Tag: ದಲಿತ ಸಮಾವೇಶ

  • ದಲಿತ ಸಮಾವೇಶಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಬ್ರೇಕ್‌ – ʻಹಾಸನ ಮಾಡೆಲ್ʼ ಅನುಸರಿಸಲು ಸೂಚನೆ

    ದಲಿತ ಸಮಾವೇಶಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಬ್ರೇಕ್‌ – ʻಹಾಸನ ಮಾಡೆಲ್ʼ ಅನುಸರಿಸಲು ಸೂಚನೆ

    ಬೆಂಗಳೂರು/ನವದೆಹಲಿ: ಕಳೆದ ಒಂದೂವರೆ ಎರಡು ತಿಂಗಳಿಂದ ರಾಜ್ಯ ರಾಜಕಾರಣದಲ್ಲಿ ನವೆಂಬರ್ ಮಹಾಕ್ರಾಂತಿಯ ಚರ್ಚೆ ಆಗ್ತಲೇ ಇದೆ. ನವೆಂಬರ್ ಆರಂಭಕ್ಕೆ ಬಾಕಿ ಇರೋದು ಇನ್ನೆರಡೇ ದಿನ. ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯೋ? ಸಂಪುಟ ಪುನಾರಚನೆಯೋ? ಅನ್ನೋ ಕುತೂಹಲ ಹೆಚ್ಚುತ್ತಲೇ ಇದೆ. ಈ ನಡುವೆಯೇ ದಲಿತ ಸಮಾವೇಶ ಅಸ್ತ್ರಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್‌ ಹಾಕಿದೆ.

    ಸಮಾವೇಶ ನಡೆಸುವುದಿದ್ದರೆ, ಹಾಸನ ಸಮಾವೇಶ ಮಾಡಲ್ ಅನುಸರಿಸುವಂತೆ ಎಐಸಿಸಿ ಸೂಚನೆ ನೀಡಿದೆ. ಜೊತೆಗೆ ದಲಿತ ಸಮಾವೇಶ ನಡೆಸುವುದಾದರೆ ನಡೆಸಿ, ಆದ್ರೆ ಪಕ್ಷದ ವೇದಿಕೆಯಲ್ಲಿ, ಪಕ್ಷದ ಬ್ಯಾನರ್ ನಲ್ಲೇ ನಡೆಸಿ ಅಂತ ಹೇಳಿದೆ. ಈ ಬಗ್ಗೆ ಪರಮೇಶ್ವರ್ ಸೇರಿದಂತೆ ದಲಿತ ಸಚಿವರಿಗೆ ಹೈಕಮಾಂಡ್ ನಿಂದ ನೇರ ಸಂದೇಶ ರವಾನೆ ಮಾಡಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

    ಹಾಸನ ಸಮಾವೇಶವನ್ನ ಹೇಗೆ ಪಕ್ಷದ ವೇದಿಕೆಯಲ್ಲಿ ಮಾಡಲಾಯ್ತೋ ಅದೇ ರೀತಿ ದಲಿತ ಸಮಾವೇಶವೂ ಪಕ್ಷದ ವೇದಿಕೆಯಲ್ಲಿ ಆಯೋಜಿಸಿ. ಅಗತ್ಯವಿದ್ದರೆ ಎಐಸಿಸಿಯಿಂದಲೇ ಸಮಾವೇಶ ಆಯೋಜನೆಗೆ ಪದಾಧಿಕಾರಿಗಳನ್ನ ನೇಮಕ ಮಾಡುತ್ತೇವೆ ಎಂದು ಹೇಳಿದೆ. ಈ ಮೂಲಕ ಪ್ರತ್ಯೇಕ ಶಕ್ತಿ ಪ್ರದರ್ಶನಕ್ಕೆ ಮುಂದಾದ ದಲಿತ ಸಚಿವರಿಗೆ ಹೈಕಮಾಂಡ್ ಮೂಗುದಾರ ಹಾಕಿದೆ.

  • ದಲಿತ ಸಮಾವೇಶ ಮಾಡಬೇಡಿ ಅಂತ ಹೈಕಮಾಂಡ್ ಹೇಳಿಲ್ಲ: ಮುನಿಯಪ್ಪ

    ದಲಿತ ಸಮಾವೇಶ ಮಾಡಬೇಡಿ ಅಂತ ಹೈಕಮಾಂಡ್ ಹೇಳಿಲ್ಲ: ಮುನಿಯಪ್ಪ

    ಬೆಂಗಳೂರು: ದಲಿತ ಸಮಾವೇಶ (Dalit Conference) ಮಾಡಬೇಡಿ ಎಂದು ಹೈಕಮಾಂಡ್ ಹೇಳಿಲ್ಲ. ಹೈಕಮಾಂಡ್ ಒಪ್ಪಿದರೆ ದಲಿತ ಸಮಾವೇಶ ಮಾಡೋದಾಗಿ ಸಚಿವ ಮುನಿಯಪ್ಪ (KH Muniyappa) ತಿಳಿಸಿದ್ದಾರೆ.

    ದಲಿತ ಸಮಾವೇಶ ಮಾಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಮಾವೇಶ ಮಾಡಬೇಡಿ ಅಂತ ಹೈಕಮಾಂಡ್ ಏನು ಹೇಳಿಲ್ಲ. ಸಮಾವೇಶ ಮಾಡಬೇಕು ಅಂತ ರಾಜಣ್ಣ, ಪರಮೇಶ್ವರ್ ಸೇರಿ ಹಲವರು ಮನವಿ ಮಾಡಿದ್ದಾರೆ. ಈ ಹಿಂದೆ ಚಿತ್ರದುರ್ಗದಲ್ಲಿ ಮಾಡಿದ್ದ ಎಸ್ಸಿ-ಎಸ್ಟಿ ಸಮಾವೇಶ ಯಶಸ್ವಿಯಾಗಿತ್ತು. ಅದರಿಂದ ನಮಗೆ ಹೆಚ್ಚು ಲಾಭ ಆಗಿತ್ತು. ಚಿತ್ರದುರ್ಗದಲ್ಲಿ ಸಮಾವೇಶ ಮಾಡಬೇಕು ಎಂದು ಹೈಕಮಾಂಡ್ ನಾಯಕರೇ ಹೇಳಿದ್ದರು. ಸಮಾವೇಶ ಮಾಡಿ ಅದು ನಮಗೆ ಯಶಸ್ವಿಯಾಗಿತ್ತು. ಹೀಗಾಗಿ ಅಭಿನಂದನೆ ಹೆಸರಿನಲ್ಲಿ ಸಮಾವೇಶ ಮಾಡಬೇಕು ಅಂತ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಸಾಕ್ಷ್ಯಾಧಾರಗಳ ಕೊರತೆ; ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌

    ಸಮಾವೇಶ ಮಾಡುವ ಬಗ್ಗೆ ಹೈಕಮಾಂಡ್ ಮನವಿ ಮಾಡಲಾಗಿದೆ. ಸಮಾವೇಶ ಮಾಡೋದು ಅವಶ್ಯಕತೆ ಇದೆ. ಸಮಾವೇಶ ಮಾಡುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದರು. ಇದನ್ನೂ ಓದಿ: ಅರ್ಹತೆ ಇಲ್ಲದೇ ಬಿಪಿಎಲ್ ಕಾರ್ಡ್ ಪಡೆದವರಿಗೆ ದಂಡ ಪ್ರಯೋಗ: ಮುನಿಯಪ್ಪ