Tag: ತ್ಯಾಜ್ಯ ವಿಲೇವಾರಿ

  • ತ್ಯಾಜ್ಯ ವಿಲೇವಾರಿಯಲ್ಲಿ ಎಡವಟ್ಟು – ಮಮತಾ ಸರ್ಕಾರಕ್ಕೆ 3,500 ಕೋಟಿ ದಂಡ

    ತ್ಯಾಜ್ಯ ವಿಲೇವಾರಿಯಲ್ಲಿ ಎಡವಟ್ಟು – ಮಮತಾ ಸರ್ಕಾರಕ್ಕೆ 3,500 ಕೋಟಿ ದಂಡ

    ಕೋಲ್ಕತ್ತಾ: ಘನ ಹಾಗೂ ದ್ರವ ತ್ಯಾಜ್ಯದ ಉತ್ಪಾದನೆ ಹಾಗೂ ಸಂಸ್ಕರಣೆಯನ್ನು ಸೂಕ್ತವಾಗಿ ನಿರ್ವಹಣೆ ಮಾಡದೇ ಇರುವುದರಿಂದ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ 3,500 ಕೋಟಿ ರೂ. ದಂಡ ವಿಧಿಸಿದೆ.

    2022-23ರ ಬಜೆಟ್ ಪ್ರಕಾರ ನಗರಾಭಿವೃದ್ಧಿ ಹಾಗೂ ಪುರಸಭೆಗಳ ವ್ಯವಹಾರದ ಭಾಗವಾಗಿ 12,818 ಕೋಟಿ ಅನುದಾನವಿದ್ದರೂ ರಾಜ್ಯ ಸರ್ಕಾರ ಒಳಚರಂಡಿ ಹಾಗೂ ಘನತ್ಯಾಜ್ಯ ನಿರ್ವಹಣೆಗೆ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡುತ್ತಿಲ್ಲ ಎಂದು ಹಸಿರು ನ್ಯಾಯಪೀಠ ಹೇಳಿದೆ. ಇದನ್ನೂ ಓದಿ: ಹಿರಿಯ ಖ್ಯಾತ ವೈದ್ಯ, ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಗುರುರಾಜ್ ಹೆಬ್ಬಾರ್ ನಿಧನ

    ಭವಿಷ್ಯದಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಗಮನಿಸಿ ಎನ್‌ಜಿಟಿ ಅಧ್ಯಕ್ಷ ನ್ಯಾಯಮೂತಿ ಎ.ಕೆ.ಗೋಯೆಲ್ ನೇತೃತ್ವದ ಪೀಠವು ಜನರಿಗಾಗಿ ಮಾಲಿನ್ಯ ಮುಕ್ತ ವಾತಾವರಣ ಕಲ್ಪಿಸುವುದು ಸರ್ಕಾರದ ಸಾಂವಿಧಾನಿಕ ಜವಾಬ್ದಾರಿಯಾಗಿದೆ ಎಂಬುದನ್ನು ಒತ್ತಿ ಹೇಳಿದೆ. ಇದನ್ನೂ ಓದಿ: ನಾಯಿಯ ಹಲ್ಲನ್ನು ಸ್ವಚ್ಛಗೊಳಿಸಲು 4 ಲಕ್ಷ ರೂ. ಖರ್ಚು!

    ನಗರ ಪ್ರದೇಶಗಳಲ್ಲಿ ದಿನಕ್ಕೆ 2,758 ಮಿಲಿಯನ್ ಲೀಟರ್ ಕೊಳಚೆ ಉತ್ಪಾದನೆಯಾಗುತ್ತಿದೆ. ಈ ಪೈಕಿ 1,505 ಮಿಲಿಯನ್ ಲೀಟರ್‌ನಷ್ಟು ಕೊಳಚೆ ಸಂಸ್ಕರಿಸುವ ಸಾಮರ್ಥ್ಯವಿದೆ. ಆದರೂ ದಿನಕ್ಕೆ 1,268 ಲೀಟರ್ ನಷ್ಟು ತ್ಯಾಜ್ಯವನ್ನು ಮಾತ್ರವೇ ಸಂಸ್ಕರಿಸಲಾಗುತ್ತಿದ್ದು, ಉಳಿದ 1,490 ಮಿಲಿಯನ್ ಲೀಟರ್ ನಷ್ಟು ತ್ಯಾಜ್ಯ ಹಾಗೆಯೇ ಉಳಿಸುತ್ತಿದೆ ಎಂದು ಎನ್‌ಜಿಟಿ ತಿಳಿಸಿದೆ.

    ಇದರಿಂದ ಪರಿಸರಕ್ಕೆ ಉಂಟಾಗುವ ಹಾನಿಯನ್ನು ಗಮನಿಸಿ ರಾಜ್ಯದಿಂದ 2 ತಿಂಗಳ ಒಳಗೆ ದಂಡ ಪಾವತಿ ಮಾಡಬೇಕು ಎನ್‌ಜಿಟಿ ತಾಕೀತು ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ತ್ಯಾಜ್ಯ ವಿಲೇವಾರಿಗೆ ಆಗ್ರಹಿಸಿ ಮೊಬೈಲ್ ಟವರ್ ಏರಿ ಕುಳಿತ ಯುವಕರು!

    ತ್ಯಾಜ್ಯ ವಿಲೇವಾರಿಗೆ ಆಗ್ರಹಿಸಿ ಮೊಬೈಲ್ ಟವರ್ ಏರಿ ಕುಳಿತ ಯುವಕರು!

    ಚೆನ್ನೈ: ಸ್ಥಳೀಯ ಪ್ರದೇಶಗಳಲ್ಲಿ ತ್ಯಾಜ್ಯ ಸುರಿಯುತ್ತಿರುವುದನ್ನು ಹಾಗೂ ಅಧಿಕಾರಿಗಳ ಉದಾಸೀನತೆಯ ವಿರುದ್ಧ ಕಿಡಿಕಾರಿದ ಮೂವರು ಯುವಕರು 150 ಅಡಿ ಎತ್ತರ ಮೊಬೈಲ್ ಟವರ್ ಏರಿ ಪ್ರತಿಭಟನೆ ನಡೆಸಿದ್ದಾರೆ.

    ಈ ಘಟನೆ ನಗರದ ಹೊರವಲಯದಲ್ಲಿ ಬುಧವಾರ ನಡೆದಿದೆ. ಪ್ರತಿಭಟನಾಕಾರರನ್ನು ದಿನಕರನ್(35), ಪ್ರಭಾಕರನ್(24) ಹಾಗೂ ವಿಕ್ರಮ್(36) ಎಂದು ಗುರುತಿಸಲಾಗಿದ್ದು, ಈ ಮೂವರು ಕಸದ ರಾಶಿಯನ್ನು ವಿಲೇವಾರಿ ಮಾಡುವಂತೆ ಆಗ್ರಹಿಸಿದ್ದಾರೆ.

    ದಿನಕರನ್, ಪ್ರಭಾಕರನ್ ಹಾಗೂ ವಿಕ್ರಮ್ ಈ ಮೂವರು ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ತಿರುಮಲೈ ಅಲ್ವಾಪುರಂ ಮುಖ್ಯರಸ್ತೆಯಲ್ಲಿರುವ ಮೊಬೈಲ್ ಟವರ್ ಏರಿ ಕುಳಿತಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಈ ಮೂವರನ್ನು ಟವರ್ ನಿಂದ ಟವರ್ ನಿಂದ ಕೆಳಗಿಳಿಯುವಂತೆ ಕೇಳಿಕೊಂಡಿದ್ದಾರೆ. ಅಲ್ಲದೇ ಕೂಡಲೆ ಈ ಬಗ್ಗೆ ಶಂಕರ್ ನಗರ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಕೆಳಗಿಳಿಯುವಂತೆ ಯುವಕರನ್ನು ಪರಿಪರಿಯಾಗಿ ಬೇಡಿಕೊಂಡ್ರೂ, ಯಾವುದೇ ಪ್ರಯೋಜನವಾಗಿಲ್ಲ. ಮೂವರು ಪೊಲೀಸರ ಮಾತನ್ನು ನಿರಾಕರಿಸಿದ್ದಾರೆ. ಅಲ್ಲದೇ ನಮ್ಮ ಪ್ರದೇಶದಲ್ಲಿ ತ್ಯಾಜ್ಯ ಸುರಿಯುತ್ತಿರುವ ಲಾರಿ ಚಾಲಕರ ವಿರುದ್ಧ ಕ್ರಮಕೈಗೊಳ್ಳುವಂತೆ ಬೇಡಿಕೆಯಿಟ್ಟಿದ್ದಾರೆ ಅಂತ ಪೊಲೀಸರು ತಿಳಿಸಿದ್ದಾರೆ.

    ಈ ಸಂಬಂಧ ಈಗಾಗಲೇ ಲಾರಿ ಮಾಲಕ ಅರೋಕಿಯಾ ರಾಜ(40) ಎಂಬಾತನನ್ನು ಬಂಧಿಸಲಾಗಿದ್ದು, ಸದ್ಯ ವಿಚಾರಣೆ ನಡೆಸುತ್ತಿದ್ದಾರೆ ಅಂತ ಪ್ರತಿಭಟನಾಕಾರರಿಗೆ ಪೊಲೀಸರು ಮಾಹಿತಿ ನೀಡಿದ್ರು. ಪೊಲೀಸರ ಹೇಳಿಕೆಯ ಬಳಿಕ ಮೂವರು ಟವರ್ ನಿಂದ ಕೆಳಗಿಳಿದಿದ್ದಾರೆ. ಆದ್ರೆ ಈ ವೇಳೆ ಪ್ರತಿಭಟನಾಕಾರ ದಿನಕರನ್ ಅರೆಪ್ರಜ್ಞಾವಸ್ಥೆಯಲ್ಲಿದ್ದು, ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಉಳಿದ ಇಬ್ಬರನ್ನು ಶಂಕರ್ ನಗರ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತ್ಯಾಜ್ಯ ವಿಲೇವಾರಿಗೆ ಸುವ್ಯವಸ್ಥಿತ ಯಂತ್ರ ಸಂಶೋಧಿಸಿದ ಮಂಗಳೂರಿನ ಈ ಪಬ್ಲಿಕ್ ಹೀರೋ

    ತ್ಯಾಜ್ಯ ವಿಲೇವಾರಿಗೆ ಸುವ್ಯವಸ್ಥಿತ ಯಂತ್ರ ಸಂಶೋಧಿಸಿದ ಮಂಗಳೂರಿನ ಈ ಪಬ್ಲಿಕ್ ಹೀರೋ

    ಮಂಗಳೂರು: ದೇಶದ ಅತೀ ದೊಡ್ಡ ಸಮಸ್ಯೆಯಾಗಿ ಕಾಡ್ತಿರೋದು ತ್ಯಾಜ್ಯವಿಲೇವಾರಿ. ಅದಕ್ಕಾಗಿಯೇ ಸ್ವಚ್ಛ ಭಾರತದಂತಹ ಅಭಿಯಾನ ನಡೀತಿದೆ. ಇದನ್ನ ಸೂಕ್ಷ್ಮವಾಗಿ ಗಮನಿಸಿರೋ ಮಂಗಳೂರಿನ ಈ ನಮ್ಮ ಪಬ್ಲಿಕ್ ಹೀರೋ ಬ್ರಿಲಿಯಂಟ್ ಐಡಿಯಾ ಮಾಡಿದ್ದಾರೆ.

    ಮಂಗಳೂರಿನ ಸುರತ್ಕಲ್ ಸಮೀಪದ ಮಂಗಳಪೇಟೆ ನಿವಾಸಿ ಸನತ್ ರಾಜ್ ಭಂಡಾರಿ ಸದ್ಯ ಮೂಡಬಿದ್ರೆಯ ಎಸ್‍ಎನ್‍ಎಂಪಿ ಕಾಲೇಜಿನ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದಾರೆ.

    ಸನತ್ ತ್ಯಾಜ್ಯ ವಿಲೇವಾರಿಯ ವಿಶೇಷ ಯಂತ್ರವೊಂದನ್ನು ಕಂಡು ಹಿಡಿದಿದ್ದಾರೆ. ಈ ಯಂತ್ರದಲ್ಲಿ ಮಾಮೂಲಿ ತ್ಯಾಜ್ಯ ಹಾಗೂ ಪಾಸ್ಟಿಕ್ ತ್ಯಾಜ್ಯ ಪ್ರತ್ಯೇಕವಾಗುತ್ತದೆ. ತ್ಯಾಜ್ಯ ಸಂಗ್ರಹಿಸುವಾಗ ಧೂಳು ಹಾರದಂತೆ ನೀರು ಚಿಮುಕಿಸುವ ವ್ಯವಸ್ಥೆ, ಕಳೆ ಕೀಳಲು ಗ್ರಾಸ್‍ಕಟ್ಟರ್ ಇದೆ. ನಿಂತಲ್ಲೇ ಇದು ಹೇಗೆ ಬೇಕಾದರೂ ತಿರುಗಬಲ್ಲದಾಗಿದ್ದು, ಎಲ್ಲಾ ರೀತಿಯ ರಸ್ತೆಯಲ್ಲಿ ಸಂಚರಿಸುತ್ತದೆ.

    ಮಾನವ ರಹಿತ, ಸೋಲಾರ್ ಚಾಲಿತ ಹಾಗೂ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಮಾಡಬೇಕೆಂದು ನಿರ್ಧರಿಸಿ ಸುಮಾರು ಒಂದು ವರ್ಷದಿಂದ ಪ್ಲಾಸ್ಟಿಕ್ ಡಿಸ್ಪೋಸಲ್ ಮೆಷಿನ್ ಆಂಡ್ ಮಲ್ಟಿ ಟೂಲ್ಸ್ ಅನ್ನುವ ಹೊಸ ತ್ಯಾಜ್ಯ ವಿಲೇವಾರಿ ಯಂತ್ರದ ವಿನ್ಯಾಸವನ್ನು ಸಂಶೋಧಿಸಿದ್ದಾರೆ.

    ಇದೀಗ ಮಾದರಿಯಾಗಿದ್ದ ಪೂರ್ಣ ಪ್ರಮಾಣದ ವಾಹನ ನಿರ್ಮಾಣಕ್ಕೆ ಒಂದೂವರೆ ಲಕ್ಷ ಖರ್ಚಾಗಲಿದೆ ಅಂತ ಸನತ್ ಹೇಳ್ತಿದ್ದಾರೆ. ಅಂದಹಾಗೆ ಸನತ್ ಯೋಜನೆಗೆ ರಾಜ್ಯ ಸರ್ಕಾರ ಅಭಯಹಸ್ತ ಚಾಚಿದ್ರೆ ಸನತ್ ಕನಸು ನನಸಾಗುತ್ತೆ. ಜೊತೆಗೆ ಕಸ ವಿಲೇವಾರಿಗೆ ಸ್ವದೇಶಿ ತಂತ್ರಜ್ಞಾನವೇ ಸಿಕ್ಕಂತಾಗಲಿದೆ.

    https://www.youtube.com/watch?v=MazUOMLO1qQ