ ತೆಪ್ಪ ಮುಳುಗಿ ಮೂವರು ಪ್ರವಾಸಿಗರು ದುರ್ಮರಣ

    ಚಿಕ್ಕಮಗಳೂರು: ತೆಪ್ಪ (Raft) ಮುಳುಗಿ ಮೂವರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿದೆ.

    ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಮೃತ ದುರ್ದೈವಿಗಳು. ಮೂವರು ಪ್ರವಾಸಿಗರು ಭದ್ರಾ ನದಿಯ ಬ್ಯಾಕ್ ವಾಟರ್‌ನಲ್ಲಿ ತೆಪ್ಪದಲ್ಲಿ ಹೋಗಿದ್ದರು. ಈ ವೇಳೆ ತೆಪ್ಪ ಮುಳುಗಿ ಘಟನೆ ಸಂಭವಿಸಿದೆ. ಮೃತರು ಶಿವಮೊಗ್ಗ (Shivamogga) ಜಿಲ್ಲೆಯ ವಿದ್ಯಾನಗರ ಮೂಲದವರು ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಗುರುವಾರ 224 ಕ್ಷೇತ್ರಗಳಲ್ಲಿ ಬಿಜೆಪಿ ರಸ್ತೆತಡೆ: ಎನ್ ರವಿಕುಮಾರ್

    ಘಟನಾ ಸ್ಥಳಕ್ಕೆ ವನ್ಯಜೀವಿ, ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಎನ್.ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಮೂರನೇ ರೇಪ್ ಕೇಸ್‍ನಲ್ಲಿ ಪ್ರಜ್ವಲ್‍ಗೆ ಮತ್ತೆ 5 ದಿನ ಪೊಲೀಸ್ ಕಸ್ಟಡಿ

  • ತೆಪ್ಪ ಮಗುಚಿಬಿದ್ದು ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಸಾವು

    ತೆಪ್ಪ ಮಗುಚಿಬಿದ್ದು ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಸಾವು

    ದಾವಣಗೆರೆ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಾವಣಗೆರೆ (Davanagere) ಜಿಲ್ಲೆಯ ಜಗಳೂರು (Jagalur) ತಾಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಕಿತ್ತೂರು ಗ್ರಾಮದ ನಿವಾಸಿ ಮೂರ್ತಿ (40) ಮೃತ ದುರ್ದೈವಿ. ಮೂರ್ತಿ ನಿತ್ಯ ಮೀನು (Fish) ಹಿಡಿದು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಅದೇ ರೀತಿ ಎಂದಿನಂತೆ ಮೂರ್ತಿ ಮೀನು ಹಿಡಿಯಲು ತೆಪ್ಪದಲ್ಲಿ (Raft) ಹೋಗಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ತೆಪ್ಪ ಮಗುಚಿ ಬಿದ್ದು ಮೀನಿಗೆ ಹಾಕಿದ್ದ ಬಲೆ ಕಾಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್‌ – ಬಾಂಬರ್‌ ಬಳ್ಳಾರಿಯಿಂದ ಭಟ್ಕಳಕ್ಕೆ ತೆರಳಿರುವ ಶಂಕೆ

    ಮೀನಿನ ಬಲೆ ಕಾಲಿಗೆ ಸಿಲುಕಿದ ಹಿನ್ನೆಲೆ ಮೂರ್ತಿ ನೀರಿನಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ. ಸ್ಥಳೀಯರು ಮೂರ್ತಿ ಅವರ ಮೃತದೇಹವನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಬಿಳಚೋಡು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ವಿಶ್ವಪ್ರಸಿದ್ಧ ಯಾಣದಲ್ಲಿ ದೇಶದ ಮೊದಲ WiFi-7 ಸೇವೆ

  • ನನಗೆ ಜ್ವರ ಇತ್ತು: ತೆಪ್ಪದಲ್ಲಿ ಪ್ರವಾಹ ವೀಕ್ಷಣೆಗೆ ಮಹೇಶ್‌ ಸ್ಪಷ್ಟನೆ

    ನನಗೆ ಜ್ವರ ಇತ್ತು: ತೆಪ್ಪದಲ್ಲಿ ಪ್ರವಾಹ ವೀಕ್ಷಣೆಗೆ ಮಹೇಶ್‌ ಸ್ಪಷ್ಟನೆ

    ಚಾಮರಾಜನಗರ: ನನಗೆ ಜ್ವರ ಇದ್ದ ಕಾರಣದಿಂದ ತೆಪ್ಪದಲ್ಲಿ ಪ್ರವಾಹ(Flood) ವೀಕ್ಷಣೆಗೆ ಹೋಗಿದ್ದೆ ಎಂದು ಶಾಸಕ ಎನ್. ಮಹೇಶ್(N Mahesh) ಸ್ಪಷ್ಟನೆ ನೀಡಿದ್ದಾರೆ

    ತೆಪ್ಪದಲ್ಲಿ ಕುಳಿತು ವೀಕ್ಷಣೆ ಮಾಡಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಅಂದು ನನಗೆ ಜ್ವರ(Fever) ಇತ್ತು. ಸೊಂಟದ ಮಟ್ಟದವರೆಗೆ ನೀರಿತ್ತು. ನೀರಿನಲ್ಲಿ ಹೋಗಬಾರದು ಎಂಬ ಕಾರಣಕ್ಕೆ ತೆಪ್ಪ ಹತ್ತಿದ್ದೆ ಎಂದು ತಿಳಿಸಿದರು.

    ಮೂರು ಅಡಿಗಿಂತ ಹೆಚ್ಚು ನೀರು ನಿಂತಿತ್ತು. ಅರ್ಧ ಅಡಿ ನೀರಿನಲ್ಲಿ ತೆಪ್ಪ ಹೋಗುತ್ತಾ? ನಾನು ಯಾವುದೇ ನಾಟಕ ಆಡುವುದಿಲ್ಲ. ವೀಡಿಯೋ ವೈರಲ್‌ ಮಾಡುತ್ತರಲ್ಲ ಅವರು ನಾಟಕ ಆಡುತ್ತಿದ್ದಾರೆ ಎಂದು ಸಿಟ್ಟು ಹೊರ ಹಾಕಿದರು. ಇದನ್ನೂ ಓದಿ: ಹುಡುಗರ ಲೈಂಗಿಕ ಸಾಮರ್ಥ್ಯ ಎರಡೇ ನಿಮಿಷ, ಮ್ಯಾಗಿ ಹಾಗೆ ಮುಗಿದು ಹೋಗತ್ತೆ: ಶಾಕಿಂಗ್ ಹೇಳಿಕೆ ಕೊಟ್ಟ ನಟಿ ರೆಜಿನಾ

    ಏನಿದು ಘಟನೆ?
    ಪ್ರವಾಹ ಬಂದ ಹಿನ್ನೆಲೆಯಲ್ಲಿ ಯಳಂದೂರು ತಾಲೂಕಿನ ಮಾಂಬಳ್ಳಿಯಲ್ಲಿ ನಾಲ್ಕು ದಿನಗಳ ಹಿಂದೆ ಮಹೇಶ್‌ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ತೆಪ್ಪದಲ್ಲಿ ಕುಳಿತು ಮಹೇಶ್‌ ನೆರೆ ವೀಕ್ಷಣೆ ಮಡಿದ್ದರು.

    ಒಂದುವರೆ ಅಡಿ ನೀರಿನಲ್ಲಿ ಮಹೇಶ್‌ ಅವರಿಗೆ ನಡೆಯಬಹುದಿತ್ತು. ಆದರೂ ಅವರು ತೆಪ್ಪದಲ್ಲಿ ಕುಳಿತು ಗ್ರಾಮಸ್ಥರಿಂದ ದೋಣಿ ತಳ್ಳಿಸಿಕೊಂಡಿದ್ದಾರೆ ಎಂಬ ಅಭಿಪ್ರಾಯ ಸಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ಜೋಡಿ ಸಾವು – ಕಾರಣ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿಗಳು

    ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ಜೋಡಿ ಸಾವು – ಕಾರಣ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿಗಳು

    ಮೈಸೂರು: ಇತ್ತೀಚೆಗೆ ನವಜೋಡಿಯೊಂದು ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರತ್ಯಕ್ಷದರ್ಶಿಗಳು ಅದರ ಕಾರಣ ಬಿಚ್ಚಿಟ್ಟಿದ್ದಾರೆ.

    ಹೌದು. ಪೊಲೀಸರ ಮುಂದೆ ಪ್ರತ್ಯಕ್ಷದರ್ಶಿಗಳು ತಮ್ಮ ಹೇಳಿಕೆ ದಾಖಲಿಸಿದ್ದು, ಹೀಲ್ಡ್ ಚಪ್ಪಲಿ ಹಾಗೂ ಭಾರವಾದ ಡ್ರೆಸ್ ಧರಿಸಿದ್ದರಿಂದ ಈ ಅವಘಡ ಸಂಭವಿಸಿದೆ. ಜೋಡಿ ಫೋಟೋಶೂಟ್ ವೇಳೆ ಏಕಾಏಕಿ ತೆಪ್ಪ ಮಗುಚಿ ಬಿದ್ದಿದೆ. ತೆಪ್ಪ ಮಗುಚಲು ಹೀಲ್ಡ್ ಚಪ್ಪಲಿ, ಭಾರದ ಡ್ರೆಸ್ ಕೂಡ ಕಾರಣ ಎಂದು ಅವರು ಪೊಲೀಸರ ಮುಂದೆ ವಿವರಿಸಿದ್ದಾರೆ.

    ಮೈಸೂರಿನಿಂದ ಫೋಟೋಶೂಟ್‍ಗಾಗಿ ಮುಡುಕುತೊರೆಗೆ ಆಗಮಿಸಿದ್ದ ಜೋಡಿ, ನದಿ ನೋಡಿದ ಮೇಲೆ ನೀರಿನಲ್ಲಿ ಫೋಟೋ ತೆಗೆಸಿಕೊಳ್ಳಲು ನಿರ್ಧಾರ ಮಾಡಿದರು. ಹೀಗಾಗಿ ಹೈಹೀಲ್ಡ್ ಚಪ್ಪಲಿ ಹಾಕಿಕೊಂಡು ತೆಪ್ಪ ಹತ್ತಿದ ಶಶಿಕಲಾ, ಕೆಲಕಾಲ ನಿಂತುಕೊಂಡೇ ಇದ್ದರು. ನಂತರ ಕುಳಿತುಕೊಳ್ಳಲು ಹೋದಾಗ ಹೀಲ್ಡ್ ಚಪ್ಪಲಿ ಸ್ಲಿಪ್ ಆಗಿದ್ದು, ತೆಪ್ಪ ಏಕಾಏಕಿ ಮಗುಚಿದೆ. ಪರಿಣಾಮ ಈಜುಬಾರದೆ ಚಂದ್ರು ಹಾಗೂ ಶಶಿಕಲಾ ಇಬ್ಬರೂ ಮೃತಪಟ್ಟಿದ್ದಾರೆ.

    ಘಟನೆ ಸಂಬಂಧ ಫೋಟೋಗ್ರಾಫರ್ ಕೀರ್ತಿ, ನಾವಿಕ ಮೂಗಪ್ಪ ಮೇಲೂ ಪ್ರಕರಣ ದಾಖಲು ಮಾಡಲಾಗಿದೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ತಲಕಾಡಿನಲ್ಲಿ ಪ್ರಿ ವೆಡ್ಡಿಂಗ್ ಫೋಟೋಶೂಟ್ – ತೆಪ್ಪ ಮುಳುಗಿ ನವಜೋಡಿ ಸಾವು

  • ನಿಷೇಧವಿದ್ರೂ ಹಣಕ್ಕಾಗಿ ಕಾವೇರಿ ನದಿಯಲ್ಲಿ ಡೇಂಜರಸ್ ತೆಪ್ಪದ ಸವಾರಿ!

    ನಿಷೇಧವಿದ್ರೂ ಹಣಕ್ಕಾಗಿ ಕಾವೇರಿ ನದಿಯಲ್ಲಿ ಡೇಂಜರಸ್ ತೆಪ್ಪದ ಸವಾರಿ!

    – ಸ್ವಲ್ಪ ಯಾಮಾರಿದ್ರೂ ಅಪಾಯ ಕಟ್ಟಿಟ್ಟ ಬುತ್ತಿ

    ಚಾಮರಾಜನಗರ: ಕೊರೊನಾ ಭಯ, ಲಾಕ್‍ಡೌನ್‍ನಿಂದ ಕಳೆದ ಏಳೆಂಟು ತಿಂಗಳಿನಿಂದ ಮನೆಯಲ್ಲಿಯೇ ಇದ್ದ ಜನ ಈಗ ಪ್ರವಾಸಿ ತಾಣಗಳತ್ತ ಮುಖ ಮಾಡ್ತಿದ್ದಾರೆ. ರಾಜ್ಯದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗ ದಂಡೇ ನೆರೆದಿದೆ. ಮೋಜು ಮಸ್ತಿಯ ಮೂಡ್‍ನಲ್ಲಿರೋ ಜನ ಕೊಂಚ ಮೈಮರೆತಂತೆ ಕಾಣುತ್ತಿದೆ. ಇದನ್ನೇ ಬಂಡವಾಳ ಮಾಡ್ಕೊಂಡಿರೋರು ಜನರ ಜೀವದ ಜೊತೆ ಚೆಲ್ಲಾಟವಾಡ್ತಿದ್ದಾರೆ.

