Tag: ತ್ರಿವಿಕ್ರಮ್

  • ಸಿನಿಮಾ ಸೋಲಿನ ಬೆನ್ನಲ್ಲೇ ಐಟಂ ಡ್ಯಾನ್ಸ್‌ಗೆ ಓಕೆ ಎಂದ ರಶ್ಮಿಕಾ ಮಂದಣ್ಣ

    ಸಿನಿಮಾ ಸೋಲಿನ ಬೆನ್ನಲ್ಲೇ ಐಟಂ ಡ್ಯಾನ್ಸ್‌ಗೆ ಓಕೆ ಎಂದ ರಶ್ಮಿಕಾ ಮಂದಣ್ಣ

    ನ್ನಡದ ಕಿರಿಕ್ ಬ್ಯೂಟಿ ರಶ್ಮಿಕಾ ಮಂದಣ್ಣ(Rashmika Mandanna) ಬಹುಭಾಷಾ ನಾಯಕಿಯಾಗಿ ಮಿಂಚ್ತಿದ್ದಾರೆ. ಇತ್ತೀಚಿನ ಬಾಲಿವುಡ್‌ (Bollywood) `ಗುಡ್‌ ಬೈ’ (Good Bye) ಚಿತ್ರದ ಸೋಲಿನ ನಂತರ ಇದೀಗ ಸ್ಟಾರ್ ನಟನ ಐಟಂ ಡ್ಯಾನ್ಸ್‌ಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ ಪುಷ್ಪ ನಟಿ.

    `ಪುಷ್ಪ’ (Pushpa Film) ಸಕ್ಸಸ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ನಾಯಕಿಯಾಗಿ ಮಿಂಚ್ತಿರುವ ರಶ್ಮಿಕಾ ಮಂದಣ್ಣಗೆ (Rashmika) ಈಗ ಲಕ್ ಕೈ ಕೊಟ್ಟಂತಿದೆ. ಸ್ಟಾರ್ ವ್ಯಾಲ್ಯೂ ಇರುವ ನಟಿ ಈಗ ಮಹೇಶ್ ಬಾಬು ಮುಂದಿನ ಚಿತ್ರದಲ್ಲಿ ಐಟಂ ಡ್ಯಾನ್ಸ್‌ಗೆ ಹೆಜ್ಜೆ ಹಾಕಲಿದ್ದಾರೆ ಎಂಬ ಸುದ್ದಿ ಸೌಂಡ್ ಮಾಡುತ್ತಿದೆ. ಸ್ಟಾರ್ ಹೀರೋಯಿನ್ ಆಗಿದ್ರು ಐಟಂ ಹಾಡಿಗೆ ಓಕೆ ಅಂದಿದ್ಯಾಕೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಕಾಡುತ್ತಿದೆ.

    ತ್ರಿವಿಕ್ರಮ್ ನಿರ್ದೇಶನದ ಚಿತ್ರದಲ್ಲಿ ಮಹೇಶ್ ಬಾಬು (Mahesh Babu) ಜತೆ ಪೂಜಾ ಹೆಗ್ಡೆ, ಶ್ರೀಲೀಲಾ (Sreeleela) ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ. ಇದೇ ಚಿತ್ರದಲ್ಲಿ ರಶ್ಮಿಕಾ ಐಟಂ ಹಾಡಿಗೆ ಹೆಜ್ಜೆ ಹಾಕಲು ಓಕೆ ಅಂದಿದ್ದಾರೆ. `ಪುಷ್ಪ 2’ನಲ್ಲಿ (Pushpa 2) ಬ್ಯುಸಿಯಿರುವ ಕೊಡಗಿನ ಬ್ಯೂಟಿ, ಮಹೇಶ್ ಬಾಬು ನಟನೆಯ ಐಟಂ ಹಾಡಿಗೆ ಹೆಜ್ಜೆ ಹಾಕಲು ನಟಿ ದುಬಾರಿ ಸಂಭಾವನೆಯನ್ನೇ ಕೇಳಿದ್ದಾರಂತೆ. ಪ್ರತಿಷ್ಠಿತ ಆಭರಣ ಸಂಸ್ಥೆಯ ಬ್ರ್ಯಾಂಡ್ ಅಂಬಾಸಿಡರ್ ಸ್ಥಾನದಿಂದ ಹೊರಗಿಟ್ಟ ಮೇಲೆ ಐಟಂ ಡ್ಯಾನ್ಸ್‌ನತ್ತ ನಟಿ ಮುಖ ಮಾಡಿರೋದು ಹಲವರ ಅಚ್ಚರಿಗೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ ಹಂಟರ್ ಆಗಿ ಕನ್ನಡಕ್ಕೆ ಎಂಟ್ರಿ

    ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ ಹಂಟರ್ ಆಗಿ ಕನ್ನಡಕ್ಕೆ ಎಂಟ್ರಿ

    ಅಂತರರಾಷ್ಟ್ರೀಯ  ಖ್ಯಾತಿಯ ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ (Kabir Bedi) ಅವರು ಮೊಟ್ಟಮೊದಲ ಬಾರಿಗೆ ವಿನಯ್ (Vinay) ನಿರ್ದೇಶನದ “ಹಂಟರ್” (Hunter) ಕನ್ನಡ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹಾಲಿವುಡ್ ನಲ್ಲಿ ಹಲವಾರು ಸಿನಿಮಾಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಕಬೀರ್ ಬೇಡಿ ಅಲ್ಲಿ ಜೇಮ್ಸ ಬಾಂಡ್, ಮೈಕಲ್ ಕೇನ್ ಮೊದಲಾದ ಖ್ಯಾತ ನಾಮರೊಂದಿಗೆ ಅಭಿನಯಿಸಿರುತ್ತಾರೆ.  ಇದೀಗ ನಿರ್ಮಾಪಕ  ತ್ರಿವಿಕ್ರಮ ಸಪಲ್ಯ ರವರು ನಮ್ಮ ಭಾಷೆಯ ಚಿತ್ರಕ್ಕೂ ಅವರನ್ನು ಪರಿಚಯಿಸಿರುವುದು ಚಿತ್ರದ ಕುತೂಹಲವನ್ನು ಹೆಚ್ಚಿಸಿದೆ.

    ಪ್ಯಾನ್ ಇಂಡಿಯಾ ಮಾದರಿಯ ಈ ಸಿನಿಮಾದಲ್ಲಿ ನಿರಂಜನ್ ಮತ್ತು ಸೌಮ್ಯ ಮೆನನ್ ನಾಯಕ-ನಾಯಕಿಯರಾಗಿದ್ದು ಪ್ರಕಾಶ್ ರಾಜ್, ನಾಝರ್ ಮತ್ತು ಸುಮನ್ ಪ್ರಧಾನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.   ಯುರೋಪ್ ನಾದ್ಯಂತ ಧೂಳೆಬ್ಬಿಸಿದ್ದ ನಂಬರ್ 1 ಟಿವಿ ಸೀರಿಸ್ “ಸಂದೋಕನ್” ನಲ್ಲಿ  ನಟಿಸಿದ್ದ ಬೇಡಿಯವರಿಗೆ      ಕಳೆದ  ಸೆಪ್ಟೆಂಬರ್ ನಲ್ಲಿ ಇಟೆಲಿಯ ವೆನಿಸ್ ನಲ್ಲಿ  “Life time achievement award” ಬಂದ ನಂತರ, ಇದೇ ಮೊದಲ ಬಾರಿಗೆ ಚಿತ್ರ ವೊಂದರಲ್ಲಿ ಅಭಿನಯಿಸಿರುತ್ತಾರೆ. ಅದೂ ನಮ್ಮ ಕನ್ನಡ ಭಾಷೆಯ ಚಿತ್ರ. ಇದನ್ನೂ ಓದಿ:ರಿಲೇಶನ್ ಶಿಪ್ ಇಟ್ಕೊಳ್ಳೋಕೆ ಬಿಗ್ ಬಾಸ್ ಮನೆಗೆ ಬಂದಿಲ್ಲ ಎಂದು ಕಣ್ಣೀರಿಟ್ಟ ನಟಿ ಮಯೂರಿ

    ಇದಲ್ಲದೆ ಕಬೀರ್ ಬೇಡಿಯವರು ತ್ರಿವಿಕ್ರಮ ಸಾಪಲ್ಯರವರ ಮತ್ತೊಂದು ಚಿತ್ರದಲ್ಲೂ ಅಭಿನಯಿಸುತ್ತಿರುವ ಮಾಹಿತಿ ಹೊರಬಿದ್ದಿದೆ. ಅಕ್ಟೋಬರ್ 7 ರಿಂದ ಚಿತ್ರೀಕರಣ ಆರಂಭಗೊಳ್ಳಲಿರುವ ಸುಮಾರು 800 ವರ್ಷಗಳ ಹಿಂದಿನ ಕಥೆಯಾಧಾರಿತ ಪಿರಿಯಾಡಿಕ್ ಸಿನಿಮಾದಲ್ಲಿ  ಬೆಂಗಾಲಿ ನಟ ಸೌಮಿಕ್ ಚಟರ್ಜಿ ಪ್ರಮುಖ ಪಾತ್ರದಲ್ಲಿದ್ದು  ಕನ್ನಡದ ಖ್ಯಾತ ಹಿರಿಯ ನಟಿಯರಾದ ಶ್ರುತಿ ಹಾಗೂ  ಭವ್ಯ  ಮುಖ್ಯ ಪಾತ್ರಗಳಲ್ಲಿ  ಅಭಿನಯಿಸುತ್ತಿದ್ದಾರೆ.

    ಒಟ್ಟಿನಲ್ಲಿ ತ್ರಿವಿಕ್ರಮ (Trivikram) ರವರು  ಎರಡು ಸಿನಿಮಾಗಳನ್ನು ಜಂಟಿಯಾಗಿ ಚಿತ್ರೀಕರಿಸಿ, ಅದೆರಡರಲ್ಲೂ ಕಬೀರ್ ಬೇಡಿಯಂತಹ ವಿಶ್ವದ ಪ್ರಖ್ಯಾತ ನಟನನ್ನು ಕರೆತಂದು ಚಿತ್ರರಂಗದಲ್ಲಿ ಹೊಸ ಸಂಚಲನ ಸ್ರಷ್ಟಿಸಿರುತ್ತಾರೆ.  ಅವರೊಬ್ಬ ದಿಟ್ಟ ನಿರ್ಮಾಪಕ ಎನ್ನುವುವುದಕ್ಕೆ ಇದು ಸಾಕ್ಷಿ.

    Live Tv
    [brid partner=56869869 player=32851 video=960834 autoplay=true]

  • ಸಿನಿಮಾ ನೋಡಲು 5 ಹೆಚ್ಚುವರಿ ಅಂಕ ಮತ್ತು 1 ದಿನ ರಜೆ ಘೋಷಿಸಿದ ಪ್ರಿನ್ಸಿಪಾಲ್: ಪಾಲಕರು ಏನ್ ಹೇಳ್ತಾರೆ?

    ಸಿನಿಮಾ ನೋಡಲು 5 ಹೆಚ್ಚುವರಿ ಅಂಕ ಮತ್ತು 1 ದಿನ ರಜೆ ಘೋಷಿಸಿದ ಪ್ರಿನ್ಸಿಪಾಲ್: ಪಾಲಕರು ಏನ್ ಹೇಳ್ತಾರೆ?

    ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಎರಡನೇ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ತ್ರಿವಿಕ್ರಮ್ ಹೆಸರಿನಲ್ಲಿ ಮೂಡಿ ಬಂದಿರುವ ಸಿನಿಮಾ ಇನ್ನೇನು ಬಿಡುಗಡೆ ಆಗಲಿದೆ. ಹಾಗಾಗಿ ರಾಜ್ಯಾದ್ಯಂತ ಸಿನಿಮಾ ಟೀಮ್ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಅದರಲ್ಲೂ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ವಿಕ್ರಮ್ ಮತ್ತು ತಂಡ ಸಂವಾದ ನಡೆಸುತ್ತಿದೆ. ಹೀಗೆ ಬೆಳಗಾವಿಯ ಕಾಲೇಜಿಗೆ ಹೋದಾಗ, ಅಲ್ಲಿನ ಪ್ರಾಂಶುಪಾಲರು ಭರ್ಜರಿ ಆಫರ್ ಕೊಟ್ಟಿದ್ದಾರೆ.

    ಬೆಳಗಾವಿಯ ಜೈನ್ ಎಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿದ ಸಿನಿಮಾ ತಂಡವನ್ನು ಅಲ್ಲಿನ ಸಿಬ್ಬಂದಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ವಿದ್ಯಾರ್ಥಿಗಳ ಜೊತೆ ಸಿನಿಮಾ ತಂಡ ಮಾತಕತೆ ಮಾಡಿದ ನಂತರ, ಸಿನಿಮಾ ಟೀಮ್ ಮತ್ತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿರುವ ಪ್ರಾಂಶುಪಾಲರು ಈ ಸಿನಿಮಾವನ್ನು ನೋಡಿ, ಟಿಕೆಟ್ ತಂದು ಕೊಟ್ಟವರಿಗೆ ಐದು ಗ್ರೇಸ್ ಮಾರ್ಕ್ಸ್ ಮತ್ತು ಒಂದು ದಿನ ರಜೆ ಕೊಡುವುದಾಗಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಬೈಕಾಟ್ ಸಾಯಿ ಪಲ್ಲವಿ ಫಿಲ್ಮ್ : ಇಂದು ವಿರಾಟ ಪರ್ವಂ ರಿಲೀಸ್

    ಈ ಆಫರ್ ಘೋಷಣೆ ಆಗುತ್ತಿದ್ದಂತೆಯೇ ಕಾಲೇಜಿನ ವಿದ್ಯಾರ್ಥಿಗಳು ಕುಣಿದು ಕುಪ್ಪಳಿಸಿದ್ದಾರೆ. ಆದರೆ, ಒಂದು ಕಂಡಿಷನ್ ಏನು ಅಂದರೆ, ಸಿನಿಮಾವನ್ನು ಶನಿವಾರ ನೋಡಬೇಕು.  ಮತ್ತು ಟಿಕೆಟ್ ಅನ್ನು ಕಡ್ಡಾಯವಾಗಿ ತಂದು ಕಾಲೇಜಿಗೆ ಒಪ್ಪಿಸಬೇಕು. ಈ ಆಫರ್ ಕೇಳಿದ ಪಾಲಕರು ಬೆಚ್ಚಿಬಿದ್ದಿದ್ದಾರೆ. ತಮ್ಮ ಮಕ್ಕಳನ್ನು ಕಾಲೇಜಿಗೆ ಕಳುಹಿಸುವುದು ಯಾಕೆ ಎಂಬ ಪ್ರಶ್ನೆಯನ್ನೂ ಮಾಡಿದ್ದಾರಂತೆ. ಆದರೂ, ಈ ಆಫರ್ ಮಾತ್ರ ಕ್ಯಾನ್ಸಲ್ ಆಗಿಲ್ಲ ಎಂದು ಹೇಳಲಾಗುತ್ತಿದೆ.

    Live Tv