Tag: ಥಾಣೆ

  • ಮುಂಬೈ ಸೇರಿ ಹಲವೆಡೆ ಭಾರೀ ಮಳೆ – ಆರೆಂಜ್ ಅಲರ್ಟ್ ಘೋಷಣೆ

    ಮುಂಬೈ ಸೇರಿ ಹಲವೆಡೆ ಭಾರೀ ಮಳೆ – ಆರೆಂಜ್ ಅಲರ್ಟ್ ಘೋಷಣೆ

    – ನವರಾತ್ರಿಯ ದಾಂಡಿಯಾ ಸಂಭ್ರಮಕ್ಕೆ ಅಡ್ಡಿ ಸಾಧ್ಯತೆ

    ಮುಂಬೈ: ಮುಂಬೈ (Mumbai) ಸೇರಿದಂತೆ ಮಹಾರಾಷ್ಟ್ರದ (Maharashtra) ಕೆಲವು ಭಾಗಗಳಲ್ಲಿ ಶನಿವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ ಘೋಷಿಸಿದೆ.

    ಮುಂಬೈನಲ್ಲಿ ಗುಡುಗು, ಮಿಂಚು ಸಹಿತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಪಾಲ್ಘರ್, ಪುಣೆ, ಥಾಣೆ ಮತ್ತು ರಾಯಗಡ್ ಸೇರಿದಂತೆ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಜಲ್ನಾ, ಬೀಡ್ ಮತ್ತು ಸೋಲಾಪುರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.ಇದನ್ನೂ  ಓದಿ: ಕೊಡಗಿನಲ್ಲಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ – ಸುತ್ತಮುತ್ತಲಿನ ಪ್ರದೇಶದ ಜನಕ್ಕೆ ಕಾಡ್ತಿದೆ ಶ್ವಾಸಕೋಶದ ಸಮಸ್ಯೆ!

    ಶನಿವಾರ (ಸೆ.27) ಬೆಳಗ್ಗೆಯಿಂದಲೂ ಮುಂಬೈ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಪಾಲ್ಘರ್, ಥಾಣೆ ಮತ್ತು ರಾಯಗಡ್‌ನಲ್ಲಿ ಸೋಮವಾರದವರೆಗೂ (ಸೆ.29) ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಅಲ್ಲದೇ ಅಕ್ಟೋಬರ್ ಎರಡನೇ ವಾರದವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ಇನ್ನೂ ನವರಾತ್ರಿ ಹಿನ್ನೆಲೆ ಆಯೋಜಿಸಲಾಗಿದ್ದ ದಾಂಡಿಯಾ ನೈಟ್ ಫೆಸ್ಟಿವಲ್‌ಗೂ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಜೊತೆಗೆ ಸೆ.28ರಂದು ನಡೆಯಬೇಕಿದ್ದ ಮಹಾರಾಷ್ಟ್ರ ಲೋಕ ಸೇವಾ ಆಯೋಗದ ಕೆಲ ಪರೀಕ್ಷೆಗಳನ್ನು ಮುಂದೂಡಿ, ನ.9ರಂದು ನಡೆಸುವುದಾಗಿ ತಿಳಿಸಿದೆ.

    ಇನ್ನೂ ಮಹಾರಾಷ್ಟ್ರದಾದ್ಯಂತ ಭಾರೀ ಮಳೆಯ ಹಿನ್ನೆಲೆ ಮೀನುಗಾರರು ಸಮುದ್ರ, ನದಿ, ಕೆರೆಗಳಿಗೆ ಇಳಿಯದಂತೆ ಸೂಚನೆ ನೀಡಿದೆ.ಇದನ್ನೂ  ಓದಿ: ಗಡಿ ಜಿಲ್ಲೆ ಬೀದರ್‌ನಲ್ಲಿ ಧಾರಾಕಾರ ಮಳೆಗೆ ಭಾರೀ ಅವಾಂತರ – ರಸ್ತೆ ಸಂಚಾರ ಬಂದ್‌

     

  • ಮುಂಬೈನಲ್ಲಿ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಮರ್ಸಿಡಿಸ್; ಬೈಕ್ ಸವಾರ ಸಾವು

    ಮುಂಬೈನಲ್ಲಿ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಮರ್ಸಿಡಿಸ್; ಬೈಕ್ ಸವಾರ ಸಾವು

    ಮುಂಬೈ: ವೇಗವಾಗಿ ಬಂದು ಮರ್ಸಿಡಿಸ್ ಬೆಂಜ್ (Mercedes Benz) ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮುಂಬೈನ (Mumbai) ಥಾಣೆ (Thane) ಬಳಿ ನಡೆದಿದೆ.

    ಮೃತ ಯುವಕನನ್ನು 21 ವರ್ಷದ ದರ್ಶನ್ ಹೆಗ್ಡೆ ಎಂದು ಗುರುತಿಸಲಾಗಿದೆ.ಇದನ್ನೂ ಓದಿ:ದಾವಣಗೆರೆ | ಲೌಕಿಕ ಜೀವನ ತೊರೆದು ಸನ್ಯಾಸತ್ವ ಸ್ವೀಕಾರಕ್ಕೆ ಮುಂದಾದ ಯುವತಿಯರು

    ಹಿರಿಯ ಪೊಲೀಸ್ ಅಧಿಕಾರಿ ಶೈಲೇಶ್ ಸಾಲ್ವಿ ಮಾತನಾಡಿ, ರಾತ್ರಿ 1:50ರ ಸುಮಾರಿಗೆ ದರ್ಶನ್ ಹೆಗ್ಡೆ ನಿತಿನ್ ಕಂಪನಿ ಜಂಕ್ಷನ್ ಪ್ರದೇಶವನ್ನು ದಾಟುತ್ತಿದ್ದಾಗ ಮರ್ಸಿಡಿಸ್ ಬೆಂಜ್ ಕಾರೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

    ಡಿಕ್ಕಿ ಹೊಡೆದ ಬಳಿಕ ಅಲ್ಲಿಂದ ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರ ಪರಿಶೀಲನೆಯ ನಂತರ ಕಾರು ಪಾರ್ಕಿಂಗ್ ಸ್ಥಳವೊಂದರಲ್ಲಿ ಸಿಕ್ಕಿದೆ. ಸದ್ಯ ನೌಪಾಡಾ (Naupada) ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ನಿರತರಾಗಿದ್ದಾರೆ.

    ಅಪಘಾತ ಸಂಭವಿಸಿದ ಪ್ರದೇಶದಲ್ಲಿನ ಸಿಸಿಟಿವಿಯನ್ನು ಪರಿಶೀಲಿಸುತ್ತಿದ್ದೇವೆ. ಆರೋಪಿಯ ಗುರುತು ಪತ್ತೆಗಾಗಿ ಆರ್‌ಟಿಒ ವಿವರಗಳನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

    ಈ ಕುರಿತು ಪ್ರತ್ಯಕ್ಷದರ್ಶಿಯೊಬ್ಬರು ಮಾತನಾಡಿ, ರಾತ್ರಿ 2 ಗಂಟೆ ಸುಮಾರಿಗೆ ಅಪಘಾತದ ಸದ್ದು ಕೇಳಿಸಿದ್ದು, ಬೈಕ್‌ಗೆ ಮರ್ಸಿಡಿಸ್ ಕಾರು ಡಿಕ್ಕಿ ಹೊಡೆದಿದೆ. ತಕ್ಷಣ ನಾನು ಬೈಕ್ ಸವಾರನನ್ನು ಆಟೋ ರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದೆ. ದಾಖಲಿಸಿದ 15 ನಿಮಿಷಗಳ ಬಳಿಕ ಆತ ಸಾವನ್ನಪ್ಪಿದ. ಇನ್ನೂ ಡಿಕ್ಕಿ ಹೊಡೆದ ಮರ್ಸಿಡಿಸ್ ಕಾರು ಒಂದು ಕ್ಷಣವೂ ನಿಲ್ಲಿಸದೇ ಅಲ್ಲಿಂದ ವೇಗವಾಗಿ ಹೊರಟಿತು.

    ಮರ್ಸಿಡಿಸ್ ಕಾರನ್ನು ಥಾರ್ ಎಸ್‌ಯುವಿ ಕಾರೊಂದು ಹಿಂಬಾಲಿಸಿಕೊಂಡು ಬರುತ್ತಿತ್ತು. ಅಪಘಾತ ನಡೆದ ಬಳಿಕ ಎರಡು ವಾಹನಗಳು ಮುಂಬೈ ಕಡೆಗೆ ತೆರಳಿದವು ಎಂದು ತಿಳಿಸಿದರು.ಇದನ್ನೂ ಓದಿ: ಮೊದಲ ಹಂತದ ಶೂಟಿಂಗ್ ಮುಗಿಸಿದ ಮಂಸೋರೆ

  • ಒಂದೇ ಒಂದು ಬಿಸ್ಕೆಟ್‌ ತಿನ್ನಲು ಹೋದ ಮಗು – ಮಿಷಿನ್‌ ಬೆಲ್ಟ್‌ಗೆ ಸಿಲುಕಿ ಸಾವು!

    ಒಂದೇ ಒಂದು ಬಿಸ್ಕೆಟ್‌ ತಿನ್ನಲು ಹೋದ ಮಗು – ಮಿಷಿನ್‌ ಬೆಲ್ಟ್‌ಗೆ ಸಿಲುಕಿ ಸಾವು!

    ಮುಂಬೈ: ಮಹಾರಾಷ್ಟ್ರದ (Maharashtra) ಥಾಣೆ ಜಿಲ್ಲೆಯ ಬಿಸ್ಕೆಟ್ ಕಾರ್ಖಾನೆಯೊಂದರಲ್ಲಿ (Biscuit Factory) ಯಂತ್ರದ ಬೆಲ್ಟ್‌ಗೆ ಸಿಲುಕಿ ಮೂರು ವರ್ಷದ ಗಂಡು ಮಗು ಸಾವನ್ನಪ್ಪಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ.

    ಥಾಣೆ ಜಿಲ್ಲೆಯ ಅಂಬರನಾಥದಲ್ಲಿ (Ambarnath) ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆಯುಷ್ ಚೌಹಾಣ್ ಮೃತಪಟ್ಟ ಮಗು. ಇದನ್ನೂ ಓದಿ: 1,788 ಕೊಠಡಿ, 257 ಸ್ನಾನಗೃಹ, ಅಮೃತಶಿಲೆಯಿಂದ ಮಾಡಿದ ಮೆಟ್ಟಿಲು – ವಿಶ್ವದ ಅತಿದೊಡ್ಡ ಐಷಾರಾಮಿ ಅರಮನೆಯಲ್ಲಿ ಮೋದಿಗೆ ಆತಿಥ್ಯ

    ಅಷ್ಟಕ್ಕೂ ಅಲ್ಲಿ ಆಗಿದ್ದೇನು?
    ಮಗು ಆಯುಷ್ ಚೌಹಾಣ್ ತನ್ನ ತಾಯಿಯೊಂದಿಗೆ ಬಿಸ್ಕೆಟ್‌ ಫ್ಯಾಕ್ಟರಿಗೆ ಹೋಗಿದ್ದನು. ಈ ವೇಳೆ ಮಗುವನ್ನು ಒಂದು ಕಡೆ ಕೂರಿಸಿ, ಮಗುವಿನ ತಾಯಿ ತನ್ನ ಪತಿಗೆ ಉಪಾಹಾರ ಕೊಟ್ಟುಬರಲು ತೆರಳಿದ್ದರು. ಈ ವೇಳೆ ಯಂತ್ರದಲ್ಲಿದ್ದ ರಾಶಿ ರಾಶಿ ಬಿಸ್ಕೆಟ್‌ ನೋಡಿದೆ. ಒಂದೇ ಒಂದು ಬಿಸ್ಕೆಟ್‌ ತೆಗೆದುಕೊಳ್ಳಲು ಕೈಹಾಕಿದೆ. ಆದ್ರೆ ಬೆಲ್ಟ್‌ಗೆ ಕೈ ಸಿಕ್ಕಿಕೊಂಡಿದೆ. ಕೂಡಲೇ ಕಾರ್ಖಾನೆ ಸಿಬ್ಬಂದಿ ಮಗುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ. ಅಷ್ಟರಲ್ಲಾಗಲೇ ಮಗು ಸಾವನ್ನಪ್ಪಿತ್ತು. ಎಂದು ಅಂಬರನಾಥ್ ಪೊಲೀಸ್
    (Ambarnath Police) ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

    ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದನ್ನೂ ಓದಿ: Breaking | ರೇಣುಕಾಸ್ವಾಮಿ ಕೊಲೆ ಕೇಸ್‌ – ದರ್ಶನ್‌ & ಗ್ಯಾಂಗ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

  • ಮಹಿಳೆಯ ಹೊಟ್ಟೆಯಿಂದ 10 ಕೆ.ಜಿಯ ಗೆಡ್ಡೆ ಹೊರತೆಗೆದ ವೈದ್ಯರು!

    ಮಹಿಳೆಯ ಹೊಟ್ಟೆಯಿಂದ 10 ಕೆ.ಜಿಯ ಗೆಡ್ಡೆ ಹೊರತೆಗೆದ ವೈದ್ಯರು!

    ಥಾಣೆ: ಮಹಾರಾಷ್ಟ್ರದ ಥಾಣೆಯ (Thane, Maharastra) ಸಿವಿಲ್ ಆಸ್ಪತ್ರೆಯ ವೈದ್ಯರು ಅಸಾಧ್ಯವೆನಿಸಿದ ಆಪರೇಷನ್ ಅನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮಹಿಳೆಯೊಬ್ಬರಿಗೆ ಹೊಸ ಜೀವನ ನೀಡಿದ ಘಟನೆಯೊಂದು ನಡೆದಿದೆ. ಮಹಿಳೆಯ ಹೊಟ್ಟೆಯಿಂದ 10 ಕೆ.ಜಿ ಗೆಡ್ಡೆಯನ್ನು (ನೀರು ತುಂಬಿದ ಮಾಂಸದ ಉಂಡೆ) ಯಶಸ್ವಿಯಾಗಿ ಹೊರತೆಗೆದಿದ್ದಾರೆ.

    ತೀವ್ರ ಹೊಟ್ಟೆನೋವು: ಮಹಾರಾಷ್ಟ್ರದ ಉಲ್ಲಾಸನಗರ ಪ್ರದೇಶದಲ್ಲಿ ತರಕಾರಿ ಮಾರುತ್ತಿದ್ದ 48 ವರ್ಷದ ಮಹಿಳೆಯೊಬ್ಬರು ಕಳೆದ 6 ತಿಂಗಳಿನಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಆರ್ಥಿಕ ಸ್ಥಿತಿ ಚೆನ್ನಾಗಿರದ ಕಾರಣ ಅವರು ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಲು ಹಿಂಜರಿದಿದ್ದಾರೆ. ಹೀಗಾಗಿ ನೋವು ತಿನ್ನುತ್ತಲೇ ಜೀವನ ನಡೆಸುತ್ತಿದ್ದರು.ಕ್ರಮೇಣ ಈ ನೋವು ಹೆಚ್ಚಾಗಿ ತಡೆದುಕೊಳ್ಳಲು ಸಾಧ್ಯವಾಗದಿದ್ದಾಗ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದಾರೆ.

    ಆಸ್ಪತ್ರೆಗೆ ದಾಖಲು: ಜನವರಿ ಮೊದಲ ವಾರದಲ್ಲಿ ಉಲ್ಲಾಸನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆ ದಾಖಲಾದರು. ಇಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಜನವರಿ 20 ರಂದು ಥಾಣೆ ಸಿವಿಲ್ ಆಸ್ಪತ್ರೆಗೆ ಕಳುಹಿಸಿದ್ದರು. ಅದರಂತೆ ಮಹಿಳೆಯನ್ನು ಪರೀಕ್ಷಿಸಿದಾಗ ಆಕೆಯ ಹೊಟ್ಟೆಯಲ್ಲಿ ನೀರು ತುಂಬಿದ ಮಾಂಸದ ಉಂಡೆ ಇರುವುದು ಬೆಳಕಿಗೆ ಬಂದಿದೆ.

    ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಕೈಲಾಸ್ ಪವಾರ್ ಹಾಗೂ ಹೆಚ್ಚುವರಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಧೀರಜ್ ಮಹಾಂಗಡೆ ಅವರ ಮಾರ್ಗದರ್ಶನದಲ್ಲಿ ಸೋಮವಾರ ಮಹಿಳೆಗೆ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ಈ ವೇಳೆ ಆಕೆಯ ಹೊಟ್ಟೆಯಿಂದ ಸುಮಾರು 10 ಕೆಜಿ ತೂಕದ ನೀರು ತುಂಬಿದ ಮಾಂಸದ ಗೆಡ್ಡೆಯನ್ನು ಹೊರತೆಗೆಯಲಾಯಿತು.

    4 ಗಂಟೆ ನಡೆದ ಶಸ್ತ್ರಚಿಕಿತ್ಸೆ: ಮಹಿಳೆಯ ಗರ್ಭಾಶಯದದಲ್ಲಿ ನೀರಿನಿಂದ ತುಂಬಿದ ಗೆಡ್ಡೆಯಿರುವುದು (Meat filled with water 10 kg) ಬಯಲಾಯಿತು. ಶಸ್ತ್ರಚಿಕಿತ್ಸೆ ಸಾಕಷ್ಟು ಕಷ್ಟಕರವಾಗಿತ್ತು. ಆದರೆ ಆಸ್ಪತ್ರೆಯ ತಜ್ಞ ವೈದ್ಯರು ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದರು. ಸುಮಾರು ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆಯ ನಂತರ ವೈದ್ಯರು ಗೆಡ್ಡೆಯನ್ನು ಹೊರತೆಗೆದರು. ಸ್ತ್ರೀರೋಗ ತಜ್ಞೆ ಡಾ.ಶ್ರೇಯಾ ಶೆಲ್ಕೆ, ಅರಿವಳಿಕೆ ತಜ್ಞೆ ಪ್ರಿಯಾಂಕಾ ಮಹಾಂಗಡೆ ಹಾಗೂ ಇತರ ಸಿಬ್ಬಂದಿ ಈ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲು ಶ್ರಮಿಸಿದರು.

  • 2 ನಿಮಿಷ ನಿನ್ನ ಧ್ವನಿ ಕೇಳಬೇಕೆಂದು ಫೋನ್ ಮಾಡಿದ್ದ ಪತಿ ಸೂಸೈಡ್ ಮಾಡ್ಕೊಂಡ!

    2 ನಿಮಿಷ ನಿನ್ನ ಧ್ವನಿ ಕೇಳಬೇಕೆಂದು ಫೋನ್ ಮಾಡಿದ್ದ ಪತಿ ಸೂಸೈಡ್ ಮಾಡ್ಕೊಂಡ!

    ಮುಂಬೈ: ಪತ್ನಿ ಗಲಾಟೆ ಮಾಡಿದ್ದಕ್ಕೆ ಮನನೊಂದ ಪತಿರಾಯನೊಬ್ಬ ಆಕೆಗೆ ಫೋನ್ ಮಾಡಿ 2 ನಿಮಿಷ ಆಕೆಯ ಧ್ವನಿ ಕೇಳಿದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ (Thane) ನಡೆದಿದೆ.

    ಘಟನೆ ಏನಾಗಿತ್ತು..?
    ಮಹಾರಾಷ್ಟ್ರದ ಡೊಂಬಿವಿಲಿ (Dombivali) ನಿವಾಸಿ ಸುಧಾಕರ್ ಯಾದವ್ ಹಾಗೂ ಪತ್ನಿ ಸಂಜನಾ ಯಾದವ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿತ್ತು. ಇದರಿಂದ ಮನನೊಂದ ಸಂಜನಾ ಡಿಸೆಂಬರ್ 19ರಂದು ಪತಿ ಮನೆಯನ್ನು ಬಿಟ್ಟು ತನ್ನ ಸೋದರಿಯ ಮನೆಗೆ ಹೋಗಿದ್ದಾಳೆ.

    ಘಟನೆ ನಡೆದ ಮರುದಿನ, ಡಿಸೆಂಬರ್ 20ರಂದು ಬೆಳಗ್ಗೆ 10 ಗಂಟೆಗೆ ಸಂಜನಾಗೆ ಫೋನ್ ಮಾಡಿದ ಸುಧಾಕರ್ ನನಗೆ ಎರಡು ನಿಮಿಷ ನಿನ್ನ ವಾಯ್ಸ್ ಕೇಳಬೇಕು ಅನಿಸ್ತಿದೆ ಎಂದು ಹೇಳಿದ್ದಾನೆ. ಈ ವೇಳೆ ಸಂಜನಾ ಕುರ್ಲಾಗೆ ಕೆಲಸಕ್ಕಾಗಿ ತೆರಳುತ್ತಿದ್ದಳು. 2 ನಿಮಿಷ ಮಾತನಾಡಿದ ಬಳಿಕ ಸುಧಾಕರ್ ಫೋನ್ ಕಾಲ್ (Phone Call) ಕಟ್ ಮಾಡಿದ್ದ. ನಂತರ ವಾಟ್ಸಪ್‌ನಲ್ಲಿ ಪತಿ ಆತ್ಮಹತ್ಯೆಗೆ ಸಿದ್ಧನಾಗಿ ನಿಂತಿರೋ ಫೋಟೋ ಕಳಿಸಿದ್ದ ಎಂದು ಸಂಜನಾ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಇದನ್ನೂ ಓದಿ: RSS ಮುಖ್ಯಸ್ಥ ಮೋಹನ್ ಭಾಗವತ್ ಮೇಲೆ ದಾಳಿ ಎಚ್ಚರಿಕೆ

    ಜೊತೆಗೆ ಗಂಡನ ಮನೆಯ ಪಕ್ಕದ ಮನೆಯಲ್ಲಿದ್ದವರಿಗೆ ಕಾಲ್ ಮಾಡಿ ಮನೆಯಲ್ಲಿ ಚೆಕ್ ಮಾಡುವಂತೆ ಹೇಳಿದ್ದಾಳೆ. ನೆರೆಮನೆಯವರು ಬಂದು ಮನೆ ಬಾಗಿಲು ಬಡಿದರೂ ತೆರೆಯಲಿಲ್ಲ. ಬಳಿಕ ಅವರು ಬಾಗಿಲು ಒಡೆದು ನೋಡಿದಾಗ ಸುಧಾಕರ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಡೊಂಬಿವಿಲಿಯ ವಿಷ್ಣುನಗರ ಪೊಲೀಸ್ ಠಾಣೆಯಲ್ಲಿ (Dombivali VishnuNagar Police Station) ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಈಗಲೂ ನ್ಯಾಯ ಸಿಗುವ ನಿರೀಕ್ಷೆಯಲ್ಲಿದ್ದೇವೆ, ನಮ್ಮ ದುಃಖ ಯಾರಿಗೆ ಹೇಳೋಣ? – ನಿಲ್ಲದ ಕುಸ್ತಿಪಟುಗಳ ವೇದನೆ

  • 40ನೇ ಫ್ಲೋರ್‌ನಿಂದ ನೆಲಕ್ಕೆ ಕುಸಿದ ಲಿಫ್ಟ್ – 7 ಜನರ ದುರ್ಮರಣ

    40ನೇ ಫ್ಲೋರ್‌ನಿಂದ ನೆಲಕ್ಕೆ ಕುಸಿದ ಲಿಫ್ಟ್ – 7 ಜನರ ದುರ್ಮರಣ

    ಮುಂಬೈ: 40ನೇ ಮಹಡಿಯಿಂದ ಒಮ್ಮೆಲೆ ನೆಲ ಮಾಳಿಗೆಗೆ ಲಿಫ್ಟ್ (Lift) ಕುಸಿದ ಪರಿಣಾಮ 7 ಜನ ಮೃತಪಟ್ಟ ಘಟನೆ ಮಹಾರಾಷ್ಟ್ರದ (Maharashtra) ಥಾಣೆಯಲ್ಲಿ (Thane) ನಡೆದಿದೆ.

    ಮೃತರನ್ನು ಮಹೇಂದ್ರ ಚೌಪಾಲ್ (32), ರೂಪೇಶ್ ಕುಮಾರ್ ದಾಸ್ (21), ಹರೂನ್ ಶೇಖ್ (47), ಮಿಥ್ಲೇಶ್ (35), ಕರಿದಾಸ್ (38) ಮತ್ತು ಸುನೀಲ್ ಕುಮಾರ್ ದಾಸ್ (21) ಎಂದು ಗುರುತಿಸಲಾಗಿದೆ. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಇವರೆಲ್ಲ ಕಟ್ಟಡ ಕಾರ್ಮಿಕರಾಗಿದ್ದು ಲಿಫ್ಟ್‌ನಲ್ಲಿ ಇಳಿಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಲಿಫ್ಟ್‌ನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಿರಿಯೂರು ಬಳಿ ಬಸ್, ಲಾರಿ ಮಧ್ಯೆ ಭೀಕರ ಅಪಘಾತ – ಐವರ ದುರ್ಮರಣ

    ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ, ಲಿಫ್ಟ್ ಅಪಘಾತ ಬಹು ದೊಡ್ಡ ದುರಂತವಾಗಿದೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ.

    ಪ್ರಾಥಮಿಕ ತನಿಖೆಯ ಪ್ರಕಾರ ಲಿಫ್ಟ್‌ನ ಕೇಬಲ್ ತುಂಡಾಗಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ರಸ್ತೆಯಲ್ಲಿ ಕುರಿಬಲಿ ಕೊಟ್ಟಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕರಿಬ್ಬರ ಮೇಲೆ ಹಲ್ಲೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಕ್ಸ್‌ಪ್ರೆಸ್ ವೇ ನಿರ್ಮಾಣದ ವೇಳೆ ಕ್ರೇನ್ ಕುಸಿದು 16 ಮಂದಿ ಕಾರ್ಮಿಕರು ದುರ್ಮರಣ

    ಎಕ್ಸ್‌ಪ್ರೆಸ್ ವೇ ನಿರ್ಮಾಣದ ವೇಳೆ ಕ್ರೇನ್ ಕುಸಿದು 16 ಮಂದಿ ಕಾರ್ಮಿಕರು ದುರ್ಮರಣ

    ಮುಂಬೈ: ಸಮೃದ್ಧಿ ಎಕ್ಸ್‌ಪ್ರೆಸ್ ವೇಯ (Samruddhi Expressway) ಮೂರನೇ ಹಂತದ ನಿರ್ಮಾಣದ ವೇಳೆ ಸೇತುವೆಯ ಚಪ್ಪಡಿಯ ಮೇಲೆ ಕ್ರೇನ್ (Crane) ಕುಸಿದು ಬಿದ್ದಿದ್ದು, 16 ಮಂದಿ ಕಾರ್ಮಿಕರು (Workers) ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ (Maharashtra) ಥಾಣೆ (Thane) ಜಿಲ್ಲೆಯಲ್ಲಿ ನಡೆದಿದೆ.

    ಸೋಮವಾರ ಮಧ್ಯರಾತ್ರಿ 12 ಗಂಟೆಯ ವೇಳೆ ಘಟನೆ ನಡೆದಿದ್ದು, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೊಬೈಲ್ ಗ್ಯಾಂಟ್ರಿ ಕ್ರೇನ್ ಅನ್ನು ಸೇತುವೆ ನಿರ್ಮಾಣದಲ್ಲಿ ಮತ್ತು ಹೆದ್ದಾರಿ ನಿರ್ಮಾಣ ಯೋಜನೆಗಳಲ್ಲಿ ಪ್ರಿಕಾಸ್ಟ್ ಬಾಕ್ಸ್‌ಗಳನ್ನು ಸ್ಥಾಪಿಸಲು ಬಳಸಲಾಗುತ್ತದೆ. ಇದನ್ನೂ ಓದಿ: ವಿಶ್ವ ಹಿಂದೂ ಪರಿಷತ್‌ ಮೆರವಣಿಗೆ ಮೇಲೆ ಕಲ್ಲು ತೂರಾಟ – ಹರಿಯಾಣದಲ್ಲಿ ಹಿಂಸಾಚಾರ, ಇಬ್ಬರು ಸಾವು

    ಮುಂಬೈನಿಂದ 80 ಕಿಲೋ ಮೀಟರ್ ದೂರದಲ್ಲಿರುವ ಶಹಪುರ್ ತೆಹಸಿಲ್ ಸರ್ಲಾಂಬೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದ ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಉಗ್ರ ಅಫ್ಸರ್ ಪಾಷಾ ಮಂಗಳೂರು ಸ್ಫೋಟದ ಮಾಸ್ಟರ್ ಮೈಂಡ್ – ಶಾರೀಕ್‌ಗೆ ಜೈಲಿನಲ್ಲೇ ತರಬೇತಿ

    ಮಂಗಳವಾರ ಮುಂಜಾನೆ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಎಂಎಸ್‌ಆರ್‌ಡಿಸಿ ಸಚಿವ ದಾದಾ ಭೂಸೆ, ಅವಶೇಷಗಳ ಅಡಿಯಲ್ಲಿ ಇನ್ನಷ್ಟು ಮಂದಿ ಸಿಲುಕಿರುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯ ಮುಂದುವರೆಯುತ್ತಿದೆ ಎಂದರು. ಅಧಿಕಾರಿಗಳ ಪ್ರಕಾರ ಕನಿಷ್ಟ ಆರು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಲ್ಲಿ ನಾಲ್ವರನ್ನು ಗುಂಡಿಕ್ಕಿ ಕೊಂದ ಆರ್‌ಪಿಎಫ್ ಪೇದೆ

    ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: 5 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆಗೈದ ಪಾಪಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಡುರಸ್ತೆಯಲ್ಲೇ ಸ್ಕೂಟಿ ಮೇಲೆ ಕುಳಿತು ಸ್ನಾನ ಮಾಡಿದ ಲವರ್ಸ್‌

    ನಡುರಸ್ತೆಯಲ್ಲೇ ಸ್ಕೂಟಿ ಮೇಲೆ ಕುಳಿತು ಸ್ನಾನ ಮಾಡಿದ ಲವರ್ಸ್‌

    ಮುಂಬೈ: ಯುವಕ-ಯುವತಿ ಇಬ್ಬರು ನಡುರಸ್ತೆಯಲ್ಲೇ ಸ್ಕೂಟಿ ಮೇಲೆ ಕುಳಿತು ಸ್ನಾನ ಮಾಡುತ್ತಿರುವ ವಿಲಕ್ಷಣ ಘಟನೆಯೊಂದು ಮಹಾರಾಷ್ಟ್ರದ (Maharashtra) ಉಲ್ಹಾಸ್‌ನಗರದಲ್ಲಿ ನಡೆದಿದೆ.

    ದೇಶದ ವಿವಿಧ ಭಾಗಗಳಲ್ಲಿ ತಾಪಮಾನ ಏರಿಕೆ ನಡುವೆ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಪ್ರೇಮಿಗಳಿಬ್ಬರು (Lovers) ಸ್ಕೂಟಿ ಮೇಲೆ ಕುಳಿತು ಸ್ನಾನ ಮಾಡುತ್ತಿರುವ ವೀಡಿಯೋ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇವರಿಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

    WeDeserveBetterGovt ಎಂಬ ಟ್ವಿಟ್ಟರ್‌ ಖಾತೆಯಲ್ಲಿ ವೀಡಿಯೋ ಹಂಚಿಕೊಂಡಿದ್ದು, ಉಲ್ಲಾಸ್‌ನಗರದ ಸೆಕ್ಟರ್‌ 17ನೇ ಮುಖ್ಯರಸ್ತೆಯಲ್ಲಿ ನಡೆದಿದೆ. ಈ ವೀಡಿಯೋದಲ್ಲಿ ಯುವಕ-ಯುವತಿ ಇಬ್ಬರೂ ಸ್ಕೂಟಿ ಮೇಲೆ ಕುಳಿತು ಬಕೆಟ್‌ ನಲ್ಲಿ ನೀರು ಸುರಿದುಕೊಳ್ಳುತ್ತಿದ್ದಾರೆ. ಇತರ ಸವಾರರು ವೀಕ್ಷಣೆ ಮಾಡುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: ಟೀ ಕುಡಿತಾ ಕುಳಿತಿದ್ದ ವ್ಯಕ್ತಿಯ ಕಿಸೆಯಲ್ಲಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್- ಮುಂದೇನಾಯ್ತು?

    ಈ ವೀಡಿಯೋ ನೋಡಿರುವ ಥಾಣೆ ನಗರ ಪೊಲೀಸರು (Thane City Police) ಸೂಕ್ತ ಕ್ರಮ ಕೈಗೊಳ್ಳುವಂತೆ ಥಾಣೆಯ ಸಂಚಾರ ನಿಯಂತ್ರಣ ಕೊಠಡಿಗೆ ವರದಿ ಮಾಡಿದೆ. ಇದನ್ನೂ ಓದಿ: 15 ಜನ ನಿರಂತರವಾಗಿ ರೇಪ್‌ ಮಾಡಿದ್ರೆ ಹೇಗೆ ಪುರಾವೆ ಕೊಡ್ತೀರಾ – ಅದಾ ಶರ್ಮಾ ಪ್ರಶ್ನೆ

  • ನಾಳೆ ನನ್ನ ಶುಲ್ಕ ಮರೆಯುವುದಿಲ್ಲ – ವಿದ್ಯಾರ್ಥಿಗಳಿಗೆ ಬರೆಯುವ ಶಿಕ್ಷೆ ವಿಧಿಸಿದ್ದ ಟೀಚರ್ ಸಸ್ಪೆಂಡ್

    ನಾಳೆ ನನ್ನ ಶುಲ್ಕ ಮರೆಯುವುದಿಲ್ಲ – ವಿದ್ಯಾರ್ಥಿಗಳಿಗೆ ಬರೆಯುವ ಶಿಕ್ಷೆ ವಿಧಿಸಿದ್ದ ಟೀಚರ್ ಸಸ್ಪೆಂಡ್

    ಮುಂಬೈ: ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ಶಿಕ್ಷಿಸಿದ ಆರೋಪದ ಮೇಲೆ ಮಹಾರಾಷ್ಟ್ರದ (Maharashtra) ಥಾಣೆಯ (Thane) ಖಾಸಗಿ ಶಾಲಾ ಶಿಕ್ಷಕಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಶಿಕ್ಷಕಿ, ಶಾಲಾ ಶುಲ್ಕ (School fees) ಪಾವತಿಸದ ವಿದ್ಯಾರ್ಥಿಗಳಿಗೆ ನೋಟ್‍ಬುಕ್‍ನಲ್ಲಿ `ನಾಳೆ ನನ್ನ ಶಾಲಾ ಶುಲ್ಕವನ್ನು ತರಲು ನಾನು ಮರೆಯುವುದಿಲ್ಲ’ ಎಂದು 30 ಬಾರಿ ಬರೆಸಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರಿಂದ ಬೇಸತ್ತ ಪೋಷಕರು ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: 50,000 ರೂ.ಗೆ 17 ವರ್ಷದ ಅಪ್ರಾಪ್ತೆಯ ಮಾರಾಟ – ನಾಲ್ವರ ಬಂಧನ

    ಥಾಣೆ ಮುನ್ಸಿಪಲ್ ಕಾರ್ಪೋರೇಷನ್  (Thane Municipal Corporation) ಇದನ್ನು ಗಂಭೀರವಾಗಿ ಪರಿಗಣಿಸಿತ್ತು. ಸಿವಿಕ್ ಕಮಿಷನರ್ ಅಭಿಜಿತ್ ಭಂಗಾರ್ ಅವರು ಶಾಲೆಗೆ ಭೇಟಿ ನೀಡಿ ವಿಚಾರದ ಬಗ್ಗೆ ತನಿಖೆ ನಡೆಸುವಂತೆ ಶಿಕ್ಷಣಾಧಿಕಾರಿಗೆ ಆದೇಶಿಸಿದ್ದರು. ಶಿಕ್ಷಣಾಧಿಕಾರಿ ತನಿಖೆಯ ನಂತರ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಲಾ ಆಡಳಿತ ಮಂಡಳಿಗೆ ಆದೇಶ ನೀಡಿದ್ದರು. ಕೂಡಲೇ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಶಾಲೆಗೆ ಎಚ್ಚರಿಕೆ ನೀಡಲಾಗಿದೆ. ಈ ರೀತಿ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುವುದು ತಪ್ಪು. ಶಿಕ್ಷಣ ಹಕ್ಕು ಕಾಯಿದೆ (Right to Education Act) ಅಡಿ ಶಾಲಾ ವಿದ್ಯಾರ್ಥಿಗಳ ಭಾವನಾತ್ಮಕ ಅಥವಾ ದೈಹಿಕ ಕಿರುಕುಳ ನೀಡುವುದು ನಿಷೇಧಿಸಲಾಗಿದೆ. ಇಂತಹ ಪರಿಸ್ಥಿತಿಯು ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂಬ ಅಂಶವನ್ನು ನೆನಪಿಡ ಬೇಕು ಎಂದು ಕಮಿಷನರ್ ಹೇಳಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ ಸಾಬೀತಾದ್ರೆ ನಾನೇ ನೇಣು ಹಾಕ್ಕೋತೀನಿ: ಬ್ರಿಜ್ ಭೂಷಣ್

  • 3 ಅಂತಸ್ತಿನ ಕಟ್ಟಡ ಕುಸಿದು ನಾಲ್ವರ ಸಾವು – 12 ಮಂದಿ ರಕ್ಷಣೆ

    3 ಅಂತಸ್ತಿನ ಕಟ್ಟಡ ಕುಸಿದು ನಾಲ್ವರ ಸಾವು – 12 ಮಂದಿ ರಕ್ಷಣೆ

    ಮುಂಬೈ: ಮಹಾರಾಷ್ಟ್ರದ (Maharashtra) ಥಾನೆಯಲ್ಲಿ (Thane) ಶನಿವಾರ 3 ಅಂತಸ್ತಿನ ಕಟ್ಟಡ ಕುಸಿದ (Building Collapse) ಪರಿಣಾಮ ಅವಶೇಷಗಳಡಿ ಸಿಲುಕಿ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಸುಮಾರು 20 ಗಂಟೆಗಳ ಕಾಲ ನಡೆಸಿರುವ ತೆರವು ಕಾರ್ಯಾಚರಣೆಯಲ್ಲಿ 12 ಜನರನ್ನು ರಕ್ಷಿಸಲಾಗಿದೆ.

    ಮಹಾರಾಷ್ಟ್ರದ ಥಾಣೆಯಲ್ಲಿರುವ ಭಿವಂಡಿಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿದಿದೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಬಳಿಕ ಸ್ಥಳಕ್ಕೆ ಆಗಮಿಸಿದ ಎನ್‌ಡಿಆರ್‌ಎಫ್ ಹಾಗೂ ಟಿಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿವೆ.

    ಘಟನೆಯಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 12 ಜನರನ್ನು ರಕ್ಷಿಸಲಾಗಿದೆ. ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ. ಗಾಯಾಳುಗಳನ್ನು ಇಂದಿರಾಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಲೂಧಿಯಾನ ಫ್ಯಾಕ್ಟರಿಯಲ್ಲಿ ಗ್ಯಾಸ್ ಲೀಕ್ – 9 ಮಂದಿ ಸಾವು

    ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ವಿಚಾರಿಸಿದ್ದಾರೆ. ಘಟನೆಯಲ್ಲಿ ಬದುಕುಳಿದಿರುವ ಇಬ್ಬರು ಮಕ್ಕಳ ಬಗ್ಗೆಯೂ ವಿಚಾರಿಸಿದ್ದಾರೆ. ಸರ್ಕಾರಿ ವೆಚ್ಚದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಆಪರೇಷನ್ ಕಾವೇರಿ- 229 ಭಾರತೀಯರನ್ನು ಹೊತ್ತ 7ನೇ ವಿಮಾನ ಜೆಡ್ಡಾದಿಂದ ಬೆಂಗಳೂರಿನತ್ತ