Tag: ತ್ವಚೆ

  • ಬೇಸಿಗೆಯಲ್ಲಿ ನಿಮ್ಮ ತ್ವಚೆ ರಕ್ಷಣೆಗೆ ಹೀಗೆ ಮಾಡಿ

    ಬೇಸಿಗೆಯಲ್ಲಿ ನಿಮ್ಮ ತ್ವಚೆ ರಕ್ಷಣೆಗೆ ಹೀಗೆ ಮಾಡಿ

    ಬೇಸಿಗೆ ಕಾಲ ಆರಂಭವಾಗುತ್ತಿದೆ. ಈಗಾಗಲೇ ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಸಿಲು ಮತ್ತು ಬೆವರು ಇವೆರಡು ತ್ವಚೆಯನ್ನು ಹಾಳು ಮಾಡುತ್ತವೆ. ಇದರ ಜೊತೆಗೆ ತ್ವಚೆಯನ್ನು ಸೂರ್ಯನ ಬೆಳಕಿನಿಂದ ಕಾಪಾಡಿಕೊಳ್ಳುವುದು ಸಹ ತುಂಬಾ ಮುಖ್ಯವಾಗಿದೆ. ಹೀಗಾಗಿ ಬಿಸಿಲಿನಲ್ಲಿ ತ್ವಚೆಯನ್ನು (Skin Care) ಆರೈಕೆಗೆ ಕೆಲವೊಂದು ಸಲಹೆಗಳನ್ನು ಅನುಸರಿಸಿ.

    ದಿನಕ್ಕೆ ಕನಿಷ್ಠ 2 ಬಾರಿ ಮುಖ ಸ್ವಚ್ಛಗೊಳಿಸಿ: ಬೇಸಿಗೆಕಾಲದಲ್ಲಿ ಬಿಸಿಲಿನಿಂದಾಗಿ ಹೆಚ್ಚಾಗಿ ಬೆವರುತ್ತೇವೆ. ಅಷ್ಟೇ ಅಲ್ಲದೇ ಚರ್ಮದಲ್ಲಿಯೂ ಹೆಚ್ಚು ಎಣ್ಣೆ ಅಂಶ ಕಾಣಿಸುತ್ತದೆ. ಇದರಿಂದಾಗಿ ದಿನಕ್ಕೆ 2 ಬಾರಿ ಮುಖವನ್ನು ಸ್ವಚ್ಛಗೊಳಿಸುವುದು ಒಳ್ಳೆಯದು. ಉಗುರು ಬೆಚ್ಚಗಿನ ನೀರಿನಿಂದ ಮುಖವನ್ನು ತೊಳೆಯುವ ಮೊದಲು ಒಂದು ನಿಮಿಷಗಳ ಕಾಲ ಮುಖದ ಮೇಲೆ ಮೃದುವಾದ ಮಸಾಜ್ ಮಾಡಿ.

    ಸನ್‍ಸ್ಕ್ರೀನ್ ಹೆಚ್ಚು ಬಳಸಿ: ಬಿಸಿಲಿನ ಕಿರಣದಿಂದಾಗಿ ಚರ್ಮವು ಸುಡುವುದಷ್ಟೇ ಅಂದ ಕೆಡುತ್ತದೆ. ಹೀಗಾಗಿ ನೀವು ಹೊರಗಡೆ ಹೋಗುವ ಮುನ್ನ ಸನ್‍ಸ್ಕ್ರೀನ್‍ಗಳನ್ನು ಬಳಸುವುದು ಅಗತ್ಯವಾಗಿದೆ. ಇದರಿಂದಾಗಿ ತಕ್ಕಮಟ್ಟಿಗೆ ನಿಮ್ಮ ಚರ್ಮದ ತ್ವಚೆಯು ಕೆಡದಂತೆ ನೋಡಿಕೊಳ್ಳಲು ಸಾಧ್ಯವಾಗುತ್ತದೆ.

    ಅಲೋವೆರಾ (Elovera): ಲೋಳೆರಸ ಬಿಸಿಲಿನಿಂದ ಸುಟ್ಟ ಗಾಯಕ್ಕೆ ಶಮನ ನೀಡುವುದಲ್ಲದೆ, ಚರ್ಮದಲ್ಲಿ ತೇವಾಂಶವನ್ನು ಧನಾತ್ಮಕವಾಗಿ ಕಾಪಾಡುತ್ತದೆ. ತಾಜಾ ಅಲೋವೆರಾ ತೆಗೆದು ಅದನ್ನು ಸಂಪೂರ್ಣವಾಗಿ ಮುಖಕ್ಕೆ ಮಸಾಜ್ ಮಾಡಿ. ಅಲೋವೆರಾ ಲೋಳೆಯನ್ನು ಐಸ್ ಟ್ರೇಗೆ ಹಾಕಿಟ್ಟು ಬಳಿಕ ಅದನ್ನು ಮುಖಕ್ಕೆ ಉಜ್ಜಿಕೊಳ್ಳಿ. ಇದನ್ನೂ ಓದಿ: ತೂಕ ಇಳಿಸಲು ತಲೆಕೆಡಿಸಿಕೊಳ್ಳಬೇಡಿ ತಿನ್ನಿ ಕಲ್ಲಂಗಡಿ ಹಣ್ಣು

    ಸೌತೆಕಾಯಿ: ಸೌತೆಕಾಯಿ (Cucumber) ಬೇಸಿಗೆಯಲ್ಲಿ ಚರ್ಮಕ್ಕೆ ಹಿತ ನೀಡುವುದಲ್ಲದೆ, ತಾಜಾ ಮತ್ತು ಹೊಳೆಯುವಂತೆ ಮಾಡುತ್ತದೆ. ದಿನನಿತ್ಯವು ಸೌತೆಕಾಯಿ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿಕೊಳ್ಳಿ. ಇದರಿಂದ ಬಿಸಿಲಿನಿಂದಾಗುವ ಕಪ್ಪು ಕಲೆಗಳು ಕಡಿಮೆಯಾಗುತ್ತದೆ. ಮುಖಕ್ಕೆ ಸೌತೆಕಾಯಿ, ಮೊಸರು ಲೇಪನವನ್ನು ಹಚ್ಚಿದರೆ ತಂಪಾಗುತ್ತದೆ. ಜೊತೆಗೆ ಹೊಳಪು ಬರುತ್ತದೆ. ಇದನ್ನೂ ಓದಿ: ಮಧುಮೇಹಿಗಳಿಗೆ ಆಹಾರದ ಹೊರತಾಗಿ ಸಕ್ಕರೆ ಮಟ್ಟ ನಿಯಂತ್ರಿಸಲು ಇಲ್ಲಿದೆ ಕೆಲವು ಸಲಹೆ

    ಮಲಗುವ ಮುನ್ನ ಚರ್ಮಕ್ಕೆ ಆರೈಕೆ ಹೀಗಿರಲಿ: ಬೇಸಿಗೆಯಲ್ಲಿ (Summer) ರಾತ್ರಿ ಸಮಯದಲ್ಲಿ ಚರ್ಮದ ಆರೈಕೆಯನ್ನು ಕಡೆಗಣಿಸುವಂತಿಲ್ಲ. ಮಲಗುವ ಮುನ್ನ ಕೊಬ್ಬರಿ ಎಣ್ಣೆ ಹಾಗೂ ನೈಟ್ ಕ್ರೀಮ್‍ಗಳನ್ನು ಬಳಸಿ. ಇದರಿಂದಾಗಿ ಚರ್ಮದದಲ್ಲಿ ಉಂಟಾದ ಡ್ಯಾಮೇಜ್‍ಗಳನ್ನು ಸರಿಪಡಿಸಬಹುದಾಗಿದೆ. ಇದನ್ನೂ ಓದಿ: ನೀವು ವೈನ್‌ ಕುಡಿಯುತ್ತೀರಾ? ವೈನ್‌ ಸೇವಿಸಿದ್ರೆ ಈ 6 ಆರೋಗ್ಯ ಪ್ರಯೋಜನ ಗ್ಯಾರಂಟಿ

  • ಮುಖಕ್ಕೆ ಟೊಮೆಟೊ ಹಚ್ಚಿ  – ಉತ್ತಮ ತ್ವಚೆ ನಿಮ್ಮದಾಗಿಸಿಕೊಳ್ಳಿ

    ಮುಖಕ್ಕೆ ಟೊಮೆಟೊ ಹಚ್ಚಿ – ಉತ್ತಮ ತ್ವಚೆ ನಿಮ್ಮದಾಗಿಸಿಕೊಳ್ಳಿ

    ಟೊಮೆಟೊವನ್ನು ಹೆಚ್ಚಾಗಿ ನಾವು ಪದಾರ್ಥಗಳನ್ನು ತಯಾರಿಸುವಾಗ ಬಳಕೆ ಮಾಡುತ್ತೇವೆ. ಆದರೆ ಇದೇ ತರಕಾರಿಯಿಂದ ನಾವು ಅಡುಗೆಯ ರುಚಿಯನ್ನು ಹೆಚ್ಚಿಸುತ್ತೇವೆ. ಹಾಗೇ ನಮ್ಮ ಮುಖದ ತ್ವಚೆಯ ರಕ್ಷಣೆಯನ್ನೂ ಮಾಡಿಕೊಳ್ಳ ಬಹುದಾಗಿದೆ.

    ಅಂಗಡಿಯಲ್ಲಿ ಸಿಗುವ ಕ್ರೀಮ್‍ಗಳ ಬಳಕೆ ಮಾಡುವ ಬದಲಾಗಿ ಮನೆಯ ಅಡುಗೆ ಮನೆಯಲ್ಲಿ ಪ್ರಮುಖ ಸ್ಥಾನವನ್ನು ಪಡೆದುಕೊಂಡಿರುವ ಟೋಮೆಟೊವನ್ನು ಉಪಯೋಗಿಸಿ ನಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳ ಬಹುದಾಗಿದೆ.

    * ಟೊಮೆಟೊವನ್ನು ಮುಖದ ಮೇಲೆ ಚೆನ್ನಾಗಿ ಉಜ್ಜಿಕೊಂಡು 10-15 ನಿಮಿಷಗಳ ನಂತರ ನೀರಿನಿಂದ ತೊಳೆಯಿರಿ. ನೀವು ಎಣ್ಣೆಯುಕ್ತ ಅಥವಾ ಮೊಡವೆ ಪೀಡಿತ ತ್ವಚೆಯನ್ನು ಹೊಂದಿದ್ದರೆ, ಟೊಮೆಟೊ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಇದು ಮುಖದ ಹೆಚ್ಚುವರಿ ತೈಲವನ್ನು ಹೀರಿಕೊಂಡು, ಮೊಡವೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

    * ಮೊಡವೆಗಳು ಸಾಮಾನ್ಯವಾಗಿ ಚರ್ಮದಲ್ಲಿ ಸಿಕ್ಕಿಹಾಕಿಕೊಂಡಿರುವ ಕೊಳಕು, ತೈಲಗಳಿಂದ ಅಥವಾ ಬ್ಯಾಕ್ಟೀರಿಯಾದಿಂದ ಉಂಟಾಗುತ್ತದೆ. ಟೊಮೆಟೊದಲ್ಲಿ ವಿಟಮಿನ್ ಎ,ಸಿ ಮತ್ತು ಕೆ ಜೊತೆಗೆ ಅದರಲ್ಲಿರುವ ಆಮ್ಲಿಯ ಗುಣಗಳು ಚರ್ಮದ ಕಾಂತಿಯನ್ನು ಕಾಪಾಡುತ್ತವೆ.

    * ಒಂದು ಟೊಮೆಟೊವನ್ನು ಪೇಸ್ಟ್ ಮಾಡಿ, ಅದಕ್ಕೆ ಅದನ್ನು ಮುಲ್ತಾನಿ ಮಿಟ್ಟಿ ಮತ್ತು ಒಂದು ಟೀಸ್ಪೂನ್ ತಾಜಾ ಪುದೀನ ಪೇಸ್ಟ್ ಬೆರೆಸಿ ಫೇಸ್ ಪ್ಯಾಕ್ ಮಾಡಿ  ಮನೆಯೊಳಗೆ ಅಥವಾ ಹೊರಗಿರಲಿ ಸನ್ ಸ್ಕ್ರೀನ್ ಬಳಕೆ ಅತ್ಯಂತ ಮುಖ್ಯ. ಅದು ಇಲ್ಲದಿದ್ದಲ್ಲಿ ಅದರ ಬದಲಿಗೆ ಟೊಮ್ಯಾಟೋವನ್ನು ಬಳಸಬಹುದಾಗಿದೆ.

    * ಟೊಮೆಟೊ ರಸದೊಂದಿಗೆ ಜೇನುತುಪ್ಪವನ್ನು ಬೆರೆಸಿ, ಪೇಸ್ಟ್ ತಯಾರಿಸಿ ಅದನ್ನು ನಿಮ್ಮ ಮುಖಕ್ಕೆ ಹಚ್ಚಿ. ಹೊಳೆಯುವ ತ್ವಚೆಗಾಗಿ 15 ನಿಮಿಷಗಳ ನಂತರ ತೊಳೆಯಿರಿ.ಸುಕ್ಕುಗಳು, ಕಲೆಗಳು, ನಿಮ್ಮ ತ್ವಚೆಯನ್ನು ನಿರ್ಜೀವ ಮತ್ತು ಮಂದವಾಗಿ ಕಾಣುವಂತೆ ಮಾಡುತ್ತದೆ.

    * ಟೊಮೆಟೊ ಫೇಸ್ ಪ್ಯಾಕ್ ನಲ್ಲಿ ಪೋಷಕಾಂಶಗಳು ಅಧಿಕವಾಗಿದ್ದು, ಇದರಲ್ಲಿ ಫೆಮಾಲಿಕ್ ಅಂಶಗಳು ಹೆಚ್ಚಾಗಿರುತ್ತವೆ. ಕ್ಯಾರೋಟನಾಯ್ಡ್, ಫಾಲಿಕ್ ಆಮ್ಲ, ಮತ್ತು ವಿಟಮಿನ್ ಸಿ ಇದೆ. ಚರ್ಮಕ್ಕೆ ಲಾಭ ನೀಡಲಿದೆ. ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಮತ್ತು ಆಂಟಿಟ್ರೋಸಿನೇಸ್ ಗುಣಗಳು ಕಲೆಗಳ ಬಣ್ಣ ಮಾಸುವಂತೆ ಮಾಡುವುದು. ಮತ್ತು ಚರ್ಮಕ್ಕೆ ಹಾನಿಯಾಗದಂತೆ ತಡೆಯುತ್ತದೆ.

  • ಮಳೆಗಾಲದಲ್ಲಿ ಅಂದವಾದ ತ್ವಚೆಯ ಮೇಲೆ ಇರಲಿ ನಿಮ್ಮ ಗಮನ

    ಮಳೆಗಾಲದಲ್ಲಿ ಅಂದವಾದ ತ್ವಚೆಯ ಮೇಲೆ ಇರಲಿ ನಿಮ್ಮ ಗಮನ

    ಳೆಗಾಲ ಅಂದ್ರೆ ಕೆಲವರಿಗೆ ತುಂಬಾ ಕಿರಿಕಿರಿ ಅನಿಸಿದ್ರೆ, ಇನ್ನೂ ಕೆಲವರಿಗೆ ತುಂಬಾ ಇಷ್ಟ. ಈ ಮಧ್ಯೆ ನಾವು ನಮ್ಮ ತ್ವಚೆಯ ಮೇಲೂ ಗಮನಹರಿಸಬೇಕಾದ ಅವಶ್ಯಕತೆ ಇದೆ. ಮಳೆಗಾಲದಲ್ಲಿ ಚರ್ಮದ ತುರಿಕೆ, ಅಲರ್ಜಿ, ಗುಳ್ಳೆ ಮೊದಲಾದ ಸಮಸ್ಯೆಗಳು ಎದುರಾಗುತ್ತವೆ. ಈ ರೀತಿಯ ಸಮಸ್ಯೆಗಳಿಂದ ನಮ್ಮ ತ್ವಚೆಯನ್ನು ಕಾಪಾಡಿಕೊಳ್ಳಬಹುದಾದ ಕೆಲವೊಂದು ಸಲಹೆಗಳನ್ನು ಇಲ್ಲಿ ವಿವರಿಸಲಾಗಿದೆ.

    * ನಿಮ್ಮ ಚರ್ಮ ಒಣಗಿದಂತೆ ಅಥವಾ ತುರಿಕೆ ಕಂಡುಬಂದರೆ ಕೊಬ್ಬರಿ ಎಣ್ಣೆಯನ್ನು ಹಚ್ಚೊ ಅರ್ಧ ಗಂಟೆ ಬಿಟ್ಟು ಬಿಸಿ ನೀರಿನಿಂದ ಸ್ನಾನ ಮಾಡುವುದರಿಂದ ಈ ರೀತಿಯ ಸಮಸ್ಯೆಯಿಂದ ಪಾರಾಗಬಹುದು.

    * ಸ್ನಾನ ಮಾಡಿದ ಬಳಿಕ ಮಾಯಿಸ್ಚರೈಸರ್ ಬಳಕೆ ಮಾಡಿ.

    * ನೀರು, ಜ್ಯೂಸ್ ಹೆಚ್ಚಾಗಿ ಕುಡಿಯಿರಿ. ಹೆಚ್ಚಾಗಿ ಬಿಸಿ ನೀರು ಕುಡಿಯುವುದು ಸೂಕ್ತ. ಅಲ್ಲದೆ ಮುಖವನ್ನು 3-4 ಬಾರಿ ತೊಳೆಯಿರಿ. ಹೀಗೆ ಮಾಡುವುದರಿಂದ ಮೊಡವೆ ಸಮಸ್ಯೆ ಕಡಿಮೆಯಾಗಿ ಆಕರ್ಷಕ ತ್ವಚೆ ಕಾಂತಿ ಪಡೆಯಬಹುದು.

    * ಮುಖದಲ್ಲಿ ಮೊಡವೆ ಹಾಗೂ ಗುಳ್ಳೆಗಳಂತಹ ಸಮಸ್ಯೆಯಿದ್ದರೆ ಮುಲಾಮು ಹಚ್ಚುವ ಬದಲು ಅರಿಶಿಣ ಹಚ್ಚುವುದು ಹೆಚ್ಚು ಸೂಕ್ತ.

    * ನಿಮ್ಮದು ಆಯಿಲ್ ಸ್ಕಿನ್ ಆಗಿದ್ದರೆ ಬೇವಿನ ಎಲೆ ಕುದಿಸಿ ಬಳಿಕ ಆ ನೀರನ್ನು ಸೋಸಿ ತಣಿದ ಬಳಿಕ ಅದರಲ್ಲಿ ಮುಖ ತೊಳೆದುಕೊಳ್ಳಿ.

    * ಮುಖದಲ್ಲಿ ತುರಿಕೆ ಕಾಣಿಸಿಕೊಂಡರೆ 1 ಸ್ಪೂನ್ ಆಲಿವ್ ಎಣ್ಣೆ ಅಥವಾ ಕೊಬ್ಬರಿ ಎಣ್ಣೆಗೆ ಸ್ವಲ್ಪ ಸಕ್ಕರೆ ಬೆರೆಸಿ ಹಚ್ಚಿ 2 ನಿಮಿಷ ಸ್ಕ್ರಬ್ ಮಾಡಿದರೆ ನಿಮ್ಮ ತ್ವಚೆ ಅಂದದ ಜೊತೆ ಮೃದುವಾಗುತ್ತದೆ.

    * ಆಲೂಗಡ್ಡೆಯನ್ನು ಕತ್ತರಿಸಿ, ಅದನ್ನು ಮೊಡವೆ ಮೇಲೆ ಮೆಲ್ಲನೆ ತಿಕ್ಕಿ, ನಂತರ ಆ ರಸ ಒಣಗಿದ ಮೇಲೆ ಮುಖ ತೊಳೆಯಿರಿ. ಹೀಗೆ ಮಾಡಿದರೆ ಆಕರ್ಷಕ ತ್ವಚೆ ಕಾಂತಿ ಪಡೆಯುವುದರಲ್ಲಿ ಎರಡು ಮಾತಿಲ್ಲ.

  • ಮುಖಕ್ಕೆ ಎಂಜಲು ಹಚ್ಚಿಕೊಳ್ಳುತ್ತೇನೆ: ಮಿಲ್ಕಿ ಬ್ಯೂಟಿ ತಮನ್ನಾ

    ಮುಖಕ್ಕೆ ಎಂಜಲು ಹಚ್ಚಿಕೊಳ್ಳುತ್ತೇನೆ: ಮಿಲ್ಕಿ ಬ್ಯೂಟಿ ತಮನ್ನಾ

    ಮುಂಬೈ: ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ತಮ್ಮ ಸೌಂದರ್ಯದ ಗುಟ್ಟನ್ನು ಹೇಳಿದ್ದಾರೆ. ಆದರೆ ಕೋಮಲವಾದ ತಮ್ಮ ತ್ವಚೆಯ ಸೀಕ್ರೆಟ್‍ಅನ್ನು ಹೇಳಿ ಅಭಿಮಾನಿಗಳು ಆಶ್ಚರ್ಯವ್ಯಕ್ತಪಡಿಸಿದ್ದಾರೆ.

    ಸಿನಿರಂಗದಲ್ಲಿ ಮಿಲ್ಕಿ ಬ್ಯೂಟಿ ಎಂದೇ ಖ್ಯಾತರಾಗಿರುವ ತಮನ್ನಾ ಭಾಟಿಯಾ ಅವರ ಬ್ಯೂಟಿ ಸೀಕ್ರೆಟ್ ತಿಳಿದುಕೊಳ್ಳಲು ಅಭಿಮಾನಿಗಳು ಕಾತರರಾಗಿದ್ದರು. ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಮ್ಮ ನುಣುಪಾದ ತ್ವಚೆಯ ಗುಟ್ಟನ್ನು ರಟ್ಟು ಮಾಡಿದ್ದಾರೆ. ಅಭಿಮಾನಿಗಳು ಮಾತ್ರ ನಟಿ ಮಣಿಯ ಸೌಂದರ್ಯದ ಗುಟ್ಟನ್ನು ಕೇಳಿ ಸಖತ್ ಶಾಖ್ ಆಗಿದ್ದಾರೆ.

     

    View this post on Instagram

     

    A post shared by Tamannaah Bhatia (@tamannaahspeaks)

    ಮೊಡವೆ ಸಮಸ್ಯೆ ಇತ್ತು. ಅದನ್ನು ಹೋಗಲಾಡಿಸಲು ತುಂಬ ರೀತಿಯ ಪ್ರಯತ್ನ ಮಾಡಿದೆ. ಕೊನೆಗೆ ನನ್ನ ಮುಖಕ್ಕೆ ನಾನು ಹಚ್ಚಿದ ಅತೀ ವಿಚಿತ್ರ ವಸ್ತು ಎಂದರೆ ಅದು ನನ್ನ ಎಂಜಲಾಗಿದೆ. ಮುಖ್ಯವಾಗಿ ಬೆಳಗಿನಜಾವದ ಸಮಯದಲ್ಲಿ ಬರುವ ಎಂಜಲನ್ನು ಮುಖಕ್ಕೆ ಹಚ್ಚಿಕೊಂಡಿದ್ದೇನೆ. ಕಾರಣ, ಅದಕ್ಕೆ ಮೊಡವೆಗಳನ್ನು ಒಣಗಿಸುವ ಸಾಮಥ್ರ್ಯವಿದೆ. ಈ ಬಗ್ಗೆ ಕೇಳುವುದಕ್ಕೆ ನಿಮಗೆಲ್ಲ ತುಂಬ ವಿಚಿತ್ರ ಎನಿಸಬಹುದು. ಆದರೆ ಇದು ತುಂಬ ಪರಿಣಾಮಕಾರಿಯಾಗಿದೆ. ಕೂದಲ ಆರೈಕೆ ಸಹ ಮನೆಯಲ್ಲಿ ಸಿಗುವ ವಸ್ತುಗಳಿಂದಲೇ ಮಾಡುತ್ತೇನೆ ಎಂದು ಮಿಲ್ಕಿ ಬ್ಯೂಟಿ ಹೇಳಿಕೊಂಡಿದ್ದಾರೆ.

     

    View this post on Instagram

     

    A post shared by Tamannaah Bhatia (@tamannaahspeaks)

    ತಮನ್ನಾಳ ಸೌಂದರ್ಯದ ಗುಟ್ಟನ್ನು ಕೇಳಿದ ಬಹುತೇಕರು ಇದನ್ನು ನಂಬುವುದಕ್ಕೂ ಸಿದ್ಧರಿಲ್ಲ. ಆದರೆ, ಇನ್ನೂ ಕೆಲವರು, ಇದು ನಿಜವಿದ್ದರೂ ಇರಬಹುದು ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆದರೆ ಮಿಲ್ಕಿ ಬ್ಯೂಟಿಯ ಸೌಂದರ್ಯ ರಹಸ್ಯವನ್ನು ತಿಳಿದ ಅನೇಕ ಅಭಿಮಾನಿಗಳು ಹೀಗೂ ನಮ್ಮ ಸೌಂದರ್ಯ ಕಾಪಡಿಕೊಳ್ಳಬಹುದಾ ಎಂದು ಹೇಳುತ್ತಿದ್ದಾರೆ. ಸದ್ಯ ಸಿನಿಮಾ ಮತ್ತು ವೆಬ್ ಸಿರೀಸ್ ಮಾಡುವುದರಲ್ಲಿ ತಮನ್ನಾ ಸಖತ್ ಬ್ಯುಸಿ ಆಗಿದ್ದಾರೆ. ಗೋಪಿಚಂದ್ ಜೊತೆಗೆ ಸೀಟಿ ಮಾರ್, ನಿತಿನ್ ನಟನೆಯ ಮ್ಯಾಸ್ಟ್ರೋ, ಕನ್ನಡ ಲವ್ ಮಾಕ್‍ಟೇಲ್ ರಿಮೇಕ್ ಆದ ಗುತುರ್ಂದ ಸೀತಕಾಲಂ, ಸೇರಿದಂತೆ ಸಾಕಷ್ಟು ಸಿನಿಮಾಗಳು ತಮನ್ನಾ ಕೈಯಲ್ಲಿವೆ.

  • ಬೇಸಿಗೆಯ ಬಿಸಿಲಿಗೆ ಚರ್ಮದ ಕಾಂತಿ ರಕ್ಷಣೆ ಮಾಡೋದು ಹೇಗೆ?

    ಬೇಸಿಗೆಯ ಬಿಸಿಲಿಗೆ ಚರ್ಮದ ಕಾಂತಿ ರಕ್ಷಣೆ ಮಾಡೋದು ಹೇಗೆ?

    ಮಹಿಳೆಯರು ಸೌಂದರ್ಯ ಪ್ರಿಯರು. ತಮ್ಮ ಸೌಂದರ್ಯದ ಕುರಿತಾಗಿ ಕಾಳಜಿಯನ್ನು ವಹಿಸುತ್ತಾರೆ. ಬೇಸಿಗೆಯಲ್ಲಿ ಸೂರ್ಯನ ಕಿರಣಗಳಿಂದ ಚರ್ಮ ಬಣ್ಣವು ಕಂದು ಬಣ್ಣಕ್ಕೆ ತಿರುಗುವುದು ಸಾಮಾನ್ಯ. ಇಂತಹ ಸಮಸ್ಯೆಗೆ ಕೆಲವು ಮನೆ ಮನೆಮದ್ದು ಮತ್ತು ಕೆಲವು ಕ್ರಮಗಳನ್ನು ಅನುಸರಿಸುವುದರಿಂದ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಬಹುದಾಗಿದೆ.

    * ಬಿಸಿಲಿನಲ್ಲಿ ಹೊರಗಡೆ ಸುತ್ತಾಡಿ ಬಂದಿದ್ದೀರಾ ಎಂದಾದರೆ ತಣ್ಣನೆಯ ನೀರಿನಲ್ಲಿ ಸ್ನಾನ ಮಾಡುವುದು ಉತ್ತಮ. ತ್ವಚೆಯ ತಾಪಮಾನ ಕುಗ್ಗುವುದರಿಂದ ತ್ವಚೆ ಕಪ್ಪಾಗುವುದನ್ನು ತಪ್ಪಿಸಬಹುದಾಗಿದೆ.

    * ಬಿಸಿಲಿನಲ್ಲಿ ಹೋಗಲೇಬೇಕಾದ ಅನಿವಾರ್ಯತೆ ಇದ್ದರೆ, ಪ್ರತಿ 2 ಗಂಟೆಗಳಿಗೊಮ್ಮೆ ಮಾರುಕಟ್ಟೆಯಲ್ಲಿ ಸಿಗುವ ಸನ್‍ಸ್ಕ್ರೀನ್ ಲೋಶನ್ ಚರ್ಮಗಳಿಗೆ ಹಚ್ಚ ಬಹುದಾಗಿದೆ.

    * ಬಿಸಿಲು ಮುಖಕ್ಕೆ ತಾಗದಂತೆ ಹ್ಯಾಟ್ ಹಾಕಿ, ಸ್ಟಾಲ್ ಉಪಯೋಗಿಸಿ, ಬಿಸಿಲಿನಲ್ಲಿ ಚಲಿಸುವಾಗ ಕೊಡೆ ಬಳಸಿ ಸೂರ್ಯನ ಪ್ರಖರ ಬಿಸಿಲಿನಿಂದ ಚರ್ಮವನ್ನು ರಕ್ಷಿಸಿಕೊಳ್ಳಬಹುದು.

    * ಬೇಸಿಗೆ ಕಾಲದಲ್ಲಿ ದೇಹ ತ್ವಚೆ ಡ್ರೈ ಆಗುತ್ತಿರುತ್ತದೆ. ವಿಟಮಿನ್‍ಗಳನ್ನು ಹೊಂದಿರುವ ಹಣ್ಣು ಹಂಪಲುಗಳು, ಹಣ್ಣಿನ ರಸವನ್ನು ಸೇವಿಸಿ ದೇಹವನ್ನು ತಂಪಾಗಿರಿಸುವ ಮೂಲಕವೂ ಚರ್ಮದ ಕಾಂತಿಯನ್ನು ಕಾಪಾಡಬಹುದಾಗಿದೆ.

    * ಸಹಜವಾಗಿಯೇ ಬೇಸಿಗೆಯಲ್ಲಿ ಹೆಚ್ಚು ಬೆವರುತ್ತೇವೆ. ಆದ್ದರಿಂದ ಚರ್ಮದಲ್ಲಿ ತೇವಾಂಶ ಇರುವಂತೆ ನೋಡಿಕೊಳ್ಳಬೇಕು. ಹೀಗಾಗಿ ಕನಿಷ್ಠ ದಿನಕ್ಕೆ 3-4 ಲೀಟರ್ ನೀರು ಕುಡಿಯುವುದು ಒಳ್ಳೆಯದು.

    * ನಿಂಬೆ ರಸಕ್ಕೆ ಮೊಸರು ಅಥವಾ ಸ್ವಲ್ಪ ಜೇನುತುಪ್ಪ ಬೆರೆಸಿ ಮುಖಕ್ಕೆ ಹಚ್ಚಿ 10-15 ನಿಮಿಷ ಬಿಟ್ಟು ಮುಖ ತೊಳೆದರೆ ಫ್ರೆಶ್ ಅನ್ನಿಸುತ್ತದೆ.


    * ಬೇಸಿಗೆಯಲ್ಲಿ ತಣ್ಣಿರಿನಿಂದ ಮುಖ ತೊಳೆಯಿರಿ. ಮೆತ್ತನೆಯ ಬಟ್ಟೆಯಿಂದ ಮುಖ ಒರೆಸಿ, ರೋಸ್ ವಾಟರ್ ಹಚ್ಚಬಹುದಾಗಿದೆ.

    * ಮೊಸರಿನ ಜೊತೆ ಕಡ್ಲೆಹಿಟ್ಟು ಅಥವಾ ಅರಿಶಿಣ ಬೆರೆಸಿ ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಇಮ್ಮಡಿಯಾಗುತ್ತದೆ.

    * ಬೇಸಿಗೆಯಲ್ಲಿ ಮನೆಯಿಂದ ಹೊರಗೆ ಹೋದಾಗ ಧೂಳು ಮುಖ ಮತ್ತು ಶರೀರದ ಮೇಲೆ ಕೂರುತ್ತದೆ. ಅದಕ್ಕೆ ಕನಿಷ್ಠ ದಿನಕ್ಕೆರಡು ಬಾರಿ ತಣ್ಣೀರಿನಿಂದ ಮುಖ ತೊಳೆಯಿರಿ. ಬಿಸಿಲಿಗೆ ಕಪ್ಪು ಚುಕ್ಕೆ, ತುರಿಕೆ, ನವೆ ಉಂಟಾದರೆ ಮೊಸರು, ಟೊಮ್ಯಾಟೊ, ಲಿಂಬೆಹಣ್ಣಿನ ಜ್ಯೂಸ್ ಹಚ್ಚಬಹುದು.

  • ನಿಮ್ಮ ತ್ವಚೆಗೆ ಸೂಟ್ ಆಗುವ ಲಿಪ್‍ಸ್ಟಿಕ್ ಆಯ್ಕೆ ಮಾಡುವುದೇಗೆ ಗೊತ್ತಾ?

    ನಿಮ್ಮ ತ್ವಚೆಗೆ ಸೂಟ್ ಆಗುವ ಲಿಪ್‍ಸ್ಟಿಕ್ ಆಯ್ಕೆ ಮಾಡುವುದೇಗೆ ಗೊತ್ತಾ?

    ಸಾಮಾನ್ಯವಾಗಿ ಬಟ್ಟೆ, ಒಡವೆ, ಚಪ್ಪಲಿ ಮೇಕಪ್ ಮೇಲೆ ಆಸಕ್ತಿ ತೋರಿಸುವ ಹುಡುಗಿಯರು ಲಿಪ್‍ಸ್ಟಿಕ್ ಮೇಲೆ ಕೂಡ ಹೆಚ್ಚು ಗಮನ ಹರಿಸುತ್ತಾರೆ ಎಂದರೆ ತಪ್ಪಾಗಲಾರದು. ಲಿಪ್‍ಸ್ಟಿಕ್ ತುಟಿಯ ಅಂದವನ್ನು ಹೆಚ್ಚಿಸುವುದಾಗಿದ್ದು, ಸೀರೆ, ಮಾಡೆರ್ನ್ ಹೀಗೆ ನಾವು ಧರಿಸುವ ಎಲ್ಲಾ ರೀತಿಯ ಬಟ್ಟೆಗಳಿಗೂ ಸುಂದರವಾಗಿ ಕಾಣಿಸುತ್ತದೆ. ಚಿಕ್ಕ ಮಕ್ಕಳಿನಿಂದ ಹಿಡಿದು ದೊಡ್ಡವರ ತನಕ ಕೂಡ ಲಿಪ್‍ಸ್ಟಿಕ್ ಹೆಣ್ಣು ಮಕ್ಕಳಿಗೆ ಪ್ರಿಯವಾದ ವಸ್ತು.

    ಫ್ಯಾಷನ್ ಕೂಡ ನೀವು ಬಳಸುವ ಲಿಪ್‍ಸ್ಟಿಕ್ ಮೇಲೆ ಆಧಾರಿತವಾಗಿರುತ್ತದೆ. ಎಲ್ಲಾ ರೀತಿಯ ತ್ವಚೆಗಳಿಗೆ ಎಲ್ಲಾ ಬಣ್ಣದ ಲಿಪ್‍ಸ್ಟಿಕ್ ಸೂಟ್ ಆಗುವುದಿಲ್ಲ. ಫ್ಯಾಷನ್ ಬ್ರಾಂಡ್‍ಗಳು ಕೂಡ ತ್ವಚೆಯ ಮೇಲೆ ಕೇಂದ್ರೀಕರಿಸುತ್ತವೆ. ಹಾಗಾಗಿ ನಮ್ಮ ಮೈ ಬಣ್ಣಕ್ಕೆ ಸೂಟ್ ಆಗುವಂತಹ ಲಿಪ್‍ಸ್ಟಿಕ್‍ಗಳನ್ನು ಬಳಸಬೇಕು. ಆದರೆ ಲಿಪ್‍ಸ್ಟಿಕ್ ಬಗ್ಗೆ ತಿಳಿಯದೇ ಇರುವವರು ಎಲ್ಲಾ ರೀತಿಯ ಲಿಪ್‍ಸ್ಟಿಕ್ ಗಳನ್ನು ಬಳಸುತ್ತಾರೆ. ಅಂತಹವರಿಗೆ ತಮ್ಮ ಮೈ ಬಣ್ಣಕ್ಕೆ ಸರಿಹೊಂದುವಂತಹ ಲಿಪ್‍ಸ್ಟಿಕ್ ಗಳನ್ನು ಹೇಗೆ ಆಯ್ಕೆ ಮಾಡಬೇಕು ಎಂಬ ವಿಚಾರ ಕುರಿತಂತೆ ಒಂದಷ್ಟು ಟಿಪ್ಸ್ ಈ ಕೆಳಗಿನಂತಿವೆ.

     

    ಲಿಪ್‍ಸ್ಟಿಕ್ ಖರೀದಿಸುವುದು ಹೇಗೆ?
    ಸಾಮಾನ್ಯವಾಗಿ ಲಿಪ್‍ಸ್ಟಿಕ್ ಖರೀದಿಸಲು ಹೋದಾಗ ಹುಡುಗಿಯರು ತಮ್ಮ ಕೈ ಬೆರಳಿನ ತುದಿಯಲ್ಲಿ ಲಿಪ್‍ಸ್ಟಿಕ್ ಅನ್ನು ಹಚ್ಚಿ ಪ್ರಯತ್ನಿಬೇಕು. ನಿಮ್ಮ ಕೈ ಬಣ್ಣವು ನಿಮ್ಮ ತುಟಿಯ ಬಣ್ಣಕ್ಕಿಂತ ವಿಭಿನ್ನವಾಗಿರುತ್ತದೆ. ಹಾಗಾಗಿ ಕೈ ಮೇಲೆ ಹಚ್ಚಿದ ಲಿಪ್‍ಸ್ಟಿಕ್ ನನ್ನು ಮುಖದ ಪಕ್ಕ ಇರಿಸಿಕೊಂಡು ಕನ್ನಡಿ ಮುಂದೆ ನಿಂತು ಪರಿಶೀಲಿಸಬೇಕು. ಬಳಿಕ ಆ ಬಣ್ಣವು ನಿಮ್ಮ ಲಿಪ್‍ಗೆ ಸೂಟ್ ಆಗುತ್ತದೆ ಎಂದರೆ ಅದನ್ನು ನೀವು ಆಯ್ಕೆ ಮಾಡಿಕೊಳ್ಳಬಹುದು.

    ಸ್ಕಿನ್ ಟೋನ್‍ಗಳಿಗೆ ಸೂಟ್ ಆಗುವ ಲಿಪ್‍ಸ್ಟಿಕ್ ಯಾವುದು?
    ಲಿಪ್‍ಸ್ಟಿಕ್ ಬಣ್ಣ ನಿಮಗೆ ಸುಂದರವಾಗಿ ಕಾಣಿಸುತ್ತದೆಯೇ ಎಂದು ತಿಳಿಯಲು ಮೊದಲು ನಿಮ್ಮ ತ್ವಚೆ ಬಿಳಿಯೋ, ಕಪ್ಪೋ, ಗೋಧಿ ಮೈ ಬಣ್ಣದ ತ್ವಚೆಯೋ ಎಂಬುವುದನ್ನು ಅರಿತುಕೊಳ್ಳಬೇಕು.

    ಬಿಳಿ ಬಣ್ಣದ ತ್ವಚೆ: ಬಿಳಿ ಬಣ್ಣದ ಮೈ ಕಾಂತಿ ಹೊಂದಿರುವವರಿಗೆ ಮೀಡಿಯಂ ಬಣ್ಣದ ಲಿಪ್‍ಸ್ಟಿಕ್ ಗಳು ಸುಂದರವಾಗಿ ಕಾಣಿಸುತ್ತದೆ. ಅದರಲ್ಲಿಯೂ ಕಂದು ಬ್ರೌನ್ ಬಣ್ಣದ ಲಿಪ್‍ಸ್ಟಿಕ್ ಹಾಗೂ ಕಿತ್ತಳೆ(ಆರೆಂಜ್) ಬಣ್ಣದ ಲಿಪ್‍ಸ್ಟಿಕ್ ನಿಮಗೆ ಎದ್ದು ಕಾಣಿಸುತ್ತದೆ.

    ಗೋಧಿ ಬಣ್ಣದ ತ್ವಚೆ: ಗೋಧಿ ಬಣ್ಣದ ಮೈ ಕಾಂತಿ ಹೊಂದಿರುವವರು ಬ್ರೌನ್ ಕಲರ್ ಮತ್ತು ಪೀಚ್ ಕಲರ್ ಲಿಪ್‍ಸ್ಟಿಕ್ ಉಪಯೋಗಿಸಬೇಕು. ಇದು ನಿಮ್ಮ ತುಟಿಗೆ ಸುಂದರವಾಗಿ ಕಾಣಿಸುತ್ತದೆ.

    ಕಂದು ಬಣ್ಣದ ತ್ವಚೆ: ಬ್ರೌನ್, ಬೆರ್ರಿ ಶೇಡ್‍ಗಳು, ಕಿತ್ತಳೆ ಮತ್ತು ಕೆಂಪು ಬಣ್ಣದ ಲಿಪ್‍ಸ್ಟಿಕ್ ಗಳು ಕಂದು ಬಣ್ಣದ ಮೈ ಕಾಂತಿ ಹೊಂದಿರುವ ನಿಮ್ಮ ತುಟಿಗಳಿಗೆ ಆಕರ್ಷಕವಾಗಿ ಕಂಗೊಳಿಸುತ್ತದೆ.

    ಕಪ್ಪು ಬಣ್ಣದ ತ್ವಚೆ: ನಿಮ್ಮ ಮೈ ಕಾಂತಿ ಕಪ್ಪಾಗಿದ್ದರೆ ಬ್ರೌನ್, ಕೆಂಪು ಮತ್ತು ನೇರಳೆ ಬಣ್ಣದಂತಹ ಲಿಪ್‍ಸ್ಟಿಕ್ ಗಳನ್ನು ಆಯ್ಕೆ ಮಾಡುವುದು ಉತ್ತಮ. ಈ ಬಣ್ಣ ಹೊಂದಿರುವವರಿಗೆ ಕಿತ್ತಳೆ ಬಣ್ಣದ ಲಿಪ್‍ಸ್ಟಿಕ್ ಸೂಟ್ ಆಗುವುದಿಲ್ಲ. ಹಾಗಾಗಿ ಆ ಬಣ್ಣದ ಲಿಪ್‍ಸ್ಟಿಕ್ ನಿಂದ ದೂರವಿರಿ.

