Tag: ತೋಟಗಾರಿಕೆ ಇಲಾಖೆ

  • ಚಿತ್ರದುರ್ಗದಲ್ಲಿ ನಿರಂತರ ಮಳೆಗೆ ಬೆಳೆಹಾನಿ – ಜಮೀನುಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

    ಚಿತ್ರದುರ್ಗದಲ್ಲಿ ನಿರಂತರ ಮಳೆಗೆ ಬೆಳೆಹಾನಿ – ಜಮೀನುಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

    ಚಿತ್ರದುರ್ಗ: ನಿರಂತರ ಮಳೆಯಿಂದಾಗಿ (Rain) ಅಪಾರ ಪ್ರಮಾಣದಲ್ಲಿ ಈರುಳ್ಳಿ, ಹೂವು ಸೇರಿದಂತೆ ವಿವಿಧ ಬೆಳೆಗಳು ಹಾನಿಗೊಳಗಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ (Challakere) ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಹೀಗಾಗಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಚಳ್ಳಕೆರೆ ತಾಲೂಕಿನ ಬಾಲೆನಹಳ್ಳಿ ಗ್ರಾಮದಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಈರುಳ್ಳಿ ಬೆಳೆಯ ಜಮೀನಿಗೆ ಇಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು (Horticulture Department) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ವಿಷ್ಣು ಸ್ಮಾರಕ ವಿಚಾರ – ನಾಳೆ ಸಿಎಂ ಭೇಟಿಯಾಗಲಿರುವ ಭಾರತಿ ವಿಷ್ಣುವರ್ಧನ್

    ರೈತರು ಅಲ್ಪಕಾಲದಲ್ಲೇ ಲಾಭದಾಯಕ ಬೆಳೆ ಎಂದು ಈರುಳ್ಳಿ ಬಿತ್ತನೆ ಮಾಡಿದ್ದರು. ಆದರೆ ನಿರಂತರ ಮಳೆ ಹೆಚ್ಚಾಗಿ ಜಮೀನಿನಲ್ಲೇ ಈರುಳ್ಳಿ ಕೊಳೆಯಲಾರಂಭಿಸಿದೆ. ಮತ್ತೊಂದೆಡೆ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಳೆ ದಿಢೀರ್ ಕುಸಿದಿದ್ದು, ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಆದ್ದರಿಂದ ಅಧಿಕಾರಿಗಳು ಈರುಳ್ಳಿ ಬೆಳೆ ನಷ್ಟ ಕುರಿತಂತೆ ಸರ್ಕಾರಕ್ಕೆ ಸರಿಯಾದ ಮಾಹಿತಿ ಕೊಟ್ಟು ಬೆಳೆ ವಿಮೆ ಬೆಳೆ ಪರಿಹಾರವನ್ನು ಸಿಗುವಂತೆ ಮಾಡಬೇಕು ಎಂದು ರೈತ ಮುಖಂಡ ಚಿದಾನಂದಪ್ಪ ತಿಪ್ಪೇಸ್ವಾಮಿ ಮನವಿ ಮಾಡಿದರು. ಇದನ್ನೂ ಓದಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರಿಗೆ ಕಠಿಣ ಶಿಕ್ಷೆ ಅವಶ್ಯಕ, ಕೇಂದ್ರದ ತನಿಖೆ ಆಗಲಿ: ಡಾ.ಮಂಜುನಾಥ್

    ಇನ್ನು ಇದೇ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ತೋಟಗಾರಿಕೆ ಸಹಾಯಕಾಧಿಕಾರಿ ಮಧು ಅವರು, ಬೆಳೆ ಹಾನಿಯಾದ ಪ್ರದೇಶಗಳಿಗೆ ಇಂದು ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರಂತರವಾಗಿ ಮಳೆ ಆಗಿರುವ ಕಾರಣ ಈರುಳ್ಳಿ ಬೆಳೆಗೆ ಮಚ್ಚೆರೋಗ, ಹಳದಿ ರೋಗ ಸೇರಿದಂತೆ ಈರುಳ್ಳಿ ಬೆಳೆಗೆ ವಿವಿಧ ರೋಗ ಕಾಣಿಸಿಕೊಂಡಿದ್ದು, ಈಗಾಗಲೇ ಈರುಳ್ಳಿ ಬೆಳೆ ಕಟಾವಿಗೆ ಬಂದಿದ್ದರೂ ಪ್ರಯೋಜನವಿಲ್ಲ. ಆದರೆ ಈರುಳ್ಳಿ ಕಟಾವು ಮಾಡಿದ ನಂತರ ಮಳೆಗೆ ಸಿಲುಕದಂತೆ ಎಚ್ಚರಿಕೆವಹಿಸಿ ಕಟಾವು ಮಾಡಿದ ಬೆಳೆಯನ್ನ ಸಂರಕ್ಷಣೆ ಮಾಡಿಕೊಳ್ಳುವಂತೆ ರೈತರಿಗೆ ಸೂಚಿಸಿದರು. ಇದನ್ನೂ ಓದಿ: ಪವನ್‌ ಖೇರಾ ಬಳಿ 2 ವೋಟರ್‌ ಐಡಿ – ಬಿಜೆಪಿ ಬಾಂಬ್‌, EC ನೋಟಿಸ್‌ ಜಾರಿ

    ಈ ವೇಳೆ ಬೆಳೆ ಹಾನಿಗೆ ಸೂಕ್ತ ಪರಿಹಾರಕ್ಕೆ ಇಲಾಖೆಗೆ ಮಾಹಿತಿ ನೀಡುವ ಭರವಸೆ ನೀಡಿದ್ದು, ರೈತರಾದ ಓಟಿ ತಿಪ್ಪೇಸ್ವಾಮಿ, ಚಿದಾನಂದಪ್ಪ ಅವರು ತ್ವರಿತವಾಗಿ ಪರಿಹಾರ ನೀಡುವಂತೆ ಮನವಿ ಸಲ್ಲಿಸಿದರು. ಈ ಸಂಧರ್ಭದಲ್ಲಿ ರೈತರಾದ ಕೃಷ್ಣಪ್ಪ, ಮಲ್ಲ ರೆಡ್ಡಿ, ತಿಮ್ಮ ರೆಡ್ಡಿ, ಸುಭಾಷ್ ರೆಡ್ಡಿ, ಸೇರಿದಂತೆ ಬಾಲೇನ ಹಳ್ಳಿಯ ಅನೇಕ ರೈತರು ಉಪಸ್ಥಿತರಿದ್ದರು. ಇದನ್ನೂ ಓದಿ: ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲು ಆರೋಪ – ಕಂದಾಯ ನಿರೀಕ್ಷಕ, ಗ್ರಾಮಾಡಳಿತ ಅಧಿಕಾರಿ ಸಸ್ಪೆಂಡ್

  • ನವ್ಯಶ್ರೀ ವಿಡಿಯೋ ಲೀಕ್ ಕೇಸ್ – ಚಾರ್ಜ್ ಶೀಟ್ ನಲ್ಲಿ ಕುಮಾರಕೃಪಾದ ರಹಸ್ಯ ಬಯಲು

    ನವ್ಯಶ್ರೀ ವಿಡಿಯೋ ಲೀಕ್ ಕೇಸ್ – ಚಾರ್ಜ್ ಶೀಟ್ ನಲ್ಲಿ ಕುಮಾರಕೃಪಾದ ರಹಸ್ಯ ಬಯಲು

    ಬೆಂಗಳೂರು: ಕಾಂಗ್ರೆಸ್ (Congress) ಕಾರ್ಯಕರ್ತೆ ನವ್ಯಶ್ರೀ ರಾವ್ (Navyashree R Rao) ಖಾಸಗಿ ವೀಡಿಯೋ (Private Video) ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

    ತೋಟಗಾರಿಕೆ ಇಲಾಖೆ (Horticulture Department) ಸಹಾಯಕ ನಿರ್ದೇಶಕ ರಾಜ್‌ಕುಮಾರ್ ಟಾಕಳೆ ಮತ್ತು ಇತರ ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ. A.1 ಆರೋಪಿಯಾಗಿ ರಾಜಕುಮಾರ್ ಟಾಕಳೆ, A.2 ಆರೋಪಿಯಾಗಿ ಖಾಸಗಿ ಪತ್ರಿಕೆಯೊಂದರ ಪತ್ರಕರ್ತ ಸೇರಿ 6 ಮಂದಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. ಇದನ್ನೂ ಓದಿ: ಕಿಡ್ನಾಪ್ ಮಾಡಿ ಗಣೇಶಪುರದ ಮಾವಿನ ತೋಪಿನಲ್ಲಿ ಕೂಡಿಹಾಕಿದ್ದ: ನವ್ಯಶ್ರೀ

    ಸಲ್ಲಿಕೆಯಾಗಿರುವ ಚಾರ್ಜ್ ಶೀಟ್ ನಲ್ಲಿ ಕುಮಾರಕೃಪಾದ ಕರ್ಮಕಾಂಡ ಬಯಲಾಗಿದೆ. ಸುಮಾರು ಒಂದೂವರೆ ವರ್ಷ ಕುಮಾರಕೃಪಾದ ರೂಮಿನ ಬೀಗ ನವ್ಯಶ್ರೀ ಬಳಿಯೇ ಇತ್ತು. ಆಕೆಯನ್ನ ತನ್ನ ಹೆಂಡತಿ ಎಂದು ಅಲ್ಲಿಗೆ ಕರೆದೊಯ್ದಿದ್ದ ರಾಜಕುಮಾರ್ (Rajkumar Takale) ಆಕೆಯ ವೀಡಿಯೋ ಮಾಡಿ ಬಹಿರಂಗ ಮಾಡಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ನಾನು ಕಷ್ಟಕ್ಕೆ ಸ್ಪಂದಿಸಿ ಮನೆಯಲ್ಲಿ ಇಟ್ಕೋತೀನಿ ಅಂದಿದ್ದೆ – ಆದ್ರೆ ನವ್ಯಶ್ರೀ 50ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು: ಟಾಕಳೆ ಆರೋಪ

    ವೀಡಿಯೋ ರಿಲೀಸ್ ಮಾಡಿದ ಬಳಿಕ ಆಕೆ ನನಗೆ ಗೊತ್ತೇ ಇಲ್ಲ, ಆಕೆ ನನ್ನ ಹೆಂಡತಿ ಅಲ್ಲ, ಆಕೆಯೇ ವೀಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡ್ತಿದ್ದಾಳೆ ಎಂದು ಆರೋಪಿಸಿದ್ದಾನೆ. ಒಂದು ವೇಳೆ ರಾಜ್‌ಕುಮಾರ್ ಆಕೆ ತನ್ನ ಹೆಂಡತಿ ಅಲ್ಲ ಅನ್ನೋದಾದ್ರೆ ಗೆಸ್ಟ್ಹೌಸ್ ಬೀಗ ನವ್ಯಶ್ರೀಗೆ ಯಾಕೆ ಕೊಟ್ಟರು? ಇಲ್ಲಿ ರಾಜ್‌ಕುಮಾರ್ ಟಾಕಳೆ ಪ್ರೀ ಪ್ಲಾನ್ ಮಾಡಿಕೊಂಡಿರುವುದಾಗಿ ಚಾರ್ಜ್‌ಶೀಟ್‌ ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಟಾಕಳೆ ವಿರುದ್ಧ ಕೈ ಕಾರ್ಯಕರ್ತೆ ಅತ್ಯಾಚಾರ ಆರೋಪ – ನವ್ಯಶ್ರೀ ವೈದ್ಯಕೀಯ ತಪಾಸಣೆಗೆ ಕರೆದೊಯ್ದ ಪೊಲೀಸ್

    ಅಲ್ಲದೇ ರಾಜ್‌ಕುಮಾರ್ 2022ರ ಜುಲೈ 14ರಂದು ವೀಡಿಯೋ ರಿಲೀಸ್ ಮಾಡಿದ್ದ. ಆದರೆ ಜುಲೈ 12ರಂದೇ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು. ಹಾಗಾಗಿ ಪತ್ರಕರ್ತನ ಜೊತೆ ಸೇರಿ ಕೃತ್ಯ ಎಸಗಿದ್ದಾನೆ. ಈ ಹಿನ್ನೆಲೆಯಲ್ಲಿ ಪತ್ರಕರ್ತನನ್ನೂ ಎ2 ಆರೋಪಿಯಾಗಿ ಪರಿಗಣಿಸಲಾಗಿದೆ. ಜೊತೆಗೆ 2020 ಡಿಸೆಂಬರ್ 18 ರಿಂದ 2021 ಜುಲೈವರೆಗೆ ನವ್ಯಶ್ರೀ ಕುಮಾರಕೃಪಾದಲ್ಲಿದ್ದರು ಎಂದು ಚಾರ್ಜ್ಶೀಟ್‌ನಲ್ಲಿ ತಿಳಿಸಲಾಗಿದೆ.

    ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕನಾಗಿದ್ದ ರಾಜಕುಮಾರ ಟಾಕಳೆ ಜವಳಿ ಸಚಿವ ಶ್ರೀಮಂತ್ ಪಾಟೀಲ್‌ರ ವಿಶೇಷ ಕರ್ಥವ್ಯಾಧಿಕಾರಿಯೂ ಆಗಿದ್ದ. ಅದರ ಐಡಿ ಕಾರ್ಡ್ ಬಳಿಸಿಕೊಂಡು ಕುಮಾರಕೃಪದಲ್ಲಿ ರೂಂ ಕೀ ಪಡೆದುಕೊಳ್ಳುತ್ತಿದ್ದ ಎಂದು ಚಾರ್ಜ್‌ಶೀಟ್‌ ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಅರ್ಧರಾತ್ರಿಯಲ್ಲಿ ಅತೃಪ್ತ ಶಾಸಕರ ಬಗ್ಗೆ ಕೈ ನಾಯಕರಿಗೆ ಮಾಹಿತಿ ಕೊಡ್ತಿದೆ – ಮುಂಬೈ ರಹಸ್ಯ ಬಿಚ್ಚಿಟ್ಟ ನವ್ಯಶ್ರೀ

    ಏನಿದು ಕೇಸ್?
    ಬೆಳಗಾವಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ವಿರುದ್ಧ ಅತ್ಯಾಚಾರ, ಕಿಡ್ನಾಪ್, ಗರ್ಭಪಾತ, ಮೋಸ, ಮಹಿಳೆ ಮೇಲೆ ಹಲ್ಲೆ, ಅವಾಚ್ಯವಾಗಿ ನಿಂದಿಸುವುದು, ಜೀವ ಬೆದರಿಕೆ, ಗೌರವಕ್ಕೆ ಧಕ್ಕೆ ಹಾಗೂ ಖಾಸಗೀತನಕ್ಕೆ ಧಕ್ಕೆ ಆರೋಪ ಹಾಗೂ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿರುವ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ವಿವಿಧ ಸೆಕ್ಷನ್ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರ ಮೇಲೆ ಕೇಸ್ ದಾಖಲಾಗಿತ್ತು.

    ಇದಕ್ಕೆ ಪ್ರತಿಯಾಗಿ ನವ್ಯಶ್ರೀ ಅವರ ಕಷ್ಟಕ್ಕೆ ಸ್ಪಂದಿಸಿ ನಾನು ಮನೆಯಲ್ಲಿ ಇಟ್ಟುಕೊಳ್ಳುತ್ತೇನೆ ಅಂದಿದ್ದೆ. ಆದ್ರೆ ನವ್ಯಶ್ರೀ ಕಳೆದ 4 ವರ್ಷಗಳಿಂದ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. 50 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು, ಈಗಾಗಲೇ 2 ಲಕ್ಷ ಹಣವನ್ನೂ ಪಡೆದಿದ್ದಾರೆ ಎಂದು ಪ್ರತಿದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನವ್ಯಶ್ರೀಯನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮನೆಗೊಂದು ಬಾವುಟ, ಕೊಟ್ಟಿದ್ದಾರೆ, ಹೋಗ್ತಾ, ಬರುತ್ತಾ ಹಾರಿಸುತ್ತಿರಿ: HD ರೇವಣ್ಣ

    ಮನೆಗೊಂದು ಬಾವುಟ, ಕೊಟ್ಟಿದ್ದಾರೆ, ಹೋಗ್ತಾ, ಬರುತ್ತಾ ಹಾರಿಸುತ್ತಿರಿ: HD ರೇವಣ್ಣ

    ಹಾಸನ: ಬಿಜೆಪಿ ಆಡಳಿತ ಸರ್ಕಾರದ ವಿರುದ್ಧ ಇಂದು ಆಕ್ರೋಶ ಹೊರಹಾಕಿರುವ ಮಾಜಿಸಚಿವ ಹಾಗೂ ಹಾಲಿ ಶಾಸಕ ಹೆಚ್.ಡಿ.ರೇವಣ್ಣ ಬಿಜೆಪಿ ಸರ್ಕಾರದ ಆಡಳಿತವನ್ನು ಬ್ರಿಟಿಷರ ಆಳ್ವಿಕೆಗೆ ಹೋಲಿಸಿದ್ದಾರೆ.

    ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬ್ರಿಟಿಷರು ಆಳ್ವಿಕೆ ಮಾಡುತ್ತಿದ್ದರು. ಈಗ ಕೆಲವೇ ಕೆಲವು ವರ್ಗದವರು ಆಡಳಿತ ಮಾಡ್ತಿದ್ದಾರೆ. ಉಳ್ಳವರು ರಾಜ್ಯವನ್ನು ಆಳುತ್ತಿದ್ದಾರೆ. ಇದನ್ನು ನಾನು ನೊಂದು ಹೇಳುತ್ತಿದ್ದೇನೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ದೇವೇಗೌಡರು, ಅವರ ಕುಟುಂಬ ಬಿಟ್ಟು ರಾಜಕಾರಣ ಮಾಡಲು ಆಗಲ್ಲ: ಸೂರಜ್‍ರೇವಣ್ಣ

    ರಾಜ್ಯದಲ್ಲಿ ಆಡಳಿತ ಇದೇ ರೀತಿ ಮುಂದುವರಿದರೆ ಯಡಿಯೂರಪ್ಪ ಮನೆ ಮನೆಗೆ ಹೋಗಿ ಗಂಟೆ ಹೊಡೆಯಬೇಕಾಗುತ್ತೆ, ಬಿಜೆಪಿ 40 ಸೀಟಿಗೆ ಬಂದು ನಿಲ್ಲುತ್ತೆ. ಜೆಡಿಎಸ್ ಮುಗಿಸುತ್ತೀನಿ ಅಂಥ ಎರಡೂ ರಾಷ್ಟ್ರೀಯ ಪಕ್ಷಗಳು ಅಂದುಕೊಂಡಿದ್ದರೆ, ಅದು ಭ್ರಮೆ. ರಾಜ್ಯದಲ್ಲಿ ಜೆಡಿಎಸ್ ಏನು ಅಂಥ ತೋರಿಸ್ತೀವಿ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಎರಡು ಪಕ್ಷಗಳಿಗೆ ಪರ್ಯಾಯವಾಗಿ ನಿಲ್ಲಲಿದೆ ಎಂದು ಸವಾಲು ಹಾಕಿದ್ದಾರೆ.

    75 ವರ್ಷವಾದರೂ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲ. ಸರ್ಕಾರಿ ಕಾಲೇಜುಗಳನ್ನು ಮುಚ್ಚಿಬಿಡಿ. ಮನೆಗೊಂದು ಬಾವುಟ ಕೊಟ್ಟಿದ್ದಾರೆ. ಹೋಗಾಬೇಕಾದರೆ, ಬರಬೇಕಾದರೆ ಬಾವುಟ ಬೀಸಿ ಅಂಥ, ಗಾಳಿ ಬೀಸಕೆ, ಸೊಳ್ಳೆ ಓಡ್ಸೋಕೆ ಬಾವುಟ ಕೊಟ್ಟವರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದೊಡ್ಡಗೌಡರ ಮೇಲೆ ಯಾರದ್ದೋ ಕೆಟ್ಟ ಕಣ್ಣು ಬಿದ್ದಿದೆ – ಹೆಚ್‌ಡಿಕೆ, ರೇವಣ್ಣ ಕಣ್ಣೀರು

    ತೋಟಗಾರಿಕೆ ಹಾಗೂ ಪ್ರವಾಸೋದ್ಯಮ ಸಚಿವರು ಕಾಣೆಯಾಗಿದ್ದಾರೆ. ಅವರನ್ನ ಹುಡುಕಿಕೊಟ್ಟವರಿಗೆ ಬಹುಮಾನವಾಗಿ ಸೌತೆಕಾಯಿ ಕೊಡುತ್ತೇನೆ ಎಂದು ರೇವಣ್ಣ ವ್ಯಂಗ್ಯವಾಡಿದ್ದಾರೆ.

    ಸಚಿವ ಮಾಧುಸ್ವಾಮಿ ಒಬ್ಬರೇ ಎಷ್ಟು ಅಂತಾ ಬಡ್ಕೋತಾರೆ. ಅವರ ಬಗ್ಗೆ ಗೌರವವಿದೆ. ಪಾಪ ಆತ ಅಸೆಂಬ್ಲಿಯಲ್ಲೂ ಮಾತನಾಡುತ್ತಾರೆ. ಇದನ್ನು ಸಹಿಸದ ಕೆಲ ಗಿರಾಕಿಗಳು ಅವರ ಮೇಲೆಯೇ ಸವಾರಿ ಮಾಡಲು ಹೊರಟಿದ್ದಾರೆ ಎಂದು ಹೇಳಿದ್ದಾರೆ.

    ಅದ್ಯಾರೋ ತೋಟಗಾರಿಕೆ ಮಂತ್ರಿ ಅಂಥ ಮಾಡಿದ್ದಾರೆ. ನಾನು ಮುಖ್ಯ ಕಾರ್ಯದರ್ಶಿ ಹಾಗೂ ಐಜಿ ಅವರಿಗೆ ಮನವಿ ಮಾಡುತ್ತೇನೆ. ಆ ತೋಟಗಾರಿಕೆ ಮಂತ್ರಿ ಎಲ್ಲಿ ಸಿಕ್ತಾರೆ ಅಂತ ಹೇಳಿ, ಇಲ್ಲ ತೋಟಗಾರಿಕೆ ಮಂತ್ರಿಗಳನ್ನು ಹುಡುಕಿಕೊಡಿ. ಅವರ ದರ್ಶನ ಪಡೆಯಲು ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ಡಿ.ರೇವಣ್ಣ ಕಾಯುತ್ತಿದ್ದಾರೆ. ಅವರ ದರ್ಶನ ಯಾವಾಗ ಸಿಗುತ್ತೆ? ಡಿಜಿ ಮತ್ತು ಐಜಿ ಅವರ ದರ್ಶನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಕೆ.ಎನ್.ರಾಜಣ್ಣ ಹೀಗೆ ಮಾತಾಡಿದ್ರೆ ಹುಚ್ಚು ನಾಯಿಗೆ ಹೊಡೆದಂಗೆ ಹೊಡಿತಾರೆ – ಪ್ರಜ್ವಲ್ ರೇವಣ್ಣ ಕಿಡಿ

    ಮಂತ್ರಿಗಳು ಊರು ಬಿಟ್ಟು ಹೋಗಿ ಕಾಣಿಯಾಗಿದ್ದಾರೆ. ಅವರ ಜೊತೆ ಪ್ರವಾಸೋದ್ಯಮ ಮಂತ್ರಿಗಳು, ವಿಜಯನಗರ ಹೊಸ ಜಿಲ್ಲೆ ಮಾಡಿದಂತಹ ಮಂತ್ರಿಗಳು ಕಾಣೆಯಾಗಿದ್ದಾರೆ. ಕೂಡಲೇ ಮಂತ್ರಿಗಳನ್ನ ಹುಡುಕಿಕೊಟ್ಟರೆ ನಮ್ಮ ಹೊಳೆನರಸೀಪುರ ತಾಲ್ಲೂಕಿನ ಜನತೆ ಕಡೆಯಿಂದ ಅವರಿಗೆ ಬಹುಮಾನ ಕೊಡಲಾಗುವುದು. ನಮ್ಮಲ್ಲಿ ಒಳ್ಳೆಯ ಟೇಸ್ಟ್ ಆಗಿರುವ ಸೌತೆಕಾಯಿ ಸಿಗುತ್ತೆ. ಎಲ್ಲೂ ಆ ರೀತಿ ಟೇಸ್ಟ್ ಇರಲ್ಲ, ಆ ಸೌತೆಕಾಯಿಯನ್ನೇ ಬಹುಮಾನವಾಗಿ ಕೊಡಲಾಗುವುದು ಎಂದು ಲೇವಡಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅರ್ಧರಾತ್ರಿಯಲ್ಲಿ ಅತೃಪ್ತ ಶಾಸಕರ ಬಗ್ಗೆ ಕೈ ನಾಯಕರಿಗೆ ಮಾಹಿತಿ ಕೊಡ್ತಿದೆ – ಮುಂಬೈ ರಹಸ್ಯ ಬಿಚ್ಚಿಟ್ಟ ನವ್ಯಶ್ರೀ

    ಅರ್ಧರಾತ್ರಿಯಲ್ಲಿ ಅತೃಪ್ತ ಶಾಸಕರ ಬಗ್ಗೆ ಕೈ ನಾಯಕರಿಗೆ ಮಾಹಿತಿ ಕೊಡ್ತಿದೆ – ಮುಂಬೈ ರಹಸ್ಯ ಬಿಚ್ಚಿಟ್ಟ ನವ್ಯಶ್ರೀ

    ಬೆಳಗಾವಿ: ಅತೃಪ್ತ ಶಾಸಕರು ಮುಂಬೈನಲ್ಲಿದ್ದಾಗ ನಾನೂ ಮುಂಬೈಗೆ ತೆರಳಿದ್ದೆ. ಕಾಂಗ್ರೆಸ್ ನಾಯಕರೊಬ್ಬರಿಗೆ ಅರ್ಧರಾತ್ರಿಯಲ್ಲಿ ಅತೃಪ್ತ ಶಾಸಕರ ಬಗ್ಗೆ ಮಾಹಿತಿ ಕೊಡ್ತಿದ್ದೆ ಎಂದು ನವ್ಯಶ್ರೀ ಆರ್. ರಾವ್ ಹೊಸ ಬಾಂಬ್ ಸಿಡಿಸಿದ್ದಾರೆ.

    ಬೆಳಗಾವಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅತೃಪ್ತ ಶಾಸಕರು ಮುಂಬೈನಲ್ಲಿ ಇದ್ದಾಗ ನಾನೂ ಮುಂಬೈಗೆ ತೆರಳಿದ್ದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಬ್ಬರು ನನಗೆ ಮುಂಬೈಗೆ ಹೋಗಲು ಸೀಕ್ರೆಟ್ ಟಾಸ್ಕ್ ನೀಡಿದ್ದರು. ಅದು ಅತೃಪ್ತ ಶಾಸಕರ ಚಲನವಲನ ನೋಡಿಕೊಳ್ಳುವ ಸೀಕ್ರೆಟ್ ಟಾಸ್ಕ್ ಆಗಿತ್ತು. ಅದಕ್ಕಾಗಿ ಬೇರೆ-ಬೇರೆ ಫ್ಲೈಟ್‌ಗಳಿಂದ ಮುಂಬೈಗೆ ಹೋಗಿದ್ದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ಕಷ್ಟಕ್ಕೆ ಸ್ಪಂದಿಸಿ ಮನೆಯಲ್ಲಿ ಇಟ್ಕೋತೀನಿ ಅಂದಿದ್ದೆ – ಆದ್ರೆ ನವ್ಯಶ್ರೀ 50ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು: ಟಾಕಳೆ ಆರೋಪ

    ನಾನು ಮುಂಬೈನ ಸುಫಿಯೋಟೆಲ್ ಹೋಟೆಲ್‌ನಲ್ಲಿ ತಂಗಿದ್ದೆ. ನನ್ನ ಜೊತೆ ಮೂವರು ಮಹಿಳೆಯರು ಬಂದಿದ್ದರು. ಹೋಟೆಲ್‌ಗೆ ಹೋಗಿ ಶಾಸಕರ ಚಲನವಲನ ನೋಡಿಕೊಳ್ಳುತ್ತಿದ್ದೆ. ನಂತರ ಕಾಂಗ್ರೆಸ್ ನಾಯಕರಿಗೆ ಅರ್ಧರಾತ್ರಿ ವಾಟ್ಸಪ್ ಮೂಲಕ ಅತೃಪ್ತ ಶಾಸಕರ ಮಾಹಿತಿ ಕೊಡ್ತಿದ್ದೆ. ಆ ಸೀಕ್ರೆಟ್ ಟಾಸ್ಕ್ ನಾನು ಯಶಸ್ವಿಯಾಗಿ ನಿಭಾಯಿಸಿದ್ದೇನೆ ಎಂದು ಮುಂಬೈ ರಹಸ್ಯ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಕಿಡ್ನಾಪ್ ಮಾಡಿ ಗಣೇಶಪುರದ ಮಾವಿನ ತೋಪಿನಲ್ಲಿ ಕೂಡಿಹಾಕಿದ್ದ: ನವ್ಯಶ್ರೀ

    2023ಕ್ಕೆ ಚುನಾವಣೆಗೆ ನಿಲ್ಲಬೇಕೆಂದಿದ್ದೆ: ನಾನು ದೆಹಲಿಮಟ್ಟದ, ರಾಜ್ಯಮಟ್ಟದ ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕ ಇರೋದು ನಿಜ. 2023ಕ್ಕೆ ಬೆಳಗಾವಿಯಿಂದ ಚುನಾವಣೆಗೆ ನಿಲ್ಲಬೇಕೆಂದಿದ್ದೆ. ಆದರೆ ಈಗ ರಾಜಕಾರಣ ಹೊರತುಪಡಿಸಿ ವೈಯಕ್ತಿಕ ಬದುಕು ಸರಿಪಡಿಸಿಕೊಳ್ಳಬೇಕಿದೆ. ಈ ಕೃತ್ಯಕ್ಕೆ ಸಹಕಾರ ಕೊಟ್ಟ ಮಹಾನಾಯಕ ಯಾರು ಎಂಬುದನ್ನು ಶೀಘ್ರದಲ್ಲೇ ಹೇಳುತ್ತೇನೆ. ಆತನ ಮುಂದಿನ ಜೀವನ ಮುಳ್ಳಾಗುವಂತೆ ಮಾಡ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಕಾಂಗ್ರೆಸ್ ನನ್ನನ್ನ ಸಸ್ಪೆಂಡ್ ಮಾಡಲಿ: ಕಾಂಗ್ರೆಸ್ ನಿಂದ ನನ್ನ ಇನ್ನೂ ಸಸ್ಪೆಂಡ್ ಮಾಡುವ ಲೆಟರ್ ಬಂದಿಲ್ಲ. ಬೇಕಾದರೆ ನನ್ನ ಸಸ್ಪೆಂಡ್ ಮಾಡಲಿ. ನಾನು ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತೆ ಇದ್ದೇನೆ, ಯಾವ ಪೋಸ್ಟ್ ಅಂತಾ ಹೇಳಲ್ಲ. ಇದನ್ನು ರಾಜಕೀಯವಾಗಿ ತಿರುಚುವ ಉದ್ದೇಶವೂ ನನಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಿಡ್ನಾಪ್ ಮಾಡಿ ಗಣೇಶಪುರದ ಮಾವಿನ ತೋಪಿನಲ್ಲಿ ಕೂಡಿಹಾಕಿದ್ದ: ನವ್ಯಶ್ರೀ

    ಕಿಡ್ನಾಪ್ ಮಾಡಿ ಗಣೇಶಪುರದ ಮಾವಿನ ತೋಪಿನಲ್ಲಿ ಕೂಡಿಹಾಕಿದ್ದ: ನವ್ಯಶ್ರೀ

    ಬೆಳಗಾವಿ: ತೋಟಗಾರಿಕೆ ಇಲಾಖೆ ನಿರ್ದೇಶಕ ರಾಜಕುಮಾರ ಟಾಕಳೆ ನನ್ನನ್ನು ಕಿಡ್ನಾಪ್ ಮಾಡಿ ರೌಡಿಗಳ ಸರ್ಪಗಾವಲಿನೊಂದಿಗೆ ಗಣೇಶಪುರದ ಮಾವಿನ ತೋಪಿನಲ್ಲಿ ಕೂಡಿಹಾಕಿದ್ದ ಎಂದು ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ಆರ್.ರಾವ್ ಆರೋಪಿಸಿದ್ದಾರೆ.

    ರಾಜಕುಮಾರ ಟಾಕಳೆ ಅವರು ನೀಡಿರುವ ದೂರಿನ ವಿಚಾರವಾಗಿ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆಯೇ ನನ್ನನ್ನು ಕಿಡ್ನಾಪ್ ಮಾಡಿ ಮಾವಿನ ತೋಪಿನಲ್ಲಿ ಕೂಡಿಹಾಕಿದ್ದ. ನನ್ನಿಂದ ಬಲವಂತವಾಗಿ ಹೇಳಿಕೆ ಪಡೆದು, ಅದನ್ನೂ ಮಾರಿಕೊಂಡಿದ್ದಾನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ತನ್ನ ಹೆಸರಲ್ಲಿ ಹೋಟೆಲ್ ರಿಜಿಸ್ಟರ್ ಮಾಡಿಲ್ಲ ಅಂತಾ ಅಪ್ಪ-ಅಮ್ಮನ ತಲೆಗೆ ಗುಂಡಿಕ್ಕಿ ಕೊಂದ

    ಟಾಕಳೆ ವಿರುದ್ಧ ನಾನು ಸಿಇಎನ್ ಠಾಣೆಯಲ್ಲಿ ದೂರು ನೀಡುತ್ತಿದ್ದೇನೆ. ಮದುವೆಯಾಗಿ ಪತ್ನಿಯಿದ್ದರೂ ಮೋಸದಿಂದ ಮದುವೆಯಾಗಿರುವುದಕ್ಕಾಗಿ ವಂಚನೆ ಪ್ರಕರಣ, ಮಾವಿನ ತೋಪಿನಲ್ಲಿ ಕೂಡಿಹಾಕಿ ಬಲವಂತದಿಂದ ಹೇಳಿಕೆ ಪಡೆದಿದ್ದಕ್ಕಾಗಿ ಕಿಡ್ನಾಪ್ ಪ್ರಕರಣ, ನನ್ನ ಚಾರಿತ್ರ್ಯ ಹರಣ ಮಾಡಲು ಅಶ್ಲೀಲ ವೀಡಿಯೋಗಳನ್ನು ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ವೆಬ್‌ಸೈಟ್‌ಗಳಿಗೆ ಮಾರಿಕೊಂಡಿದ್ದಕ್ಕಾಗಿ ಸೈಬರ್ ಅಪರಾಧಗಳ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ದೂರು ನೀಡಲಿದ್ದೇನೆ. ಮುಖ್ಯವಾಗಿ ನನ್ನನ್ನು ಹನಿಟ್ರ್ಯಾಪ್‌ ಮಾಡಿ, ಹಣ ಪೀಕಿದಕ್ಕಾಗಿ ಹನಿಟ್ರ್ಯಾಪ್‌ ಪ್ರಕರಣದ ಅಡಿಯಲ್ಲೂ ದೂರು ದಾಖಲಿಸಲಿದ್ದೇನೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ಕೊಡಲಿಲ್ಲವೆಂದು ಮದುವೆಯಾದ ಮರುದಿನವೇ ವಾಟ್ಸಾಪ್‌ನಲ್ಲೇ ತಲಾಖ್ ನೀಡಿ ಪರಾರಿಯಾದ

    ಈಗಾಗಲೇ ಸುಳ್ಳು ದೂರಿನ ಮೇರೆಗೆ ನನ್ನ ಮೇಲೆ ದಾಖಲಾದ ಎಫ್‌ಐಆರ್ ಸ್ಕ್ವಾಷ್‌ ಮಾಡಲು ನ್ಯಾಯಾಲಯಕ್ಕೆ ಕೋರಿದ್ದೇನೆ. ಆ ವೀಡಿಯೋ ಇರೋದು ಬೆಂಗಳೂರಿನ ಕುಮಾರ ಕೃಪಾ ಗೆಸ್ಟ್‌ಹೌಸ್‌ನದ್ದು, ಅದಕ್ಕಾಗಿ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಗೂ ದೂರು ನೀಡಿದ್ದೇನೆ. ಸೋಮವಾರ ರಾತ್ರಿ ಬೆಳಗಾವಿ ನಗರ ಪೊಲೀಸ್ ಆಯುಕ್ತರು, ಡಿಸಿಪಿ ಸ್ನೇಹಾ ಅವರನ್ನು ಭೇಟಿಯಾಗಿ ಸಾಕ್ಷಿ ಸಮೇತ ಎಲ್ಲ ವಿಚಾರಗಳನ್ನು ಮುಂದಿಟ್ಟಿದ್ದೇನೆ. ನಿಷ್ಪಕ್ಷಪಾತ ತನಿಖೆ ನಡೆಸಿ ನ್ಯಾಯ ಕೊಡಿಸಲು ಕೇಳಿಕೊಂಡಿದ್ದೇನೆ ಎಂದು ನವ್ಯಶ್ರೀ ಹೇಳಿದ್ದಾರೆ.

    ನಾನು ಅವನೊಂದಿಗೆ ಸೆಕ್ಸ್‌ಮೆಟ್‌ ತರಹ ಇರಬೇಕು ಅನ್ನೋದು ಟಾಕಳೆ ಉದ್ದೇಶ. ಅದಕ್ಕಾಗಿ ನನ್ನನ್ನು ಬೆಳಗಾವಿಯ ಶಿವಬಸವ ನಗರದ ಮಹಿಳಾ ಪಿಜಿಯಲ್ಲಿ ಇರಿಸಿದ್ದ. ಅಲ್ಲಿ ಯಾರೂ ಗಂಡಸರು ಬರಲ್ಲ ಅಂತಾ ಇರಿಸಿದ್ದ. ಆ ಆಡಿಯೋ ಕ್ಲಿಪ್‌ನಲ್ಲಿ ಮಾತನಾಡಿದ ಮೇಲೆಯೇ ನಾನು ಆತನ ಮನೆಗೆ ಬಂದಿದ್ದೆ. ಈತ ನನ್ನ ಜೊತೆ ಇದ್ದ ವೀಡಿಯೋಗಳನ್ನ ವೈರಲ್ ಮಾಡಿದ್ದಾನೆ. ನಾನು ಅವನ ವಿರುದ್ಧ ದೂರು ನೀಡುತ್ತೇನೆ ಎಂದಿದ್ದಾರೆ.

    ಸದ್ಯ ನನಗೆ ಈಗ ಬಂದಿರುವ ಮಾಹಿತಿಗಳೆಲ್ಲವೂ 2ನೇ ವ್ಯಕ್ತಿಯಿಂದ. ಇನ್ನೂ ಈ ತನಿಖೆಯಿಂದೆ ಯಾರಿದ್ದಾರೆ ಎಂಬುದೆಲ್ಲವನ್ನೂ ಪೊಲೀಸ್ ತನಿಖೆಯಿಂದಲೇ ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತೇನೆ.

    ಏನಿದು ಪ್ರಕರಣ?
    ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಚನ್ನಪಟ್ಟಣ ಮೂಲದ ನವ್ಯಶ್ರೀ ರಾಮಚಂದ್ರ ರಾವ್ ಹಾಗೂ ಆಪ್ತ ತಿಲಕ್ ವಿರುದ್ಧ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ಎಫ್‌ಐಆರ್ ದಾಖಲಾಗಿತ್ತು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ನೀಡಿದ ದೂರಿನ ಮೇರೆಗೆ ನವ್ಯಶ್ರೀ ವಿರುದ್ಧ ಐಪಿಸಿ ಸೆಕ್ಷನ್ 384, 448, 504, 506, 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನಾನು ಕಷ್ಟಕ್ಕೆ ಸ್ಪಂದಿಸಿ ಮನೆಯಲ್ಲಿ ಇಟ್ಕೋತೀನಿ ಅಂದಿದ್ದೆ – ಆದ್ರೆ ನವ್ಯಶ್ರೀ 50ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು: ಟಾಕಳೆ ಆರೋಪ

    ನಾನು ಕಷ್ಟಕ್ಕೆ ಸ್ಪಂದಿಸಿ ಮನೆಯಲ್ಲಿ ಇಟ್ಕೋತೀನಿ ಅಂದಿದ್ದೆ – ಆದ್ರೆ ನವ್ಯಶ್ರೀ 50ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು: ಟಾಕಳೆ ಆರೋಪ

    ಬೆಳಗಾವಿ: ನವ್ಯಶ್ರೀ ಅವರ ಕಷ್ಟಕ್ಕೆ ಸ್ಪಂದಿಸಿ ನಾನು ಮನೆಯಲ್ಲಿ ಇಟ್ಟುಕೊಳ್ಳುತ್ತೇನೆ ಅಂದಿದ್ದೆ. ಆದ್ರೆ ನವ್ಯಶ್ರೀ ಕಳೆದ 4 ವರ್ಷಗಳಿಂದ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. 50 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು, ಈಗಾಗಲೇ 2 ಲಕ್ಷ ಹಣವನ್ನೂ ಪಡೆದಿದ್ದಾರೆ ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ ಆರೋಪಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 3-4 ತಿಂಗಳಿನಿಂದ ನವ್ಯಶ್ರೀ ಮಾನಸಿಕವಾಗಿ ತೊಂದರೆ ಕೊಡುತ್ತಿದ್ದಾರೆ. ಹೀಗಾಗಿ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದೇನೆ. ನನ್ನ ಪತ್ನಿಯ ಸಹಕಾರದಿಂದಲೇ ಕೇಸ್ ದಾಖಲು ಮಾಡಿದ್ದೇನೆ. ನ್ಯಾಯಾಂಗ, ಪೊಲೀಸ್ ಇಲಾಖೆಯಿಂದ ನ್ಯಾಯ ಸಿಗುವ ಭರವಸೆ ಇದೆ ಎಂದಿದ್ದಾರೆ. ಇದನ್ನೂ ಓದಿ: 1,800 ಕೋಟಿಗೆ ಅಡಮಾನವಿಟ್ಟಿದ್ದ 11 ಕಟ್ಟಡಗಳನ್ನು ವಾಪಸ್ ಪಡೆದ BBMP

    ನಾನೊಬ್ಬ ಸರ್ಕಾರಿ ನೌಕರನಾಗಿದ್ದು ಹೆಚ್ಚಿಗೆ ಹೇಳಲ್ಲ. ಕಳೆದ 5-6 ತಿಂಗಳಿಂದ ಸತತವಾಗಿ ಬ್ಲ್ಯಾಕ್‌ಮೇಲ್‌ ನಡೆಯುತ್ತಿದೆ. ನಾನು ಪತಿ ಎಂದು ನವ್ಯಶ್ರೀ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದರು. ನಂತರ ಕೇವಲ ಹಣಕಾಸಿನ ವ್ಯವಹಾರ ಇದೆ ಎಂದು ಪೊಲೀಸರು ಹೇಳಿದ್ದರು. ಇದಾದ ಬಳಿಕ ಮತ್ತೆ 50 ಲಕ್ಷ ಹಣಕ್ಕಾಗಿ ಬೇಡಿಕೆಯಿಟ್ಟಿದ್ದರು. ಈಗಾಗಲೇ 2 ಲಕ್ಷ ಹಣ ಸಹ ಪಡೆದುಕೊಂಡಿದ್ದಾರೆ. ನನ್ನ ಮದುವೆ ವಿಚಾರ ತಿಳಿದು ಬ್ಲ್ಯಾಕ್ ಮೆಲ್ ಮಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

    ಮನೆಯಲ್ಲಿ ಇಟ್ಟುಕೊಳ್ಳುತ್ತೇನೆ ಎಂದಿದ್ದೆ: ನವ್ಯಶ್ರೀ ಆಡಿಯೋ ರಿಲೀಸ್ ವಿಚಾರಕ್ಕೆ ಸಬಂಧಿಸಿದಂತೆ ಮಾತನಾಡಿರುವ ಅವರು, ಆಡಿಯೋದಲ್ಲಿ ಎಲ್ಲಿಯೂ ಪತ್ನಿ ಎಂದು ನಾನು ಹೇಳಿಲ್ಲ. ಮಾನವೀಯ ದೃಷ್ಟಿಯಿಂದ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. ಅವರ ಮನೆ ಸಮಸ್ಯೆ ಬಗ್ಗೆ ಜಗಳ ನಡೆದಿತ್ತು. ಆಗ ನಾನು ಮನೆಯಲ್ಲಿ ಇಟ್ಟುಕೊಳ್ಳುತ್ತೇನೆ ಎಂದಿದ್ದೇನೆ ಅಷ್ಟೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೈಕ್ ಅನುಮತಿ ಪಡೆಯೋದ್ರಲ್ಲಿ ಹಿಂದೂ ದೇಗುಲಗಳ ನಿರಾಸಕ್ತಿ – ಮಸೀದಿ, ಚರ್ಚ್‌ಗಳೇ ಟಾಪ್

    ಮಾತನಾಡುವ ವೇಳೆ ಪತ್ನಿ ಸಹ ನನ್ನ ಜೊತೆಗೆ ಇದ್ರು. ನಮ್ಮ ಸಮಾಜದ ಮಹಿಳೆ ಎಂದು ನಮ್ಮ ಮನೆಗೆ ಬನ್ನಿ ಅಂತಾ ಹೇಳಿದ್ದೇನೆ. ಆಗ ಹೆಂಡತಿ ಯಾರು ಇವರು ಅಂತ ಕೇಳಿದಾಗ ಪತ್ನಿ, ಮಗಳಿಗೆ ಗೊತ್ತಿರಲಿ ಅಂತಾ ಹೇಳಿದ್ದೇನೆ. ನಾನು ಡಿಡಿ ರೂಪದಲ್ಲಿ 2 ಲಕ್ಷ ಹಣ, ಕ್ಯಾಷ್ 3 ಲಕ್ಷ ಕೊಟ್ಟಿದ್ದೇನೆ. ಅವರು ಯಾವುದೇ ದಾಖಲೆ ರಿಲೀಸ್ ಮಾಡಿದ್ರೂ ನನಗೇನೂ ತೊಂದರೆಯಿಲ್ಲ. ಜನರಿಗೆ ಈ ವಿಚಾರ ತಿಳಿಯಬೇಕು ಎಂದು ಒತ್ತಾಯಿಸಿದ್ದಾರೆ.

    ನನ್ನ ದೂರು ಸಂದೇಶವಾಗಲಿ: ಪತ್ನಿಯ ಸಹಕಾರದಿಂದಲೇ ದೂರು ನೀಡಿದ್ದೇನೆ. ಯಾರಿಗೂ ಈ ರೀತಿಯ ಬ್ಲ್ಯಾಕ್‌ಮೇಲ್ ಆಗಬಾರದು. ವೀಡಿಯೋ, ಆಡಿಯೋ ಬಗ್ಗೆ ತನಿಖೆ ಆಗಬೇಕು. ಸತ್ಯಾಸತ್ಯತೆಗಳು ಹೊರಬರಬೇಕು. ತಿಲಕ್ ಕುಮಾರ್ ಮಾವ ಅಂತಾ ಹೇಳಿದ್ರು. ಆಮೇಲೆ ಆಕೆಯ ಫ್ರೆಂಡ್ ಅಂತಾ ಗೊತ್ತಾಗಿದೆ. ಬ್ಲ್ಯಾಕ್‌ಮೇಲ್‌ಲ್‌ಗೆ ಒಳಗಾದವರಿಗೆ ನನ್ನ ದೂರು ಸಂದೇಶವಾಗಲಿ ಎಂದು ಪ್ರತಿಕ್ರಿಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೂರು ಕೊಟ್ಟ ರಾಜಕುಮಾರ ನನ್ನ ಗಂಡ – ಕಾಂಗ್ರೆಸ್‌ ಕಾರ್ಯಕರ್ತೆ ನವ್ಯಶ್ರೀ

    ದೂರು ಕೊಟ್ಟ ರಾಜಕುಮಾರ ನನ್ನ ಗಂಡ – ಕಾಂಗ್ರೆಸ್‌ ಕಾರ್ಯಕರ್ತೆ ನವ್ಯಶ್ರೀ

    ಬೆಳಗಾವಿ: ತೋಟಗಾರಿಕೆ ಇಲಾಖೆಯ ರಾಜಕುಮಾರ ಟಾಕಳೆ ನನ್ನ ಗಂಡ ಅವನಿಂದ ನನಗೆ ಏನು ಮೋಸ ಆಗಿದೆ. ಮುಂದಿನ ದಿನಗಳಲ್ಲಿ ಮೋಸ ಹೇಗಾಯ್ತು ಎಂಬುದನ್ನು ಹೇಳುತ್ತೇನೆ ಎಂದು ಸಾಮಾಜಿಕ ಕಾರ್ಯಕರ್ತೆ ಹಾಗೂ ಕಾಂಗ್ರೆಸ್ ನಾಯಕಿ ನವ್ಯಶ್ರೀ ಪ್ರತಿಕ್ರಿಯಿಸಿದ್ದಾರೆ.

    ಸುಲಿಗೆ, ಮಾನಸಿಕ ಹಿಂಸೆ, ಸುಳ್ಳು ಅತ್ಯಾಚಾರ ಕೇಸ್ ದಾಖಋಲಿಸಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಬೆಳಗಾವಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಅವರ ವಿರುದ್ಧ ದೂರು ನೀಡಿದ್ದರು. ಟಾಕಳೆ ನೀಡಿದ ದೂರಿನ ಮೇರೆಗೆ ನವ್ಯಶ್ರೀ ವಿರುದ್ಧ ಐಪಿಸಿ ಸೆಕ್ಷನ್ 384, 448, 504, 506, 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜೀವ ಬೆದರಿಕೆ, ಮಾನಸಿಕ ಚಿತ್ರಹಿಂಸೆ ಆರೋಪ – ಕಾಂಗ್ರೆಸ್ ನಾಯಕಿ ವಿರುದ್ಧ FIR

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಾನು 15 ದಿನಗಳಿಂದ ಇಂಡಿಯಾದಲ್ಲೇ ಇರಲಿಲ್ಲ. ವಿದೇಶದಿಂದ ನಾನು ಬಂದಿದ್ದೇ ಇವತ್ತು. ಸಾಮಾಜಿಕ ಜಾಲತಾಣದಲ್ಲಿ ಫೋಟೋ, ವೀಡಿಯೋ ವೈರಲ್ ಆಗಿರುವುದು ಗೊತ್ತಾಗಿದೆ. ನಾನು ಬೆಳಗಾವಿ ಪೊಲೀಸ್ ಆಯುಕ್ತರ ಬಳಿ ದೂರು ಕೊಡುತ್ತೇನೆ. ನನ್ನ ಮೇಲೆ ಎಫ್‌ಐಆರ್ ಆಗಿರುವ ಬಗ್ಗೆ ಮಾಹಿತಿಯಿಲ್ಲ. ಇಲ್ಲಿವರೆಗೂ ಯಾವುದೇ ಪೊಲೀಸರು ನನಗೆ ಫೋನ್ ಮಾಡಿಲ್ಲ ಎಂದು ಹೇಳಿದ್ದಾರೆ.

    ಮೊದಲು ನಾನು ಕಂಪ್ಲೇಟ್ ಕಾಪಿ (ದೂರಿನ ಪ್ರತಿ) ಪಡೆಯುತ್ತೇನೆ. ರಾಜಕುಮಾರ ಟಾಕಳೆ ನನ್ನ ಗಂಡ. ಅವನಿಂದ ನನಗೆ ಏನು ಮೋಸ ಆಗಿದೆ? ಅನ್ನೋದನ್ನ ಮುಂದಿನ ದಿನಗಳಲ್ಲಿ ಹೇಳುತ್ತೇನೆ. ನಾನು ಯಾವ ರೀತಿ ಮದುವೆ ಆಗಿದ್ದೇನೆ ಅನ್ನೋದನ್ನೂ ಪ್ರೇಸ್‌ಮೀಟ್ ಮಾಡಿ ಹೇಳುತ್ತೇನೆ, ಎಲ್ಲರ ಪ್ರಶ್ನೆಗೂ ಉತ್ತರ ಕೊಡ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಜೊತೆ ಚಿಯಾನ್ ವಿಕ್ರಮ್ ರೊಮ್ಯಾನ್ಸ್

    ರಾಜಕುಮಾರ ಟಾಕಳೆ ಹೇಳಿದ್ದೇನು?
    ನವ್ಯಶ್ರೀ ಆರ್. ರಾವ್ ವಿರುದ್ಧ ದೂರು ನೀಡಿದ್ದ ರಾಜಕುಮಾರ ಟಾಕಳೆ, ಈ ಹಿಂದೆ ನಾನು ಮಾಜಿ ಸಚಿವ ಶ್ರೀಮಂತ ಪಾಟೀಲ್ ಪಿಎ ಆಗಿ ಕಾರ್ಯನಿರ್ವಹಿಸುವಾಗ ಬೆಂಗಳೂರಿನಲ್ಲಿದ್ದೆ. ಆಗ ನವ್ಯಶ್ರೀ ರಾವ್ ಸಾಮಾಜಿಕ ಕಾರ್ಯಕರ್ತೆ ಎಂದು ಪರಿಚಯವಾಗಿದ್ದರು. ಇದಾದ ಬಳಿಕ ಡಿಸೆಂಬರ್ 2020ರಲ್ಲಿ ಸಂದರ್ಭದಲ್ಲಿ ನವ್ಯಶ್ರೀ ಅವರು ಸಾಫ್ಟ್‌ವೇರ್‌ ಇಂಜಿನಿಯರ್ ಹಾಗೂ ಸಾಮಾಜಿಕ ಕಾರ್ಯಕರ್ತೆ ಅಂತಾ ಪರಿಚಯ ಮಾಡಿಕೊಂಡಿದ್ದರು. ಇದನ್ನೂ ಓದಿ: ಕಸ ಸಾಗಿಸೋ ವಾಹನದ ಮೇಲೆ ಹುಚ್ಚಾಟ – ಸಾಹಸ ಮಾಡಿ ಆಸ್ಪತ್ರೆ ಸೇರಿದ ಯುವಕ

    ಚನ್ನಪಟ್ಟಣದಲ್ಲಿ ನವ್ಯ ಫೌಂಡೇಶನ್ ಹೆಸರಿನ ಎನ್‌ಜಿಒ ನಡೆಸುವುದಾಗಿ ತಿಳಿಸಿದ್ದರು. ನನಗೆ ಮದುವೆಯಾಗಿ ಮೂರು ಮಕ್ಕಳಿವೆ ಎಂದು ಗೊತ್ತಿದ್ದರೂ ಪರಿಚಯ ಬೆಳೆಸಿ ಸಲುಗೆಯಿಂದ ಇದ್ದರು. ಒಂದೂವರೆ ವರ್ಷದ ಪರಿಚಯದಲ್ಲಿ ನಾನು ಬೇರೆಬೇರೆ ಸ್ಥಳ ಸೇರಿ ಬೆಳಗಾವಿಯಲ್ಲಿ ಭೇಟಿಯಾಗಿದ್ದೆವು. ಇದಾದ ಬಳಿಕ 2021ರ ಡಿಸಂಬರ್ 24ರಂದು ನನಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ.

    50 ಲಕ್ಷ ಹಣ ನೀಡದಿದ್ರೆ ನನ್ನ ಪತ್ನಿ, ಸಂಬಂಧಿಕರು ಹಾಗೂ ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಮಾಡುವ ಬೆದರಿಕೆ ಹಾಕುತ್ತಿದ್ದಾರೆ. ಬಳಿಕ ತನ್ನ ಮನೆಗೆ ಬಂದು ತನ್ನ ಬೇಡಿಕೆ ಈಡೇರುವವರೆಗೂ ಮನೆ ಬಿಟ್ಟು ಹೋಗಲ್ಲ ಅಂತಾ ಸುಳ್ಳು ಅತ್ಯಾಚಾರ ಆರೋಪ ಮಾಡುತ್ತಿದ್ದಾರೆ. ಇದರ ಜೊತೆಗೆ ನನಗೆ ಮತ್ತು ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ರಾಜಕುಮಾರ ಟಾಕಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಬ್ಬನ್ ಪಾರ್ಕ್ ನಲ್ಲಿ ನಿಮ್ಮ ನಾಯಿ ಗಲೀಜು ಮಾಡಿದ್ರೆ ನೀವೇ ಕ್ಲೀನ್ ಮಾಡ್ಬೇಕು

    ಕಬ್ಬನ್ ಪಾರ್ಕ್ ನಲ್ಲಿ ನಿಮ್ಮ ನಾಯಿ ಗಲೀಜು ಮಾಡಿದ್ರೆ ನೀವೇ ಕ್ಲೀನ್ ಮಾಡ್ಬೇಕು

    – ಕ್ಲೀನ್ ಮಾಡದಿದ್ರೇ ಬೀಳುತ್ತೆ ಫೈನ್

    ಬೆಂಗಳೂರು: ಸಿಲಿಕಾನ್ ಸಿಟಿ ಜನ ಮೊದಲೇ ಡಾಗ್ಸ್ ಪ್ರಿಯರು. ಸಾಕು ನಾಯಿಗಳಿಗೆ ಸ್ವಂತ ಮಕ್ಕಳ ತರಾನೇ ಆಟ, ಊಟ ಹಾಕುತ್ತಾರೆ. ಜೊತೆಗೆ ಕಬ್ಬನ್ ಪಾರ್ಕ್, ಲಾಲ್ ಬಾಗ್ ಗೆ ವಾಕಿಂಗ್ ಕರೆದುಕೊಂಡು ಬರುತ್ತಾರೆ.

    ಹೀಗೆ ವಾಕಿಂಗ್‍ಗೆ ಬರೋ ನಾಯಿಗಳು, ಬೀದಿನಾಯಿಗಳ ಜೊತೆ ಸೇರಿಕೊಂಡು ಕಬ್ಬನ್ ಪಾರ್ಕಲ್ಲಿ ಹಾವಳಿಯನ್ನುಂಟು ಮಾಡಿವೆ. ಇದು ಕಬ್ಬನ್ ಪಾರ್ಕ್‍ನ ವಾಯುವಿಹಾರಿಗಳ ಕಿರಿಕಿರಿಗೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಈ ನಾಯಿಗಳು ಮಾಡುವ ಗಲೀಜು ವಾಯುವಿಹಾರಿಗಳಿಗೆ ಬೇಸರ ಮೂಡಿಸಿದ್ದು, ಇದನ್ನ ತುಳಿದುಕೊಂಡೆ ಹೇಗೆ ಓಡಾಡುವುದು ಎಂದು ತೋಟಗಾರಿಕೆ ಇಲಾಖೆ ಮೊರೆ ಹೋಗಿದ್ದಾರೆ.

    ಈ ಹಿನ್ನೆಲೆಯಲ್ಲಿ ತೋಟಗಾರಿಕೆ ಇಲಾಖೆ ಕಬ್ಬನ್ ಪಾರ್ಕ್ ನಲ್ಲಿ ಇನ್ಮುಂದೆ ಡಾಗ್ ವಾಕಿಂಗ್ ಕರೆದುಕೊಂಡು ಬರುವ ನಾಯಿಗಳ ಮಾಲೀಕರೆ ನಾಯಿಗಳು ಮಾಡುವ ಗಲೀಜು ಕ್ಲೀನ್ ಮಾಡಬೇಕು ಎಂದು ಸೂಚಿಸಿದೆ. ಜೊತೆಗೆ ಡಾಗ್ ಜೊತೆ ವಾಕಿಂಗ್ ಬರುವ ಮಾಲೀಕರಿಗೆ ಒಂದು ಬಾಸ್ಕೆಟ್ ಅಥವಾ ಬ್ಯಾಗ್ ಕಡ್ಡಾಯ ತರುವಂತೆ ಆದೇಶಿಸಲು ಚಿಂತನೆ ನಡೆಸಿದೆ. ಜೊತೆಗೆ ಕ್ಲೀನ್ ಮಾಡದಿದ್ದರೆ ಫೈನ್ ಹಾಕಲು ತೋಟಗಾರಿಕೆ ಇಲಾಖೆ ಮುಂದಾಗಿದೆ.

    ನಾಯಿಗಳ ಜೊತೆ ವಾಕಿಂಗ್ ಬಂದರೆ ಅದರ ಗಲೀಜು ಕ್ಲೀನ್ ಮಾಡಿ ಅಂದ್ರೆ ಹೇಗೆ? ಡಾಗ್ ಜೊತೆ ಪಾರ್ಕ್ ಗೆ ಬರುವಾಗ ಬಾಸ್ಕೆಟ್ ಬ್ಯಾಗ್ ತರಲು ಕಷ್ಟ ಆಗುತ್ತೆ ಎಂದು ನಾಯಿ ಮಾಲೀಕರು, ತೋಟಗಾರಿಕೆ ನಡೆಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಿನಲ್ಲಿ ಇನ್ಮುಂದೆ ಕಬ್ಬನ್ ಪಾರ್ಕ್ ನಲ್ಲಿ ಡಾಗಿ ಜೊತೆ ಔಟಿಂಗ್ ಹೋಗೋ ಮುನ್ನ ಹುಷಾರಾಗಿ. ತೋಟಗಾರಿಕೆ ಇಲಾಖೆಯ ಈ ರೂಲ್ಸ್ ಎಷ್ಟರ ಮಟ್ಟಿಗೆ ಪಾಲನೆಯಾಗುತ್ತೆ ಎಂದು ಕಾದು ನೋಡಬೇಕಿದೆ.

  • ಕಬ್ಬನ್ ಪಾರ್ಕ್ ನಲ್ಲಿ ರೊಮ್ಯಾನ್ಸ್ ಮಾಡುವ ಪ್ರೇಮಿಗಳೇ ಹುಷಾರ್..!

    ಕಬ್ಬನ್ ಪಾರ್ಕ್ ನಲ್ಲಿ ರೊಮ್ಯಾನ್ಸ್ ಮಾಡುವ ಪ್ರೇಮಿಗಳೇ ಹುಷಾರ್..!

    ಬೆಂಗಳೂರು: ಕಬ್ಬನ್ ಪಾರ್ಕ್ ಗೆ ಹೋದರೆ ಸಾಕು ಪ್ರೇಮಿಗಳು ಪಕ್ಕ-ಪಕ್ಕ ಕುಳಿತುಕೊಂಡು ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯಗಳು ಕಾಣಸಿಗುತ್ತವೆ. ಕಬ್ಬನ್ ಪಾರ್ಕ್ ಗೆ ಹೋಗುವ ಪ್ರೇಮಿಗಳು ಇನ್ನು ಮುಂದೆ ಹುಷಾರಾಗಿರಬೇಕು.

    ಹೌದು… ಖಾಲಿ ಜಾಗ ಸಿಕ್ಕರೆ ಸಾಕು ಪ್ರೇಮಿಗಳು ಪ್ರೇಮ ಸಲ್ಲಾಪದಲ್ಲಿ ತೊಡಗಿಕೊಳ್ಳುತ್ತಾರೆ. ಈಗ ಅದಕ್ಕೆಲ್ಲಾ ತೋಟಗಾರಿಕೆ ಇಲಾಖೆ ಬ್ರೇಕ್ ಹಾಕಲು ಮುಂದಾಗಿದೆ. ಕಬ್ಬನ್ ಪಾರ್ಕ್ ನಲ್ಲಿ ಭದ್ರತೆ ಮತ್ತು ಅನೈತಿಕ ಚಟುವಟಿಕೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಇವುಗಳಿಗೆ ಬ್ರೇಕ್ ಹಾಕಲು ತೋಟಗಾರಿಕಾ ಇಲಾಖೆ 120 ಸಿಸಿಟಿವಿ ಅಳವಡಿಕೆಗೆ ಮುಂದಾಗಿದೆ.

    ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯ, ಸಂಸದ ಪಿ.ಸಿ ಮೋಹನ್ ಅವರು 1 ಕೋಟಿ ರೂಪಾಯಿ ಅನುದಾನದಲ್ಲಿ ಸಿಸಿಟಿವಿ ಅಳವಡಿಕೆ ಮಾಡಿಸುತ್ತಿದ್ದಾರೆ. ಪ್ರಥಮ ಹಂತದಲ್ಲಿ 60 ಲಕ್ಷ ರೂಪಾಯಿ ಅನುದಾನದಲ್ಲಿ ಕಾಮಗಾರಿ ಶುರು ಮಾಡಲಾಗುತ್ತಿದೆ. ಅಷ್ಟೇ ಅಲ್ಲದೇ ಸಿಸಿಟಿವಿ ಸೇರಿದಂತೆ ಶೌಚಾಲಯ ನಿರ್ಮಾಣ ಕಾಮಗಾರಿಗಳಿಗೂ ಚಾಲನೆ ನೀಡಲಿದ್ದಾರೆ. ಸದ್ಯದಲ್ಲೇ ಸಿಸಿಟಿವಿ ಅಳವಡಿಕೆ ಕಾರ್ಯ ಶುರು ಮಾಡಲಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪರ್ಫ್ಯೂಮ್  ಹಾಕಿಕೊಂಡು ಈಗ ಲಾಲ್ ಬಾಗ್‍ಗೆ ಹೋಗಬೇಡಿ!

    ಪರ್ಫ್ಯೂಮ್ ಹಾಕಿಕೊಂಡು ಈಗ ಲಾಲ್ ಬಾಗ್‍ಗೆ ಹೋಗಬೇಡಿ!

    ಬೆಂಗಳೂರು: ಲಾಲ್‍ಬಾಗ್‍ನಲ್ಲಿ ಜೇನುಹುಳುಗಳ ಹಾವಳಿ ಹೆಚ್ಚಾಗಿದ್ದು ಪರ್ಫ್ಯೂಮ್ ಹಾಕಿಕೊಂಡು ಹೋಗಬೇಡಿ. ಕಪ್ಪು ಬಟ್ಟೆ ಅಂತೂ ಮೊದ್ಲೇ ಬೇಡ. ಏಕೆಂದರೆ ಅಂತವರನ್ನು ಜೇನುಹುಳುಗಳು ಹುಡುಕಿ ಹುಡುಕಿ ಕಚ್ಚುತ್ತಿವೆ.

    2016ನೇ ರಲ್ಲಿ ಈ ರೀತಿಯಾಗಿ ಜೇನುಹುಳುಗಳ ಕಿರಿಕ್ ನಡೆದಿತ್ತು. ಮಾರ್ಚ್, ಏಪ್ರಿಲ್ ನಲ್ಲಿ ಲಾಲ್‍ಬಾಗ್ ನಲ್ಲಿ ಜೇನು ಹುಳಗಳು ಹೆಚ್ಚಾಗಿ ಗೂಡು ಕಟ್ಟುತ್ತದೆ. ಈಗ ಲಾಲ್ ಬಾಗ್ ನ ಐದು ಕಡೆ ಜೇನುಹುಳಗಳು ದೊಡ್ಡ ಗೂಡು ಕಟ್ಟಿದ್ದು ಅಧಿಕಾರಿಗಳು ಮರದ ಹತ್ತಿರ ಗ್ರಿಲ್ ಹಾಕಿದ್ದಾರೆ.

    ಈಗಾಗಲೇ ಒಂದೇ ತಿಂಗಳಲ್ಲಿ ಐದು ಜನ ಬುರ್ಖಾ ಹಾಕಿಕೊಂಡು ಬಂದ ಮಹಿಳೆಯರಿಗೆ ಜೇನುಹುಳುಗಳು ಕಚ್ಚಿದೆ. ಪರ್ಫ್ಯೂಮ್ ಸ್ಮೆಲ್ ಮತ್ತು ಕಪ್ಪು ಬಟ್ಟೆ ಕಂಡರೆ ಜೇನುಗಳಿಗೆ ಆಗುವುದಿಲ್ಲ. ಇದರಿದಾಗಿ ಹೆಚ್ಚಾಗಿ ಅವರ ಮೇಲೆ ದಾಳಿ ನಡೆಸುತ್ತಿದೆ ಎಂದು ತಜ್ಞರು ವರದಿಯಲ್ಲಿ ತಿಳಿಸಿದ್ದಾರೆ.

    ಜೇನು ಹುಳುಗಳ ದಾಳಿಯಿಂದ ಎಚ್ಚೆತ್ತ ತೋಟಾಗಾರಿಕಾ ಇಲಾಖೆಯ ಸಿಬ್ಬಂದಿ, ಕಪ್ಪು ಬಟ್ಟೆ, ಪರ್ಫ್ಯೂಮ್ ಹಾಕಿಕೊಂಡು ಬಂದವರನ್ನು ದೂರ ಕಳುಹಿಸುತ್ತಿದ್ದಾರೆ. ಲಾಲ್‍ಬಾಗ್ ಹೊರಗಡೆಯಿಂದ ವಿಹಾರಿಗಳಿಗೆ ಎಚ್ಚರಿಕೆ ಕೊಟ್ಟು ಕಳುಹಿಸುತ್ತಿದ್ದೇವೆ ಎಂದು ತೋಟಗಾರಿಕಾ ಇಲಾಖೆಯ ಜಂಟಿ ಆಯುಕ್ತ ಚಂದ್ರಶೇಖರ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.