Tag: ದತ್ತಜಯಂತಿ

  • ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಸಂಭ್ರಮ- ಮಾಲಾಧಾರಿಗಳಿಂದ ದತ್ತಪಾದುಕೆ ದರ್ಶನ

    ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಸಂಭ್ರಮ- ಮಾಲಾಧಾರಿಗಳಿಂದ ದತ್ತಪಾದುಕೆ ದರ್ಶನ

    – ಖಾಕಿಗಳಿಂದ ಹೈ ಅಲರ್ಟ್

    ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ದತ್ತಜಯಂತಿ (Datta Jayanthi) ಕೊನೆ ದಿನವಾದ ಇಂದು ಪಾದುಕೆ ದರ್ಶನ ನಡೆಯಲಿದೆ.

    ಹೌದು. ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ (Baba Budan giri) ಸ್ವಾಮಿ ದರ್ಗಾದಲ್ಲಿ ದತ್ತಮಾಲಾಧಾರಿಗಳು ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾವಿರಾರು ದತ್ತಮಾಲಾಧಾರಿಗಳು ಆಗಮಿಸಲಿದ್ದಾರೆ. ದತ್ತ ಗುಹೆ ಮುಂಭಾಗದ ತುಳಸಿ ಕಟ್ಟೆಯ ಬಳಿ ಹೋಮ-ಹವನ-ಪೂಜೆ ನಡೆಯುತ್ತಿದೆ.

    ದತ್ತಜಯಂತಿ (Dattajayanthi) ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ನಗರದ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳು ಬಂದ್ ಮಾಡಲಾಗಿದೆ. ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ತೆರಳುವ ಮಾರ್ಗದಲ್ಲಿ ಅಂಗಡಿ ಮುಂಗಟ್ಟು ಸಂಪೂರ್ಣ ಬಂದ್ ಆಗಿದೆ. ಇದನ್ನೂ ಓದಿ: ದತ್ತಜಯಂತಿಯ ಶೋಭಾಯಾತ್ರೆಯಲ್ಲಿ 25 ಸಾವಿರಕ್ಕೂ ಹೆಚ್ಚು ಭಕ್ತರು ಭಾಗಿ

    ನಿನ್ನೆ ದತ್ತ ಜಯಂತಿಯ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಸಲಾಯ್ತು. ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತಾತ್ರೇಯನಿಗೆ ವಿಶೇಷ ಪೂಜೆ ಸಲ್ಲಿಸಿ ಶೋಭಾಯಾತ್ರೆಗೆ ಚಾಲನೆ ನೀಡಿದ್ರು. ಬಸವನಹಳ್ಳಿ ಮುಖ್ಯ ರಸ್ತೆ, ಹನುಮಂತಪ್ಪ ವೃತ್ತ, ಎಂ.ಜಿ.ರಸ್ತೆ ಮೂಲಕ ಸಾಗಿದ ಶೋಭಾಯಾತ್ರೆ ಆಜಾದ್ ವೃತ್ತದಲ್ಲಿ ಕೊನೆಗೊಂಡಿತು.

    ಶೋಭಾಯಾತ್ರೆಯಲ್ಲಿ 20 ರಿಂದ 25 ಸಾವಿರ ದತ್ತ ಭಕ್ತರು ಪಾಲ್ಗೊಂಡಿದ್ರು. ವೀರಭದ್ರ ವೇಷಧಾರಿಗಳ ಜೊತೆ ವೀರಗಾಸೆ ಕತ್ತಿ ಹಿಡಿದು ಮಾಡಿದ ನೃತ್ಯ ಎಲ್ಲರ ಗಮನ ಸೆಳೆಯಿತು. ಮೂರು ಡಿಜೆ ಶಬ್ಧಕ್ಕೆ ಯುವಜನತೆ ಯುವಕ-ಯುವತಿಯರು ಎನ್ನದೆ ಎಲ್ಲರೂ ಒಂದೆಡೆ ಸೇರಿ ಮನಸ್ಸೋ ಇಚ್ಛೆ ಕುಣಿದು ಕುಪ್ಪಳಿಸಿದರು. ಈ ಮನಮೋಹಕ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಮಧ್ಯೆ ದತ್ತಪೀಠವನ್ನ ಹಿಂದೂಗಳಿಗೆ ವಹಿಸಿಕೊಡಬೇಕು ಎಂದು ಕೂಗಿ…ಕೂಗಿ ಹೇಳಿದ್ರು.

  • ಕಾಫಿನಾಡ ದತ್ತಜಯಂತಿಗೆ ಅಧಿಕೃತ ಚಾಲನೆ; ಸಿ.ಟಿ.ರವಿ ಮಾಲಾಧಾರಣೆ – ಜಿಲ್ಲಾದ್ಯಂತ ಹೈ ಅಲರ್ಟ್‌

    ಕಾಫಿನಾಡ ದತ್ತಜಯಂತಿಗೆ ಅಧಿಕೃತ ಚಾಲನೆ; ಸಿ.ಟಿ.ರವಿ ಮಾಲಾಧಾರಣೆ – ಜಿಲ್ಲಾದ್ಯಂತ ಹೈ ಅಲರ್ಟ್‌

    ಚಿಕ್ಕಮಗಳೂರು: ತಾಲೂಕಿನ ದತ್ತಪೀಠದಲ್ಲಿ ನಡೆಯುವ ದತ್ತ ಜಯಂತಿ (Datta Jayanthi) ಕಾರ್ಯಕ್ರಮಕ್ಕೆ ಇಂದು (ಭಾನುವಾರ) ಅಧಿಕೃತ ಚಾಲನೆ ದೊರೆತಿದೆ.‌ ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ಮಾಜಿ ಶಾಸಕ ಸಿ.ಟಿ.ರವಿ (C.T.Ravi) ಜೊತೆ 300 ಕ್ಕೂ ಅಧಿಕ ದತ್ತ ಭಕ್ತರು ಮಾಲಾಧಾರಣೆ ಮಾಡುವ ಮೂಲಕ 10 ದಿನಗಳ ದತ್ತಜಯಂತಿ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆತಿದೆ.

    ಕಳೆದ ವರ್ಷಕ್ಕಿಂತ ಈ ಬಾರಿ ಭಾರೀ ಸಂಖ್ಯೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ದತ್ತ ಭಕ್ತರು ಮಾಲಾಧಾರಣೆ ಮಾಡಿದ್ದಾರೆ. ಇಂದಿನಿಂದ 10 ದಿನಗಳ ಕಾಲ ಕಾಫಿನಾಡು ಬೂದಿ ಮುಚ್ಚಿದ ಕೆಂಡದಂತಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೂಡ ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿ ಹದ್ದಿನ ಕಣ್ಣಿಟ್ಟಿದೆ. ಇದನ್ನೂ ಓದಿ: ಖಾಸಗಿ ದೇವಾಲಯಗಳನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ ತೆಗೆದುಕೊಳ್ಳಲ್ಲ: ರಾಮಲಿಂಗಾ ರೆಡ್ಡಿ ಸ್ಪಷ್ಟನೆ

    ಇದೇ 24ರ ಭಾನುವಾರದಂದು ನಗರದಲ್ಲಿ ಸಾವಿರಾರು ಮಹಿಳೆಯರು ಬೃಹತ್ ಸಂಕೀರ್ತನ ಯಾತ್ರೆ ನಡೆಸಿ ದತ್ತಪೀಠದಲ್ಲಿ ಹೋಮ-ಹವನ ನಡೆಸುವ ಮೂಲಕ ಅನುಸೂಯ ಜಯಂತಿ ಆಚರಿಸಲಿದ್ದಾರೆ. ಡಿ.25 ರ ಸೋಮವಾರದಂದು ಚಿಕ್ಕಮಗಳೂರು ನಗರದಲ್ಲಿ ದತ್ತಭಕ್ತರು ಹಾಗೂ ಸಾರ್ವಜನಿಕರಿಂದ ಬೃಹತ್ ಶೋಭಾಯಾತ್ರೆ ನಡೆಯಲಿದ್ದು 20 ಸಾವಿರಕ್ಕೂ ಅಧಿಕ ಶೋಭಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

    ಡಿ.26 ರಂದು ರಾಜ್ಯದ ಮೂಲೆ ಮೂಲೆಗಳಿಂದ ಬರುವ 25,000ಕ್ಕೂ ಅಧಿಕ ದತ್ತ ಭಕ್ತರು ದತ್ತಪೀಠಕ್ಕೆ ತೆರಳಿ ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ಕೊನೆ ಮೂರು ದಿನ ದತ್ತಜಯಂತಿಯ ಸೂಕ್ಷ್ಮ ದಿನವಾಗಿದ್ದು ಜಿಲ್ಲಾದ್ಯಂತ ಸಾವಿರಾರು ಪೊಲೀಸರ ಹದ್ದಿನ ಕಣ್ಣಿಡಲಿದ್ದಾರೆ. ಇಂದಿನಿಂದ 10 ದಿನಗಳ ಕಾಲ ಚಿಕ್ಕಮಗಳೂರು ಬೂದಿ ಮುಚ್ವಿದ ಕೆಂಡದಂತಿರಲಿದೆ. ಇದನ್ನೂ ಓದಿ: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ – ಪ್ರಿನ್ಸಿಪಾಲ್, ವಾರ್ಡನ್‌, ಡಿ-ಗ್ರೂಪ್‌ ನೌಕರರ ಅಮಾನತಿಗೆ ಸೂಚನೆ

  • ಡಿ.17-26 ರವರೆಗೆ ದತ್ತಜಯಂತಿ- ಆಗಮಿಸಲಿದ್ದಾರೆ 20 ಸಾವಿರ ಭಕ್ತರು

    ಡಿ.17-26 ರವರೆಗೆ ದತ್ತಜಯಂತಿ- ಆಗಮಿಸಲಿದ್ದಾರೆ 20 ಸಾವಿರ ಭಕ್ತರು

    ಚಿಕ್ಕಮಗಳೂರು: ತಾಲೂಕಿನ ಚಂದ್ರದ್ರೋನ ಪರ್ವತಗಳ ಸಾಲು ಮುಳ್ಳಯ್ಯನಗಿರಿ (Mullayanagiri) ತಪ್ಪಲಿನ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಡಿಸೆಂಬರ್ 26 ರಂದು ದತ್ತಜಯಂತಿ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ರಂಗನಾಥ ತಿಳಿಸಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ದತ್ತ ಜಯಂತಿಯನ್ನು (Datta Jayanti 2023) ನಾಡ ಉತ್ಸವನ್ನಾಗಿ ಆಚರಿಸಲಾಗುವುದು. ಡಿಸೆಂಬರ್ 17 ರಂದು ಸ್ಕಂದ ಪಂಚಮಿ ದಿನ ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತಮಾಲಾ ಧಾರಣೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗ್ರಹಣ ಮೋಕ್ಷದ ನಂತರ ಶುದ್ಧೀಕರಣ- ಬಹುತೇಕ ದೇಗುಲಗಳು ಓಪನ್

     

    ಜಿಲ್ಲಾದ್ಯಂತ ಡಿ. 24 ರಿಂದ 26ರವರೆಗೆ ದತ್ತಜಯಂತಿ ಉತ್ಸವ ನಡೆಯಲಿದ್ದು, ಈ ವರ್ಷ ದತ್ತಜಯಂತಿ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ತೀರ್ಮಾನಿಸಿದೆ. ದತ್ತಜಯಂತಿ ಉತ್ಸವ ಪ್ರಯುಕ್ತ ಡಿ.24 ರಂದು ದತ್ತಪೀಠದಲ್ಲಿ ಅನಸೂಯ ಜಯಂತಿ ನಡೆಯಲಿದೆ. ಜಯಂತಿ ಅಂಗವಾಗಿ ಅಂದು ಬೆಳಗ್ಗೆ 9.30ಕ್ಕೆ ಸಾವಿರಾರು ಮಹಿಳೆಯರು ನಗರದಲ್ಲಿ ಸಂಕೀರ್ತನಾ ಯಾತ್ರೆ ನಡೆಸಲಿದ್ದಾರೆ. ನಗರದ ಬೋಳರಾಮೇಶ್ವರ ದೇವಾಲಯದಿಂದ ಮೆರವಣಿಗೆ ಹೊರಟು ಮುಖ್ಯ ರಸ್ತೆಯಲ್ಲಿ ಸಾಗಿ ಪಾಲಿಟೆಕ್ನಿಕ್ ವೃತ್ತದಿಂದ ವಾಹನಗಳಲ್ಲಿ ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ ಎಂದು ಹೇಳಿದರು.

    ಮರುದಿನ ಡಿಸೆಂಬರ್ 25ರ ಬೆಳಗ್ಗೆ ದತ್ತಪೀಠದಲ್ಲಿ ದತ್ತ ಹೋಮ, ರುದ್ರ ಹೋಮ ನಡೆಯಲಿದೆ. ಇದೇ ದಿನ ಮಧ್ಯಾಹ್ನ ನಗರದಲ್ಲಿ ಭವ್ಯ ಶೋಭಾಯಾತ್ರೆ ನಡೆಯುವುದು. ನಗರದ ಕಾಮಧೇನು ಗಣಪತಿ ದೇವಾಲಯ ಆವರಣದಿಂದ ಆರಂಭವಾಗುವ ಯಾತ್ರೆ ಮುಖ್ಯರಸ್ತೆಯಲ್ಲಿ ಸಾಗಿ, ಸಂಜೆ ಆಜಾದ್ ವೃತ್ತದಲ್ಲಿ ಧಾರ್ಮಿಕ ಸಭೆ ನಡೆಯಲಿದೆ ಎಂದರು.

    ದತ್ತಪೀಠದಲ್ಲಿ ಡಿ.26 ರಂದು ದತ್ತಜಯಂತಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 20 ಸಾವಿರ ಭಕ್ತರು ಆಗಮಿಸಿ ದತ್ತಪಾದುಕೆಗಳ ದರ್ಶನ ಪಡೆಯಲಿದ್ದಾರೆ ಎಂದು ರಂಗನಾಥ ವಿವರಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾನು ಹಿಂದೂ ಹುಲಿನೇ, ಮುಲ್ಲಾ ಅಂತ ಕರೆಯೋಕ್ಕಾಗಲ್ಲ: ಸಿ.ಟಿ ರವಿ

    ನಾನು ಹಿಂದೂ ಹುಲಿನೇ, ಮುಲ್ಲಾ ಅಂತ ಕರೆಯೋಕ್ಕಾಗಲ್ಲ: ಸಿ.ಟಿ ರವಿ

    ಚಿಕ್ಕಮಗಳೂರು: ದತ್ತಜಯಂತಿ (Dattajayanthi) ಹಿನ್ನೆಲೆಯಲ್ಲಿ ಶಾಸಕ ಸಿ.ಟಿ.ರವಿ (CT Ravi) ಮನೆ ಮನೆಗೆ ತೆರಳಿ ಭಿಕ್ಷಾಟನೆ ಆರಂಭಿಸಿದ್ದಾರೆ.

    ಭಿಕ್ಷಾಟನೆ ಮೂಲಕ ಮಾಲಾಧಾರಿಗಳಿಂದ ಪಡಿ ಸಂಗ್ರಹ ಕಾರ್ಯ ನಡೆಯುತ್ತಿದೆ. ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವಿಳ್ಯೆದೆಲೆ ಅಡಿಕೆ ಹಾಗೂ ಬೆಲ್ಲವನ್ನು ಸ್ಥಳೀಯರು ನೀಡಿದ್ದಾರೆ. ನಾಳೆ ಇರುಮುಡಿ ರೂಪದಲ್ಲಿ ದತ್ತಾತ್ರೇಯ ಸ್ವಾಮಿಗೆ ಅರ್ಪಣೆ ಮಾಡಲಿದ್ದಾರೆ. ನಾಳೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಜಯಂತಿ ನಡೆಯಲಿದೆ. ಇಂದು ಮಧ್ಯಾಹ್ನ ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಖಾಕಿ ಪಡೆ ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿದೆ.

    ಇತ್ತ ಬಿಜೆಪಿ (BJP) ನಾಯಕರ ಹೆಸರಿಗೆ ಮುಸ್ಲಿಂ (Muslim) ಹೆಸರನ್ನು ಹಾಕಿ ಟ್ವೀಟ್ ಮಾಡ್ತಿರೋ ವಿಚಾರ ಸಂಬಂಧ ಕಾಂಗ್ರೆಸ್ ಟ್ವೀಟ್ ಗೆ ಸಿ.ಟಿ ರವಿ ವ್ಯಂಗ್ಯವಾಡಿದರು. ಬಿಜೆಪಿ ನಾಯಕರ ಸ್ವಭಾವ ಹಾಗೆ ಇದ್ದರೆ ಕಾಂಗ್ರೆಸ್‍ನವರು ಖಂಡಿತಾ ಕರೆಯಲಿ. ನನ್ನ ಸ್ವಭಾವ ಕುಂಕುಮ ಕಂಡರೆ ಆಗದಿದ್ರೆ, ಕೇಸರಿ ನೋಡಿದ್ರೆ ಆಗದಿದ್ರೆ, ಮುಲ್ಲಾಗಳ ಮೇಲೆ ಪ್ರೀತಿ ಜಾಸ್ತಿ ಇದ್ರೆ ಖಂಡಿತಾ ಕರೆಯಬಹುದು. ನನ್ನ ಮುಲ್ಲಾ ಅಂತ ಕರೆಯೋಕ್ಕಾಗಲ್ಲ, ಹಿಂದೂ ಹುಲಿ ಅಂತಾನೇ ಕರೆಯಬೇಕು ಎಂದರು.

    ನನ್ನ ಮುಲ್ಲಾ ಅಂತ ಕರೆದ್ರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ. ಸ್ವಭಾವಕ್ಕೆ ತಕ್ಕಂತೆ ಬಿರುದುಗಳು ನಮಗೆ ಬರುತ್ತದೆ. ಪರ್ಷಿಯನ್ ಭಾಷೆಯನ್ನ ಆಡಳಿತ ಭಾಷೆಯನ್ನಾಗಿ ಮಾಡಿದವನನ್ನ ಕನ್ನಡ ಪ್ರೇಮಿ ಅಂತ ಹೇಳಕ್ಕಾಗುತ್ತಾ.? ಹಾಗೆ ಹೇಳಿದ್ರೆ ಅದಕ್ಕಿಂತ ಅಪಪ್ರಚಾರ ಬೇರೆ ಏನಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ದತ್ತ ಜಯಂತಿ ಉತ್ಸವಕ್ಕೆ ಅಡ್ಡಿಪಡಿಸುವ ಹುನ್ನಾರ – ರಸ್ತೆಯುದ್ದಕ್ಕೂ ಮೊಳೆಗಳನ್ನು ಹಾಕಿದ ಕಿಡಿಗೇಡಿಗಳು

    ಮುಲ್ಲಾ ಅನ್ನೋ ಹೆಸರು ಯಾರಿಗೆ ಕನೆಕ್ಟ್ ಆಗುತ್ತೆ ಅಂದ್ರೆ, ಶಾದಿ ಭಾಗ್ಯ, ದೇ ಆರ್ ಆಲ್ ಮೈ ಬ್ರದರ್ಸ್ ಅನ್ನೋರಿಗೆ ಕನೆಕ್ಟ್ ಆಗುತ್ತೆ. ಬೆಂಕಿ ಹಾಕಿದ್ರು ಕೂಡ ಅಮಾಯಕರು ಅನ್ನೋರಿಗೆ ಕನೆಕ್ಟ್ ಆಗುತ್ತೆ. ಕೇಸರಿ, ಕುಂಕುಮವನ್ನ ದೂಡಿ ಟೋಪಿಯನ್ನ ಪ್ರೀತಿಯಿಂದ ಹಾಕಿಕೊಳ್ಳುವವರಿಗೆ ಕನೆಕ್ಟ್ ಆಗುತ್ತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೆಸರೇಳದೆ ಸಿ.ಟಿ. ರವಿ ಕುಟುಕಿದರು.

    Live Tv
    [brid partner=56869869 player=32851 video=960834 autoplay=true]

  • 47 ವರ್ಷದ ಹೋರಾಟದ ಬಳಿಕ ದತ್ತಪೀಠದಲ್ಲಿ ನೆರವೇರಿತು ಹಿಂದೂ ಅರ್ಚಕರಿಂದ ಪೂಜೆ

    47 ವರ್ಷದ ಹೋರಾಟದ ಬಳಿಕ ದತ್ತಪೀಠದಲ್ಲಿ ನೆರವೇರಿತು ಹಿಂದೂ ಅರ್ಚಕರಿಂದ ಪೂಜೆ

    ಚಿಕ್ಕಮಗಳೂರು: ಕರ್ನಾಟಕದ ಅಯೋಧ್ಯೆ ಎಂದೇ ಖ್ಯಾತಿಯಾಗಿರುವ ದತ್ತಪೀಠದಲ್ಲಿನ (Dattapita) ದತ್ತಜಯಂತಿಗೆ (Datta Jayanti) ಕಾಫಿನಾಡ ಜಿಲ್ಲಾಡಳಿತ ತಯಾರಾಗಿದೆ. ಅತ್ತ ಹಿಂದೂಗಳು 47 ವರ್ಷದ ಹೋರಾಟದ ಫಲವಾಗಿ ದತ್ತಪೀಠದಲ್ಲಿ ಹಿಂದೂ ಅರ್ಚಕರ ಪೂಜೆ ಕಂಡು ಪುಳಕಿತರಾಗಿದ್ದಾರೆ. ಸೋಮವಾರದಿಂದ 3 ದಿನಗಳ ಕಾಲ ನಡೆಯುವ ದತ್ತಜಯಂತಿಗೆ ಕಾಫಿನಾಡ (Chikkamagaluru) ಖಾಕಿಗಳು ಹೈ ಅಲರ್ಟ್ ಘೋಷಿಸಿದ್ದಾರೆ.

    ದತ್ತಪೀಠದಲ್ಲಿ ಹಿಂದೂ ಅರ್ಚಕರು ಪೂಜೆ ನಡೆಸಿದ್ದಾರೆ. ಮತ್ತೊಂದೆಡೆ ಕಾಫಿನಾಡು ಕೇಸರಿನಾಡಾಗಿ ಕಂಗೊಳಿಸಿದೆ. ಜಿಲ್ಲಾದ್ಯಂತ ಕಾಫಿನಾಡ ಖಾಕಿಗಳು ಹೈ ಅಲರ್ಟ್ ಆಗಿದ್ದಾರೆ. ಓರ್ವ ಎಸ್‌ಪಿ, 4 ಎಎಸ್‌ಪಿ, 17 ಡಿವೈಎಸ್‌ಪಿ, 39 ಇನ್ಸ್ಪೆಕ್ಟರ್, 156 ಸಬ್ ಇನ್ಸ್ಪೆಕ್ಟರ್, 285 ಎಎಸ್‌ಐ, 2050 ಕಾನ್ಸ್ಟೇಬಲ್, 200 ಲೇಡಿ ಪೋಲೀಸ್, 500 ಹೋಂ ಗಾರ್ಡ್, 15 ಕೆಎಸ್‌ಆರ್‌ಪಿ, 25 ಡಿಆರ್, ಹೀಗೆ ಒಟ್ಟು 4,500 ಪೊಲೀಸರು ಜಿಲ್ಲೆಯಾದ್ಯಂತ ರೂಟ್ ಮಾರ್ಚ್ ನಡೆಸಿದ್ದಾರೆ. 150ಕ್ಕೂ ಹೆಚ್ಚು ಸಿಸಿಟಿವಿ ಜೊತೆ 25 ಚೆಕ್ ಪೋಸ್ಟ್ಗಳನ್ನು ಭದ್ರತೆಗಾಗಿ ಇರಿಸಲಾಗಿದೆ.

    ಕಳೆದ 47 ವರ್ಷಗಳಿಂದ ದತ್ತಪೀಠದ ಉಮೇದುವಾರಿಕೆ ಹಾಗೂ ಹಿಂದೂ ಅರ್ಚಕರಿಗಾಗಿ ಹೋರಾಡುತ್ತಿದ್ದ ಹಿಂದೂ ಸಂಘಟನೆಗಳಿಗೆ ಈ ಬಾರಿ ಹಿಂದೂ ಅರ್ಚಕರಿಂದ ಪೂಜೆ ನೋಡುವ ಭಾಗ್ಯ ಲಭಿಸಿದೆ. ಇಂದಿನಿಂದ 3 ದಿನ ಸರ್ಕಾರ ನೇಮಿಸಿರುವ ತಾತ್ಕಾಲಿಕ ಅರ್ಚಕರಿಂದ ದತ್ತಾತ್ರೇಯ ಸ್ವಾಮಿಗೆ ಪೂಜಾ-ಕೈಂಕರ್ಯಗಳು ನಡೆಯಲಿವೆ. ಇಂದು ದತ್ತಪೀಠಕ್ಕೆ ಭೇಟಿ ನೀಡಿದ್ದ ಅರ್ಚಕರಾದ ಶ್ರೀಧರ್ ಹಾಗೂ ಸಂದೀಪ್ ದತ್ತಾತ್ರೇಯ ಸ್ವಾಮಿಗೆ ಪೂಜೆಗೈದು ಬಂದಿದ್ದಾರೆ. ಇದನ್ನೂ ಓದಿ: Himachal Pradesh Exit Poll Result: ಬಿಜೆಪಿ ಕಾಂಗ್ರೆಸ್‌ ಮಧ್ಯೆ ನೆಕ್‌ ಟು ನೆಕ್‌ ಫೈಟ್‌

    ಈ ನಡುವೆ ಮಾತನಾಡಿರುವ ಶಾಸಕ ಸಿಟಿ ರವಿ, ನಮ್ಮ ಮೊದಲ ಹಂತದ ಹೋರಾಟದಲ್ಲಿ ಜಯ ಕಂಡಿದ್ದೇವೆ. ಇನ್ಮುಂದೆ ದತ್ತಪೀಠವೇ ಬೇರೆ, ದರ್ಗಾವೇ ಬೇರೆ ಎಂಬ 2ನೇ ಹಂತದ ಹೋರಾಟ ಆರಂಭವಾಗಲಿದೆ ಎಂದಿದ್ದಾರೆ.

    ಮಂಗಳೂರು, ಉಡುಪಿ, ಶಿವಮೊಗ್ಗ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಹೆಚ್ಚುವರಿ ಪೊಲೀಸರು ಬಂದೋಬಸ್ತ್ಗೆ ಬೆನ್ನೆಲುಬಾಗಿದ್ದಾರೆ. ನಗರ ಸೇರಿದಂತೆ ಜಿಲ್ಲಾದ್ಯಂತ ಯಾವುದೇ ಅಹಿತಕರ ಘಟನೆ ನಡೆಯದಂತೆ 25 ಚೆಕ್ ಪೋಸ್ಟ್ಗಳನ್ನ ತೆರೆಯಲಾಗಿದೆ. ಹಲವರಿಂದ ಬಾಂಡ್ ಬರೆಸಿಕೊಂಡಿದ್ದಾರೆ. ಸಮಾಜದ ಶಾಂತಿ ಕದಡಿ, ಸಾರ್ವಜನಿಕರ ನೆಮ್ಮದಿ ಹಾಳು ಮಾಡಿದರೆ ನಿರ್ಧಾಕ್ಷಣ್ಯವಾಗಿ ಕಠಿಣ ಕ್ರಮ ಕೈಗೊಳ್ಳೋದಾಗಿ ಡಿಸಿ ಹಾಗೂ ಎಸ್‌ಪಿ ಖಡಕ್ಕಾಗಿ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ರದ್ದಾಗುವ ಸುಳಿವು – ಸಿಎಂ ನಿರ್ಧರಿಸುತ್ತಾರೆ ಎಂದ ದೇವೇಂದ್ರ ಫಡ್ನವಿಸ್

    Live Tv
    [brid partner=56869869 player=32851 video=960834 autoplay=true]

  • ಚಿಕ್ಕಮಗಳೂರಲ್ಲಿ ಮನೆ-ಮನೆಗೆ ತೆರಳಿ ಭಿಕ್ಷಾಟನೆ ಮಾಡಿದ ಸಿ.ಟಿ.ರವಿ

    ಚಿಕ್ಕಮಗಳೂರಲ್ಲಿ ಮನೆ-ಮನೆಗೆ ತೆರಳಿ ಭಿಕ್ಷಾಟನೆ ಮಾಡಿದ ಸಿ.ಟಿ.ರವಿ

    – ಹಾಸನ ಜಿಲ್ಲಾಧಿಕಾರಿ ಸಕ್ರ್ಯೂಲರ್ ಹಿಂಪಡೆದು ಕ್ಷಮೆ ಕೇಳುವಂತೆ ಆಗ್ರಹ

    ಚಿಕ್ಕಮಗಳೂರು: ದತ್ತಮಾಲಾಧಾರಿಗಳನ್ನ ಕುಡುಕರಂತೆ ಬಿಂಬಿಸಿದ ಹಾಸನ ಜಿಲ್ಲಾಧಿಕಾರಿ ವಿರುದ್ಧ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಕಿಡಿಕಾರಿದ್ದು, ಕೂಡಲೇ ಹಾಸನ ಜಿಲ್ಲಾಧಿಕಾರಿ ಸಕ್ರ್ಯೂಲರ್ ಹಿಂಪಡೆದು ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ. ದತ್ತಜಯಂತಿ ಅಂಗವಾಗಿ ಮಾಲಾಧಾರಿಯಾಗಿರುವ ಸಿ.ಟಿ.ರವಿ ಅವರು ಇಂದು ನಗರದ ನಾರಾಯಣಪುರದಲ್ಲಿ ಮನೆ-ಮನೆಗೆ ತೆರಳಿ ಭಿಕ್ಷಾಟನೆ ಮಾಡಿದ್ದಾರೆ.

    ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಾಸನ ಡಿಸಿ ದತ್ತಮಾಲಾಧಾರಿಗಳ ಬಗ್ಗೆ ಬಳಸಿರುವ ಭಾಷೆ ಗೌರವ ತರುವಂತದ್ದಲ್ಲ. ಅದನ್ನ ನಾನು ಖಂಡಿಸುತ್ತೇನೆ. ಕೂಡಲೇ ಅವರು ತಮ್ಮ ಸಕ್ರ್ಯೂಲರ್ ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ. ತಮ್ಮ ಆದೇಶದಲ್ಲಿ ಅವರು ದತ್ತಮಾಲಾಧಾರಿಗಳಿಗೆ ಅವಹೇಳನ, ಅಪಮಾಣ ಮಾಡುವ ರೀತಿಯಲ್ಲಿ ಚಿತ್ರಿಸಿದ್ದಾರೆ. ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

    ಸನಾತನ ಧರ್ಮದ ಪರಂಪರೆಯಲ್ಲಿ ದತ್ತಾತ್ರೇಯ ಪರಂಪರೆಯನ್ನ ಅತ್ಯಂತ ಮೂಲ ಹಾಗೂ ಶ್ರೇಷ್ಠವಾದದ್ದು. ಬ್ರಹ್ಮ-ವಿಷ್ಣು-ಮಹೇಶ್ವರರ ಅವಿರ್ಭಾವವಾಗಿರುವಂತಹಾ ರೂಪವೇ ದತ್ತಾತ್ರೇಯರು. ಅದನ್ನ ಅವಧೂತ ಪರಂಪರೆ ಅಂತ ಕೂಡ ಸನಾತನ ಪರಂಪರೆ ಗುರುತಿಸುತ್ತದೆ. ಅವಧೂತ ಪರಂಪರೆ ಭಿಕ್ಷಾಟನೆಯಿಂದ ಜೀವನ ಮಾಡುತ್ತ ಮಹಾತಪಸ್ವಿಗಳಾಗಿ, ಜ್ಞಾನಿಗಳಾಗಿ ಇಡೀ ಸಮಾಜಕ್ಕೆ ಮಾರ್ಗದರ್ಶನ ಮಾಡುವ ವೈರಾಗ್ಯ ಪರಂಪರೆಯಾಗಿದೆ ಎಂದಿದ್ದಾರೆ.

    ದತ್ತಾತ್ರೇಯ ಕ್ಷೇತ್ರ ತಾಲೂಕಿನ ಪುರಾಣ ಪ್ರಸಿದ್ಧವಾಗಿರುವ ಚಂದ್ರದ್ರೋಣ ಪರ್ವತಗಳ ತಪ್ಪಲಿನಲ್ಲಿದೆ. ಪ್ರತಿವರ್ಷದಿಂದ ಈ ವರ್ಷವು ದತ್ತಮಾಲಾದಾರಣೆ ಮಾಡಿ ದತ್ತಾತ್ತೇಯ ಜಯಂತಿ ಮುನ್ನ ದಿನ ಐದು ಮನೆಗಳಲ್ಲಿ ಭಿಕ್ಷಾಟನೆ ಮಾಡಿ ಇರುಮುಡಿ ಕಟ್ಟಿ ನಾಳೆ ಇರುಮುಡಿ ಹೊತ್ತು ದತ್ತಾತ್ರೇಯ ಕ್ಷೇತ್ರಕ್ಕೆ ತೆರಳಿ ದತ್ತಪಾದುಕೆ ದರ್ಶನಪಡೆದು, ಪೂಜಾ-ಕೈಂಕರ್ಯದಲ್ಲಿ ಪಾಲ್ಗೊಂಡು ವಾಪಸ್ ಬಂದು ಮಾಲೆ ವಿಸರ್ಜನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

  • ಡಿಸೆಂಬರ್ 25ರಿಂದ 30ರವರೆಗೆ ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿಷೇಧ

    ಡಿಸೆಂಬರ್ 25ರಿಂದ 30ರವರೆಗೆ ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿಷೇಧ

    ಚಿಕ್ಕಮಗಳೂರು: ಡಿಸೆಂಬರ್ ಕೊನೆಯ ವಾರದಲ್ಲಿ ಚಿಕ್ಕಮಗಳೂರಿಗೆ ಹೋಗಿ ವಾರ ಅಲ್ಲೇ ಇದ್ದು ಹೊಸ ವರ್ಷಕ್ಕೆ ಸ್ವಾಗತ ಕೋರಿ ಜನವರಿ ಒಂದಕ್ಕೋ, ಎರಡಕ್ಕೋ ವಾಪಸ್ ಬರೋಣ ಅನ್ನೋ ಪ್ಲಾನ್ ಏನಾದ್ರು ಇದ್ರೆ ನಿಮ್ಮ ಪ್ಲಾನನ್ನು ಡಿಸೆಂಬರ್ 30ಕ್ಕೆ ಬರುವಂತೆ ಬದಲಿಸಿಕೊಳ್ಳಿ. ಯಾಕೆಂದರೆ ಇದೇ ತಿಂಗಳ 25ರಿಂದ 30ರವರೆಗೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗದ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಿ ಜಿಲ್ಲಾಧಿಕಾರಿ ಬಗಾಧಿ ಗೌತಮ್ ಆದೇಶ ಹೊರಡಿಸಿದ್ದಾರೆ.

    ಇದೇ ತಿಂಗಳ 19ನೇ ತಾರೀಖಿನಿಂದ ದತ್ತಜಯಂತಿ ಆರಂಭವಾಗಿದ್ದು, 29ನೇ ತಾರೀಖಿನಿವರೆಗೂ ಇರಲಿದೆ. ಈಗಾಗಲೇ ದತ್ತಭಕ್ತರು ಮಾಲೆ ಧರಿಸಿ ವೃತ್ತದಲ್ಲಿದ್ದಾರೆ. ವೃತದಲ್ಲಿರುವ ಭಕ್ತರು ಡಿಸೆಂಬರ್ 27 ರಂದು ಅನಸೂಯ ಜಯಂತಿ, 28ರಂದು ನಗರದಲ್ಲಿ ಸಾಂಕೇತಿಕ ಶೋಭಾಯಾತ್ರೆ ಹಾಗೂ 29ರಂದು ದತ್ತಪೀಠದಲ್ಲಿ ಪೂಜೆ ನಡೆಸಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ.

     

    ಈ ಮೂರು ದಿನಗಳ ಕಾಲ ಕೂಡ ದತ್ತಪೀಠದಲ್ಲಿ ಪೂಜೆ ನಡೆಯಲಿದೆ. ಜೊತೆಗೆ, ರಾಜ್ಯಾದ್ಯಂತ ಮಾಲೆ ಧರಿಸಿರುವ ಭಕ್ತರು ಕೂಡ ಅಂದು ದತ್ತಪೀಠಕ್ಕೆ ಬಂದು ಪೂಜೆ ಸಲ್ಲಿಸಿ ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದು ಹಾಗೂ ಪ್ರವಾಸಿಗರು ಸೇರಿದಂತೆ ದತ್ತಭಕ್ತರಿಗೂ ಕೂಡ ಯಾವುದೇ ತೊಂದರೆ ಆಗಬಾರದೆಂದು ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಹೊನ್ನಮ್ಮನ ಹಳ್ಳ ಹಾಗೂ ಮಾಣಿಕ್ಯಧಾರ ಪ್ರವಾಸಿ ತಾಣಗಳ ಭೇಟಿಗೆ ಸಂಪೂರ್ಣ ನಿಷೇಧ ಹೇರಿದೆ.

    ಡಿಸೆಂಬರ್ 25 ಸಂಜೆ ಆರು ಗಂಟೆಯಿಂದ ಡಿಸೆಂಬರ್ 30ರ ಬೆಳಗ್ಗೆ ಆರು ಗಂಟೆಯವರೆಗೆ ಪ್ರವಾಸಿಗರಿಗೆ ಮುಳ್ಳಯ್ಯನಗಿರಿ ಭಾಗದ ಟೂರಿಸ್ಟ್ ಪ್ಲೇಸ್‍ಗಳಿಗೆ ನಿಷೇಧ ಹೇರಲಾಗಿದೆ.

  • ಶಾಂತಿಯುತವಾಗಿ ಸಂಪನ್ನಗೊಳ್ತು ಕಾಫಿನಾಡ ದತ್ತ ಜಯಂತಿ

    ಶಾಂತಿಯುತವಾಗಿ ಸಂಪನ್ನಗೊಳ್ತು ಕಾಫಿನಾಡ ದತ್ತ ಜಯಂತಿ

    ಚಿಕ್ಕಮಗಳೂರು: ಕಳೆದ ಮೂರು ದಿನಗಳಿಂದ ಚಿಕ್ಕಮಗಳೂರಿನ ವಿವಾದಿತ ಹಾಗೂ ಧಾರ್ಮಿಕ ಕೇಂದ್ರ ಇನಾಂ ದತ್ತಾತ್ರೇಯ ಬಾಬಾಬುಡನ್ ದರ್ಗಾದಲ್ಲಿ ನಡೆಯುತ್ತಿದ್ದ ದತ್ತ ಜಯಂತಿ ಕಾರ್ಯಕ್ರಮ ಶಾಂತಿಯುತವಾಗಿ ಸಂಪನ್ನಗೊಂಡಿದೆ. ಡಿಸೆಂಬರ್ 1ರಂದು ಮಾಲೆ ಧರಿಸಿ, 12 ದಿನಗಳಿಂದ ವೃತಾಚರಣೆಯಲ್ಲಿದ್ದ ದತ್ತ ಭಕ್ತರು ಇಂದು ಇರುಮುಡಿಯನ್ನ ದತ್ತಾತ್ರೇಯನಿಗೆ ಒಪ್ಪಿಸಿ ಪುನೀತರಾದರು.

    ಮಾಗಿಯ ಭಾರೀ ಚಳಿಯಲ್ಲೂ ಬೆಳಗ್ಗಿನಿಂದಲೇ ಸಾವಿರಾರು ಭಕ್ತರು ಹೊನ್ನಮ್ಮನ ಹಳ್ಳದಲ್ಲಿ ಮಿಂದು ದತ್ತ ಪಾದುಕೆ ದರ್ಶನ ಮಾಡಿದ್ದಾರೆ. ಐದು ಸಾವಿರಕ್ಕೂ ಅಧಿಕ ಪೊಲೀಸರ ಸರ್ಪಗಾವಲಿನಲ್ಲಿ ಕಾರ್ಯಕ್ರಮ ಯಾವುದೇ ಸಮಸ್ಯೆಯಿಲ್ಲದೆ ಮುಕ್ತಾಯ ಕಂಡಿದ್ದು, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಕಾಫಿನಾಡಿಗರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ, ದತ್ತಪೀಠ ಹಿಂದೂಗಳ ಪೀಠವೆಂಬ ಆಕ್ರೋಶದ ಘೋಷಣೆ ಮಾತ್ರ ಹಾಗೇ ಇದೆ.

    ಚಿಕ್ಕಮಗಳೂರಿನ ದತ್ತಪೀಠವನ್ನು ದತ್ತಭಕ್ತರು ಕರ್ನಾಟಕದ ಅಯೋಧ್ಯೆ ಎಂದೇ ಕರೆಯುತ್ತಾರೆ. ಪಶ್ಚಿಮ ಘಟ್ಟಗಳ ಸಾಲಿನ ಚಂದ್ರದ್ರೋಣ ಪರ್ವತಗಳ ಸಾಲಿನ ಮುಗಿಲೆತ್ತರದ ಬೆಟ್ಟಗುಡ್ಡಗಳ ಮಧ್ಯೆ ಸುಂದರ ವಾತಾವರಣದಲ್ಲಿರೋ ದತ್ತಪೀಠ ಉಮೇದುವಾರಿಕೆಗಾಗಿ ಮೂರ್ನಾಲ್ಕು ದಶಕಗಳ ವಿವಾದ ಹಾಗೇ ಇದೆ. ಇಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಳೆದೆರಡು ದಶಕಗಳಿಂದ ದತ್ತಜಯಂತಿಯನ್ನು ಆಚರಿಸಿಕೊಂಡು ಬರುತ್ತಿದ್ದು, ದತ್ತಪೀಠ ನಮಗೆ ಸೇರಿದ್ದು ಅಂತಿದ್ದಾರೆ. ಇಂದು ಕೂಡ ದತ್ತಭಕ್ತರು, ಇದು ಹಿಂದುಗಳ ಪೀಠ. ಸರ್ಕಾರ ದಾಖಲೆಗಳನ್ನ ಪರಿಶೀಲಿಸಿ ಪೀಠವನ್ನ ಹಿಂದೂಗಳಿಗೆ ಒಪ್ಪಿಸಿ, ತ್ರಿಕಾಲ ಪೂಜೆಗೆ ಅವಕಾಶ ನೀಡಿ ಹಿಂದೂ ಅರ್ಚಕರನ್ನ ನೇಮಕ ಮಾಡಬೇಕೆಂದು ಆಗ್ರಹಿಸಿದ್ದಾರೆ.

    ದತ್ತಜಯಂತಿಯ ಅಂಗವಾಗಿ ಕಾಫಿನಾಡು ಕಳೆದ ಮೂರು ದಿನಗಳಿಂದ ಒಂದೆಡೆ ಕೇಸರಿ, ಮತ್ತೊಂದೆಡೆ ಖಾಕಿಗಳ ನಾಡಾಗಿತ್ತು. ಎಲ್ಲಿ ನೋಡಿದ್ರು ಕೇಸರಿ-ಖಾಕಿ ಬಣ್ಣವೇ ಗೋಚರವಾಗ್ತಿತ್ತು. ಎರಡು ವರ್ಷಗಳ ಹಿಂದೆ ಇದೇ ದಿನ ದತ್ತಪೀಠದಲ್ಲಿದ್ದ ಗೋರಿಗಳಿಗೆ ಹಾನಿಯಾಗಿದ್ದರಿಂದ ಈ ವರ್ಷ ಬಂದೋಬಸ್ತ್‍ನ್ನು ಮತ್ತಷ್ಟು ಹೆಚ್ಚಿಸಲಾಗಿತ್ತು. ಹಾಸನ, ಮೈಸೂರು, ಮಡಿಕೇರಿ, ಚಾಮರಾಜನಗರ, ಉಡುಪಿ, ಮಂಡ್ಯ, ಮಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಿಂದ ಬಂದಿದ್ದ ಐದು ಸಾವಿರಕ್ಕೂ ಅಧಿಕ ಪೊಲೀಸರು ಕಾಫಿನಾಡಿನ ಮೇಲೆ ಹದ್ದಿನ ಕಣ್ಣಿಟ್ಟಿದ್ದರು. ಪೊಲೀಸರ ಜೊತೆ ನಗರ ಹಾಗೂ ದತ್ತಪೀಠದಲ್ಲಿ 600 ಕ್ಕೂ ಅಧಿಕ ಕ್ಯಾಮೆರಾಗಳನ್ನು ಹಾಕಲಾಗಿತ್ತು.

    ದತ್ತಪೀಠದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಚಿವ ಸಿ.ಟಿ.ರವಿ ಸೇರಿದಂತೆ ವಿವಿಧ ಮಾಠಾಧೀಶರು ಭಾಗವಹಿಸಿ, ದತ್ತಪಾದುಕೆ ದರ್ಶನ ಮಾಡಿದರು. ದತ್ತಪೀಠ ಹಾಗೂ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಪೊಲೀಸರ ಸರ್ಪಗಾವಲಿನಲ್ಲಿ ರಾಜ್ಯದ ಮೂಲೆ-ಮೂಲೆಗಳಿಂದ ಬಂದಿದ್ದ 25 ಸಾವಿರಕ್ಕೂ ಅಧಿಕ ಭಕ್ತರು ದತ್ತಗುಹೆ ಪ್ರವೇಶಿಸಿ ದತ್ತಾತ್ರೇಯ ಸ್ವಾಮಿಯ ಆಶೀರ್ವಾದ ಪಡೆದರು.

    ಐದು ಸಾವಿರಕ್ಕೂ ಅಧಿಕ ಪೊಲೀಸರ ನಿರಂತರ ಶ್ರಮದಿಂದ ಕೂಲ್ ಸಿಟಿಯ ಹಾಟ್ ಕಾರ್ಯಕ್ರಮ ಮುಕ್ತಾಯಗೊಂಡಿದೆ. ಬಂದೋಬಸ್ತ್‍ಗಾಗಿ ಪೊಲೀಸರು ಮಾಲಾಧಾರಿಗಳಾಗಿ ದತ್ತಭಕ್ತರ ಮಧ್ಯೆ ಇದ್ದದ್ದು ವಿಶೇಷವಾಗಿತ್ತು. ಜೊತೆಗೆ ರಾಜ್ಯದ ಉತ್ತರ ಕರ್ನಾಟಕದಿಂದ ಪೊಲೀಸರು ಕಾಫಿನಾಡಿನ ಸೌಂದರ್ಯಕ್ಕೆ ಮಾರು ಹೋಗೊದರ ಜೊತೆ ಈ ವರ್ಷದ ಮೈ ಕೊರೆವ ಭಾರೀ ಚಳಿಯಲ್ಲಿ ಮೂರು ದಿನಗಳಿಂದ ನಡುಗಿರೋದಂತು ಸತ್ಯ.

  • ದತ್ತಜಯಂತಿಗೆ ಕಾಫಿನಾಡಲ್ಲಿ ಖಾಕಿಗಳ ಸರ್ಪಗಾವಲು

    ದತ್ತಜಯಂತಿಗೆ ಕಾಫಿನಾಡಲ್ಲಿ ಖಾಕಿಗಳ ಸರ್ಪಗಾವಲು

    – 3 ದಿನಗಳ ಕಾಲ ಪ್ರವಾಸಿಗರ ಆಗಮನಕ್ಕೆ ನಿಷೇಧ

    ಚಿಕ್ಕಮಗಳೂರು: ದತ್ತಜಯಂತಿ ಆಚರಣೆ ಹಿನ್ನೆಲೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾದ್ಯಂತ 35 ಚೆಕ್ ಪೋಸ್ಟ್, 48 ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು, 800ಕ್ಕೂ ಅಧಿಕ ಕ್ಯಾಮೆರಾ ಹಾಗೂ 5 ಸಾವಿರಕ್ಕಿಂತಲೂ ಅಧಿಕ ಪೊಲೀಸರು ಕಾಫಿನಾಡಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ.

    ವಿಶ್ವಹಿಂದೂ ಪರಿಷದ್ ಹಾಗೂ ಬಜರಂಗದಳ ನೇತೃತ್ವದಲ್ಲಿ ಡಿಸೆಂಬರ್ 10 ರಿಂದ 12ರವರೆಗೆ ಮೂರು ದಿನಗಳ ಕಾಲ ನಡೆಯುವ ದತ್ತಜಯಂತಿಗೆ ಜಿಲ್ಲಾಡಳಿತ ಜಿಲ್ಲಾದ್ಯಂತ ಸರ್ಪಗಾವಲನ್ನು ಹಾಕಿದೆ. ಡಿಸೆಂಬರ್ 10 ರಿಂದ 12ರವರೆಗೆ ಮೂರು ದಿನಗಳ ಕಾಲ ಜಿಲ್ಲಾದ್ಯಂತ ಮದ್ಯ ಮಾರಾಟವನ್ನ ನಿಷೇಧಿಸಿಸಲಾಗಿದೆ.

    ನಿಷೇಧ: ಡಿ.12 ರಂದು ಚಿಕ್ಕಮಗಳೂರಿನ ಕೆ.ಎಂ.ರಸ್ತೆ, ಐ.ಜಿ. ರಸ್ತೆ, ಬಸವನಹಳ್ಳಿ ಮುಖ್ಯರಸ್ತೆ ಸೇರಿದಂತೆ ಆಲ್ದೂರು ಪಟ್ಟಣ, ಹಾಂದಿಯಿಂದ ವಸ್ತಾರೆವರೆಗೆ ಅಂಗಡಿ-ಮುಂಗಟ್ಟುಗಳನ್ನ ಮುಚ್ಚುವಂತೆ ಆದೇಶಿಸಲಾಗಿದೆ. ಡಿ. 10 ರಿಂದ 12ರವರೆಗೆ ಮುಳ್ಳಯ್ಯನಗಿರಿ, ಸೀತಾಳಯ್ಯನಿಗಿರಿ, ದತ್ತಪೀಠ, ಗಾಳಿಕೆರೆ, ಮಾಣಿಕ್ಯಾಧಾರಕ್ಕೆ ಪ್ರವಾಸಿಗರನ್ನು ಸಂಪೂರ್ಣ ನಿಷೇಧಿಸಿದ್ದಾರೆ.

    ಡಿ.10 ರಂದು ಅನಸೂಯ ಜಯಂತಿ. ನಗರದಲ್ಲಿ ಸಾವಿರಾರು ಮಹಿಳೆಯರು ಮೆರವಣಿಗೆ ನಡೆಸಿ ದತ್ತಪೀಠದಲ್ಲಿ ಪೂಜೆ-ಹೋಮ-ಹವನ ನಡೆಸಲಿದ್ದಾರೆ. ಡಿ.11 ರಂದು ನಗರದಲ್ಲಿ 10 ಸಾವಿರಕ್ಕೂ ಅಧಿಕ ದತ್ತಭಕ್ತರು ಬೃಹತ್ ಶೋಭಾಯಾತ್ರೆ ನಡೆಸಲಿದ್ದಾರೆ. ಡಿ.12 ರಂದು ರಾಜ್ಯಾದ್ಯಂತ ಬರಲಿರೋ 20 ಸಾವಿರಕ್ಕೂ ಅಧಿಕ ದತ್ತಭಕ್ತರು ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಪಡೆದು ದತ್ತಪೀಠದಲ್ಲಿ ಹೋಮ-ಹವನ ನಡೆಸಲಿದ್ದಾರೆ. ಮೂರು ದಿನಗಳ ಕಾಲ ಜಿಲ್ಲಾದ್ಯಂತ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕೂಡ ಹೈ-ಅಲರ್ಟ್ ಘೋಷಿಸಿದೆ. ಜಿಲ್ಲಾದ್ಯಂತ 5 ಸಾವಿರಕ್ಕೂ ಅಧಿಕ ಪೊಲೀಸರನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದ್ದು, ಇಂದು ನಗರದ ಪ್ರಮುಖ ಬೀದಿಗಳಲ್ಲಿ ಮೂರು ಸಾವಿರಕ್ಕೂ ಅಧಿಕ ಪೊಲೀಸರು ಪಥಸಂಚಲನ ನಡೆಸಿದರು.

  • ನಿಷೇಧಿತ ಪ್ರದೇಶದಲ್ಲಿ ದಾಂಧಲೆ – ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸರಿಂದ ಹೈ ಅಲರ್ಟ್

    ನಿಷೇಧಿತ ಪ್ರದೇಶದಲ್ಲಿ ದಾಂಧಲೆ – ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸರಿಂದ ಹೈ ಅಲರ್ಟ್

    ಚಿಕ್ಕಮಗಳೂರು: ಭದ್ರತೆಗಾಗಿ ನಾಲ್ಕು ಸಾವಿರ ಪೊಲೀಸರು ನಿಯೋಜನೆಗೊಂಡಿದ್ದರೂ ದತ್ತಜಯಂತಿಯನ್ನ ಶಾಂತಿಯುತವಾಗಿ ನಿಭಾಯಿಸುವಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಜಿಲ್ಲಾಧಿಕಾರಿ ಶ್ರೀರಂಗಯ್ಯ, ಎಸ್ಪಿ ಅಣ್ಣಾಮಲೈ ಹಾಗೂ ಪಶ್ವಿಮ ವಲಯದ ಐಜಿಪಿ ಹೇಮಂತ್ ನಿಂಬಾಳ್ಕರ್ ಅದೇ ಸ್ಥಳದಲ್ಲಿದ್ದರೂ ಕೂಡ ದತ್ತಪೀಠದಲ್ಲಿ ನಡೆಯಬಾರದೆಲ್ಲ ನಡೆದಿದೆ.

    ಕಳೆದ ಮೂರು ದಿನಗಳಿಂದ ಶಾಂತಿಯುತವಾಗಿದ್ದ ಚಿಕ್ಕಮಗಳೂರಿನ ದತ್ತಜಯಂತಿ ಕಾರ್ಯಕ್ರಮ ಭಾನುವಾರ ಮಧ್ಯಾಹ್ನ ಅಕ್ಷರಶಃ ಧರ್ಮಪ್ರತಿಪಾದನೆಯ ಕಾರ್ಯಕ್ರಮದಂತಾಯ್ತು. ಸಾವಿರಾರು ಮಾಲಾಧಾರಿಗಳು ಏಕಕಾಲದಲ್ಲಿ ದತ್ತಪೀಠದ ನಿಷೇಧಿತ ಪ್ರದೇಶಕ್ಕೆ ನುಗ್ಗಿ ಅಲ್ಲಿ ಕೇಸರಿ ಬಾವುಟಗಳನ್ನ ನೆಟ್ಟು ಅಲ್ಲಿಂದ ಗೋರಿಗಳನ್ನ ಕಾಲಲ್ಲಿ ತುಳಿದು, ಅವುಗಳ ಮೇಲೆ ಕಲ್ಲುಗಳನ್ನ ಎತ್ತಿಹಾಕಿದ್ದಾರೆ.

    ಒಂದು ಗೋರಿಯನ್ನು ಸಂಪೂರ್ಣ ಒಡೆದು ಹಾಕಿದ್ದಾರೆ. ಪೊಲೀಸರು ಎಷ್ಟೇ ಹರ ಸಾಹಸಪಟ್ಟರೂ ಒಬ್ಬರಾದ ಮೇಲೆ ಒಬ್ಬರಂತೆ ನಿಷೇಧಿತ ಸ್ಥಳಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಪೊಲೀಸರಿಗೂ ಬಯ್ಯುತ್ತಾ, ಮಾಧ್ಯಮದವರಿಗೂ ಶೋಕಿ ನನ್ಮಕ್ಳು ಎಂದು ಹೇಳಿ ಕ್ಯಾಮೆರಾ ಕಸಿದು ಕೆಲವರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಪೊಲೀಸರು ಲಘು ಲಾಠಿ ಪ್ರಹಾರವನ್ನೂ ನಡೆಸಿ ಗುಂಪನ್ನು ಚದುರಿಸಿದ್ದಾರೆ.

    ದತ್ತಪೀಠದಲ್ಲಿ ಮತ್ತೊಂದು ಕೋಮಿನ ಭಾವನೆಗೆ ದಕ್ಕೆ ತಂದಿದ್ರಿಂದ ಇದೀಗ ಚಿಕ್ಕಮಗಳೂರು ಬೂದಿಮುಚ್ಚಿದ ಕೆಂಡದಂತಾಗಿದೆ. ಯಾಕಂದ್ರೆ, ಬೈಕಿನಲ್ಲಿ ಬರುತ್ತಿದ್ದ ಇಬ್ಬರು ಯುವಕರ ಮೇಲೆ ಮತ್ತೊಂದು ಕೋಮಿನ ಯುವಕರು ಹಲ್ಲೆ ಮಾಡಿ ಬೈಕನ್ನು ಪುಡಿ ಮಾಡಿದ್ದಾರೆ. ಖಾಸಗಿ ಬಸ್ ಮೇಲೆ ಕಲ್ಲೂ ತೂರಾಟ ನಡೆಸಿದ್ದಾರೆ.

    ಕ್ರಮೇಣ ಚಿಕ್ಕಮಗಳೂರಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗ್ತಿದ್ದು, ನಗರದ ಉಪ್ಪಳ್ಳಿ, ಆಲೇನಹಳ್ಳಿ, ಹೌಸಿಂಗ್ ಬೋರ್ಡ್, ಐಜಿ ರೋಡ್, ಮಾರ್ಕೆಟ್‍ನಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ದತ್ತಪೀಠದಲ್ಲಿದ್ದ ಎಸ್ಪಿ ಅಣ್ಣಾಮಲೈ ವಿಷಯ ತಿಳಿದು ನಗರಕ್ಕೆ ಬಂದು ಮಾರ್ಕೆಟ್ ರಸ್ತೆ, ಉಪ್ಪಳ್ಳಿಯಲ್ಲಿ ಯಾರೂ ನಿಲ್ಲದಂತೆ ಎಚ್ಚರಿಸುತ್ತಿದ್ದಾರೆ. ದತ್ತಪೀಠದಿಂದ ಬರುತ್ತಿರುವ ವಾಹನಗಳ ಮೇಲೆ ಮತ್ತೊಂದು ಕೋಮಿನ ಯುವಕರು ಗಿಡ-ಗಂಟೆಗಳ ಮಧ್ಯೆ ನಿಂತು ಕಲ್ಲು ಹೊಡೆಯುತ್ತಿದ್ದಾರೆ. ಚಿಕ್ಕಮಗಳೂರು ಅಕ್ಷರಶಃ ಬೂದಿಮುಚ್ಚಿದ ಕೆಂಡದಂತಾಗಿದೆ. ದತ್ತಪೀಠದಿಂದ ಬರುತ್ತಿರುವ ದತ್ತಮಾಲಾಧಾರಿಗಳ ವಾಹನಗಳನ್ನು ಪೊಲೀಸರ ಸರ್ಪಗಾವಲಲ್ಲಿ ನಗರ ದಾಟಿಸಲಾಗುತ್ತಿದೆ.

    ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಮುಂಜಾಗೃತ ಕ್ರಮವಾಗಿ ಎಷ್ಟೇ ಕ್ರಮಕೈಗೊಂಡಿದ್ದರೂ ಚುನಾವಣೆ ವರ್ಷದ ದತ್ತಜಯಂತಿಯಲ್ಲಿ ನಡೆಯಬಾರದ್ದೆಲ್ಲಾ ನಡೆದಿದೆ. ಆದರೆ ಇಂತಹ ಸೂಕ್ಷ್ಮ ಪ್ರದೇಶದಲ್ಲೇ ಇದ್ದ ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಐಜಿಪಿ ಏನ್ ಮಾಡುತ್ತಿದ್ದರು ಅನ್ನೋದು ರಾಜ್ಯದ ಜನಕ್ಕೆ ಉತ್ತರ ಸಿಗದ ಪ್ರಶ್ನೆಯಾಗಿದೆ. ಈ ಘಟನೆಯ ಮೂಲಕ 11 ದಿನಗಳಿಂದ ನಡೆಯುತ್ತಿದ್ದ ದತ್ತಜಯಂತಿ ಕಾರ್ಯಕ್ರಮಕ್ಕೆ ತೆರೆ ಬಿದ್ದಿದೆ.