Tag: ಥಾಣೆ

  • ಮಹಿಳೆಯರು ಏನೂ ಧರಿಸದಿದ್ರೂ ಚೆನ್ನಾಗಿ ಕಾಣಿಸುತ್ತಾರೆ: ಬಾಬಾ ರಾಮ್‌ದೇವ್

    ಮಹಿಳೆಯರು ಏನೂ ಧರಿಸದಿದ್ರೂ ಚೆನ್ನಾಗಿ ಕಾಣಿಸುತ್ತಾರೆ: ಬಾಬಾ ರಾಮ್‌ದೇವ್

    ಮುಂಬೈ: ತಮ್ಮ ಹೇಳಿಕೆಗಳಿಂದ ಆಗಾಗ ಸುದ್ದಿಯಾಗುವ ಪತಂಜಲಿ ಮುಖ್ಯಸ್ಥ, ಯೋಗ ಗುರು ಬಾಬಾ ರಾಮ್‌ದೇವ್ (Baba Ramdev) ಇದೀಗ ಮಹಿಳೆಯರ ಉಡುಪುಗಳ (Women’s Clothing) ಕುರಿತಾಗಿ ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿದೆ.

    ಮಹಾರಾಷ್ಟ್ರದ (Maharashtra) ಥಾಣೆಯಲ್ಲಿ (Thane) ನಡೆದ ಯೋಗ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ರಾಮ್ ದೇವ್ ಬಾಬಾ, ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಸಲ್ವಾರ್ ಸೂಟ್‌ನಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ ಎಂದು ಬಾಬಾ ರಾಮದೇವ್ ಹೇಳಿದ್ದಾರೆ.

    ರಾಮ್‌ದೇವ್ ಅವರು ಈ ಹೇಳಿಕೆಯನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಸಮ್ಮುಖದಲ್ಲಿಯೇ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಹಾಗೂ ಸಂಸದ ಶ್ರೀಕಾಂತ್ ಶಿಂಧೆ ಕೂಡಾ ಭಾಗಿಯಾಗಿದ್ದರು.

    ವರದಿಗಳ ಪ್ರಕಾರ ಮಹಿಳೆಯರಿಗಾಗಿ ಯೋಗ ತರಬೇತಿ ಕಾರ್ಯಕ್ರಮ ನಡೆಸಲಾಗಿತ್ತು. ಇದಾದ ಬಳಿಕ ಸಮಾವೇಶ ಆಯೋಜಿಸಲಾಗಿತ್ತು. ಯೋಗ ತರಬೇತಿಯಲ್ಲಿ ಭಾಗಿಯಾಗಿದ್ದ ಮಹಿಳೆಯರು ಸಮಾವೇಶಕ್ಕಾಗಿ ಸೀರೆಯನ್ನೂ ತಂದಿದ್ದರು. ಆದರೆ ಯೋಗ ತರಬೇತಿ ಮುಗಿದ ತಕ್ಷಣವೇ ಸಭೆ ಆರಂಭವಾಗಿತ್ತು. ಇದರಿಂದ ಮಹಿಳೆಯರಿಗೆ ಸೀರೆ ಉಟ್ಟುಕೊಳ್ಳಲು ಸಮಯ ಸಿಕ್ಕಿರಲಿಲ್ಲ. ಇದನ್ನೂ ಓದಿ: ಓಲಾ, ಉಬರ್‌ ಆಟೋಗಳಿಗೆ ಶೇ.5 ಕಮಿಷನ್‌ ದರ ನಿಗದಿ

    ಈ ಕುರಿತು ಹೇಳಿಕೆ ನೀಡಿದ ಬಾಬಾ ರಾಮ್‌ದೇವ್, ಸೀರೆ ಉಡಲು ಸಮಯವಿಲ್ಲದಿದ್ದರೂ ಸಮಸ್ಯೆ ಇಲ್ಲ. ಈಗ ನೀವು ಮನೆಗೆ ಹೋಗಿ ಸೀರೆ ಉಟ್ಟುಕೊಳ್ಳಿ. ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಸಲ್ವಾರ್ ಸೂಟ್‌ಗಳಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.

    ಪತಂಜಲಿ ಯೋಗ ಪೀಠ ಮತ್ತು ಮುಂಬೈ ಮಹಿಳಾ ಪತಂಜಲಿ ಯೋಗ ಸಮಿತಿ ವತಿಯಿಂದ ಶುಕ್ರವಾರ ಥಾಣೆಯ ಹೈಲ್ಯಾಂಡ್ ಪ್ರದೇಶದಲ್ಲಿ ಯೋಗ ವಿಜ್ಞಾನ ಶಿಬಿರ ಮತ್ತು ಮಹಿಳಾ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಅಮೃತಾ ಫಡ್ನವೀಸ್ ಉಪಸ್ಥಿತರಿದ್ದರು. ಈ ವೇಳೆ ಬಾಬಾ ರಾಮದೇವ್ ಮಹಿಳೆಯರೊಂದಿಗೆ ಸಂವಾದ ನಡೆಸುತ್ತಿದ್ದಾಗ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಕಳ್ಳನೇ ತಿರುಗಿ ಬೊಬ್ಬೆ ಹೊಡೆದ ರೀತಿಯಲ್ಲಿ ಬೊಮ್ಮಾಯಿ ಬೊಬ್ಬೆ ಹೊಡೆಯುತ್ತಿದ್ದಾರೆ: ನಾಲಿಗೆ ಹರಿಬಿಟ್ಟ ಶಿವಸೇನೆ ಪುಂಡ

    Live Tv
    [brid partner=56869869 player=32851 video=960834 autoplay=true]

  • ಮುಂಬೈ, ಥಾಣೆ ನಡುವೆ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಪ್ಲಾನ್: ಏಕನಾಥ್ ಶಿಂಧೆ

    ಮುಂಬೈ, ಥಾಣೆ ನಡುವೆ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಪ್ಲಾನ್: ಏಕನಾಥ್ ಶಿಂಧೆ

    ಮುಂಬೈ: ಕಲಾವಿದರಿಗಾಗಿ ವಿಶಾಲವಾದ ವೇದಿಕೆ ಕಲ್ಪಿಸಲು ಮುಂಬೈ (Mumbai) ಮತ್ತು ಥಾಣೆ (Thane) ನಗರಗಳ ನಡುವೆ ಫಿಲ್ಮ್ ಸಿಟಿ (Film City) ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಯೋಜಿಸಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಹೇಳಿದ್ದಾರೆ.

    ಖ್ಯಾತ ಮರಾಠಿ ರಂಗಭೂಮಿ ಕಲಾವಿದ ಪ್ರಶಾಂತ್ ದಾಮ್ಲೆ (Prashant Damle) ಅವರ ‘ಏಕ್ ಲಗ್ನಾಚಿ ಗೋಷ್ಟ್’ (Eka Lagnachi Gosht) ಎಂಬ ನಾಟಕದ 12,500ನೇ ಪ್ರದರ್ಶನಕ್ಕೆ ಆಗಮಿಸಿ, ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದ ಏಕನಾಥ್ ಶಿಂಧೆ ಅವರು, ರಾಜ್ಯ ಸರ್ಕಾರ ಮರಾಠಿ ರಂಗಭೂಮಿ ಮತ್ತು ಸಿನಿಮಾಗೆ ಬೆಂಬಲ ವ್ಯಕ್ತಪಡಿಸುವುದಾಗಿ ತಿಳಿಸಿದರು. ಇದನ್ನೂ ಓದಿ: ಇದೇ ವಾರ ರಾಜಧಾನಿಗೆ ಪ್ರಧಾನಿ ಮೋದಿ- ಬೆಂಗಳೂರಿನಲ್ಲಿ ಅಖಾಡಕ್ಕಿಳಿದ ಸಿಎಂ

    ಥಾಣೆಯಲ್ಲೂ ಸಾಕಷ್ಟು ಶೂಟಿಂಗ್‍ಗಳು ನಡೆಯುತ್ತಿರುತ್ತದೆ, ಮುಂಬೈ ಮತ್ತು ಥಾಣೆ ನಡುವೆ 23 ಕಿ.ಮೀ. ಪ್ರತ್ಯೇಕಿಸಿ ಫಿಲ್ಮ್ ಸಿಟಿಯನ್ನು ನಿರ್ಮಿಸುವ ಬಗ್ಗೆ ಸರ್ಕಾರ ಯೋಜಿಸಿದ್ದು, ಆದಷ್ಟು ಶೀಘ್ರವೇ ಕೆಲಸ ಮಾಡಲಿದೆ ಎಂದರು. ಇದನ್ನೂ ಓದಿ: ಹೇಮಾವತಿ ಹಿನ್ನೀರಿನಲ್ಲಿ ತೇಲುವ ಹಡಗು- ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಶೆಟ್ಟಿಹಳ್ಳಿ ಚರ್ಚ್

    ಡ್ರಾಮಾ ಆಡಿಟೋರಿಯಂಗಳನ್ನು ಪರಿಶೀಲಿಸಿ ಮತ್ತು ಅವುಗಳನ್ನು ಅಭಿವೃದ್ಧಿಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನೋಡಲ್ ಅಧಿಕಾರಿಯನ್ನು ನೇಮಿಸಲಾಗುತ್ತದೆ ಎಂದರು. ಅಲ್ಲದೇ ಇದೇ ವೇಳೆ ಪ್ರಶಾಂತ್ ದಾಮ್ಲೆ ಅವರಿಗೆ ಪದ್ಮ ಶ್ರೀ ಪ್ರಶಸ್ತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಗಿಫ್ಟ್ ನೀಡೋ ನೆಪದಲ್ಲಿ 18 ಲಕ್ಷ ರೂ. ವಂಚನೆ – ವಿದೇಶಿ ಜೋಡಿಯಿಂದ ಮಹಿಳೆಗೆ ಪಂಗನಾಮ

    ಗಿಫ್ಟ್ ನೀಡೋ ನೆಪದಲ್ಲಿ 18 ಲಕ್ಷ ರೂ. ವಂಚನೆ – ವಿದೇಶಿ ಜೋಡಿಯಿಂದ ಮಹಿಳೆಗೆ ಪಂಗನಾಮ

    ಮುಂಬೈ: ಫೇಸ್‍ಬುಕ್‍ನಲ್ಲಿ ಪರಿಚಯವಾದ ವಿದೇಶಿ ಜೋಡಿಯೊಂದು ಗಿಫ್ಟ್ ನೀಡುವ ನೆಪದಲ್ಲಿ ಮಹಿಳೆಯೊಬ್ಬರಿಗೆ 18.15 ಲಕ್ಷ ರೂಪಾಯಿ ವಂಚಿಸಿರುವುದಾಗಿ ಥಾಣೆ (Thane) ನಗರ ಪೊಲೀಸರು ತಿಳಿಸಿದ್ದಾರೆ.

    ಜನವರಿ ತಿಂಗಳಿನಲ್ಲಿ 48 ವರ್ಷದ ಮಹಿಳೆಗೆ ಫೇಸ್‍ಬುಕ್‍ನಲ್ಲಿ ವ್ಯಕ್ತಿ ಹಾಗೂ ಮಹಿಳೆ ರಿಕ್ವೆಸ್ಟ್ ಕಳುಹಿಸಿದ್ದರು. ಜೊತೆಗೆ ಇಬ್ಬರು ಲಂಡನ್ (London) ಮೂಲದ ನರಶಸ್ತ್ರಚಿಕಿತ್ಸಕರು ಎಂದು ಹೇಳಿಕೊಂಡಿದ್ದರು. ನಂತರ ಆಗಸ್ಟ್‌ನಲ್ಲಿ ಇಬ್ಬರೂ ಸೇರಿ ಮಹಿಳೆಗೆ ದುಬಾರಿ ಉಡುಗೊರೆಯನ್ನು ಕಳುಹಿಸಿರುವುದಾಗಿ ಮಹಿಳೆಗೆ ಸಂದೇಶ ಕಳುಹಿಸಿದ್ದಾರೆ. ಆದರೆ ಅದನ್ನು ಕಸ್ಟಮ್ಸ್‌ನಿಂದ ತೆರವುಗೊಳಿಸಲು ಸ್ವಲ್ಪ ಹಣವನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

    ಈ ಮಾತನ್ನು ನಂಬಿದ ಮಹಿಳೆ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ವಿವಿಧ ಬ್ಯಾಂಕ್ ಖಾತೆಗಳಲ್ಲಿ ಒಟ್ಟು 18,51,221 ರೂಪಾಯಿ ಜಮಾ ಮಾಡಿದ್ದಾಳೆ. ನಂತರ ಯಾವುದೇ ಉಡುಗೊರೆ ಬರದಿದ್ದಾಗ ಆಕೆಗೆ ತಾನು ಮೋಸ ಹೋಗಿರುವ ವಿಚಾರ ಅರಿವಾಗಿದೆ. ಇದನ್ನೂ ಓದಿ: ವಿಶ್ವಕಪ್‌ನಲ್ಲಿರೋ ಆಟಗಾರರಿಗೆ ಸರಿಯಾಗಿ ಊಟ ಸಿಗ್ತಿಲ್ಲ- ಟೀಂ ಇಂಡಿಯಾ ಬೇಸರ

    ಬಳಿಕ ಈ ಸಂಬಂಧ ಥಾಣೆ ನಗರದ ಶ್ರೀನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420 (ವಂಚನೆ) ಮತ್ತು 406 (ಕ್ರಿಮಿನಲ್ ನಂಬಿಕೆಯ ಉಲ್ಲಂಘನೆ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ – 10 ಕೋಟಿಗೆ ಬೇಡಿಕೆ ಇಟ್ಟಿತ್ತಾ ಮಹಿಳೆ ಆ್ಯಂಡ್ ಟೀಂ?

    Live Tv
    [brid partner=56869869 player=32851 video=960834 autoplay=true]

  • ಕಾಲೇಜು ವಿದ್ಯಾರ್ಥಿನಿಯನ್ನು 500 ಮೀಟರ್ ಎಳೆದೊಯ್ದ ಆಟೋ ಚಾಲಕ!

    ಕಾಲೇಜು ವಿದ್ಯಾರ್ಥಿನಿಯನ್ನು 500 ಮೀಟರ್ ಎಳೆದೊಯ್ದ ಆಟೋ ಚಾಲಕ!

    ಮುಂಬೈ: ಚಾಲಕನೊಬ್ಬ 21 ವರ್ಷದ ಕಾಲೇಜು ವಿದ್ಯಾರ್ಥಿನಿ (College Student) ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಲ್ಲದೇ ಆಕೆಯನ್ನು 500 ಮೀಟರ್ ಎಳೆದುಕೊಂಡು ಹೋದ ಘಟನೆ ನಡೆದಿದೆ.

    ಈ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ವಿಷಯ ಬೆಳಕಿಗೆ ಬಂದಿದೆ. ಶುಕ್ರವಾರ ಬೆಳ್ಳಂಬೆಳಗ್ಗೆ 6.40ರ ವೇಳೆಗೆ ವಿದ್ಯಾರ್ಥಿನಿ ತನ್ನ ಪಾಡಿಗೆ ತಾನು ಕಾಲೇಜಿಗೆ ತೆರಳುತ್ತಿದ್ದಳು. ಈ ವೇಳೆ ಆಟೋ ಚಾಲಕ (Auto Driver) ಕೃತ್ಯ ಎಸಗಲು ಪ್ರಯತ್ನಿಸಿದ್ದಾನೆ.

    POLICE JEEP

    ಆರೋಪಿ ಹಾಗೂ ವಿದ್ಯಾರ್ಥಿನಿ ನಡುವೆ ವಿಚಾರವೊಂದಕ್ಕೆ ಮೊದಲು ವಾಗ್ವಾದ ನಡೆದಿದೆ. ಈ ವೇಳೆ ಆಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾಳೆ. ಇದರಿಂದ ಸಿಟ್ಟುಗೊಂಡ ಆರೋಪಿ, ವಿದ್ಯಾರ್ಥಿಯನ್ನು ಸುಮಾರು 500 ಮೀಟರ್ ಧರಧರನೇ ಎಳೆದುಕೊಂಡು ಬಂದು ತನ್ನ ಆಟೋದ ಒಳಗಡೆ ತಳ್ಳಲು ಯತ್ನಿಸಿದ್ದಾನೆ. ಇದನ್ನೂ ಓದಿ: ಪ್ರೀತಿ ಮಾಡ್ಬೇಡ ಎಂದಿದ್ದಕ್ಕೆ ಅಪ್ರಾಪ್ತೆ ಆತ್ಮಹತ್ಯೆ – ದ್ವೇಷಕ್ಕೆ ಹುಡುಗಿ ಮನೆಯವರಿಂದ ಪ್ರಿಯಕರನ ಕೊಲೆ ಆರೋಪ

    ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿನಿ, ಆಟೋ ಚಾಲಕನನ್ನು ಹಿಡಿದುಕೊಳ್ಳಲು ಪ್ರಯತ್ನಿಸಿದ್ದಾಳೆ. ಇದನ್ನರಿತ ಆಟೋ ಚಾಲಕ ಅಲ್ಲಿಂದ ಕಾಲ್ಕಿತ್ತಿದ್ದು, ವಿದ್ಯಾರ್ಥಿನಿಯನ್ನು 500 ಮೀಟರ್ ಎಳೆದೊಯ್ದಿದ್ದಾನೆ. ಪರಿಣಾಮ ವಿದ್ಯಾರ್ಥಿನಿ ಗಂಭೀರ ಗಾಯಗೊಂಡಿದ್ದಾಳೆ. ಮೂರು ಚಕ್ರದ ವಾಹನದಿಂದ ಎಳೆದುಕೊಂಡು ಹೋಗಿದ್ದರಿಂದ ಯುವತಿ ರಸ್ತೆಗೆ ಬಿದ್ದಿದ್ದಾಳೆ. ಬಳಿಕ ಆಟೋ ಚಾಲಕ ಪರಾರಿಯಾಗಿದ್ದಾನೆ.

    POLICE JEEP

    ಘಟನೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತ ಆರೋಪಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 16ರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರ ಬಂಧನ

    16ರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರ ಬಂಧನ

    ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿಗಳಲ್ಲಿ ಒಬ್ಬ ಮರ್ಚೆಂಟ್ ನೇವಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರೆ, ಮತ್ತೊಬ್ಬ ಹಿಸ್ಟರಿ ಶೀಟರ್ ಆಗಿದ್ದಾನೆ. ಆಗಸ್ಟ್ 26 ರಂದು ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ದೇಶದ ದೈತ್ಯ ಅವಳಿ ಕಟ್ಟಡ ನೆಲಸಮ – ಅಕ್ಕಪಕ್ಕದ ಕಾಂಪ್ಲೆಕ್ಸ್‌ಗಳ ಗೋಡೆ, ಕಿಟಕಿಗಳು ಡ್ಯಾಮೇಜ್

    jail

    ಶುಕ್ರವಾರ ಮಧ್ಯಾಹ್ನ ಆರೋಪಿಗಳು ಬಾಲಕಿಯನ್ನು ಭಿವಂಡಿಯ ಕಲ್ಹೇರ್‌ನಲ್ಲಿರುವ ಫ್ಲಾಟ್‌ಗೆ ಕರೆದೊಯ್ದರು. ಬಾಲಕಿ ಕೈಗಳನ್ನು ಕಟ್ಟಿಹಾಕಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಥಾಣೆ ನಗರದ ವಾಗ್ಲೆ ಎಸ್ಟೇಟ್ ವಿಭಾಗದ ಚಿತಾಲ್ಸರ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಸಚಿನ್ ಕಾಂಬ್ಳೆ (30), ಆಕಾಶ್ ಕನೋಜಿಯಾ (22) ಮತ್ತು ಅಸು (20) ಎಂದು ಗುರುತಿಸಲಾಗಿದೆ. ಸಂತ್ರಸ್ತೆ ಮತ್ತು ಆರೋಪಿಗಳು ವಾಗ್ಲೆ ಎಸ್ಟೇಟ್ ಪ್ರದೇಶದಲ್ಲಿ ವಾಸವಾಗಿದ್ದರು. ಇದನ್ನೂ ಓದಿ: ಮಾಲ್‍ನಲ್ಲಿ ನಮಾಜ್- ಭಜರಂಗದಳದಿಂದ ಹನುಮಾನ್ ಚಾಲೀಸಾ ಪಠಿಸಿ ಪ್ರತಿಭಟನೆ

    ಮೂವರು ಆರೋಪಿಗಳ ವಿರುದ್ಧ ಐಪಿಸಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಉದ್ಧವ್‌ಗೆ ಮತ್ತೆ ಶಾಕ್ – ಶಿವಸೇನೆಯ 64 ಪಾಲಿಕೆ ಸದಸ್ಯರು ಶಿಂಧೆ ಬಣಕ್ಕೆ ಸೇರ್ಪಡೆ

    ಉದ್ಧವ್‌ಗೆ ಮತ್ತೆ ಶಾಕ್ – ಶಿವಸೇನೆಯ 64 ಪಾಲಿಕೆ ಸದಸ್ಯರು ಶಿಂಧೆ ಬಣಕ್ಕೆ ಸೇರ್ಪಡೆ

    ಮುಂಬೈ: ಏಕನಾಥ್ ಶಿಂಧೆ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗಳು ತಿರುವುಪಡೆದುಕೊಳ್ಳುತ್ತಿದ್ದು, ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಹೊಡೆತ ಬಿದ್ದಿದೆ.

    ಥಾಣೆ ಜಿಲ್ಲೆಯಲ್ಲಿ ಶಿವಸೇನೆಯ 66 ಮಂದಿ ನಗರಪಾಲಿಕೆ ಸದಸ್ಯರು ಏಕನಾಥ್ ಶಿಂಧೆ ಪಾಳೆಯಕ್ಕೆ ಸೇರ್ಪಡೆಗೊಂಡಿದ್ದು ಉದ್ಧವ್ ಠಾಕ್ರೆಗೆ ಭಾರಿ ಹಿನ್ನಡೆಯಾಗಿದೆ. ಇದನ್ನೂ ಓದಿ: ಅಭಿವೃದ್ಧಿ ಮತ್ತು ಹಿಂದುತ್ವಕ್ಕಾಗಿ ಬಿಜೆಪಿ ನಮ್ಮನ್ನು ಬೆಂಬಲಿಸಿದೆ – ಏಕನಾಥ್‌ ಶಿಂಧೆ

    ಸದ್ಯ ಶಿವಸೇನೆಯು ಪ್ರಸ್ತುತ ಉದ್ಧವ್ ಠಾಕ್ರೆ ಹಾಗೂ ಏಕನಾಥ್ ಶಿಂಧೆ ಎರಡು ಬಣಗಳಾಗಿ ವಿಭಜಿಸಲ್ಪಟ್ಟಿದೆ. ನೂತನ ಮುಖ್ಯಮಂತ್ರಿಯಾಗಿರುವ ಏಕನಾಥ್ ಶಿಂಧೆ, ಈಚೆಗಷ್ಟೇ ಶಿವಸೇನೆಯಿಂದ ಬಂಡಾಯವೆದ್ದು ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದಾರೆ. ಇದನ್ನೂ ಓದಿ: ಐಸಿಯುವಿನಲ್ಲಿ ಲಾಲು ಪ್ರಸಾದ್ ಯಾದವ್‍ಗೆ ಚಿಕಿತ್ಸೆ – ಆರೋಗ್ಯ ವಿಚಾರಿಸಿದ ಮೋದಿ

    ಶಿವಸೇನೆಯಿಂದ ಬಂಡಾಯವೆದ್ದಾಗ ಅವರನ್ನು ಉಪಮುಖ್ಯಮಂತ್ರಿ ಮಾಡಬಹುದೆಂಬ ನಿರೀಕ್ಷೆಯಿತ್ತು. ಆದರೆ ಮುಖ್ಯಮಂತ್ರಿ ಸ್ಥಾನ ಸಿಗುವಂತೆ ಮಾಡಿ ಹಲವರನ್ನು ಅಚ್ಚರಿಗೊಳಿಸಿದೆ. ಇದೀಗ ಉದ್ಧವ್ ಠಾಕ್ರೆಯ ಬಣವನ್ನು ಇನ್ನಷ್ಟು ದುರ್ಬಲಗೊಳಿಸಲು ಬಿಜೆಪಿ ಗೇಮ್‌ಪ್ಲಾನ್ ಮಾಡಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಲೈಂಗಿಕ ಕಾರ್ಯಕರ್ತೆ ಮೇಲೆ ಹಲ್ಲೆ – ನಾಲ್ವರ ವಿರುದ್ಧ ದೂರು ದಾಖಲು

    ಲೈಂಗಿಕ ಕಾರ್ಯಕರ್ತೆ ಮೇಲೆ ಹಲ್ಲೆ – ನಾಲ್ವರ ವಿರುದ್ಧ ದೂರು ದಾಖಲು

    ಮುಂಬೈ: ಹಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳು ಲೈಂಗಿಕ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

    ಥಾಣೆ ಜಿಲ್ಲೆಯ ಭಿವಂಡಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. 23 ವರ್ಷದ ಲೈಂಗಿಕ ಕಾರ್ಯಕರ್ತೆ ನೀಡಿದ ದೂರಿನ ಆಧಾರದ ಮೇಲೆ ದಂಪತಿ ಮತ್ತು ಇತರ ಇಬ್ಬರ ವಿರುದ್ಧ ಮಂಗಳವಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಭಿವಂಡಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ:  ಪ್ರಾರ್ಥನೆ ಸಲ್ಲಿಸುವ ಮೊದಲು ದೇವಸ್ಥಾನದ ನೆಲ ಗುಡಿಸಿದ ದ್ರೌಪದಿ ಮುರ್ಮು

    ಸಂತ್ರಸ್ತೆ ದೂರಿನಲ್ಲಿ, ನಾನು ಮನೆಯಲ್ಲಿ ಇರುವಾಗ ಆರೋಪಿಗಳು ನನ್ನ ತಲೆಕೂದಲು ಹಿಡಿದು ಎಳೆದಾಡಿದ್ದಾರೆ. ಅಲ್ಲದೇ ಮನೆಯಿಂದ ಹೊರಗೆ ಎಳೆದು ಥಳಿಸಿದ್ದಾರೆ. ಈ ವೇಳೆ ನನ್ನನ್ನು ರಕ್ಷಿಸಲು ಬಂದ ಇನ್ನೊಬ್ಬ ಲೈಂಗಿಕ ಕಾರ್ಯಕರ್ತೆಯ ಮೇಲೂ ಅವರು ಹಲ್ಲೆ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

    CRIME 2

    ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಆರೋಪಿಯನ್ನು ಬಂಧಿಸಿಲ್ಲ.

    Live Tv

  • 29 ಹೂಡಿಕೆದಾರರಿಗೆ 1.82 ಕೋಟಿ ರೂ. ವಂಚಿಸಿದ ಮಹಿಳೆ ಅರೆಸ್ಟ್

    29 ಹೂಡಿಕೆದಾರರಿಗೆ 1.82 ಕೋಟಿ ರೂ. ವಂಚಿಸಿದ ಮಹಿಳೆ ಅರೆಸ್ಟ್

    ಮುಂಬೈ: 29 ಹೊಡಿಕೆದಾರರಿಗೆ 1.82 ಕೋಟಿ ರೂ. ವಂಚಿಸಿದ ಮಹಿಳೆ ಮಹಾರಾಷ್ಟ್ರದ ಥಾಣೆ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾಳೆ.

    ಸುಳಿವಿನ ಆಧಾರ ಮೇರೆಗೆ ಥಾಣೆಯ ಆರ್ಥಿಕ ಅಪರಾಧ ವಿಭಾಗ(EOW) ಪುಣೆಯ ದೇಹು ರಸ್ತೆಯಲ್ಲಿದ್ದ ಶ್ರದ್ಧಾ ಶ್ರೀಕಾಂತ್ ಪಲಾಂಡೆ ಮಹಿಳೆಯನ್ನು ಬಂಧಿಸಿದೆ ಎಂದು ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಜಗದೀಶ್ ಪನ್ಹಾಲೆ ತಿಳಿಸಿದರು.

    CRIME 2

    ಎಂಟು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಶ್ರದ್ಧಾ ಮತ್ತು ಆಕೆಯ ಪತಿ ಶ್ರೀಕಾಂತ್ ಪಾಂಡುರಂಗ ಪಲಾಂಡೆ ವಿರುದ್ಧ ಕಾಸರವಾಡವಲಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಮತ್ತು ಎಂಪಿಐಡಿಎಯ ಸೆಕ್ಷನ್ 420(ವಂಚನೆ) ಮತ್ತು ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ದಾಳಿ ವೇಳೆ ಶ್ರದ್ಧಾ ಸಿಕ್ಕಿದ್ದು, ಶ್ರೀಕಾಂತ್ ಪರಾರಿಯಾಗಿದ್ದಾನೆ ಎಂದು ವಿವರಿಸಿದರು. ಇದನ್ನೂ ಓದಿ: ಮಹಿಳಾ ಶೌಚಾಲಯ ಪ್ರವೇಶಿಸಿ ಬಾಗಿಲು ಲಾಕ್ ಮಾಡಿಕೊಂಡ 

    ನಡೆದಿದ್ದೇನು?
    ದಂಪತಿ ಸಲಹಾ ಸಂಸ್ಥೆಯನ್ನು ಸ್ಥಾಪಿಸಿದ್ದು, ವಿದೇಶಿ ವಿನಿಮಯ ವ್ಯಾಪಾರದಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತೆ ಎಂದು ಆದಾಯದ ಭರವಸೆ ನೀಡುವ ಮೂಲಕ ಹೂಡಿಕೆದಾರರನ್ನು ಆಕರ್ಷಿಸಿದ್ದರು. ಈ ಹಿನ್ನೆಲೆ ಇವರ ಮಾತಿಗೆ ನಂಚಿಕೆಯಿಟ್ಟು ಇಬ್ಬರು ಹೂಡಿಕೆದಾರರು ಹಣವನ್ನು ಕೊಟ್ಟಿದ್ದರು. ಆದರೆ ದಂಪತಿ ಹೂಡಿಕೆದಾರರ ಬಡ್ಡಿಯನ್ನು ಮತ್ತು ಅಸಲು ಮೊತ್ತವನ್ನು ಹಿಂದಿರುಗಿಸದೆ ಪರಾರಿಯಾಗಿದ್ದಾರೆ. ಇದೇ ರೀತಿ ಇವರು ಸುಮಾರು 29 ಹೂಡಿಕೆದಾರರಿಗೆ 1.82 ಕೋಟಿ ರೂ. ವಂಚಿಸಿದ್ದರು.

    ಆರೋಪಿ ಮಹಿಳೆಯನ್ನು ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಆಕೆಯನ್ನು ಮೇ 31 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಆಕೆಯ ಪತಿ ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಅಧಿಕಾರಿ ತಿಳಿಸಿದರು.

  • ರಾಷ್ಟ್ರಪಿತನ ಬಗ್ಗೆ ಅವಹೇಳನಕಾರಿ ಹೇಳಿಕೆ – ಕಾಳಿಚರಣ್ ಮಹಾರಾಜ್ ಬಂಧನ

    ರಾಷ್ಟ್ರಪಿತನ ಬಗ್ಗೆ ಅವಹೇಳನಕಾರಿ ಹೇಳಿಕೆ – ಕಾಳಿಚರಣ್ ಮಹಾರಾಜ್ ಬಂಧನ

    ಮುಂಬೈ: ಮಹಾತ್ಮಾ ಗಾಂಧಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಪೊಲೀಸರು ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್‌ನನ್ನು ಬಂಧಿಸಿದ್ದಾರೆ.

    ಮಹಾರಾಷ್ಟ್ರದ ಥಾಣೆ ನಗರದ ಪೊಲೀಸರು ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಕಾಳಿಚರಣ್ ಅವರನ್ನು ಛತ್ತೀಸ್‌ಗಢದಲ್ಲಿ ಬಂಧಿಸಲಾಗಿದೆ ಎಂದು ಗುರುವಾರ ತಿಳಿಸಿದ್ದಾರೆ.

    ಕಳೆದ ವರ್ಷ ಡಿಸೆಂಬರ್ 26 ರಂದು ಛತ್ತೀಸ್‌ಗಢದ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಳಿಚರಣ್ ಮಹಾತ್ಮಾ ಗಾಂಧಿಯವರ ವಿರುದ್ಧ ಹೇಳಿಕೆಯನು ನೀಡಿದ್ದರು. ಇದನ್ನು ಹೊರತಪಡಿಸಿಯೂ ಕಾಳಿಚರಣ್ ಇಂತಹ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ವಾಸ ಅನುಭವಿಸಿದ್ದರು. ಇದೀಗ ಮತ್ತೆ ಪೊಲೀಸರು ಕಾಳಿಚರಣ್‌ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಲತಾ ಮಂಗೇಶ್ಕರ್‌ಗೆ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಕೆ

    ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಸಚಿವ ಜಿತೇಂದ್ರ ಅವ್ಹಾದ್ ಕಾಳಿಚರಣ್‌ರ ವಿರುದ್ಧ ದೂರು ನೀಡಿದ್ದರು. ಪ್ರಕರಣವನ್ನು ದಾಖಲಿಸಿಕೊಂಡ ನೌಪಾದ ಪೊಲೀಸ್ ಠಾಣೆ ಎಂಟು ಸಿಬ್ಬಂದಿ ತಂಡ ರಾಯ್‌ಪುರಕ್ಕೆ ತೆರಳಿ ಕಾಳಿಚರಣ್ ಮಹಾರಾಜ್‌ನನ್ನು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರೆಮೋ ಡಿಸೋಜಾ ಸೋದರ ಮಾವ ಸಾವು – ಆತ್ಮಹತ್ಯೆ ಶಂಕೆ

  • ಬೇಡಿಕೆ ಈಡೇರಿಸುವಂತೆ ಪ್ರತಿಭಟಿಸಿದ 100ಕ್ಕೂ ಹೆಚ್ಚು ಆದಿವಾಸಿಗಳು ಪೊಲೀಸರ ವಶಕ್ಕೆ

    ಬೇಡಿಕೆ ಈಡೇರಿಸುವಂತೆ ಪ್ರತಿಭಟಿಸಿದ 100ಕ್ಕೂ ಹೆಚ್ಚು ಆದಿವಾಸಿಗಳು ಪೊಲೀಸರ ವಶಕ್ಕೆ

    ಮುಂಬೈ: ಆದಿವಾಸಿಗಳು ತಮ್ಮ ಹಕ್ಕುಗಳಿಗಾಗಿ ಬೇಡಿಕೆ ಇಟ್ಟಿದಕ್ಕೆ 100ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಥಾಣೆಯಲ್ಲಿ ನಡೆದಿದೆ.

    ಥಾಣೆಯ ಆದಿವಾಸಿಗಳು ನಿನ್ನೆ ಉಪವಿಭಾಗಾಧಿಕಾರಿಗಳ ಆವರಣದಲ್ಲಿ ಅರಣ್ಯ ಹಕ್ಕುಗಳು, ಜಾತಿ ಪ್ರಮಾಣ ಪತ್ರಗಳು ಮತ್ತು ಇತರ ಸೌಕರ್ಯಗಳಿಗೆ ಒತ್ತಾಯಿಸಿ ಪ್ರತಿಭಟನೆಯನ್ನು ಮಾಡುತ್ತಿದ್ದರು. ಈ ಸಂಬಂಧ 100ಕ್ಕೂ ಹೆಚ್ಚು ಆದಿವಾಸಿಗಳನ್ನು ಥಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ವಶಕ್ಕೆ ಪಡೆದುಕೊಂಡ ಆದಿವಾಸಿಗಳನ್ನು ಪೊಲೀಸರು ನಂತರ ಬಿಡುಗಡೆ ಮಾಡಿದ್ದಾರೆ. ಆದರೆ ಎನ್‍ಜಿಒ ಅಡಿಯಲ್ಲಿ ಆದಿವಾಸಿಗಳ ನಿಯೋಗವು ತಮ್ಮ ಬೇಡಿಕೆಗಳನ್ನು ಒಳಗೊಂಡ ಜ್ಞಾಪಕ ಪತ್ರವನ್ನು ಉಪವಿಭಾಗಾಧಿಕಾರಿ ಅವಿನಾಶ್ ಶಿಂಧೆ ಅವರನ್ನು ಭೇಟಿ ಮಾಡಿ ಸಲ್ಲಿಸಿತ್ತು. ಇದನ್ನೂ ಓದಿ:  ಸೋಶಿಯಲ್ ಮೀಡಿಯಾದಲ್ಲಿ ನಿಂದಿಸಿದ್ದಕ್ಕೆ ಯುವಕನ ಅಪಹರಿಸಿ ಕೊಂದರು!

    ಈ ಪತ್ರದಲ್ಲಿ ಬಾಕಿ ಉಳಿದಿರುವ 1,200 ಅರಣ್ಯ ಹಕ್ಕುಗಳ ಅರ್ಜಿಗಳನ್ನು ಪರಿಶೀಲಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.