Tag: ದತ್ತ ಜಯಂತಿ

  • ಬಹುತ್ವವನ್ನು ಅಳವಡಿಸಿಕೊಂಡಿರುವುದು ಹಿಂದೂ ಧರ್ಮ ಮಾತ್ರ: ಸಿ.ಟಿ.ರವಿ

    ಬಹುತ್ವವನ್ನು ಅಳವಡಿಸಿಕೊಂಡಿರುವುದು ಹಿಂದೂ ಧರ್ಮ ಮಾತ್ರ: ಸಿ.ಟಿ.ರವಿ

    ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯನವರು (Siddaramaiah) ಯಾವಾಗಲೂ ಬಹುತ್ವದ ಬಗ್ಗೆ ಮಾತನಾಡುತ್ತಾರೆ. ಆದರೆ ಬಹುತ್ವವನ್ನ ಒಪ್ಪಿಕೊಂಡು, ಅಳವಡಿಸಿಕೊಂಡಿರುವುದು ಕೇವಲ ಹಿಂದೂ ಧರ್ಮ (Hindu Religion) ಮಾತ್ರ, ಬಹುತ್ವಕ್ಕೆ ಬೆಲೆ ಇರುವುದು ಹಿಂದೂ ಧರ್ಮದಲ್ಲಿಯೇ ಎಂದು ಮಾಜಿ ಸಚಿವ ಸಿ.ಟಿ.ರವಿ (CT Ravi) ಹೇಳಿದ್ದಾರೆ.

    ಚಿಕ್ಕಮಗಳೂರು (Chikkamagaluru) ತಾಲೂಕಿನ ದತ್ತ ಪೀಠದಲ್ಲಿ ನಡೆದ ದತ್ತ ಜಯಂತಿಯ (Datta Jayanthi) ಹೋಮ ಪೂಜೆಯ ಬಳಿಕ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಹಮ್ಮಿಕೊಂಡಿದ್ದ ದತ್ತ ಮಾಲೆ ಜಯಂತಿ ಕಾರ್ಯಕ್ರಮ ವಿದ್ಯುಕ್ತವಾಗಿ ಸಂಪನ್ನಗೊಂಡಿದೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಕೂಡ ವಿಶೇಷ ಧನ್ಯವಾದ ಎಂದರು. ಸರ್ಕಾರದ ಪ್ರತಿನಿಧಿಯಾಗಿ ಯಾರಾದರೂ ಒಬ್ಬರು ಭಾಗವಹಿಸಬೇಕಾಗಿತ್ತು. ಸರ್ಕಾರದ ಪ್ರತಿನಿಧಿಗಳಾಗಿ ಯಾರು ಬಾರದೇ ಇರುವುದು ದುರಾದೃಷ್ಟಕರ ಹಾಗೂ ನೋವಿನ ಸಂಗತಿ ಎಂದರು. ಇದನ್ನೂ ಓದಿ: ಯೂಟ್ಯೂಬ್‌ನಲ್ಲಿ ವಿಶ್ವದಾಖಲೆ ಬರೆದ ನರೇಂದ್ರ ಮೋದಿ

    ಇದು ಮುಜರಾಯಿ ಇಲಾಖೆಗೆ ಸೇರಿದ ದತ್ತಾತ್ರೇಯ ಸ್ವಾಮಿ ದೇವಸ್ಥಾನವಾಗಿದ್ದು, ಯಾರಾದರೂ ಒಬ್ಬರು ಭಾಗವಹಿಸಬೇಕಾದದ್ದು ಕ್ರಮವಾಗಿತ್ತು. ಯಾರೂ ಭಾಗವಹಿಸದೇ ಇರುವುದು ದುರಾದೃಷ್ಟಕರ. ಅವರ ಮನಸ್ಸಿನಲ್ಲಿ ಹಿಂದೂ ಪೂಜಾ ವಿಧಿ ವಿಧಾನಗಳಲ್ಲಿ ಭಾಗವಹಿಸಿದರೆ ಜಾತ್ಯಾತೀತತೆಗೆ ಭಂಗ ಬರುತ್ತದೆ ಎಂಬ ಭಾವನೆ ಇರಬಹುದು. ಈದ್ ಮಿಲಾದ್‌ನಲ್ಲಿ ಪಾಲ್ಗೊಳ್ಳುತ್ತಾರೆ. ದತ್ತ ಜಯಂತಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದರೆ ಏನರ್ಥ? ಯಾವ ಸಂದೇಶ ಕೊಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪಾಕಿಸ್ತಾನದ ಜೊತೆ ಭಾರತ ಸಂಬಂಧವನ್ನು ಸುಧಾರಿಸದೇ ಇದ್ದಲ್ಲಿ ಕಾಶ್ಮೀರಕ್ಕೆ ಗಾಜಾ ಪರಿಸ್ಥಿತಿ ಬರಬಹುದು: ಫಾರೂಖ್ ಅಬ್ದುಲ್ಲಾ

    ನಾವು ಹಿಂದೂ ಭಾವನೆಗಳ ಜೊತೆಗಿಲ್ಲ ಎಂಬ ಸಂದೇಶವನ್ನು ಅವರು ಕೊಡುತ್ತಿದ್ದಾರೆಂದು ನನಗೆ ಅನಿಸುತ್ತಿದೆ. ಹಿಂದೂ ಧರ್ಮ ಮಾತ್ರ ಜಗತ್ತಿನ ಎಲ್ಲವನ್ನು ಒಳಗೊಳ್ಳುವಂತದ್ದು. ಇಲ್ಲಿ ಬಹುತ್ವಕ್ಕೆ ಅವಕಾಶವಿದೆ. ಅವರವರ ಭಾವಕ್ಕೆ, ಭಕ್ತಿಗೆ ತೆರನಾಗಿ ಇರುತಿಹನು ಶಿವಯೋಗಿ ಎಂಬ ತತ್ವದ ಮೇಲೆ ನಂಬಿಕೆ ಇಟ್ಟಿರುವುದು ಹಿಂದೂ ಧರ್ಮ. ಜಗತ್ತಿನ ಯಾವ ಶಕ್ತಿಯೂ ಕೂಡ ಶಿವನನ್ನು ಹಿಂದೂ ಧರ್ಮದಿಂದ ಬೇರ್ಪಡಿಸಲು ಸಾಧ್ಯವಿಲ್ಲ. ಬ್ರಹ್ಮ, ವಿಷ್ಣು, ಮಹೇಶ್ವರರು ಏಕೀಭಾವವಾಗಿ ಅವತರಿಸಿರುವುದೇ ದತ್ತಾತ್ರೇಯರ ಅವತಾರ. ಯಾವ ಶಕ್ತಿಯೂ ಕೂಡ ಅದನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕಲ್ಕಡ್ಕ ಪ್ರಭಾಕರ ಭಟ್‌ ವಿರುದ್ಧ ಎಫ್‌ಐಆರ್‌ ದಾಖಲು

  • ಕಾಫಿನಾಡಲ್ಲಿ ಡಿ.17 ರಿಂದ 26ರವರೆಗೆ ದತ್ತ ಜಯಂತಿ ಸಂಭ್ರಮ

    ಕಾಫಿನಾಡಲ್ಲಿ ಡಿ.17 ರಿಂದ 26ರವರೆಗೆ ದತ್ತ ಜಯಂತಿ ಸಂಭ್ರಮ

    ಚಿಕ್ಕಮಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗದಳದ (Bajarang Dal) ವತಿಯಿಂದ ಡಿ.17 ರಿಂದ ಡಿ.26ರವರೆಗೆ ದತ್ತ ಜಯಂತಿ (Datta Jayanti) ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಜರಂಗದಳ ದಕ್ಷಿಣ ಕರ್ನಾಟಕ ಪ್ರಾಂತ ಸಂಯೋಜಕ ಕೆ.ಆರ್.ಸುನೀಲ್ ತಿಳಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನಿರಂತರ ಹೋರಾಟದಿಂದ ದತ್ತಪೀಠದಲ್ಲಿ ಈಗಾಗಲೇ ತ್ರಿಕಾಲ ಪೂಜೆ ನಡೆಯುತ್ತಿದೆ. 2023ರಲ್ಲಿ ದತ್ತ ಜಯಂತಿಯನ್ನು ಕರ್ನಾಟಕ ನಾಡ ಉತ್ಸವದಂತೆ ಆಚರಿಸಲು ಸಂಘಟನೆ ತೀರ್ಮಾನಿಸಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಒಂದಲ್ಲ ಮೂರು ಬಾರಿ ಮನೋರಂಜನ್‌ಗೆ ಪ್ರತಾಪ್‌ ಸಿಂಹ ಕಚೇರಿಯಿಂದ ಸಿಕ್ಕಿತ್ತು ಪಾಸ್‌!

    ಈ ಬಾರಿಯ ದತ್ತಜಯಂತಿಗೆ ರಾಜ್ಯದ ವಿವಿಧ ಭಾಗಗಳಿಂದ 30 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆಯಿದೆ. ಡಿ.17ರಂದು ನಗರದ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ದತ್ತಮಾಲಾಧಾರಣೆ ನಡೆಯಲಿದೆ. ಡಿ.24ರಂದು ಅನುಸೂಯ ಜಯಂತಿ ನಡೆಯಲಿದ್ದು, ಆ ದಿನ ಬೆಳಗ್ಗೆ 9:30ಕ್ಕೆ ಮಹಿಳೆಯರಿಂದ ಸಂಕೀರ್ತನಾ ಯಾತ್ರೆ ನಡೆಯಲಿದೆ. ದತ್ತಪೀಠದಲ್ಲಿ ಗಣಪತಿ ಪೂಜೆ, ಪುಣ್ಯಹವಾಚನ, ಪಂಚಗವ್ಯ ಶುದ್ಧಿ, ಗಣಪತಿ ಹೋಮ, ದುರ್ಗಾಹೋಮ, ಕಲಶಾಭಿಷೇಕ, ಹಾಗೂ ಮಹಾಪೂಜೆ ಜರುಗಲಿದೆ. ಸಂಜೆ ಪಾದುಕಾಶುದ್ಧಿ, ಪ್ರಕಾರ ಶುದ್ಧಿ, ಸುದರ್ಶನ ಹೋಮ, ಕಲಶಾಭಿಷೇಕ ಮಹಾಪೂಜೆ ನಡೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಂಸತ್‍ನಲ್ಲಿ ಸ್ಮೋಕ್ ಬಾಂಬ್ ಎಸೆದಿದ್ದ ಮನೋರಂಜನ್ ಯಾರು?, ಈತನ ಹಿನ್ನೆಲೆಯೇನು?

    ಡಿ.25ರಂದು ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ಹಾಗೂ ಆಜಾದ್ ಪಾರ್ಕ್ ವೃತ್ತದಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸಾಧು-ಸಂತರು, ಸ್ವಾಮೀಜಿಗಳು ಹಾಗೂ ವಿಶ್ವ ಹಿಂದೂ ಪರಿಷತ್ ಅಖಿಲ ಭಾರತೀಯ ಸಹಕಾರ್ಯದರ್ಶಿ ಶಂಕರ್ ಗಾಯ್ಕರ್ ಭಾಗವಹಿಸಲಿದ್ದಾರೆ. ಅಂದು ದತ್ತಪೀಠದಲ್ಲಿ ನವಕಲಶ ಕಲಾವಾಹನಂ, ಕಲಾತತ್ವಾದಿವಾಸ ಪೂಜೆ, ಕಲಾಹೋಮ, ರುದ್ರಹೋಮ, ಕಲಶಾಭೀಷೇಕ ಮಹಾಪೂಜೆ ನಡೆಸಲು ಸಂಘಟನೆ ತೀರ್ಮಾನಿಸಿದೆ. ಡಿ.26ರಂದು ದತ್ತಪೀಠದಲ್ಲಿ ದತ್ತಜಯಂತಿ ಪ್ರಯುಕ್ತ ದತ್ತಭಕ್ತರು ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಪಡೆಯುವರು. ಅಲ್ಲಿ ದತ್ತಾತ್ರೇಯ ಮಹಾಮಂತ್ರ, ಮಹಾಯಾಗ, ಕಲಶಾಭಿಷೇಕ, ಮಹಾಪೂಜೆ, ತಂತ್ರಿಗಳಿಂದ ಆಶೀರ್ವಚನಾ, ಬ್ರಹ್ಮಭೋಜನ, ಪ್ರಸಾದ ವಿನಿಯೋಗ ನಡೆಯಲಿದೆ. ದತ್ತಜಯಂತಿಯನ್ನು ವಿಜೃಂಭಣೆಯಿಂದ ನಡೆಸಲು ನಿರ್ಧರಿಸಿದ್ದು, ಜಿಲ್ಲಾಡಳಿತ ಹೈಕೋರ್ಟ್ ಆದೇಶದಂತೆ ಸೌಕರ್ಯವನ್ನು ಒದಗಿಸಬೇಕೆಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.  ಇದನ್ನೂ ಓದಿ: ಸಾಗರ್ ಶರ್ಮಾ ಇ-ರಿಕ್ಷಾ ಓಡಿಸುತ್ತಿದ್ದ: ಆರೋಪಿ ಮಗನ ಬಗ್ಗೆ ತಾಯಿ ಹೇಳಿದ್ದೇನು?

  • ದತ್ತಪೀಠದ ಮಾರ್ಗದಲ್ಲಿ ಮೊಳೆ – ಕೋರ್ಟ್‍ಗೆ ಶರಣಾದ ಆರೋಪಿ

    ದತ್ತಪೀಠದ ಮಾರ್ಗದಲ್ಲಿ ಮೊಳೆ – ಕೋರ್ಟ್‍ಗೆ ಶರಣಾದ ಆರೋಪಿ

    ಚಿಕ್ಕಮಗಳೂರು: ತಾಲೂಕಿನ ದತ್ತಪೀಠದಲ್ಲಿ ನಡೆದ ದತ್ತಜಯಂತಿಯ ಕಾರ್ಯಕ್ರಮದ ಮುನ್ನ ದತ್ತಪೀಠದ  ರಸ್ತೆಯುದ್ಧಕ್ಕೂ ಮೊಳೆಗಳನ್ನ ಚೆಲ್ಲಿದ್ದ ಆರೋಪಿಗಳ ಪೈಕಿ ಮತ್ತೊಬ್ಬ ಆರೋಪಿ ಕೋರ್ಟ್‌ಗೆ ಶರಣಾಗಿದ್ದಾನೆ.

    ಕಳೆದ ಎರಡು ದಿನಗಳ ಹಿಂದೆಯಷ್ಟೇ ಗ್ರಾಮಾಂತರ ಪೊಲೀಸರು ಇಬ್ಬರನ್ನು ಬಂಧಿಸಿದ್ದರು. ದತ್ತಜಯಂತಿಯ ಅಂಗವಾಗಿ ಜಿಲ್ಲಾಡಳಿತ ಚಿಪ್ಸ್ ಕೆಫೆ ಮೂಲಕ ದತ್ತಪೀಠದಲ್ಲಿ ಸಿಸಿಟಿವಿಗೆ ಕ್ಲ್ಯಾಂಪ್ ಹಾಕಲು ಹೋಗಿದ್ದ ಮೊಹಮ್ಮದ್‌ ಶಹಬಾಸ್ ಹಾಗೂ ವಾಹೀದ್ ಹುಸೇನ್‌ರನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದರು.

    ಅವರು ಮೊಳೆ ಖರೀದಿಸಿದ್ದು ಎಲ್ಲಿ? ಎಂತಹಾ ಮೊಳೆ? ಎಲ್ಲಾ ಮಾಹಿತಿ ಕಲೆ ಹಾಕಿ ಇಬ್ಬರನ್ನು ಬಂಧಿಸಿದ್ದರು. ಆದರೆ ಉಳಿದ ನಾಲ್ಕೈದು ಜನ ತಲೆಮರೆಸಿಕೊಂಡಿದ್ದರು. ಇದನ್ನೂ ಓದಿ: ದತ್ತಜಯಂತಿಯಂದು ದತ್ತಪೀಠ ಮಾರ್ಗದಲ್ಲಿ ಮೊಳೆ ಸುರಿದಿದ್ದ ಇಬ್ಬರ ಬಂಧನ

    ಡಿಸೆಂಬರ್ 6-7-8ರಂದು ದತ್ತಪೀಠದಲ್ಲಿ ದತ್ತಜಯಂತಿ ಕಾರ್ಯಕ್ರಮ ನಡೆದಿತ್ತು. ಡಿಸೆಂಬರ್ 5ರಂದು ಜಿಲ್ಲಾಡಳಿತವೇ ಸಿಸಿಟಿವಿಗೆ ಕ್ಲ್ಯಾಂಪ್ ಹಾಕಲು ಇಬ್ಬರನ್ನು ಕಳುಹಿಸಿತ್ತು. ಆಗ ಇಬ್ಬರು ದತ್ತಪೀಠದ ಮಾರ್ಗದ ಸುಮಾರು ಮೂರು ಕಿ.ಮೀ.ನಷ್ಟು ದೂರ ಸಣ್ಣ-ಸಣ್ಣ ಮೊಳೆಯನ್ನು ಸುರಿದು ಬಂದಿದ್ದರು.

    ಇದರಿಂದ ಪೊಲೀಸರ ವಾಹನ ಸೇರಿ ಐದಾರು ಗಾಡಿಗಳು ಪಂಚರ್ ಆಗಿದ್ದವು. ನಗರವನ್ನು ಕೇಸರಿಮಯವಾಗಿಸಿದ್ದಾರೆ. ನಮ್ಮ ಬಗ್ಗೆ ಅವಹೇಳನಕಾರಿಯಾಗಿ ಕೂಗುತ್ತಾರೆ. ಸಹಿಸಲಾಗದೇ ಕಾರ್ಯಕ್ರಮವನ್ನು ಹಾಳುಮಾಡಬೇಕೆಂದು ನಾವೇ ಹೀಗೆ ಮಾಡಿದ್ದೇವೆ ಎಂದು ಆರೋಪಿಗಳು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದರು.

    ಇಬ್ಬರನ್ನು ಅರೆಸ್ಟ್‌ ಮಾಡಿದ್ದ ಪೊಲೀಸರು ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಶುಕ್ರವಾರ ಇಬ್ಬರು ಅರೆಸ್ಟ್ ಆಗುತ್ತಿದ್ದಂತೆ ಶನಿವಾರ ಓರ್ವ ನೇರವಾಗಿ ಕೋರ್ಟ್ ಹಾಜರಾಗಿದ್ದಾನೆ. ಪ್ರಕರಣ ಸಂಬಂಧ ಒಟ್ಟು ಮೂವರು ಆರೋಪಿಗಳು ಬಂಧನವಾಗಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದತ್ತಜಯಂತಿಯಂದು ದತ್ತಪೀಠ ಮಾರ್ಗದಲ್ಲಿ ಮೊಳೆ ಸುರಿದಿದ್ದ ಇಬ್ಬರ ಬಂಧನ

    ದತ್ತಜಯಂತಿಯಂದು ದತ್ತಪೀಠ ಮಾರ್ಗದಲ್ಲಿ ಮೊಳೆ ಸುರಿದಿದ್ದ ಇಬ್ಬರ ಬಂಧನ

    ಚಿಕ್ಕಮಗಳೂರು: ದತ್ತ ಜಯಂತಿಯಂದು (Datta Jayanti) ತಾಲೂಕಿನ ದತ್ತಪೀಠ ಮಾರ್ಗದಲ್ಲಿ ಮೂಳೆ (Nails) ಹಾಕಿ ದುಷ್ಕೃತ್ಯ ನಡೆಸಲು ಹುನ್ನಾರ ನಡೆಸಿದ್ದ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

    ಬಂಧಿತರು ಚಿಕ್ಕಮಗಳೂರಿನ (Chikkamagaluru) ದುಬೈ ನಗರ ನಿವಾಸಿಗಳಾದ ಮಹಮದ್ ಶಹಬಾಸ್ ಹಾಗೂ ವಾಹೀದ್ ಹುಸೇನ್ ಎಂದು ಗುರುತಿಸಲಾಗಿದೆ. ಡಿಸೆಂಬರ್ 6, 7 ಮತ್ತು 8 ರಂದು ಚಿಕ್ಕಮಗಳೂರು ನಗರದಲ್ಲಿ ದತ್ತಜಯಂತಿ ಕಾರ್ಯಕ್ರಮವಿತ್ತು. ಡಿಸೆಂಬರ್ 6 ರಂದು ದತ್ತಜಯಂತಿಯ ಮೊದಲ ದಿನ ಅನುಸೂಯ ಜಯಂತಿ ಹಿನ್ನೆಲೆ ಚಿಕ್ಕಮಗಳೂರು ನಗರದಲ್ಲಿ ಸಾವಿರಾರು ಮಹಿಳೆಯರು ಮೆರವಣಿಗೆ ನಡೆಸಿ ದತ್ತಪೀಠಕ್ಕೆ ತೆರಳಿ ಹೋಮ-ಹವನ ನಡೆಸುವವರಿದ್ದರು. ಆದರೆ, ಈ ವೇಳೆ ಕಿಡಿಗೇಡಿಗಳು ದತ್ತಪೀಠದ ಮಾರ್ಗದಲ್ಲಿ ಸುಮಾರು 2 ಕಿ.ಮೀ. ಸಣ್ಣ-ಸಣ್ಣ ಮೊಳೆ ಚೆಲ್ಲಿದ್ದರು. ಇದರಿಂದ ಪೊಲೀಸ್ ಸೇರಿದಂತೆ ನಾಲ್ಕೈದು ವಾಹನಗಳು ಮಾರ್ಗ ಮಧ್ಯೆಯೇ ಪಂಚರ್ ಆಗಿದ್ದವು. ಕೂಡಲೇ ಪೊಲೀಸರು ಮೊಳೆ ತೆಗೆದು ಸರಾಗ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟಿದ್ದರು. ಇದನ್ನೂ ಓದಿ: ದತ್ತ ಜಯಂತಿ ಉತ್ಸವಕ್ಕೆ ಅಡ್ಡಿಪಡಿಸುವ ಹುನ್ನಾರ – ರಸ್ತೆಯುದ್ದಕ್ಕೂ ಮೊಳೆಗಳನ್ನು ಹಾಕಿದ ಕಿಡಿಗೇಡಿಗಳು

    ಘಟನೆ ಬಗ್ಗೆ ಗ್ರಾಮಾಂತರ ಪೊಲೀಸರು ಪ್ರಕರಣವನ್ನು ಕೂಡ ದಾಖಲಿಸಿಕೊಂಡಿದ್ದರು. ಕಳೆದ ಎಂಟತ್ತು ದಿನಗಳಿಂದ ತನಿಖೆ ನಡೆಸಿದ ಪೊಲೀಸರು ಚಿಕ್ಕಮಗಳೂರಿನ ದುಬೈ ನಗರದ ಇಬ್ಬರನ್ನು ಬಂಧಿಸಿದ್ದಾರೆ. ಅವರು ಎಲ್ಲಿ ಮೊಳೆ ಖರೀದಿಸಿರು ಎಂಬ ಮಾಹಿತಿಯನ್ನೂ ಕಲೆ ಹಾಕಿ, ವೈಜ್ಞಾನಿವಾಗಿ ಸಾಬೀತು ಮಾಡಿಕೊಂಡಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಇನ್ನೂ ಐದಾರು ಜನ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಇದ್ದು ಪೊಲೀಸರು ಅವರಿಗೂ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು ಸರ್ಕಾರಿ ಹಾಸ್ಟೆಲ್‌ನಲ್ಲಿ PUC ವಿದ್ಯಾರ್ಥಿನಿಗೆ ಹೆರಿಗೆ

    ಮೂರು ದಿನದ ಕಾರ್ಯಕ್ರಮಲ್ಲಿ ಮೊದಲ ದಿನವೇ ರಸ್ತೆಗೆ ಮೊಳೆ ಸುರಿದಿದ್ದರಿಂದ ಉಳಿದ ಎರಡು ದಿನಗಳ ಬಗ್ಗೆ ಆತಂಕ ಉಂಟಾಗಿತ್ತು. ಶಾಸಕ ಸಿ.ಟಿ.ರವಿ ಕೂಡ ಇಂತಹ ಬೆದರಿಕೆಗೆ ಬಗ್ಗಲ್ಲ, ದತ್ತಜಯಂತಿಯನ್ನು ಮತ್ತಷ್ಟು ಅದ್ಧೂರಿಯಾಗಿ ಆಚರಿಸಲು ಹಠ ಬಂದಿದೆ ಎಂದಿದ್ದರು. ಈ ನಡುವೆ ಕಾರ್ಯಕ್ರಮ ಚೆನ್ನಾಗಿ ನಡೆದಿತ್ತು. ಚುನಾವಣೆ ವರ್ಷವೇ ಕಿಡಿಗೇಡಿಗಳ ಈ ದುಷ್ಕೃತ್ಯದಿಂದ ಚಿಕ್ಕಮಗಳೂರು ಜನ ಕೂಡ ಆತಂಕಕ್ಕೀಡಾಗಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕಾಫಿನಾಡಲ್ಲಿ ಮನೆ-ಮನೆಗೆ ತೆರಳಿ ಸಿ.ಟಿ.ರವಿ ಭಿಕ್ಷಾಟನೆ

    ಕಾಫಿನಾಡಲ್ಲಿ ಮನೆ-ಮನೆಗೆ ತೆರಳಿ ಸಿ.ಟಿ.ರವಿ ಭಿಕ್ಷಾಟನೆ

    ಚಿಕ್ಕಮಗಳೂರು: ದತ್ತಜಯಂತಿ (Datta Jayanti) ಹಿನ್ನೆಲೆ ಶಾಸಕ, ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T Ravi) ಮನೆ-ಮನೆಗೆ ತೆರಳಿ ಭಿಕ್ಷಾಟನೆ (Ritual Begging) ನಡೆಸಿದ್ದಾರೆ.

    ನಗರದ ನಾರಾಯಣಪುರ, ರಾಘವೇಂದ್ರ ಮಠ, ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಮನೆ-ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದ್ದಾರೆ. ಪಡಿ ಸಂಗ್ರಹಕ್ಕೆ ಮನೆಗೆ ಬಂದ ದತ್ತಮಾಲಾಧಾರಿಗಳಿಗೆ ಸಾರ್ವಜನಿಕರು ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವೀಳ್ಯದೆಲೆ ಅಡಿಕೆ-ಬೆಲ್ಲ ನೀಡಿದರು. ಇಂದು ಮನೆಮನೆಗೆ ತೆರಳಿ ಪಡಿ ಸಂಗ್ರಹಿಸಿದ ದತ್ತಮಾಲಾಧಾರಿಗಳು ನಾಳೆ ಇರುಮುಡಿ ರೂಪದಲ್ಲಿ ಅದನ್ನು ದತ್ತಪೀಠಕ್ಕೆ ಕೊಂಡೊಯ್ದು ದತ್ತಾತ್ರೇಯ ಸ್ವಾಮಿಗೆ ಅರ್ಪಣೆ ಮಾಡಲಿದ್ದಾರೆ. ಇದನ್ನೂ ಓದಿ: 108 ಅಂಬುಲೆನ್ಸ್ ಸಿಬ್ಬಂದಿ ಉದ್ಧಟತನ – ಗಾಯಾಳುವನ್ನು ಅಪಘಾತದ ಸ್ಥಳದಲ್ಲೇ ಬಿಟ್ಟು ವಾಪಸ್

    ಪಡಿ ಸಂಗ್ರಹಕ್ಕೆ ಶಾಸಕ ಸಿ.ಟಿ. ರವಿಗೆ 20ಕ್ಕೂ ಹೆಚ್ಚು ಮಾಲಾಧಾರಿಗಳು ಸಾಥ್ ನೀಡಿದ್ದಾರೆ. ದತ್ತಪೀಠಕ್ಕೆ ಸಚಿವ ಸುನಿಲ್ ಕುಮಾರ್ (Sunil Kumar) ಭೇಟಿ ನೀಡಿ ದತ್ತಪಾದುಕೆ ದರ್ಶನ ಮಾಡಿದ್ದಾರೆ. ಪ್ರತಿ ವರ್ಷಕ್ಕಿಂತ ಈ ವರ್ಷದ ದತ್ತಜಯಂತಿ ಅತ್ಯಂತ ಸಂತೋಷ ಹಾಗೂ ಸಂಭ್ರಮದಿಂದ ಕೂಡಿದೆ. ಇಷ್ಟು ದಿನ ದತ್ತಾತ್ರೇಯರ ಪಾದುಕೆ ದರ್ಶನ ಮಾಡಿಕೊಂಡು ಹೋಗುತ್ತಿದ್ದೇವು. ಆದರೆ, ಈ ವರ್ಷ ದತ್ತಪಾದುಕೆ ದರ್ಶನದ ಜೊತೆ ಹಿಂದೂ ಅರ್ಚಕರಿಂದ ಪೂಜೆ, ಮಂಗಳಾರತಿಯನ್ನು ನೋಡುವ ಭಾಗ್ಯ ಲಭಿಸಿದೆ. ಹಾಗಾಗಿ, ಈ ವರ್ಷದ ದತ್ತಜಯಂತಿ ಹಿಂದೂ ಸಮುದಾಯ ಮತ್ತು ದತ್ತಭಕ್ತರಿಗೆ ಅತ್ಯಂತ ಸಂತಸದ ದಿನ. ಹಲವು ವರ್ಷಗಳಿಂದ ನಮ್ಮ ಬೇಡಿಕೆ ಇದ್ದದ್ದೆ ದತ್ತಾತ್ರೇಯರ ಪಾದುಕೆಗಳಿಗೆ ಹಿಂದೂ ಅರ್ಚಕರಿಂದ ಪೂಜೆ ಜೊತೆ, ತ್ರಿಕಾಲ ಪೂಜೆ ಆಗಬೇಕು ಎಂದು ಬೇಡಿಕೆ ಇಟ್ಟಿದ್ದೆವು. ಅದರಿಂದ ಬಿಜೆಪಿ ಸರ್ಕಾರ ಇಂದು ದತ್ತಪೀಠಕ್ಕೆ ಆಡಳಿತ ಮಂಡಳಿ ನೇಮಿಸಿ ಹಿಂದೂ ಅರ್ಚಕರಿಂದ ಪೂಜೆ ನೋಡಲು ಅವಕಾಶ ಕಲ್ಪಿಸಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಹಿಂದೂ ಹುಲಿನೇ, ಮುಲ್ಲಾ ಅಂತ ಕರೆಯೋಕ್ಕಾಗಲ್ಲ: ಸಿ.ಟಿ ರವಿ

    ಇದು ಹಿಂದೂಬಾಂಧವರಿಗೆ ಅತ್ಯಂತ ಸಂಭ್ರಮದ ದಿನ. ಇಂದು ಮಧ್ಯಾಹ್ನ ನಗರದಲ್ಲಿ 30 ಸಾವಿರಕ್ಕೂ ಅಧಿಕ ದತ್ತಭಕ್ತರಿಂದ ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಹಾಗಾಗಿ, ಮುಂಜಾಗೃತ ಕ್ರಮವಾಗಿ ಶೋಭಾಯಾತ್ರೆ ತೆರಳುವ ಮಾರ್ಗದಲ್ಲಿ ಪಾರ್ಕಿಂಗ್ ಕ್ಯಾನ್ಸಲ್ ಮಾಡಿದ್ದು, ಬೆಳಗ್ಗೆಯಿಂದಲೂ ಪೊಲೀಸರು ಕಾವಲಿದ್ದು, ಖಾಕಿ ಪಡೆ ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿದೆ.

    Live Tv
    [brid partner=56869869 player=32851 video=960834 autoplay=true]

  • ದತ್ತಜಯಂತಿಗೆ ಕಾಫಿನಾಡಲ್ಲಿ ಪೊಲೀಸ್ ಸರ್ಪಗಾವಲು – ಡಿ.5 ರಿಂದ 9ರವರೆಗೆ ಪ್ರವಾಸಿಗರಿಗೆ ನಿಷೇಧ

    ದತ್ತಜಯಂತಿಗೆ ಕಾಫಿನಾಡಲ್ಲಿ ಪೊಲೀಸ್ ಸರ್ಪಗಾವಲು – ಡಿ.5 ರಿಂದ 9ರವರೆಗೆ ಪ್ರವಾಸಿಗರಿಗೆ ನಿಷೇಧ

    ಚಿಕ್ಕಮಗಳೂರು: ಡಿ. 6,7,8 ರಂದು ತಾಲೂಕಿನ ದತ್ತಪೀಠದಲ್ಲಿ ನಡೆಯುವ ದತ್ತಜಯಂತಿ (Datta Jayanti) ಹಿನ್ನೆಲೆ ಡಿಸೆಂಬರ್ 5ರ ಬೆಳಗ್ಗೆ 6 ಗಂಟೆಯಿಂದ ಡಿ.9ರ ಬೆಳಗ್ಗೆ 10 ಗಂಟೆಯವರೆ ಮುಳ್ಳಯ್ಯನಗಿರಿ ಭಾಗದ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ (DC) ಕೆ.ಎನ್ ರಮೇಶ್ ತಿಳಿಸಿದ್ದಾರೆ.

    ಡಿಸೆಂಬರ್ 6 ರಿಂದ ಮೂರು ದಿನಗಳ ಕಾಲ ನಡೆಯಲಿರುವ ದತ್ತಜಯಂತಿ ಹಿನ್ನೆಲೆ ಜಿಲ್ಲಾದ್ಯಂತ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಭಕ್ತಾಧಿಗಳ ಅನುಕೂಲಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯಿಂದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸುಗಮ ಸಂಚಾರ ದೃಷ್ಟಿಯಿಂದ ರಸ್ತೆ ದುರಸ್ಥಿ ಕಾರ್ಯವೂ ಪೂರ್ಣಗೊಂಡಿದೆ. ತಾತ್ಕಾಲಿಕ ಆರೋಗ್ಯ ಸೌಲಭವನ್ನು ಒದಗಿಸಲು 3 ದಿನದ ಮಟ್ಟಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲಾಗುವುದು. ಹೊನ್ನಮ್ಮನ ಹಳ್ಳದಲ್ಲಿ ಭಕ್ತರು ಸ್ನಾನ ಮಾಡಲು ಮೆಟ್ಟಿಲು, ಕಟ್ಟೆ ನಿರ್ಮಾಣ ಮಾಡಲಾಗಿದೆ. ದತ್ತ ಜಯಂತಿ ಮುಗಿಯುವವರೆಗೂ ನಿರಂತರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 3 ದಿನವಾದ್ರೂ ಸಿಗದ ಚಾಲಾಕಿ ಚಿರತೆ – 4ನೇ ದಿನಕ್ಕೆ ಕಾರ್ಯಾಚರಣೆ

    ಭಕ್ತರು ಬೆಟ್ಟಕ್ಕೆ ತೆರಳಲು ಅನುಕೂಲವಾಗುವಂತೆ ಖಾಸಗಿ ಸಂಘ ಸಂಸ್ಥೆಯವರೊಂದಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಕುಡಿಯುವ ನೀರು ಶೌಚಾಲಯ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಡಿಸೆಂಬರ್ 6 ರಿಂದ 8 ವರೆಗೆ ದತ್ತಜಯಂತಿ ನಡೆಯಲಿದ್ದು, 6 ರಂದು ಅನುಸೂಯ ಜಯಂತಿ ನಡೆಯಲಿದೆ. ಅಂದು ಬೋಳರಾಮೇಶ್ವರ ದೇವಸ್ಥಾನದಿಂದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುವರೆಗೂ ಮೆರವಣಿಗೆ ನಡೆಯಲಿದೆ. ಸುಮಾರು 5 ರಿಂದ 6 ಸಾವಿರ ಜನರು ಸೇರುವ ಮಾಹಿತಿ ಇದೆ. ಡಿ. 7 ರಂದು ನಗರದ ಕಾಮಧೇನು ಗಣಪತಿ ದೇವಸ್ಥಾನ ಆವರಣದಿಂದ ಆಜಾದ್‍ಪಾರ್ಕ್ ವೃತ್ತದವರೆಗೂ ಶೋಭಾಯಾತ್ರೆ ನಡೆಯಲಿದ್ದು, 30 ಸಾವಿರಕ್ಕೂ ಅಧಿಕ ಜನ ಸೇರುವ ಬಗ್ಗೆ ಮಾಹಿತಿ ಇದೆ. ಡಿ. 8ರಂದು ದತ್ತಪೀಠದಲ್ಲಿ ದತ್ತಪಾದುಕೆ ದರ್ಶನ ನಡೆಯಲಿದೆ. ಈ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದತ್ತಪೀಠಕ್ಕೆ ತಾತ್ಕಾಲಿಕ ಹಿಂದೂ ಅರ್ಚಕರ ನೇಮಕ- ಬಿಜೆಪಿಯಿಂದ ಸಂಭ್ರಮಾಚರಣೆ

    ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಕ್ಯಾಮೆರಾ, ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ದತ್ತ ಜಯಂತಿ ಕಾರ್ಯಕ್ರಮಗಳ ದಿನದಂದು ಸಂಚಾರ ವ್ಯವಸ್ಥೆಯಲ್ಲಿ ಕೆಲವೊಂದು ಮಾರ್ಪಡುಗಳನ್ನು ಮಾಡಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡು ಸಮುದಾಯಗಳ ಮುಖಂಡರೊಂದಿಗೆ ಸಭೆ ನಡೆಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟರ್ ಹಾಕದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅನ್ಯಧರ್ಮ ಜನರ ಭಾವನೆಗೆ ಧಕ್ಕೆಯಾಗುಂತಹ ಘೋಷಣೆಗಳನ್ನು ಕೂಗದಂತೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಶ್ಮೀರ, ಅಯೋಧ್ಯೆಯಲ್ಲೂ ಹಿಂದೆ ಸರಿದಿಲ್ಲ, ದತ್ತ ಪೀಠದಲ್ಲೂ ಅದೇ ನಿಲುವು: ಸಿಟಿ ರವಿ

    ಕಾಶ್ಮೀರ, ಅಯೋಧ್ಯೆಯಲ್ಲೂ ಹಿಂದೆ ಸರಿದಿಲ್ಲ, ದತ್ತ ಪೀಠದಲ್ಲೂ ಅದೇ ನಿಲುವು: ಸಿಟಿ ರವಿ

    – ಕಗ್ಗಂಟನ್ನ ಬಿಡಿಸೇ ಬಿಡಿಸ್ತೇವೆ ಅನುಮಾನ ಬೇಡ

    ಚಿಕ್ಕಮಗಳೂರು: ಬಾಬಾಬುಡನ್ ದರ್ಗಾದಲ್ಲಿ ಹಿಮಾಮ್, ಮೌಲ್ವಿ ಯಾರು ಬೇಕಾದರೂ ಹೋಗಿ ಪೂಜೆ ಮಾಡಲಿ, ನಮ್ಮದ್ದೇನು ತಕರಾರಿಲ್ಲ. ಆದರೆ ದತ್ತಪೀಠದಲ್ಲಿ ದತ್ತಾತ್ರೇಯರ ಆರಾಧನೆ ಹಿಂದೂ ಧಾರ್ಮಿಕ ವಿಧಿ ಪ್ರಕಾರ ನಡೆಯಬೇಕು ಎಂಬುದು ನಮ್ಮ ಬಹುದಿನದ ಬೇಡಿಕೆ ಮತ್ತು ಹೋರಾಟ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

    ಜಿಲ್ಲೆಯಲ್ಲಿ ನಡೆಯುತ್ತಿರೋ ದತ್ತ ಜಯಂತಿಯ ಮೊದಲ ದಿನವಾದ ಇಂದಿನ ಅನುಸೂಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಗರದ ಬೋಳರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕಾಮಧೇನು ಗಣಪತಿ ದೇವಾಲಯದವರೆಗೂ ಮೆರವಣಿಗೆಯಲ್ಲಿ ಸಾಗಿ ಬಂದು ದತ್ತಪೀಠದಲ್ಲಿ ನಡೆದ ಹೋಮ-ಹವನದಲ್ಲಿ ಪಾಲ್ಗೊಂಡು ಮಾತನಾಡಿದರು.

    ಅಯೋಧ್ಯೆ-ಕಾಶ್ಮೀರ ಯಾವುದರಲ್ಲೂ ಹಿಂದೆ ಸರಿದಿಲ್ಲ. ದತ್ತಪೀಠದ ವಿಷಯದಲ್ಲೂ ಹಿಂದೆ ಸರಿಯೋ ಪ್ರಶ್ನೆಯೇ ಇಲ್ಲ. ಇದು ಸತ್ಯದ ಪರ ಇರುವ ಹೋರಾಟ. ಕಂದಾಯ ಹಾಗೂ ಮುಜರಾಯಿ ಎಲ್ಲ ದಾಖಲೆಗಳಲ್ಲಿ ದತ್ತಾತ್ರೇಯ ಪೀಠ ಬೇರೆ ಇದೆ. ಬಾಬಾಬುಡನ್ ದರ್ಗಾ ಬೇರೆ ಇದೆ. ಬಾಬಾಬುಡನ್ ಹೆಸರಲ್ಲಿ ದತ್ತಾತ್ರೇಯ ಪೀಠದ ಮೇಲೆ ಅತಿಕ್ರಮಣ ಮಾಡಿರೋದನ್ನ ವಿರೋಧಿಸಿ ಜನಜಾಗೃತಿ ಹಾಗೂ ನ್ಯಾಯಾಲಯದ ಮೂಲಕ ಹೋರಾಟ ನಡೆದಿದೆ ಮಾತೃಶಕ್ತಿ ಜಾಗೃತಿಯ ಮೂಲಕ ದತ್ತಪೀಠದ ಅಂತಿಮ ಹೋರಾಟದಲ್ಲಿ ನಾವು ವಿಜಯ ಸಾಧಿಸುತ್ತೇವೆ ಎಂಬ ನಂಬಿಕೆ ಇದೆ ಎಂದರು.

    ಹತ್ತಾರು ಬಾರಿ ಹೇಳಿದ್ದೇನೆ. ಕೋರ್ಟ್ ಮೂಲ ದಾವೆಯನ್ನ ಎತ್ತಿಹಿಡಿದು ವಕ್ಫ್ ಬೋರ್ಡಿಗೆ ಸೇರಿಸಿದ್ದು ಅಕ್ರಮ ಎಂದು ಹೇಳಿ ವಾಪಸ್ ಮುಜರಾಯಿ ಇಲಾಖೆಗೆ ಸೇರಿಸಿದೆ. ಮಜರಾಯಿಗೆ ಸೇರಿಸಿದ ಬಳಿಕ ಹಿಂದೂ ಅರ್ಚಕರ ನೇಮಕವಾಗಬೇಕು. ನ್ಯಾಯಾಲಯದ ಮುಂದೆ ಇದೆ. ಆ ಕಗ್ಗಂಟನ್ನ ಬಿಡಿಸಿಯೇ ಬಿಡಿಸುತ್ತೇವೆ. ಯಾರಿಗೂ ಅನುಮಾನವೇ ಬೇಡ. ಅದು ನಮ್ಮ ಸಂಕಲ್ಪ. ನಾವು ಅದರಿಂದ ಹಿಂದೆ ಸರಿಯಲ್ಲ ಎಂದರು.

    ಸುಪ್ರೀಂ ಕೋರ್ಟ್ ಹಿಂದೂ ಅರ್ಚಕರ ನೇಮಕಕ್ಕೆ ತೀರ್ಮಾನ ಕೈಗೊಳ್ಳಲು ಮಾತ್ರ ಅಧಿಕಾರ ಕೊಟ್ಟಿದ್ದು. ಆದರೆ ಆ ತೀರ್ಪಿಗೆ ವಿರುದ್ಧವಾಗಿ ನಾಗಮೋಹನ್ ದಾಸ್ ಸಮಿತಿ ಮಾಡಿದ್ದಾರೆ. ನೀವು ಜುಡಿಷಿಯರಿ ಕಮಿಟಿ ಮಾಡಿ ಎಂದು ಹೇಳಿರಲಿಲ್ಲ. ಸುಪ್ರೀಂ ಕೋರ್ಟಿಗೆ ಮುಜರಾಯಿ ಆಯುಕ್ತರು ಸೀಲ್ಡ್ ಕವರ್ ನಲ್ಲಿ ಸುಪ್ರಿಂ ಕೋರ್ಟಿಗೆ ಸಲ್ಲಿಸಿದ್ದರು. ಅದರಲ್ಲಿ ಹಿಂದೂ ಅರ್ಚಕರ ನೇಮಕ ಮಾಡಬೇಕೆಂದು ಇತ್ತು. ಅದಕ್ಕೆ ಸಂಬಂಧಿಸಿದಂತೆ ತೀರ್ಮಾನ ತೆಗೆದುಕೊಳ್ಳಿ ಅಂತ ಮಾತ್ರ ಇತ್ತು. ಅವರು ಹಿಂದೂ ಅರ್ಚಕರ ನೇಮಕ ಮಾಡೋದಕ್ಕಷ್ಟೆ ತೀರ್ಮಾನ ತೆಗೆದುಕೊಳ್ಳಬೇಕಿತ್ತು. ವ್ಯತಿರಿಕ್ತವಾಗಿ ಮಾಡಿದ್ದಾರೆ. ಅದಕ್ಕೆ ಸ್ಟೇ ತೆಗೆದುಕೊಂಡಿದೆ. ಅದರ ಅಂತಿಮ ತೀರ್ಪು ಬರೋದು ಬಾಕಿ ಇದೆ. ಅಂತಿಮ ತೀರ್ಪಿನಲ್ಲಿ ಸತ್ಯದ ಪರ ತೀರ್ಪು ಬರುತ್ತೆ. ನಮಗೆ ವಿಶ್ವಾಸವಿದೆ. ನಮ್ಮ ಪರ ತೀರ್ಪು ಬಂದೇ ಬರುತ್ತೆ, ಸತ್ಯ ನಮ್ಮ ಪರ ಇದೆ ಎಂದರು.

  • ನಮ್ಮ ಅವಧಿಯಲ್ಲೇ ದತ್ತಪೀಠಕ್ಕೆ ಮುಕ್ತಿ: ಶೋಭಾ ಕರಂದ್ಲಾಜೆ

    ನಮ್ಮ ಅವಧಿಯಲ್ಲೇ ದತ್ತಪೀಠಕ್ಕೆ ಮುಕ್ತಿ: ಶೋಭಾ ಕರಂದ್ಲಾಜೆ

    ಚಿಕ್ಕಮಗಳೂರು: ಹೇಗೆ ರಾಮ ಮಂದಿರದ ಕಲ್ಪನೆ ಇತ್ತೋ ಅದು ಇಂದು ಸಕಾರಗೊಂಡಿದೆ. ಅದೇ ರೀತಿ ನಮ್ಮ ದತ್ತಪೀಠದಲ್ಲಿ ದತ್ತಮಂದಿರ ನಿರ್ಮಾಣವಾಗುತ್ತೆ. ನಮ್ಮ ಸರ್ಕಾರದ ಅವಧಿಯಲ್ಲೇ ಈ ಸಮಸ್ಯೆ ಬಗೆಹರಿಯುತ್ತೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

    ಜಿಲ್ಲೆಯಲ್ಲಿ ನಡೆಯುತ್ತಿರುವ ದತ್ತ ಜಯಂತಿಯ ಮೊದಲ ದಿನವಾದ ಇಂದು ಅನುಸೂಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಗರದ ಬೋಳರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕಾಮಧೇನು ಗಣಪತಿ ದೇವಾಲಯದವರೆಗೂ ಮೆರವಣಿಗೆ ಬಡಡೆಸಲಾಯಿತು. ಬಳಿಕ ಶೋಭಾ ಕರಂದ್ಲಾಜೆ ಮಾಧ್ಯಮಗಳ ಜೊತೆ ಮಾತನಾಡಿದರು.

    ಇದೊಂದು ವಿಶೇಷ ಪೀಠ. ಜಗತ್ತಿನಾದ್ಯಂತ ದತ್ತ ಭಕ್ತರಿದ್ದಾರೆ. ಆದರೆ ದತ್ತನ ಪಾದುಕೆ ಇರೋದು ನಮ್ಮ ಚಿಕ್ಕಮಗಳೂರಲ್ಲಿ. ದತ್ತ ಪೀಠ ನಮ್ಮದು, ಇದು ನಮ್ಮದಾಗಬೇಕು. ಇದು ನಮ್ಮ ಸಂಕಲ್ಪ. ನ್ಯಾಯಾಲಯದಲ್ಲಿ ಹಲವು ರೀತಿಯ ತೀರ್ಮಾನಗಳು ಬಂದಿವೆ. ನಮಗೆ ವಿಶ್ವಾಸವಿದೆ ಮುಂದಿನ ದಿನಗಳಲ್ಲಿ ದತ್ತಪೀಠ ನಮ್ಮದಾಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

    ಕೊರೊನಾದಂತ ಮಹಾಮಾರಿ ದೂರವಾಗಬೇಕು, ಈ ದೇಶದಲ್ಲಿ ಸುಭೀಕ್ಷೆ ನೆಲೆಸಬೇಕು. ಅದಕ್ಕಾಗಿ ದತ್ತಾತ್ರೇಯನ ಬಳಿ ಪ್ರಾರ್ಥನೆ ಸಲ್ಲಿಸುತ್ತೇವೆ. ದತ್ತಪೀಠವನ್ನ ಹಿಂದೂಗಳ ಪೀಠವೆಂದು ಘೋಷಿಸಲು ಕಾನೂನಿನ ಅಡೆತಡೆಯಿದೆ. ನಮ್ಮ ಕಾನೂನು ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾನೂನಿನ ಸಲಹೆಯಂತೆ ರಾಜ್ಯ ಸರ್ಕಾರ ನಡೆದುಕೊಳ್ಳೂತ್ತೆ. ನಮ್ಮ ಅವಧಿಯಲ್ಲೇ ದತ್ತಪೀಠದ ಸಮಸ್ಯೆ ಬಗೆಹರಿಯುತ್ತೆ ಎಂದು ವಿಶ್ವಾಸದ ಮಾತುಗಳನ್ನಾಡಿದರು.

    ಎಲ್ಲ ಸಮಸ್ಯೆ ಹಾಗೂ ನ್ಯಾಯಾಲಯದಲ್ಲಿರುವ ಎಲ್ಲ ಅಡೆತಡೆಗಳನ್ನು ದತ್ತ ದೂರಗೊಳಿಸುತ್ತಾನೆ. ಈ ಪೀಠದಲ್ಲಿ ದತ್ತಾತ್ರೇಯ ಮಂದಿರ ನಿರ್ಮಾಣವಾಗುತ್ತೆ. ಬಾಬಾಬುಡನ್‍ಗೆ ಯಾವ ಜಾಗ ಮೀಸಲಿಟ್ಟಿದ್ಯೋ ಆ ಜಾಗದಲ್ಲಿ ಅವರಿಗೆ ಪೂಜೆಯಾಗುವಂತಹದ್ದು ಬರುವ ದಿನಗಳಲ್ಲಿ ಆಗುತ್ತೆ ಎಂದರು.

    ದತ್ತ ಪೀಠದಲ್ಲಿ ದತ್ತ ಜಯಂತಿ ಹಾಗೂ ಅನುಸೂಯ ಜಯಂತಿಯನ್ನು ಆಚರಿಸುತ್ತಿದ್ದೇವೆ. ಈ ವರ್ಷ ಕೋವಿಡ್ ಇರುವ ಕಾರಣ ಕೇವಲ ಪ್ರಮುಖರು ಮಾತ್ರ ಸಂಕೀರ್ತನಾ ಯಾತ್ರೆ ಕೈಗೊಂಡು ದತ್ತಪೀಠಕ್ಕೆ ಹೋಗಬೇಕೆಂದು ತೀರ್ಮಾನವಾಗಿದೆ. ಅನುಸೂಯ ಜಯಂತಿ ಅಂಗವಾಗಿ ರಾಜ್ಯದ ಪ್ರಮುಖ ಮಹಿಳೆಯರು ಚಿಕ್ಕಮಗಳೂರಿಗೆ ಆಗಮಿಸಿದ್ದಾರೆ. ಅನುಸೂಯ ಜಯಂತಿ ಹಾಗೂ ದತ್ತನ ದರ್ಶನ ಮಾಡುತ್ತೇವೆ ಎಂದರು.

    ಮೆರವಣಿಗೆ ಹಾಗೂ ದತ್ತಪೀಠದಲ್ಲಿ ನಡೆದ ಹೋಮ-ಹವನದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ನಟಿ ತಾರಾ ಹಾಗೂ ಮಾಳವಿಕ ಸೇರಿದಂತೆ ವಿವಿಧ ಮುಖಂಡರು ಪಾಲ್ಗೊಂಡಿದ್ದರು.

  • ಚಿಕ್ಕಮಗಳೂರಲ್ಲಿ ದತ್ತಜಯಂತಿ ಸಂಭ್ರಮ- ಕೇಸರಿ ನಾಡಾದ ಕಾಫಿನಾಡು

    ಚಿಕ್ಕಮಗಳೂರಲ್ಲಿ ದತ್ತಜಯಂತಿ ಸಂಭ್ರಮ- ಕೇಸರಿ ನಾಡಾದ ಕಾಫಿನಾಡು

    ಚಿಕ್ಕಮಗಳೂರು: ಕರ್ನಾಟಕದ ಅಯೋಧ್ಯೆ ಎಂದೇ ಖ್ಯಾತಿಯಾಗಿರೋ ಜಿಲ್ಲೆಯ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾದಲ್ಲಿ ದತ್ತ ಜಯಂತಿಯ ಸಂಭ್ರಮ ಮೇಳೈಸಿರುವುದರಿಂದ ಸಂಘ ಪರಿವಾರದ ಕಾರ್ಯಕರ್ತರು ಇಡೀ ನಗರವನ್ನ ಕೇಸರಿಮಯವಾಗಿಸಿದ್ದಾರೆ.

    ಒಟ್ಟು 11 ದಿನದ ಕಾರ್ಯಕ್ರಮಕ್ಕೆ ಈಗಾಗಲೇ ಅಧಿಕೃತ ಚಾಲನೆ ಸಿಕ್ಕಿದೆ. ಡಿಸೆಂಬರ್ 19ರಂದೇ ಮಾಲೆ ಧರಿಸಿರೋ ದತ್ತ ಭಕ್ತರು ವೃತದಲ್ಲಿದ್ದಾರೆ. ಡಿಸೆಂಬರ್ 27 ಅನುಸೂಯ ಜಯಂತಿ, 28 ಸಾಂಕೇತಿಕ ಶೋಭಾ ಯಾತ್ರೆ ಹಾಗೂ 29 ರಂದು ದತ್ತಪೀಠದಲ್ಲಿ ದತ್ತ ಜಯಂತಿ ಹಾಗೂ ದತ್ತ ಪಾದುಕೆ ದರ್ಶನ ನಡೆಯಲಿದೆ.

    ದತ್ತಾತ್ರೇಯನ ಭಕ್ತರು ಇಡೀ ಚಿಕ್ಕಮಗಳೂರು ನಗರವನ್ನ ಕೇಸರಿಮಯವಾಗಿಸಿದ್ದಾರೆ. ಮಧ್ಯರಾತ್ರಿವರೆಗೂ ನಗರದ ಪ್ರಮುಖ ಬೀದಿಗಳಲ್ಲಿ ಕೇಸರಿ ಬ್ಯಾನರ್, ಬಂಟಿಗ್ಸ್ ಕಟ್ಟಿದ್ದಾರೆ. ನಗರದ ಹನುಮಂತಪ್ಪ ವೃತ್ತ, ಎನ್‍ಎಂಸಿ ವೃತ್ತ, ಬೋಳರಾಮೇಶ್ವರ ಸರ್ಕಲ್, ಟೌನ್ ಕ್ಯಾಂಟೀನ್ ಸರ್ಕಲ್, ಎಐಟಿ ವೃತ್ತ ಸೇರಿದಂತ ನಗರದ ಪ್ರಮುಖ ಬೀದಿಗಳನ್ನ ಕಲರ್ ಫುಲ್ ಮಾಡಿದ್ದಾರೆ.

    ಡಿ.27ರಂದು ಅನುಸೂಯ ಪೂಜೆ ಅಂಗವಾಗಿ ಬೆಳಗ್ಗೆ 9.30ಕ್ಕೆ ಮಹಿಳೆಯರಿಂದ ನಗರದ ಬೋಳರಾಮೇಶ್ವರ ದೇವಸ್ಥಾನದಿಂದ ಕಾಮಧೇನು ಗಣಪತಿ ದೇವಸ್ಥಾನದವರೆಗೆ ಸಂಕೀರ್ತನಾ ಯಾತ್ರೆ ನಡೆಯಲಿದೆ. ಈ ಸಂಕೀರ್ತನಾ ಯಾತ್ರೆಯಲ್ಲಿ ಜಿಲ್ಲೆಯ ಪ್ರಸಿದ್ಧ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಾಹಿತಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸೆಲಬ್ರಿಟಿಗಳು ಭಾಗವಹಿಸಲಿದ್ದಾರೆ.

    ಡಿ.28ರಂದು ಮಧ್ಯಾಹ್ನ 2ಗಂಟೆಗೆ ನಗರದ ರತ್ನಗಿರಿ ರಸ್ತೆಯಲ್ಲಿರುವ ಕಾಮಧೇನು ಗಣಪತಿ ದೇವಸ್ಥಾನದಿಂದ ಸಂಕೀರ್ತನಾ ಯಾತ್ರೆ ಆರಂಭಗೊಂಡು ಬಸವನಹಳ್ಳಿ ಮುಖ್ಯರಸ್ತೆ, ಹನುಮಂತಪ್ಪ ವೃತ್ತ, ಎಂ.ಜಿ.ರಸ್ತೆ ಮೂಲಕ ಆಜಾದ್‍ಪಾರ್ಕ್ ವೃತ್ತದಲ್ಲಿ ಮಹಾ ಆರತಿಯ ಕಾರ್ಯಕ್ರಮ ಮೂಲಕ ಕೊನೆಗೊಳ್ಳಲಿದೆ. ಡಿ.29ರಂದು ದತ್ತ ಭಕ್ತರು ಹಾಗೂ ಮಾಲಾಧಾರಿಗಳು ಹೊನ್ನಮ್ಮನ ಹಳ್ಳದಲ್ಲಿ ಸ್ನಾನ ಮಾಡಿ ಕಾಲ್ನಡಿಗೆಯಲ್ಲಿ ಭಜನೆಯೊಂದಿಗೆ ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ಬಳಿಕ ದತ್ತ ಪೀಠದಲ್ಲಿ ಗಣಪತಿ ಹೋಮ, ದತ್ತಹೋಮ, ಧನ್ವಂತರಿ ಹೋಮ ಕಾರ್ಯಕ್ರಮ ನಡೆಯಲಿದೆ.

  • ಮೂರು ದಿನ ಪ್ರವಾಸಿಗರು ಕಾಫಿನಾಡಿಗೆ ನೋ ಎಂಟ್ರಿ..!

    ಮೂರು ದಿನ ಪ್ರವಾಸಿಗರು ಕಾಫಿನಾಡಿಗೆ ನೋ ಎಂಟ್ರಿ..!

    ಚಿಕ್ಕಮಗಳೂರು: ಕಾಫಿನಾಡಲ್ಲಿ ದತ್ತಜಯಂತಿ ಹಿನ್ನೆಲೆಯಲ್ಲಿ ಗಿರಿಶ್ರೇಣಿ ನೋಡಲು ಬರುವ ಪ್ರವಾಸಿಗರನ್ನು ಚಿಕ್ಕಮಗಳೂರು ಜಿಲ್ಲಾಡಳಿತ ಮೂರು ದಿನಗಳ ಕಾಲ ನಿರ್ಬಂಧಿಸಿದೆ.

    ಡಿಸೆಂಬರ್ 21, 22, 23 ರಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತ ಜಯಂತಿ ಆಚರಣೆ ನಡೆಯುತ್ತಿದೆ. ಆದರಿಂದ ಈ ಮೂರು ದಿನಗಳು ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಗಿರಿ ಶ್ರೇಣಿ ಪ್ರವಾಸಿಗರಿಗೆ ಅಲ್ಲಿನ ಜಿಲ್ಲಾಡಳಿತ ನಿರ್ಬಂಧವೇರಿದೆ. ವಿ.ಎಚ್.ಪಿ, ಬಜರಂಗದಳ ಸಂಘಟನೆಗಳ ಕಾರ್ಯಕರ್ತರಿಂದ ಜಿಲ್ಲೆಯಲ್ಲಿ ದತ್ತ ಜಯಂತಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದತ್ತ ಪೀಠಕ್ಕೆ ಆಗಮಿಸುವ ನಿರೀಕ್ಷೆಯಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಭದ್ರತಾ ದೃಷ್ಟಿಯಿಂದ ಗಿರಿಶ್ರೇಣಿ ಪ್ರದೇಶಗಳಿಗೆ ಪ್ರವಾಸಿಗರು ಹೋಗದಂತೆ ನಿರ್ಬಂಧಿಸಲಾಗಿದೆ.

    ದತ್ತ ಜಯಂತಿ ಪ್ರಯುಕ್ತ ದತ್ತ ಪೀಠದಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಪ್ರವಾಸೋದ್ಯಮಕ್ಕೆ ಹೆಸರುವಾಸಿ ಆಗಿರುವುದರಿಂದ ಇಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಇಲ್ಲಿರುವ ಗಿರಿಶ್ರೇಣಿಗಳನ್ನು ವೀಕ್ಷಿಸಿ ಖುಷಿ ಪಡುತ್ತಾರೆ. ಆದರೆ ಮೂರು ದಿನಗಳ ಕಾಲ ಗಿರಿಶ್ರೇಣಿಗಳಿಗೆ ಪ್ರವಾಸಿಗರನ್ನು ನಿರ್ಬಂಧ ಹೇರಿರುವುದರಿಂದ ನಿಸರ್ಗದ ಸೌಂದರ್ಯ ಸವಿಯಲು ಬರುವ ಜನರಿಗೆ ಕೊಂಚ ಬೇಸರವಾಗಲಿದೆ.

    ದತ್ತ ಜಯಂತಿ ಆಚರಣೆ ಪ್ರಯುಕ್ತ ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದು ಎಂದು ಜಿಲ್ಲಾಡಳಿತವು ದತ್ತಪೀಠ ಸೇರಿದಂತೆ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com