Tag: ದತ್ತಣ್ಣ

  • ಚುನಾವಣೆ ಜಂಜಡದಲ್ಲೂ ಜನಮನ ಗೆದ್ದ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ

    ಚುನಾವಣೆ ಜಂಜಡದಲ್ಲೂ ಜನಮನ ಗೆದ್ದ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ

    ಒಂದು ಕಡೆ ಚುನಾವಣೆ. ಮತ್ತೊಂದು ಕಡೆ ಐಪಿಎಲ್. ಇದರ ನಡುವೆ ಕಳೆದ ವಾರ ಬಿಡುಗಡೆಯಾದ ರಾಘವೇಂದ್ರ ಸ್ಟೋರ್ಸ್ (Raghavendra Stores) ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ.‌ಈ ಸಂತೋಷವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು. ‌ಸಂತೋಷ್ ಆನಂದ್ ರಾಮ್ (Santhosh Anand Ram)ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಜಗ್ಗೇಶ್ (Jaggesh) ನಾಯಕನಾಗಿ ನಟಿಸಿದ್ದಾರೆ.

    ‘ಚುನಾವಣೆ, ಐಪಿಎಲ್ ನಡುವೆ ಈ ಚಿತ್ರ ಬಿಡುಗಡೆ ಮಾಡುತ್ತಾರಾ ಎಂದು ಎಷ್ಟೋ ಜನ‌ ಕೇಳುತ್ತಿದ್ದರು. ಆದರೆ ನಿರ್ಮಾಪಕ ವಿಜಯ್ ಕಿರಗಂದೂರ್ ಅವರು ಕಂಟೆಂಟ್ ಚೆನ್ನಾಗಿದ್ದರೆ ಜನ ಖಂಡಿತವಾಗಿ ನೋಡುತ್ತಾರೆ ಎಂಬ ನಂಬಿಕೆಯಿಂದ ಈ ಚಿತ್ರವನ್ನು ಬಿಡುಗಡೆ ಮಾಡಿದರು.‌ ಅವರ ಮಾತು ನಿಜವಾಯಿತು. ಜನ ನಮ್ಮ ಚಿತ್ರಕ್ಕೆ ತೋರುತ್ತಿರುವ ಮೆಚ್ಚುಗೆಗೆ ಮನತುಂಬಿ ಬಂದಿದೆ ಹಾಗೂ ಒಂದೊಳ್ಳೆಯ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಾಗಿದೆ‌. ರಾಯರ ಹೆಸರಿನ ಈ ಚಿತ್ರಕ್ಕೆ ರಾಯರೆ ಯಶಸ್ಸು ನೀಡುತ್ತಿದ್ದಾರೆ ‘ಎಂದರು ನಾಯಕ ಜಗ್ಗೇಶ್. ಇದನ್ನೂ ಓದಿ:ಸಿದ್ದರಾಮಯ್ಯನವರು ಮತ್ತೆ ಸಿಎಂ ಆಗ್ಬೇಕು – ದುನಿಯಾ ವಿಜಯ್

    ನಾವು ಈ ಸಿನಿಮಾ ಬಿಡುಗಡೆಗೂ ಹತ್ತು ದಿನಗಳ ಮುಂಚೆ ಪ್ರಮೋಷನ್ ಶುರು ಮಾಡಿದ್ದು. ಆನಂತರ ಬಿಡುಗಡೆಯಾದ ಟ್ರೇಲರ್ ಹಾಗೂ ಹಾಡಿಗೆ ಒಳ್ಳೆಯ ರೆಸ್ಪಾನ್ಸ್ ಬಂತು. ನನ್ನ ಈ ಹಿಂದಿನ‌ ಸಿನಿಮಾಗಳ ಜಾನರ್ ಬೇರೆ. ಈ ಸಿನಿಮಾ ಜಾನರ್‌ ಬೇರೆ. ಲೇಟ್ ಮ್ಯಾರೇಜ್ ಹಾಗೂ ಆನಂತರ ಅವರಿಗೆ ಮಕ್ಕಳಾಗದ ಸಮಸ್ಯೆ ಬಗ್ಗೆಗಿನ ಕಥಾಹಂದರವನ್ನು ಈ ಚಿತ್ರ  ಹೊಂದಿದೆ.  ಚಿತ್ರವನ್ನು ಜನ ಮೆಚ್ಚಿಕೊಂಡಿದ್ದಾರೆ.  ಯಶಸ್ಸಿಗೆ ಕಾರಣರಾದ ನನ್ನ ತಂಡಕ್ಕೆ,‌ ನಿರ್ಮಾಣ ಮಾಡಿರುವ ಖ್ಯಾತ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ಅವರಿಗೆ ಹಾಗೂ ಜಗ್ಗೇಶ್ ಅವರ ಆದಿಯಾಗಿ ಚಿತ್ರದಲ್ಲಿ ‌ನಟಿಸಿರುವ ಎಲ್ಲಾ ಕಲಾವಿದರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಸಂತೋಷ್ ಆನಂದರಾಮ್.

    ಚಿತ್ರದಲ್ಲಿ ಅಭಿನಯಿಸಿರುವ ಶ್ವೇತ ಶ್ರೀವಾಸ್ತವ್, ದತ್ತಣ್ಣ, ಮಿತ್ರ, ರವಿಶಂಕರ್ ಗೌಡ, ಚಿತ್ಕಲಾ ಬಿರಾದಾರ್, ಕೆ.ಆರ್.ಜಿ ಸ್ಟುಡಿಯೋಸ್ ನ ಯೋಗಿ ಜಿ ರಾಜ್, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಛಾಯಾಗ್ರಹಕ ಶ್ರೀಶ ಕುದುವಳ್ಳಿ ಮುಂತಾದವರು ಈ ಸಂದರ್ಭದಲ್ಲಿ ಚಿತ್ರದ ಕುರಿತು ಮಾತನಾಡಿದರು.

  • ‘ಬೇರ’ ಮೂಲಕ ಹಿರಿತೆರೆಗೆ ಕಾಲಿಟ್ಟ ಕಿರುತೆರೆಯ ಫೇಮಸ್ ನಿರ್ದೇಶಕ ವಿನು ಬಳಂಜ

    ‘ಬೇರ’ ಮೂಲಕ ಹಿರಿತೆರೆಗೆ ಕಾಲಿಟ್ಟ ಕಿರುತೆರೆಯ ಫೇಮಸ್ ನಿರ್ದೇಶಕ ವಿನು ಬಳಂಜ

    ಕಿರುತೆರೆಯ ಸಾಕಷ್ಟು ಜನಪ್ರಿಯ ಧಾರಾವಾಹಿಗಳ ನಿರ್ದೇಶಕ ವಿನು ಬಳಂಜ (Vinu Balanja) ‘ಬೇರ’ (Bera) ಚಿತ್ರ ನಿರ್ದೇಶಿಸುವ  ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದ್ದಾರೆ. ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ದಿವಾಕರ ದಾಸ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ಚಿತ್ರತಂಡದ ಸದಸ್ಯರು “ಬೇರ” ಚಿತ್ರದ ಕುರಿತು ಮಾತನಾಡಿದರು.

    ಕಳೆದ ನಾಲ್ಕೈದು ವರ್ಷ ನಾನು ವೈಯಕ್ತಿಕ ಕಾರಣದಿಂದ ಕಿರುತೆರೆ ಹಾಗೂ ಹಿರಿತೆರೆಯಿಂದ ದೂರವಿದ್ದೆ. ಆನಂತರ ಒಂದು ಮ್ಯೂಸಿಯಂ ಗೆ ಹೋದೆ. ಅಲ್ಲೇ ಈ ಕಥೆ ಹುಟ್ಟಿದ್ದು. ಆನಂತರ ಮತ್ತೆ ನನ್ನನ್ನು ಸಿನಿಮಾ ಮಾಡಲು ಪ್ರೇರೇಪಿಸಿದ್ದು ನಿರ್ಮಾಪಕ ದಿವಾಕರ್. ತುಳುವಿನಲ್ಲಿ ‘ಬೇರ’ ಎಂದರೆ ಕನ್ನಡದಲ್ಲಿ ವ್ಯಾಪಾರ ಎಂದು ಅರ್ಥ. ಅಮಾಯಕರನ್ನು ಬಳಸಿಕೊಂಡು ಹೇಗೆ ನಾಯಕರಾಗುತ್ತಾರೆ ಹಾಗೂ ‘ಯಾವ ತಾಯಂದ್ರ ಮಕ್ಕಳೂ ಇನ್ನೊಬ್ರಿಂದಾಗಿ ಸಾಯ್ಬಾರ್ದು’ ಎಂಬುದೇ ಕಥಾಹಂದರ. ಈ ಚಿತ್ರದಲ್ಲಿ ನಾಯಕ, ನಾಯಕಿ ಅಂತ ಇಲ್ಲ. ಬರುವ ಎಲ್ಲಾ ಪಾತ್ರಗಳು ಮುಖ್ಯ ಪಾತ್ರಗಳಾಗಿರುತ್ತದೆ. ಸದ್ಯ ಟೀಸರ್ ಬಿಡುಗಡೆ ಮಾಡಿದ್ದೇವೆ. ಮೇ ಅಂತ್ಯಕ್ಕೆ ಚಿತ್ರವನ್ನು ತೆರೆಗೆ ತರುವ ಯೋಜನೆ ಇದೆ ಎಂದು ನಿರ್ದೇಶಕ ವಿನು ಬಳಂಜ ತಿಳಿಸಿದರು.

    ಕೇವಲ ಮೂರು ಜನ ಕೆಲಸಗಾರರಿಂದ ಶುರುವಾದ ಎಸ್ ಎಲ್ ವಿ ಸಂಸ್ಥೆಯಲ್ಲಿ ಇಂದು ನೂರೈವತ್ತು ಜನ ಕೆಲಸಗಾರರಿದ್ದಾರೆ. ಈಗ ಎಸ್ ಎಲ್ ವಿ ಕಲರ್ಸ್  ಲಾಂಛನದಲ್ಲಿ “ಬೇರ” ಎಂಬ ಮೊದಲ ಚಿತ್ರ ನಿರ್ಮಾಣ ಮಾಡಿದ್ದೇವೆ. ಈ ಚಿತ್ರಕ್ಕೆ ನಿಮ್ಮ ಹಾರೈಕೆ ಇರಲಿ ಎಂದರು ನಿರ್ಮಾಪಕ ದಿವಾಕರ ದಾಸ. ಇದನ್ನೂ ಓದಿ:ಬಿಗ್ ಆಫರ್ ನೀಡಿದ ಕಿರಣ್ ರಾಥೋಡ್ : ಫೋಟೋ, ವಿಡಿಯೋಗೆ ಇಂತಿಷ್ಟು ರೇಟು

    ವಿನು ಬಳಂಜ ಅವರ ನಿರ್ದೇಶನದಲ್ಲಿ ಕೆಲಸ ಮಾಡಿದ್ದ ಖುಷಿಯಿದೆ.  ನಮ್ಮ ಪಾತ್ರ ಕೂಡ ಚೆನ್ನಾಗಿದೆ ಎಂದರು ಚಿತ್ರದಲ್ಲಿ ನಟಿಸಿರುವ ದತ್ತಣ್ಣ (Duttanna), ಯಶ್ ಶೆಟ್ಟಿ (Yash Shetty), ಹರ್ಷಿಕಾ ಪೂಣಚ್ಛ (Harshika), ಅಶ್ವಿನ್ ಹಾಸನ್, ಚಿತ್ಕಲ ಬಿರಾದಾರ್, ಮಂಜುನಾಥ್ ಹೆಗಡೆ, ಗುರು ಹೆಗಡೆ, ರಾಕೇಶ್ ಮಯ್ಯ, ಧವಳ್ ದೀಪಕ್  ಮುಂತಾದವರು. ಛಾಯಾಗ್ರಹಕ ರಾಜಶೇಖರ್ ಹಾಗೂ ಕಾರ್ಯಕಾರಿ ನಿರ್ಮಾಪಕ ರಾಮದಾಸ ಶೆಟ್ಟಿ ಕೂಡ ‘ಬೇರ’ ಚಿತ್ರದ ಕುರಿತು ಮಾತನಾಡಿದರು.

  • ದತ್ತಣ್ಣ ಮದುವೆ ಆಗಲಿಲ್ಲ ಏಕೆ? ಗೆಳೆಯರು ಬಿಚ್ಚಿಟ್ಟ ರಹಸ್ಯ

    ದತ್ತಣ್ಣ ಮದುವೆ ಆಗಲಿಲ್ಲ ಏಕೆ? ಗೆಳೆಯರು ಬಿಚ್ಚಿಟ್ಟ ರಹಸ್ಯ

    ರಾಷ್ಟ್ರ ಪ್ರಶಸ್ತಿ ವಿಜೇತ ನಟ ದತ್ತಣ್ಣ (Duttanna) ಮದುವೆ (Marriage) ಆಗದೇ ಇರುವ ವಿಚಾರ ತುಂಬಾ ಜನಕ್ಕೆ ತಿಳಿದಿರಲಿಲ್ಲ. ಸಿನಿಮಾ ರಂಗದ ಆಪ್ತರ ಹೊರತಾಗಿ, ಅವರು ಕೂಡ ಈ ವಿಷಯವನ್ನು ಬಹಿರಂಗಪಡಿಸಿರಲಿಲ್ಲ. ಆದರೆ, ವೀಕೆಂಡ್ ವಿತ್ ರಮೇಶ್ (Weekend with Ramesh) ಕಾರ್ಯಕ್ರಮದಲ್ಲಿ ಈ ಕುರಿತು ಅವರ ಗೆಳೆಯರೇ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ದತ್ತಣ್ಣ ಮದುವೆ ಯಾಕೆ ಆಗಲಿಲ್ಲ ಎನ್ನುವ ಕುರಿತು ಹೇಳಿದ್ದಾರೆ.

    ಓದಿನಲ್ಲಿ ದತ್ತಣ್ಣ ಯಾವಾಗಲೂ ಮುಂದು. ಹಾಗಾಗಿ ಇಂಜಿನಿಯರಿಂಗ್ ಪದವಿ ಪೂರೈಸಿದರು. ಏರ್ ಫೋರ್ಸ್ ನಲ್ಲಿ ವಿಂಗ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದರು. ಚಿಕ್ಕ ವಯಸ್ಸಿನಿಂದಲೇ ನಟನಾ ಕ್ಷೇತ್ರದತ್ತ ಆಸಕ್ತಿಯಿದ್ದರೂ, ಸೇನೆಯಲ್ಲಿ ಕೆಲಸ ಮಾಡಬೇಕು ಎನ್ನುವ ಕಾರಣಕ್ಕಾಗಿ ಏರ್ ಫೋರ್ಸ್ ಸೇರಿಕೊಂಡರು. ಅಂಡಮಾನ್, ದೆಹಲಿ ಸೇರಿದಂತೆ ಅನೇಕ ಕಡೆ ಕೆಲಸ ಮಾಡಿದ್ದಾರೆ. ಬೆಂಗಳೂರಿನ ಎಚ್.ಎಎ‍ಲ್ ಗೆ ಬಂದ ಮೇಲೆ ನಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು. ಇದನ್ನೂ ಓದಿ: ಮತ್ತೆ ಒಂದಾಯಿತು ‘ಕರ್ಣನ್’ ಜೋಡಿ: ಧನುಷ್ ಚಿತ್ರಕ್ಕೆ ಮಾರಿ ಸೆಲ್ವರಾಜ್ ಡೈರೆಕ್ಟರ್

    ದತ್ತಣ್ಣ ಚಿತ್ರರಂಗಕ್ಕೆ ಬಂದಾಗ ಅವರಿಗೆ 45 ವರ್ಷ. ಆದರೂ, ಬಣ್ಣದ ಮೇಲಿನ ಗೀಳು ಕಡಿಮೆ ಆಗಿರಲಿಲ್ಲ. ಹಿಂದಿ ಚಿತ್ರರಂಗದ ಮೂಲಕ ಚಿತ್ರೋದ್ಯಮಕ್ಕೆ ಕಾಲಿಟ್ಟ ದತ್ತಣ್ಣ ರಾಷ್ಟ್ರ ಪ್ರಶಸ್ತಿ ಕೂಡ ಪಡೆದಿದ್ದಾರೆ. ಇಷ್ಟೊಂದು ಸಾಧನೆ ಮಾಡಿದರೂ ಕೂಡ ಅವರು ಮದುವೆ, ಸಂಸಾರ ಅಂತ ಹೋಗಲಿಲ್ಲ. ಅದಕ್ಕೆ ಕಾರಣ ಸಂಸಾರದ ಮೇಲಿನ ಜಿಗುಪ್ಸೆ ಎಂದೇ ಹೇಳಲಾಗುತ್ತಿದೆ. ಈ ಕುರಿತು ಗೆಳೆಯರು ಮುಕ್ತವಾಗಿ ಮಾತನಾಡಿದ್ದಾರೆ.

    ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಬಂದ ಗೆಳೆಯರು, ದತ್ತಣ್ಣ ಮದುವೆ ಆಗದೇ ಇರುವುದಕ್ಕೆ ಕಾರಣ ಸಂಸಾರ ಎನ್ನುವುದು ಗೋಳು ಎಂದು ಪದೇ ಪದೇ ದತ್ತಣ್ಣ ಮಾತನಾಡುತ್ತಿದ್ದರಂತೆ. ಮದುವೆಯಾದರೆ ಸ್ವತಂತ್ರವಾಗಿ ಇರುವುದಕ್ಕೆ ಆಗುವುದಿಲ್ಲ ಎನ್ನುವ ಕಾರಣಕ್ಕಾಗಿ ಮದುವೆ ಆಗಿಲ್ಲ’ ಎಂದಿದ್ದಾರೆ.

  • ನನ್ನ ಜೀವನದಲ್ಲಿ ಇದೊಂದು ಸಿನಿಮಾ ಕಪ್ಪು ಚುಕ್ಕೆ: ಹಿರಿಯ ನಟ ದತ್ತಣ್ಣ

    ನನ್ನ ಜೀವನದಲ್ಲಿ ಇದೊಂದು ಸಿನಿಮಾ ಕಪ್ಪು ಚುಕ್ಕೆ: ಹಿರಿಯ ನಟ ದತ್ತಣ್ಣ

    ಕಿರುತೆರೆಯ ಜನಪ್ರಿಯ Weekend With Ramesh ಶೋನಲ್ಲಿ ಹಿರಿಯ ನಟ ದತ್ತಣ್ಣ ಅತಿಥಿಯಾಗಿ ಆಗಮಿಸಿದ್ದಾರೆ. ಬಾಲ್ಯ, ಶಿಕ್ಷಣ, ಸೇನೆಯಲ್ಲಿ ಸೇವೆ, ರಂಗಭೂಮಿ, ಸಿನಿಮಾ ಜರ್ನಿ ಹೀಗೆ ಸಾಕಷ್ಟು ವಿಚಾರಗಳನ್ನ ನಿರೂಪಕ-ನಟ ರಮೇಶ್ ಅರವಿಂದ್ ಜೊತೆ ಹಂಚಿಕೊಂಡಿದ್ದಾರೆ. ನನ್ನ ಸಿನಿಮಾ ಕೆರಿಯರ್‌ನಲ್ಲಿ ಈ ಚಿತ್ರವೊಂದು ಕಪ್ಪು ಚುಕ್ಕೆ ಎಂದು ನಿರ್ದೇಶಕರೊಬ್ಬರನ್ನು ಬಾಯಿ ಬಂದಂತೆ ಬೈದಿದರಂತೆ. ಈ ಬಗ್ಗೆ ಕಾರ್ಯಕ್ರಮದಲ್ಲಿ ದತ್ತಣ್ಣ  ಮುಕ್ತವಾಗಿ ಮಾತನಾಡಿದ್ದಾರೆ. ಇದನ್ನೂ ಓದಿ:ಪತ್ನಿ, ಪುತ್ರನ ಜೊತೆ ವಿನೋದ್ ರಾಜ್? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನಿರ್ದೇಶಕ

    ಹಿರಿಯ ನಟ ದತ್ತಣ್ಣ ಅವರು ಕನ್ನಡ, ಹಿಂದಿ, ತೆಲುಗು, ಮತ್ತು ಮಲಯಾಳಂ ಸೇರಿದಂತೆ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬಗೆ ಬಗೆಯ ಪಾತ್ರಗಳ ಮೂಲಕ ರಂಜಿಸಿದ್ದಾರೆ. ಇದೀಗ ವೀಕೆಂಡ್ ಟೆಂಟ್‌ನಲ್ಲಿ ‘ನೀರ್‌ದೋಸೆ’ (Neerdose Film) ಚಿತ್ರದ ಬಗ್ಗೆ ದತ್ತಣ್ಣ ಮೌನ ಮುರಿದಿದ್ದಾರೆ. ನೀರ್‌ದೋಸೆಯಲ್ಲಿ ದತ್ತಾತ್ರೆಯ ಹೆಸರಿನ ಪೋಲಿ ತಾತನ ಪಾತ್ರದಲ್ಲಿ ನಟಿಸಿದ್ದಾರೆ. ನಿರ್ದೇಶಕ ವಿಜಯ ಪ್ರಸಾದ್, ಆ ಕತೆಯನ್ನು ಹೇಳಿದಾಗ ಕತೆ ಚೆನ್ನಾಗಿದೆ ಆದರೆ ಸಂಭಾಷಣೆ ಚೆನ್ನಾಗಿಲ್ಲ, ಜಾಸ್ತಿ ಪೋಲಿ ಸಂಭಾಷಣೆಗಳಾದವು ಬೇಡ ಎಂದಿದ್ದರಂತೆ. ಈವರೆಗೆ ಬಹಳ ಗಂಭೀರ ಪಾತ್ರಗಳನ್ನು ಮಾಡಿದ್ದೀರಿ ಈಗ ಈ ಪಾತ್ರ ಮಾಡಿಬಿಡಿ ಎಂದು ವಿಜಯ ಪ್ರಸಾದ್ (Vijay Prasad) ಮನವಿ ಮಾಡಿದ್ದರು. ಅವರ ಪ್ರೀತಿಗೆ ಕಟ್ಟುಬಿದ್ದು ಸಿನಿಮಾದಲ್ಲಿ ದತ್ತಣ್ಣ ನಟಿಸಿದರು.

    ಬಳಿಕ ಚಿತ್ರದ ಟ್ರೈಲರ್ ನೋಡಿ ಉರಿದು ಹೋದ ನಟ ದತ್ತಣ್ಣ, ನಿರ್ದೇಶಕ ವಿಜಯಪ್ರಸಾದ್ ಅವರಿಗೆ ಫೋನ್ ಮಾಡಿ ಬಾಯಿಗೆ ಬಂದಂತೆ ಬೈದಿದರಂತೆ. ನನ್ನ ಜೀವನದಲ್ಲಿ ಇದೊಂದು ಸಿನಿಮಾ ಕಪ್ಪು ಚುಕ್ಕೆ ಎಂದು ಬಿಟ್ಟರಂತೆ. ವಿಜಯ ಪ್ರಸಾದ್ ಜೊತೆ ಮಾತು ನಿಲ್ಲಿಸಿಬಿಟ್ಟಿದ್ದರಂತೆ. ಮುಂದೆ ಚಿತ್ರ ರಿಲೀಸ್ ವೇಳೆಗೆ ವಿಜಯ್ ಪ್ರಸಾದ್ ಮನವಿಯ ಮೇರೆಗೆ Neerdose ಸಿನಿಮಾವನ್ನ ದತ್ತಣ್ಣ ನೋಡಿದ ಬಳಿಕ ಅವರ ಕೋಪ ಇಳಿಯಿತಂತೆ.

    ಕಾರ್ಯಕ್ರಮಕ್ಕೆ ಆಗಮಿಸಿದ್ದ ನಿರ್ದೇಶಕ ವಿಜಯ ಪ್ರಸಾದ್, ದತ್ತಣ್ಣ ಬಗ್ಗೆ ಮಾತನಾಡುತ್ತಾ, ಎಲ್ಲರೊಟ್ಟಿಗೂ ಬೆರೆಯುವ ದತ್ತಣ್ಣ ಅವರು, ಶೂಟಿಂಗ್ ಮುಗಿದ ಮೇಲೆ ನಮ್ಮೊಟ್ಟಿಗೆ ಕೂತು ಗುಂಡು ಹಾಕುತ್ತಾ ನಮ್ಮೊಡನೆ ಬೆರೆತುಬಿಡುತ್ತಾರೆ. ದತ್ತಣ್ಣ ಬ್ಯಾಗ್ ಇಲ್ಲದೆ ಎಲ್ಲಿಗೂ ಬರೊಲ್ಲ ಗುಂಡಿನ ವ್ಯವಸ್ಥೆ ಇಲ್ಲದೆ ಎಲ್ಲಿಯೂ ಉಳಿಯುವುದಿಲ್ಲ ಎಂದು ಜೋಕ್ (Joke) ಮಾಡಿದರು.

  • ಹಲವು ಅಚ್ಚರಿಗಳೊಂದಿಗೆ ತಯಾರಾಗಲಿದೆ ‘ಮೈ ಹೀರೋ’ ಸಿನಿಮಾ

    ಹಲವು ಅಚ್ಚರಿಗಳೊಂದಿಗೆ ತಯಾರಾಗಲಿದೆ ‘ಮೈ ಹೀರೋ’ ಸಿನಿಮಾ

    ನ್ನಡದಲ್ಲಿ ಈಗ ಉತ್ತಮ ಕಂಟೆಂಟ್ ವುಳ್ಳ ಸಿನಿಮಾಗಳು ಹೆಚ್ಚು ಬರುತ್ತಿದೆ. ಅದೇ ಸಾಲಿಗೆ ಸೇರುವ ಮತ್ತೊಂದು ಒಳ್ಳೆಯ ಕಂಟೆಂಟ್ ಓರಿಯಂಟೆಡ್ ಸಿನಿಮಾ ‘ಮೈ ಹೀರೋ’ . ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಸವನಗುಡಿಯ ರೇಣುಕಾದೇವಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ಮಹಾಲಕ್ಷ್ಮಿ ಆರಂಭಫಲಕ ತೋರಿದರು. ನಟ ದತ್ತಣ್ಣ ಕ್ಯಾಮೆರಾ ಚಾಲನೆ ಮಾಡಿದರು.

    ನಾನು ಮೂಲತಃ ರಂಗಭೂಮಿ ಕಲಾವಿದ . ಸ್ಯಾನ್ ಫ್ರಾನ್ಸಿಸ್ಕೊ ಫಿಲಂ ಸ್ಕೂಲ್ ನಲ್ಲಿ ನಿರ್ದೇಶನದ ಕುರಿತು ಹಾಗೂ ಬಾಂಬೆ ಅನುಪಮ್ ಖೇರ್ ಫಿಲಂ ಇನ್ಸ್ಟಿಟ್ಯೂಟ್ ನಲ್ಲಿ ಅಭಿನಯ ತರಭೇತಿ ಪಡೆದಿದ್ದೇನೆ. ನಮ್ಮದೇ ಆದ ಎ ವಿ ಸ್ಟುಡಿಯೋಸ್ ಮೂಲಕ ಈ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಇದು ಬರೀ ಕರ್ನಾಟಕ, ಭಾರತ ಮಾತ್ರವಲ್ಲ. ಇಡೀ ಪ್ರಪಂಚದಲ್ಲಿರುವ ಸಾಮಾಜಿಕ ಸಮಸ್ಯೆಗಳನ್ನು ಕೇಂದ್ರವಾಗಿಟ್ಟುಕೊಂಡು ಹೆಣೆದಿರುವ ಕಥೆ. ಅಮೇರಿಕಾದಿಂದ ಬಂದ ಅಧಿಕಾರಿಯೊಬ್ಬರು ಭಾರತಕ್ಕೆ ಬಂದಾಗ ಹುಡುಗನೊಬ್ಬನ ಪರಿಚಯವಾಗುತ್ತದೆ. ಇವರಿಬ್ಬರ ನಡುವೆ ಹೆಚ್ಚಿನ ಕಥೆ ಸಾಗುತ್ತದೆ. ಕೆಲವು ಚಿತ್ರದಲ್ಲಿ ಭಾರತವನ್ನು ಬಡ ರಾಷ್ಟ್ರ ಎಂದು ಬಿಂಬಿಸಿ ತೋರಿಸಲಾಗುತ್ತದೆ. ಆದರೆ ನಮ್ಮ ಚಿತ್ರದಲ್ಲಿ ಭಾರತವನ್ನು ಬೇರೆಯದೇ ರೀತಿಯಲ್ಲಿ ತೋರಿಸುತ್ತಿದ್ದೇವೆ‌. ಚಿತ್ರ ನೋಡಿದ ಮೇಲೆ ಭಾರತವನ್ನು ನೋಡುವ ರೀತಿ ಬದಲಾಗಬಹುದು ಎಂಬುದು ನನ್ನ ಅನಿಸಿಕೆ‌. ಹಾಲಿವುಡ್ ನಟ ಜಿಲಾಲಿ  ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪ್ರಕಾಶ್ ಬೆಳವಾಡಿ ಅವರು ಜಿಲ್ಲಾಧಿಕಾರಿಯಾಗಿ, ದತ್ತಣ್ಣ ಪುರೋಹಿತರ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.  ನಿರಂಜನ್ ದೇಶಪಾಂಡೆ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

    ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ಆರಂಭವಾಗುತ್ತದೆ. ಮಧ್ಯಪ್ರದೇಶ ಹಾಗೂ ಯು ಎಸ್ ಎ ನಲ್ಲೂ ಚಿತ್ರೀಕರಣ ನಡೆಯುತ್ತದೆ. ಕನ್ನಡ, ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಈ ಚಿತ್ರ ಬರಲಿದೆ‌. ಮುಂದೆ ಬೇರೆ ಭಾಷೆಗಳಲ್ಲೂ ಬಿಡುಗಡೆ ಮಾಡುವ ಸಾಧ್ಯತೆಯಿದೆ.  ಮೂರು ಹಾಡುಗಳಿರುವ ಈ ಚಿತ್ರಕ್ಕೆ ಗಗನ್ ಬಧಾರಿಯಾ ಸಂಗೀತ ನೀಡಲಿದ್ದಾರೆ. ಎರಡು ಕನ್ನಡ ಹಾಗೂ ಒಂದು ಇಂಗ್ಲಿಷ್ ಹಾಡು ಚಿತ್ರದಲ್ಲಿರುತ್ತದೆ. ಕುಮಾರಗೌಡ ಈ ಚಿತ್ರದ ಛಾಯಾಗ್ರಾಹಕರು. ಚಿತ್ರಕಥೆಯನ್ನು ನಾನು  ಮುತ್ತುರಾಜ್ ಬರೆದಿದ್ದೇವೆ. ಜೆಮ್ ಶಿವು ಸಂಭಾಷಣೆ ಬರೆದಿದ್ದಾರೆ. ಇದು ಇಲ್ಲಿನ ತಂತ್ರಜ್ಞರ ಮಾಹಿತಿ. ಹಾಲಿವುಡ್ ನ ತಂತ್ರಜ್ಞರು ಸಹ ನಮ್ಮ ಚಿತ್ರದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ನಿರ್ದೇಶಕ ಹಾಗೂ ನಿರ್ಮಾಪಕ ಅವಿನಾಶ್ ವಿಜಯಕುಮಾರ್ “ಮೈ ಹೀರೋ” ಬಗ್ಗೆ ಮಾಹಿತಿ ನೀಡಿದರು. ಇದನ್ನೂ ಓದಿ: 150 ಕೋಟಿ ಮೌಲ್ಯದ ಹೊಸ ಮನೆಯನ್ನು ಪೋಷಕರಿಗೆ ಗಿಫ್ಟ್ ನೀಡಿದ ಧನುಷ್

    ನಾನು ಕೂಡ ರಂಗಭೂಮಿ ಕಲಾವಿದ. ಹದಿನೈದಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಗೂ ಕೆಲವು ವೆಬ್ ಸೀರೀಸ್ ಗಳಲ್ಲಿ ನಟಿಸಿದ್ದೇನೆ‌. ಈ ಚಿತ್ರದ ಕಥೆ ಇಷ್ಟವಾಯಿತು ಎಂದು ಹಾಲಿವುಡ್ ನಟ ಜಿಲಾಲಿ ಹೇಳಿದರು. ಕಲಾವಿದರಾದ ಪ್ರಕಾಶ್ ಬೆಳವಾಡಿ, ದತ್ತಣ್ಣ, ನಿರಂಜನ್ ದೇಶಪಾಂಡೆ ಹಾಗೂ ಸಂಗೀತ ನಿರ್ದೇಶಕ ಗಗನ್ ಬಧಾರಿಯಾ ಪತ್ರಿಕಾಗೋಷ್ಠಿಯಲ್ಲಿ “ಮೈ ಹೀರೋ” ಚಿತ್ರದ ಬಗ್ಗೆ ಮಾತನಾಡಿದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಸ್ತ್ ಮನರಂಜನೆ ಪಡೆಯಲು ಸುವರ್ಣಾವಕಾಶ!

    ಮಸ್ತ್ ಮನರಂಜನೆ ಪಡೆಯಲು ಸುವರ್ಣಾವಕಾಶ!

    ಪರೇಷನ್ ಅಲಮೇಲಮ್ಮ ಚಿತ್ರದ ಮೂಲಕವೇ ಕನ್ನಡ ಚಿತ್ರರಂಗಕ್ಕೆ ಆಗಮಿಸಿದ್ದ ಪ್ರತಿಭಾವಂತ ನಟ ರಿಷಿ. ಅದೊಂದೇ ಒಂದು ಚಿತ್ರದ ಪಾತ್ರ ಮತ್ತು ಅದರಲ್ಲಿ ನಟಿಸಿದ ರೀತಿಯಿಂದಲೇ ಆ ನಂತರದಲ್ಲಿ ಓರ್ವ ನಟನಾಗಿ ಸುವರ್ಣಾವಕಾಶಗಳನ್ನೇ ಪಡೆದುಕೊಳ್ಳುತ್ತಾ ಸಾಗಿ ಬಂದಿರುವ ಅವರೀಗ ಸಾರ್ವಜನಿಕರಿಗೆ ಸುವರ್ಣಾವಕಾಶ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಮುಹೂರ್ತ ಕಂಡ ದಿನದಿಂದಲೇ ಪರಿಚಿತವಾದ, ವಿಶೇಷವಾದ ಈ ಟೈಟಲ್ಲಿನ ಕಾರಣದಿಂದಲೇ ಪ್ರೇಕ್ಷಕರನ್ನು ಸೆಳೆದುಕೊಂಡಿದ್ದ ಈ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಗೊಳ್ಳುತ್ತಿದೆ.

    ಇದು ಅನೂಪ್ ರಾಮಸ್ವಾಮಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ. ದೇವರಾಜ್, ಪ್ರಶಾಂತ್ ರೆಡ್ಡಿ ಮತ್ತು ಜನಾರ್ದನ್ ಚಿಕ್ಕಣ್ಣ ಇದನ್ನು ನಿರ್ಮಾಣ ಮಾಡಿದ್ದಾರೆ. ಸಾಮಾನ್ಯವಾಗಿ ಒಂದು ವರ್ಗಗಳಿಗೆ ಸೀಮಿತವಾದ ಚಿತ್ರಗಳು ದೊಡ್ಡ ಮಟ್ಟದಲ್ಲಿ ಗೆಲುವು ಕಾಣಲು ಏದುಸಿರು ಬಿಡಬೇಕಾಗುತ್ತದೆ. ಪ್ರೇಕ್ಷಕರು ಯಾವ ಕಾರಣಕ್ಕಾಗಿ ಸಿನಿಮಾ ನೋಡಲು ಬರುತ್ತಾರೆಂಬ ಬಗ್ಗೆ ಸ್ಪಷ್ಟವಾದ ಪರಿಕಲ್ಪನೆ ಇಟ್ಟುಕೊಂಡು ಎಲ್ಲ ವರ್ಗದವರಿಗೂ ಸಲ್ಲುವಂತೆ ನಿರ್ಮಾಣಗೊಂಡ ಚಿತ್ರಗಳ ಪಾಲಿಗೆ ಗೆಲುವೆಂಬುದು ಸಲೀಸಾಗುತ್ತದೆ. ಸಾರ್ವಜನಿಕರಿಗೆ ಸುವರ್ಣಾವಕಾಶ ಚಿತ್ರವೂ ಸಹ ಅಂಥಾದ್ದೇ ಬಗೆಯಲ್ಲಿ ರೂಪುಗೊಂಡಿದೆ.

    ಪ್ರತೀ ಪ್ರೇಕ್ಷಕರ ಅಭಿರುಚಿಗಳು ಏನೇ ಇದ್ದರೂ ಅವರೆಲ್ಲರ ಪ್ರಧಾನ ಆಸಕ್ತಿ ಮನೋರಂಜನೆಯೇ ಆಗಿರುತ್ತದೆಂಬುದರಲ್ಲಿ ಯಾವ ಸಂದೇಹವೂ ಇಲ್ಲ. ಈ ಚಿತ್ರದಲ್ಲಿ ಭರಪೂರವಾದ ಮನೋರಂಜನಾತ್ಮಕ ಅಂಶಗಳಿವೆ. ಇಲ್ಲಿ ಬಹುತೇಕ ಭಾಗವನ್ನು ಕಾಮಿಡಿ ಕಚಗುಳಿ ಇಡುವಂತೆ ರೂಪಿಸಲಾಗಿದೆಯಂತೆ. ಯಾವುದೇ ಪಾತ್ರಗಳಿಗಾದರೂ ಒಗ್ಗಿಕೊಳ್ಳುವ ಛಾತಿಯ ರಿಷಿ ಇಲ್ಲಿ ನಾನಾ ಶೇಡುಗಳ ಪಾತ್ರದ ಮೂಲಕ ಪ್ರೇಕ್ಷಕರನ್ನು ಮೋಡಿಗೀಡು ಮಾಡಲಿದ್ದಾರೆ. ಧನ್ಯಾ ಬಾಲಕೃಷ್ಣ ಕೂಡಾ ನಾಯಕಿಯಾಗಿ ಅಂಥಾದ್ದೇ ವಿಶೇಷತೆ ಹೊಂದಿರುವ ಪಾತ್ರದಲ್ಲಿ ನಟಿಸಿದ್ದಾರಂತೆ. ದತ್ತಣ್ಣ, ರಂಗಾಯಣ ರಘು, ಮಿತ್ರಾ ಮುಂತಾದವರು ಇಷ್ಟೇ ವಿಶೇಷವಾದ ಪಾತ್ರಗಳಲ್ಲಿ ನೋಡುಗರನ್ನು ತಾಕಲು ತಯಾರಾಗಿದ್ದಾರೆ.

  • ಈ ವಾರ ವಿಶಿಷ್ಟ ಪಾತ್ರಗಳನ್ನು ಕಣ್ತುಂಬಿಕೊಳ್ಳುವ ಸುವರ್ಣಾವಕಾಶ!

    ಈ ವಾರ ವಿಶಿಷ್ಟ ಪಾತ್ರಗಳನ್ನು ಕಣ್ತುಂಬಿಕೊಳ್ಳುವ ಸುವರ್ಣಾವಕಾಶ!

    ನ್ನಡ ಚಿತ್ರರಣಂಗದಲ್ಲೀಗ ಯಾವ ಸಿನಿಮಾ ರೂಪುಗೊಂಡರೂ ಅದರ ಮೂಲ ಮಂತ್ರ ಹೊಸತನವೇ ಆಗಿರುತ್ತದೆಯೆಂಬಂಥಾ ವಾತಾವರಣವಿದೆ. ಶೀರ್ಷಿಕೆಯಲ್ಲಿಯೇ ಆರಂಭಿಕವಾಗಿ ಸೆನ್ಸೇಷನ್ ಕ್ರಿಯೇಟ್ ಮಾಡುವಂಥಾ ಪೈಪೋಟಿಯೂ ಚಾಲ್ತಿಯಲ್ಲಿದೆ. ಇದೇ ಹಾದಿಯಲ್ಲಿ ಹೊಸ ಬಗೆಯ ನಿರೂಪಣೆ, ತೀರಾ ಹೊಸತಾದ ಕಥೆಯೊಂದಿಗೆ ಈ ವಾರ ತೆರೆಗಾಣಲು ರೆಡಿಯಾಗಿರುವ ಚಿತ್ರ ಸಾರ್ವಜನಿಕರಿಗೆ ಸುವರ್ಣಾವಕಾಶ. ಅನೂಪ್ ರಾಮಸ್ವಾಮಿ ನಿರ್ದೇಶನದ ಈ ಸಿನಿಮಾ ಅದೆಷ್ಟು ಸೊಗಸಾಗಿ ಮೂಡಿ ಬಂದಿದೆಯೆಂಬ ವಿಚಾರ ಈಗಾಗಲೇ ಟ್ರೇಲರ್‌ನೊಂದಿಗೆ ಅನಾವರಣವಾಗಿದೆ. ಅದರಲ್ಲಿ ಈ ಸಿನಿಮಾದಲ್ಲಿರೋ ಪಾತ್ರಗಳ ಪರಿಚಯವಾಗಿದ್ದರಿಂದಲೇ ಪ್ರೇಕ್ಷಕರು ಮತ್ತಷ್ಟು ತೀವ್ರವಾದ ಕುತೂಹಲದೊಂದಿಗೆ ಈ ಚಿತ್ರ ತೆರೆಗಾಣೋದನ್ನು ಎದುರು ನೋಡುವಂತಾಗಿದೆ.

    ದೇವರಾಜ್, ಪ್ರಶಾಂತ್ ರೆಡ್ಡಿ ಮತ್ತು ಜನಾರ್ದನ್ ಚಿಕ್ಕಣ್ಣ ಬಲು ಮಹತ್ವಾಕಾಂಕ್ಷೆಯಿಂದ ನಿರ್ಮಾಣ ಮಾಡಿರುವ ಚಿತ್ರ ಸಾರ್ವಜನಿಕರಿಗೆ ಸುವರ್ಣಾವಕಾಶ. ನಿರ್ದೇಶಕ ಅನೂಪ್ ರಾಮಸ್ವಾಮಿ ಇಲ್ಲಿ ಪ್ರತಿಯೊಂದು ಪಾತ್ರಗಳನ್ನೂ ಕೂಡಾ ಪ್ರೇಕ್ಷಕರು ಸಿನಿಮಾ ಮಂದಿರಗಳಿದ ಹೊರ ಬಂದಾದ ಮೇಲು ಮನಸಲ್ಲೇ ಕೂತು ಕಾಡುವಂತೆ ರೂಪಿಸಿದ್ದಾರಂತೆ. ನಾಯಕ ರಿಷಿಯಂತೂ ಈವರೆಗಿನ ಎಲ್ಲ ಪಾತ್ರಗಳಿಗಿಂತಲೂ ಬೇರೆಯದ್ದೇ ಸ್ವರೂಪದ ಪಾತ್ರದ ಮೂಲಕ ಪ್ರೇಕ್ಷಕರನ್ನು ತಲುಪಿಕೊಳ್ಳಲಿದ್ದಾರೆ. ನಾಯಕಿ ಧನ್ಯಾ ಪಾತ್ರವೂ ಅದೇ ಹಾದಿಯಲ್ಲಿದೆ. ಇತರೆ ಪಾತ್ರಗಳೂ ಕೂಡಾ ಅಂಥಾದ್ದೇ ಗುಣ ಲಕ್ಷಣಗಳನ್ನು ಹೊಂದಿವೆಯಂತೆ.

    ಈ ಚಿತ್ರದಲ್ಲಿ ರಿಷಿ ಮತ್ತು ಧನ್ಯಾ ಬಾಲಕೃಷ್ಣಗೆ ಹಿರಿಯ ನಟ ದತ್ತಣ್ಣ, ರಂಗಾಯಣ ರಘು ಮತ್ತು ಮಿತ್ರಾ ಮುಖ್ಯವಾದ ಪಾತ್ರಗಳ ಮೂಲಕ ಸಾಥ್ ನೀಡಿದ್ದಾರೆ. ಅವರ ಪಾತ್ರಗಳ ಸ್ಪಷ್ಟ ಚಹರೆಗಳನ್ನು ಟ್ರೇಲರ್‍ನಲ್ಲಿ ಕಾಣಿಸಿರುವ ಚಿತ್ರತಂಡ ಅವುಗಳ ಮೂಲಕವೇ ಈ ಸಿನಿಮಾ ಬಗ್ಗೆ ನಿರೀಕ್ಷೆಗಳು ಮೂಡಿಕೊಳ್ಳುವಂತೆ ಮಾಡಿದ್ದಾರೆ. ಈ ಮೂವರೂ ನಟರನ್ನು ಪ್ರೇಕ್ಷಕರು ಇದುವರೆಗೂ ಹತ್ತಾರು ಸಿನಿಮಾಗಳಲ್ಲಿ ಬಗೆ ಬಗೆಯ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಈ ಹಿಂದೆ ಎಲ್ಲಿಯೂ ನಿರ್ವಹಿಸದಂಥಾ ಪಾತ್ರಗಳು ಅವರಿಗಾಗಿ ಸೃಷ್ಟಿಯಾಗಿವೆಯಂತೆ. ದತ್ತಣ್ಣನ ಪಾತ್ರವಂತೂ ನಗಿಸುತ್ತಲೇ ಪ್ರೇಕ್ಷಕರ ಕಣ್ಣಾಲಿಗಳು ತುಂಬಿ ಬರುವಂತೆಯೂ ಮಾಡಲಿವೆಯಂತೆ. ಇದೆಲ್ಲದರ ಅಸಲಿ ಮೋದ ಈ ವಾರವೇ ನಿಮ್ಮೆದುರು ಅನಾವರಣಗೊಳ್ಳಲಿದೆ.

  • ತೋತಾಪುರಿಗೆ 100 ಡೇಸ್ ಶೂಟಿಂಗ್!

    ತೋತಾಪುರಿಗೆ 100 ಡೇಸ್ ಶೂಟಿಂಗ್!

    ಬೆಂಗಳೂರು: ಕೆ.ಎ.ಸುರೇಶ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬಹು ನಿರೀಕ್ಷಿತ ಸಿನಿಮಾ `ತೋತಾಪುರಿ’. ನೀರ್ ದೋಸೆ ಚಿತ್ರದ ಯಶಸ್ವೀ ತಂಡ ಮತ್ತೊಮ್ಮೆ `ತೋತಾಪುರಿ’ಯ ಮೂಲಕ ಒಂದಾಗಿರೋದು ವಿಶೇಷ. ನಿರ್ದೇಶಕ ವಿಜಯಪ್ರಸಾದ್ ಅವರ ಈ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್, ದತ್ತಣ್ಣ, ಸುಮನ್ ರಂಗನಾಥ್ ಮತ್ತೆ ಒಂದಾಗಿದ್ದಾರೆ. ಇದಲ್ಲದೆ ಉದ್ಯಮಿಯ ಪಾತ್ರದಲ್ಲಿ ಡಾಲಿ ಧನಂಜಯ ಮತ್ತು ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸುತಿದ್ದಾರೆ.

    ನಿರ್ಮಾಪಕ ಕೆ ಎ ಸುರೇಶ್ ಅವರ ಹಿಂದಿನ ಸಿನಿಮಾಗಳಿಗಿಂತ ಹೆಚ್ಚಿನ ಭರವಸೆ ಈ ಚಿತ್ರ ಮೂಡಿಸಿದೆ. ಮಾರುಕಟ್ಟೆಯಲ್ಲಿ ಈ ತಂಡದ ಬಗ್ಗೆಯೇ ದೊಡ್ಡ ನಿರೀಕ್ಷೆ ಉದ್ಭವವಾಗಿದೆ. ಕನ್ನಡ ಚಿತ್ರ ರಂಗದಲ್ಲಿ ಯಶಸ್ಸನ್ನು ಬೆನ್ನಿಗೆ ಕಟ್ಟಿಕೊಂಡಿರುವ ನಿರ್ಮಾಪಕ ಕೆ ಎ ಸುರೇಶ್ `ತೋತಾಪುರಿ’. ಚಿತ್ರದಲ್ಲಿ ಮೊದಲ ಬಾರಿಗೆ ಡಾಲಿ ಧನಂಜಯ್ ಜಗ್ಗೇಶ್ ಜೊತೆಯಾಗಿದ್ದಾರೆ. ನಾಯಕಿ ಅದಿತಿ ಪ್ರಭುದೇವ ಮುಸ್ಲಿಂ ಹುಡುಗಿ, ಸುಮನ್ ರಂಗನಾಥ್ ಕ್ರಿಶ್ಚಿಯನ್ ಹೆಣ್ಣುಮಗಳಾಗಿ ಅಭಿನಯಿಸಿದ್ದಾರೆ.

    ನವರಸ ನಾಯಕ ಜಗ್ಗೇಶ್ ಅವರ ಚಿತ್ರಜೀವನದಲ್ಲಿ ಇದೇ ಮೊದಲ ಬಾರಿಗೆ 100 ದಿವಸಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ನಿರ್ಮಾಪಕ ಕೆ ಎ ಸುರೇಶ್ `ರಾಜು ಕನ್ನಡ ಮೀಡಿಯಂ’ ಚಿತ್ರದ ಯಶಸ್ಸಿನ ನಂತರ ಒಂದು ಭರವಸೆ ಮೂಡಿಸುವ ತಂಡದ ಜೊತೆ ಹಣ ಹೂಡುತ್ತಿದ್ದಾರೆ. ವಿಜಯಪ್ರಸಾದ್ `ಸಿದ್ಲಿಂಗು’ ಸಿನಿಮಾದಲ್ಲಿ ಟೀಚರ್ ಆಗಿದ್ದ ಸುಮನ್ ರಂಗನಾಥ್ ಈ ಚಿತ್ರದಲ್ಲೂ ಪ್ರಮುಖ ಪಾತ್ರ ಗಿಟ್ಟಿಸಿಕೊಂಡಿದ್ದಾರೆ. ಅನೂಪ್ ಸೀಳಿನ್ ಸಂಗೀತ, ನಂಜೇಶ್ ಬಾಬು ಛಾಯಾಗ್ರಹಣ ಮಾಡಿದ್ದಾರೆ. ಮೈಸೂರು, ಶ್ರೀರಂಗಪಟ್ಟಣ, ಕೊಡಗಿನಲ್ಲಿ ಚಿತ್ರೀಕರಣ ಮಾಡಲಾಗಿದೆ.

    `ಎರಡನೇ ಮದುವೆ’, `ಗೋವಿಂದಾಯ ನಮಃ’, ಶ್ರಾವಣಿ ಸುಬ್ರಮಣಿ, ಆರ್ ಎಕ್ಸ್ ಸೂರಿ, ಶಿವಲಿಂಗ ಮತ್ತು ರಾಜು ಕನ್ನಡ ಮೀಡಿಯಂ ನಂತರ ಈ `ತೋತಾಪುರಿ’ಯನ್ನು ನಿರ್ಮಿಸಿರುವ ನಿರ್ಮಾಪಕ ಸುರೇಶ್ ಈ ಚಿತ್ರವನ್ನು ಮಾವಿನ ಹಣ್ಣಿನ ಸೀಸನ್ನಿನಲ್ಲೇ ಬಿಡುಗಡೆ ಮಾಡುವ ಇರಾದೆ ಇಟ್ಟುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇದೇ ಶುಕ್ರವಾರ ತೆರೆಗೆ ಬರಲಿದೆ `ಏಪ್ರಿಲ್ ನ ಹಿಮಬಿಂದು’

    ಇದೇ ಶುಕ್ರವಾರ ತೆರೆಗೆ ಬರಲಿದೆ `ಏಪ್ರಿಲ್ ನ ಹಿಮಬಿಂದು’

    ಬೆಂಗಳೂರು : ತನ್ನ ಹಾಡುಗಳ ಮೂಲಕವೇ ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಮೂಡಿಸಿದ್ದ ‘ಏಪ್ರಿಲ್ ನ ಹಿಮಬಿಂದು’ ಚಿತ್ರ ಇದೇ ಶುಕ್ರವಾರ ರಾಜ್ಯಾದ್ಯಂತ ತೆರೆಕಾಣಲಿದೆ.

    ಹೌದು, ಪಕ್ಕಾ ಎಂಟರ್ ಟೈನ್ಮೆಂಟ್ ಮೂವಿ, ಕಂಪ್ಲೀಟ್ ಫ್ಯಾಮಿಲಿ ಮೂವಿ ಅದರಲ್ಲೂ ವಿಶೇಷವಾಗಿ ಹೊಸದಾಗಿ ಮದುವೆಯಾದವರು ನೋಡಲೇಬೇಕಾದ ಮೂವಿ ಎಂದು ಕನ್ನಡದ ದಿಗ್ಗಜ ಹಿರಿಯನಟ ದತ್ತಣ್ಣ ಅವರು ಹೇಳಿದ್ದ ‘ಏಪ್ರಿಲ್ ನ ಹಿಮಬಿಂದು’ ಚಿತ್ರ ಅಕ್ಟೋಬರ್ 6 ರಿಂದ ಕನ್ನಡ ಚಿತ್ರರಂಗದಲ್ಲಿ ತನ್ನ ಛಾಪು ಮೂಡಿಸಲಿದೆ.

    ಹಿರಿಯ ನಟರಾದ ದತ್ತಣ್ಣರವರು ತನ್ನ ಅಣ್ಣನಾದ ವಿ.ಸೋಮಶೇಖರ್ ರಾವ್ ರೊಡನೆ ತೆರೆಯ ಮೇಲೆ ಬರುತ್ತಿರುವ ಮೂರನೇ ಚಿತ್ರ ಇದಾಗಿದ್ದು, ಈ ಹಿಂದಿನ ಎರಡು ಚಿತ್ರಗಳೂ ಭಾರೀ ಯಶಸ್ಸು ಗಳಿಸಿತ್ತು. ಇದೀಗ ಮತ್ತೊಮ್ಮೆ ಜೊತೆಗೂಡಿರುವ ಹಿರಿಯ ದಿಗ್ಗಜರು ಸೀನಿಯರ್ ಸಿಟಿ ಜನಗಳಿಗೆ ಕೂಡಾ ಇಷ್ಟವಾಗುವ ಅದ್ಭುತ ಕಥಾಹಂದರವಿರುವ ಚಿತ್ರವನ್ನು ಹೊರ ತಂದಿದ್ದಾರೆ.

    ಸಾಮಾನ್ಯವಾಗಿ ಎಲ್ಲರೂ ನಮಗೆಟುಕದ್ದನ್ನು ಪಡೆಯುವ ಕಾತರದಲ್ಲೇ ಇರುತ್ತಾರೆ. ಕೆಲವರಿಗೆ ಅದೃಷ್ಟವಶಾತ್ ಅದು ಸಿಗಬಹುದು. ಆದರೆ ಮುಕ್ಕಾಲು ಭಾಗ ಜನರಿಗೆ ಭ್ರಮನಿರಸನವಾಗುವುದು ಖಚಿತ. ಹಾಗಾಗಿ ಏಪ್ರಿಲ್ ನ ಹಿಮಬಿಂದು ಚಿತ್ರದ ಟೈಟಲ್ ಹೇಳುವಂತೆ ಏಪ್ರಿಲ್ ನಲ್ಲಿರದ ಹಿಮಬಿಂದುವನ್ನು ಹಾರೈಸುವ ಮನಸುಗಳಿಗೆ ಹೊಸ ಹೊಳಪು ಕೊಡುವ ಸಿನಿಮಾ ಇದಾಗಿರಲಿದೆ ಎಂದು ದತ್ತಣ್ಣ ಹೇಳಿದ್ದಾರೆ.

    ಬಾಬು ಹಿರಣ್ಣಯ್ಯ, ಚಿದಾನಂದ್, ಟಿ.ವಿ ಗುರುಮೂರ್ತಿ, ಸಿದ್ಲಿಂಗು ಶ್ರೀಧರ್ ಮುಂತಾದ ಖ್ಯಾತನಾಮರ ದಂಡೇ ಈ ಚಿತ್ರದಲ್ಲಿದ್ದು ಶಿವ-ಜಗನ್ ರವರು ಹಾಗೂ ಅನೂಪ್ ಟಿ.ಆನಂದ್, ಸಂದೀಪ್ ಡಿ.ಎಸ್ ಚಿತ್ರ ನಿರ್ಮಾಣ ಮಾಡುವಲ್ಲಿ ನಿರ್ಮಾಪಕರ ಕಾರ್ಯನಿರ್ವಹಿಸಿದ್ದಾರೆ.

    ಒಟ್ಟಿನಲ್ಲಿ ನಾಗೇಂದ್ರ ಪ್ರಸಾದ್, ಯೋಗರಾಜ್ ಭಟ್, ಹೆಚ್.ಎಸ್.ವೆಂಕಟೇಶಮೂರ್ತಿಯವರುಗಳ ಶ್ರೇಷ್ಟ ಸಾಹಿತ್ಯವಿರುವ ಚಿತ್ರದ ಹಾಡುಗಳೂ ಸಾಕಷ್ಟು ಪಾಪ್ಯುಲರ್ ಆಗಿದ್ದು ಚಿತ್ರದ ನಿರೀಕ್ಷೆ ಕೂಡಾ ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡಿದೆ.