Tag: ತ್ರಿವಿಕ್ರಮ್

  • BBK 11: ನನ್ನ ಆಟಕ್ಕೆ ತ್ರಿವಿಕ್ರಮ್‌ ತೊಂದರೆ ಆಗಿದ್ದಾರೆ: ವರಸೆ ಬದಲಿಸಿದ ಭವ್ಯಾ

    BBK 11: ನನ್ನ ಆಟಕ್ಕೆ ತ್ರಿವಿಕ್ರಮ್‌ ತೊಂದರೆ ಆಗಿದ್ದಾರೆ: ವರಸೆ ಬದಲಿಸಿದ ಭವ್ಯಾ

    ‘ಬಿಗ್ ಬಾಸ್’ (Bigg Boss Kannada 11) ಮನೆಯ ಆಟ ಇನ್ನೇನು 2 ವಾರಗಳಲ್ಲಿ ಕೊನೆಗೊಳ್ಳಲಿದೆ. ಮನೆಯಲ್ಲಿ ಸ್ಪರ್ಧಿಗಳ ಆಟ ರೋಚಕವಾಗಿದೆ. ಹೀಗಿರುವಾಗ ಮನೆಯಲ್ಲಿ ತಮ್ಮ ಜರ್ನಿಗೆ ಯಾರು ಅಡ್ಡಿಯಾಗಿದ್ದಾರೆ ಎಂದು ತಿಳಿಸಬೇಕು ಎಂದು ಸುದೀಪ್ ಸ್ಪರ್ಧಿಗಳಿಗೆ ಟಾಸ್ಕ್‌ವೊಂದನ್ನು ನೀಡಿದ್ದಾರೆ. ಆಗ ನನ್ನ ಆಟಕ್ಕೆ ತ್ರಿವಿಕ್ರಮ್ (Trivikram) ತೊಂದರೆ ಆಗಿದ್ದಾರೆ ಎಂದು ಭವ್ಯಾ ತಿರುಗಿ ಬಿದ್ದಿದ್ದಾರೆ. ಇದನ್ನೂ ಓದಿ:ಹಿರಿಯ ನಟ ಸರಿಗಮ ವಿಜಯ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    ವಾರಾಂತ್ಯದ ಎಪಿಸೋಡ್‌ನಲ್ಲಿ ಬಣ್ಣದಿಂದಲೇ ಮಾರಿಹಬ್ಬ ಶುರುವಾಗಿದೆ. ಸುದೀಪ್‌ ಕೊಟ್ಟ ಟಾಸ್ಕ್‌ನಲ್ಲಿ ತ್ರಿವಿಕ್ರಮ್ ನನ್ನ ಆಟಕ್ಕೆ ಅಡ್ಡಿ ಎಂದಿದ್ದಾರೆ. ಅವರು ಬಳಸುವ ತಂತ್ರಗಾರಿಕೆ ಮತ್ತು ಮಾತನಾಡುವ ರೀತಿಯಾಗಿರಲಿ ಅದು ನನ್ನ ಆಟಕ್ಕೂ ತೊಂದರೆ ಆಗಿದೆ ಎಂದು ತ್ರಿವಿಕ್ರಮ್‌ ವಿರುದ್ಧ ಭವ್ಯಾ ಮಾತನಾಡಿದ್ದಾರೆ. ಸುದೀಪ್ ಎದುರಲ್ಲಿ ಮುಲಾಜಿಲ್ಲದೇ ಕೆಲವು ವಿಚಾರಗಳನ್ನು ಭವ್ಯಾ (Bhavya Gowda) ಹೇಳಿದ್ದಾರೆ. ತ್ರಿವಿಕ್ರಮ್ (Trivikram) ಮುಖಕ್ಕೆ ಬಣ್ಣದ ಬಾಂಬ್ ಸಿಡಿಸುವಂತೆ ಮಾಡಿದ್ದಾರೆ.

    ಆಗ ಭವ್ಯಾ ಮಾತು ಕೇಳಿ ತ್ರಿವಿಕ್ರಮ್ ಅವರಿಗೆ ಜ್ಞಾನೋದಯ ಆಗಿದೆ. ಮಾರಿಹಬ್ಬ ಶುರುವಾಗಿದೆ. ಅದರ ಬಣ್ಣ ಈಗ ಕಾಣಿಸುತ್ತಿದೆ ಎಂದು ತ್ರಿವಿಕ್ರಮ್ ಅವರು ಒಪ್ಪಿಕೊಂಡಿದ್ದಾರೆ. ಭವ್ಯಾ ಬಣ್ಣ ಈಗ ಗೊತ್ತಾಯ್ತು ಎಂಬರ್ಥದಲ್ಲಿ ತ್ರಿವಿಕ್ರಮ್ ಹೇಳಿದ್ದಾರೆ.

    ಆ ನಂತರ ಗೌತಮಿ, ಉಗ್ರಂ ಮಂಜು, ತ್ರಿವಿಕ್ರಮ್, ಚೈತ್ರಾ ಅವರು ಹನುಮಂತ ಹೆಸರು ಹೇಳಿದ್ದಾರೆ. ಅವರು ನಮ್ಮ ಆಟಕ್ಕೆ ಅಡ್ಡಿ ಎಂದಿದ್ದಾರೆ. ನನ್ನ ಗೆಲವು ಅಂತ ನೋಡಿದಾಗ ಹನುಮಂತ ನನಗೆ ಅಡ್ಡವಾಗಿ ಕಾಣಿಸುತ್ತಿದ್ದಾರೆ ಎಂದಿದ್ದಾರೆ ಗೌತಮಿ. ಬಳಿಕ ಚೈತ್ರಾ ಮಾತನಾಡಿ, ವೈಲ್ಡ್ ಕಾರ್ಡ್ ಎಂಟ್ರಿಯಲ್ಲಿ ಬಂದು ಆಗಾಗ ಸ್ವಿಚ್ ಆಫ್ ಆಗುತ್ತಿದ್ದೇನೆ ಎಂದು ಹೇಳಿ ಮನೆನೇ ಸ್ವಿಚ್ ಆಫ್ ಮಾಡುತ್ತಿದ್ದಾರೆ ಎಂದು ಹನುಮಂತಗೆ ಕೆಣಕಿದ್ದಾರೆ. ಇತ್ತ ತ್ರಿವಿಕ್ರಮ್ ಅವರು ಹನುಮಂತ ಎಲ್ಲರಿಗೂ ಹಲ್ವಾ ತಿನಿಸುತ್ತಿದ್ದಾರೆ ಎಂದಿದ್ದಾರೆ. ಇದಾದ ನಂತರ ಹನುಮಂತ ಅವರ ಮುಖಕ್ಕೂ ಬಣ್ಣದ ಬಾಂಬ್ ಸಿಡಿಸಿದ್ದಾರೆ.

    ಆಗ ನಾನು ಆಟ ಶುರು ಮಾಡಿ ಬಹಳ ದಿನ ಆಗಿದೆ ಸರ್. ಅದು ಇವತ್ತು ಇವರಿಗೆ ಗೊತ್ತಾಗಿದೆ ಎಂದು ಸುದೀಪ್ ಮುಂದೆ ಹನುಮಂತ ಮನೆ ಮಂದಿಗೆ ತಿರುಗೇಟು ನೀಡಿದ್ದಾರೆ. ಈ ಮೂಲಕ ಮನೆ ಮಂದಿಗೆ ಹನುಮಂತ ಠಕ್ಕರ್ ಕೊಟ್ಟಿದ್ದಾರೆ.

  • BBK 11: ಗೆಲುವಿಗಾಗಿ ವರಸೆ ಬದಲಿಸಿದ ಭವ್ಯಾಗೆ ಕಿವಿಹಿಂಡಿದ ತ್ರಿವಿಕ್ರಮ್‌

    BBK 11: ಗೆಲುವಿಗಾಗಿ ವರಸೆ ಬದಲಿಸಿದ ಭವ್ಯಾಗೆ ಕಿವಿಹಿಂಡಿದ ತ್ರಿವಿಕ್ರಮ್‌

    ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ (Bigg Boss Kannada 11) ತ್ರಿವಿಕ್ರಮ್ ಹಾಗೂ ಭವ್ಯಾ (Bhavya Gowda) ನಡುವೆ ಉತ್ತಮ ಒಡನಾಟವಿದೆ. ಈ ಗೆಳೆತನ ಇತ್ತೀಚೆಗೆ ದೂರಾದಂತೆ ಕಂಡರೂ ಮತ್ತೆ ಇಬ್ಬರೂ ಒಂದಾಗುತ್ತಿದ್ದಾರೆ. ಇಷ್ಟು ದಿನ ಗೆಳತಿ ಭವ್ಯಾ ತಪ್ಪುಗಳನ್ನು ತ್ರಿವಿಕ್ರಮ್‌ (Trivikram) ಹೇಳುತ್ತಿರಲಿಲ್ಲ. ಈಗ ಅವರು ಓಪನ್ ಆಗಿ ತ್ರಿವಿಕ್ರಮ್ ತಪ್ಪುಗಳನ್ನು ಭವ್ಯಾಗೆ ಹೇಳುತ್ತಿದ್ದಾರೆ. ಭವ್ಯಾ ಮಾಡಿದ ತಪ್ಪುವೊಂದನ್ನು ಎತ್ತಿ ತೋರಿಸಿದ್ದಾರೆ.

    ನಿನ್ನೆಯ ಸಂಚಿಕೆಯಲ್ಲಿ ಟಾಸ್ಕ್ ಆಡುವಾಗ ಭವ್ಯಾ ಮೇಲೆ ಅಟ್ಯಾಕ್ ಮಾಡಲು ಸಹಸ್ಪರ್ಧಿಗಳು ಬಂದರು. ಆಗ ಅವರು ಹೊಟ್ಟೆ ನೋವಿದೆ ಎಂದು ರಾಗ ತೆಗೆದರು. ಇದಾದ ಮರುಕ್ಷಣವೇ ಗೌತಮಿ ಮೇಲೆ ಭವ್ಯಾ ಅಟ್ಯಾಕ್ ಮಾಡಲು ಮುಂದಾದರು. ಈಗ ಹೊಟ್ಟೆ ನೋವು ಎಲ್ಲೋಯ್ತು ಎಂದು ಗೌತಮಿ ಗುಡುಗಿದರು. ಆಗ ಭವ್ಯಾ ಅವರು ನಾಟಕ ಮಾಡುತ್ತಿದ್ದಾರೆ ಎಂದು ಮನೆ ಮಂದಿಗೆ ಅನಿಸಿದೆ. ಈ ವಿಚಾರವಾಗಿ ತ್ರಿವಿಕ್ರಮ್ ಹಾಗೂ ಭವ್ಯಾ ನಡುವೆ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ:ಸಮರ್ಥಿಸಿಕೊಳ್ಳುವ ಅಗತ್ಯವಿಲ್ಲ – ಡಿವೋರ್ಸ್‌ ವದಂತಿ ಬೆನ್ನಲ್ಲೇ ಮೌನ ಮುರಿದ ಧನಶ್ರೀ

    ನನಗೆ ಆಟದಿಂದಾಗಿ ಫ್ರಸ್ಟ್ರೇಷನ್ ಆಯಿತು. ನಾನು ಏನು ಮಾಡುತ್ತಿದ್ದೇನೆ ಎಂಬುದು ನನ್ನ ಅರಿವಿಗೆ ಬರಲಿಲ್ಲ. ಡಾಕ್ಟರ್ ಬಳಿ ಹೋದಾಗ ಅವರು ಎಲ್ಲವೂ ಚೆನ್ನಾಗಿಯೇ ಇದೆ ಎಂದರು. ನನಗೇನು ಆಗಿಲ್ಲ ಎಂದು ಹೇಳಿ ನಾನು ಬಂದೆ ಎಂದು ಭವ್ಯಾ ಹೇಳಿಕೊಂಡರು. ನೀನು ಮಾಡಿದ್ದು ನಾಟಕ ಎಂದು ಎಲ್ಲರಿಗೂ ಅನಿಸಿತು ಎಂದು ತಪ್ಪನ್ನು ತಿದ್ದುವ ಕೆಲಸ ಮಾಡಿದರು ತ್ರಿವಿಕ್ರಮ್. ಹತಾಶೆಯಿಂದ ಈ ರೀತಿ ಆಯಿತು ಎಂದು ಭವ್ಯಾ ಮತ್ತೆ ತ್ರಿವಿಕ್ರಮ್‌ಗೆ ಸ್ಪಷ್ಟನೆ ಕೊಡುವ ಕೆಲಸ ಮಾಡಿದರು.

    ಭವ್ಯಾ, ತ್ರಿವಿಕ್ರಮ್, ಚೈತ್ರಾ, ಮೋಕ್ಷಿತಾ, ಧನರಾಜ್ ಕೂಡ ನಾಮಿನೇಷನ್ ಲಿಸ್ಟ್‌ನಲ್ಲಿದ್ದಾರೆ. ವೀಕೆಂಡ್‌ನಲ್ಲಿ ಒಬ್ಬರು ದೊಡ್ಮನೆಯಿಂದ ಹೊರಹೋಗುವುದು ಖಚಿತ. ಎಲ್ಲದಕ್ಕೂ ವಾರಾಂತ್ಯದಲ್ಲಿ ಉತ್ತರ ಸಿಗಲಿದೆ.

  • BBK 11: ಭವ್ಯಾ ಇಲ್ಲಿಯವರೆಗೆ ಬರಲು ನಾನೇ ಕಾರಣ- ವರಸೆ ಬದಲಿಸಿದ ತ್ರಿವಿಕ್ರಮ್

    BBK 11: ಭವ್ಯಾ ಇಲ್ಲಿಯವರೆಗೆ ಬರಲು ನಾನೇ ಕಾರಣ- ವರಸೆ ಬದಲಿಸಿದ ತ್ರಿವಿಕ್ರಮ್

    ಬಿಗ್‌ ಬಾಸ್‌ ಮನೆಯಲ್ಲಿ (BBK 11) ಪ್ರೇಮ ಪಕ್ಷಿಗಳಾಗಿದ್ದ ಭವ್ಯಾ (Bhavya Gowda) ಮತ್ತು ತ್ರಿವಿಕ್ರಮ್‌ (Trivikram) ದೂರ ದೂರ ಆಗಿದ್ದಾರೆ. ಇದಕ್ಕೆಲ್ಲ ಕಾರಣ ಆಗಿದ್ದು ಸ್ಪರ್ಧಿಗಳ ಫ್ಯಾಮಿಲಿ ಎಂಟ್ರಿ. ತ್ರಿವಿಕ್ರಮ್ ತಾಯಿ ಆಗಮಿಸಿ ಭವ್ಯಾನಿಂದ ದೂರ ಇರುವಂತೆ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಎಚ್ಚೆತ್ತುಕೊಂಡಿರುವ ತ್ರಿವಿಕ್ರಮ್ ಅವರು ಭವ್ಯಾರಿಂದ ದೂರ ಆಗುವ ಪ್ರಯತ್ನದಲ್ಲಿದ್ದಾರೆ. ಈ ಮಧ್ಯೆ ಅವರು ಆಡಿದ ಮಾತೊಂದು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಇದನ್ನೂ ಓದಿ:ಮದುವೆ ಯಾವಾಗ? ಎಂದಿದ್ದಕ್ಕೆ ನಾಚಿ ನೀರಾದ ರಮ್ಯಾ

    ಭವ್ಯಾ ಹಾಗೂ ತ್ರಿವಿಕ್ರಮ್ ಮಧ್ಯೆ ಉತ್ತಮ ಒಡನಾಟ ಇತ್ತು. ಇಬ್ಬರೂ ಒಟ್ಟಾಗಿ ಸಮಯ ಕಳೆಯುತ್ತಿದ್ದರು. ಒಬ್ಬರ ನೆರಳು ಒಬ್ಬರ ಮೇಲೆ ಇತ್ತು. ಇತ್ತೀಚೆಗೆ ಕುಟುಂಬದವರು ಬಂದಾಗ ತ್ರಿವಿಕ್ರಮ್‌ಗೆ ಅವರ ತಾಯಿ ಬುದ್ಧಿ ಮಾತು ಹೇಳಿ ಹೋಗಿದ್ದರು. ಅಲ್ಲದೆ, ಸುದೀಪ್ ಕಡೆಯಿಂದಲೂ ಈ ವಿಚಾರವಾಗಿ ಸಾಕಷ್ಟು ಸಲಹೆ ನೀಡಿದ್ದರು. ಈಗ ತ್ರಿವಿಕ್ರಮ್ ಅವರು ಅದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

    ಭವ್ಯಾಗೆ ಏನೇ ವಿಚಾರ ಇದ್ದರೂ ನೇರವಾಗಿ ಹೇಳುವ ಕೆಲಸವನ್ನೂ ಮಾಡಿದ್ದಾರೆ. ಇದು ಭವ್ಯಾಗೆ ಬೇಸರ ಮೂಡಿಸಿದೆ.  ಹಾಗಾದರೆ ಭವ್ಯಾ ಇಲ್ಲಿಯವರೆಗೆ ಬರೋಕೆ ತ್ರಿವಿಕ್ರಮ್ ಅವರು ಕಾರಣವಾ? ಹೀಗೊಂದು ಪ್ರಶ್ನೆ ಹುಟ್ಟುಹಾಕುವಂಥ ಮಾತು ಅವರ ಕಡೆಯಿಂದ ಬಂದಿದೆ. ನಿನ್ನೆಯ (ಜ.6) ಸಂಚಿಕೆಯಲ್ಲಿ ತ್ರಿವಿಕ್ರಮ್ ಹಾಗೂ ರಜತ್ ಅವರು ಕುಳಿತು ಮಾತನಾಡುತ್ತಿದ್ದರು. ಮನೆಗೆ ಬಂದು ಕಾಂಪಿಟೇಟರ್‌ನ ರೆಡಿ ಮಾಡಿ ನನಗೆ ಎದುರಾಳಿಯಾಗಿ ಬಿಟ್ಟುಕೊಂಡಂತೆ ಆಯಿತು ಎಂದರು ತ್ರಿವಿಕ್ರಮ್. ಅಂದರೆ, ಭವ್ಯಾನ ಒಳ್ಳೆಯ ಎದುರಾಳಿಯನ್ನಾಗಿ ಮಾಡಿ ಈಗ ಅವರ ಎದುರೇ ನಿಲ್ಲುವಂತೆ ಮಾಡಿಕೊಂಡಿದ್ದಾರೆ ಎಂಬರ್ಥದಲ್ಲಿ ತ್ರಿವಿಕ್ರಮ್‌ ಮಾತನಾಡಿದ್ದಾರೆ ಎಂದು ಫ್ಯಾನ್ಸ್‌ ಊಹಿಸಿದ್ದಾರೆ. ಒಟ್ನಲ್ಲಿ ಚೆನ್ನಾಗಿದ್ದ ಜೋಡಿಗಳ ನಡುವೆ ಬಿರುಕು ಮೂಡಿದೆ.

  • ‌ರೂಲ್ಸ್‌ಗೆಲ್ಲಾ ಡೊಂಟ್ ಕೇರ್-‌ ಮತ್ತೆ ಹೊಡೆದಾಡಿಕೊಂಡ ತ್ರಿವಿಕ್ರಮ್‌, ಉಗ್ರಂ ಮಂಜು

    ‌ರೂಲ್ಸ್‌ಗೆಲ್ಲಾ ಡೊಂಟ್ ಕೇರ್-‌ ಮತ್ತೆ ಹೊಡೆದಾಡಿಕೊಂಡ ತ್ರಿವಿಕ್ರಮ್‌, ಉಗ್ರಂ ಮಂಜು

    ‘ಬಿಗ್‌ ಬಾಸ್‌ ಕನ್ನಡ 11’ರ (Bigg Boss Kannada 11) ಆಟ 100ನೇ ದಿನಕ್ಕೆ ಕಾಲಿಟ್ಟಿದೆ. ಫಿನಾಲೆ ಹಂತ ತಲುಪಲು ನಾನಾ ರೀತಿಯ ತಂತ್ರಗಳು ನಡೆಯುತ್ತಿವೆ. ಬಿಗ್ ಬಾಸ್ ಕೊಡುವ ಪ್ರತಿ ಟಾಸ್ಕ್‌ನಲ್ಲೂ ಅತ್ಯುತ್ತಮ ಪರ್ಫಾಮೆನ್ಸ್ ನೀಡಲು ಸಾಕಷ್ಟು ಕಷ್ಟ ಪಡುತ್ತಿದ್ದಾರೆ. ಎದುರಾಳಿಗಳನ್ನು ಹೆದರಿಸಿಕೊಂಡು ಮನೆಯೊಳಗೆ ಟಾಸ್ಕ್ ಆಡುತ್ತಿದ್ದಾರೆ. ಅದರಂತೆ ಬಿಗ್ ಬಾಸ್‌ನಲ್ಲಿ ಸರಣಿ ಟಾಸ್ಕ್‌ಗಳು ಆರಂಭವಾಗಿವೆ. ಇದೀಗ ಟಾಸ್ಕ್‌ವೊಂದರಲ್ಲಿ ತ್ರಿವಿಕ್ರಮ್‌ (Trivikram) ಮತ್ತು ಉಗ್ರಂ ಮಂಜು (Ugramm Manju) ಹೊಡೆದಾಡಿಕೊಂಡಿದ್ದಾರೆ.

    ಉಳಿದುಕೊಂಡಿರುವ 9 ಸ್ಪರ್ಧಿಗಳಿಗೆ ಬಿಗ್ ಬಾಸ್ ಸರಣಿ ಟಾಸ್ಕ್‌ಗಳನ್ನು ನೀಡಲಿದ್ದಾರೆ. ಈ ಟಾಸ್ಕ್‌ಗಳಲ್ಲಿ ಹೆಚ್ಚು ಚೆನ್ನಾಗಿ ಆಡಿ, ಯಾವುದೇ ಮೋಸ ಮಾಡದೇ ಗೆಲುವು ಸಾಧಿಸಬೇಕು. ಟಾಸ್ಕ್‌ಗಳಲ್ಲಿ ಎಲ್ಲ ನಿಯಮಗಳನ್ನು ಸರಿಯಾಗಿ ಪಾಲಿಸಿ ಗೆಲುವನ್ನು ಪಡೆಯುವ ಸ್ಪರ್ಧಿಗಳಿಗೆ ಗ್ರ‍್ಯಾಂಡ್ ಫಿನಾಲೆ ಟಿಕೆಟ್ ಸಿಗಲಿದೆ. ಅಂದರೆ ಸ್ಪರ್ಧಿಗಳು ಆಡುವ ಟಾಸ್ಕ್ ಮೇಲೆ ಅವರ ಫಿನಾಲೆ ಟಿಕೆಟ್ ಖಾತರಿಯಾಗುತ್ತದೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಇದನ್ನೂ ಓದಿ:ಮಾತು ತೊದಲಿದೆ, ಕೈ ನಡುಗುತ್ತಿದೆ: ವಿಶಾಲ್ ಸ್ಥಿತಿ ನೋಡಿ ಫ್ಯಾನ್ಸ್ ಶಾಕ್

    ರಜತ್ ಈ ವಾರ ಮನೆಯ ಕ್ಯಾಪ್ಟನ್ ಆದ ಮೇಲೆ ಬಿಗ್ ಬಾಸ್ ಮನೆಯಲ್ಲಿ ಹೊಸ ಹೊಸ ಟಾಸ್ಕ್‌ಗಳು ವೇಗ ಪಡೆದುಕೊಂಡಿವೆ. ಫಿನಾಲೆಗೆ ಹೋಗುವ ಆಸೆಯಿಂದ ಎಲ್ಲರೂ ಟಾಸ್ಕ್ ಪೂರ್ಣಗೊಳಿಸುವ ಕಡೆ ಹೆಚ್ಚು ಗಮನ ಕೊಡುತ್ತಿದ್ದಾರೆ. ಇಷ್ಟು ದಿನ ಆಡಿದ್ದಕ್ಕಿಂತ ಈ ಕೊನೆ ಮೂರು ವಾರಗಳಲ್ಲಿ 9 ಸ್ಪರ್ಧಿಗಳು ಆಡುವ ಟಾಸ್ಕ್ ಅತ್ಯಂತ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿರುತ್ತವೆ.

    ಇನ್ನು ಇಂದಿನ ಟಾಸ್ಕ್‌ನಲ್ಲಿ ಉಗ್ರಂ ಮಂಜು ಹಾಗೂ ತ್ರಿವಿಕ್ರಮ್ ಮಧ್ಯೆ ಸಖತ್ ವಾಕ್ಸಮರ ನಡೆದಿದೆ. ಟಾಸ್ಕ್‌ನಲ್ಲಿ ತ್ರಿವಿಕ್ರಮ್ ಮುಖಕ್ಕೆ ಉಗ್ರಂ ಮಂಜು ಹೊಡೆದಿದ್ದಾರೆ. ಇದಕ್ಕೆ ಕೋಪಗೊಂಡಿರುವ ತ್ರಿವಿಕ್ರಮ್ ಅಷ್ಟು ಜೋರಾಗಿ ಹೊಡೆದರೆ ಹೆಂಗೆ ಎಂದು ಪ್ರಶ್ನೆ ಮಾಡಿದ್ದಲ್ಲದೇ ನಾನು ಹೊಡೆಯುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆ ಮಂಜು ನಾನು ಎಲ್ಲಿ ತಳ್ಳಾಡಿದೆ, ಎಲ್ಲಿ ಹೊಡೆದಾಡಿದೆ ಎಂದು ಕೇಳಿದ್ದಾರೆ. ಬಳಿಕ ಟಾಸ್ಕ್‌ನಲ್ಲಿ ಮಂಜುಗೆ ತ್ರಿವಿಕ್ರಮ್ ಓಡಾಡಿಸಿ ಹೊಡೆದಿದ್ದಾರೆ. ಈ ವೇಳೆ, ನಿಯಮ ಉಲ್ಲಂಘನೆ ಮಾಡಿದ್ರಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

  • BBK 11: ತ್ರಿವಿಕ್ರಮ್‌ ಡೇಂಜರ್‌ ಎಂದ ಭವ್ಯಾ ಗೌಡ

    BBK 11: ತ್ರಿವಿಕ್ರಮ್‌ ಡೇಂಜರ್‌ ಎಂದ ಭವ್ಯಾ ಗೌಡ

    ಬಿಗ್ ಬಾಸ್ ಮನೆಯ (Bigg Boss Kannada 11) ಆಟ ಇನ್ನೇನು ಕೆಲವೇ ದಿನಗಳಲ್ಲಿ ಅಂತ್ಯವಾಗಲಿದೆ. ಈ ವಾರ ಫ್ಯಾಮಿಲಿ ರೌಂಡ್‌ನಿಂದ ಜಾಲಿ ಮೂಡ್‌ನಲ್ಲಿದ್ದ ಸ್ಪರ್ಧಿಗಳಿಗೆ ಸುದೀಪ್ ಶಾಕ್ ಕೊಟ್ಟಿದ್ದಾರೆ. ಎಂದಿನಂತೆ ಭಾನುವಾರದ ಎಪಿಸೋಡ್‌ನಲ್ಲಿ ಸುದೀಪ್ ಈ ವಾರವು ಸ್ಪರ್ಧಿಗಳಿಗೆ ಚಟುವಟಿಕೆ ಒಂದನ್ನು ಕೊಟ್ಟಿದ್ದಾರೆ. ಅದುವೆ ಈ ಬಿಗ್ ಬಾಸ್ ಮನೆಯಲ್ಲಿ ಯಾರು ಡೇಂಜರ್, ಯಾರು ಜೋಕರ್? ಎಂದು ಮನೆ ಮಂದಿಗೆ ಕಿಚ್ಚ ಕೇಳಿದ್ದಾರೆ. ಈ ವೇಳೆ, ಕಿಚ್ಚನ  ಮುಂದೆ ತ್ರಿವಿಕ್ರಮ್‌ (Trivikram) ಡೇಂಜರ್‌ ಎಂದು ಹೇಳಿದ್ದಾರೆ.

    ಹೌದು, ಈ ಜರ್ನಿಯಲ್ಲಿ ನೀವು ಯಾರು ಅಂತ ಇನ್ನೊಬ್ಬರಿಗೆ ಗೊತ್ತಾಗುತ್ತೆ ಎಂದು ಹೇಳಿದ್ದಾರೆ. ಒಂದು ಬೋರ್ಡ್ ಮೇಲೆ ಸ್ಪರ್ಧಿಗಳು ಈ ಮನೆಯಲ್ಲಿ ಯಾರು ಡೇಂಜರ್? ಯಾರು ಜೋಕರ್? ಹಾಗೂ ಯಾರು ಕಾಂಪಿಟೆಟರ್? ಅಂತ ಬರೆಯಲಾಗಿದೆ. ಅದರಂತೆ ಈ ಮನೆಯಲ್ಲಿರೋ ಸ್ಪರ್ಧಿಗಳಿಗೆ ಏನೇನೂ ಹೋಗುತ್ತೆ ಅಂತ ಬಾಣದ ಮೂಲಕ ಚುಚ್ಚಬೇಕು. ಅದರಂತೆ ಭವ್ಯಾ ಗೌಡ ಅವರು ‘ಡೇಂಜರ್’ ಜಾಗಕ್ಕೆ ತ್ರಿವಿಕ್ರಮ್ ಫೋಟೋವನ್ನು ಅಂಟಿಸಿದ್ದಾರೆ. ತ್ರಿವಿಕ್ರಮ್‌ ಡೇಂಜರ್‌ ಎಂದು ಭವ್ಯಾ ಹೇಳಿದ್ದಾರೆ.

    ಉಳಿದಂತೆ ರಜತ್ ಹಾಗೂ ಹನುಮಂತ ಚೈತ್ರಾಗೆ ಜೋಕರ್ ಪಟ್ಟ ಕೊಟ್ಟಿದ್ದಾರೆ. ಚೈತ್ರಕ್ಕಾಗೆ ನಾನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ ಅಂತ ಹನುಮಂತ ಹೇಳಿದ್ದಾರೆ. ಬಳಿಕ ಮಾತಾಡಿ ರಜತ್ ಅವರು ಚೈತ್ರಾ ಅವರು ಬಂದು 14 ವಾರ ಆಗಿದೆ. ಇಲ್ಲಿತನಕ ಅವರು ಇಷ್ಟು ಸಂಪಾದನೆ ಮಾಡಿದ್ದಾರೆ ಎಂದು ಈ ಚಟುವಟಿಕೆಯಿಂದ ತಿಳಿಯುತ್ತಿದೆ. ಹೀಗಾಗಿ ಅವರನ್ನು ಜೋಕರ್ ತರ ನೋಡುತ್ತಿದ್ದೇನೆ ಅಂತ ಹೇಳಿದ್ದಾರೆ.

    ರಜತ್ ಮಾತಿಗೆ ಕೂಡಲೇ ಮಾತಾಡಿದ ಚೈತ್ರಾ ಕುಂದಪುರ, ಅದೇ ಜೋಕರ್ ಆಸ್ಕರ್ ಗೆದ್ದಿದ್ದನ್ನು ನಾನು ಕೇಳಿದ್ದೀನಿ, ಹೀಗಾಗಿ ಇವರುಗಳ ಅಭಿಪ್ರಾಯ ನನಗೆ ದೊಡ್ಡದು ಅಂತ ಅನಿಸುವುದೇ ಇಲ್ಲ ಅಂತ ಹೇಳಿದ್ದಾರೆ. ಬೇಕಾದ್ರೇ ಚೈತ್ರಾ ಆಸ್ಕರ್ ಗೆದ್ದುಕೊಳ್ಳಲಿ, ನಾನು ಬಿಗ್ ಬಾಸ್ ಕಪ್ ಗೆದ್ದುಕೊಂಡು ಮನೆಗೆ ಹೋಗುತ್ತೇನೆ ಅಂತ ರಜತ್ ಠಕ್ಕರ್ ಕೊಟ್ಟಿದ್ದಾರೆ.

  • BBK 11: ತ್ರಿವಿಕ್ರಮ್‌ನಿಂದ ದೂರವಿರಲು ಪರೋಕ್ಷವಾಗಿ ಭವ್ಯಾಗೆ ಅಕ್ಕ ಸಲಹೆ

    BBK 11: ತ್ರಿವಿಕ್ರಮ್‌ನಿಂದ ದೂರವಿರಲು ಪರೋಕ್ಷವಾಗಿ ಭವ್ಯಾಗೆ ಅಕ್ಕ ಸಲಹೆ

    ಬಿಗ್ ಬಾಸ್ ಮನೆಯ ಆಟ (Bigg Boss Kannada 11) 94 ದಿನಗಳು ಪೂರೈಸಿವೆ. ಇದೀಗ ಸ್ಪರ್ಧಿಗಳ ಕುಟುಂಬದವರು ಮನೆಗೆ ಬರುತ್ತಿದ್ದಾರೆ. ಹೀಗೆ ಬರುವ ಕುಟುಂಬದವರು ಸ್ಪರ್ಧಿಗಳಿಗೆ ಒಂದೊಂದು ಟಿಪ್ಸ್ ನೀಡುವ ಕೆಲಸ ಮಾಡುತ್ತಾ ಇದ್ದಾರೆ. ಯಾವ ರೀತಿಯಲ್ಲಿ ಆಡಬೇಕು ಎಂಬುದನ್ನು ಪರೋಕ್ಷವಾಗಿ ಹೇಳುತ್ತಿದ್ದಾರೆ. ಇದೀಗ ಭವ್ಯಾ (Bhavya Gowda) ಅವರ ಅಕ್ಕ ದಿವ್ಯಾ ಬಿಗ್‌ ಬಾಸ್‌ಗೆ ಬಂದಿದ್ದಾರೆ. ಅವರು ತ್ರಿವಿಕ್ರಮ್‌ನಿಂದ ದೂರ ಇರುವಂತೆ ಪರೋಕ್ಷವಾಗಿ ಸಲಹೆ ನೀಡಿದ್ದಾರೆ. ಇದನ್ನೂ ಓದಿ:ಇಲಿಯಾನಾ ಮತ್ತೆ ಪ್ರೆಗ್ನೆಂಟಾ?- ಹೊಸ ವರ್ಷದಂದು ಸುಳಿವು ಕೊಟ್ರಾ ನಟಿ?

    ಭವ್ಯಾಗೆ ಕನ್ಫೆಷನ್ ಕೊಠಡಿಗೆ ಬರುವಂತೆ ಬಿಗ್ ಬಾಸ್ ಹೇಳಿದ್ದಾರೆ. ದಿವ್ಯಾ (Divya Gowda) ಅವರು ಕನ್‌ಫೆಷನ್ ರೂಂನಲ್ಲೇ ಇದ್ದರು. ಅವರು ವೈದ್ಯರ ಡ್ರೆಸ್‌ನಲ್ಲಿ ಮುಖಕ್ಕೆ ಮಾಸ್ಕ್ ಹಾಕಿ ಕುಳಿತಿದ್ದರು. ಭವ್ಯಾ ಹೋಗಿ ಕುಳಿತ ಬಳಿಕ, ಹೇಗಿದ್ದೀರಿ ಎಂದು ಕೇಳಿದರು. ಭವ್ಯಾ ಒಮ್ಮೆ ಗೊಂದಲಕ್ಕೆ ಒಳಗಾದರು. ಆ ನಂತರ ಅಕ್ಕ ಬಂದಿರುವ ರಿಯಾಲಿಟಿ ಅರಿತುಕೊಂಡ ಅವರು ಖುಷಿಯಿಂದ ಕುಣಿದಾಡಿದರು. ಅಕ್ಕನನ್ನು ಅಪ್ಪಿಕೊಂಡು ಕಣ್ಣೀರಿಟ್ಟರು. ಇದನ್ನೂ ಓದಿ:BBK 11: ಅಕ್ಕನ ಮರೆತ ವಿಶೇಷ ಚೇತನ ಸಹೋದರ- ಮೋಕ್ಷಿತಾ ಕಣ್ಣೀರು

    ಬಳಿಕ ಭವ್ಯಾ ಅವರು ನಾನು ಏನು ಬದಲಾವಣೆ ಮಾಡಿಕೊಳ್ಳಬೇಕು ಎಂದು ಅಕ್ಕ ದಿವ್ಯಾಗೆ ಕೇಳಿದರು. ಇದಕ್ಕೆ ಉತ್ತರಿಸಿದ ದಿವ್ಯಾ, ಜನರು ಕಡಿಮೆ ಆಗುತ್ತಿದ್ದಾರೆ. ನೀನು ಎಲ್ಲರ ಜೊತೆಯೂ ಬೆರೆಯಬೇಕು. ಕಂಫರ್ಟ್ ಜೋನ್‌ನಲ್ಲಿ ಇದ್ದೀಯಾ, ತೊಂದರೆ ಇಲ್ಲ. ಎಲ್ಲದಕ್ಕೂ ಒಂದು ಬ್ಯಾರಿಕೇಡ್ ಇರಬೇಕು. ನೀನು ಇರೋದು ತಪ್ಪು ಎನ್ನುತ್ತಿಲ್ಲ. ವೈಯಕ್ತಿಕವಾಗಿ ಹೇಗೆ ಆಟ ಆಡಬೇಕು ಎಂಬುದನ್ನು ಯೋಚನೆ ಮಾಡು. ಗೇಮ್ ಕಡೆ ಫೋಕಸ್ ಮಾಡು. ಬೇರೆ ಅವರಿಗೆ ಸಲಹೆ ಕೇಳಬಾರದು. ನೀನೇ ನಿರ್ಧಾರ ತೆಗೆದುಕೊಳ್ಳಬೇಕು. ನೀನು ನಿರ್ಧಾರ ತೆಗೆದುಕೊಳ್ಳಲು ಅಪ್ರಬುದ್ಧ ಎಂದು ಕಾಣಿಸಬಾರದು ಎಂದರು.

    ಭವ್ಯಾಗೆ ಅಕ್ಕ ದಿವ್ಯಾ ಕೊಟ್ಟಿರುವ ಟಿಪ್ಟ್‌ ನೋಡಿ ಪ್ರೇಕ್ಷಕರು, ತ್ರಿವಿಕ್ರಮ್‌ನಿಂದ ದೂರ ಇರು ಎಂದು ಪರೋಕ್ಷವಾಗಿ ಸೂಚನೆ ಕೊಟ್ಟಿದ್ದಾರೆ ಎಂದು  ಅಭಿಪ್ರಾಯಪಟ್ಟಿದ್ದಾರೆ.

  • BBK 11: ‘ರಾಧಾ ಕೃಷ್ಣ’ರಂತೆ ಇದ್ದೀರಾ: ಭವ್ಯಾಗೆ ನೇರವಾಗಿ ಹೇಳಿದ ತ್ರಿವಿಕ್ರಮ್‌ ತಾಯಿ

    BBK 11: ‘ರಾಧಾ ಕೃಷ್ಣ’ರಂತೆ ಇದ್ದೀರಾ: ಭವ್ಯಾಗೆ ನೇರವಾಗಿ ಹೇಳಿದ ತ್ರಿವಿಕ್ರಮ್‌ ತಾಯಿ

    ‘ಬಿಗ್ ಬಾಸ್ ಕನ್ನಡ 11’ರ ಶೋ (Bigg Boss Kannada 11) ಇದೀಗ 100ನೇ ದಿನದತ್ತ ಮುನ್ನುಗ್ಗುತ್ತಿದೆ. ದೊಡ್ಮನೆಯಲ್ಲಿ ಈಗ ಫ್ಯಾಮಿಲಿ ರೌಂಡ್‌ ಶುರುವಾಗಿದೆ. ಎಲ್ಲರ ಮುಖದಲ್ಲಿ ಖುಷಿ ಮೂಡಿದ್ದು, ಸ್ಪರ್ಧಿಗಳಿಗೆ ಹೊಸ ಟಾಸ್ಕ್ ನೀಡಲಾಗಿದೆ. ಟಾಸ್ಕ್‌ ಗೆದ್ದವರಿಗೆ ತಮ್ಮ ಮನೆಯವರನ್ನು ಭೇಟಿ ಮಾಡುವ ಅವಕಾಶ ಕೊಡುತ್ತಾರೆ ಬಿಗ್‌ ಬಾಸ್. ಈ ಮೂಲಕ ‘ಬಿಗ್‌ ಬಾಸ್‌’ ಸ್ಪರ್ಧಿಗಳಿಗೆ ಟ್ವಿಸ್ಟ್‌ ಕೊಟ್ಟಿದ್ದಾರೆ.

    ಮನೆಯಲ್ಲಿ ‘ಬಿಗ್ ಬಾಸ್’ ವಿಶೇಷ ಟಾಸ್ಕ್ ಅನ್ನು ನೀಡಿದ್ದರು. ಈ ಟಾಸ್ಕ್ ಅನ್ನು 10 ನಿಮಿಷದಲ್ಲಿ ಪೂರ್ಣಗೊಳಿಸಿದ್ರೆ, ಅಮ್ಮನನ್ನು ಭೇಟಿ ಮಾಡಬಹುದು ಎಂದು ಬಿಗ್ ಬಾಸ್ ಹೇಳಿದ್ದರು. ಅದರಂತೆ ಮನೆಯಲ್ಲಿ ತ್ರಿವಿಕ್ರಮ್ (Trivikram) ಅವರು, ಒಂದು ಚಿತ್ರವನ್ನು ಜೋಡಿಸುವ ಟಾಸ್ಕ್ ಅನ್ನು ಫುಲ್ ಟೆನ್ಷನ್‌ನಲ್ಲಿ ಬೇಗ ಪೂರ್ಣಗೊಳಿಸಿದರು. ಟಾಸ್ಕ್ ಮುಗಿದಿದ್ದೆ ತಡ ಮುಖ್ಯದ್ವಾರ ಓಪನ್ ಆಗಿದೆ. ಮುಖ್ಯ ಬಾಗಿಲಿನಿಂದ ತ್ರಿವಿಕ್ರಮ್ ಅವರ ತಾಯಿ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ:ದರ್ಶನ್, ಯಶ್, ಉಪ್ಪಿ ಸರ್, ಶಿವಣ್ಣ ಸೇರಿದ್ರೆನೆ ಕನ್ನಡ ಚಿತ್ರರಂಗ – ಸುದೀಪ್‌

    ಈ ವೇಳೆ ತ್ರಿವಿಕ್ರಮ್, ಅವರ ತಾಯಿಯ ಆಶೀರ್ವಾದವನ್ನು ಎಲ್ಲಾ ಸ್ಪರ್ಧಿಗಳು ಪಡೆದರು. ತ್ರಿವಿಕ್ರಮ್‌ ಅವರ ತಾಯಿಯನ್ನು ಭವ್ಯಾ ತಬ್ಬಿಕೊಂಡು ಖುಷಿಪಟ್ಟರು. ಬಳಿಕ ಸೋಫಾ ಮೇಲೆ ಕುಳಿತು ಇಬ್ಬರು ಮಾತನಾಡುವಾಗ, ನನ್ನ ಮಗನಿಗೆ ತಾಯಿಯಾಗಿ, ಫ್ರೆಂಡ್ ಆಗಿ ಎಲ್ಲ ತರದಲ್ಲೂ ಬೆಂಬಲವಾಗಿ ನಿಂತಿದ್ದೀಯಾ. ರಾಧಾ ಕೃಷ್ಣನ ತರ ಇದ್ದೀರಿ ಎಂದು ತ್ರಿವಿಕ್ರಮ್ ತಾಯಿ ಭವ್ಯಾರನ್ನು (Bhavya Gowda) ಮೆಚ್ಚಿದ್ದಾರೆ. ಅವರ ಮಾತಿನಿಂದ ಭವ್ಯಾ ನಾಚಿ ನೀರಾಗಿದ್ದಾರೆ.

    ಇನ್ನು ಅಮ್ಮ ಮನೆಯಿಂದ ಹೊರ ಹೋಗುವಾಗ ತ್ರಿವಿಕ್ರಮ್ ಅವರು ಇನ್ನು 10 ನಿಮಿಷ ಅನುಮತಿ ಕೊಡುವಂತೆ ಮನವಿ ಮಾಡಿದರು. ಆದರೆ ಇದಕ್ಕೆ ಬಿಗ್ ಬಾಸ್ ನೀಡದ ಹಿನ್ನೆಲೆ ಅವರ ತಾಯಿ ಮನೆಯಿಂದ ಹೊರನಡೆದರು. ಆಗ ತ್ರಿವಿಕ್ರಮ್ ಕಣ್ಣೀರು ಹಾಕಿದ್ದಾರೆ. ಅದಷ್ಟೇ ಅಲ್ಲ, ಬಿಗ್ ಬಾಸ್ ಮನೆಗೆ ಭವ್ಯಾ ಅವರ ತಾಯಿ ಮತ್ತು ಸಹೋದರಿ ಕೂಡ ಎಂಟ್ರಿ ಕೊಟ್ಟಿದ್ದಾರೆ.

  • ತ್ರಿವಿಕ್ರಮ್‌ ವಿಚಾರಕ್ಕೆ ಕಾಲೆಳೆದ ಕಿಚ್ಚ- ನಾಚಿ ನೀರಾದ ಭವ್ಯಾ

    ತ್ರಿವಿಕ್ರಮ್‌ ವಿಚಾರಕ್ಕೆ ಕಾಲೆಳೆದ ಕಿಚ್ಚ- ನಾಚಿ ನೀರಾದ ಭವ್ಯಾ

    ನ್ನಡದ ‘ಬಿಗ್ ಬಾಸ್ ಸೀಸನ್ 11’ರ (Bigg Boss Kannada 11) ಆಟ 90 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ. ಇದೀಗ ವೀಕೆಂಡ್ ಪಂಚಾಯಿತಿಯಲ್ಲಿ ತ್ರಿವಿಕ್ರಮ್ ಬಗ್ಗೆ ಮಾತನಾಡುತ್ತಾ ಕಿಚ್ಚನ ಮುಂದೆ ಭವ್ಯಾ ನಾಚಿ ನೀರಾಗಿದ್ದಾರೆ. ಭವ್ಯಾ ಆಡಿದ ಮಾತಿಗೆ ಸುದೀಪ್ (Sudeep) ನಕ್ಕಿದ್ದಾರೆ.‌ ಈ ಕುರಿತ ಪ್ರೋಮೋವೊಂದನ್ನು ವಾಹಿನಿ ಹಂಚಿಕೊಂಡಿದೆ.

    ಭಾನುವಾರದ ಸಂಚಿಕೆಯಲ್ಲಿ ಸುದೀಪ್ ಅವರು ಹೊಸ ವರ್ಷಕ್ಕೆ ನಿಮ್ಮ ಪರ್ಸನಲ್ ವಸ್ತುವನ್ನು ಯಾರಿಗೆ ಕೊಡುತ್ತೀರಾ ಎಂದು ಸುದೀಪ್‌  ಹೇಳಿದ್ದರು. ನಾನು ಐಶುಗೆ ಗಿಫ್ಟ್ ಕೊಡುತ್ತೇನೆ. ಆ ಹುಡುಗಿ ಅಮ್ಮ ಇರದೇ ಹೇಗಿರಬಹುದು ಅನಸ್ತು? ಎಂದು ಚೈತ್ರಾ ಅವರು ಐಶ್ವರ್ಯಾ ಬಗ್ಗೆ ಮಾತನಾಡುತ್ತಾ ಭಾವುಕರಾಗಿದ್ದಾರೆ. ಇದಾದ ಮೇಲೆ ಭವ್ಯಾಗೆ ನೀವು ಯಾರಿಗೆ ಗಿಫ್ಟ್ ಕೊಡಬೇಕು ಎಂದು ಕೇಳಿದಾಗ, ತ್ರಿವಿಕ್ರಮ್‌ಗೆ ಕೊಡಲು ಇಷ್ಟಪಡುತ್ತೇನೆ ಎಂದು ಭವ್ಯಾ ಹೇಳಿದ್ದಾರೆ. ಈ ವೇಳೆ, ಸುದೀಪ್ ಇದು ಎಂತಹ ಸರ್ಪ್ರೈಸ್ ಅಲ್ವಾ? ಎಂದು ಭವ್ಯಾ ಕಾಲೆಳೆದಿದ್ದಾರೆ. ಇದನ್ನೂ ಓದಿ:ಕ್ಯಾಪ್ಟೆನ್ಸಿಗಾಗಿ ಮೋಸದಾಟ ಆಡಿದ ಭವ್ಯಾಗೆ ಸುದೀಪ್‌ ವಾರ್ನಿಂಗ್‌

    ನಾಚುತ್ತಲೇ ತ್ರಿವಿಕ್ರಮ್ ಕುರಿತು ಮಾತನಾಡಿದ ಭವ್ಯಾ, ಈ ವ್ಯಕ್ತಿ ನೋಡುವುದಕ್ಕೆ ತುಂಬಾ ಒರಟ ಅನಿಸ್ತಾರೆ. ಆದರೆ ಅವರು ವೇರಿ ಸ್ವೀಟ್ ಎಂದು ಹೇಳಿದ್ದಾರೆ. ಆಗ ತಮಾಷೆಯಾಗಿ ಸುದೀಪ್ ಸಾರಿ ಏನ್ ಹೇಳುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಕ್ಕೆ ಭವ್ಯಾ ನಿಂತಲ್ಲೇ ನಾಚಿ ನೀರಾಗಿದ್ದಾರೆ. ತ್ರಿವಿಕ್ರಮ್‌ರನ್ನ ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ ಸರ್. ಅರ್ಥ ಮಾಡಿಕೊಂಡ ಮೇಲೆ ತ್ರಿವಿಕ್ರಮ್‌ನಿಂದ ದೂರ ಆಗೋದು ಕಷ್ಟ ಎಂದ ಭವ್ಯಾ ಮಾತಿಗೆ ನಕ್ಕಿದ್ದಾರೆ.

    ಶೋ ಶುರುವಾದ ದಿನದಿಂದ ಭವ್ಯಾ ಮತ್ತು ತ್ರಿವಿಕ್ರಮ್ ನಡುವೆ ಉತ್ತಮ ಒಡನಾಟವಿದೆ. ಇಬ್ಬರ ನಡುವೆ ಸಮ್‌ಥಿಂಗ್ ಸಮ್‌ಥಿಂಗ್ ಇದೆ ಎಂದು ಮನೆ ಮಂದಿ ಊಹಿಸಿದ್ದಾರೆ. ಆದರೆ ನಮ್ಮೀಬ್ಬರ ನಡುವೆ ಏನಿಲ್ಲ ಎಂದು ಇಬ್ಬರೂ ಆಗಾಗ ಸ್ಪಷ್ಟನೆ ನೀಡುವ ಕೆಲಸ ಕೂಡ ಮಾಡಿದ್ದು ಇದೆ. ಬಿಗ್‌ ಬಾಸ್‌ ಆಟ ಮುಗಿದ್ಮೇಲೆ ಈ ಜೋಡಿ ಹಕ್ಕಿ ರಿಯಲ್‌ ಆಗಿಯೂ ಜೋಡಿಯಾಗ್ತಾರಾ? ಎಂದು ಕಾದುನೋಡಬೇಕಿದೆ.

  • ಎಲಿಮಿನೇಷನ್ ಹೈಡ್ರಾಮಾ: ಬಿಗ್ ಬಾಸ್‌ನಿಂದ ಹೊರಬಂದ ತ್ರಿವಿಕ್ರಮ್!

    ಎಲಿಮಿನೇಷನ್ ಹೈಡ್ರಾಮಾ: ಬಿಗ್ ಬಾಸ್‌ನಿಂದ ಹೊರಬಂದ ತ್ರಿವಿಕ್ರಮ್!

    ‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ಆಟದಲ್ಲಿ ಬಿಗ್ ಟ್ವಿಸ್ಟ್ ಕೊಟ್ಟಿದ್ದಾರೆ ಬಿಗ್ ಬಾಸ್. ಮನೆಯ ಸ್ಟ್ರಾಂಗ್ ಸ್ಪರ್ಧಿ ತ್ರಿವಿಕ್ರಮ್ ಹೊರನಡೆದಿರುವ ಹೈಡ್ರಾಮಾ ನಡೆದಿದೆ. ತ್ರಿವಿಕ್ರಮ್ (Trivikram) ನಿಜಕ್ಕೂ ಎಲಿಮಿನೇಟ್ ಆದರು ಎಂದು ಭಾವಿಸಿದ ಭವ್ಯಾ (Bhavya Gowda) ಅವರು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ:ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಕಿಚ್ಚ

    ಈ ವಾರ ಯಾವುದೇ ವೋಟಿಂಗ್ ಲೈನ್ ತೆರೆದಿರಲಿಲ್ಲ. ಆದರೂ ಎಲಿಮಿನೇಷನ್ ಪ್ರಕ್ರಿಯೆ ನಡೆಸಲಾಯಿತು. ಅಂತಿಮವಾಗಿ ತ್ರಿವಿಕ್ರಮ್ ಅವರು ದೊಡ್ಮನೆಯಿಂದ ಹೊರ ಹೋಗುತ್ತಿದ್ದಾರೆ ಎಂದು ಸುದೀಪ್ ಘೋಷಣೆ ಮಾಡಿದರು. ನಿಮಗೆ ನನ್ನ ಜೊತೆ ಬಂದು ಸೇರಲು ಐದು ನಿಮಿಷ ಕಾಲಾವಕಾಶ ಇದೆ ಎಂದರು. ಎಲ್ಲರೂ ಇದು ಪ್ರ‍್ಯಾಂಕ್ ಇರಬಹುದು ಎಂದುಕೊಂಡಿದ್ದರು. ತ್ರಿವಿಕ್ರಮ್ ಕೂಡ ಹಾಗೆಯೇ ಅಂದುಕೊಂಡಂತೆ ಇತ್ತು. ಆದರೆ, ಹಾಗಾಗಲಿಲ್ಲ.

    ಮನೆಯ ಗಾರ್ಡನ್ ಏರಿಯಾಗೆ ಬರುತ್ತಿದ್ದಂತೆ ಮುಖ್ಯದ್ವಾರ ಓಪನ್ ಆಯಿತು. ಆದರಿಂದ ಹೊರಕ್ಕೆ ಹೋದರು. ಆಗ ಭವ್ಯಾ ಗೌಡ ಅವರು ಅಳೋಕೆ ಆರಂಭಿಸಿದರು. ತ್ರಿವಿಕ್ರಮ್‌ ಎಲಿಮಿನೇಷನ್‌ ಶಾಕ್‌ ಆಗಿದೆ. ಗೆಲ್ಲಬೇಕಿದ್ದ ಸ್ಪರ್ಧಿ ಈ ರೀತಿ ಎಲಿಮಿನೇಟ್ ಆದರಲ್ಲ ಎಂದು ಎಲ್ಲರೂ ಶಾಕ್ ಆದರು. ಈ ಬಗ್ಗೆ ದೊಡ್ಮನೆ ಒಳಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಇಂದಿನ ಸಂಚಿಕೆಯಲ್ಲಿ ತ್ರಿವಿಕ್ರಮ್ ಮರಳಿ ದೊಡ್ಮನೆ ಸೇರಲಿದ್ದಾರೆ.

    ಈ ವಾರ ತ್ರಿವಿಕ್ರಮ್‌ರನ್ನು ತಮ್ಮನ್ನು ತಾವೇ ನಾಮಿನೇಟ್ ಮಾಡಿಕೊಂಡಿದ್ದರು. ತಮ್ಮ ತಂಡದವರನ್ನು ಉಳಿಸಲು ಹೋಗಿ ಅವರು ಈ ರೀತಿ ಮಾಡಿದ್ದರು. ಈ ಬಗ್ಗೆ ಸುದೀಪ್ ವಾರ್ನಿಂಗ್ ಕೊಟ್ಟಿದ್ದಾರೆ. ಆದರೆ, ತ್ರಿವಿಕ್ರಮ್‌ಗೆ ತಾವು ಇದ್ದೇ ಇರುತ್ತೇವೆ ಎನ್ನುವ ಓವರ್ ಕಾನ್ಫಿಡೆನ್ಸ್ ಇತ್ತು. ಅದನ್ನು ಬ್ರೇಕ್ ಮಾಡಬೇಕು ಎನ್ನುವ ಕಾರಣಕ್ಕೆ ಈ ವಾರ ಎಲಿಮಿನೇಷನ್ ಡ್ರಾಮಾ ಮಾಡಲಾಗಿದೆ.

    ಭಾನುವಾರದ ಸಂಚಿಕೆಯನ್ನು ಸೋಮವಾರದವರೆಗೂ ಮುಂದುವರಿದೆ. ಅದರ ಪ್ರೋಮೋವನ್ನು ಕೂಡ ತೋರಿಸಲಾಗಿದೆ. ಸುದೀಪ್ ಅವರು, ಎಷ್ಟು ಮಂದಿಗೆ ತ್ರಿವಿಕ್ರಮ್ ಅವರು ಹೋಗಿದ್ದು ಅಚ್ಚರಿ ಮೂಡಿಸಿದೆ ಎಂದೆಲ್ಲಾ ಪ್ರಶ್ನೆ ಮಾಡಿದ್ದಾರೆ. ಅದರರ್ಥ ಸೋಮವಾರದ ಸಂಚಿಕೆಯಲ್ಲಿ ಸುದೀಪ್ ಅವರು ಒಂದಷ್ಟು ಕ್ಲಾಸ್ ತೆಗೆದುಕೊಂಡ ಬಳಿಕ, ಪುನಃ ತ್ರಿವಿಕ್ರಮ್‌ರನ್ನು ವಾಪಸ್ ಮನೆಯೊಳಗೆ ಕಳಿಸುವ ಸಾಧ್ಯತೆ ಇದೆ. ಅಲ್ಲಿವರೆಗೂ ಕಾದುನೋಡಬೇಕು.

  • BBK 11: ತ್ರಿವಿಕ್ರಮ್‌ ಮೇಲೆ ಡಿಪೆಂಡ್‌ ಆಗ್ತೀರಾ ಎಂದ ಮೋಕ್ಷಿತಾ ಮೇಲೆ ಭವ್ಯಾ ಕೆಂಡ

    BBK 11: ತ್ರಿವಿಕ್ರಮ್‌ ಮೇಲೆ ಡಿಪೆಂಡ್‌ ಆಗ್ತೀರಾ ಎಂದ ಮೋಕ್ಷಿತಾ ಮೇಲೆ ಭವ್ಯಾ ಕೆಂಡ

    ದೊಡ್ಮನೆಯ (Bigg Boss Kannada 11)  ಆಟ ದಿನದಿಂದ ದಿನಕ್ಕೆ ಸಾಕಷ್ಟು ತಿರುವುಗಳನ್ನು ಪಡೆದು ಮುನ್ನುಗ್ಗುತ್ತಿದೆ. ಮನೆಯ ಪಕ್ಷಪಾತಿ, ಅಶಕ್ತ ಎಂಬ ವಿಚಾರಕ್ಕೆ ಸ್ಪರ್ಧಿಗಳ ನಡುವೆ ಕಿತ್ತಾಟ ಶುರುವಾಗಿದೆ. ಈ ವೇಳೆ, ಉಗ್ರಂ ಮಂಜುಗೆ (Ugramm Manju) ರಜತ್ (Rajath) ಚೀಪ್ ಎಂದು ಕುಟುಕಿದ್ದಾರೆ. ಇತ್ತ ಮೋಕ್ಷಿತಾ (Mokshitha) ಕೂಡ ಭವ್ಯಾ ಮೇಲೆ ಎಗರಾಡಿದ್ದಾರೆ. ಇದನ್ನೂ ಓದಿ:ಸಿನಿಮಾ ಚಾನ್ಸ್‌ಗಾಗಿ ಸೆಕ್ಸ್ ಮಾಡಿದ್ದೀರಾ? ಎಂದವನಿಗೆ ಚೈತ್ರಾ ಆಚಾರ್ ತಿರುಗೇಟು

    ಸದ್ಯ ವಾಹಿನಿ ಹಂಚಿಕೊಂಡಿರುವ ಪ್ರೋಮೋದಲ್ಲಿ ನನ್ನಿಂದಲೇ ಈ ಟಾಸ್ಕ್ ಗೆಲ್ತು. ನನ್ನಿಂದಲೇ ಈ ಆಟ ಗೆದ್ದರು ಅಂದುಕೊಳ್ಳುವ ಚೀಪ್ ಮೆಂಟಾಲಿಟಿ ಮಂಜಣ್ಣನದ್ದು ಎಂದು ರಜತ್ ಹೇಳಿದ್ದಾರೆ. ರಜತ್ ಮಾತು ಕೇಳಿ, ಮಂಜು ಗರಂ ಆಗಿದ್ದಾರೆ. ನಾನು ಮಾಡಿರೋ ಕೆಲಸನಾ ನಾನೇ ಹೇಳಿಕೊಳ್ಳೋದ್ರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಬಳಿಕ ಬಿಗ್ ಬಾಸ್‌ನ ಟಾಸ್ಕ್ ರೂಲ್ಸ್‌ನಂತೆಯೇ ಸ್ಪರ್ಧಿ ಮಂಜುರನ್ನು ರಜತ್ ನೀರಿಗೆ ತಳ್ಳಿದ್ದಾರೆ.

    ಭವ್ಯಾ ಎಲ್ಲರ ಜೊತೆ ಮಿಂಗಲ್ ಆಗೋದಿಲ್ಲ. ನೀವು ತ್ರಿವಿಕ್ರಮ್ ಜೊತೆ ಡಿಪೆಂಡ್ ಆಗ್ತೀರಾ. ತುಂಬಾ ನಿಷ್ಠುರವಾಗಿ ಮಾತಾಡ್ತೀರಾ ಎಂದು ಮೋಕ್ಷಿತಾ ಹೇಳಿದರು. ಮೋಕ್ಷಿತಾರ ಪ್ರತಿ ಮಾತಿಗೂ ಭವ್ಯಾ ತಿರುಗೇಟು ನೀಡಿದ್ದಾರೆ. ನಾನು ಎಲ್ಲರ ಬಳಿ ಹೋಗಿ ಕಷ್ಟ ಸುಖ ಹೇಳಬೇಕಾಗಿಲ್ಲ. ತ್ರಿವಿಕ್ರಮ್ ನನ್ನ ಆಟವನ್ನ ಆಡುತ್ತಿಲ್ಲ. ನಾನು ಈ ಮನೆಗೆ ಸಂಬಂಧಗಳನ್ನು ಬೆಳೆಸಲು ಬಂದಿಲ್ಲ. ಯಾರ ಬಳಿ ಕೂಡ ಸರ್ಟಿಫಿಕೇಟ್ ಬೇಕಿಲ್ಲ ಎಂದು ಭವ್ಯಾ ಕೆಂಡಕಾರಿದ್ದಾರೆ. ಆ ನಂತರ ಭವ್ಯಾರನ್ನು (Bhavya Gowda) ಮೋಕ್ಷಿತಾ ನೀರಿಗೆ ತಳ್ಳಿದ್ದಾರೆ.

    ಇನ್ನೂ ಶಿಶಿರ್ ಎಲಿಮಿನೇಷನ್ ಮತ್ತು ಗೋಲ್ಡ್ ಸುರೇಶ್ ನಿರ್ಗಮನದ ನಂತರ ಈ ವಾರಾಂತ್ಯ ಯಾರು ಮನೆಯಿಂದ ಹೊರಬರುತ್ತಾರೆ ಎಂಬುದರ ಬಗ್ಗೆ ಫ್ಯಾನ್ಸ್‌ಗೆ ಕುತೂಹಲವಿದೆ. ಈ ವಾರ ಡಬಲ್ ಎಲಿಮಿನೇಷನ್ ಆಗುವ ಸಾಧ್ಯತೆಯಿದೆ.