Tag: ಥಾಣೆ

  • ಯುವತಿಗೆ ಲೈಂಗಿಕ ಕಿರುಕುಳ – 61ರ ವೃದ್ಧ ಅರೆಸ್ಟ್

    ಯುವತಿಗೆ ಲೈಂಗಿಕ ಕಿರುಕುಳ – 61ರ ವೃದ್ಧ ಅರೆಸ್ಟ್

    ಥಾಣೆ: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಥಾಣೆಯಲ್ಲಿ 61 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ.

    ವೃದ್ಧ ಸುಮಾರು ನಾಲ್ಕು ತಿಂಗಳಿನಿಂದ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಯುವತಿ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ವೃದ್ಧ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ಆತನ ಕಿರುಕುಳ ತಳಲಾರದೇ ನಾನು ಸುಮಾರು ಕೆಲಸ ಬಿಡಬೇಕಾಯಿತು ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

    ನಾನು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಆತ ನನ್ನ ಬಳಿ ಬಂದು ನನಗೆ ಅಸಭ್ಯವಾಗಿ ಮುಟ್ಟಿದ್ದಾನೆ. ಆಗ ನಾನು ನನ್ನ ಕೈಯಲ್ಲಿದ್ದ ಟಿಫಿನ್ ಬಾಕ್ಸ್ ಹಿಡಿದು ಆತನ ಮೇಲೆ ಹಲ್ಲೆ ಮಾಡಿದೆ ಎಂದು ಯುವತಿ ತಿಳಿಸಿದ್ದಾಳೆ.

    ಯುವತಿ ಹಲ್ಲೆ ಮಾಡಿದ ನಂತರ ವೃದ್ಧ ಸ್ಥಳದಿಂದ ಪರಾರಿ ಆಗಲು ಯತ್ನಿಸಿದ್ದ. ಈ ವೇಳೆ ಸ್ಥಳದಲ್ಲಿದ್ದ ಜನರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವತಿ ಕೂಡ ಸ್ಥಳೀಯರ ಜೊತೆ ಪೊಲೀಸ್ ಠಾಣೆಗೆ ಹೋಗಿ ವೃದ್ಧನ ವಿರುದ್ಧ ದೂರು ದಾಖಲಿಸಿದ್ದಾಳೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ‘ಮೊದಲು ಮಂದಿರ ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ಅಯೋಧ್ಯೆಗೆ ಹೊರಟ ಶಿವ ಸೈನಿಕರು

    ‘ಮೊದಲು ಮಂದಿರ ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ಅಯೋಧ್ಯೆಗೆ ಹೊರಟ ಶಿವ ಸೈನಿಕರು

    ಮುಂಬೈ: ಶಿವಸೇನಾ ಮತ್ತು ವಿಶ್ವ ಹಿಂದೂ ಪರಿಷದ್(ವಿಎಚ್‍ಪಿ) ಕಾರ್ಯಕರ್ತರನ್ನು ಒಳಗೊಂಡ ಶಿವ ಸೈನಿಕರು `ಮೊದಲು ಮಂದಿರ-ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ರಾಮಜನ್ಮ ಭೂಮಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ.

    ಹೌದು, 2019ರ ಲೋಕಸಭಾ ಚುನಾವಣೆಯ ಪ್ರಮುಖ ಅಸ್ತ್ರವಾಗಿರುವ ರಾಮ ಮಂದಿರ ನಿರ್ಮಾಣಕ್ಕೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ, ಶಿವಸೇನೆ ಹಾಗೂ ವಿಎಚ್‍ಪಿ ಕಾರ್ಯಕರ್ತರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

    ಗುರುವಾರ ಮಧ್ಯಾಹ್ನ ಮಹಾರಾಷ್ಟ್ರದ ಥಾಣೆ ರೈಲ್ವೇ ನಿಲ್ದಾಣದಲ್ಲಿ ಸಿದ್ಧವಾಗಿದ್ದ ವಿಶೇಷ ರೈಲಿನಲ್ಲಿ ಶಿವ ಸೈನಿಕರು ಅಯೋಧ್ಯೆಗೆ ಪ್ರಯಾಣ ಬೆಳೆಸಿದರು. ಕೇಸರಿ ವಸ್ತ್ರ ಧರಿಸಿದ್ದ ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ಪ್ರವಾಸ ಕೈಗೊಂಡಿದ್ದಾರೆ. ಈ ವಿಶೇಷ ರೈಲಿಗೆ ಆರತಿ ಬೆಳಗುವ ಮೂಲಕ ಥಾಣೆಯ ಮೇಯರ್ ಮೀನಾಕ್ಷಿ ಸಿಂಧೆ ಚಾಲನೆ ನೀಡಿದರು.

    ಈ ಕುರಿತು ಪ್ರತಿಕ್ರಿಯಿಸಿರುವ ಶಿವಸೇನೆ ಕಾರ್ಪೋರೇಟರ್ ನರೇಶ್ ಮಸ್ಕೆ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ ಭರವಸೆಗಳನ್ನು ಕೇಳುತ್ತಲೇ ಬಂದಿದ್ದೇವೆ. ಆದರೆ ಇದುವರೆಗೂ ರಾಮ ಮಂದಿರ ಮಾತ್ರ ನಿರ್ಮಾಣವಾಗಿಲ್ಲ. ಭಗವಾನ್ ಶ್ರೀ ರಾಮನ ಮಂದಿರ ನಿರ್ಮಾಣದ ಕಾರ್ಯಕ್ಕೆ ಈಗ ಸಕಾಲ ಕೂಡಿ ಬಂದಿದೆ ಎಂದು ಹೇಳಿದ್ದಾರೆ.

    ಶುಕ್ರವಾರ ರಾತ್ರಿ ಅಯೋಧ್ಯೆ ತಲುಪಲಿರುವ ಸಾವಿರಾರು ಕಾರ್ಯಕರ್ತರು, ಶನಿವಾರ ಸಂಜೆ ನಯಾ ಘಾಟ್ ನಲ್ಲಿ ಮಹಾ ಸಮಾವೇಶ ಹಾಗೂ ಮಂಗಳಾರತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸೋದರಿಯನ್ನು ಪ್ರೀತಿಸ್ತಿದ್ದಾನೆಂದು ಹೊಡೆದು ಕೊಂದೇ ಬಿಟ್ಟ!

    ಸೋದರಿಯನ್ನು ಪ್ರೀತಿಸ್ತಿದ್ದಾನೆಂದು ಹೊಡೆದು ಕೊಂದೇ ಬಿಟ್ಟ!

    ಥಾಣೆ: ತನ್ನ ಸಹೋದರಿಯನ್ನು ಪ್ರೀತಿಸುತ್ತಿದ್ದಾನೆಂದು ವ್ಯಕ್ತಿಯೊಬ್ಬ 23 ವರ್ಷದ ಆಟೋ ಚಾಲಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಥಾಣೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಆರೋಪಿಯನ್ನು ರಾಹುಲ್ ನಾಮ್ಡಿಯೋ ಎಂದು ಗುರುತಿಸಲಾಗಿದ್ದು ಆರೋಪಿಯ ಬಂಧನದ ಬಳಿಕ ತನಿಖೆ ಮುಂದುವರಿದಿದೆ.

    ಆರೋಪಿಯು ಕಳೆದ ಭಾನುವಾರ ನಗರದ ದೇವಸ್ಥಾನವೊಂದರ ಹತ್ತಿರ ವ್ಯಕ್ತಿಯೊಬ್ಬ ಗಾಯಗೊಂಡು ಬಿದ್ದಿರುವುದಾಗಿ ಅಂಬೆರ್ ನಾಥ್ ನಲ್ಲಿರುವ ಶಿವಾಜಿನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದಾಗ ಗಾಯಾಳು ವ್ಯಕ್ತಿ ಮೃತಪಟ್ಟಿದ್ದನು. ಹೀಗಾಗಿ ಆಕಸ್ಮಿಕ ಸಾವು ಅಂತ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಲ್ಲಿಂದ ತೆರಳಿದ್ದರು. ಆ ಬಳಿಕ ಪೊಲೀಸರಿಗೆ ಪ್ರಕರಣ ಕುರಿತು ಶಂಕೆ ವ್ಯಕ್ತವಾಗಿದ್ದು, ವ್ಯಕ್ತಿಯ ಸಾವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿದ್ರು. ಈ ವೇಳೆ ನಾಮ್ಡಿಯೋಗೆ ಮೃತಪಟ್ಟ ವ್ಯಕ್ತಿಯ ಪರಿಚಯವಿರೋದಾಗಿ ಬೆಳಕಿಗೆ ಬಂದಿದೆ ಅಂತ ಪೊಲೀಸ್ ವಕ್ತಾರರೊಬ್ಬರು ತಿಳಿಸಿದ್ದಾರೆ.

    ಮೃತ ವ್ಯಕ್ತಿಯನ್ನು 25 ವರ್ಷದ ಬಬ್ಬು ಬಾಗ್ಡಿ ಎಂದು ಗುರುತಿಸಲಾಗಿದ್ದು, ಈತ ನಾಮ್ಡಿಯೋನ 21 ವರ್ಷದ ಸಹೋದರಿ ಜೊತೆ ಸಂಬಂಧ ಹೊಂದಿದ್ದನು. ಇವರಿಬ್ಬರ ಸಂಬಂಧಕ್ಕೆ ನಾಮ್ಡಿಯೋ ವಿರೋಧ ವ್ಯಕ್ತಪಡಿಸಿದ್ದನು. ಆದ್ರೂ ಬಬ್ಬು, ನಾಮ್ಡಿಯೋ ಸಹೋದರಿಯನ್ನು ಪ್ರೀತಿಸುತ್ತಿದ್ದನು. ಈ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಅಂತ ಅವರು ವಿವರಿಸಿದ್ದಾರೆ.

    ಒಟ್ಟಾರೆ ಘಟನೆಗೆ ಸಂಬಂಧಿಸಿದಂತೆ ನಾಮ್ಡಿಯೋ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆತ ತಾನೇ ಕೊಲೆ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾನೆ. ಬಬ್ಬುವನ್ನು ಪ್ರತ್ಯೇಕ ಸ್ಥಳವೊಂದಕ್ಕೆ ಕರೆದು ಆತನನ್ನು ಹೊಡೆದು ಕೊಲೆ ಮಾಡಿ ಬಳಿಕ ಗಾಯಗೊಂಡು ರಕ್ತದ ಮಡುವಿನಲ್ಲಿ ವ್ಯಕ್ತಿಯೊಬ್ಬ ಬಿದ್ದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ ಅಂತ ನಾಮ್ಡಿಯೋ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

    ನಂತರ ಆರೋಪಿಯನ್ನು ಪೊಲೀಸರು ಬಂಧಿಸಿ ಆತನ ವಿರುದ್ಧ ಐಪಿಸಿ ಸೆಕ್ಷನ್ 302(ಕೊಲೆ), 201(ಪುರಾವೆಗಳ ನಿರ್ಮೂಲನೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಅಂತ ವಕ್ತಾರ ಸುಖಾದ ನರ್ಕಾರ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮನೆಯ ಕಾಂಪೌಂಡ್‍ನೊಳಗೆ ಆರಾಮಾಗಿ ಓಡಾಡಿದ ಚಿರತೆ- 5 ಗಂಟೆಗಳ ನಂತರ ರಕ್ಷಣೆ

    ಮನೆಯ ಕಾಂಪೌಂಡ್‍ನೊಳಗೆ ಆರಾಮಾಗಿ ಓಡಾಡಿದ ಚಿರತೆ- 5 ಗಂಟೆಗಳ ನಂತರ ರಕ್ಷಣೆ

    ಥಾಣೆ: ಚಿರತೆಯೊಂದು ಜನನಿವಾಸಿ ಕಟ್ಟಡದೊಳಗೆ ನುಗ್ಗಿ ಆರಾಮಾಗಿ ಓಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿನ ಉಲ್ಲಾಸ್‍ನಗರ ಪ್ರದೇಶದಲ್ಲಿ ಭಾನುವಾರದಂದು ಚಿರತೆ ಕಾಣಿಸಿಕೊಂಡಿದೆ ಎಂದು ಪೊಲೀಸರು ಹೇಳಿದ್ದಾರೆ. ಮೊದಲಿಗೆ ಇಲ್ಲಿನ ಸೆಕ್ಯೂರಿಟಿ ಗಾರ್ಡ್‍ವೊಬ್ಬರು ಚಿರತೆಯನ್ನ ನೋಡಿದ್ದಾರೆ. ಬಳಿಕ ಸಿಸಿಟಿವಿ ಪರಿಶೀಲಿಸಿದಾಗ ಚಿರತೆ ಕಟ್ಟಡದೊಳಗೆ ಓಡಾಡಿರೋ ದೃಶ್ಯಗಳು ಕಂಡುಬಂದಿವೆ. ಕಟ್ಟಡದ ಕಾಂಪೌಂಡ್ ಒಳಗಿನ ಓಣಿಯಲ್ಲಿ ನಡೆದಾಡಿದ ಚಿರತೆ, ಮುಂದಿನ ಗೇಟ್‍ನಿಂದಲೇ ಹೊರಹೋಗಿದೆ.

    ನಾನು ಕಟ್ಟಡದ ಮುಂದೆ ಕುಳಿತಿದ್ದಾಗ ಚಿರತೆ ಗೋಡೆಯ ಬಳಿ ಹಾರಿ ಸೊಸೈಟಿಯೊಳಗೆ ಹೋಗೋದನ್ನ ನೋಡಿದೆ ಎಂದು ಸೆಕ್ಯೂರಿಟಿ ಗಾರ್ಡ್ ಮನೋಜ್ ಪಾಟಿಲ್ ಹೇಳಿದ್ದಾರೆ. ಈ ಬಗ್ಗೆ ಸೆಕ್ಯೂರಿಟಿ ಗಾರ್ಡ್ ಅಲ್ಲಿನ ನಿವಾಸಿಗಳನ್ನ ಎಚ್ಚರಿಸೋ ವೇಳೆಗೆ ಚಿರತೆ ಅಲ್ಲಿಂದ ಪರಾರಿಯಾಗಿ ಮತ್ತೊಂದು ಪ್ರದೇಶಕ್ಕೆ ಹೋಗಿತ್ತು ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

    ಚಿರತೆ ಪ್ರತ್ಯಕ್ಷವಾದ ಬಗ್ಗೆ ಸುದ್ದಿ ಹರಡಿದ ಬಳಿಕ ಇಲ್ಲಿನ ನಿವಾಸಿಗಳು ಆತಂಕಕ್ಕೀಡಾಗಿ ಮನೆ ಲಾಕ್ ಮಾಡಿಕೊಂಡು ಒಳಗಡೆ ಇದ್ದರು. ಉಲ್ಲಾಸ್‍ನಗರದ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಇದೇ ಮೊದಲು ಎಂದು ಇಲ್ಲಿನ ನಿವಾಸಿಯೊಬ್ಬರು ಪತ್ರಿಕೆಯೊಂದಕ್ಕೆ ಹೇಳಿದ್ದಾರೆ.

    4-5 ಗಂಟೆಗಳ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಅರವಳಿಕೆ ನೀಡಿ ಚಿರತೆಯನ್ನ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

    https://www.youtube.com/watch?time_continue=27&v=hZn9oaqlOY8

  • 5 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್

    5 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್

    ಥಾಣೆ: ಐದು ವರ್ಷದ ಬಾಲಕಿಯ ಮೇಲೆ ಕಾಮುಕರು ಗ್ಯಾಂಗ್ ರೇಪ್ ಎಸಗಿರೋ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

    ಘಟನೆಯ ಬಳಿಕ ಬಾಲಕಿ ರಸ್ತೆ ಬದಿಯಲ್ಲಿ ಅಳುತ್ತಾ ನಿಂತಿದ್ದನ್ನು ಗಮನಿಸಿದ ದಾರಿಹೋಕರೊಬ್ಬರು ಆಕೆಯನ್ನು ವಿಚಾರಿಸಿ ನಂತರ ಪೊಲೀಸ್ ಠಾಣೆಗೆ ಕರೆದತಂದಿದ್ದಾರೆ.

    ಪೊಲೀಸರು ಬಾಲಕಿಯನ್ನು ವಿಚಾರಿಸಿ ನಂತರ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ.

    ಥಾಣೆ ಪೊಲೀಸರು ಭಾನುವಾರ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ ಹಾಗೂ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

  • 1 ರೂಪಾಯಿಗಾಗಿ ವ್ಯಕ್ತಿಯನ್ನು ಕಾಲಿನಿಂದಲೇ ಒದ್ದು ಕೊಂದ್ರು!

    1 ರೂಪಾಯಿಗಾಗಿ ವ್ಯಕ್ತಿಯನ್ನು ಕಾಲಿನಿಂದಲೇ ಒದ್ದು ಕೊಂದ್ರು!

    ಥಾಣೆ: ಕೇವಲ ಒಂದು ರೂಪಾಯಿಗಾಗಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಅಮಾನವೀಯ ಘಟನೆ ಮಹಾರಾಷ್ಟ್ರದ ಕಲ್ಯಾಣ್ ನಗರದಲ್ಲಿ ನಡೆದಿದೆ.

    ಮೃತಪಟ್ಟ ವ್ಯಕ್ತಿಯನ್ನು 54 ವರ್ಷದ ಮನೋಹರ ಗಾಮ್ನೆ ಎಂದು ಗುರುತಿಸಲಾಗಿದ್ದು, ಈ ಘಟನೆ ಶುಕ್ರವಾರ ತಡ ರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಮ್ನೆ ಮನೆ ಸಮೀಪದ ಅಂಗಡಿಯಲ್ಲಿ ಮೊಟ್ಟೆ ಖರೀದಿಸಲು ಹೋಗಿದ್ದಾರೆ. ಅಂಗಡಿಯಲ್ಲಿ ತಾನು ಖರೀದಿಸಿದ ಮೊಟ್ಟೆಗೆ ಒಂದು ರೂಪಾಯಿ ಕಡಿಮೆ ಕೊಟ್ಟಿದ್ದಾರೆ. ಇದರಿಂದ ಅಂಗಡಿಯ ಮಾಲೀಕ ವ್ಯಕ್ತಿಯ ಜೊತೆ ಜಗಳ ಮಾಡಿದ್ದಾನೆ.

    ಜಗಳ ವಿಕೋಪಕ್ಕೆ ಹೋಗಿ ಅಂಗಡಿಯ ಮಾಲೀಕ ಗಾಮ್ನೆಗೆ ಕಾಲಿನಿಂದ ಒದ್ದು, ಕೈಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಪರಿಣಾಮವಾಗಿ ಗಾಮ್ನೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಥಾಣೆ ಪೊಲೀಸ್ ಪಿಆರ್ ಒ ಸುಖದಾ ನಾರ್ಕರ್ ತಿಳಿಸಿದ್ದಾರೆ.

    ಈ ಘಟನೆ ಸಂಬಂಧ ಆರೋಪಿ ಅಂಗಡಿ ಮಾಲೀಕ ಸುಧಾಕರ್ ಪ್ರಭು (45) ನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ.

  • ಮಗಳು ಸಾವನ್ನಪ್ಪಿದ ಮರುದಿನವೇ 17ನೇ ಮಹಡಿಯಿಂದ ಜಿಗಿದು ತಾಯಿ ಆತ್ಮಹತ್ಯೆ

    ಮಗಳು ಸಾವನ್ನಪ್ಪಿದ ಮರುದಿನವೇ 17ನೇ ಮಹಡಿಯಿಂದ ಜಿಗಿದು ತಾಯಿ ಆತ್ಮಹತ್ಯೆ

    ಮುಂಬೈ: 19 ವರ್ಷದ ಮಗಳು ಆತ್ಮಹತ್ಯೆ ಮಾಡಿಕೊಂಡ ಒಂದು ದಿನದ ನಂತರ ಆಕೆಯ ತಾಯಿ ಕೂಡ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಥಾಣೆಯ ವಸಂತ್ ವಿಹಾರ್ ಪ್ರದೇಶದಲ್ಲಿ ನಡೆದಿದೆ.

    ಪೊಲೀಸರ ಪ್ರಕಾರ ತಾಯಿ ಮತ್ತು ಮಗಳ ಆತ್ಮಹತ್ಯೆಗೆ ಸಂಬಂಧಿಸಿದಂತೆ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ. ಶಾಕ್‍ನಲ್ಲಿದ್ದ ತಾಯಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅನುಮಾನಿಸಲಾಗಿದೆ. ಆದ್ರೂ ಘಟನೆಗೆ ನಿರ್ದಿಷ್ಟ ಕಾರಣ ತಿಳಿಯಲು ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ.

    ಮೃತ ಮಹಿಳೆ ಸಗುಣಾ ಕೊಡಮಂಚಿಲಿ(45) ಆಂಧ್ರಪ್ರದೇಶ ಮೂಲದವರಾಗಿದ್ದು, ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದ ತನ್ನ ಮಗಳು ನವ್ಯಾ ಜೊತೆಗೆ ವಾಸವಿದ್ದರು. ಕೆಲವು ದಿನಗಳ ಹಿಂದೆ ನವ್ಯಾ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಶನಿವಾರ ಮಧ್ಯರಾತ್ರಿ ಸುಮಾರು 2.30ರ ವೇಳೆಗೆ ಮೃತಪಟ್ಟಿದ್ದಳು.

    ಮಗಳ ಸಾವಿನ ಸುದ್ದಿ ತಿಳಿದು ಸಗುಣಾ ಆಘಾತಕ್ಕೆ ಒಳಗಾಗಿದ್ದರು. ನವ್ಯಾಳ ಅಂತ್ಯಕ್ರಿಯೆಗಾಗಿ ಭಾನುವಾರದಂದು ಸಿದ್ಧತೆ ಮಾಡಿಕೊಳ್ಳಲಾಗ್ತಿತ್ತು. ಈ ಸಂದರ್ಭದಲ್ಲಿ ಭಾನುವಾರ ಬೆಳಗ್ಗೆ 5.30ರ ವೇಳೆಗೆ ಸಗುಣಾ ಮನೆಯಿಂದ ಹೊರಹೋಗಿ 17ನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಕಟ್ಟಡದ ಇತರೆ ನಿವಾಸಿಗಳ ಪ್ರಕಾರ, ಮೃತ ಮಹಿಳೆಯ ಗಂಡ ಹಿಂದೆಯೇ ಓಡಿಬಂದರು. ಆದ್ರೆ ಅವರು ಹಿಡಿದುಕೊಳ್ಳುವ ವೇಳೆಗೆ ಮಹಿಳೆ ಕೆಳಗೆ ಜಿಗಿದಿದ್ದರು. ಇವರ ಮಗಳು ಇತ್ತೀಚೆಗಷ್ಟೇ ಪರೀಕ್ಷೆ ಬರೆದಿದ್ದಳು. ಆದರೆ ಈ ರೀತಿ ಯಾಕೆ ಮಾಡಿಕೊಂಡಳು ಎಂದು ಆಶ್ಚರ್ಯವಾಗುತ್ತಿದೆ ಎಂದು ಹೇಳಿದ್ದಾರೆ.

    ಮಹಿಳೆಯ ಸಾವಿಗೆ ಸಂಬಂಧಿಸಿದಂತೆ ಚಿತಲ್ಸರ್ ಮನ್‍ಪಾದಾ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಾಗಿದೆ. ಮಗಳ ಸಾವಿಗೆ ಸಂಬಂಧಿಸಿದಂತೆ ವರ್ತಕ್ ನಗರ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದೆ.

    ನಾವು ಕೆಲವು ಸಂಬಂಧಿಕರ ಹೇಳಿಕೆ ದಾಖಲಿಸಿಕೊಂಡಿದ್ದೇವೆ. ಯುವತಿಯ ಸಾವಿಗೆ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ಪ್ರಾಥಮಿಕ ತನಿಖೆ ನಡೆಸುತ್ತಿದ್ದೇವೆ. ಮಹಿಳೆಗೆ ಈಕೆ ಒಬ್ಬಳೇ ಮಗಳಾಗಿದ್ದರಿಂದ ಆಕೆಯ ಸಾವಿನಿಂದ ಖಿನ್ನತೆಗೆ ಒಳಗಾಗಿರುವ ಶಂಕೆಯಿದೆ. ಇದೇ ಶಾಕ್‍ನಲ್ಲಿ ಆತ್ಮಹತ್ಯೆಯ ನಿರ್ಧಾರ ತೆಗೆದುಕೊಂಡಿರಬಹುದು. ಪಂಚನಾಮೆ ಹಾಗೂ ಮರಣೋತ್ತರ ಪರೀಕ್ಷೆಯ ನಂತರ ಮಹಿಳೆಯ ಶವವನ್ನು ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ ಎಂದು ಚಿತಲ್ಸರ್ ಮನ್‍ಪಾದಾ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಗಣ್‍ಪತ್ ಪಿಂಗಾಲೇ ಹೇಳಿದ್ದಾರೆ.

  • ಮಗನ ನಿರ್ಧಾರದಿಂದ ಖಿನ್ನತೆಗೆ ಜಾರಿದ್ದಾನೆ ಭೂಗತ ಪಾತಕಿ ದಾವೂದ್!

    ಮಗನ ನಿರ್ಧಾರದಿಂದ ಖಿನ್ನತೆಗೆ ಜಾರಿದ್ದಾನೆ ಭೂಗತ ಪಾತಕಿ ದಾವೂದ್!

    ಥಾಣೆ: ಭೂಗತ ಪಾತಕಿ, ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂ ಕೌಟುಂಬಿಕ ಕಲಹಗಳಿಂದ ಖಿನ್ನತೆಗೆ ಒಳಗಾಗಿದ್ದಾನೆ ಎನ್ನುವ ಮಾಹಿತಿ ಈಗ ಲಭ್ಯವಾಗಿದೆ.

    ದಾವೂದ್ ಉತ್ತರಾಧಿಕಾರಿ ಎಂದೇ ಕರೆಸಿಕೊಂಡಿದ್ದ, ಆತನ ಮಗ ಮೋಯಿನ್ ನವಾಜ್ ಡಿ ಕಸ್ಕರ್ (31) ಮೌಲ್ವಿ ಯಾಗಲು ನಿರ್ಧಾರಿಸಿದ್ದಾನೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.

    ಕಾನೂನು ಬಾಹಿರ ಕೃತ್ಯಗಳಿಂದ ಬೇಸತ್ತು ಹೋಗಿರುವ ಮೋಯಿನ್, ಕುಟುಂಬ ವ್ಯವಹಾರಗಳನ್ನು ಮುಂದುವರೆಸದೇ ಇರಲು ನಿರ್ಧರಿಸಿದ್ದು, ತಂದೆಯ ಕೃತ್ಯಗಳಿಂದ ಇಡೀ ಕುಟುಂಬಕ್ಕೆ ಕಳಂಕ ಉಂಟಾಗುತ್ತಿದೆ ಎಂದು ಆರೋಪಿಸಿದ್ದಾನೆ ಎನ್ನಲಾಗಿದೆ.

    ಅಪಾರ ಸಂಪತ್ತು, ತೋಳ್ಬಲ ಹೊಂದಿದ್ದರೂ, ದಾವೂದ್ ತನ್ನ ಕುಟುಂಬದ ಸಮಸ್ಯೆಗಳನ್ನು ನಿವಾರಿಸಲು ವಿಫಲನಾಗಿದ್ದಾನೆ. ದಾವೂದ್ ನ ಮೂರು ಮಕ್ಕಳಲ್ಲಿ ಮೋಯಿನ್ ಒಬ್ಬನೇ ಗಂಡು ಮಗನಾಗಿದ್ದು, ಧರ್ಮ ನಿಷ್ಠನಾಗಿರುವ ಮೋಯಿನ್ ಮೌಲ್ವಿ (ಧಾರ್ಮಿಕ ಶಿಕ್ಷಕ) ಯಾಗಲು ನಿರ್ಧರಿಸಿದ್ದಾನೆ ಎಂದು ಥಾಣೆ ಪೋಲಿಸ್ ಅಧಿಕಾರಿ ಪ್ರದೀಪ್ ಶರ್ಮಾ ಹೇಳಿದ್ದಾರೆ.

    ಕಳೆದ ಸೆಪ್ಟೆಂಬರ್‍ನಲ್ಲಿ ಥಾಣೆಯ ಎಇಸಿಗೆ ಸಿಕ್ಕಿಬಿದ್ದ ದಾವೂದ್ ಸಹೋದರ ಇಕ್ಬಾಲ್ ಇಬ್ರಾಹಿಂ ಕಸ್ಕರ್ ವಿಚಾರಣೆ ವೇಳೆ ಈ ವಿಷಯ ಬಹಿರಂಗಗೊಂಡಿದ್ದು, ಇನ್ನು ಕೆಲವು ಕೌಟುಂಬಿಕ ಭಿನ್ನತೆಗಳು ಹಾಗೂ ವಯೋಸಹಜ ಅನಾರೋಗ್ಯಗಿಂದ ದಾವೂದ್ ಮಾನಸಿಕವಾಗಿ ಕುಗ್ಗಿ ಹೋಗಿದ್ದಾನೆಂದು ವಿಚಾರಣೆ ವೇಳೆ ಮಾಹಿತಿ ನೀಡಿದ್ದ.

    ಇನ್ನು ಮೋಯಿನ್ ಖುರಾನ್ ನ 6,236 ಶ್ಲೋಕಗಳನ್ನು ಕಂಠಪಾಠ ಮಾಡಿದ್ದು, ಧಾರ್ಮಿಕ ಮುಖಂಡರಿಂದ ಅಪಾರ ಗೌರವ ಗಳಿಸಿದ್ದಾನೆ. ಅಲ್ಲದೇ ಈಗಾಗಲೇ ಶ್ರೀಮಂತ ಜೀವನ ತ್ಯಜಿಸಿರುವ ಮೋಯಿನ್ ಕರಾಚಿಯಲ್ಲಿ ನೀಡಲಾಗಿದ್ದ ಭವ್ಯ ಬಂಗಲೆ ಹಾಗೂ ಐಶಾರಾಮಿ ಸೌಕರ್ಯಗಳನ್ನು ತಿರಸ್ಕರಿಸಿ, ತನ್ನ ಕುಟುಂಬದೊಂದಿಗೆ ತಮ್ಮ ಮನೆಯ ಪಕ್ಕದ ಮಸೀದಿಯೊಂದರಲ್ಲಿ ಜೀವನ ನಡೆಸಲು ಮುಂದಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

    ಮೋಯಿನ್ ಪತ್ನಿ ಹಾಗೂ ಆತನ ಮೂರು ಮಕ್ಕಳು ಪ್ರಸ್ತುತ ಆತನೊಂದಿಗೆ ಮಸೀದಿ ನೀಡಿರುವ ಸಣ್ಣ ಕ್ವಾಟ್ರಸ್ ಮನೆಯಲ್ಲಿ ವಾಸಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮೋಯಿನ್ 2011ರಲ್ಲಿ ಪಾಕಿಸ್ತಾನ ಮತ್ತು ಬ್ರಿಟನ್‍ನಲ್ಲಿ ವ್ಯವಹಾರ ಹೊಂದಿರುವ ಉದ್ಯಮಿ ಪುತ್ರಿಯನ್ನು ಮದುವೆಯಾಗಿದ್ದಾನೆ. ಅಲ್ಲದೇ ಮೋಯಿನ್ ಸಹೋದರಿ ಮಹ್ರುಕ್ 2006 ರಲ್ಲಿ ಪಾಕಿಸ್ತಾನ ಕ್ರಿಕೆಟಿಗ ಜಾವೇದ್ ಮಿಯಾಂದದ್ ಪುತ್ರನನ್ನು ಮದುವೆಯಾಗಿದ್ದಾಳೆ. ಮತ್ತೊಬ್ಬ ದಾವೂದ್ ಪುತ್ರಿ ಮಹ್ರೀನ್, ಅಮೆರಿಕದ ಮೂಲದ ಉದ್ಯಮಿಯನ್ನು ವರಿಸಿದ್ದಾಳೆ.

    ಈ ಹಿಂದೆ ಪೊಲೀಸ್ ವಿಚಾರಣೆ ವೇಳೆ ಇಬ್ರಾಹಿಂ ಕಸ್ಕರ್, ದಾವೂದ್ ಆರೋಗ್ಯವಾಗಿದ್ದು, ಪಾಕಿಸ್ತಾನಿ ಏಜೆನ್ಸಿಗಳ ರಕ್ಷಣೆಯಲ್ಲಿ ಕರಾಚಿಯಲ್ಲಿ ವಾಸಿಸುತ್ತಿದ್ದಾನೆ ಎಂದು ಹೇಳಿಕೆ ನೀಡಿದ್ದ. ಆದರೆ ದಾವೂದ್ ಸಹೋದರರ ಪೈಕಿ ಕೆಲವರು ಮೃತಪಟ್ಟಿದ್ದು, ಮತ್ತೊಬ್ಬ ಸಹೋದರ ಅನೀಸ್ ಇಬ್ರಾಹಿಂ ಕಸ್ಕರ್ ಗೆ ವಯಸ್ಸಾಗಿದೆ. ಇನ್ನು ದಾವೂದ್ ತನ್ನ ವ್ಯವಹಾರಗಳನ್ನು ನೋಡಿಕೊಳ್ಳಲು ಹತ್ತಿರದ ಸಂಬಂಧಿಗಳ ಬಗ್ಗೆ ವಿಶ್ವಾಸ ಹೊಂದಿಲ್ಲ ಎಂದು ತಿಳಿದುಬಂದಿದೆ.

    ಇಬ್ರಾಹಿಂ ಕಸ್ಕರ್ ವಿಚಾರಣೆಯನ್ನು ಮುಂದುವರೆಸಿರುವ ಪೊಲೀಸರು, ಮುಂಬರುವ ದಿನಗಳಲ್ಲಿ ದಾವೂದ್ ಕುಟುಂಬ ಹಾಗೂ ಆತನ ಭವಿಷ್ಯದ ಚಟುವಟಿಕೆಗಳ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಸಂಗ್ರಹಿಸಲು ಮುಂದಾಗಿದ್ದಾರೆ.

  • ಚಡ್ಡಿ ಹಾಕೊಂಡು ಪಾಸ್‍ಪೋರ್ಟ್ ವೆರಿಫಿಕೇಷನ್‍ಗೆ ಬಂದ ವ್ಯಕ್ತಿಯನ್ನ ಠಾಣೆಯಿಂದ ಹೊರಕಳಿಸಿದ ಪೊಲೀಸರು

    ಚಡ್ಡಿ ಹಾಕೊಂಡು ಪಾಸ್‍ಪೋರ್ಟ್ ವೆರಿಫಿಕೇಷನ್‍ಗೆ ಬಂದ ವ್ಯಕ್ತಿಯನ್ನ ಠಾಣೆಯಿಂದ ಹೊರಕಳಿಸಿದ ಪೊಲೀಸರು

    ಥಾಣೆ: ಶನಿವಾರ ಸಂಜೆ ಮಹಾರಾಷ್ಟ್ರದ ಕಲ್ಯಾಣ್ ನಿವಾಸಿಯಾದ ಮಂಗೇಶ್ ದೇಸಲೆ ಪಾಸ್‍ಪೋರ್ಟ್ ವೆರಿಫಿಕೇಷನ್‍ಗಾಗಿ ಇಲ್ಲಿನ ಖಡಕ್‍ಪಾದಾ ಪೊಲೀಸ್ ಠಾಣೆಗೆ ಹೋಗಿದ್ರು. ಆದ್ರೆ ಅವರನ್ನ ಪೊಲೀಸರು ಠಾಣೆಯಿಂದ ಹೊರಗಟ್ಟಿದ್ರು ಎಂದು ಹೇಳಿದ್ದಾರೆ. ಅವರು ಮಾಡಿದ ಅಪರಾಧವಾದ್ರೂ ಏನು ಅಂದ್ರಾ? ಚಡ್ಡಿ ಹಾಕೊಂಡು ಠಾಣೆಗೆ ಹೋಗಿದ್ದು.

    ಈ ಬಗ್ಗೆ ಮಂಗೇಶ್ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದು, ತಾನು ಹಾಕಿದ ಬಟ್ಟೆಗೆ ಪೊಲೀಸರು ಅವಮಾನ ಮಾಡಿದ್ರು ಎಂದಿದ್ದಾರೆ. ನಾನು ಚಡ್ಡಿ ಹಾಕಿದ್ದೆ. ಅದಕ್ಕೆ ಅವರು ನನ್ನ ಮೇಲೆ ಕೂಗಾಡಲು ಶುರು ಮಾಡಿದ್ರು. ಪೊಲೀಸ್ ಠಾಣೆಗೆ ಬರಲು ಇಂತದ್ದೇ ಬಟ್ಟೆ ತೊಡಬೇಕೆಂಬ ನಿಯಮವೇನಾದ್ರೂ ಇದೆಯಾ ಎಂದು ಕೇಳಿದೆ. ಅವರು ನನಗೆ ಯಾವ ನಿಯಮವನ್ನೂ ತೋರಿಸಲಿಲ್ಲ. ಆದ್ರೆ ಇದು ಭಾರತ, ಅಮೆರಿಕ ಅಲ್ಲ ಎಂದು ಹೇಳಿದ್ರು ಅಂತ ಫೇಸ್‍ಬುಕ್‍ನಲ್ಲಿ ಮಂಗೇಶ್ ಬರೆದುಕೊಂಡಿದ್ದಾರೆ. ಇದರ ಜೊತೆ ಎರಡು ವಿಡಿಯೋಗಳನ್ನೂ ಹಾಕಿದ್ದಾರೆ.

    ಮಂಗೇಶ್ ಹಾಗೂ ಇಬ್ಬರು ಪೊಲೀಸ್ ಅಧಿಕಾರಿಗಳ ನಡುವೆ ವಾಗ್ವಾದ ನಡೆಯುತ್ತಿರೋದನ್ನ ವಿಡಿಯೋದಲ್ಲಿ ಕಾಣಬಹುದು. ಮೊದಲನೇ ವಿಡಿಯೋದಲ್ಲಿ ಪೊಲೀಸರೊಬ್ಬರು ಮಂಗೇಶ್‍ಗೆ ಸರಿಯಾದ ಉಡುಪು ಧರಿಸಿ. ಠಾಣೆಗೆ ಮಹಿಳೆಯರು, ಮಕ್ಕಳು ಕೂಡ ಬರುತ್ತಾರೆ ಎಂದು ಹೇಳಿದ್ದಾರೆ.

    ತನ್ನನ್ನು ಪೊಲೀಸ್ ಠಾಣೆಯಿಂದ ಬಲವಂತವಾಗಿ ಹೊರಹಾಕಲಾಯ್ತು. ಕೇಸ್ ಹಾಕ್ತೀವೆಂದು ಬೆದರಿಸಿದ್ರು ಅಂತ ಮಂಗೇಶ್ ಹೇಳಿದ್ದಾರೆ.

    ವಿಡಿಯೋ ಬಗ್ಗೆ ವಿಚಾರಿಸಿದ್ದಕ್ಕೆ ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿ ಬಾಳಾ ಸಹೇಬ್ ಕದಮ್, ಪೊಲೀಸ್ ಠಾಣೆಗೆ ಬರುವಾಗ ಸರಿಯಾದ ಬಟ್ಟೆ ಹಾಕಿಕೊಂಡು ಬರಲು ನಮ್ಮ ಅಧಿಕಾರಿಗಳು ಅವರಿಗೆ ಹೇಳಿದ್ದಾರಷ್ಟೆ. ಠಾಣೆಗೆ ಮಹಿಳೆಯರೂ ಬರುತ್ತಾರೆ. ಚಡ್ಡಿ ಚೆನ್ನಾಗಿ ಕಾಣೋದಿಲ್ಲ. ಅವರು ಎಂಜಿನಿಯರ್, ಅವರಿಗೆ ಒಳ್ಳೆ ನಡವಳಿಕೆ ಹಾಗೂ ಪೊಲೀಸ್ ಠಾಣೆಗೆ ಬರುವಾಗ ಹೇಗಿರಬೇಕು ಅನ್ನೋದು ತಿಳಿದಿರಬೇಕು ಎಂದು ಹೇಳಿದ್ದಾರೆ.

    ಫೇಸ್‍ಬುಕ್‍ನಲ್ಲಿ ಹಂಚಿಕೊಂಡಾಗಿನಿಂದ ಈವರೆಗೆ ಮಂಗೇಶ್ ಅವರ ವಿಡಿಯೋ 1700ಕ್ಕೂ ಹೆಚ್ಚು ಬಾರಿ ಶೇರ್ ಆಗಿದೆ. ಮತ್ತೊಂದು ಕಡೆ ಸಾಕಷ್ಟು ಜನ ಮಂಗೇಶ್ ಅವರು ಪೊಲೀಸ್ ಠಾಣೆಗೆ ಚಡ್ಡಿ ಹಾಕಿಕೊಂಡು ಹೋಗಿದ್ದಕ್ಕೆ ಅವರನ್ನ ಟೀಕಿಸಿದ್ದಾರೆ.

    https://www.facebook.com/mangesh.desale/videos/pcb.10213002560631602/10213002511350370/?type=3&theater

    https://www.facebook.com/mangesh.desale/videos/pcb.10213002560631602/10213002486989761/?type=3&theater

  • ಹೆಂಡ್ತಿಗೆ ಪತ್ರ ಬರೆದಿಟ್ಟು ಕಾರಿನೊಳಗೇ ಶೂಟೌಟ್ ಮಾಡ್ಕೊಂಡ..!

    ಹೆಂಡ್ತಿಗೆ ಪತ್ರ ಬರೆದಿಟ್ಟು ಕಾರಿನೊಳಗೇ ಶೂಟೌಟ್ ಮಾಡ್ಕೊಂಡ..!

    ಥಾಣೆ: ಪತ್ನಿಗೆ ಪತ್ರ ಬರೆದಿಟ್ಟು 36 ವರ್ಷದ ವ್ಯಕ್ತಿಯೊಬ್ಬರು ತನ್ನ ಕಾರೊಳಗೆಯೇ ಶೂಟೌಟ್ ಮಾಡ್ಕೊಂಡ ಆಘಾತಕಾರಿ ಘಟನೆಯೊಂದು ಥಾಣೆಯಲ್ಲಿ ನಡೆದಿದೆ.

    ಈ ಘಟನೆ ಭಾನುವಾರ ಸಂಜೆ ನಡೆದಿದೆ. ಶೂಟೌಟ್ ಮಾಡ್ಕೊಂಡ ವ್ಯಕ್ತಿಯನ್ನು ಸಂಕೇತ್ ಹನುಮಂತ್ ಜಾಧವ್ ಎಂದು ಗುರುತಿಸಲಾಗಿದ್ದು, ಇವರು ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದರು. ಲೈಸನ್ಸ್ ಹೊಂದಿರುವ ಗನ್ ನಿಂದಲೇ ಜಾಧವ್ ಈ ಕೃತ್ಯ ಎಸಗಿಕೊಂಡಿದ್ದಾರೆ.

    ಏನಿದು ಪ್ರಕರಣ?: ಭಾನುವಾರ ಮಧ್ಯಾಹ್ನದ ಬಳಿಕ ಜಾಧವ್ ಕೆಲಸವಿದೆ ಅಂತ ತನ್ನ ಕಾರು ತೆಗೆದುಕೊಂಡು ಮನೆಯಿಂದ ಹೊರಟಿದ್ದರು. ಅಂತೆಯೇ ಮೀರಾ ರಸ್ತೆಯಿಂದ ನಂಗ್ಲಾ ಚೌಕಿ ಮಧ್ಯೆ ರಸ್ತೆ ಪಕ್ಕ ಜಾಧವ್ ಒಳಗಡೆಯಿಂದ ಲಾಕ್ ಮಾಡಿ ಕಾರು ನಿಲ್ಲಿಸಿದ್ದಾರೆ. ಬಳಿಕ ತನ್ನ ಬಳಿಯಿದ್ದ ಗನ್ ನಿಂದ ಎದೆಗೆ ಗುರಿಯಿಟ್ಟುಕೊಂಡಿದ್ದಾರೆ.

    ರಸ್ತೆ ಬದಿಯಲ್ಲಿ ತುಂಬಾ ಹೊತ್ತು ಕಾರು ನಿಂತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿ ಪೊಲೀಸರು ಕಾರಿನ ಹಿಂದಿನ ಗ್ಲಾಸನ್ನು ಒಡೆದಿದ್ದಾರೆ. ಈ ವೇಳೆ ಕಾರಿನ ಒಳಗೆ ಡ್ರೈವರ್ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿತ್ತು. ಅಲ್ಲದೇ ವ್ಯಕ್ತಿಯ ಕೈಯಲ್ಲಿ ಗನ್ ಇರುವುದು ಬೆಳಕಿಗೆ ಬಂದಿದೆ. ಹೀಗಾಗಿ ವ್ಯಕ್ತಿ ತನ್ನ ಕೈಯಿಂದ್ಲೇ ಶೂಟ್ ಮಾಡ್ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತ ಕಂಟ್ರಿವಡಾವಿಲ್ಲ ಠಾಣೆಯ ಪೊಲೀಸರು ಶಂಕಿಸಿದ್ದಾರೆ.

    ಪತ್ರದಲ್ಲೇನಿದೆ?: ಮೃತ ವ್ಯಕ್ತಿ ಕುಳಿತಿದ್ದ ಪಕ್ಕದಲ್ಲಿಯೇ ಡೆತ್ ನೋಟ್ ಬಿದ್ದಿದ್ದು ಅದರಲ್ಲಿ, `ಪ್ರತಿ ದಿನದ ಕೆಲಸದಿಂದ ಬಳಲಿದ್ದೇನೆ.. ಕೆಲಸದ ಒತ್ತಡದಿಂದ ನನ್ನ ಖಾಸಗಿ ಜೀವನಕ್ಕೆ ಸಮಯ ಸಿಗುತ್ತಿಲ್ಲ.. ನಿನ್ನೊಂದಿಗೆ ಕಾಲ ಕಳೆಯಲು ನನಗೂ ಸಮಯವಿಲ್ಲ. ಹೀಗಾಗಿ ತುಂಬಾ ನೊಂದಿದ್ದೇನೆ.. ಅಪಾರ್ಥ ಮಾಡಿಕೊಳ್ಳಬೇಡ.. ಕ್ಷಮಿಸಿಬಿಡು ನನ್ನ ಜೀವನವನ್ನು ಕೊನೆಯಾಗಿಸುತ್ತಿದ್ದೇನೆ’ ಅಂತ ಬರೆದಿದ್ದರು.

    ಥಾಣೆ ಪುರಸಭಾ ಕಾರ್ಪೋರೇಷನ್ ನಲ್ಲಿ ಗುತ್ತಿಗೆದಾರನಾಗಿ ಜಾಧವ್ ಇತ್ತೀಚೆಗಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದರು. 8 ವರ್ಷದ ಹಿಂದೆ ಮದುವೆಯಾಗಿರೋ ಜಾಧವ್ ಅವರಿಗೆ 5ವರ್ಷದ ಮಗನಿದ್ದಾನೆ ಅಂತ ಪೊಲೀಸರು ತಿಳಿಸಿದ್ದಾರೆ.