Tag: ದಮಯಂತಿ

  • ಮಾತಾ ಅಮೃತಾನಂದಮಯಿ ಅವರ ತಾಯಿ ವಿಧಿವಶ

    ಮಾತಾ ಅಮೃತಾನಂದಮಯಿ ಅವರ ತಾಯಿ ವಿಧಿವಶ

    ತಿರುವನಂತಪುರಂ: ಮಾತಾ ಅಮೃತಾನಂದಮಯಿ (Mata Amritanandamayi) ಅವರ ತಾಯಿ ದಮಯಂತಿ (97) (Damayanthi Amma) ಅವರು ನಿಧನರಾಗಿದ್ದಾರೆ.

    ಸೋಮವಾರ ಮಧ್ಯಾಹ್ನ 2.50ರ ಸುಮಾರಿಗೆ ಕೊಲ್ಲಂನ (Kollam) ಅಮೃತಪುರಿ ಆಶ್ರಮದಲ್ಲಿ (Amritapuri Ashram) ದಮಯಂತಿ ಅವರು ಕೊನೆಯುಸಿರೆಳೆದಿದ್ದು, ಮಂಗಳವಾರ ಸಂಜೆ 4 ಗಂಟೆಗೆ ಅಮೃತಪುರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂ ಸಂಪ್ರದಾಯದಂತೆ ಮರುಮದುವೆಯಾದ್ರು 9 ಮಕ್ಕಳ ತಂದೆ-ತಾಯಿಯಾಗಿರುವ ಮುಸ್ಲಿಂ ದಂಪತಿ

    ದಮಯಂತಿ ಅವರು ಕೊಲ್ಲಂನ ಅಮೃತಪುರಿ ಎಡಮ್ಮನ್ನೆಲ್‍ನ ದಿವಂಗತ ಸುಗುಣಂದನ್ (Sugunandan) ಅವರ ಪತ್ನಿಯಾಗಿದ್ದು, ಇದೀಗ ಕಸ್ತೂರಿ ಭಾಯಿ, ಸುಭಗನ್, ಸುಗುಣಮ್ಮ, ಸಜಿನಿ, ಸುರೇಶ್ ಕುಮಾರ್, ಸತೀಶ್ ಕುಮಾರ್ ಮತ್ತು ಸುಧೀರ್ ಕುಮಾರ್ ಅವರ ಇತರ ಮಕ್ಕಳನ್ನು ಅಗಲಿದ್ದಾರೆ. ಇದನ್ನೂ ಓದಿ: ಇಡಿ ವಿಚಾರಣೆ ಎದುರಿಸಿದ್ದ ಡಿ.ಕೆ ಶಿವಕುಮಾರ್‌ಗೆ ಅನಾರೋಗ್ಯ

    ದಮಯಂತಿ ಅವರ ನಿಧನಕ್ಕೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ (Arif Mohammed Khan) ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಮಾತಾ ಅಮೃತಾನಂದಮಯಿ ದೇವಿಯ ಪ್ರೀತಿಯ ತಾಯಿ ದಮಯಂತಿ ಅಮ್ಮನವರ ನಿಧನದ ಸುದ್ದಿಯಿಂದ ದುಃಖವಾಗಿದೆ. ಅವರ ಅಗಲಿಕೆ ನನ್ನ ಸಂತಾಪ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸೆ.18ರಂದು ‘ದಮಯಂತಿ’ ಚಿತ್ರದ ಟೀಸರ್ ಬಿಡುಗಡೆ

    ಸೆ.18ರಂದು ‘ದಮಯಂತಿ’ ಚಿತ್ರದ ಟೀಸರ್ ಬಿಡುಗಡೆ

    ಶ್ರೀಲಕ್ಷ್ಮೀವೃಷಾದ್ರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನವರಸನ್ ಅವರು ನಿರ್ಮಿಸಿರುವ, ರಾಧಿಕಾ ಕುಮಾರಸ್ವಾಮಿ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ‘ದಮಯಂತಿ’ ಚಿತ್ರದ ಟೀಸರ್ ಇದೇ ತಿಂಗಳ 18ರಂದು ಬಿದುಗಡೆಯಾಗಲಿದೆ.


    ನವರಸನ್ ರಚನೆ ಹಾಗೂ ನಿರ್ದೇಶನದ ಈ ಚಿತ್ರ ಕನ್ನಡ, ತಮಿಳು, ತೆಲುಗು, ಮಲೆಯಾಳಂ ಹಾಗೂ ಹಿಂದಿ ಭಾಷೆ ಸೇರಿ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಹಾರರ್, ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಈಗಾಗಲೇ ಪೂರ್ಣವಾಗಿದೆ. ಬೆಂಗಳೂರು, ಮೈಸೂರು, ಹೈದರಾಬಾದ್ ಮುಂತಾದ ಕಡೆ 67 ದಿನಗಳ ಚಿತ್ರೀಕರಣ ನಡೆದಿದೆ.


    ಆರ್.ಎಸ್.ಗಣೇಶ್ ನಾರಾಯಣ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪಿ.ಕೆ.ಎಚ್ ದಾಸ್ ಅವರ ಛಾಯಾಗ್ರಹಣವಿದೆ. ಮಹೇಶ್ ರೆಡ್ಡಿ ಸಂಕಲನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ರಾಧಿಕಾ ಕುಮಾರಸ್ವಾಮಿ, ಭಜರಂಗಿ ಲೋಕಿ, ಸಾಧು ಕೋಕಿಲ, ತಬಲನಾಣಿ, ಮಿತ್ರ, ನವೀನ್ ಕೃಷ್ಣ, ಹೊನ್ನವಳ್ಳಿ ಕೃಷ್ನ, ರವಿಗೌಡ, ಬಲರಾಜವಾಡಿ, ವೀಣಾಸುಂದರ್, ಕೆಂಪೇಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ದಮಯಂತಿಯ ಟೀಸರ್ ಲಾಂಚ್‍ಗೆ ಭರ್ಜರಿ ತಯಾರಿ!

    ದಮಯಂತಿಯ ಟೀಸರ್ ಲಾಂಚ್‍ಗೆ ಭರ್ಜರಿ ತಯಾರಿ!

    ರಾಧಿಕಾ ಕುಮಾರಸ್ವಾಮಿ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬಾರದೆ ವರ್ಷಗಳೇ ಕಳೆದಿವೆ. ಆದರೆ ಈಗೊಂದು ವರ್ಷದಿಂದೀಚೆಗೆ ಅವರು ನಾಯಕಿಯಾಗಿ ನಟಿಸಿರುವ ದಮಯಂತಿ ಎಂಬ ಚಿತ್ರವೊಂದು ಆಗಾಗ ಸದ್ದು ಮಾಡುತ್ತಿತ್ತು.

    ಪೋಸ್ಟರ್‍ಗಳು ಆಗಾಗ ಬಿಡುಗಡೆಯಾಗುತ್ತಾ ರಾಧಿಕಾ ಅಲ್ಲಿ ಕಾಣಿಸಿಕೊಂಡ ಅವತಾರವೇ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದೂ ಇದೆ. ಈ ಚಿತ್ರವೀಗ ಬಿಡುಗಡೆಯ ಹೊಸ್ತಿಲಲ್ಲಿದೆ. ಸದ್ಯ ದಮಯಂತಿಯ ಟೀಸರ್ ಲಾಂಚ್ ಮಾಡಲು ಚಿತ್ರತಂಡ ತಯಾರಿ ಮಾಡಿಕೊಂಡಿದೆ.

    ನವರಸನ್ ನಿರ್ದೇಶನದಲ್ಲಿ ಮೂಡಿ ಬಂದಿರೋ ದಮಯಂತಿ ಚಿತ್ರದಲ್ಲಿ ರಾಧಿಕಾ ಡಿಫರೆಂಟಾದ ಪಾತ್ರದಲ್ಲಿ ನಟಿಸಿದ್ದಾರೆ. ಇದರ ಸ್ಪಷ್ಟ ಸುಳಿವುಗಳೇ ಪೋಸ್ಟರ್‍ಗಳ ಮೂಲಕ ಕಾಣಿಸಿವೆ. ಇದೀಗ ಚಿತ್ರೀಕರಣ ಮುಗಿಸಿಕೊಂಡಿರೋ ದಮಯಂತಿಯ ಟೀಸರ್ ಲಾಂಚ್ ಆಗೋ ಕಾಲ ಸಮೀಪಿಸಿದೆ. ಈ ತಿಂಗಳ ಅಂತ್ಯದೊಳಗೆ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಅಧಿಕೃತ ದಿನಾಂಕವೂ ದಿನದೊಪ್ಪತ್ತಿನಲ್ಲಿಯೇ ಹೊರ ಬರಲಿದೆ.

    ಈ ಚಿತ್ರ ದೇಶಾದ್ಯಂತ ಸದ್ದು ಮಾಡಲು ತಯಾರಾಗಿದೆ. ಯಾಕೆಂದರೆ ಈ ಚಿತ್ರ ಕೇವಲ ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಮಲೆಯಾಳಂ ಮತ್ತು ಹಿಂದಿಯಲ್ಲಿಯೂ ಬಿಡುಗಡೆಯಾಗಲಿದೆ. ಎಲ್ಲ ಭಾಷೆಗಳ ಎಲ್ಲ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವಂಥಾ ಕಂಟೆಂಟು ಈ ಚಿತ್ರದಲ್ಲಿದೆ ಎಂಬ ಭರವಸೆಯೂ ಚಿತ್ರ ತಂಡದಲ್ಲಿದೆ.

    ಈ ಟೀಸರ್ ಕೂಡಾ ಅಷ್ಟೂ ಭಾಷೆಗಳಲ್ಲಿಯೂ ಬಿಡುಗಡೆಯಾಗಲಿದೆಯಂತೆ. ಹಿಂದಿ, ಮಲೆಯಾಳಂ, ತಮಿಳು ಮತ್ತು ತೆಲುಗಿನ ಸ್ಟಾರ್ ನಟರಿಂದ ಈ ಟೀಸರ್ ಬಿಡುಗಡೆಗೊಳಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಅಂತೂ ದಮಯಂತಿ ಮೂಲಕ ತುಂಬಾನೇ ಭಿನ್ನವಾದ ಪಾತ್ರವೊಂದರ ಮೂಲಕ ರಾಧಿಕಾ ಕುಮಾರಸ್ವಾಮಿ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ.

  • ದಮಯಂತಿ ಚಿತ್ರಕ್ಕೆ ಯಾರೂ ಊಹಿಸಲಾರದಷ್ಟು ಸಂಭಾವನೆ ಪಡೆದ ರಾಧಿಕಾ

    ದಮಯಂತಿ ಚಿತ್ರಕ್ಕೆ ಯಾರೂ ಊಹಿಸಲಾರದಷ್ಟು ಸಂಭಾವನೆ ಪಡೆದ ರಾಧಿಕಾ

    ಬೆಂಗಳೂರು: ಸ್ಯಾಂಡಲ್‍ವುಡ್ ಸ್ವೀಟಿ ರಾಧಿಕಾ ಅವರು ತಮ್ಮ ಮುಂಬರುವ ‘ದಮಯಂತಿ’ ಚಿತ್ರಕ್ಕೆ ಬರೋಬ್ಬರಿ 1 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ.

    ರಾಧಿಕಾ ಅವರು ಬಹುಭಾಷಾ ನಟಿಯಾಗಿದ್ದು, ತೆಲುಗು ಚಿತ್ರದಲ್ಲೂ ನಟಿಸಿದ್ದಾರೆ. ಅರುಂಧತಿ, ಭಾಗಮತಿ ಚಿತ್ರದಲ್ಲಿ ನಟಿ ಅನುಷ್ಕಾ ಶೆಟ್ಟಿ ನಟಿಸಿದ್ದ ಚಿತ್ರದ ರೀತಿಯಲ್ಲೇ ಇದೀಗ ಅಂಥದ್ದೇ ಕಥೆಯ ದಮಯಂತಿ ಸಿನಿಮಾ ತಯಾರಾಗುತ್ತಿದೆ.

    ನಿರ್ದೇಶಕರ ಕಲ್ಪನೆಯ ಪಾತ್ರಕ್ಕೆ ತಕ್ಕಂತೆ ರಾಧಿಕಾ ಹೋಲುತ್ತಿದ್ದರು. ಹೀಗಾಗಿ ರಾಧಿಕಾ ಅವರನ್ನು ಅಪ್ರೋಚ್ ಮಾಡಿದಾಗ ಅವರು ಈ ಸಿನಿಮಾವನ್ನು ಒಪ್ಪಿಕೊಂಡರು. ಸದ್ಯ ದಮಯಂತಿ ಚಿತ್ರದ ಫಸ್ಟ್ ಲುಕ್ ಈಗಾಗಲೇ ರಿಲೀಸ್ ಆಗಿದೆ.

    ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ತಯಾರಾಗುತ್ತಿರುವ ದಮಯಂತಿ ಬಹುಕೋಟಿ ಬಜೆಟ್ ಚಿತ್ರವಾಗಿದ್ದು, ಇದು ನಾಯಕಿ ಪ್ರಧಾನ ಸಿನಿಮಾ ಎಂದು ಹೇಳಲಾಗುತ್ತಿದೆ. ಹೀಗಿರುವಾಗ ನಾಯಕಿ ರಾಧಿಕಾ ಅವರಿಗೆ 1 ಕೋಟಿ ರೂ. ಸಂಭಾವನೆ ನೀಡಲಾಗಿದೆ ಎನ್ನಲಾಗಿದೆ.

    ದಮಯಂತಿ ಚಿತ್ರ ನಿರ್ಮಾಪಕ, ನಿರ್ದೇಶಕ ನವರಸನ್ ಆರಂಭದಲ್ಲಿ ಬಾಹುಬಲಿಯಲ್ಲಿ ಅಭಿನಯಿಸಿದ್ದ ಕನ್ನಡತಿ ಅನುಷ್ಕಾ ಶೆಟ್ಟಿ ಅವರನ್ನು ಸಂಪರ್ಕಿಸಿದ್ದರಂತೆ. ಆದರೆ ಅನುಷ್ಕಾ ಶೆಟ್ಟಿ 2 ವರ್ಷದ ಕಾಲ್ ಶೀಟ್ ಫುಲ್ ಆಗಿದ್ದ ಕಾರಣ ಅಭಿನಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರಂತೆ. ಹೀಗಾಗಿ ಈ ಚಿತ್ರಕ್ಕೆ ರಾಧಿಕಾ ಅವರೇ ಬೇಕೆಂದು ತೀರ್ಮಾನಿಸಿ 80 ಲಕ್ಷ ಮುಂಗಡ ನೀಡಿದ್ದರು ಎಂದು ಹೇಳಲಾಗುತ್ತಿದೆ. ಸದ್ಯ 1 ಕೋಟಿ ರೂ. ಸಂಭಾವನೆ ಪಡೆಯುವ ಮೂಲಕ ರಾಧಿಕಾ ಸ್ಯಾಂಡಲ್‍ವುಡ್‍ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆದ ನಟಿಯರ ಲಿಸ್ಟ್‍ನಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv