Tag: ತೆಲುಗು ದೇಶಂ ಪಕ್ಷ

  • ಫ್ರೀ ಫ್ರೀ ಫ್ರೀ; ಟಿಡಿಪಿ ಗೆದ್ದರೇ ಫ್ರೀ ಸೈಟ್‌, ಮಹಿಳೆಯರಿಗೆ ಫ್ರೀ ಬಸ್‌, 3 ಎಲ್‌ಪಿಜಿ ಸಿಲಿಂಡರ್‌ ಫ್ರೀ – NDA ಗ್ಯಾರಂಟಿ

    ಫ್ರೀ ಫ್ರೀ ಫ್ರೀ; ಟಿಡಿಪಿ ಗೆದ್ದರೇ ಫ್ರೀ ಸೈಟ್‌, ಮಹಿಳೆಯರಿಗೆ ಫ್ರೀ ಬಸ್‌, 3 ಎಲ್‌ಪಿಜಿ ಸಿಲಿಂಡರ್‌ ಫ್ರೀ – NDA ಗ್ಯಾರಂಟಿ

    ಅಮರಾವತಿ: ಲೋಕಸಭಾ ಚುನಾವಣೆ (Lok Sabha Election) ಹತ್ತಿರ ಬರುತ್ತಿದ್ದಂತೆ ಎಲ್ಲಾ ಪಕ್ಷಗಳೂ ಜನರನ್ನ ತಮ್ಮತ್ತಾ ಸೆಳೆಯಲು ಪ್ರಯತ್ನಿಸುತ್ತಿವೆ. ಮನೆ-ಮನೆ ಪ್ರಚಾರ ಕೈಗೊಂಡು ಮತಯಾಚನೆ ಮಾಡುತ್ತಿದ್ದಾರೆ. ಈ ನಡುವೆ ಆಂಧ್ರಪ್ರದೇಶದಲ್ಲಿ (Andhra Pradesh) ಲೋಕಸಭೆ ಜೊತೆಗೆ ವಿಧಾನಸಭೆ ಚುನಾವಣೆ ಕೂಡ ನಡೆಯುತ್ತಿದ್ದು, ಆಡಳಿತಾರೂಢ ವೈಎಸ್ಆರ್ ಪಕ್ಷವು ಈಗಾಗಲೇ ತನ್ನ ಪ್ರಣಾಳಿಕೆ ಪ್ರಕಟಿಸಿದೆ.

    ಈ ಬೆನ್ನಲ್ಲೇ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು (Chandrababu Naidu), ಜನಸೇನಾ ಪಕ್ಷದ ನಾಯಕ, ನಟ ಪವನ್‌ ಕಲ್ಯಾಣ್‌ ಮಂಗಳವಾರ ಎನ್‌ಡಿಎ ಮೈತ್ರಿ ಕೂಟದ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, ಹಲವು ಉಚಿತ ಗ್ಯಾರಂಟಿಗಳನ್ನ ಘೋಷಣೆ ಮಾಡಿದ್ದಾರೆ. ಇದನ್ನು ಕೆಲವರು ಕರ್ನಾಟಕ ಕಾಂಗ್ರೆಸ್‌ ಪಕ್ಷದ ಕಾಪಿ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ತುರ್ತು ಪರಿಸ್ಥಿತಿಗೆ ಕಾಂಗ್ರೆಸ್ ಪತನ; ಮೊದಲ ಕಾಂಗ್ರೆಸ್ಸೇತರ ಸರ್ಕಾರ ತಂದ ಚುನಾವಣೆಯಲ್ಲಿ ಏನಾಯ್ತು?

    ಎನ್‌ಡಿಎ ಪ್ರಣಾಳಿಕೆಯಲ್ಲಿ ಏನಿದೆ?
    ಮೈತ್ರಿಕೂಟದ ಪ್ರಣಾಳಿಕೆಯಲ್ಲಿ ಮುಂದಿನ 5 ವರ್ಷಗಳಲ್ಲಿ ರಾಜ್ಯದಲ್ಲಿ 20 ಲಕ್ಷ ಜನರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ. ಇದರೊಂದಿಗೆ ಪಕ್ಷ ಅಧಿಕಾರಕ್ಕೆ ಬಂದರೆ ಬಡವರಿಗೆ 900 ಚದರ ಅಡಿಯ ನಿವೇಶನವನ್ನು ಉಚಿತವಾಗಿ ನೀಡಲಾಗುತ್ತದೆ, ಮಾಸಿಕ 3,000 ರೂ. ನಿರುದ್ಯೋಗ ಭತ್ಯೆಯನ್ನೂ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಕುಡಿಯುವ ನೀರಿನ ನೆಪದಲ್ಲಿ ನೀರು ಬಿಡುಗಡೆಗೆ ನಿರಾಕರಿಸಬಾರದು – ತಮಿಳುನಾಡು ಕ್ಯಾತೆ

    ಬೆಟ್ಟದಷ್ಟು ಭರವಸೆ:
    * ವಾರ್ಷಿಕ ಮೂರು ಉಚಿತ ಎಲ್‌ಪಿಜಿ ಸಿಲಿಂಡರ್
    * ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್‌ ಪ್ರಯಾಣ
    * ʻತಲ್ಲಿಕಿ ವಂದನಂʼ ಯೋಜನೆಯಡಿ ಎಲ್ಲಾ ಶಾಲಾ ಮಕ್ಕಳಿಗೆ ವಾರ್ಷಿಕ 15,000 ರೂ.
    * ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10ರಷ್ಟು ಮೀಸಲಾತಿ ಜಾರಿ
    * 18 ವರ್ಷ ತುಂಬಿದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 1,500 ರೂ.ನಂತೆ ವಾರ್ಷಿಕ 18,000 ಸಾವಿರ ರೂ. ಭತ್ಯೆ
    * 50 ವರ್ಷ ತುಂಬಿದ ಬಿಸಿ ಸಮುದಾಯದವರಿಗೆ ಪಿಂಚಣಿ ಮತ್ತು ಬಿ.ಸಿ.ಗಳ ಸ್ವಯಂ ಉದ್ಯೋಗಕ್ಕೆ 10,000 ಕೋಟಿ ರೂ. ಮಂಜೂರು
    * ಪ್ರತಿ ಮನೆಗೆ ಉಚಿತ ನೀರು ಸೌಲಭ್ಯ, ವೃದ್ದಾಪ್ಯ ವೇತನವನ್ನ 4,000 ರೂ.ಗಳಿಗೆ ಹೆಚ್ಚಳ
    * ಅಂಗವಿಕಲರ ವೇತನವನ್ನ 6,000 ರೂ.ಗೆ ಹೆಚ್ಚಳ, ಮೀನುಗಾರರಿಗೆ ವಾರ್ಷಿಕ 20,000 ರೂ. ನೆರವು

  • ವಿಧಾನಸಭೆಯಿಂದ ಟಿಡಿಪಿ ಪಕ್ಷದ 11 ಶಾಸಕರು ಅಮಾನತು

    ವಿಧಾನಸಭೆಯಿಂದ ಟಿಡಿಪಿ ಪಕ್ಷದ 11 ಶಾಸಕರು ಅಮಾನತು

    ಹೈದರಾಬಾದ್: ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಡಿ ವಿರೋಧ ಪಕ್ಷ ತೆಲುಗು ದೇಶಂ ಪಕ್ಷದ ಪ್ರಮುಖ 11 ಸದಸ್ಯರನ್ನು ಇಂದು ಆಂಧ್ರಪ್ರದೇಶ ವಿಧಾನಸಭೆಯಿಂದ ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ.

    ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಟಿಡಿಪಿ ಶಾಸಕರ ಮೇಲೆ ವಾಗ್ದಾಳಿ ನಡೆಸಿ, ನಾಗರಿಕರ ರೀತಿಯಲ್ಲಿ ವರ್ತಿಸುವಂತೆ ಮತ್ತು ಸದನದಲ್ಲಿ ತಮಗೆ ಮಾತನಾಡಲು ಅವಕಾಶ ಮಾಡಿಕೊಡುವಂತೆ ಕೇಳಿಕೊಂಡರು. ಆದರೆ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ 11 ಜನರ ವಿಚಾರವಾಗಿ ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷದ ಸದಸ್ಯರು ಘೋಷಣೆಯನ್ನು ಕೂಗಿದಾಗ, ಶಾಸಕಾಂಗ ವ್ಯವಹಾರಗಳ ಸಚಿವ ಬುಗ್ಗನ ರಾಜೇಂದ್ರನಾಥ್ ಟಿಡಿಪಿ ಶಾಸಕರ ಅಮಾನತು ಪ್ರಸ್ತಾಪವನ್ನು ಮಂಡಿಸಿದರು. ಅಮಾನತುಗೊಂಡ ಸದಸ್ಯರು ಸದನದಿಂದ ನಿರ್ಗಮಿಸಿದ ನಂತರ ಧ್ವನಿ ಮತದ ಮೂಲಕ ಪ್ರಸ್ತಾವನೆಯನ್ನು ಅಂಗೀಕರಿಸಲಾಯಿತು.

    ಸೋಮವಾರ ಕೂಡ ಇದೇ ವಿಚಾರವಾಗಿ ಬಜೆಟ್ ಅಧಿವೇಶನದ ವೇಳೆ ಗಲಾಟೆ ಮಾಡಿದ ಐದು ಟಿಡಿಪಿ ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಲಾಗಿತು. ಅಲ್ಲದೇ ಈ ಕುರಿತಂತೆ ಮಂಗಳವಾರ ಮತ್ತೊಮ್ಮೆ ಸದನದಲ್ಲಿ ಮಾತನಾಡಿದ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು, ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿ ಗುಡೆಮ್‍ನಲ್ಲಿ ಸಂಭವಿಸಿದ ಸಾವುಗಳು ಆಕಸ್ಮಿಕ ಕಾರಣಗಳಿಂದ ಸಂಭವಿಸಿವೆಯೇ ಹೊರತು ಟಿಡಿಪಿ ಆರೋಪಿಸಿದಂತೆ ಅಕ್ರಮ ಕಳ್ಳಬಟ್ಟಿಯಿಂದಲ್ಲ ಎಂದು ಸ್ಪಷ್ಟನೆ ನೀಡಿದರು. ಉರ್ದು ಶಾಲೆಗಳು ಕಾನೂನು ಪಾಲನೆ ಮಾಡಬೇಕು: ಬಿ.ಸಿ. ನಾಗೇಶ್

    ಈಗಾಗಲೇ ಹಲವು ಶವಗಳನ್ನು ಸುಟ್ಟು ಹಾಕಲಾಗಿದ್ದು, ಇಲ್ಲಿಯವರೆಗೂ ಈ ವಿಚಾರವಾಗಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಒಂದು ಪ್ರಕರಣದಲ್ಲಿ ಕೆಲವು ಅನುಮಾನ ವ್ಯಕ್ತವಾಗಿದ್ದರಿಂದ ಅಧಿಕಾರಿಗಳು ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದರು. ಏನಾದರೂ ತಪ್ಪಾಗಿದ್ದರೆ ನಾವೇಕೆ ಹಾಗೆ ಮಾಡುತ್ತೇವೆ ಎಂದು ಪ್ರಶ್ನಿಸಿದರು.

    ಪೊಲೀಸ್ ಠಾಣೆ, ವಾರ್ಡ್ ಸೆಕ್ರೆಟರಿಯೇಟ್ ಮತ್ತು ಮಹಿಳಾ ಪೊಲೀಸರಿರುವ ಅಂತಹ ಸ್ಥಳದಲ್ಲಿ ಅಕ್ರಮವಾಗಿ ಅರಕ್ ಭಟ್ಟಿ ಇಳಿಸಲು ಸಾಧ್ಯವೇ? ನಿಮ್ಮ ಮೆದುಳನ್ನು ಬಳಸಿ ಮತ್ತು ತಾರ್ಕಿಕವಾಗಿ ಯೋಚಿಸಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಫಿಟ್, ಆರೋಗ್ಯವಾಗಿರಲು ಕುದುರೆ ಸವಾರಿ ಮಾಡುತ್ತಾ ಆಫೀಸ್‍ಗೆ ತೆರಳ್ತಿದ್ದಾರೆ ಈ ವ್ಯಕ್ತಿ!

