Tag: ದಂಧೆಕೋರರು

  • ರಾಯಚೂರಿನಲ್ಲಿ ನಿಲ್ಲದ ಅಕ್ರಮ ಕಲಬೆರಕೆ ಸೇಂದಿ ಮಾರಾಟ- 1500 ಲೀಟರ್ ಸಿಎಚ್ ಪೌಡರ್ ಜಪ್ತಿ

    ರಾಯಚೂರಿನಲ್ಲಿ ನಿಲ್ಲದ ಅಕ್ರಮ ಕಲಬೆರಕೆ ಸೇಂದಿ ಮಾರಾಟ- 1500 ಲೀಟರ್ ಸಿಎಚ್ ಪೌಡರ್ ಜಪ್ತಿ

    ರಾಯಚೂರು: ನಗರದಲ್ಲಿ ಸಿಎಚ್ ಪೌಡರ್ ಕಲಬೆರಕೆ ಸೇಂದಿ ದಂಧೆ ಜೋರಾಗಿ ನಡೆಯುತ್ತಿದ್ದು, ಅಬಕಾರಿ ಇಲಾಖೆ ನಿರಂತರ ದಾಳಿ ನಡೆಸಿದರೂ ಕ್ಯಾರೇ ಎನ್ನದ ದಂಧೆಕೋರರು ಸೇಂದಿ ಮಾರಾಟ ಮಾಡುವುದನ್ನು ಮಾತ್ರ ನಿಲ್ಲಿಸಿಲ್ಲ.

    ನಗರದ ಮೈಲಾರ ನಗರದಲ್ಲಿ ಆರೋಪಿ ಬ್ರೂಸ್ಲಿ ಅಲಿಯಾಸ್ ನರಸಿಂಹಲು ಅಡ್ಡೆ ಮೇಲೆ ಅಬಕಾರಿ ಅಧಿಕಾರಿಗಳು ಒಂದೇ ತಿಂಗಳಲ್ಲಿ ನಾಲ್ಕನೇಯ ಬಾರಿ ದಾಳಿ ನಡೆಸಿದ್ದಾರೆ. ಈ ಬಾರಿ 1500 ಲೀಟರ್ ಸಿಎಚ್ ಪೌಡರ್ ಕಲಬೆರಕೆ ಸೇಂದಿ ಜಪ್ತಿ ಮಾಡಿ ಮೂವರು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ. ಮುಖ್ಯ ಆರೋಪಿ ಬ್ರೂಸ್ಲಿ ಪರಾರಿಯಾಗಿದ್ದು, ಹಾಜಿ, ಮಲ್ಲಯ್ಯ, ಮಲ್ಲೇಶ್ ನಾಯಕ್‍ನನ್ನು ಪೊಲೀಸರು ಬಂಧಿಸಿದ್ದಾರೆ.

    ಅಕ್ರಮವಾಗಿ ಶೆಡ್ ನಿರ್ಮಿಸಿಕೊಂಡು ಕಲಬೆರಕೆ ಸೇಂದಿ ತಯಾರಿಕೆಯನ್ನು ಬ್ರೂಸ್ಲಿ ನಿರಂತರವಾಗಿ ನಡೆಸಿಕೊಂಡು ಬಂದಿದ್ದಾನೆ. ಎಷ್ಟೇ ಬಾರೀ ಆರೋಪಿಗೆ ಅಧಿಕಾರಿಗಳು ಎಚ್ಚರಿಕೆ ಕೊಟ್ಟಿದ್ದರೂ, ಆತನ ಅಡ್ಡೆ ಮೇಲೆ ದಾಳಿ ಮಾಡಿದ್ದರೂ ಆರೋಪಿ ಕ್ಯಾರೆ ಎನ್ನುತ್ತಿಲ್ಲ. ಆದ್ದರಿಂದ ಬ್ರೂಸ್ಲಿ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಸಲು ಇಲಾಖೆ ಮುಂದಾಗಿದೆ ಎಂದು ಅಬಕಾರಿ ಇಲಾಖೆ ಪ್ರಭಾರಿ ಅಧೀಕ್ಷಕ ಹನುಮಂತ ಗುತ್ತೇದಾರ್ ಹೇಳಿದ್ದಾರೆ.