    ಹೌದು. ಕಾವೇರಿ ಮೈದುಂಬಿ ಹರಿಯುತ್ತಿದ್ದು ಕೊಳ್ಳೆಗಾಲದ ಭರಚುಕ್ಕಿಗೆ ಪ್ರವಾಸಿಗರ ದಂಡೇ ಬರುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರೋ ಇಲ್ಲಿನವರು ಪ್ರವಾಸಿಗರಿಗೆ ತೆಪ್ಪದ ಸವಾರಿ ನಡೆಸುತ್ತಿದ್ದಾರೆ. ಭರಚುಕ್ಕಿ, ಮಧ್ಯರಂಗನಾಥಸ್ವಾಮಿ, ಶಿಂಷಾದ ಮಾರಮ್ಮ, ವೆಸ್ಲಿ ಸೇತುವೆ ವೀಕ್ಷಣೆಗೆ ಬರುವ ಪ್ರವಾಸಿಗರು ತೆಪ್ಪದ ಸವಾರಿ ಮಾಡ್ತಿದ್ದಾರೆ.

    ಕೆಲವು ವರ್ಷಗಳ ಹಿಂದೆಯೇ ಇಲ್ಲಿ ತೆಪ್ಪದ ಸವಾರಿಯನ್ನು ನಿಷೇಧಿಸಲಾಗಿದೆ. ಆದರೆ ಇದನ್ನು ಲೆಕ್ಕಿಸದ ಕೆಲವರು ತೆಪ್ಪದ ಸವಾರಿ ನಡೆಸುತ್ತಿದ್ದಾರೆ. ತೆಪ್ಪವೇರೋ ಪ್ರವಾಸಿಗರಿಗೆ ಲೈಫ್ ಜಾಕೆಟ್‍ಗಳನ್ನು ಕೊಡ್ತಿಲ್ಲ. ಸ್ವಲ್ಪ ಹೆಚ್ಚುಕಡಿಮೆಯಾದ್ರೂ ಕಾವೇರಿಯಲ್ಲಿ ಲೀನವಾಗೋದು ಗ್ಯಾರೆಂಟಿಯಾಗಿದೆ. ಇದನ್ನೂ ಓದಿ: ಪ್ರವಾಸಿಗರ ಚೆಲ್ಲಾಟ ಪೊಲೀಸರಿಗೆ ಸಂಕಟ – ಕೊರೊನಾಗೆ ಡೋಂಟ್‍ಕೇರ್, ಬಿಂದಾಸ್ ಮಸ್ತಿ

    ವಿಷಯ ತಿಳಿದ ಬಳಿಕ ಎಚ್ಚೆತ್ತ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಕಾನೂನು ಬಾಹಿರವಾಗಿ ತೆಪ್ಪ ನಡೆಸುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ಇನ್ನಾದರೂ ಡೇಂಜರ್ ತೆಪ್ಪದ ಸವಾರಿಗೆ ಬ್ರೇಕ್ ಬೀಳಬೇಕಿದೆ. ಪ್ರವಾಸದ ಜೋಶ್‍ನಲ್ಲಿರೋ ಜನ ಸಹ ಪ್ರವಾಸಿಸ್ಥಳಗಳಲ್ಲಿನ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಗಮನ ಹರಿಸಬೇಕಿದೆ.

  • ನೀರಿನಲ್ಲಿ ಕೊಚ್ಚಿ ಹೋಗ್ತಿದ್ದ ಪುಟ್ಟ ಕಂದಮ್ಮನ ರಕ್ಷಣೆ

    ನೀರಿನಲ್ಲಿ ಕೊಚ್ಚಿ ಹೋಗ್ತಿದ್ದ ಪುಟ್ಟ ಕಂದಮ್ಮನ ರಕ್ಷಣೆ

    ಯಾದಗಿರಿ: ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಪುಟ್ಟ ಕಂದಮ್ಮನನ್ನು ರಕ್ಷಣೆ ಮಾಡಲಾಗಿದೆ.

    ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ರೋಜಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಭೀಮಾ ನದಿ ಹಿನ್ನೀರು ಗ್ರಾಮ ನಡುಗಡ್ಡೆಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಬೋಟ್ ಮೂಲಕ ಸಂಚಾರ ಮಾಡುತ್ತಿದ್ದರು.

    ಹೀಗೆ ರಜಿಯಾ ಬೇಗಂ ಅವರು ಕೂಡ ತನ್ನ ಪುಟ್ಟ ಮಗುವಿನೊಂದಿಗೆ ತೆಪ್ಪದಲ್ಲಿ ತಮ್ಮ ಗ್ರಾಮಕ್ಕೆ ತೆರಳಿದ್ದಾರೆ. ಈ ವೇಳೆ ಏಕಾಏಕಿ ತೆಪ್ಪ ಅಲುಗಾಡಿ ಮಗು ರಜಿಯಾ ಅವರ ಕೈಯಿಂದ ಜಾರಿ ಬಿದ್ದು, ನದಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿತ್ತು.

    ಕೂಡಲೇ ತೆಪ್ಪ ನಡೆಸುವವರ ಗಮನಕ್ಕೆ ಬಂದಿದ್ದು, ಅವರ ಸಮಯ ಪ್ರಜ್ಞೆಯಿಂದ ಮಗುವನ್ನು ರಕ್ಷಣೆ ಮಾಡಿ ತಾಯಿಯ ಮಡಿಲಿಗೆ ಒಪ್ಪಿಸಲಾಗಿದೆ.

  • ಕೃಷ್ಣಾ ನದಿಯಲ್ಲಿ ನಾಪತ್ತೆಯಾಗಿದ್ದ ನಾಲ್ವರು ಶವವಾಗಿ ಪತ್ತೆ

    ಕೃಷ್ಣಾ ನದಿಯಲ್ಲಿ ನಾಪತ್ತೆಯಾಗಿದ್ದ ನಾಲ್ವರು ಶವವಾಗಿ ಪತ್ತೆ

    – ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ

    ರಾಯಚೂರು: ಆಗಸ್ಟ್ 17ರಂದು ಕೃಷ್ಣ ನದಿಯಲ್ಲಿ ತೆಪ್ಪ ಮುಳುಗಿ ನಾಪತ್ತೆಯಾಗಿದ್ದ ರಾಯಚೂರಿನ ನಡುಗಡ್ಡೆ ಗ್ರಾಮ ಕುರ್ವಕಲಾದ ನಾಲ್ಕು ಜನ ಕೊನೆಗೆ ಶವವಾಗಿ ಪತ್ತೆಯಾಗಿದ್ದಾರೆ.

    ತೆಲಂಗಾಣದ ಪಂಚದೇವಪಾಡಗೆ ದಿನಸಿ ತರಲು ಹೋಗಿದ್ದವರು ಕುರ್ವಾಕುಲಕ್ಕೆ ಮರಳುವಾಗ ತೆಪ್ಪ ಮುಳುಗಿತ್ತು. ಮೊದಲಿಗೆ ಇಬ್ಬರು, ಬಳಿಕ ಒಬ್ಬರು ಒಟ್ಟು ಮೂರು ಜನ ತೆಲಂಗಾಣದ ಜುರಾಲಾ ಇಂದಿರಾ ಪ್ರಿಯದರ್ಶಿನಿ ಜಲಾಶಯದ ಬಳಿ ಶವವಾಗಿ ಪತ್ತೆಯಾಗಿದ್ದರು. ಇಂದು ಬಾಲಕಿ ರೋಜಾ ಸಹ ಜಲಾಶಯ ಬಳಿ ಶವವಾಗಿ ದೊರಕಿದ್ದಾಳೆ.

    ಸುಮಲತಾ, ನರಸಮ್ಮ, ಪಾರ್ವತಿ ಹಾಗೂ ರೋಜಾ ಪತ್ತೆಗಾಗಿ ಎನ್.ಡಿ.ಆರ್.ಎಫ್, ಅಗ್ನಿ ಶಾಮಕ ದಳ ಸತತ ಕಾರ್ಯಾಚರಣೆ ನಡೆಸಿದ್ದರು ಸುಳಿವು ಪತ್ತೆಯಾಗಿರಲಿಲ್ಲ. ಎಲ್ಲ ನಾಲ್ಕು ಜನ ಕೊನೆಗೆ ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆವರೆಗೆ ಕೃಷ್ಣ ನದಿಯಲ್ಲಿ ನಾಪತ್ತೆಯಾಗಿದ್ದವರಲ್ಲಿ ಮೂವರ ಶವ ಪತ್ತೆ ಹಿನ್ನೆಲೆ ಮೂವರ ಕುಟುಂಬಕ್ಕೆ ಜಿಲ್ಲಾಡಳಿತ ತಲಾ 5 ಲಕ್ಷ ಪರಿಹಾರ ನೀಡಿದೆ. ಸುಮಲತಾ, ಪಾರ್ವತಿ, ನರಸಮ್ಮ ಕುಟುಂಬಕ್ಕೆ ಒಟ್ಟು 15 ಲಕ್ಷ ಪರಿಹಾರ ನೀಡಲಾಗಿದೆ.

    ರಾಯಚೂರು ತಹಶೀಲ್ದಾರ್ ಖಾತೆಯಿಂದ ಸಂತ್ರಸ್ತ ಕುಟುಂಬಕ್ಕೆ ಆರ್.ಟಿ.ಜಿ.ಎಸ್ ಮೂಲಕ ಪರಿಹಾರ ನೀಡಲಾಗಿದೆ. ರಾಯಚೂರು ಜಿಲ್ಲಾಧಿಕಾರಿ ಮೌಖಿಕ ಆದೇಶ ಹಿನ್ನೆಲೆ ಪರಿಹಾರ ವಿತರಣೆ ಮಾಡಲಾಗಿದೆ. ಈಗ ಬಾಲಕಿ ರೋಜಾ ಸಹ ಶವವಾಗಿ ಪತ್ತೆಯಾಗಿದ್ದಾಳೆ.

  • ದಿನಸಿ ತರಲು ತೆಪ್ಪದಲ್ಲಿ ತೆರಳಿದ್ದವರಲ್ಲಿ ನಾಲ್ವರು ಕೃಷ್ಣಾ ನದಿಯಲ್ಲಿ ನಾಪತ್ತೆ

    ದಿನಸಿ ತರಲು ತೆಪ್ಪದಲ್ಲಿ ತೆರಳಿದ್ದವರಲ್ಲಿ ನಾಲ್ವರು ಕೃಷ್ಣಾ ನದಿಯಲ್ಲಿ ನಾಪತ್ತೆ

    – ಜಿಲ್ಲಾಡಳಿತ ಎಚ್ಚರಿಕೆ ಧಿಕ್ಕರಿಸಿ ಹೊರ ಬಂದ ನಡುಗಡ್ಡೆ ಜನ

    ರಾಯಚೂರು: ದಿನಸಿ ತರಲು ತೆಲಂಗಾಣಕ್ಕೆ ತೆರಳಿದ್ದ ರಾಯಚೂರು ತಾಲೂಕಿನ ಕುರ್ವಕಲಾ ನಡುಗಡ್ಡೆ ಗ್ರಾಮದ 13 ಜನ ಮರಳಿ ಬರುವಾಗ ತೆಪ್ಪ ಮುಗುಚಿ ಬಿದ್ದು ನಾಲ್ವರು ನಾಪತ್ತೆಯಾಗಿದ್ದಾರೆ. ಕುರ್ವಾಕಲಾ ಗ್ರಾಮದ ಪಾರ್ವತಿ (55) ನರಸಮ್ಮ (36) ಸುಮಲತಾ (32) ಪೂಜಾ (10) ನಾಪತ್ತೆಯಾದವರು. ತೆಲಂಗಾಣದ ಪಂಚಪಾಡಕ್ಕೆ ದಿನಸಿ ಖರೀದಿಗೆ ಹೋಗಿದ್ದ ನಾಲ್ವರು ಅಗತ್ಯ ವಸ್ತುಗಳನ್ನ ಖರೀದಿಸಿ ಮರಳುವಾಗ ಘಟನೆ ನಡೆದಿದೆ. 13 ಜನರಲ್ಲಿ 9 ಜನ ಈಜಿ ದಡ ಸೇರಲು ಹರಸಾಹಸ ಪಡುತ್ತಿದ್ದಾಗ ದಡದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಕೂಡಲೇ ತೆಪ್ಪದಲ್ಲಿ ತೆರಳಿ 9 ಜನರನ್ನ ರಕ್ಷಿಸಿದ್ದಾರೆ. ಆದರೆ ತಾಯಿ ಸುಮಲತಾ ಮಗಳು ರೋಜಾ ಸೇರಿ ನಾಲ್ಕು ಜನ ನೀರಿನ ಸೆಳೆತಕ್ಕೆ ನಾಪತ್ತೆಯಾಗಿದ್ದಾರೆ.

    ಮಾಹಿತಿ ತಿಳಿದ ತಕ್ಷಣವೇ ಯಾಪಲದಿನ್ನಿ ಪೋಲೀಸರು ನದಿ ದಡಕ್ಕೆ ತೆರಳಿದರಾದ್ರೂ ರಕ್ಷಣಾ ಕಾರ್ಯ ಸಾಧ್ಯವಾಗಿಲ್ಲ. ತೆಲಂಗಾಣದ ಮಕ್ತಲ್ ಠಾಣೆ ಪೊಲೀಸರು, ಅಲ್ಲಿನ ತೆಪ್ಪ ನಡೆಸುವವರು ಕೂಡಲೇ ರಕ್ಷಣಾ ಕಾರ್ಯಚರಣೆ ಮಾಡಿದ್ದಾರೆ. ಆದರೆ ಮೂವರು ಮಹಿಳೆಯರು ಹಾಗೂ ಓರ್ವ ಬಾಲಕಿ ನೀರಿನಲ್ಲಿ ನಾಪತ್ತೆಯಾಗಿದ್ದಾರೆ. ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್, ರಾಯಚೂರು ಸಹಾಯಕ ಆಯುಕ್ತ ಸಂತೋಷ್ ಹಾಗೂ ಎನ್ ಡಿ ಆರ್ ಎಫ್ ತಂಡ ತೆಲಂಗಾಣಕ್ಕೆ ತೆರಳಿದ್ದು ಬೆಳಿಗ್ಗೆಯಿಂದ ನಾಪತ್ತೆಯಾದ ನಾಲ್ವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಲಿದ್ದಾರೆ.

    ನಾರಾಯಣಪುರ ಜಲಾಶಯದಿಂದ ಸದ್ಯ 2 ಲಕ್ಷ 80 ಸಾವಿರ ಕ್ಯೂಸೆಕ್ ನೀರನ್ನ ಕೃಷ್ಣ ನದಿಗೆ ಹರಿಬಿಡಲಾಗುತ್ತಿದ್ದು ನದಿ ಪಾತ್ರಕ್ಕೆ ತೆರಳದಂತೆ ಈಗಾಗಲೇ ಜಿಲ್ಲಾಡಳಿತ ಎಚ್ಚರಿಸಿತ್ತು. ಅಷ್ಟಾದ್ರೂ ನಡುಗಡ್ಡೆ ಜನ ತೆಪ್ಪಗಳ ಮೂಲಕ ಅಗತ್ಯ ವಸ್ತುಗಳಿಗಾಗಿ ಹೊರಬರುತ್ತಲೇ ಇದ್ದಾರೆ. ರಾಯಚೂರು ತಾಲೂಕಿನಲ್ಲಿ ಮೂರು ನಡುಗಡ್ಡೆಗಳಿದ್ದು ಒಟ್ಟು 298 ಕುಟುಂಬಗಳಿಂದ 945 ಜನ ವಾಸವಾಗಿದ್ದಾರೆ. ಇಲ್ಲಿನ ಜನರಿಗೆ ಈಗಾಗಲೇ ಸರ್ಕಾರ ಪರ್ಯಾಯ ವ್ಯವಸ್ಥೆಗಳನ್ನ ಮಾಡಿದ್ದರು ಜನ ನಡುಗಡ್ಡೆಯಲ್ಲೇ ವಾಸವಾಗಿದ್ದಾರೆ. ಅಲ್ಲದೆ ಪ್ರವಾಹದ ವೇಳೆ ತುಂಬಿ ಹರಿಯುವ ನದಿಯಲ್ಲಿ ತೆಪ್ಪದಲ್ಲಿ ಹೆಚ್ಚು ಜನ ಪ್ರಯಾಣ ಮಾಡುತ್ತಾರೆ. ದುರಾದೃಷ್ಟವಶಾತ್ ತೆಪ್ಪ ಮುಗುಚಿ ಬಿದ್ದಿದ್ದು ನಾಲ್ವರು ನಾಪತ್ತೆಯಾಗಿದ್ದಾರೆ.

    ಇನ್ನೂ ನಡುಗಡ್ಡೆಗಳಿಗೆ ಡೊಂಗರಾಂಪುರದಿಂದ ಕುರ್ವಕಲ ಹಾಗೂ ಆತ್ಕೂರಿನಿಂದ ಕುರ್ವಾಕುರ್ದಕ್ಕೆ ಎರಡು ಸೇತುವೆಗಳ ಕಾಮಗಾರಿಗಳು ಆರಂಭವಾಗಿ ದಶಕಗಳೇ ಕಳೆದರು ಪೂರ್ಣಗಿಲ್ಲ. ಹೀಗಾಗಿ ನಡುಗಡ್ಡೆಯ ಜನ ಪ್ರತಿಯೊಂದಕ್ಕೂ ತೆಪ್ಪವನ್ನೆ ಅವಲಂಬಿಸಿದ್ದಾರೆ. ಪ್ರವಾಹದ ಸಮಯದಲ್ಲೂ ಜಿಲ್ಲಾಡಳಿತದ ಎಚ್ಚರಿಕೆಯನ್ನ ದಿಕ್ಕರಿಸಿ ತೆಪ್ಪದಲ್ಲಿ ಓಡಾಡುತ್ತಿರುವುದು ಅಪಾಯಕ್ಕೆ ಎಡೆಮಾಡಿಕೊಟ್ಟಿದೆ. ಕೃಷ್ಣ ಪ್ರವಾಹದಲ್ಲಿ ನಾಪತ್ತೆಯಾಗಿರುವ ನಾಲ್ವರಿಗಾಗಿ ಬೆಳಗ್ಗೆ ಎನ್‍ಡಿಆರ್‍ಎಫ್, ಅಗ್ನಿಶಾಮಕ ದಳ ಹಾಗೂ ರಾಜ್ಯ ಮತ್ತು ತೆಲಂಗಾಣ ಪೊಲೀಸರು ಕಾರ್ಯಾಚರಣೆ ನಡೆಸಲಿದ್ದಾರೆ.

  • ನಾಪತ್ತೆಯಾಗಿದ್ದ ಎರಡು ದಿನದ ನಂತ್ರ ಮೀನುಗಾರರು ಶವವಾಗಿ ಪತ್ತೆ

    ನಾಪತ್ತೆಯಾಗಿದ್ದ ಎರಡು ದಿನದ ನಂತ್ರ ಮೀನುಗಾರರು ಶವವಾಗಿ ಪತ್ತೆ

    ವಿಜಯಪುರ: ಜಿಲ್ಲೆಯ ಕೊಲ್ಹಾರ ತಾಲೂಕಿನ ಸಿದ್ದನಾಥ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ಮೀನುಗಾರರು ಎರಡು ದಿನಗಳ ಬಳಿಕ ಶವವಾಗಿ ಇಂದು ಪತ್ತೆಯಾಗಿದ್ದಾರೆ.

    ಸಿದ್ದನಾಥ ಆರ್ಸಿಯ ಆಲಮಟ್ಟಿ ಡ್ಯಾಮ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋದ ಪರಶುರಾಮ ಲಮಾಣಿ (36) ಮತ್ತು ರಮೇಶ ಲಮಾಣಿ (38) ಶವವಾಗಿ ಪತ್ತೆಯಾಗಿದ್ದಾರೆ.

    ಗುರುವಾರ ಸಂಜೆ ತೆಪ್ಪದ ಮೂಲಕ ಮೂವರು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಭಾರೀ ಮಳೆಗಾಳಿಗೆ ತೆಪ್ಪ ಮುಗುಚಿ ಬಿದ್ದಿದೆ. ಹೀಗಾಗಿ ಮೂವರ ಪೈಕಿ ಅಕ್ಷಯ ಲಮಾಣಿ ಎಂಬಾತ ಈಜಿ ದಡ ಸೇರಿದ್ದರು. ಆದರೆ ಉಳಿದ ಇಬ್ಬರೂ ಇನ್ನೂ ಪತ್ತೆಯಾಗಿರಲಿಲ್ಲ.

    ಈ ಹಿನ್ನೆಲೆಯಲ್ಲಿ ಸ್ಥಳೀಯ ಮೀನುಗಾರರ ಸಹಾಯದೊಂದಿಗೆ ಶೋಧ ನಡೆಸಲಾಗಿತ್ತು. ಆದರೆ ಪತ್ತೆಯಾಗಿರಲಿಲ್ಲ. ಆದರೆ ಎರಡು ದಿನಗಳ ನಂತರ ಪರಶುರಾಮ ಮತ್ತು ರಮೇಶ ಶವವಾಗಿ ನದಿಯಲ್ಲಿ ಪತ್ತೆಯಾಗಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿದೆ.

    ಈ ಕುರಿತು ಕೋಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.