Tag: ದಂಡಂ ದಶಗುಣಂ

  • ನಟಿ ಅನು ಗೌಡ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ- ಆಸ್ಪತ್ರೆಗೆ ದಾಖಲು

    ನಟಿ ಅನು ಗೌಡ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ- ಆಸ್ಪತ್ರೆಗೆ ದಾಖಲು

    ನ್ನಡ ಕಿರುತೆರೆ, ಹಿರಿತೆರೆಯಲ್ಲಿ ಆಕ್ಟೀವ್ ಆಗಿರುವ ಅನು ಗೌಡ (Actress Anu Gowda) ಅವರ ಮೇಲೆ ಜಮೀನು ವಿವಾದದ ವಿಚಾರವಾಗಿ ಹಲ್ಲೆ ನಡೆದಿದೆ. ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ಪಾತ್ರಗಳ ಮೂಲಕ ಪರಿಚಿತರಾಗಿರುವ ಅನು ಗೌಡ ಮೇಲೆ ಜಮೀನು ವಿಚಾರಕ್ಕೆ ಸ್ಥಳಿಯ ನಿವಾಸಿಗಳಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ಇದನ್ನೂ ಓದಿ:ನೀನು ಆಂಟಿಯಾಗಿ 1 ವರ್ಷದ ಅನುಭವವಿದೆ- ಬರ್ತ್‌ಡೇಯಂದು ಪತ್ನಿ ಕಾಲೆಳೆದ ನಟ ಸುದರ್ಶನ್

    ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸದ್ಯ ನಟಿ ಅನು ಗೌಡ ಸಾಗರದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಮೀನಿನ ವಿಚಾರದಲ್ಲಿ ಸ್ಥಳೀಯ ನೀವಾಸಿಗಳಾದ ನೀಲಮ್ಮ- ಮೋಹನ್ ಎನ್ನುವರು ಅನು ಗೌಡ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸಾಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಸ್ಪಡಿಯಲ್ಲಿರುವ ಜಮೀನನ್ನು ನಟಿ ಅನು, ಅಪ್ಪ ಅಮ್ಮ ನೋಡಿಕೊಳ್ಳುತ್ತಿದ್ದು, ಅನು ಗೌಡ ಆಗಾಗ ಬೆಂಗಳೂರಿನಿಂದ ಬಂದು ಹೋಗುತ್ತಿದ್ದರು. ಆದರೆ, ಜಮೀನು ವಿವಾದ ವಿಚಾರಕ್ಕೆ ಅನು ಗೌಡ ಮೇಲೆ ಹಲ್ಲೆ ಮಾಡಲಾಗಿದೆ.

    ನಟಿ ಅನು ಗೌಡ ತಮಿಳು ಸೇರಿದಂತೆ ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ವಿಷ್ನುವರ್ಧನ್, ಶಿವಣ್ಣ, ಅಪ್ಪು ಹಾಗೂ ಸುದೀಪ್ ಸಿನಿಮಾಗಳಲ್ಲಿ ಸೈಡ್ ಆಕ್ಟಿಂಗ್ ಮಾಡಿದ್ದಾರೆ. ಕನ್ನಡದಲ್ಲಿ ಸವಿಸವಿ ನೆನಪುಮ ಭೂಗತ, ವಿಷ್ಣುವರ್ಧನ್ ಜೊತೆಗೆ ಸ್ಕೂಲ್ ಮಾಸ್ಟರ್, ಕಿಚ್ಚ ಸುದೀಪ್ ಜೊತೆ ಕೆಂಪೇಗೌಡ ಚಿತ್ರದಲ್ಲಿ ನಟಿಸಿದ್ದಾರೆ. ‘ದಂಡಂ ದಶಗುಣಂ’ ಚಿತ್ರದಲ್ಲಿ ರಮ್ಯಾ ಸಹೋದರಿ ಪಾತ್ರದಲ್ಲಿ ನಟಿಸಿದ್ದಾರೆ.  ಸುಗ್ರೀವ, ಹುಡುಗರು ಸಿನಿಮಾದಲ್ಲಿ ನಟಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿರು ಅದ್ಭುತ ಸಹನಟ- ರಮ್ಯಾ ಸಂತಾಪ

    ಚಿರು ಅದ್ಭುತ ಸಹನಟ- ರಮ್ಯಾ ಸಂತಾಪ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ಮರಣಕ್ಕೆ ನಿಧನಕ್ಕೆ ನಟಿ ರಮ್ಯಾ ಸಂತಾಪ ಸೂಚಿಸಿದ್ದಾರೆ.

    ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಚಿರಂಜೀವಿ ಸರ್ಜಾ ಅವರು ಇಂದು ಹೃದಯಾಘತದಿಂದ ಸಾವನ್ನಪ್ಪಿದ್ದಾರೆ. ಈ ಸುದ್ದಿಯಿಂದ ಇಡೀ ಚಂದನವನಕ್ಕೆ ಸಿಡಿಲು ಬಡಿದಂತೆ ಆಗಿದೆ. 25ಕ್ಕೂ ಹೆಚ್ಚಿನ ಸಿನಿಮಾದಲ್ಲಿ ನಟಿಸಿ ಮುಂದೆ ಒಳ್ಳೆಯ ಸಿನಿಮಾ ಮಾಡಬೇಕು ಎಂದು ಕನಸು ಕಂಡಿದ್ದ ಚಿರು ಸಾವಿಗೆ ಹಲವಾರು ನಟರು ಸಂತಾಪ ಸೂಚಿಸಿದ್ದಾರೆ.

    ಚಿರಂಜೀವಿ ಸರ್ಜಾ ಅವರೊಂದಿಗಿನ ಫೋಟೋವನ್ನು ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿರುವ ರಮ್ಯಾ, “ಚಿರು ಅದ್ಭುತ ಸಹನಟ. ಯಾವಾಗಲೂ ಹರ್ಷಚಿತ್ತದಿಂದ ಇರುತ್ತಿದ್ದ ಅವರು ಸಕಾರಾತ್ಮಕ ಮನೋಭಾವವನ್ನು ಹೊಂದಿದ್ದರು. ಅವರೊಂದಿಗೆ ಕೆಲಸ ಮಾಡಿದ್ದನ್ನು ಆಹ್ಲಾದಕರ ಮತ್ತು ಸ್ಮರಣೀಯ ಅನುಭವವನ್ನಾಗಿಸಿದ್ದರು. ಇಂತಹ ಕ್ಷಣದಲ್ಲಿ ಅವರ ಪ್ರೀತಿಪಾತ್ರರು, ಕುಟುಂಬಸ್ಥರನ್ನು ಸಮಾಧಾನಪಡಿಸುವ ಪದಗಳು ಆಡುವುದು ತುಂಬಾ ಕಷ್ಟ. ಅವರಿಗೆ ದುಃಖ ಸಹಿಸಿಕೊಳ್ಳುವ ಶಕ್ತಿ ಸಿಗಲಿ. ಅವರ ಆತ್ಮಕೆ ಶಾಂತಿ ಸಿಗಲಿ. ಓಂ ಶಾಂತಿ” ಎಂದು ಬರೆದುಕೊಂಡಿದ್ದಾರೆ.

    https://www.facebook.com/178427215195/posts/10158042562045196/

    ಚಿರಂಜೀವಿ ಸರ್ಜಾ ಅವರು ರಮ್ಯಾ ಅವರೊಂದಿಗೆ ‘ದಂಡಂ ದಶಗುಣಂ’ ನಟಿಸಿದ್ದರು. 2011ರ ಏಪ್ರಿಲ್‍ನಲ್ಲಿ ತೆರೆ ಕಂಡ ಈ ಸಿನಿಮಾದಲ್ಲಿ ಚಿರು ಪೊಲೀಸ್ ಪಾತ್ರದಲ್ಲಿ ಮಿಂಚಿದ್ದರು.

    ಚಿರಂಜೀವಿ ಸರ್ಜಾ ಅವರಿಗೆ ನಿನ್ನೆ ರಾತ್ರಿಯಿಂದ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮಧ್ಯಾಹ್ನ 3:30ರ ಸುಮಾರಿಗೆ ಅಶೋಕಾ ಪಿಲ್ಲರ್ ಬಳಿ ಇರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ತಮ್ಮ 39ನೇ ವರ್ಷಕ್ಕೆ ಬಾರದ ಲೋಕಕ್ಕೆ ತೆರೆಳಿದ್ದಾರೆ.