  • ಅರಿಶಿಣ, ಕೊಬ್ಬರಿ ಎಣ್ಣೆ, ಕಹಿಬೇವು, ಕಡಲೆಹಿಟ್ಟಿನಿಂದ ಮಳೆಗಾಲದಲ್ಲಿ ತ್ವಚೆಯ ರಕ್ಷಣೆ

    ಅರಿಶಿಣ, ಕೊಬ್ಬರಿ ಎಣ್ಣೆ, ಕಹಿಬೇವು, ಕಡಲೆಹಿಟ್ಟಿನಿಂದ ಮಳೆಗಾಲದಲ್ಲಿ ತ್ವಚೆಯ ರಕ್ಷಣೆ

    ನೇಕ ದಿನಗಳಿಂದ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಈ ನಡುವೆ ಮಳೆಯಲ್ಲಿ ಆರೋಗ್ಯ ರೀತಿಯ ತ್ವಚೆಯ ರಕ್ಷಣೆ ಮಾಡಿಕೊಳ್ಳಬೇಕು. ಮಳೆಗಾಲದಲ್ಲಿ ಶೀತ, ಉಸಿರಾಟದ ತೊಂದರೆ ಮತ್ತು ಚರ್ಮದ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಕಾಲಕ್ಕೆ ತಕ್ಕಂತೆ ನಮ್ಮ ತ್ವಚೆಯ ರಕ್ಷಣೆ ಮಾಡಿಕೊಳ್ಳುವುದು ಮುಖ್ಯವಾಗಿರುತ್ತದೆ. ಇದನ್ನೂ ಓದಿ: ಪುರುಷರ ತ್ವಚೆಯ ರಕ್ಷಣೆಗಾಗಿ ನಾಲ್ಕು ಸರಳ ಹೆಲ್ತ್ ಟಿಪ್ಸ್

    ಸಾಮಾನ್ಯವಾಗಿ ಮಳೆಗಾಲದಲ್ಲಿ ವಾತಾವರಣದಲ್ಲಿ ಅಧಿಕ ತೇವಾಂಶವಿರುತ್ತದೆ. ಇದರಿಂದ ಚರ್ಮದಲ್ಲಿ ತುರಿಕೆ, ಅಲರ್ಜಿ, ಒಡಕು ಇಂತಹ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಈ ರೀತಿ ಸಮಸ್ಯೆಗಳಿಂದ ಚರ್ಮವನ್ನು ರಕ್ಷಿಸಿಕೊಳ್ಳಲು ಅನುಸರಿಸಬೇಕಾದರೆ ಕೆಲ ಉಪಯುಕ್ತ ಸಲಹೆಗಳು ನಿಮಗಾಗಿ ಇಲ್ಲಿವೆ.

    * ಮಳೆಗಾಲದಲ್ಲಿ ನಮ್ಮ ರೋಗ-ನಿರೋಧಕ ಶಕ್ತಿಯನ್ನು ನಾವು ಹೆಚ್ಚಿಸಿಕೊಳ್ಳಬೇಕಾದ ಅಗತ್ಯತೆ ಇದೆ. ಏಕೆಂದರೆ ಸೋಂಕುಗಳ ಹಾವಳಿ ಈ ಸಮಯದಲ್ಲಿ ಹೆಚ್ಚಾಗಿರುವುದರಿಂದ ನಮ್ಮ ಆರೋಗ್ಯ ಬೇರೆ ಸಮಯಕ್ಕೆ ಹೋಲಿಸಿದರೆ ಮಳೆಗಾಲದಲ್ಲಿ ಹೆಚ್ಚು ಹದಗೆಡುತ್ತದೆ. ಹಾಗಾಗಿ ಬೆಳಗಿನ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರಿಗೆ ಸ್ವಲ್ಪ ಜೇನು ತುಪ್ಪವನ್ನು ಹಾಕಿ ಕುಡಿಯುವ ಅಭ್ಯಾಸವನ್ನು ಮಾಡಿಕೊಳ್ಳಬೇಕು. ಇದು ದೇಹದಿಂದ ವಿಷಕಾರಿ ಅಂಶಗಳನ್ನು ಮತ್ತು ಸೋಂಕುಕಾರಕ ಕ್ರಿಮಿಗಳನ್ನು ಹೊರಹಾಕುವಲ್ಲಿ ತುಂಬಾ ಸಹಾಯಕ.

    * ಮಳೆಗಾಲದಲ ವಾತಾವರಣದಲ್ಲಿ ತೇವಾಂಶ ಅಧಿಕವಿರುವುದರಿಂದ ತ್ವಚೆಯಲ್ಲಿ ತುರಿಕೆ. ಅಲರ್ಜಿ ಮುಂತಾದ ಸಮಸ್ಯೆ ಕಂಡು ಬರುವ ಸಾಧ್ಯತೆ ಹೆಚ್ಚು. ಹೀಗಾಗಿ ಲೋಳೆಸರದಲ್ಲಿ ಏನಾದರೂ ತ್ವಚೆ ಅಲರ್ಜಿ ಆಗಿದ್ದರೆ ಅದನ್ನು ಗುಣಪಡಿಸುವ ಸಾಮರ್ಥ್ಯ ಇದೆ. ತಾಜಾ ಲೋಳೆಸರವನ್ನು ತ್ವಚೆ ಅಲರ್ಜಿಯಾಗಿರುವ ಜಾಗಕ್ಕೆ ಹಚ್ಚಿದರೆ ಅಲರ್ಜಿ ಕಡಿಮೆಯಾಗುವುದು. ಅಲ್ಲದೆ ಲೋಳೆಸರ ಹಚ್ಚುವುದರಿಂದ ತ್ವಚೆ ಕಾಂತಿ ಹೆಚ್ಚುವುದು.
    * ಕಹಿಬೇವಿನಲ್ಲಿ ಸೋಂಕು ನಿವಾರಕ ಗುಣವಿದೆ. ಹೀಗಾಗಿ ಮೊಡವೆ, ಕಪ್ಪು ಕಲೆ, ಮೈ ಮೇಲೆ ಗುಳ್ಳೆಗಳು ಇವುಗಳನ್ನು ಗುಣಪಡಿಸುವಲ್ಲಿ ಕಹಿಬೇವು ಸಹಕಾರಿ.

    * ಮೊಡವೆ, ಕಪ್ಪುಕಲೆ ಮುಂತಾದ ತೊಂದರೆಗೆ ಮುಖಕ್ಕೆ ಅರಿಶಿಣ ಹಚ್ಚಿದರೆ ಒಳ್ಳೆಯದು. ಅರಿಶಿಣವನ್ನು ಆಹಾರದಲ್ಲಿ ಬಳಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಮಳೆಗಾಲದ ಆಹಾರದಲ್ಲಿ ಅರಿಶಿಣ ಇರಬೇಕು.
    * ಬಿಸಿ ನೀರಿಗೆ ಒಂದು ಚಮಚ ಕೊಬ್ಬರಿ ಎಣ್ಣೆ ಹಾಕಿ ಸ್ನಾನ ಮಾಡುವುದು. ಇದರಿಂದ ಚರ್ಮದಲ್ಲಿನ ಡ್ರೈನೆಸ್ ಹೋಗುತ್ತದೆ.
    * ತ್ವಚೆ ಒಣಗಿದಂತೆ ಅಥವಾ ತುರಿಕೆಯಂತಹ ಸಮಸ್ಯೆ ಕಂಡುಬಂದರೆ ಕೊಬ್ಬರಿ ಎಣ್ಣೆಯನ್ನು ಮೈಗೆ ಹಚ್ಚಿ, ಅರ್ಧ ಗಂಟೆ ಬಿಟ್ಟು ಬಿಸಿ ನೀರಿನಿಂದ ಸ್ನಾನ ಮಾಡುವುದು.
    * ಸ್ನಾನದ ನೀರಿನಲ್ಲಿ ಗುಲಾಬಿ ಎಸಳುಗಳನ್ನು ಹಾಕಿ ಕೆಲ ಸಮಯದ ಬಳಿಕ ಆ ನೀರಿನಲ್ಲಿ ಸ್ನಾನ ಮಾಡಬೇಕು. ಇದರಿಂದ ಮಳೆಗಾಲದಲ್ಲಿ ತ್ವಚೆ ಕಾಂತಿಯುತವಾಗಿರುತ್ತದೆ.

    * ಮುಖದಲ್ಲಿ ತುರಿಕೆಯಂತಹ ಸಮಸ್ಯೆ ಇದ್ದರೆ ಒಂದು ಚಮಚ ಕೊಬ್ಬರಿ ಎಣ್ಣೆಗೆ ಸ್ವಲ್ಪ ಸಕ್ಕರೆ ಬೆರೆಸಿ ಹಚ್ಚಿ. ಎರಡು ನಿಮಷ ಸ್ಕ್ರಬ್ ಮಾಡಿ. ಬೆಚ್ಚಗಿನ ನೀರಿನಲ್ಲಿ ಮುಖ ತೊಳೆದುಕೊಳ್ಳಿ.
    * ಹೆಚ್ಚಾಗಿ ನೀರು ಕುಡಿಯುವುದು ಕೂಡ ತ್ವಚೆಯ ರಕ್ಷಣೆಗೆ ಉಪಯೋಗಕಾರಿ
    * ಮುಖದಲ್ಲಿ ಮೊಡವೆ, ಗುಳ್ಳೆಗಳಂತಹ ಸಮಸ್ಯೆಯಿದ್ದರೆ ಆಯಿಂಟ್‍ಮೆಂಟ್ ಬದಲಾಗಿ ಅರಿಶಿಣ ಹಚ್ಚುವುದು ಉತ್ತಮ.
    * ಮಳೆಗಾಲದಲ್ಲಿ ವಾರಕ್ಕೊಮ್ಮೆ ತಲೆ ಸ್ನಾನ ಮಾಡುವುದು ಉತ್ತಮ. ತೇವ ಇರುವಾಗಲೇ ಕೂದದಲನ್ನು ಬಾಚಬಾರದು. ಆದಷ್ಟೂ ಬಿಸಿಲಿನಲ್ಲಿ ಕೂದಲನ್ನು ಒಣಗಿಸಬೇಕು.

    * ಎಣ್ಣೆ ಚರ್ಮದವರು ಮುಣದ ಅಂದವನ್ನು ಕಾಪಾಡಿಕೊಳ್ಳಲು ಸೋಪು ಬಳಸುವುದುಕ್ಕಿಂತ ಕಡಲೆಹಿಟ್ಟಿನಿಂದ ಮುಖ ತೊಳೆಯುವುದು ಉತ್ತಮ.
    * ಪಪ್ಪಾಯ ಹಣ್ಣನ್ನು ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಎಣ್ಣೆ ಅಂಶ ಕಡಿಮೆಯಾಗುವಂತೆ ಮಾಡಬಹುದು.

  • ಬಣ್ಣಗಳಲ್ಲಿ ಮಿಂದೇಳುವ ಮುನ್ನ ತ್ವಚೆಯ ಬಗ್ಗೆ ಎಚ್ಚರ – ಸರಳವಾದ ಸಲಹೆಗಳು ಇಲ್ಲಿವೆ

    ಬಣ್ಣಗಳಲ್ಲಿ ಮಿಂದೇಳುವ ಮುನ್ನ ತ್ವಚೆಯ ಬಗ್ಗೆ ಎಚ್ಚರ – ಸರಳವಾದ ಸಲಹೆಗಳು ಇಲ್ಲಿವೆ

    ಕೆಲ ದಿನಗಳಲ್ಲಿ ಬಣ್ಣಗಳ ಹೋಳಿ ಹಬ್ಬ ಬಂದೇ ಬಿಡುತ್ತದೆ. ಎಲ್ಲರೂ ಓಕುಳಿ ಹಬ್ಬದಲ್ಲಿ ಮಿಂದೇಳಲು ಈಗಿನಿಂದಲೇ ಸಿದ್ಧರಾಗುತ್ತಿದ್ದೀರ. ಫಾಲ್ಗುಣ ಮಾಸದ ಹುಣ್ಣಿಮೆಯ ದಿನ ಬಣ್ಣದ ಹಬ್ಬವನ್ನು ಆಚರಿಸುತ್ತೇವೆ. ವಿಶೇಷ ಪೂಜೆ ಮಾಡಿ ಸಿಹಿ ಹಂಚಿ ಕಾಮನ ದಹನ ಮಾಡಿ ಸಂಭ್ರಮಿಸುತ್ತೇವೆ. ಜೊತೆಗೆ ಎಲ್ಲದರಗಿಂತ ಮಿಗಿಲಾಗಿ ಪರಸ್ಪರ ಬಣ್ಣವನ್ನು ಹಚ್ಚಿಕೊಂಡು ಫುಲ್ ಎಂಜಾಯ್ ಮಾಡುತ್ತೀರಿ.

    ಆದರೆ ಎಲ್ಲಿಂದರಲ್ಲಿ ಕಡಿಮೆ ಬೆಲೆಗೆ ಸಿಗುವ ಬಣ್ಣಗಳ ಖರೀದಿ ಬಗ್ಗೆ ಎಚ್ಚರವಿರಬೇಕು. ಕೆಲ ಹೊತ್ತಿನ ಬಣ್ಣ ಬದುಕಿನ ರಂಗನ್ನೇ ಕಿತ್ತುಕೊಳ್ಳಬಾರದು. ಹೀಗಾಗಿ ರಾಸಾಯನಿಕ ಮಿಶ್ರಿತ ಬಣ್ಣಗಳಿಂದ ದೂರವಿದ್ದರೆ ಒಳಿತು. ನಿಮ್ಮ ಚರ್ಮ, ತ್ವಚೆ, ಕೂದಲಿನ ಆರೋಗ್ಯದ ಬಗ್ಗೆ ತುಂಬಾನೇ ಜಾಗ್ರತೆ ವಹಿಸಬೇಕು. ಹಾಗಾದರೆ ಆರೋಗ್ಯಕರ ಕಲರ್ ಫುಲ್ ಹೋಳಿಯಾಟ ಹೇಗೆ ಆಡಬೇಕು ಎಂಬ ಬಗ್ಗೆ ಸರಳವಾದ ಸಲಹೆಗಳು ನಿಮಗಾಗಿ. ಒಮ್ಮೆ ಈ ಸಲಹೆಗಳನ್ನು ಪಾಲಿಸಿ ನೋಡಿ ನೀವು ಕಾಮನ ಹಬ್ಬಕ್ಕಿಂತಲೂ ಹೆಚ್ಚು ಸಂಭ್ರಮಿಸುತ್ತೀರ.

    ಸಲಹೆಗಳು:
    * ಮೊಟ್ಟಮೊದಲಿಗೆ ಹೋಳಿ ಹಬ್ಬಕ್ಕೆ ಪರಿಸರ ಸ್ನೇಹಿ ಬಣ್ಣ ಬಳಸಿರಿ.
    * ಒತ್ತಾಯದಿಂದ ಬಣ್ಣ ಎರಚುವುದು, ತಲೆ ಮೇಲೆ ಮೊಟ್ಟೆ ಒಡೆಯುವುದು, ಕೊಳತೆ ತರಕಾರಿ ಬಳಕೆ ಬೇಡ.
    * ಚರ್ಮದ ಸಮಸ್ಯೆ ಹಾಗೂ ಅಲರ್ಜಿ ಇರುವವರು ಬಣ್ಣದಾಟದಿಂದ ಹೊರಗಿದ್ದರೆ ಒಳಿತು. ಇಲ್ಲವಾದಲ್ಲಿ ಧೂಳು, ರಾಸಾಯನಿಕ ನಿಮ್ಮ ದೇಹ ಸೇರಿ ಉಸಿರಾಟ ಸಮಸ್ಯೆ, ಕೆಮ್ಮು, ಅಸ್ತಮಾ ಸಮಸ್ಯೆ ಎದುರಾಗಬಹುದು.
    * ಆಚರಣೆ ಬಳಿಕ ಉತ್ತಮವಾದ ಸೋಪ್ ಬಳಿಸಿ ಸ್ನಾನ ಮಾಡುವುದು ಅಗತ್ಯ.
    * ರಾಸಾಯನಿಕ ಮಿಶ್ರಣದ ಬಣ್ಣದ ಬಳಕೆಯಿಂದ ಕಣ್ಣಿಗೆ ಹಾನಿಯಾಗುತ್ತದೆ. ಆದ್ದರಿಂದಲೇ ನ್ಯಾಚುರಲ್ ಕಲರ್ ಬಳಸಬೇಕು. ಕಣ್ಣಿನ ಹಾನಿ ತಪ್ಪಿಸಲು ಕನ್ನಡಕ ಬಳಸಿ.

    * ಒಂದು ವೇಳೆ ಕಣ್ಣಿಗೆ ಬಣ್ಣ ಬಿದ್ದರೆ, ಕಣ್ಣನ್ನು ಉಜ್ಜುವುದು, ರಬ್ ಮಾಡುವುದು ಮಾಡಲೇ ಬಾರದು. ಎರಡೂ ರೆಪ್ಪೆಗಳನ್ನು ಅಗಲವಾಗಿ ತೆರೆದು ಶುದ್ಧ ನೀರಿನಿಂದ ತೊಳೆಯಬೇಕು.
    * ಸಾವಯವ ಬಣ್ಣಗಳನ್ನು ಮನೆಯಲ್ಲೇ ತಯಾರಿಸಬಹುದು. ಗೋರಂಟಿ ಸೊಪ್ಪು, ಚೆಂಡು ಹೂ, ಅರಿಶಿನ ಪುಡಿ ಬಳಸಿ ಮನೆಯಲ್ಲಿ ಬಣ್ಣ ತಯಾರಿಸಬಹುದು.
    * ಹೋಳಿ ವೇಳೆ ತುಂಬು ತೋಳಿನ ಬಟ್ಟೆ ಧರಿಸಿದ್ದರೆ ಉತ್ತಮ.
    * ಮಕ್ಕಳು ಬಣ್ಣ ಆಡುವಾಗ ಪಾಲಕರು ಜಾಗೃತೆ ವಹಿಸಿರಿ.
    * ಮುಖ, ತೋಳು, ಕಾಲುಗಳು ಮತ್ತು ಚರ್ಮದ ಯಾವುದೇ ತೆರೆದ ಭಾಗಕ್ಕೆ ಕ್ರೀಮ್ ಹಚ್ಚಿ ಹೊರಡಿ.
    * ಕಣ್ಣುಗಳ ರಕ್ಷಣೆಗಾಗಿ ಸನ್‍ಗ್ಲಾಸ್ ಧರಿಸುವುದು ಉತ್ತಮ.

    * ಕಡುಗಾಢವಾದ ಬಣ್ಣಗಳ ಬಳಕೆ ಬೇಡ. ರಾಸಾಯನಿಕಗಳ ಬಳಕೆ ಹೆಚ್ಚಿರುವುದರಿಂದ ಹಾನಿಯೂ ಹೆಚ್ಚಿರುತ್ತದೆ..
    * ದೇಹದ ತೆರೆದ ಭಾಗದಲ್ಲಿ ಬಣ್ಣ ತಗುಲಿ ತುರಿಕೆ, ಕೆರೆತ, ನವೆ ಉಂಟಾದರೆ ತಕ್ಷಣವೇ ಶುದ್ಧ ನೀರಿನಿಂದ ತೊಳೆದುಕೊಳ್ಳಿ.
    * ಮುಖಕ್ಕೆ ತಗುಲಿರುವ, ಅಂಟಿರುವ ಬಣ್ಣ ತೆಗೆಯಲು ಮೊದಲು ಮುಖವನ್ನು ತಣ್ಣೀರಿನಲ್ಲಿ ಅದ್ದಿ ಬಳಿಕ ಸೌಮ್ಯವಾದ ಕ್ರೀಮ್ ಹಚ್ಚಿ, ಹತ್ತಿ ಬಟ್ಟೆಯಿಂದ ಒರೆಸಿಕೊಳ್ಳಿ. ಇದರಿಂದ ಮುಖಕ್ಕೆ ಅಂಟಿರುವ ಬಣ್ಣವನ್ನು ಸುಲಭವಾಗಿ ತೆಗೆಯಬಹುದು.

    * ಹಾಲಿಗೆ ಸೂರ್ಯಕಾಂತಿ, ಆಲಿವ್ ಆಯಿಲ್, ಕೊಬ್ಬರಿ ಎಣ್ಣೆ ಯಾವುದಾದರೊಂದು ಎಣ್ಣೆ ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ. ಬಳಿಕ ಚರ್ಮಕ್ಕೆ ಹಚ್ಚಿ. ಇದರಿಂದ ಮುಖ ಮಾತ್ರವಲ್ಲದೇ, ದೇಹದಿಂದಲೂ ಬಣ್ಣವನ್ನು ತೆಗೆಯಬಹುದಾಗಿದೆ
    * ಜೊತೆಗೆ ಅರ್ಧ ಕಪ್ ಗಟ್ಟಿ ಮೊಸರಿಗೆ 2 ಚಮಚ ಜೇನುತುಪ್ಪ ಹಾಗೂ ಅರಿಶಿನ ಪುಡಿ ಬೆರೆಸಿ ಚೆನ್ನಾಗಿ ಕಲಸಿ. ಬಳಿಕ ಇದನ್ನು ಮುಖ, ಕುತ್ತಿಗೆಗೆ ಹಚ್ಚಿ ಸುಮಾರು ಅರ್ಧ ಗಂಟೆ ಬಳಿಕ ತಣ್ಣೀರಿನಲ್ಲಿ ತೊಳೆಯುವುದರಿಂದ ಅಂಟಿರುವ ಬಣ್ಣ ಹೋಗುತ್ತದೆ. ಚರ್ಮದ ತಾಜತೆ ಹಾಗೇ ಉಳಿದಿರುತ್ತದೆ.

    ಇನ್ನು ಓಕುಳಿಯಾಟದ ವೇಳೆ ಕೂದಲಿಗಾಗುವ ಹಾನಿಯನ್ನು ತಡೆಯಬೇಕಾದ್ರೆ:
    * ಕೂದಲಿಗೆ ಬಣ್ಣವಾದಲ್ಲಿ ಕೂದಲನ್ನು ಶುದ್ಧ ನೀರಿನಿಂದ ತೊಳೆಯಬೇಕು. ಕೂದಲಿಗೆ ಅಂಟಿಕೊಂಡಿದ್ದ ಬಣ್ಣ ಹೋಗೋವರೆಗೂ ನಿಧಾನವಾಗಿ ಉಜ್ಜಿ ತೊಳೆಯಬೇಕು.
    * ಗಟ್ಟಿ ಮೊಸರಿನಲ್ಲಿ ಮೆಂತ್ಯಕಾಳುಗಳನ್ನು ನೆನಸಿಡಿ. 5-10 ನಿಮಿಷದ ನಂತರ ಅದನ್ನು ತಲೆಗೆ ಹಚ್ಚಿ ಅರ್ಧಗಂಟೆ ಹಾಗೇ ಬಿಡಬೇಕು. ಬಳಿಕ ಬೆಚ್ಚಗಿನ ನೀರಿನಿಂದ ತೊಳೆಯಬೇಕು.
    * ಪರಸ್ಪರ ಬಣ್ಣ ಎರಚಾಡುವುದಕ್ಕೂ ಮುಂಚೆಯೇ ಹೇರ್ ಮಸಾಜ್ ಮಾಡಿಸಿಕೊಳ್ಳುವುದು ಉತ್ತಮ. ಇದರಿಂದ ಮೆದುಳಿನ ರಕ್ತ ಸಂಚಲನ ಹೆಚ್ಚಾಗಿ, ಕೂದಲಿನ ಬುಡ ಗಟ್ಟಿಯಾಗುತ್ತದೆ.
    * ಬೆಚ್ಚಗಿನ ಕೊಬ್ಬರಿಯನ್ನು ತಲೆಕೂದಲಿಗೆ ಹಚ್ಚಿ, ಕೂದಲ ಬುಡಕ್ಕೆ ಮಸಾಜ್ ಮಾಡಬೇಕು. ಇದರಿಂದ ಕೂದಲಿಗೆ ರಾಸಾಯನಿಕ ಮಿಶ್ರಿತ ಬಣ್ಣ ಅಂಟುವುದನ್ನು ತಡೆಯಬಹುದು.
    * ಓಕುಳಿಯಾಟದ ವೇಳೆ ಕೂದಲು ಬಿಡುವ ಬದಲಾಗಿ ಕೂದಲನ್ನು ಒಟ್ಟು ಮಾಡಿ ಜಡೆ ಎಣೆದುಕೊಂಡರೆ ಉತ್ತಮ.

    ಹೋಳಿ ಹಬ್ಬದಲ್ಲಿ ಬಣ್ಣ ಎರಚಾಡಲು ತಯಾರಿ ಇಲ್ಲದಿದ್ದರೆ ಏನಾಗುತ್ತೆ?:
    * ನಿಮ್ಮ ಅವಶ್ಯಕತೆಯೆ, ಕ್ರೇಜ್‍ಅನ್ನೇ ಬಂಡವಾಳ ಮಾಡಿಕೊಂಡು ಮಾರುಕಟ್ಟೆಯಲ್ಲಿ ಮನಸೋಇಚ್ಛೆ ಕಲರ್‍ಗಳು ದಾಂಗುಡಿ ಇಟ್ಟಿವೆ. ಇದರಿಂದ ಎಚ್ಚರವಾಗಿರಬೇಕು. ಇಲ್ಲವಾದಲ್ಲಿ ತೊಂದರೆ ಕಟ್ಟಿಟ್ಟಬುತ್ತಿ.
    * ಕ್ವಾಲಿಟಿ ಇಲ್ಲದ ಬಣ್ಣಗಳ ಬಳಕೆಯಿಂದ ಚರ್ಮದ ಸಮಸ್ಯೆ, ಉಸಿರಾಟದ ಸಮಸ್ಯೆ, ಕಣ್ಣಿನ ಕಿರಿಕಿರಿ ಉಂಟಾಗುವ ಸಾಧ್ಯತೆಗಳು ಇವೆ.
    * ಸಾಮಾನ್ಯವಾಗಿ ಬಣ್ಣಗಳಲ್ಲಿ ಟಾಕ್ಸಿಕ್ ರಾಸಾಯನಿಕ ಇರುವುದರಿಂದ ಅದು ಕಣ್ಣಿಗೆ ಬಿದ್ದ ಕೂಡಲೇ ಕಣ್ಣು ಕೆಂಪಗಾಗುವುದು, ನೋಯುವುದು, ಇಲ್ಲವೆ ಕಣ್ಣಿನ ಕಣ್ಣಗುಡ್ಡೆಗೆ ಹಾನಿ ಆಗುವ ಸಾಧ್ಯತೆಗಳಿರುತ್ತವೆ.
    * ಅಸ್ತಮಾ, ಉಸಿರಾಟದ ತೊಂದರೆ ಇರುವವರು ಶ್ವಾಸಕೋಶದ ತೊಂದರೆ ಅನುಭವಿಸಬೇಕಾಗುತ್ತದೆ.
    * ಬಣ್ಣ ಗುಣಮಟ್ಟದಲ್ಲವಾದರೆ ಅಲರ್ಜಿ, ತುರಿಕೆಯಂತಹ ಚರ್ಮದ ಸಮಸ್ಯೆಯೂ ಕಾಣಿಸಿಕೊಳ್ಳುತ್ತದೆ.

    ಯಾವ ರಾಸಾಯನಿಕ ಮಿಶ್ರಿತ ಬಣ್ಣಗಳಿಂದ ಯವ್ಯಾವ ತೊಂದರೆಗಳು ಉಂಟಾಗುತ್ತೆ:
    * ಹಸಿರು ರಾಸಾಯನಿಕ ಬಣ್ಣದಲ್ಲಿರುವ ಕಾಪರ್ ಸಲ್ಫೇಟ್ – ಕಣ್ಣಿನ ಮೇಲೆ ದುಷ್ಪರಿಣಾಮ ಬೀರುತ್ತದೆ.
    * ನೇರಳೆ ರಾಸಾಯನಿಕ ಬಣ್ಣದಲ್ಲಿರುವ ಕ್ರೋಮಿಯಂ ಅಯೋಡೈಡ್ – ಅಸ್ತಮಾ ಸಮಸ್ಯೆಗೆ ಕಾರಣವಾಗುತ್ತೆ.
    * ಕಪ್ಪು ರಾಸಾಯನಿಕ ಬಣ್ಣದಲ್ಲಿರುವ ಲೆಡ್ ಆಕ್ಸೈಡ್ – ಕಿಡ್ನಿ ಸಮಸ್ಯೆಗೆ ಕಾರಣವಾಗುತ್ತೆ.
    * ಕೆಂಪು ರಾಸಾಯನಿಕ ಬಣ್ಣದಲ್ಲಿರುವ ಮಕ್ರ್ಯೂರಿಕ್ ಸಲ್ಫೇಟ್ – ಚರ್ಮ ಸಮಸ್ಯೆಗೆ ಕಾರಣವಾಗುತ್ತೆ
    * ಸಿಲ್ವರ್ ರಾಸಾಯನಿಕ ಬಣ್ಣದಲ್ಲಿರುವ ಅಲ್ಯುಮಿನಿಯಂ ಬ್ರೋಮೈಡ್ – ತುರಿಕೆ, ಕೆರೆತ ಸಮಸ್ಯೆಗೆ ಕಾರಣವಾಗುತ್ತೆ.

  • ಚಳಿಗಾಲದಲ್ಲಿ ನಿಮ್ಮ ತ್ವಚೆಯನ್ನು ಹೀಗೆ ಕಾಪಾಡಿಕೊಳ್ಳಿ

    ಚಳಿಗಾಲದಲ್ಲಿ ನಿಮ್ಮ ತ್ವಚೆಯನ್ನು ಹೀಗೆ ಕಾಪಾಡಿಕೊಳ್ಳಿ

    ಳಿಗಾಲದಲ್ಲಿ ತ್ವಚೆ ಒಣಗುವುದು, ಹಿಮ್ಮಡಿಗಳು ಬಿರುಕು ಬಿಡುವುದು, ಮುಖದಲ್ಲಿ ಕಾಂತಿ ಕಡಿಮೆಯಾಗುವುದು, ಆರೋಗ್ಯದಲ್ಲಿ ಏರುಪೇರಾಗುವುದು ಈ ಎಲ್ಲಾ ಸಮಸ್ಯೆಗಳು ಸಹಜವಾಗಿ ಬಹುತೇಕ ಜನರು ಎದುರಿಸುತ್ತಾರೆ. ನಿಮ್ಮ ದಿನ ನಿತ್ಯದ ಚಟುವಟಿಕೆಗಳಲ್ಲಿ ಈ ಸುಲಭ ಕ್ರಮಗಳನ್ನ ಅನುಸರಿಸಿದರೆ ಚಳಿಗಾಲದ ಸಮಸ್ಯೆಯಿಂದ ದೂರ ಆಗಬಹುದು.

    1. ಚಳಿಯಿಂದ ರಕ್ಷಣೆ:
    ನಿಮ್ಮನ್ನು ಚಳಿಯಿಂದ ರಕ್ಷಿಸಿಕೊಳ್ಳಲು ಆದಷ್ಟು ಬೆಚ್ಚನೆಯ ಉಣ್ಣೆಯ ಬಟ್ಟೆಗಳನ್ನ ಧರಿಸಿರಿ. ಸಾಧ್ಯವಾದಷ್ಟು ಬಿಸಿಲಿನಿಂದ ದೂರವಿರಿ. ಹೊರಗಡೆ ಹೋಗುವಾಗ ನಿಮ್ಮ ಜೊತೆ ಒಂದು ಸನ್ ಗ್ಲಾಸ್ ಮತ್ತು ಮಾಯಿಶ್ಚರೈಜರ್ ಕ್ರೀಂ ಇಟ್ಟುಕೊಳ್ಳಿ.

    2. ನೀರನ್ನ ಹೆಚ್ಚು ಕುಡಿಯಿರಿ:
    ಚಳಿಗಾಲದಲ್ಲಿ ದೇಹದಲ್ಲಿನ ನೀರಿನಾಂಶ ಕಡಿಮೆ ಆಗುತ್ತಿರುತ್ತದೆ. ಹಾಗಾಗಿ ನೀರನ್ನು ಕುಡಿಯುತ್ತೀರಿ. ಇದರಿಂದ ನಿಮ್ಮ ಚರ್ಮದ ಕೋಮಲತೆಯನ್ನು ಕಾಪಾಡಬಹುದು.

    3. ಮುಖದ ರಕ್ಷಣೆ:
    ಚಳಿಗಾಲದಲ್ಲಿ ನಾವು ಯಾವಾಗಲು ಅತಿಯಾದ ಬಿಸಿ ನೀರನಲ್ಲಿ ಸ್ನಾನ ಮಾಡಲು ಇಷ್ಟಪಡುತ್ತೇವೆ. ಆದರೆ ಇದು ನಿಮಗೆ ಗೊತ್ತಿರಲಿ, ಹೆಚ್ಚು ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ಚರ್ಮದ ಕಾಂತಿ ಮತ್ತು ಸುಕೋಮಲತೆ ಕಡಿಮೆಯಾಗುತ್ತದೆ. ಹಾಗಾಗಿ ಉಗುರು ಬೆಚ್ಚಗಿನ ನೀರನಲ್ಲಿ ಮುಖ ತೊಳೆಯುವುದು ಉತ್ತಮ.

    4. ವಾರಕ್ಕೊಮ್ಮೆ ಎಣ್ಣೆ ಸ್ನಾನ:
    ಎಣ್ಣೆ ಸ್ನಾನ ಮಾಡುವುದರಿಂದ ನಮ್ಮ ದೇಹದ ಆಯಾಸ ಕಡಿಮೆಯಾಗಿ ಮಾಂಸ ಖಂಡಗಳು ಬಲಗೊಳ್ಳುತ್ತದೆ. ಇದಲ್ಲದೆ ಚರ್ಮದಲ್ಲಿ ಎಣ್ಣೆ ಅಂಶವನ್ನ ಹೆಚ್ಚಿಸಲಿದ್ದು, ಇದರಿಂದ ಸುಕ್ಕುಗಳು, ನೆರೆಗೆ, ಮತ್ತು ತ್ವಚೆ ಬಿರುಕು ಬಿಡುವುದರಿಂದ ರಕ್ಷಿಸುತ್ತದೆ.

    5. ನಿಮ್ಮ ಕಾಲುಗಳಿಗೆ ಕಾಳಜಿ ನೀಡಿ:
    ಚಳಿಗಾಲದಲ್ಲಿ ಕೈ-ಕಾಲುಗಳನ್ನ ಆದಷ್ಟು ಮಾಯಿಶ್ಚರಾಜರ್ ಹಾಕಿ. ಮನೆಯಲ್ಲಿದ್ದಾಗ ಕಾಲುಗಳಿಗೆ ಸಾಕ್ಸ್ ಹಾಕಿ ಬೆಚ್ಚನೆ ಇರಿಸಿ. ಒಡೆದ ಹಿಮ್ಮಡಿಗಳಿಗೆ ವ್ಯಾಸ್ಲೀನ್ ಜೆಲ್ ಹಚ್ಚಿರಿ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮೊಸರಿನಲ್ಲಿ ಅಡಗಿದೆ ನಿಮ್ಮ ಅಂದ!

    ಮೊಸರಿನಲ್ಲಿ ಅಡಗಿದೆ ನಿಮ್ಮ ಅಂದ!

    ಪ್ರತಿಯೊಬ್ಬರಿಗೂ ತಮ್ಮ ತ್ವಚೆಯನ್ನು ಸದಾ ಕಾಪಾಡಿಕೊಳ್ಳಬೇಕು ಅಂದುಕೊಳ್ಳುತ್ತಾರೆ. ಕೆಲವರು ವೈದ್ಯರ ಸಲಹೆಯನ್ನು ತೆಗೆದುಕೊಳ್ಳುತ್ತಾರೆ. ಕೆಲವರು ತಮಗೆ ಗೊತ್ತಿರುವ ಟಿಪ್ಸ್ ಬಳಸಿ ತ್ವಚೆಯನ್ನು ಕಾಪಾಡಿಕೊಳ್ಳುತ್ತಾರೆ. ಪ್ರತಿಯೊಬ್ಬರ ತ್ವಚೆಯೂ ವಾತಾವರಣಕ್ಕೆ ತಕ್ಕಂತೆ ಬದಲಾಗುತ್ತಿರುತ್ತದೆ. ಆಗಾಗ ನಾವು ಕೂಡ ನಮ್ಮ ತ್ವಚೆಗೆ ಆರೈಕೆ ಮಾಡಿಕೊಳ್ಳಬೇಕು.

    ಮೊಸರು ತ್ವಚೆಗೆ ಒಳ್ಳೆಯ ಔಷಧಿಯಾಗಿದೆ. ಪ್ರತಿಯೊಬ್ಬರ ಮನೆಯಲ್ಲೂ ಮೊಸರು ಇರುತ್ತದೆ. ಮೊಸರಿಯಲ್ಲಿರುವ ಅಂಶದಿಂದ ನಮ್ಮ ಆರೋಗ್ಯ ಮತ್ತು ತ್ವಚೆಯನ್ನು ಕಾಪಾಡಿಕೊಳ್ಳಬಹುದು. ಮೊಸರಿನಲ್ಲಿರುವ ಲ್ಯಾಕ್ಟಿಕ್ ಆಸಿಡ್ ತ್ವಚೆಯ ಕೋಶಗಳಿಗೆ ಹೊಸ ಚೈತನ್ಯವನ್ನು ನೀಡುತ್ತದೆ. ಇದರಲ್ಲಿರುವ ಹೆಚ್ಚಿನ ಪ್ರೊಟೀನ್, ವಿಟಮಿನ್ ಮತ್ತು ಮಿನರಲ್‍ಗಳು ನಿಮ್ಮ ತ್ವಚೆಯನ್ನು ತಾಜಾ ಆಗಿರಿಸುವ ಅಂಶ ಅದರಲ್ಲಿದೆ.

     

    ಸುಂದರ ಮೊಗಕ್ಕೆ ಮೊಸರೆ ಮದ್ದು:
    * ಎರಡು ಚಮಚ ಮೊಸರಿಗೆ ಚಿಟಿಕೆ ಸಕ್ಕರೆ ಹಾಕಿ ಮಿಕ್ಸ್ ಮಾಡಿ. ಬಳಿಕ ಅದನ್ನ ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. 15 ನಿಮಿಷ ನಂತರ ಬೆಚ್ಚಗಿನ ನೀರಿನಲ್ಲಿ ಮುಖ ತೊಳೆಯಿರಿ. ಈ ರೀತಿ ವಾರಕ್ಕೆ 2-3 ಬಾರಿ ಮಾಡಿದರೆ ಮುಖದಲ್ಲಿನ ಧೂಳು ಮತ್ತು ಕೊಳೆ ನಿವಾರಣೆಯಾಗುತ್ತದೆ.

    * ಒಂದು ಚಮಚ ಮೊಸರನ್ನು ಮುಖಕ್ಕೆ ಹಚ್ಚಿ, ಮಸಾಜ್ ಮಾಡಿಕೊಳ್ಳಿ ಬಳಿಕ ಅರ್ಧ ಗಂಟೆ ನಂತರ ಮುಖವನ್ನು ತೊಳೆದರೆ ಕಪ್ಪುಕಲೆ ಮಾಯವಾಗಿ ಮುಖ ಸುಂದರವಾಗಿ ಕಾಣುತ್ತದೆ.

    * ಎರಡು ಚಮಚ ಮೊಸರಿಗೆ ಒಂದು ಚಮಚ ಜೇನುತುಪ್ಪ ಸೇರಿಸಿ, ಮುಖಕ್ಕೆ ಹಚ್ಚಿ. ಬಳಿಕ ಅರ್ಧ ಗಂಟೆ ಬಿಟ್ಟು ತೊಳೆಯಿರಿ. ಇದರಿಂದ ಒಣಚರ್ಮ ನಿವಾರಣೆಯಾಗುತ್ತದೆ.

    * ಮೊಸರು ಅರ್ಧ ಕಪ್, 3 ಚಮಚ ತುರಿದ ಸೌತೆಕಾಯಿಯನ್ನು ಡಾರ್ಕ್ ಸರ್ಕಲ್ ಹಾಗೂ ಟ್ಯಾನ್ ಇರುವ ಜಾಗಕ್ಕೆ ಹಚ್ಚಿಕೊಳ್ಳಬೇಕು. 15 ನಿಮಿಷದ ನಂತರ ತಣ್ಣಗಿರುವ ನೀರಿನಿಂದ ತೊಳೆಯಬೇಕು. ಈ ರೀತಿ ವಾರಕ್ಕೆ 2 ಬಾರಿ ಮಾಡುವುದರಿಂದ ಟ್ಯಾನ್ ಮತ್ತು ಚರ್ಮದ ಕಪ್ಪು ಕಡಿಮೆಯಾಗುತ್ತದೆ.

    * ಒಂದು ಚಮಚ ಕಡಲೆ ಹಿಟ್ಟಿಗೆ 2 ಚಮಚ ಮೊಸರನ್ನು ಹಾಕಿ ಮಿಕ್ಸ್ ಮಾಡಿಕೊಳ್ಳಬೇಕು. ಬಳಿಕ ಮುಖಕ್ಕೆ ಹಚ್ಚಿಕೊಂಡು 15 ನಿಮಿಷಗಳ ನಂತರ ಮುಖವನ್ನು ತೊಳೆದುಕೊಳ್ಳಬೇಕು. ಇದು ಜಿಡ್ಡಿನ ಮತ್ತ ಸೂಕ್ಷ್ಮ ತ್ವಚೆಗೆ ಸೂಕ್ತವಾಗಿದೆ. ಜೊತೆಗೆ ತಾಜಾ ಕಾಂತಿಯನ್ನು ನೀಡುತ್ತದೆ.

    * ಮೊಸರು ಕೂದಲಿನ ನೈಸರ್ಗಿಕ ಪೋಷಣೆ ನೀಡುತ್ತದೆ. ಆದ್ದರಿಂದ ಮೊಸರನ್ನು ಕೂದಲಿನ ಬುಡಕ್ಕೆ ಮಸಾಜ್ ಮಾಡುವುದರಿಂದ ಕೂದಲಿನ ಹೊಳಪು ಹೆಚ್ಚುತ್ತದೆ.

    * 2 ಚಮಚ ಮೊಸರಿಗೆ 1 ಚಮಚ ಅರಶಿಣವನ್ನು ಹಾಕಿ ಮಿಶ್ರಣ ಮಾಡಿಕೊಳ್ಳಿ, ಬಳಿಕ ನಿಮ್ಮ ಮುಖವನ್ನು ಸ್ವಚ್ಛವಾಗಿ ತೊಳೆದುಕೊಂಡು ಈ ಮಿಶ್ರಣವನ್ನು ಹಚ್ಚಿಕೊಳ್ಳಿ. 15 ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರ ತಣ್ಣೀರಿನಿಂದ ಮುಖವನ್ನು ತೊಳೆದುಕೊಳ್ಳಿ.

    * ಮೆಹಂದಿ ಪುಡಿಗೆ ಮೊಸರು ಮಿಕ್ಸ್ ಮಾಡಿ ತಲೆಗೆ ಹಚ್ಚಿದರೆ ಕೂದಲು ಉದುರುವುದು ಕಡಿಮೆಯಾಗುತ್ತದೆ.

    * ಬೇಯಿಸಿದ ಆಲೂಗಡ್ಡೆ, 2 ಚಮಚ ಮೊಸರು ಮತ್ತು ಸ್ವಲ್ಪ ಜೇನು ತುಪ್ಪ ಸೇರಿಸಿ ಮಿಕ್ಸ್ ಮಾಡಿ, ನಿಮ್ಮ ಮುಖವನ್ನು ತೊಳೆದುಕೊಂಡ ನಂತರ ಈ ಮಿಶ್ರಣವನ್ನು ಮುಖಕ್ಕೆ ಹಚ್ಚಿಕೊಳ್ಳಿ. ನಂತರ 20 ನಿಮಿಷಗಳ ತರುವಾಯ ತಣ್ಣೀರಿನಿಂದ ಮುಖವನ್ನು ತೊಳೆದುಕೊಳ್ಳಿ.

    * ನಿಂಬೆ ಸಿಪ್ಪೆ, ಕಿತ್ತಳೆ ಸಿಪ್ಪೆ ಒಣಗಿಸಿ, ಪುಡಿಮಾಡಿ ಮೊಸರಿನಲ್ಲಿ ಕಲಸಿ, ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ಮುಖ ತೊಳೆಯಿರಿ. ಇದರಿಂದ ಮುಖದ ಮೇಲಿನ ಕಲೆ ಕಡಿಮೆಯಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv