Tag: ತ್ರಿಶೂಲ ದೀಕ್ಷೆ

  • ತ್ರಿಶೂಲ ದೀಕ್ಷೆ, ತರಬೇತಿ ಪ್ರಕರಣ – ಸಾಯಿ ಶಂಕರ ವಿದ್ಯಾ ಸಂಸ್ಥೆಯಿಂದ ಟಿಸಿ ಪಡೆದ ಮೂವರು ಮುಸ್ಲಿಂ ವಿದ್ಯಾರ್ಥಿಗಳು

    ತ್ರಿಶೂಲ ದೀಕ್ಷೆ, ತರಬೇತಿ ಪ್ರಕರಣ – ಸಾಯಿ ಶಂಕರ ವಿದ್ಯಾ ಸಂಸ್ಥೆಯಿಂದ ಟಿಸಿ ಪಡೆದ ಮೂವರು ಮುಸ್ಲಿಂ ವಿದ್ಯಾರ್ಥಿಗಳು

    ಮಡಿಕೇರಿ: ಕೊಡಗಿನ ಶಾಲೆಯಲ್ಲಿ ಭಜರಂಗದಳ ವಿಶ್ವ ಹಿಂದೂ ಪರಿಷತ್‍ನ ಶೌರ್ಯ ಪ್ರಶಿಕ್ಷಣ ತರಬೇತಿ ವಿವಾದದ ವಿಚಾರದಲ್ಲಿ ಕಡೆಗೂ ಶಾಲಾ ಆಡಳಿತ ಮಂಡಳಿ ಮೌನ ಮುರಿದಿದೆ. ಶಾಲೆಯಲ್ಲಿ ಶಸ್ತ್ರಾಸ್ತ್ರ ತರಬೇತಿ ನಡೆದೇ ಇಲ್ಲ ಎಂದು ಶಾಲಾಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಇದರ ನಡುವೆ ಮೂವರು ಮುಸ್ಲಿಂ ವಿದ್ಯಾರ್ಥಿಗಳು ಶಾಲೆ ಬಿಟ್ಟಿರೋದು ಹೊಸ ವಿವಾದಕ್ಕೆ ಮುನ್ನುಡಿ ಬರೆದಿದೆ.

    MDK

    ಕೊಡಗು ಜಿಲ್ಲೆಯ ಪೊನ್ನಂಪೇಟೆ  ತಾಲೂಕಿನ ಶ್ರೀ ಸಾಯಿ ವಿದ್ಯಾ ಸಂಸ್ಥೆಯಲ್ಲಿ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ನಡೆಸಿದ್ದ ತ್ರಿಶೂಲ ದೀಕ್ಷೆ ಹಾಗೂ ಶಸ್ತ್ರಾಸ್ತ್ರ ತರಬೇತಿ ವಿವಾದಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ಮೌನ ಮುರಿದಿದ್ದು, ಶಾಲಾ ವ್ಯಾಪ್ತಿಯಲ್ಲಿ ಬಂದೂಕು ತರಬೇತಿ ನಡೆದಿಲ್ಲ ಎಂದು ಸ್ಪಷ್ಪಡಿಸಿದೆ. ಅಲ್ಲದೆ ರಾಜಕೀಯ ವಿಚಾರಕ್ಕೆ ಶಾಲೆಯ ಹೆಸರನ್ನು ಎಳೆದು ತರದಂತೆ ಮನವಿ ಮಾಡಿದೆ. ಇದೇ ವೇಳೆ ಮಹತ್ವದ ಮಾಹಿತಿ ನೀಡಿರುವ ಶಾಲಾ ಆಡಳಿತ ಮಂಡಳಿ, ದುಬೈ ಕರೆಯ ಬಗ್ಗೆ ಹೊಸ ಬಾಂಬ್ ಸಿಡಿಸಿದೆ. ಪ್ರಕರಣದ ಬಳಿಕ ಹೊರ ದೇಶದಿಂದ ಕರೆ ಬಂದಿದ್ದು, ಕರೆಯ ಪರಿಣಾಮ ಮೂವರು ಮುಸ್ಲಿಂ ವಿದ್ಯಾರ್ಥಿಗಳು ಶಾಲೆಯಿಂದ ಟಿಸಿ ಪಡೆದು ಹೋಗಿದ್ದಾರೆ ಎಂದಿದೆ. ಇದನ್ನೂ ಓದಿ: ಶಾಲೆ ಆವರಣದಲ್ಲೇ ಭಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ

    ಇದು ಸದ್ಯ ಇಡೀ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟಿದೆ. ಮೂವರು ವಿದ್ಯಾರ್ಥಿಗಳ ಪೋಷಕರಿಗೆ ವಿದೇಶದಿಂದ ದೂರವಾಣಿ ಕರೆ ಮಾಡಿ ತಮ್ಮ ಮಕ್ಕಳನ್ನು ಆ ಶಾಲೆಯಲ್ಲಿ ಓದಿಸಬೇಡಿ ಆ ಶಾಲೆಗೆ ನೀವು ಕಟ್ಟಿರುವ ಶಾಲಾ ಶುಲ್ಕವನ್ನು ನಾವು ಪಾವತಿ ಮಾಡುತ್ತೇವೆ. ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಓದುವ ಶಾಲೆಗೆ ಸೇರಿಸುವಂತೆ ಕರೆ ಬಂದಿರುವ ಮಾಹಿತಿ ಇದೆ. ಹಾಗಾಗಿ ಹೊರ ದೇಶದಿಂದ ಕರೆ ಮಾಡಿದವರ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ವಿದೇಶದಿಂದ ಕರೆ ಬಂದಿದ್ದು ಯಾರಿಂದ ಅದನ್ನು ಸಂಬಂಧಿಸಿದಂತೆ ಇಲಾಖೆ ತನಿಖೆ ನಡೆಸಬೇಕು ಎಂದು ವಿಎಚ್‍ಪಿ ಅಧ್ಯಕ್ಷ ಕೃಷ್ಣಮೂರ್ತಿ ಪಟ್ಟುಹಿಡಿದಿದ್ದಾರೆ. ಇದನ್ನೂ ಓದಿ: ಫ್ಯಾಮಿಲಿ ಫೋಟೋ ಶೇರ್ ಮಾಡಿದ ರಶ್ಮಿಕಾ ಮಂದಣ್ಣ

    ಪ್ರಕರಣದ ಕೇಂದ್ರ ಬಿಂದುವಾಗಿದ್ದ ಶ್ರೀ ಸಾಯಿ ವಿದ್ಯಾಸಂಸ್ಥೆ ಕಡೆಗೂ ಮೌನ ಮುರಿದು ಹೊಸ ಬಾಂಬ್ ಸಿಡಿಸಿದೆ. ತರಬೇತಿ ಶಾಲಾ ವ್ಯಾಪ್ತಿಯಲ್ಲಿ ನಡೆದಿಲ್ಲ ಅನ್ನೋದಕ್ಕಿಂತ ಸದ್ಯ ಪ್ರಕರಣದ ಬಳಿಕ ಹೊರ ದೇಶದಿಂದ ಬಂದ ಕರೆ ಹಾಗೂ ಶಾಲೆಯಿಂದ ಮೂವರು ಮುಸ್ಲಿಂ ಮಕ್ಕಳು ಟಿಸಿ ಪಡೆದು ಹೋಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

  • ಶಾಲೆ ಆವರಣದಲ್ಲೇ ಭಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ

    ಶಾಲೆ ಆವರಣದಲ್ಲೇ ಭಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ

    ಮಡಿಕೇರಿ: ರಾಜ್ಯದಲ್ಲಿ ಹಿಜಬ್, ಆಜಾನ್ ಹಾಗೂ ದೇವಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ದಿನವೂ ಹಿಂದೂ ಮುಸ್ಲಿಮರ ನಡುವೆ ಧರ್ಮಯುದ್ಧ ನಡೆಯುತ್ತಿದೆ. ಆದರೂ ಯಾವುದೇ ಕೋಮುಗಲಭೆಗೆ ಅವಕಾಶ ನೀಡುವುದಿಲ್ಲ ಎಂದು ಸಬೂಬು ಹೇಳುತ್ತಿರುವ ಸರ್ಕಾರ ಇದೀಗ ಮತ್ತೊಂದು ವಿವಾದಕ್ಕೆ ದಾರಿಮಾಡಿಕೊಟ್ಟಂತಿದೆ.

    ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲೆಯಲ್ಲಿ ಬಜರಂಗದಳ ದಳದಿಂದ ನೂರಾರು ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಇಂದಿನಿಂದ ಶಾಲೆ ಆರಂಭ – ಈ ವರ್ಷವೂ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ

    MDK

    ಇದರಿಂದ ಶಾಲೆಯ ಆವರಣದಲ್ಲಿ ಹಿಜಬ್‌ಗೆ ಅವಕಾಶ ಇಲ್ಲವೆಂದಿದ್ದ ಸರ್ಕಾರ ಇದೀಗ ಸಂಘ ಪರಿವಾರದಿಂದ ಶಸ್ತ್ರಾಸ್ತ್ರ ತರಬೇತಿಗೆ ಅವಕಾಶ ನೀಡಿದ್ದು ಹೇಗೆ? ಎಂಬ ಅನುಮಾನ ಶುರುವಾಗಿದೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗುತ್ತಿದೆ. 

    ಕೊಡಗಿನ ಪೊನ್ನಂಪೇಟೆ ಸಾಯಿ ಶಂಕರ ಶಾಲೆಯಲ್ಲಿ ಕಳೆದ ವಾರ ಮುಕ್ತಾಯವಾದ ಶೌರ್ಯ ಪ್ರಶಿಕ್ಷಣ ವರ್ಗದಲ್ಲಿ ಬಜರಂಗದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಲಾಗಿದೆ. ಶಾಲಾ ಆವರಣದಲ್ಲೇ ಸುಮಾರು 8 ದಿನಗಳ ಕಾಲ ಶೌರ್ಯ ಪ್ರಶಿಕ್ಷಣ ವರ್ಗದ ತರಬೇತಿ ನಡೆದಿದೆ. ಈ ತರಬೇತಿ ಶಿಬಿರ ನಡೆದ 8 ದಿನಗಳ ಅವಧಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಹಾಗೂ ಜಿಲ್ಲೆಯ ಕೆಲ ಮುಖಂಡರೂ ಪಾಲ್ಗೊಂಡಿದ್ದರು ಎಂದು ಮೂಲಗಳು ಖಚಿತ ಪಡಿಸಿವೆ. ಇದನ್ನೂ ಓದಿ: ಮೇನಲ್ಲೂ ಕೆಆರ್‌ಎಸ್‍ನಲ್ಲಿದೆ 100 ಅಡಿ ನೀರು – ಕೇರಳದಲ್ಲಿ ಭಾರೀ ಮಳೆ

    ರಾಜ್ಯದ ವಿವಿಧೆಡೆಯಿಂದ ಬಂದಿದ್ದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ತರಬೇತಿ ಪಡೆದುಕೊಂಡಿದ್ದಾರೆ. ಶಾಲಾ ಆವರಣದಲ್ಲಿ ಬಂದೂಕು ಹಿಡಿದು ತರಬೇತಿ ಪಡೆಯುತ್ತಿರುವುದು ಹಾಗೂ ಸಂಸ್ಥೆಯ ಸಭಾಂಗಣದಲ್ಲಿ ತ್ರಿಶೂಲ ಹಿಡಿದು ದೀಕ್ಷೆ ಪಡೆಯುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

    ಈ ಕುರಿತು ಟ್ವೀಟ್ ಮೂಲಕ ಆಕ್ಷೇಪ ವ್ಯಕ್ತಪಡಿಸಿರುವ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರು, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಪ್ರಮುಖರಿಗೆ ಟ್ಯಾಗ್ ಮಾಡಿ, ತನಿಖೆ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.