Tag: ತೇಜಸ್ವಿಸೂರ್ಯ

  • Nagamangala Violence | ಹಿಂದೂಗಳ ಮೇಲೆ ಹಾಕಿರೋ ಕೇಸ್ ವಾಪಸ್ ಪಡೆಯದೇ ಹೋದ್ರೆ ಹಳ್ಳಿ ಹಳ್ಳಿಗಳಲ್ಲಿ ಪ್ರತಿಭಟನೆ- ತೇಜಸ್ವಿಸೂರ್ಯ

    Nagamangala Violence | ಹಿಂದೂಗಳ ಮೇಲೆ ಹಾಕಿರೋ ಕೇಸ್ ವಾಪಸ್ ಪಡೆಯದೇ ಹೋದ್ರೆ ಹಳ್ಳಿ ಹಳ್ಳಿಗಳಲ್ಲಿ ಪ್ರತಿಭಟನೆ- ತೇಜಸ್ವಿಸೂರ್ಯ

    ಬೆಂಗಳೂರು : ನಾಗಮಂಗಲ ಗಲಭೆ ಕೇಸ್‌ನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ದಾಖಲಾಗಿರೋ ಕೇಸ್ ಸರ್ಕಾರ ಕೈ ಬಿಡಬೇಕು. ಇಲ್ಲದೆ ಹೋದರೆ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹಳ್ಳಿ ಹಳ್ಳಿಗಳಲ್ಲಿ ಬಿಜೆಪಿ ಯುವ ಮೋರ್ಚಾ ಹೋರಾಟ ಮಾಡುತ್ತದೆ ಎಂದು ಸಂಸದ, ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿಸೂರ್ಯ (Tejasvi Surya) ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಬಿಜೆಪಿ (BJP) ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಗಮಂಗಲದಲ್ಲಿ ನಿನ್ನೆ ಕೋಮುಗಲಭೆ ನಡೆದಿದೆ. ಕಾಂಗ್ರೆಸ್ (Congress) ಸರ್ಕಾರ ಬಂದಾಗ ರಾಜ್ಯದಲ್ಲಿ ಟಿಪ್ಪು, ಔರಂಗಜೇಬನ ಸಂತತಿ ಹುಟ್ಟುತ್ತೆ. ಎಲ್ಲಿಲ್ಲದವರು ಹೊರಗೆ ಬರ್ತಾರೆ. ನಿನ್ನೆ ಗೃಹ ಸಚಿವರು ಇದೊಂದು ಸಣ್ಣ ಘಟನೆ ಎಂದು ಹೇಳಿದ್ದಾರೆ. ಪರಮೇಶ್ವರ್ ಅವರಿಗೆ ಕೇಳುತ್ತೇನೆ ನಿಮ್ಮ ಮನೆ ರಸ್ತೆಯಲ್ಲಿ ಯಾರಾದರು ಗಣೇಶ ಕೂರಿಸಿ ಅಲ್ಲಿ ಕಲ್ಲು ಹೊಡೆದರೆ, ಬೆಂಕಿ ಹಚ್ಚಿದರೆ, ನಿಮ್ಮ ಮನೆಗೆ ಕಲ್ಲು ತೂರಾಟ ಮಾಡಿದರೆ. ಅದನ್ನ ಸಣ್ಣ ಘಟನೆ ಅಂತೀರಾ ಎಂದು ಪ್ರಶ್ನಿಸಿದರು. ನಿಮ್ಮ ಮನೆಗೆ ಬೆಂಕಿ ಬೀಳೋವರೆಗೂ ಘಟನೆ ಬಗ್ಗೆ ಗೊತ್ತಾಗಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಿಬಿಐ ಪಂಜರದ ಗಿಳಿಯಾಗಬಾರದು, ಜಾಮೀನು ಸಿಕ್ಕರೂ ಸಿಎಂ ಕಚೇರಿ ಪ್ರವೇಶಿಸುವಂತಿಲ್ಲ: ಸುಪ್ರೀಂ ಹೇಳಿದ್ದೇನು?

    ಸಂಪೂರ್ಣ ಘಟನೆಯಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಕೇಸ್ ಹಾಕಿದ್ದಾರೆ. ಕರ್ನಾಟಕದಲ್ಲಿ ಸಂವಿಧಾನದ ಪ್ರಕಾರ ಕಾನೂನು ನಡೆಯುತ್ತಿದೆಯಾ? ಅಥವಾ ಷರಿಯಾ ಪ್ರಕಾರ ಕಾನೂನು ನಡೆಯುತ್ತಿಯಾ? ಗಣೇಶ ಕೂರಿಸೋಕು ಕರ್ನಾಟಕದಲ್ಲಿ ಸಾಧ್ಯವಿಲ್ಲವಾ? ಎಂದು ಸರ್ಕಾರದ ವಿರುದ್ಧ ಪ್ರಶ್ನೆ ಎತ್ತಿದ್ದಾರೆ.

    ಒಂದು ಸಮುದಾಯದ ಪರ ತುಷ್ಟೀಕರಣ ನೀತಿ ಮಾಡಿ ಗಣೇಶ ಕೂರಿಸಿದರೆ ನೀವು ಬೆಂಕಿ ಹಾಕಿಸಿ, ಕಲ್ಲು ಹೊಡೆಸುತ್ತಿದ್ದೀರಾ. ಇದು ಓಲೈಕೆ ರಾಜಕಾರಣ ಅಲ್ಲವಾ ಅಂತ ಪ್ರಶ್ನೆ ಮಾಡಿದರು. ಮೊನ್ನೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನ ಎಸ್‌ಡಿಪಿಐ ಅವರು ವಿರೋಧ ಮಾಡಿದ್ರು ಅಂತ ಉಡುಪಿಯಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ರದ್ದು ಮಾಡಿದೆ ಈ ಸರ್ಕಾರ.ಈ ಸರ್ಕಾರ ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳಿಗೆ ಶರಣಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: MUDA Scam |ಸಿಎಂ ಪತ್ನಿ ಕೇಳಿದ್ದು 13 ಸೈಟ್ – ಪ್ರಾಧಿಕಾರ ಕೊಟ್ಟಿದ್ದು 14 ಸೈಟ್!

    ರಾಜ್ಯದ ಜನತೆ ಧೈರ್ಯವಾಗಿ ಗಣೇಶ ಹಬ್ಬ ಹಿಂದೂ ಹಬ್ಬ ಮಾಡಿ. ಬಿಜೆಪಿ ನಿಮ್ಮ ಜೊತೆ ಇರುತ್ತದೆ ಎಂದು ಕರೆ ನೀಡಿದರು. ಪರಮೇಶ್ವರ್ (G Parameshwar) ಮತ್ತು ಸಿಎಂಗೆ ಮನವಿ ಮಾಡುತ್ತೇನೆ. ನಿನ್ನೆ ನಾಗಮಂಗಲದಲ್ಲಿ ಯಾರು ಟೆರೆರಿಸ್ಟ್ಗಳು ಬೆಂಕಿ ಹಾಕಿದ್ರೋ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಹಿಂದೂ ಯುವಕರ ಮೇಲೆ ಹಾಕಿರೋ ಕೇಸ್ ವಾಪಸ್ ಪಡೆಯಬೇಕು. ಪಿಎಫ್‌ಐ ಕೈ ಬಿಡಬೇಕು. ಇದೇ ರೀತಿ ಅಮಾಯಕರ ಮೇಲೆ ಕ್ರಮಕ್ಕೆ ಮುಂದಾದ್ರೆ ನಾವು ಹಳ್ಳಿ ಹಳ್ಳಿಯಲ್ಲಿ ಹೋರಾಟ ಮಾಡುತ್ತೇವೆ. ಕೂಡಲೇ ಹಿಂದೂಗಳ ಮೇಲೆ ಹಾಕಿರೋ ಕೇಸ್ ವಾಪಸ್ ಪಡೆಯುವಂತೆ ಸರ್ಕಾರವನ್ನು ಆಗ್ರಹಿಸಿದರು. ಇದನ್ನೂ ಓದಿ: ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದ ಪವಿತ್ರಾ ಗೌಡ

  • ಸ್ಕೈವಾಕ್‌  ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ – ಡಿಕೆಶಿಗೆ ಸೂರ್ಯ ಪತ್ರ

    ಸ್ಕೈವಾಕ್‌ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ – ಡಿಕೆಶಿಗೆ ಸೂರ್ಯ ಪತ್ರ

    ಬೆಂಗಳೂರು: ಕೈ  (Congress) ಸರ್ಕಾರದಿಂದ ನಗರದ ಅಭಿವೃದ್ಧಿಗಾಗಿ ದುಡ್ಡು ಬಿಡುಗಡೆ ಮಾಡುವಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya)  ಡಿಸಿಎಂ ಡಿಕೆ.ಶಿವಕುಮರ್‌ಗೆ  (D.K. Shivakumar) ಪತ್ರ ಬರೆದಿದ್ದಾರೆ.

    ಕಾಂಗ್ರೆಸ್ ಸರ್ಕಾರದಲ್ಲಿ ಬೆಂಗಳೂರು ಅಭಿವೃದ್ಧಿಗೆ ದುಡ್ಡು ಬಿಡುಗಡೆ ಮಾಡುವಂತೆ ಬಿಜೆಪಿ ನಾಯಕರು ಒತ್ತಡ ನೀಡುತ್ತಿದ್ದಾರೆ. ಈ ಹಿಂದೆ ಇದೇ ವಿಚಾರವಾಗಿ ಶಾಸಕ ಮುನಿರತ್ನ ಮನವಿ ಮಾಡಿದ್ದರು. ಈಗ ತೇಜಸ್ವಿ ಸೂರ್ಯ ಡಿಕೆಶಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ:  ಮುಸ್ಲಿಮರಿಗೆ ಉಡುಗೊರೆ, ರೈತರಿಗೆ ಗಾಯದ ಮೇಲೆ ಬರೆ: ಅಶೋಕ್‌ ಕಿಡಿ

    ನಗರದ ಸಂಚಾರ ದೃಷಿಯಿಂದ ಬಹುಮುಖ್ಯ ಪ್ರದೇಶವಾಗಿರುವ ಬನಶಂಕರಿಯಲ್ಲಿ ಬಿಎಂಟಿಸಿ ಬಸ್ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣಗಳ ನಡುವೆ ಸಾರ್ವಜನಿಕರ ಸಂಚಾರಕ್ಕೆ ಬಹಳ ತೊಂದರೆಯಾಗುತ್ತಿದೆ. ಇವುಗಳ ಮಧ್ಯೆ ದಿನನಿತ್ಯ ಸಂಚಾರ ಮಾಡುವ ಜನರಿಗಾಗಿ ಸ್ಕೈವಾಕ್‌ ನಿರ್ಮಾಣ ಮಾಡಬೇಕು. ಸ್ಕೈವಾಕ್‌ ನಿರ್ಮಾಣಕ್ಕೆ ಸರ್ಕಾರದಿಂದ ದುಡ್ಡು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ನಿಖಿಲ್ ಮಂಡ್ಯ ಕಣದಿಂದ ಹಿಂದೆ ಸರಿದಿದ್ದೇಕೆ?

    ಇದೇ ವಿಚಾರವನ್ನು ಹಲವಾರು ಬಾರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಮತ್ತು ನಿಮ್ಮ ಗಮನಕ್ಕೂ ತಂದಿದ್ದೇನೆ. ಅದಕ್ಕೆ ತಾವು ಸಕಾರಾತ್ಮಕವಾಗಿ ಸ್ಪಂದಿಸಿದ್ದೀರಿ. ಸಾಕಷ್ಟು ಬಾರಿ ದೂರವಾಣಿ ಕರೆ ಮಾಡಿದ್ದೇನೆ. ಆದರೆ ಕಾಮಗಾರಿ ಬಗ್ಗೆ ಮಾತ್ರ ಇನ್ನೂ ಸ್ಪಷ್ಟನೆ ಇಲ್ಲ. ನಾವು ಅಲ್ಲಿ ಸ್ಕೈವಾಕ್‌ ನಿರ್ಮಿಸುವುದರಿಂದ 50 ಸಾವಿರ ಜನಕ್ಕೆ ಪ್ರಯೋಜನವಾಗಲಿದೆ. ಹೀಗಾಗಿ ಬಿಬಿಎಂಪಿ ಬಜೆಟ್‌ನಲ್ಲಿ ಅನುದಾನ ಮೀಸಲಿಡಿ ಎಂದು ಡಿಕೆ.ಶಿವಕುಮಾರ್ ಅವರಿಗೆ ತೇಜಸ್ವಿ ಸೂರ್ಯ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಬೇಸಿಗೆಗೂ ಮುನ್ನವೇ ಕುಡಿಯೋ ನೀರಿಗೆ ಹಾಹಾಕಾರ – ವಾಟರ್‌ ಟ್ಯಾಂಕರ್‌ ಮಾಲೀಕರಿಂದ ದುಪ್ಪಟ್ಟು ದರ ಸುಲಿಗೆ!

  • ತೇಜಸ್ವಿ ಸೂರ್ಯಗೆ ಹೂ ಕೊಡಲು ಬಂದ ಕೈ ಕಾರ್ಯಕರ್ತೆ ವಶಕ್ಕೆ

    ತೇಜಸ್ವಿ ಸೂರ್ಯಗೆ ಹೂ ಕೊಡಲು ಬಂದ ಕೈ ಕಾರ್ಯಕರ್ತೆ ವಶಕ್ಕೆ

    ಬೆಂಗಳೂರು: ಸಂಸದ ತೇಜಸ್ವಿಸೂರ್ಯ ಅವರಿಗೆ ಹೂ ನೀಡಲು ಬಂದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಕಲ್ಲು ಹೊಡೆಯುವುದು ಬೇಡ ನಾವು ಉಡುಗೊರೆಯಾಗಿ ಕಲ್ಲುಗಳನ್ನು ಹಾಗೂ ಹೂ ಕೊಡುತ್ತೇವೆ ಅಂತಾ ಕಾಂಗ್ರೆಸ್ ಕಾರ್ಯಕರ್ತರು ತೇಜಸ್ವಿ ಸೂರ್ಯ ನಿವಾಸದ ಬಳಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಇದನ್ನೂ ಓದಿ: ಆರಗ ಮನೆಗೆ ನುಗ್ಗಿದ ABVP ಕಾರ್ಯಕರ್ತರಿಗೆ ಲಾಠಿ ಏಟು

    ಗಿರಿನಗರ ಸರ್ಕಲ್‍ನಿಂದ ತೇಜಸ್ವಿ ಸೂರ್ಯ ನಿವಾಸಕ್ಕೆ ರ್‍ಯಾಲಿ ನಡೆಸಲು ಪ್ಲ್ಯಾನ್ ಕೂಡ ಮಾಡಿದ್ದರು. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಹಿನ್ನೆಲೆ ಇಂದು ತೇಜಸ್ವಿ ಸೂರ್ಯ ನಿವಾಸ ಬಳಿ ಭದ್ರತೆ ವಹಿಸಲಾಗಿತ್ತು. ಆದರೂ ಪೊಲೀಸ್ ಸರ್ಪಗಾವಲು ನಡುವೆಯೂ ತೇಜಸ್ವಿ ಸೂರ್ಯ ನಿವಾಸದ ಮುಂದೆ ಬಂದು, ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಕಾರ್ಯಕರ್ತರು ಸೇರಿದ್ದರು. ಆದರೆ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಇದೇ ವೇಳೆ ದ್ವಿಚಕ್ರವಾಹನದಲ್ಲಿ ಪ್ರೆಸ್ ಅಂತಾ ಬೋರ್ಡ್ ಹಾಕಿಕೊಂಡು ಬಂದು ಕಲ್ಲು ಹೊಡೆಯೋದು ಬೇಡ ಹೂ ಕೊಡುತ್ತೇವೆ ಅಂತಾ ಹೂ ತಂದಿದ್ದ ಕಾಂಗ್ರೆಸ್ ಕಾರ್ಯಕರ್ತೆಯನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡರು. ಇದನ್ನೂ ಓದಿ: ಬಚ್ಚನಕೇರಿ ಗ್ರಾಮದಲ್ಲಿ ಕಿತ್ತೂರು ಅರಮನೆ ನಿರ್ಮಾಣ – ಸ್ಥಳೀಯರಿಂದ ವಿರೋಧ

    ತೇಜಸ್ವಿ ಸೂರ್ಯ ಹೇಳಿದ್ದೇನು?
    ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯ ಬಳಿಕ ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದ್ದರೂ ರಕ್ಷಣೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿ ಬಿಜೆಪಿ ಕಾರ್ಯಕರ್ತರು ಈಗ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ.

    ಇದೇ ವಿಚಾರವಾಗಿ ರಾಜೀನಾಮೆ ವಾಪಸ್ ಪಡೆಯುವಂತೆ ಚಿಕ್ಕಮಗಳೂರಿನ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂದೀಪ್‍ಗೆ ತೇಜಸ್ವಿ ಸೂರ್ಯ ಕರೆ ಮಾಡಿದ್ದರು. ಸರ್ಕಾರ ನಮ್ಮದೆ ಇದೆ. ಒಂದು ವೇಳೆ ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆಯಾಗಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂದು ಸಂದೀಪ್ ಜೊತೆ ಫೋನ್‍ನಲ್ಲಿ ತೇಜಸ್ವಿ ಸೂರ್ಯ ಮಾತನಾಡಿದ್ದರು. ಈ ಆಡಿಯೋ ವೈರಲ್ ಆಗಿತ್ತು. ಈ ಹೇಳಿಕೆ ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ ಆಯ್ಕೆ

    ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ ಆಯ್ಕೆ

    – ಪ್ರಧಾನ ಕಾರ್ಯದರ್ಶಿಯಾಗಿ ಸಿ.ಟಿ.ರವಿ ನೇಮಕ
    – ಪದಾಧಿಕಾರಿಗಳ ಪಟ್ಟಿ ಪ್ರಕಟಿಸಿದ ಜೆಪಿ ನಡ್ಡಾ

    ನವದೆಹಲಿ: ಬಿಜೆಪಿ ಹೈ ಕಮಾಂಡ್‍ನಿಂದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಚಿವ ಸಿ.ಟಿ.ರವಿ ಅವರನ್ನು ನೇಮಿಸಲಾಗಿದೆ.

    ಜೆ.ಪಿ.ನಡ್ಡಾ ಅವರು ತಂಡದಲ್ಲಿ ರಾಜ್ಯದ ನಾಲ್ವರು ಬಿಜೆಪಿ ನಾಯಕರಿಗೆ ಸ್ಥಾನ ಲಭಿಸಿದ್ದು, ತೇಜಸ್ವಿ ಸೂರ್ಯ ಹಾಗೂ ಸಿ.ಟಿ.ರವಿ ಅವರಿಗೆ ರಾಷ್ಟ್ರ ಮಟ್ಟದಲ್ಲಿ ಸ್ಥಾನಮಾನ ನೀಡಿದ್ದಾರೆ. ಈ ಮೊದಲೇ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿದ್ದ ಬಿ.ಎಲ್.ಸಂತೋಷ್ ಅವರನ್ನು ಸಹ ಅದೇ ಸ್ಥಾನದಲ್ಲಿ ಮುಂದುವರಿಸಿದ್ದಾರೆ. ಸಚಿವ ಸಿ.ಟಿ.ರವಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಯಾಗಿದ್ದರೆ, ಯುವ ಮೊರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕವಾಗಿದ್ದಾರೆ.

    ರಾಷ್ಟ್ರೀಯ ಮಟ್ಟದಲ್ಲಿ ಪದಾಧಿಕಾರಿಗಳನ್ನು ಬದಲಾಯಿಸುವ ಮೂಲಕ ಪಕ್ಷದ ಸಂಘಟನೆಗೆ ಬಲ ನೀಡಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ,ನಡ್ಡಾ ಅವರಿಂದ ಘೋಷಣೆ ಹೊರ ಬಿದ್ದಿದೆ. ಈ ಮೂಲಕ ರಾಜ್ಯದ ಯುವ ನಾಯಕರು ಹೈಕಮಾಂಡ್ ಮಟ್ಟದಲ್ಲಿ ಪ್ರಮುಖ ಸ್ಥಾನ ಪಡೆದಂತಾಗಿದೆ. ಹೈ ಕಮಾಂಡ್ ಹೆಸರು ಘೋಷಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಸಂತಸ ಮನೆ ಮಾಡಿದೆ. ಹಲವು ನಾಯಕರು ಶುಭ ಕೋರುತ್ತಿದ್ದಾರೆ.

  • ದೇಶ ದಿವಾಳಿಯಾಗಲು ಮೋದಿ ಕಾರಣ – ಉಗ್ರಪ್ಪ

    ದೇಶ ದಿವಾಳಿಯಾಗಲು ಮೋದಿ ಕಾರಣ – ಉಗ್ರಪ್ಪ

    – ಬಡವರು ಬದುಕಲು ಆಗುತ್ತಿಲ್ಲ
    – ಅಗತ್ಯ ವಸ್ತುಗಳ ಬೆಲೆ ಏರಿಕೆ

    ಬಳ್ಳಾರಿ: ದೇಶದ ಆರ್ಥಿಕ ಪರಿಸ್ಥಿತಿ ಡೋಲಾಯಮಾನದಲ್ಲಿದೆ, ಅಂತರಾಷ್ಟ್ರೀಯ ಮಟ್ಟದ ರೂಪಾಯಿ ಮೌಲ್ಯ ಕುಸಿಯುತ್ತಿದ್ದು ದೇಶ ದಿವಾಳಿಯಾಗಲು ಬಿಜೆಪಿ ಕಾರಣ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ.

    ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಬಡವರು ಬದಕಲು ಆಗುತ್ತಿಲ್ಲ. ತೈಲ ಬೆಲೆ ಗಗನಕ್ಕೇರುತ್ತಿದೆ. ಪೆಟ್ರೋಲ್ ಬೆಲೆ 100 ರೂ. ಗಡಿದಾಟುವ ಪರಿಸ್ಥಿತಿ ಬಂದಿದ್ದು, ಜನಸಾಮಾನ್ಯರು 10 ಗ್ರಾಂ ಚಿನ್ನ ಕೊಳ್ಳಲು ಕಷ್ಟವಾಗಿದೆ. ಜನ ಸಾಮಾನ್ಯರ ಬದುಕಿಗೆ ಅಗತ್ಯವಿರುವ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿವೆ, ಕೇಂದ್ರ ಮತ್ತು ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


    ರಾಜ್ಯದಲ್ಲಿ ಉಂಟಾದ ಪ್ರವಾಹದ ಹಾನಿ ತುಂಬಲು ಕೇಂದ್ರ ಸರ್ಕಾರ ಅಗತ್ಯ ಹಣ ನೀಡುತ್ತಿಲ್ಲ. ಅನುದಾನ ನೀಡುವಂತೆ ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ ಕಾಲು ಬೀಳುವುದು ಬಾಕಿ ಉಳಿದಿದೆ ಎಂದು ವ್ಯಂಗ್ಯವಾಡಿದರು.

    ಶಾಸಕ ಸೋಮಶೇಖರ್ ರೆಡ್ಡಿ ವಿವಾದಾತ್ಮಕ ಹೇಳಿಕೆ ಕುರಿತು ಮಾತನಾಡಿದ ಅವರು, ಅಲ್ಪನಿಗೆ ಅಧಿಕಾರ ಸಿಕ್ಕರೆ ಏನಾಗುತ್ತದೆ ಎನ್ನುವುದಕ್ಕೆ ಸೋಮಶೇಖರ್ ರೆಡ್ಡಿ ಮತ್ತು ಸಂಸದ ತೇಜಸ್ವಿ ಸೂರ್ಯ ಉತ್ತಮ ಉದಾಹರಣೆ. ಸೋಮಶೇಖರ್ ರೆಡ್ಡಿ ಅಲ್ಪಸಂಖ್ಯಾತರ ಬಗ್ಗೆ ಹೇಳಿದ್ದು ಅವರ ಮಾತಲ್ಲ, ಬಿಜೆಪಿಯ ಮಾತು. ಬಿಜೆಪಿಯವರ ಉದ್ದೇಶ ಸೋಮಶೇಖರ್ ರೆಡ್ಡಿ ಅವರ ಮಾತಿನಲ್ಲಿ ಎದ್ದು ಕಾಣುತ್ತದೆ ಎಂದು ಆರೋಪಿಸಿದರು.

  • ಜನತೆಯ ಕಷ್ಟದ ಬದಲಾಗಿ ಬಿಎಸ್‍ವೈಗೆ ಕುರ್ಚಿ ಚಿಂತೆ- ಎಚ್‍ಡಿಡಿ

    ಜನತೆಯ ಕಷ್ಟದ ಬದಲಾಗಿ ಬಿಎಸ್‍ವೈಗೆ ಕುರ್ಚಿ ಚಿಂತೆ- ಎಚ್‍ಡಿಡಿ

    -ತೇಜಸ್ವಿ ಸೂರ್ಯ ಉದಯೋನ್ಮುಖ ನಾಯಕ

    ಬೆಂಗಳೂರು: ಕುರ್ಚಿ ಮುಖ್ಯ ಆದಾಗ ರಾಜ್ಯದ ಜನತೆ ಮುಖ್ಯ ಆಗುವುದಿಲ್ಲ. ಈಗ ಸಿಎಂ ಯಡಿಯೂರಪ್ಪರಿಗೆ ಕುರ್ಚಿ ಅನಿವಾರ್ಯವಾಗಿದ್ದರಿಂದ ದೆಹಲಿಗೆ ಹೋಗಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹದಿಂದ ಇಂತಹ ಕೆಟ್ಟ ದುಸ್ಥಿತಿ ಉಂಟಾಗಿದೆ. ರಾಜ್ಯದಲ್ಲಿ ಜನರು ನಿತ್ಯ ಕಣ್ಣೀರು ಹಾಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಇದು ಏನ್ರೀ, ಯಡಿಯೂರಪ್ಪ ಹೇಗೆ ಕುರ್ಚಿ ಉಳಿಸಿಕೊಳ್ಳಬೇಕು ಎಂಬ ಹಿಂಸೆ ಎದುರಿಸುತ್ತಿದ್ದಾರೆ. ಹೀಗಾಗಿ ಅವರು ದೆಹಲಿಗೆ ಹೋಗಿದ್ದಾರೆ ಎಂದು ಹರಿಹಾಯ್ದರು.

    ಸಂಸದ ತೇಜಸ್ವಿ ಸೂರ್ಯರನ್ನು ಹೊಗಳುವ ಮೂಲಕ ಯಡಿಯೂರಪ್ಪರನ್ನು ತೆಗಳಿದ ಅವರು, ತೇಜಸ್ವಿ ಸೂರ್ಯ ಅವರ ಬದ್ಧತೆ ನನಗೆ ಇಷ್ಟ ಆಯ್ತು. ರಾಜ್ಯದ ಜನರ ಬಗ್ಗೆ ಇರುವ ಅವರ ಕಾಳಜಿ ನನಗೆ ಇಷ್ಟ ಆಯಿತು. ನನ್ನಿಂದ ಅವರಿಗೆ ಪ್ರಮಾಣ ಪತ್ರ ಕೊಡುವ ಅಗತ್ಯತೆ ಇಲ್ಲ. ರಾಜ್ಯದ ಜನತೆ ನನಗೆ ಮುಖ್ಯ, ತೀವ್ರ ತರವಾದ ಆಕ್ರೋಶ ಅವರ ಮಾತಿನಲ್ಲಿತ್ತು. ಉದಯೋನ್ಮುಖ ನಾಯಕರಿಗೆ ಇಂತಹ ಭಾವನೆ ಇರಬೇಕಾಗಿರುವುದು ಅಗತ್ಯ. ಪಕ್ಷ ಯಾವುದಾದರೂ ಇರಲಿ. ಅವರ ಬದ್ಧತೆ ನನಗೆ ಇಷ್ಟ ಆಯಿತು. ಆದರೆ ಯಡಿಯೂರಪ್ಪನವರಿಗೆ ರಾಜ್ಯದ ಜನರ ಪರವಾಗಿ ಬದ್ಧತೆ ಇಲ್ಲ. ಕುರ್ಚಿ ಮೇಲೆ ಚಿಂತೆ ಇದೆ ಎಂದು ವಾಗ್ದಾಳಿ ನಡೆಸಿದರು.

    ಹೈ ಕೋರ್ಟ್ ಆದೇಶ ಇದ್ದರು ಕಾಂಗ್ರೆಸ್ ಸ್ನೇಹಿತರ ತೃಪ್ತಿಗೋಸ್ಕರ ಒಬ್ಬರನ್ನು ಘನ ಸರ್ಕಾರ ಅಮಾನತು ಮಾಡಿದೆ. ಬೆಳಗ್ಗೆ ಕಾಂಗ್ರೆಸ್, ಮಧ್ಯಾಹ್ನ ಬಿಜೆಪಿಗೆ ಹೋಗುವವರು ಮಂಡ್ಯದಲ್ಲಿ ತುಂಬಾ ಜನ ಇದ್ದಾರೆ. ಅವರಿಗೆ ತೃಪ್ತಿ ಮಾಡಲು ದೆಹಲಿಗೆ ಹೋಗುವ ಮುನ್ನ ಅಮಾನತು ಮಾಡಿ ಹೋಗಿದ್ದಾರೆ. ಯಡಿಯೂರಪ್ಪನವರಿಗೆ ಧನ್ಯವಾದ ಎಂದು ದೇವೇಗೌಡರು ಕಿಡಿಕಾರಿದರು. ಅಲ್ಲದೆ, ಹೆಸರು ಹೇಳದೆ ನಾರಾಯಣಗೌಡ ಮತ್ತು ಚೆಲುವರಾಯಸ್ವಾಮಿ ವಿರುದ್ಧ ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದರು.