Tag: ದಂಗೆಕೋರರು

  • ಮಣಿಪುರದಲ್ಲಿ ನಿಲ್ಲದ ಸಂಘರ್ಷ – ತಂದೆ, ಮಗ ಸೇರಿ ಮೂವರು ಬಲಿ

    ಮಣಿಪುರದಲ್ಲಿ ನಿಲ್ಲದ ಸಂಘರ್ಷ – ತಂದೆ, ಮಗ ಸೇರಿ ಮೂವರು ಬಲಿ

    ಇಂಪಾಲ: ಮಣಿಪುರದ (Manipur) ಬಿಷ್ಣುಪುರ (Bishnupur) ಜಿಲ್ಲೆಯಲ್ಲಿ ಇಂದು (ಶನಿವಾರ) ಮುಂಜಾನೆ ನಡೆದ ಹಿಂಸಾಚಾರದಲ್ಲಿ (Violence) ತಂದೆ-ಮಗ ಸೇರಿದಂತೆ ಮೂವರು ಗ್ರಾಮಸ್ಥರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

    ಶಂಕಿತ ದಂಗೆಕೋರರು ಮಧ್ಯರಾತ್ರಿ 2 ಗಂಟೆಯ ಸುಮಾರಿಗೆ ಬಿಷ್ಣುಪುರದ ಕ್ವಾಕ್ಟ ಬಳಿಯ ಉಖಾ ತಂಪಕ್ ಗ್ರಾಮದ ಮೇಲೆ ದಾಳಿ ನಡೆಸಿದ್ದು, ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಒಂದು ಫ್ರಿಡ್ಜ್‌ಗಾಗಿ 7 ತಿಂಗಳ ಗರ್ಭಿಣಿಯ ಜೀವವೇ ಹೋಯ್ತು!

    ಈ ಗುಂಡಿನ ದಾಳಿಯಲ್ಲಿ ತಮ್ಮ ಮನೆಗಳನ್ನು ಕಾಯುತ್ತಿದ್ದ ತಂದೆ – ಮಗ ಮತ್ತು ಇನ್ನೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೃತರು ಯಾವುದೇ ಶಸ್ತ್ರಾಸ್ತ್ರಗಳನ್ನು ಹೊಂದಿರಲಿಲ್ಲ. ಬಫರ್ ಝೋನ್ ದಾಟಿ ಮೈತೇಯ್ ಪ್ರದೇಶಕ್ಕೆ ನುಗ್ಗಿದ ದಂಗೆಕೋರರು ಗುಂಡಿನ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಹರಿಯಾಣ ಧಗಧಗ: ಅಕ್ರಮ ವಲಸಿಗರ 250 ಗುಡಿಸಲುಗಳು ನೆಲಸಮ, 41 ಕೇಸ್, 176 ಮಂದಿ ಅರೆಸ್ಟ್, 90 ಮಂದಿ ವಶಕ್ಕೆ

    ಮೃತರು ಮೈತೇಯ್ (Meitei) ಸಮುದಾಯದವರಾಗಿದ್ದು, ದಂಗೆಕೋರರು ಕುಕಿ (Kuki) ಸಮುದಾಯದ ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಸದ್ಯ ಕ್ವಾಕ್ಟ ಪ್ರದೇಶದಲ್ಲಿ ಕುಕಿ ಸಮುದಾಯ ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಇದನ್ನೂ ಓದಿ: ಹಿಜಬ್‌ ಹಾಕದೇ ಶಾಲೆಗೆ ಬಂದ ಬಾಲಕಿಯರನ್ನು ತಡೆದ 10 ನೇ ತರಗತಿ ಮುಸ್ಲಿಂ ವಿದ್ಯಾರ್ಥಿ – ಗುಂಪಿನಿಂದ ಹಲ್ಲೆ

    ಗುಂಡಿನ ದಾಳಿಯಲ್ಲಿ ಮಣಿಪುರದ ಕಮಾಂಡೋ ತಲೆಗೆ ತೀವ್ರ ಗಾಯವಾಗಿದ್ದು, ಬಿಷ್ಣುಪುರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಗಾಯಾಳು ಕಮಾಂಡೋವನ್ನು ಬಿಷ್ಣುಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ಘಟನೆ ನಡೆದ ಪ್ರದೇಶದಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ – ಮೂವರು ಯೋಧರು ಹುತಾತ್ಮ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಂಗೆಕೋರರು ಎಂದು ಭಾವಿಸಿ ಗುಂಡಿನ ದಾಳಿ-13 ಮಂದಿ ದುರ್ಮರಣ

    ದಂಗೆಕೋರರು ಎಂದು ಭಾವಿಸಿ ಗುಂಡಿನ ದಾಳಿ-13 ಮಂದಿ ದುರ್ಮರಣ

    ಗುವಾಹಟಿ: ನಾಗಾಲ್ಯಾಂಡ್ ನಲ್ಲಿ ಭದ್ರತಾ  ಸಿಬ್ಬಂದಿ ದಂಗೆಕೋರರ ವಿರುದ್ಧ ಕಾರ್ಯಾಚರಣೆ ಸಂದರ್ಭದಲ್ಲಿ  ದಂಗೆಕೋರರು ಎಂದು ತಪ್ಪಾಗಿ ಭಾವಿಸಿ ಗುಂಡಿಕ್ಕಿಕೊಂದಿರುವ ಘಟನೆ  ನಾಗಾಲ್ಯಾಂಡ್‍ನ ಮೋನ್ ಜಿಲ್ಲೆಯ ತಿರು ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ. ಈ ಘಟನೆಯಲ್ಲಿ 13 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಇಮ್ನಾಲೆನ್ಸಾ ದೃಢಪಡಿಸಿದ್ದಾರೆ

    ಸಂತ್ರಸ್ತರು ಕಲ್ಲಿದ್ದಲು ಗಣಿಯಿಂದ ಕೆಲಸ ಮುಗಿಸಿ ಟ್ರಕ್ ನಲ್ಲಿ ವಾಪಸ್ಸಾಗುತ್ತಿದ್ದರು. ದೈನಂದಿನ ವೇತನ ಪಡೆಯುತ್ತಿದ್ದ ಕಾರ್ಮಿಕರಾಗಿದ್ದ ಇವರು ವಾರಾಂತ್ಯಗಳಲ್ಲಿ ಮಾತ್ರ ಮನೆಗೆ ಬರುತ್ತಿದ್ದರು. ಅಂತೆಯೇ ಶನಿವಾರದಂದು ಮನೆಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಅವರನ್ನು ಭಯೋತ್ಪಾದಕರೆಂದು ಭಾವಿಸಿ ಪ್ಯಾರಾ ಕಮಾಂಡೋಗಳು ದಾಳಿ ನಡೆಸಿದ್ದಾರೆ. ಇವರಿನ್ನೂ ಬರಲಿಲ್ಲ ಎಂದು ಹುಡುಕುತ್ತಾ ಹೋದ ಸ್ಥಳೀಯರಿಗೆ ಟ್ರಕ್ ಮತ್ತು 13 ಮಂದಿ ನಾಗರಿಕರ ಮೃತದೇಹ ಸಿಕ್ಕಿದೆ. ಅದನ್ನು ನೋಡಿ ಕೋಪಗೊಂಡ ಜನರು ಭದ್ರತಾ ಪಡೆಯ ಎರಡು ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:  ಕೊರೊನಾ ವೈರಸ್ ಹರಡುವುದನ್ನು ತಡೆಯಲು ಬಂತು ಚೂಯಿಂಗಮ್!

    ನಾಗಾಲ್ಯಾಂಡ್‍ನ ಮುಖ್ಯಮಂತ್ರಿ ನಿಫಿಯು ರಿಯೊ ಅವರು ಉನ್ನತ ಮಟ್ಟದ ವಿಶೇಷ ತನಿಖೆಗೆ ಆದೇಶಿಸಿದ್ದಾರೆ. ಈ ಗುಂಡಿನ ದಾಳಿ ತೀವ್ರ ಖಂಡನೀಯ. ಅನ್ಯಾಯವಾಗಿ ಬಲಿಯಾದವರ ಸಾವಿಗೆ ನ್ಯಾಯ ಒದಗಿಸುತ್ತೇವೆ. ಸ್ಥಳೀಯರು ಶಾಂತಿಯುತವಾಗಿರಬೇಕು ಎಂದು ಮನವಿ ಮಾಡಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕೊರೊನಾ ಮನುಷ್ಯರಿಂದ ಪ್ರಾಣಿಗಳಿಗೆ ಹರಡುತ್ತದೆ – ಸಂಶೋಧನಾ ವರದಿ

    ಗೃಹ ಸಚಿವ ಅಮಿತ್ ಶಾ ಕೂಡ ಟ್ವೀಟ್ ಮಾಡಿದ್ದು, ನಾಗಾಲ್ಯಾಂಡ್‍ನ ಓಟಿಂಗ್‍ನಲ್ಲಿ ನಡೆದ ಘಟನೆಯಿಂದ ನೋವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಾಂತ್ವನಗಳು. ಈ ಘಟನೆ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಉನ್ನತ ಮಟ್ಟದ ಎಸ್‍ಐಟಿ ರಚನೆ ಮಾಡಲಿದೆ ಎಂದು ಹೇಳಿದ್ದಾರೆ.