  • ಟಿಡಿಪಿ ಮುಖಂಡನ ಬರ್ಬರ ಹತ್ಯೆ – ಆರೋಪಿಗಳಿಗಾಗಿ ಪೊಲೀಸರ ಶೋಧ

    ಟಿಡಿಪಿ ಮುಖಂಡನ ಬರ್ಬರ ಹತ್ಯೆ – ಆರೋಪಿಗಳಿಗಾಗಿ ಪೊಲೀಸರ ಶೋಧ

    ಹೈದರಾಬಾದ್: ತೆಲುಗು ದೇಶಂ ಪಕ್ಷದ ಮುಖಂಡನನ್ನು ಅಪರಿಚಿತ ವ್ಯಕ್ತಿಗಳು ಕೊಂದಿರುವ ಘಟನೆ ತೆಲಂಗಾಣದ ಜಂಗಾಂವ್ ನಲ್ಲಿ ನಡೆದಿದೆ. ಜಂಗಾಂವ್ ಹೈದರಾಬಾದ್ ನಿಂದ 85 ಕಿ.ಮೀ ದೂರದಲ್ಲಿದೆ.

     

    ಮೃತಪಟ್ಟ ವ್ಯಕ್ತಿ ಜಂಗಾಂವ್ ಪುರಸಭೆಯ ಮಾಜಿ ಕೌನ್ಸಿಲರ್ ಪುಲಿ ಸ್ವಾಮಿ(53) ಎಂದು ಗುರುತಿಸಲಾಗಿದೆ. ಮುಂಜಾನೆ ಹೈದರಾಬಾದ್-ವಾರಂಗಲ್ ಹೆದ್ದಾರಿಯಲ್ಲಿರುವ ಸಮಾಜ ಕಲ್ಯಾಣ ವಸತಿ ಶಾಲೆಯ ಬಳಿ ವಾಕಿಂಗ್ ಮಾಡುತ್ತಿದ್ದ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಕೊಡಲಿಯಿಂದ ಪುಲಿ ಸ್ವಾಮಿಯವರ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ವರದಿ ಪ್ರಕಾರ ಭೂ ವಿವಾದಕ್ಕೆ ಸಂಬಂಧಿಸಿದಂತೆ ಹಳೆಯ ದ್ವೇಷ ಹಿನ್ನೆಲೆ ಪುಲಿ ಸ್ವಾಮಿಯನ್ನು ಆರೋಪಿಗಳು ಕೊಂದಿದ್ದಾರೆ ಎಂದು ಶಂಕಿಸಲಾಗುತ್ತಿದೆ. ಅಲ್ಲದೆ ಇತ್ತೀಚೆಗಷ್ಟೇ ಇದೇ ವಿಚಾರವಾಗಿ ಸ್ಥಳೀಯ ನ್ಯಾಯಾಲಯ ಟಿಡಿಪಿ ನಾಯಕರ ಪರವಾಗಿ ತೀರ್ಮಾನ ನೀಡಿತ್ತು.

    ಈ ವಿಚಾರವಾಗಿ ಮಾತನಾಡಿದ ಸಹಾಯಕ ಪೊಲೀಸ್ ಆಯುಕ್ತ ನಿನೋದ್ ಕುಮಾರ್, ಆರೋಪಿಗಳು ಕೊಲೆ ಮಾಡಿ ತಕ್ಷಣ ಹೊರಡಲು ಬೈಸಿಕಲ್ ನಲ್ಲಿ ಹಿಂದಿರುಗಲು ಸ್ಟಾರ್ಟ್ ಮಾಡಿದ್ದಾರೆ. ಆದರೆ ಬೈಸಿಕಲ್ ಸ್ಟಾರ್ಟ್ ಆಗದ ಕಾರಣ ಗಾಡಿಯನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಇದೀಗ ವಾಹನದ ಮಾಲೀಕರನ ಹುಡುಕಾಡುತ್ತಿದ್ದು, ಶೀಘ್ರವೇ ಆರೋಪಿಗಳನ್ನು ಕೂಡ ಬಂಧಿಸಲಾಗುತ್ತದೆ ಎಂದು ತಿಳಿಸಿದರು