Tag: ತೇಜಸ್ವಿನಿ ಪ್ರಕಾಶ್

  • ಸೀಮಂತ ಸಂಭ್ರಮದಲ್ಲಿ ‘ಬಿಗ್‌ ಬಾಸ್‌’ ಖ್ಯಾತಿಯ ತೇಜಸ್ವಿನಿ ಪ್ರಕಾಶ್

    ಸೀಮಂತ ಸಂಭ್ರಮದಲ್ಲಿ ‘ಬಿಗ್‌ ಬಾಸ್‌’ ಖ್ಯಾತಿಯ ತೇಜಸ್ವಿನಿ ಪ್ರಕಾಶ್

    ಬಿಗ್ ಬಾಸ್ (Bigg Boss Kannada)  ಖ್ಯಾತಿಯ ತೇಜಸ್ವಿನಿ ಪ್ರಕಾಶ್ (Tejaswini Prakash) ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ನಟಿ ಸೀಮಂತ ಶಾಸ್ತ್ರದ ಸಂಭ್ರಮದಲ್ಲಿದ್ದಾರೆ. ಸೀಮಂತ ಸುಂದರ ಫೋಟೋಗಳನ್ನ ನಟಿ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

    ಹಳದಿ ಬಣ್ಣದ ಬಾರ್ಡರ್ ಇರುವ ಗಿಳಿ ಹಸಿರು ಸೀರೆಯುಟ್ಟು ತೇಜಸ್ವಿನಿ ಮುದ್ದಾಗಿ ಕಾಣಿಸಿದ್ದಾರೆ. ಪತಿ ಜೊತೆ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ವಿವಿಧ ಭಂಗಿಯಲ್ಲಿರುವ ಫೋಟೋಗಳನ್ನ ನಟಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಬೋಲ್ಡ್ ಫೋಟೋ ಹಾಕಿ, ಹನಿಮೂನ್ ಫೋಟೋ ಅಲ್ಲ ಎಂದು ಸ್ಪಷ್ಟನೆ ನೀಡಿದ ಪರಿಣಿತಿ

    ಕೆಲ ದಿನಗಳ ಹಿಂದೆ ಬೇಬಿ ಬಂಪ್ ಫೋಟೋ ಶೇರ್ ಮಾಡಿ ಪತಿಯ ಹುಟ್ಟುಹಬ್ಬಕ್ಕೆ ವಿಶೇಷವಾಗಿ ನಟಿ ಶುಭಕೋರಿದ್ದರು. ನಮ್ಮ ಮಗು ಸಂತೋಷದಿಂದ ಹೊಳೆಯುತ್ತಿದ್ದು, ನಾವು ನಮ್ಮ ಜೀವನದ ಅತ್ಯಂತ ಅಮೂಲ್ಯ ಉಡುಗೊರೆಯನ್ನು ಸ್ವೀಕರಿಸಲಿದ್ದೇವೆ. ಜನ್ಮದಿನದ ಶುಭಾಶಯಗಳು ಗಂಡ, ನೀವು ನನಗೆ ತೋರಿದ ಪ್ರೀತಿ, ಕಾಳಜಿ, ವಾತ್ಸಲ್ಯಕ್ಕೆ ನಾನು ಆಭಾರಿಯಾಗಿದ್ದೇನೆ. ನಿಮ್ಮನ್ನು ನನ್ನ ಪತಿಯಾಗಿ ಹೊಂದಲು ನಿಜವಾಗಿಯೂ ಪುಣ್ಯ ಮಾಡಿದ್ದೇನೆ ಎಂದು ತೇಜಸ್ವಿನಿ ಬರೆದುಕೊಂಡಿದ್ದರು.

    ಕಳೆದ ವರ್ಷ ಮಾರ್ಚ್ 20ರಂದು ಫಣಿ ವರ್ಮಾ ಜೊತೆ ನಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನಲ್ಲಿ ಸರಳವಾಗಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಇದನ್ನೂ ಓದಿ:‘ಶಾಖಾಹಾರಿ’ ಫಸ್ಟ್ ಲುಕ್ ರಿಲೀಸ್- ಹೇಗಿದೆ ರಂಗಾಯಣ ರಘು ಲುಕ್?

    ನನ್ನರಸಿ ರಾಧೆ, ನಿಹಾರಿಕಾ ಸೀರಿಯಲ್ ಮತ್ತು ಬಿಗ್ ಬಾಸ್ (Bigg Boss Kannada) ರಿಯಾಲಿಟಿ ಶೋ ಸೇರಿದಂತೆ ಹಲವು ಸಿನಿಮಾಗಳಲ್ಲಿ ತೇಜಸ್ವಿನಿ ಪ್ರಕಾಶ್ ನಟಿಸಿದ್ದಾರೆ. ದರ್ಶನ್ (Darshan) ನಟನೆಯ ಗಜ (Gaja) ಸಿನಿಮಾದಲ್ಲಿ ತೇಜಸ್ವಿನಿ ನಟನೆ ಅಭಿಮಾನಿಗಳ ಗಮನ ಸೆಳೆದಿತ್ತು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೇಬಿ ಬಂಪ್ ಫೋಟೋಶೂಟ್ ಹಂಚಿಕೊಂಡ ತೇಜಸ್ವಿನಿ ಪ್ರಕಾಶ್

    ಬೇಬಿ ಬಂಪ್ ಫೋಟೋಶೂಟ್ ಹಂಚಿಕೊಂಡ ತೇಜಸ್ವಿನಿ ಪ್ರಕಾಶ್

    ‘ಬಿಗ್ ಬಾಸ್’ (Bigg Boss Kannada) ಖ್ಯಾತಿಯ ತೇಜಸ್ವಿನಿ ಪ್ರಕಾಶ್ (Tejaswini Prakash) ಇದೀಗ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಪತಿ ಜೊತೆ ಕ್ಯಾಮೆರಾ ಕಣ್ಣಿಗೆ ಪೋಸ್ ಕೊಡುತ್ತಿರುವ ಬೇಬಿ ಬಂಪ್ ಫೋಟೋವನ್ನ ನಟಿ ಹಂಚಿಕೊಂಡಿದ್ದಾರೆ.

    ತಾಯಿಯಾಗುತ್ತಿರುವ ವಿಚಾರವನ್ನು ಇತ್ತೀಚೆಗೆ ತೇಜಸ್ವಿನಿ ಸೋಶಿಯಲ್ ಮೀಡಿಯಾದಲ್ಲಿ ಅನೌನ್ಸ್ ಮಾಡಿದ್ದರು. ಈಗ ಮತ್ತೆ ಬೇಬಿ ಬಂಪ್ ಫೋಟೋವನ್ನು ನಟಿ ಶೇರ್ ಮಾಡಿದ್ದಾರೆ. ಪತಿ ಫಣಿ ವರ್ಮಾ ಕಪ್ಪು ಉಡುಗೆಯಲ್ಲಿ ಮಿಂಚಿದ್ರೆ, ನಟಿ ಗೌನ್ ಧರಿಸಿ ಬೇಬಿ ಬಂಪ್ ಲುಕ್ ತೋರಿಸಿದ್ದಾರೆ. ಇದನ್ನೂ ಓದಿ:ರಜನಿ 170ನೇ ಸಿನಿಮಾಗೆ ಇಬ್ಬರು ನಾಯಕಿಯರು

    ಕೆಲ ದಿನಗಳ ಹಿಂದೆ ಬೇಬಿ ಬಂಪ್ ಫೋಟೋ ಶೇರ್ ಮಾಡಿ ಪತಿಯ ಹುಟ್ಟುಹಬ್ಬಕ್ಕೆ ವಿಶೇಷವಾಗಿ ನಟಿ ಶುಭಕೋರಿದ್ದರು. ನಮ್ಮ ಮಗು ಸಂತೋಷದಿಂದ ಹೊಳೆಯುತ್ತಿದ್ದು, ನಾವು ನಮ್ಮ ಜೀವನದ ಅತ್ಯಂತ ಅಮೂಲ್ಯ ಉಡುಗೊರೆಯನ್ನು ಸ್ವೀಕರಿಸಲಿದ್ದೇವೆ. ಜನ್ಮದಿನದ ಶುಭಾಶಯಗಳು ಗಂಡ, ನೀವು ನನಗೆ ತೋರಿದ ಪ್ರೀತಿ, ಕಾಳಜಿ, ವಾತ್ಸಲ್ಯಕ್ಕೆ ನಾನು ಆಭಾರಿಯಾಗಿದ್ದೇನೆ. ನಿಮ್ಮನ್ನು ನನ್ನ ಪತಿಯಾಗಿ ಹೊಂದಲು ನಿಜವಾಗಿಯೂ ಪುಣ್ಯ ಮಾಡಿದ್ದೇನೆ ಎಂದು ತೇಜಸ್ವಿನಿ ಬರೆದುಕೊಂಡಿದ್ದರು.

    ಕಳೆದ ವರ್ಷ ಮಾರ್ಚ್ 20ರಂದು ಫಣಿ ವರ್ಮಾ ಜೊತೆ ನಟಿ ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಸರಳವಾಗಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು.

    ನನ್ನರಸಿ ರಾಧೆ, ನಿಹಾರಿಕಾ (Niharika) ಸೀರಿಯಲ್ ಮತ್ತು ಬಿಗ್ ಬಾಸ್ ರಿಯಾಲಿಟಿ ಶೋ ಸೇರಿದಂತೆ ಹಲವು ಸಿನಿಮಾಗಳಲ್ಲಿ ತೇಜಸ್ವಿನಿ ಪ್ರಕಾಶ್ ನಟಿಸಿದ್ದಾರೆ. ದರ್ಶನ್ ನಟನೆಯ ‘ಗಜ’ (Gaja Film) ಸಿನಿಮಾದಲ್ಲಿ ತೇಜಸ್ವಿನಿ ನಟನೆ ಅಭಿಮಾನಿಗಳ ಗಮನ ಸೆಳೆದಿತ್ತು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಮ್ಮನ್ನು ಪತಿಯಾಗಿ ಪಡೆಯಲು ಪುಣ್ಯ ಮಾಡಿದ್ದೇನೆ- ತೇಜಸ್ವಿನಿ ಪ್ರಕಾಶ್

    ನಿಮ್ಮನ್ನು ಪತಿಯಾಗಿ ಪಡೆಯಲು ಪುಣ್ಯ ಮಾಡಿದ್ದೇನೆ- ತೇಜಸ್ವಿನಿ ಪ್ರಕಾಶ್

    ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್’ (Bigg Boss Kannada) ಮೂಲಕ ಮನೆ ಮಾತಾದ ನಟಿ ತೇಜಸ್ವಿನಿ ಪ್ರಕಾಶ್ (Tejaswini Prakash) ಇದೀಗ ಬೇಬಿ ಬಂಪ್ ಫೋಟೋಶೂಟ್ ಶೇರ್ ಮಾಡಿ ಪತಿಗೆ ವಿಶೇಷವಾಗಿ ಶುಭಕೋರಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳು ಸಖತ್ ವೈರಲ್ ಆಗುತ್ತಿವೆ.

    ನಮ್ಮ ಮಗು ಸಂತೋಷದಿಂದ ಹೊಳೆಯುತ್ತಿದ್ದು, ನಾವು ನಮ್ಮ ಜೀವನದ ಅತ್ಯಂತ ಅಮೂಲ್ಯ ಉಡುಗೊರೆಯನ್ನು ಸ್ವೀಕರಿಸಲಿದ್ದೇವೆ. ವಿಶೇಷವಾಗಿ ಜನ್ಮದಿನದ ಶುಭಾಶಯಗಳು ಗಂಡ, ನೀವು ನನಗೆ ತೋರಿದ ಪ್ರೀತಿ, ಕಾಳಜಿ, ವಾತ್ಸಲ್ಯಕ್ಕೆ ನಾನು ಆಭಾರಿಯಾಗಿದ್ದೇನೆ. ನಿಮ್ಮನ್ನು ನನ್ನ ಪತಿಯಾಗಿ ಹೊಂದಲು ನಿಜವಾಗಿಯೂ ಪುಣ್ಯ ಮಾಡಿದ್ದೇನೆ ಎಂದು ತೇಜಸ್ವಿನಿ ಬರೆದುಕೊಂಡಿದ್ದಾರೆ.

    ಕಳೆದ ವರ್ಷ ಮಾರ್ಚ್ 20ರಂದು ಪನಿ ಶರ್ಮಾ (Phani Sharma) ಜೊತೆ ನಟಿ ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಸರಳವಾಗಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಇತ್ತೀಚೆಗೆ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಗುಡ್ ನ್ಯೂಸ್‌ ಅನ್ನು ನಟಿ ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದರು.

    ನನ್ನರಸಿ ರಾಧೆ (Nannarasi Radhe), ನಿಹಾರಿಕಾ (Niharika) ಸೀರಿಯಲ್ ಮತ್ತು ಬಿಗ್ ಬಾಸ್ ರಿಯಾಲಿಟಿ ಶೋ ಸೇರಿದಂತೆ ಹಲವು ಸಿನಿಮಾಗಳಲ್ಲಿ ತೇಜಸ್ವಿನಿ ಪ್ರಕಾಶ್ ನಟಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೊದಲ ಮಗುವಿನ ನಿರೀಕ್ಷೆಯಲ್ಲಿ ‘ಬಿಗ್ ಬಾಸ್’ ತೇಜಸ್ವಿನಿ ಪ್ರಕಾಶ್

    ಮೊದಲ ಮಗುವಿನ ನಿರೀಕ್ಷೆಯಲ್ಲಿ ‘ಬಿಗ್ ಬಾಸ್’ ತೇಜಸ್ವಿನಿ ಪ್ರಕಾಶ್

    ಸ್ಯಾಂಡಲ್‌ವುಡ್ (Sandalwood) ನಟಿ ತೇಜಸ್ವಿನಿ ಪ್ರಕಾಶ್ (Tejaswini Prakash) ಅವರು ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಮನೆಗೆ ಹೊಸ ಅತಿಥಿ ಆಗಮನ ಆಗುತ್ತಿರೋ ಸಂಭ್ರಮದಲ್ಲಿದ್ದಾರೆ. ಈ ಗುಡ್ ನ್ಯೂಸ್ ಬಗ್ಗೆ ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಪನಿ ವರ್ಮಾ ಜೊತೆ ತೇಜಸ್ವಿನಿ ಕಳೆದ ವರ್ಷ ಮಾರ್ಚ್ 20ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಮದುವೆ ಜರುಗಿತ್ತು. ಮದುವೆಯಾಗಿ 1 ವರ್ಷ ಕಳೆದಿದ್ದು, ಇದೀಗ ಗುಡ್ ನ್ಯೂಸ್ ಕೊಟ್ಟಿದ್ದಾರೆ.

    ಮಸಣದ ಮಕ್ಕಳು, ಗಜ(Gaja), ಈ ಪ್ರೀತಿ ಏಕೆ ಭೂಮಿ ಮೇಲಿದೆ, ಸವಿ ಸವಿ ನೆನಪು, ಬಂಧು ಬಳಗ, ಅರಮನೆ, ಜೊತೆಯಾಗಿ ಹಿತವಾಗಿ, ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದನ್ನೂ ಓದಿ:ವಿಜಯ್ ನಟನೆಯ ‘ಲಿಯೋ’ ಚಿತ್ರದ ಕನ್ನಡ ಪೋಸ್ಟರ್ ಬಿಡುಗಡೆ

    2017ರಲ್ಲಿ ಕನ್ನಡದ ಬಿಗ್ ಬಾಸ್ ಶೋನಲ್ಲಿ (Bigg Boss Kannada) ಕಾಣಿಸಿಕೊಂಡಿದ್ದರು. ಬಳಿಕ ‘ನನ್ನರಸಿ ರಾಧೆ’ ಸೀರಿಯಲ್‌ನಲ್ಲಿ ಲಾವಣ್ಯ ಎಂಬ ಪಾತ್ರದಲ್ಲಿ ವಿಲನ್ ಆಗಿ ಬಣ್ಣ ಹಚ್ಚಿದ್ದರು. ಈ ಸೀರಿಯಲ್ ತೇಜಸ್ವಿನಿ ನಟಿಸಿದ ಕೊನೆಯ ಪ್ರಾಜೆಕ್ಟ್ ಆಗಿದೆ. ಸದ್ಯ ವೈಯಕ್ತಿಕ ಜೀವನದಲ್ಲಿ ನಟಿ ಬ್ಯುಸಿಯಾಗಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬದಾಮಿಯಲ್ಲಿ ಬೀಡು ಬಿಟ್ಟಿತ್ತು ಯೋಗರಾಜ್ ಭಟ್‌ & ಟೀಮ್

    ಬದಾಮಿಯಲ್ಲಿ ಬೀಡು ಬಿಟ್ಟಿತ್ತು ಯೋಗರಾಜ್ ಭಟ್‌ & ಟೀಮ್

    ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ ಗರಡಿ ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೂರ್ಯ ನಾಯಕನಾಗಿ ನಟಿಸುತ್ತಿರುವ, ಸೋನಾಲ್ ಮಾಂಟೆರೊ ನಾಯಕಿಯಾಗಿ ನಟಿಸುತ್ತಿರುವ ಈ ಸಿನಿಮಾದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದನ್ನೂ ಓದಿ: ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನ

    ಈ ಸುಂದರ ತಾಣದಲ್ಲಿ “ಗರಡಿ” ಚಿತ್ರದ ಟೈಟಲ್ ಸಾಂಗ್ ಅದ್ದೂರಿಯಾಗಿ ಚಿತ್ರೀಕರಣಗೊಂಡಿದೆ. ಕರ್ನಾಟಕ ರಾಜ್ಯದ ಮಂತ್ರಿಗಳು, ನಟರು, ನಿರ್ಮಾಪಕರೂ ಆಗಿರುವ ಕೌರವ ಬಿ.ಸಿ.ಪಾಟೀಲ್ ಈ ಹಾಡಿನ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಗರಡಿ ಮನೆಯಲ್ಲಿ ತರಭೇತಿ ಪಡೆದಿರುವ ಸಾಕಷ್ಟು ಕುಸ್ತಿಪಟುಗಳು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.  ಬರೀ ಹಾಡಿನ ಚಿತ್ರೀಕರಣವಷ್ಟೇ ಅಲ್ಲದೇ ನಾಯಕ ಸೂರ್ಯ, ನಾಯಕಿ ಸೋನಾಲ್ ಮಾಂಟೆರೊ, ಕೌರವ ಬಿ‌.ಸಿ.ಪಾಟೀಲ್ ಮುಂತಾದವರ ಅಭಿನಯದಲ್ಲಿ ಮಾತಿನ ಭಾಗದ ಚಿತ್ರೀಕರಣ ಸಹ ನಡೆದಿದೆ. ಇದನ್ನೂ ಓದಿ : ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು

    ಬಹಳ ದಿನಗಳ ನಂತರ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಇದನ್ನೂ ಓದಿ: ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲೇ ಕಪಾಳಮೋಕ್ಷ: ಅತ್ಯುತ್ತಮ ನಟ ಆಸ್ಕರ್ ವಿಜೇತ ವಿಲ್ ಸ್ಮಿತ್ ಉಗ್ರತಾಪ

    ವಿ.ಹರಿಕೃಷ್ಣ ಅವರ ಸುಮಧುರ ಸಂಗೀತ, ನಿರಂಜನ್ ಬಾಬು ಛಾಯಾಗ್ರಹಣ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸೂರ್ಯ, ಸೋನಾಲ್ ಮಾಂಟೆರೊ, ಕೌರವ ಬಿ.ಸಿ.ಪಾಟೀಲ್, ರವಿಶಂಕರ್, ಎಸ್.ಟಿ.ಸೋಮಶೇಖರ್, ಬಲ ರಾಜವಾಡಿ, ಚೆಲುವರಾಜು, ರಾಘವೇಂದ್ರ, ಸೂರಜ್ ಬೇಲೂರ್, ಕಾಮಿಡಿ ಕಿಲಾಡಿಗಳು ನಯನ, ತ್ರಿವೇಣಿ(ಟಗರು), ರವಿಚೇತನ್, ತೇಜಸ್ವಿನಿ ಪ್ರಕಾಶ್ ಮುಂತಾದವರು “ಗರಡಿ” ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಗೆಳೆಯನ ಜೊತೆಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ತೇಜಸ್ವಿನಿ ಪ್ರಕಾಶ್

    ಗೆಳೆಯನ ಜೊತೆಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ತೇಜಸ್ವಿನಿ ಪ್ರಕಾಶ್

    ಸ್ಯಾಂಡಲ್ವುಡ್, ಟಾಲಿವುಡ್, ಕಿರುತೆರೆಯಲ್ಲಿ ವಿಭಿನ್ನವಾದ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಮೂಲಕವಾಗಿ ಜನಮನ್ನಣೆ ಪಡೆದಿರುವ ನಟಿ ತೇಜಸ್ವಿನಿ ಪ್ರಕಾಶ್, ಖಾಸಗಿ ಕಂಪನಿಯ ಉದ್ಯೋಗಿ ಪಣಿ ವರ್ಮಾ ಜೊತೆಗೆ ರವಿವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.


    ಪಣಿ ಮತ್ತು ತೇಜಸ್ವಿನಿ ಹಲವು ವರ್ಷಗಳಿಂದ ಸ್ನೇಹಿತರು, ಈ ಸ್ನೇಹವೇ ಪ್ರೀತಿಗೆ ತಿರುಗಿ ಇದೀ ಹೊಸ ಜೀವನಕ್ಕೆ ನಾಂದಿ ಹಾಡಿದೆ. ಈ ಜೋಡಿಯ ಮದುವೆ ಸಂಭ್ರಮದಲ್ಲಿ ವಧು, ವರರ ಕುಟುಂಬಸ್ಥರು, ಅನೇಕ ಸಿನಿ ಮತ್ತು ಕಿರುತೆರೆ ಕಲಾವಿದರು ಭಾಗಿಯಾಗಿದ್ದರು. ಮದುವೆ ಅದ್ಧೂರಿಯಾಗಿ ನಡೆದದ್ದು ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಇದನ್ನೂ ಓದಿ: ಹಸೆಮಣೆ ಏರಲಿದ್ದಾರೆ ನಟಿ ತೇಜಸ್ವಿನಿ ಪ್ರಕಾಶ್

    ಕೆಂಪು ಮತ್ತು ಗೋಲ್ಡ್ ಬಣ್ಣದ ರೇಶ್ಮೆ ಸೀರೆಯಲ್ಲಿ ತೇಜಸ್ವಿನಿ, ಪಣಿ ವರ್ಮಾ ಕ್ರೀಮ್ ಬಣ್ಣದ ರೇಶ್ಮೆ ಶರ್ಟ್, ಪಂಚೆಯಲ್ಲಿ ನವ ದಂಪತಿ ಕಾಣಿಸಿಕೊಂಡಿದ್ದಾರೆ. ತೇಜಸ್ವಿನಿ ಮದುವೆಯಲ್ಲಿ ಕಿರುತೆರೆ ಸ್ನೇಹಿತರು, ನಟ ಪ್ರೇಮ್ ನೆನಪಿರಲಿ, ಸಿಹಿ ಕಹಿ ಚಂದ್ರು ಮತ್ತು ನಿರ್ದೇಶಕ ತರುಣ್ ಸುಧೀರ್, ನಟಿ ಕಾರಣ್ಯ ರಾಮ್ ಸೇರಿದಂತೆ ಅನೇಕ ಕಲಾವಿದರು ಭಾಗಿಯಾಗಿದ್ದಾರೆ. ಇದನ್ನೂ ಓದಿ: ಮೌಳಿಯ ರಂಗೀನ್ ಲೋಕದಲ್ಲಿ ಮಿಂದೆದ್ದ ಜನಸಾಗರ… ಒಂದೇ ವೇದಿಕೆಯಲ್ಲಿ ಸೌತ್ ಸ್ಟಾರ್ಸ್‍ಗಳ ಸಮಾಗಮ

     

    View this post on Instagram

     

    A post shared by Karunya (@ikarunya)

    ನಟಿ ಕಾರುಣ್ಯ ರಾಮ್ ಅವರು ಸ್ನೇಹಿತೆ ತೇಜಸ್ವಿನಿ ಪ್ರಕಾಶ್ ಮದುವೆಯಲ್ಲಿ ಭಾಗಿಯಾದ್ದರ ವಿವಾಹದ ಫೋಟೋಗಳನ್ನು  ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿಕೊಂಡಿದ್ದು, ಎರಡು ಹೃದಯಗಳು ಒಂದಾಗಿ ನಿಮ್ಮ ಭವಿಷ್ಯಕ್ಕಾಗಿ ಅತ್ಯುತ್ತಮವಾಗಿರಲಿ. ನಿಮ್ಮ ವಿವಾಹ ಜೀವನ ಸುಖಮಯವಾಗಿರಲಿ ಎಂದು ಹಾರೈಸಿ ಫೋಸ್ಟ್ ಮಾಡಿದ್ದಾರೆ. ಈ ಫೋಟೋಗಳು ನೋಡಿದ ಅಭಿಮಾನಿಗಳು ಕಾಮೆಂಟ್ ಮಾಡುವ ಮೂಲಕವಾಗಿ ತೇಜಸ್ವಿನಿ ಪ್ರಕಾಶ್ ಅವರ ದಾಂಪತ್ಯ ಜೀವನಕ್ಕೆ ಶುಭ ಕೋರುತ್ತಿದ್ದಾರೆ.

    ತೇಜಸ್ವಿನಿ ಕನ್ನಡ ಚಿತ್ರರಂಗ, ಕಿರುತೆರೆ, ಮಾಡೆಲಿಂಗ್ನಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದವರು. 2016ರಲ್ಲಿ ಕಿರುತೆರೆ ಲೋಕಕ್ಕೆ ಪಾದಾರ್ಪಣೆ ಮಾಡಿ, ನಂತರದಲ್ಲಿ 2020ರಿಂದ ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ನನ್ನರಸಿ ರಾಧೆ’ ಧಾರಾವಾಹಿಯಲ್ಲಿ ಲಾವಣ್ಯ ಪಾತ್ರದ ಮೂಲಕ ಫೇಮಸ್ ಆದರು.

    ಮಾತಾಡ್ ಮಾತಾಡ್ ಮಲ್ಲಿಗೆ, ಪ್ರೀತಿ ಏಕೆ ಭೂಮಿ ಮೇಲಿದೆ, ಅರಮನೆ, ರಾಬರ್ಟ್, ಕೃಷ್ಣ ಸೇರಿದಂತೆ ಈವರೆಗೆ 22 ಚಿತ್ರಗಳಲ್ಲಿ ನಟಿಸಿದ್ದಾರೆ. 2017ರಲ್ಲಿ ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5ರಲ್ಲಿ ತೇಜಸ್ವಿನಿ ಸ್ಪರ್ಧಿಯಾಗಿದ್ದರು. ತಮ್ಮದೇ ಆಗಿರುವ ನಟನಾ ಶೈಲಿಯ ಮೂಲಕವಾಗಿ ಅಭಿಮಾನಿಗಳ ಬಳಗವನ್ನು ಸಂಪಾದಿಸಿದ್ದಾರೆ.

  • ಹಸೆಮಣೆ ಏರಲಿದ್ದಾರೆ ನಟಿ ತೇಜಸ್ವಿನಿ ಪ್ರಕಾಶ್

    ಹಸೆಮಣೆ ಏರಲಿದ್ದಾರೆ ನಟಿ ತೇಜಸ್ವಿನಿ ಪ್ರಕಾಶ್

    ಸ್ಯಾಂಡಲ್‍ವುಡ್, ಕಿರುತೆರೆಯಲ್ಲಿ ಮಿಂಚಿದ ನಟಿ ತೇಜಸ್ವಿನಿ ಪ್ರಕಾಶ್ ಅವರು ಹಸೆಮಣೆ ಏರುತ್ತಿದ್ದಾರೆ.

    ತೇಜಸ್ವಿನಿ ಪ್ರಕಾಶ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ. ನಿನ್ನೆ ಅರಿಶಿಣ ಶಾಸ್ತ್ರವನ್ನು ಅದ್ಧೂರಿಯಾಗಿ ಮಾಡಲಾಗಿದೆ. ಕುಟುಂಬಸ್ಥರು, ಸಿನಿಮಾ ಕಲಾವಿದರು, ಆಪ್ತರು ಕೆಲವು ಶಾಸ್ತ್ರಗಳಲ್ಲಿ ಭಾಗಿಯಾಗಿದ್ದಾರೆ.

     

    View this post on Instagram

     

    A post shared by Jahnavi Ambekal (@janualways)

    ತೇಜಸ್ವಿನಿ ಅವರ ಅರಿಶಿಣ ಶಾಸ್ತ್ರದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಕಾಮೆಂಟ್ ಮಾಡುವ ಮೂಲಕವಾಗಿ ಶುಭ ಕೋರುತ್ತಿದ್ದಾರೆ. ಅರಿಶಿಣ ಶಾಸ್ತ್ರದಲ್ಲಿ ಸ್ಯಾಂಡಲ್‍ವುಡ್ ನಟಿ ಕಾರುಣ್ಯ ರಾಮ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಮದುವೆಯಲ್ಲಿ ಸಿನಿಮಾ ರಂಗದ ಹಲವು ಕಲಾವಿದರು ಭಾಗಿಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಮೌಳಿಯ ರಂಗೀನ್ ಲೋಕದಲ್ಲಿ ಮಿಂದೆದ್ದ ಜನಸಾಗರ… ಒಂದೇ ವೇದಿಕೆಯಲ್ಲಿ ಸೌತ್ ಸ್ಟಾರ್ಸ್‍ಗಳ ಸಮಾಗಮ

     

    View this post on Instagram

     

    A post shared by Karunya (@ikarunya) 

    ಈ ಹಿಂದೆ ಅವರು ಮಾತಾಡ್ ಮಾತಾಡ್ ಮಲ್ಲಿಗೆ, ಪ್ರೀತಿ ಏಕೆ ಭೂಮಿ ಮೇಲಿದೆ, ಅರಮನೆ ಮೊದಲಾದ ಕೆಲ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ, ತೆಲುಗು ಸೇರಿದಂತೆ ಒಟ್ಟು 22 ಚಿತ್ರಗಳಲ್ಲಿ ನಟಿಸಿದ್ದಾರೆ. ಬಿಗ್‍ಬಾಸ್ ಕಾರ್ಯಕ್ರಮದಲ್ಲಿಯೂ ಕಾಣಿಸಿಕೊಂಡಿದ್ದರು. ತೇಜಸ್ವಿನಿ ಪ್ರಕಾಶ್ ಅವರ ಮದುವೆ ಯಾವಾಗ ಎಲ್ಲಿ ಎನ್ನುವ ಮಾಹಿತಿ ತಿಳಿದು ಬರಬೇಕಿದೆ. ಇದನ್ನೂ ಓದಿ:  ವರ್ಷಾಂತ್ಯಕ್ಕೆ ನಿರ್ದೇಶನದ ಹೊಸ ಪಯಣ ಮಾಡಲು ರೆಡಿಯಾಗುತ್ತಿದ್ದಾರೆ ಕೃಷ್ಣ ಅಜಯ್ ರಾವ್