Tag: ತ್ರಿಚಕ್ರ ವಾಹನ

  • ಇಂದಿನಿಂದ ಎಕ್ಸ್‌ಪ್ರೆಸ್‌ ವೇನಲ್ಲಿ ಬೈಕ್, ಆಟೋ ಸಂಚಾರಕ್ಕೆ ನಿರ್ಬಂಧ – ರೂಲ್ಸ್ ಬ್ರೇಕ್ ಮಾಡಿದ್ರೆ ದಂಡ

    ಇಂದಿನಿಂದ ಎಕ್ಸ್‌ಪ್ರೆಸ್‌ ವೇನಲ್ಲಿ ಬೈಕ್, ಆಟೋ ಸಂಚಾರಕ್ಕೆ ನಿರ್ಬಂಧ – ರೂಲ್ಸ್ ಬ್ರೇಕ್ ಮಾಡಿದ್ರೆ ದಂಡ

    – ಸರ್ವೀಸ್ ರಸ್ತೆ ಬಳಕೆಗೆ ಸೂಚನೆ

    ರಾಮನಗರ: ದಶಪಥ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಇಂದಿನಿಂದ ಎಕ್ಸ್‌ಪ್ರೆಸ್‌ ಹೈವೇನಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಸೇರಿ ಕೆಲ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೈಕ್, ಆಟೋ, ಟ್ರ‍್ಯಾಕ್ಟರ್‌ಗಳು ಇಂದಿನಿಂದ ಸರ್ವೀಸ್ ರಸ್ತೆಯಲ್ಲೇ ಸಂಚರಿಸಲು ಅವಕಾಶ ಕಲ್ಪಿಸಿದ್ದು, ನಿಯಮ ಉಲ್ಲಂಘಿಸಿದ್ರೆ ದುಬಾರಿ ದಂಡ ಬೀಳಲಿದೆ.

    ದಶಪಥ ಹೆದ್ದಾರಿಯಲ್ಲಿ ಅಪಘಾತ ಕೇಸ್‌ಗಳು ಕಡಿಮೆ ಮಾಡಲು ಹೆದ್ದಾರಿ ಪ್ರಾಧಿಕಾರ ಹೊಸ ರೂಲ್ಸ್ ಜಾರಿ ಮಾಡಿದೆ. ಇಂದಿನಿಂದ ದಶಪಥ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಸೇರಿ ಕೆಲ ವಾಹನಗಳಿಗೆ ನಿರ್ಬಂಧಿಸಲಾಗಿದೆ. ಬೈಕ್ ಹಾಗೂ ಮೂರು ಚಕ್ರದ ವಾಹನಗಳಿಂದ ಅಪಘಾತ ಸಂಖ್ಯೆ ಹೆಚ್ಚಳವಾಗಿರುವ ಕುರಿತು ವರದಿ ಸಂಗ್ರಹಿಸಿರೋ ಹೆದ್ದಾರಿ ಪ್ರಾಧಿಕಾರ ಈ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ಮಂಗಳವಾರದಿಂದ ನಂದಿನಿ ಹಾಲು, ಮೊಸರಿನ ದರದಲ್ಲಿ 3 ರೂ. ಹೆಚ್ಚಳ

    ಯಾವ್ಯಾವ ವಾಹನಗಳಿಗೆ ನಿರ್ಬಂಧ?
    * ಮೋಟಾರ್ ಸೈಕಲ್ – ಸ್ಕೂಟರ್ ಮತ್ತು ಇತರೆ ದ್ವಿಚಕ್ರ ವಾಹನ
    * ತ್ರಿಚಕ್ರ ವಾಹನ – ಆಟೋ, ಇ-ಕಾರ್ಟ್ ವಾಹನಗಳು
    * ಮೋಟಾರು ರಹಿತ ವಾಹನಗಳು, ಸೈಕಲ್‌ಗಳು
    * ಟ್ರ್ಯಾಕ್ಟರ್‌ಗಳು, ಮಲ್ಟಿ ಆಕ್ಸೆಲ್ ಹೈಡ್ರಾಲಿಕ್ ವಾಹನಗಳು

    ನಿಯಮ ಮೀರಿ ಹೆದ್ದಾರಿಯಲ್ಲಿ ಸಂಚಾರ ಮಾಡಿದ್ರೆ 500 ರೂ. ದಂಡ ಬೀಳಲಿದೆ. ನಿರ್ಬಂಧಿಸಲಾದ ವಾಹನಗಳು ಹೆದ್ದಾರಿಯಲ್ಲಿ ಸಂಚರಿಸಿ ಅಪಘಾತವಾದರೆ ವಿಮೆ ಅನ್ವಯ ಆಗಲ್ಲ. ರಾಮನಗರ ವ್ಯಾಪ್ತಿಯ 9 ಎಂಟ್ರಿ, ಎಕ್ಸಿಟ್‌ಗಳಲ್ಲೂ ಪೊಲೀಸರು ತಪಾಸಣೆ ನಡೆಸಲಿದ್ದಾರೆ. ರಾಷ್ಟ್ರೀಯ ಹೆದ್ದಾರಿ ನಿಯಂತ್ರಣ ಕಾಯ್ದೆ 2002ರ ಅನ್ವಯ ಹೊಸ ನಿಯಮವನ್ನು ಜಾರಿಗೊಳಿಸಲಾಗಿದೆ. ಎಕ್ಸ್‌ಪ್ರೆಸ್‌ ವೇನಲ್ಲಿ ಸಂಚರಿಸುವ ವಾಹನಗಳಿಗೆ ಸ್ಪೀಡ್ ಲಿಮಿಟ್ ಇರುತ್ತದೆ. ಪ್ರತಿ ಗಂಟೆಗೆ 80 ರಿಂದ 100 ಕಿ.ಮೀ ವೇಗ ಮಿತಿ ನಿಗದಿ ಪಡಿಸಲಾಗಿದೆ. ಲೇನ್ ಡಿಸಿಪ್ಲೀನ್, ಸೀಟ್ ಬೆಲ್ಟ್, ವೇಗ ಮಿತಿ ನಿಯಮವಿದೆ. ಡ್ರಂಕ್ ಅಂಡ್ ಡ್ರೈವ್ ಕುರಿತು ಪೊಲೀಸರು ತೀವ್ರ ತಪಾಸಣೆ ನಡೆಸಲಿದ್ದಾರೆ. ಇದನ್ನೂ ಓದಿ: ಉಡುಪಿ ಕೇಸಲ್ಲಿ ಸಂತ್ರಸ್ತೆ, ಆರೋಪಿಗಳ ವಿಚಾರಣೆ- ಪ್ರಕರಣಕ್ಕೆ ಕೇರಳ ಲಿಂಕ್ ಕೊಟ್ಟು ಬಿಜೆಪಿ ಪ್ರತಿಭಟನೆ

    ಹೆದ್ದಾರಿ ಬೈಕ್ ಹಾಗೂ ಆಟೋಗಳಿಗೆ ಸರ್ವೀಸ್ ರಸ್ತೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಆದರೆ ಹಲವೆಡೆ ಸರ್ವೀಸ್ ರಸ್ತೆ ಅವ್ಯವಸ್ಥೆಯಿಂದ ಕೂಡಿದೆ. ಇನ್ನೂ ಕೆಲವೆಡೆ ಸರ್ವೀಸ್ ರಸ್ತೆ ನಿರ್ಮಾಣ ಆಗಿಲ್ಲ. ಕೆಲವೆಡೆ ಡ್ರೈನೇಜ್ ನಿರ್ಮಾಣ ಮಾಡದೇ ರಸ್ತೆಯಲ್ಲಿ ನೀರು ನಿಲ್ಲುತ್ತಿದೆ. ಬೀದಿ ದೀಪಗಳಿಲ್ಲದೇ ರಾತ್ರಿ ಸಂಚಾರ ಕಷ್ಟಕರವಾಗಿದೆ. ಈ ಎಲ್ಲಾ ನ್ಯೂನತೆಗಳ ಸರಿಮಾಡುವಂತೆ ಹೆದ್ದಾರಿ ಪ್ರಾಧಿಕಾರಕ್ಕೆ ಪೊಲೀಸ್ ಇಲಾಖೆಯಿಂದಲೂ ಪತ್ರ ಬರೆಯಲಾಗಿದೆ.

    ದಶಪಥ ಹೆದ್ದಾರಿಯಲ್ಲಿ ಹೊಸ ನಿಯಮ ಜಾರಿ ಮಾಡಿರೋ ಪ್ರಾಧಿಕಾರದ ನಡೆಗೆ ವಾಹನ ಸವಾರರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಇಂದಿನಿಂದ ಬೈಕ್ ಹಾಗೂ ಆಟೋ ಸರ್ವೀಸ್ ರಸ್ತೆ ಬಳಸಬೇಕಿದೆ. ನಿಮಯ ಉಲ್ಲಂಘಿಸಿದ್ರೆ ದುಬಾರಿ ದಂಡ ತೆತ್ತಬೇಕಾಗುತ್ತೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2025ರ ಒಳಗಡೆ 150 ಸಿಸಿ ಕೆಳಗಿನ ಬೈಕ್‍ಗಳನ್ನು ಎಲೆಕ್ಟ್ರಿಕ್‍ಗೆ ಪರಿವರ್ತಿಸಿ – ನೀತಿ ಆಯೋಗ ಸೂಚನೆ

    2025ರ ಒಳಗಡೆ 150 ಸಿಸಿ ಕೆಳಗಿನ ಬೈಕ್‍ಗಳನ್ನು ಎಲೆಕ್ಟ್ರಿಕ್‍ಗೆ ಪರಿವರ್ತಿಸಿ – ನೀತಿ ಆಯೋಗ ಸೂಚನೆ

    ನವದೆಹಲಿ: 2025ರ ವೇಳೆಗೆ ಎಲ್ಲ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್ ಎಂಜಿನ್ ಆಗಿ ಪರಿವರ್ತಿಸುವ ಕುರಿತು ಎರಡು ವಾರಗಳಲ್ಲಿ ತಮ್ಮ ನಿರ್ಧಾರ ತಿಳಿಸುವಂತೆ ವಾಹನ ತಯಾರಿಕಾ ಕಂಪನಿಗಳಿಗೆ ನೀತಿ ಆಯೋಗದ ಸಭೆಯಲ್ಲಿ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಶುಕ್ರವಾರ ನಡೆದ ನೀತಿ ಆಯೋಗದ ‘ಥಿಂಕ್ ಟ್ಯಾಂಕ್’ ಸಭೆಯಲ್ಲಿ ಈ ನಿರ್ಧಾರದ ಕುರಿತು ಎಲೆಕ್ಟ್ರಿಕ್ ವಾಹನಗಳ ಉತ್ಪಾದಕರು ಹಾಗೂ ಸ್ಟಾರ್ಟ್ ಅಪ್ ತಯಾರಿಕರೊಂದಿಗೆ ಚರ್ಚಿಸಲಾಗಿದೆ. ಮಾಲಿನ್ಯ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳದಿದ್ದರೆ, ನ್ಯಾಯಾಲಯ ಈ ಕುರಿತು ಕ್ರಮ ಕೈಗೊಳ್ಳುತ್ತದೆ ಎಂದು ಕಂಪನಿಗಳಿಗೆ ನೀತಿ ಆಯೋಗದ ಸಭೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

    ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹಾಗೂ ಸಿಇಓ ಅಮಿತಾಬ್ ಕಾಂತ್ ಅವರ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ‘ಥಿಂಕ್ ಟ್ಯಾಂಕ್’ ಸಭೆಯಲ್ಲಿ ಬಜಾಜ್ ಆಟೋ ಎಂಡಿ ರಾಜೀವ್ ಬಜಾಜ್, ಟಿವಿಎಸ್ ಮೋಟರ್ಸ್ ಕಂ. ಅಧ್ಯಕ್ಷ ವೇಣು ಶ್ರೀನಿವಾಸನ್, ಹೋಂಡಾ ಮೋಟರ್‍ಸೈಕಲ್ ಆಂಡ್ ಸ್ಕೂಟರ್ ಇಂಡಿಯಾದ ಅಧ್ಯಕ್ಷ ಮತ್ತು ಸಿಇಓ ಮಿನೋರು ಕಟೊ ಹಾಗೂ ಪ್ರಧಾನ ನಿರ್ದೇಶಕ ವಿಷ್ಣು ಮಾಥೂರ್ ಹಾಗೂ ಆಟೊಮೋಟಿವ್ ಕಾಂಪೋನೆಂಟ್ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಪ್ರಧಾನ ನಿರ್ದೇಶಕ ವಿನೀ ಮೆಹ್ತಾ ಸೇರಿದಂತೆ ಪ್ರಮುಖ ದ್ವಿಚಕ್ರ ವಾಹನ ಉತ್ಪಾದಕ ಸಂಸ್ಥೆಗಳ ಅಧಿಕಾರಿಗಳು ಭಾಗವಹಿಸಿದ್ದರು.

    ಈ ಕುರಿತು ಸೂಕ್ತ ನೀತಿ ಮತ್ತು ಮಾರ್ಗದರ್ಶನವಿಲ್ಲದೆ ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸಲು ಸಾಧ್ಯವಿಲ್ಲ. ನೀತಿಗಳನ್ನು ಸ್ಪಷ್ಟವಾಗಿಡಲು ಸಾಧ್ಯವಿಲ್ಲ. ಹೆಚ್ಚು ವಾಯು ಮಾಲಿನ್ಯ ಹೊಂದಿದ 15ರ ಪೈಕಿ 14 ನಗರಗಳು ಭಾರತದಲ್ಲಿವೆ. ಸರ್ಕಾರ ಮತ್ತು ಕಂಪನಿಗಳು ಈ ಕುರಿತು ಕ್ರಮ ಕೈಗೊಳ್ಳದಿದ್ದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಎಚ್ಚರಿಸಿದ್ದಾರೆ.

    2023ರ ವೇಳೆಗೆ ತ್ರಿಚಕ್ರ ವಾಹನಗಳನ್ನು ಸಂಪೂರ್ಣವಾಗಿ ಎಲೆಕ್ಟ್ರಿಕ್‍ಗೆ ಪರಿವರ್ತಿಸಬೇಕು, 2025ರ ವೇಳೆಗೆ 150 ಸಿಸಿಗಿಂತ ಕಡಿಮೆ ಎಂಜಿನ್ ಸಾಮಥ್ರ್ಯ ಹೊಂದಿರುವ ದ್ವಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್‍ಗೆ ಪರಿವರ್ತಿಸಲು ನೀತಿ ಆಯೋಗ ಯೋಜನೆ ರೂಪಿಸಿದೆ.

    ಸಭೆ ನಂತರ ಅಮಿತಾಬ್ ಕಾಂತ್ ಈ ಕುರಿತು ಟ್ವೀಟ್ ಮಾಡಿದ್ದು, ಎಲೆಕ್ಟ್ರಿಕ್ ವಾಹನಗಳ ಕ್ರಾಂತಿ ಮಾಡಲು ನೀತಿ ಆಯೋಗದ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಜಾಗತಿಕವಾಗಿ ಎಲೆಕ್ಟ್ರಿಕ್ ವಾಹನಗಳ ಚಾಲಕನಾಗಲು ಭಾರತ ತುದಿಗಾಲಲ್ಲಿ ನಿಂತಿದೆ. ಎಲೆಕ್ಟ್ರಿಕ್ ವಾಹನಗಳು ಚಲನಶೀಲತೆ ಭವಿಷ್ಯ ಎಂದು ಎಲ್ಲರೂ ಒಪ್ಪಿಕೊಂಡಿದ್ದು, ಮೋರ್ಥ್ ಹಾಗೂ ಡಿಎಚ್‍ಐನ ಕಾರ್ಯದರ್ಶಿ ರಾಜೀವ್ ಕುಮಾರ್ ಅವರು ಸಭೆಯ ನೇತೃತ್ವ ವಹಿಸಿದ್ದರು ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    ಭಾರತ ಈಗಾಗಲೇ ಎಲೆಕ್ಟ್ರಾನಿಕ್ಸ್ ಕ್ರಾಂತಿ ಮತ್ತು ಸೆಮಿ ಕಂಡಕ್ಟರ್ ಕ್ರಾಂತಿಯನ್ನು ತಪ್ಪಿಸಿಕೊಂಡಿದ್ದು, ವಿದ್ಯುತ್ ವಾಹನಗಳ ಕ್ರಾಂತಿಯನ್ನು ತಪ್ಪಿಸಿಕೊಳ್ಳಬಾರದು. ಈಗಿರುವ ಕಂಪನಿಗಳು ಈ ಕುರಿತು ನಿರ್ಧರಿಸದಿದ್ದರೆ ಇತರೆ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುತ್ತವೆ. ಈ ಕುರಿತು ಈಗಾಗಲೇ ಚೀನಾದಲ್ಲಿ ನಡೆದಿದೆ. ಆದರೆ, ಇದನ್ನು ಉದ್ಯಮಗಳ ಮೇಲೆ ಹೇರಲು ಸರ್ಕಾರ ಇಚ್ಛಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮೂಲಗಳ ಪ್ರಕಾರ ಸಾಂಪ್ರದಾಯಿಕ ಉತ್ಪಾದಕರಾದ ಬಜಾಜ್ ಆಟೋ, ಹೀರೋ ಮೋಟೊಕಾರ್ಪ್, ಎಚ್‍ಎಂಎಸ್‍ಐ ಹಾಗೂ ಟಿವಿಎಸ್ ಕಂಪನಿಗಳು ಈ ಕುರಿತು ವಿರೋಧ ವ್ಯಕ್ತಪಡಿಸಿದ್ದು, ಕೈನಿಟಿಕ್ ಗ್ರೀನ್ ಎನರ್ಜಿ ಮತ್ತು ಪವರ್ ಸೆಲ್ಯೂಶನ್ಸ್ ಮತ್ತು ಟಾರ್ಕ್ ಮೋಟರ್ಸ್ ಸೇರಿದಂತೆ ಇತರ ಕಂಪನಿಗಳು ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಪ್ರಾರಂಭಿಸಲಾಗುವುದು ಎಂದು ತಿಳಿಸಿವೆ.

    ವಾಯು ಮಲಿನ್ಯದ ಸಮಸ್ಯೆಯಿಂದಾಗಿ 2023ರೊಳಗೆ ಎಲೆಕ್ಟ್ರಿಕ್ ವಾಹನಗಳಿಗೆ ಪರಿವರ್ತಿಸಲು ಬಯಸುತ್ತೇವೆ ಎಂದು ರೀವೋಲ್ಟ್ ಇಂಟಲಿಕಾರ್ಪ್ ಸ್ಥಾಪಕ ರಾಹುಲ್ ಶರ್ಮಾ ತಿಳಿಸಿದ್ದಾರೆ.

    ಬಜಾಜ್ ಮತ್ತು ಟಿವಿಎಸ್ ಕಂಪನಿಗಳು ಕಳೆದ ತಿಂಗಳು ಈ ಕುರಿತು ಪ್ರತಿಕ್ರಿಯಿಸಿವೆ. ಪ್ರಸ್ತುತ ಪೆಟ್ರೋಲ್, ಗ್ಯಾಸ್ ವಾಹನಗಳನ್ನು ನಿಷೇಧಿಸಿ, 2025ರ ವೇಳೆಗೆ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳನ್ನಾಗಿ ಪರಿವರ್ತಿಸುವುದು ಅವಾಸ್ತವಿಕವಾಗಿದೆ. ಈ ರೀತಿಯ ಕ್ರಮ ಕೈಗೊಳ್ಳಲು ಇದು ಸೂಕ್ತ ಸಮಯವಲ್ಲ. ಇದರಿಂದ ದೇಶದಲ್ಲಿ ವಾಹನ ಉತ್ಪಾದನೆ ಹಳಿ ತಪ್ಪಲಿದೆ ಎಂದು ವಾದಿಸಿವೆ.

    ಸರ್ಕಾರದ ದಿಢೀರ್ ನಿರ್ಧಾರದಿಂದ ಕಂಪನಿಗಳು ಬಿಎಸ್(ಭಾರತ್ ಸ್ಟೇಜ್) 3ಯಿಂದ ಬಿಎಸ್-4ಗೆ ಎಂಜಿನ್‍ಗಳನ್ನು ಅಪ್‍ಗ್ರೇಡ್ ಮಾಡುತ್ತಿವೆ. ಇದೇ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವುದು ಹೇಗೆ ಸಾಧ್ಯ? ದರಿಂದ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವ ಕುರಿತು ಹೆಚ್ಚು ಜಾಗರೂಕತೆ ಮತ್ತು ವಾಸ್ತವಿಕ ಮಾರ್ಗಸೂಚಿಗಳನ್ನು ತಯಾರಿಸಬೇಕಿದೆ ಎಂದು ಹೀರೋ ಮೋಟೊಕಾರ್ಪ್ ಸರ್ಕಾರದ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದೆ.

    ವಾಹನ ಉದ್ಯಮ ಸಂಸ್ಥೆಗಳಾದ ಎಸ್‍ಐಎಎಂ ಮತ್ತು ಎಸಿಎಂಎಗಳೂ ಸಹ ಈ ಕುರಿತು ಸರ್ಕಾರಕ್ಕೆ ಸಲಹೆ ನೀಡಿದ್ದು, ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ ಸೂಕ್ತ ಮರ್ಗಸೂಚಿಗಳು ಹಾಗೂ ಪ್ರಾಯೋಗಿಕ ಸಮಯಾವಕಾಶ ನೀಡುವಂತೆ ತಿಳಿಸಿವೆ.

    ಉದ್ಯಮ ಸಂಸ್ಥೆ ಸಿಐಐ ಸಹ ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವ ಕುರಿತು ಗುರಿ ಮತ್ತು ಸಮಯದ ಗಡುವನ್ನು ಅಂತಿಮಗೊಳಿಸುವ ಮೊದಲು ಸರ್ಕಾರ ಸೂಕ್ತ ಸಮಾಲೋಚನೆ ನಡೆಸಬೇಕು ಎಂದು ತಿಳಿಸಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]