    ಮೊಹರಂ ಹಾಗೂ ಗಣೇಶ ಚತುರ್ಥಿ ವೇಳೆ ಮದ್ಯ ಮಾರಾಟಕ್ಕೆ ನಿಷೇಧವಿದ್ದ ಸಂದರ್ಭದಲ್ಲೂ ಎಗ್ಗಿಲ್ಲದೆ ನಗರದಲ್ಲಿ ಕಲಬೆರಕೆ ಸೇಂದಿ ಮಾರಾಟ ನಡೆದಿತ್ತು. ಸೆಪ್ಟೆಂಬರ್ ತಿಂಗಳಲ್ಲಿ 25ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ದಂಧೆಕೋರರನ್ನ ನಿಯಂತ್ರಣ ಮಾಡಲು ಪೊಲೀಸ್ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳಿಂದ ಸಾಧ್ಯವಾಗುತ್ತಿಲ್ಲ.

  • ಬಳ್ಳಾರಿಯಲ್ಲಿ ಮರಳು ದಂಧೆಕೋರರ ಮೇಲೆ ರೇಡ್ – ಒಂದೂವರೆ ಕೋಟಿ ರೂ. ಸೀಜ್

    ಬಳ್ಳಾರಿಯಲ್ಲಿ ಮರಳು ದಂಧೆಕೋರರ ಮೇಲೆ ರೇಡ್ – ಒಂದೂವರೆ ಕೋಟಿ ರೂ. ಸೀಜ್

    – ಆರೋಪಿಗಳ ಬಂಧನ

    ಬಳ್ಳಾರಿ: ಜಿಲ್ಲೆಯ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಮರಳು ದಂಧೆಯ ಗುತ್ತಿಗೆ ಪಡೆಯಲು ರಿಂಗ್ ಮಾಡಿಕೊಳ್ಳುತ್ತಿದ್ದ ಗುತ್ತಿಗೆದಾರರ ಮೇಲೆ ಪೊಲೀಸರು, ಐಟಿ, ಕಂದಾಯ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ದಂಧೆಕೋರರಿಗೆ ಬಿಸಿ ಮುಟ್ಟಿಸಿದ್ದಾರೆ.

    ಬಳ್ಳಾರಿ ಹೊರವಲಯದಲ್ಲಿರುವ ಎಂಎಲ್ ಸಿ ಅಲ್ಲವೀರಭದ್ರಪ್ಪ ಒಡೆತನದ ಅಲ್ಲಭವನದಲ್ಲಿ ಭಾನುವಾರ ಸಂಜೆ ಮರಳು ದಂಧೆಕೋರರು, ಗುತ್ತಿಗೆದಾರರು ರಿಂಗಿಂಗ್ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ಹಲವು ಗುತ್ತಿಗೆದಾರರನ್ನ ವಶಕ್ಕೆ ಪಡೆಯುವುದಲ್ಲದೇ ಅಪಾರ ಪ್ರಮಾಣದ ಹಣವನ್ನು ಸಹ ಜಪ್ತಿ ಮಾಡಿದ್ದಾರೆ.

    ದಾಳಿಯ ವೇಳೆ ಗುತ್ತಿಗೆದಾರರ ಬಳಿ ಸುಮಾರು ಒಂದೂವರೆ ಕೋಟಿ ರೂಪಾಯಿ ಹಣವಿತ್ತೆಂತು ಮೂಲಗಳು ಖಚಿತಪಡಿಸಿವೆ. ಪೊಲೀಸರು, ಐಟಿ, ಕಂದಾಯ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆಯೇ ಪರಾರಿಯಾಗಲು ಯತ್ನಿಸಿದ ಗುತ್ತಿಗೆದಾರರನ್ನ ವಶಕ್ಕೆ ಪಡೆಯಲು ಎಸ್ ಸಿ ಅರುಣ ರಂಗರಾಜನ್ ಗಾಳಿಯಲ್ಲಿ ಗುಂಡು ಹಾರಿಸಿ ಹಲವು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ವಿಚಾರಣೆ ತಡರಾತ್ರಿಯವರೆಗೂ ಮುಂದುವರಿದಿದ್ದು ದಾಳಿ ಹಾಗೂ ವಶಕ್ಕೆ ಪಡೆದ ಹಣದ ಬಗ್ಗೆ ಎಸ್ ಪಿ ಅರುಣ ರಂಗರಾಜನ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಬಹಿರಂಗಪಡಿಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv