Tag: ದಲಿತ ಪೂಜಾರಿ

  • ಈ ಪೂಜಾರಿಯ ಪಾದ ಸ್ಪರ್ಶ ಮಾಡಿದರೆ ಇಷ್ಟಾರ್ಥ ಸಿದ್ಧಿ – ಅರಸೀಕೆರೆಯಲ್ಲಿ ವಿಶಿಷ್ಟ ಆಚರಣೆ

    ಈ ಪೂಜಾರಿಯ ಪಾದ ಸ್ಪರ್ಶ ಮಾಡಿದರೆ ಇಷ್ಟಾರ್ಥ ಸಿದ್ಧಿ – ಅರಸೀಕೆರೆಯಲ್ಲಿ ವಿಶಿಷ್ಟ ಆಚರಣೆ

    ದಾವಣಗೆರೆ: ಈ ಶತಮಾನದಲ್ಲಿಯೂ ಕೆಲವು ಭಾಗಗಳಲ್ಲಿ ದಲಿತರನ್ನು ದೇವಸ್ಥಾನದ ಒಳಗೆ ಬಿಟ್ಟುಕೊಳ್ಳದ ಪರಿಸ್ಥಿತಿ ಇದೆ. ಆದರೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಅರಸೀಕೆರೆಯಲ್ಲಿ ಮಾತ್ರ ದಲಿತ ಪೂಜಾರಿಯ ಪಾದ ಸ್ಪರ್ಶಕ್ಕೆ ಹಲವು ಜನ ಕಾಯುತ್ತಿರುವ ವಿಶಿಷ್ಟ ಆಚರಣೆಯಿದೆ.

    ದಲಿತ ಪೂಜಾರಿ ಪಾದ ಸ್ಪರ್ಶ ಮಾಡಲು ಕಿಲೋಮೀಟರ್ ಗಟ್ಟಲೇ ದಾರಿಯುದ್ದಕ್ಕೂ ಸಾವಿರಾರು ಭಕ್ತರು ಮಲಗಿ ಕಾಯುತ್ತಿರುತ್ತಾರೆ. ಭಕ್ತರ ಮೇಲೆ ಆ ದಲಿತ ಪೂಜಾರಿ ನಡೆದರೆ ಅವರ ಎಲ್ಲ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಅದರ ಜೊತೆಗೆ ಪಾಪ ಕಳೆಯುತ್ತದೆ ಎನ್ನುವ ನಂಬಿಕೆ ಇಲ್ಲಿನ ಜನಗಳಿಗಿದೆ.

    ಈ ರೀತಿಯ ವಿಶಿಷ್ಟ ಆಚರಣೆ ಅರಸೀಕೆರೆ ದಂಡಿ ದುಗ್ಗಮ್ಮ ಜಾತ್ರೆಯಲ್ಲಿ ಅನಾದಿಕಾಲದಿಂದಲೂ ನಡೆದುಕೊಂಡು ಬಂದಿರುವ ಆಚಾರವಾಗಿದೆ. ಕಾರ್ತಿಕ ನಂತರದ ಅಮಾವಾಸ್ಯೆ ದಿನದಂದು ಈ ಜಾತ್ರೆ ನಡೆಯಲಿದ್ದು, ಬೆಳಗ್ಗಿನ ಜಾವ ದಲಿತ ಪೂಜಾರಿ ಗಂಗೆ ಪೂಜೆ ಸಲ್ಲಿಸಿ ದೇವರ ಮೂರ್ತಿಯನ್ನು ಹೊತ್ತು ಸಾಗುತ್ತಾರೆ. ಊರ ಹೊರಗೆ ಗಂಗೆಪೂಜೆ ಮುಗಿಸಿ ದಂಡಿ ದುಗ್ಗಮ್ಮನ ಮೂರ್ತಿಯನ್ನು ಹೊತ್ತು ಎರಡು ಕಿಲೋಮೀಟರ್ ನಡೆಯುತ್ತಾರೆ. ಇದನ್ನೂ ಓದಿ: 30 ದೇಶಗಳ ಅನಿವಾಸಿ ಕನ್ನಡಿಗರಿಂದ ಇಂದು ‘ಎನ್ಆರ್‌ಐ ಅಪೀಲ್ ಡೇ’ ಟ್ವಿಟ್ಟರ್ ಅಭಿಯಾನ

    ಈ ಎರಡು ಕಿಲೋಮೀಟರ್ ಉದ್ದಕ್ಕೂ ಭಕ್ತರು ಅಡ್ಡಲಾಗಿ ಮಲಗುತ್ತಾರೆ. ಭಕ್ತರ ಮೇಲೆಯೇ ಪೂಜಾರಿ ನಡೆದು ದೇವಸ್ಥಾನ ಸೇರುತ್ತಾರೆ. ಸಾವಿರಾರು ಜನರು ಈ ರೀತಿ ತಮ್ಮ ಹರಕೆಯನ್ನು ತೀರಿಸಿಕೊಳ್ಳುತ್ತಾರೆ. ದಲಿತ ಪೂಜಾರಿಯ ಪಾದಸ್ಪರ್ಶ ಮಾಡಿದರೆ ಒಳಿತಾಗುತ್ತದೆ ಎನ್ನುವ ವಾಡಿಕೆ ಈಗಲೂ ಕೂಡ ನಡೆದುಕೊಂಡು ಬಂದಿದೆ. ಅಲ್ಲದೆ ದಂಡಿ ದುಗ್ಗಮ್ಮ ದೇವಿಗೆ ಜಾತ್ರೆಯಲ್ಲಿ ಜಾನುವಾರುಗಳನ್ನು ದೇವಸ್ಥಾನ ಬಳಿ ಪ್ರದಕ್ಷಿಣೆ ಹಾಕಿಸಿದರೆ ಅವುಗಳಿಗೆ ಯಾವುದೇ ರೋಗ ತಗುಲುವುದಿಲ್ಲ ಎನ್ನುವ ನಂಬಿಕೆ ಇದೆ. ಇದನ್ನೂ ಓದಿ: ಓಮಿಕ್ರಾನ್‌ ಸ್ಫೋಟ – ಬೆಂಗಳೂರಿನಲ್ಲಿ ಲಾಕ್‌ಡೌನ್‌ ಸುಳಿವು ನೀಡಿದ ಸಚಿವ ಆರ್‌.ಅಶೋಕ್‌

  • ದಲಿತ ಪೂಜಾರಿಯೇ ಇಲ್ಲಿ ದೇವರು, ಪಾದ ಸ್ಪರ್ಶಕ್ಕಾಗಿ ನೆಲದ ಮೇಲೆ ಹಾಸಿಗೆಯಾದ ಭಕ್ತರು

    ದಲಿತ ಪೂಜಾರಿಯೇ ಇಲ್ಲಿ ದೇವರು, ಪಾದ ಸ್ಪರ್ಶಕ್ಕಾಗಿ ನೆಲದ ಮೇಲೆ ಹಾಸಿಗೆಯಾದ ಭಕ್ತರು

    ದಾವಣಗೆರೆ: ದಲಿತರು ಅಂದರೇ ಅಸ್ಪೃಶ್ಯರು, ತುಳಿತಕ್ಕೊಳಗಾದವರು ಅನ್ನುವ ಮಾತಿದೆ. ಆದರೆ ಹರಪ್ಪನಹಳ್ಳಿ ತಾಲೂಕಿನ ಅರಸೀಕೆರೆಯಲ್ಲಿ ದಲಿತರೇ ಇಲ್ಲಿನ ಭಕ್ತರಿಗೆ ದೇವರು. ಅವರ ಪಾದ ಸ್ಪರ್ಶಕ್ಕಾಗಿ ಸಾವಿರಾರು ಭಕ್ತರು ನೆಲದ ಮೇಲೆ ಹಾಸಿಗೆಯಾಗುತ್ತಾರೆ. ಪಾದವನ್ನು ನೆಲಕ್ಕೆ ಮುಟ್ಟಿಸದೇ ಬೆನ್ನ ಮೇಲೆ ನಡೆದರೆ ಭಕ್ತರ ಇಷ್ಟಾರ್ಥ ಸಿದ್ದಿಯಾಗುತ್ತದೆ ಎನ್ನುವುದು ಇಲ್ಲಿನ ಭಕ್ತರ ನಂಬಿಕೆಯಾಗಿದೆ.

    ಗ್ರಾಮದ ಶಕ್ತಿ ದೇವತೆ ದಂಡಿ ದುಗ್ಗಮ್ಮ ದೇವಿಯ ಕಾರ್ತಿಕೋತ್ಸವದ ಅಂಗವಾಗಿ ಪ್ರತಿ ವರ್ಷ ನಡೆಯುವ ಜಾತ್ರಾ ಮಹೋತ್ಸವದಲ್ಲಿ ದಲಿತ ಪೂಜಾರಿಗಳು ಭಕ್ತರ ಬೆನ್ನಮೇಲೆ ನಡೆಯೋ ಪದ್ಧತಿ ಜಾರಿಯಲ್ಲಿದೆ. ಇಲ್ಲಿ ದಲಿತ ಪೂಜಾರಿಗಳಿಗೆ ದೇವರ ಸ್ಥಾನ ನೀಡಲಾಗಿದ್ದು, ದೇವರ ಪಾದ ನೆಲಕ್ಕೆ ಸ್ಪರ್ಶ ಆಗಬಾರದು ಎಂದು ಜಾತ್ರೆಗೆ ಬಂದ ಸಾವಿರಾರು ಭಕ್ತರು ತಮ್ಮ ಬೆನ್ನನ್ನೇ ಹಾಸಿಗೆ ಮಾಡಿಕೊಳ್ಳುತ್ತಾರೆ. ಪೂಜಾರಿ ತಮ್ಮ ಬೆನ್ನಮೇಲೆ ನಡೆದರೆ ಒಳಿತಾಗುತ್ತೇ ಅನ್ನೋದು ಭಕ್ತರ ನಂಬಿಕೆ. ಹಾಗಾಗಿ ಶಾಸಕರು ಹಾಗೂ ಸಂಸದರು ಪ್ರಥಮ ಪೂಜೆ ಸಲ್ಲಿಸಿ ದಲಿತ ಪೂಜಾರಿಯ ಆಶೀರ್ವಾದ ಪಡೆಯುತ್ತಾರೆ. ನಂತರ ದಲಿತ ಪೂಜಾರಿಗಳು ಸುಮಾರು ಎರಡು ಕಿಲೋಮೀಟರ್ ದೂರ ಭಕ್ತರ ಬೆನ್ನಮೇಲೆ ನಡೆದುಕೊಂಡು ದೇವಸ್ಥಾನಕ್ಕೆ ಹೋಗ್ತಾರೆ.

    ಆಧುನಿಕ ಕಾಲದಲ್ಲಿ ದೇವರು ಎನ್ನುವ ನಂಬಿಕೆ ಮಾಯವಾಗುತ್ತಿರುವಾಗ ಇಂತಹ ಆಚರಣೆ ಯುವ ಪೀಳಿಗೆಗೆ ಅದರ್ಶವಾಗಲಿದೆ. ಸರ್ವ ಧರ್ಮಗಳನ್ನು ಒಂದೇ ರೀತಿಯಾಗಿ ನೋಡುವಂತಹ ವಾತವರಣ ಇಲ್ಲಿ ಸೃಷ್ಠಿಯಾಗಿದೆ. ದಲಿತ ವ್ಯಕ್ತಿಯೊಬ್ಬ ದೇವತೆಗೆ ಪೂಜಿಸಲ್ಲಿಸಿ ಅ ದೇವರನ್ನು ತಲೆ ಮೇಲೆ ಹೊತ್ತುಕೊಂಡು ಜನರ ಮೇಲೆ ನಡೆದಾಡಿದರೆ ಒಳಿತಾಗುತ್ತದೆ ಎನ್ನುವ ನಂಬಿಕೆ ಭಕ್ತರಲ್ಲಿದೆ. ನಾವೆಲ್ಲರೂ ಒಂದೇ ತಾಯಿ ಮಕ್ಕಳು, ನಮ್ಮಲ್ಲಿ ಯಾವುದೇ ಬೇಧಭಾವ ಇಲ್ಲ ಅನ್ನೋದಕ್ಕೆ ಈ ಆಚರಣೆಯೇ ಸಾಕ್ಷಿಯಾಗಿದೆ.

    ಇಡೀ ರಾಜ್ಯದಲ್ಲಿ ದಂಡಿ ದುಗ್ಗಮ್ಮ ದೇವಿಗೆ ಮಾತ್ರ ದಲಿತ ಪೂಜಾರಿ ಇರೋದು ಇಲ್ಲಿನ ವಿಶೇಷ. ದಲಿತ ಪೂಜಾರಿ ಪಾದ ನಮಗೆ ಸ್ಪರ್ಶವಾದರೆ ನಾವೇ ಭಾಗ್ಯವಂತರು ಅನ್ನೋ ನಂಬಿಕೆ ಇಲ್ಲಿನ ಭಕ್ತರದ್ದಾಗಿದೆ. ಏನೇ ಆಗಲಿ ಆಧುನಿಕ ಯುಗದಲ್ಲಿಯೂ ಇಂತಹ ಆಚರಣೆಗಳೂ ಇನ್ನೂ ಜೀವಂತವಾಗಿದ್ದು ನಮ್ಮ ಸಂಸ್ಕೃತಿಯನ್ನು ಉಳಿಸುವ ಕೆಲಸ ಮಾಡುತ್ತಿರೋದಂತೂ ಸತ್ಯ.