Tag: ದಲೇರ್ ಮೆಹಂದಿ

  • ಪಂಜಾಬಿ ಖ್ಯಾತ ಗಾಯಕ ದಲೇರ್ ಮೆಹಂದಿಗೆ ಎರಡು ವರ್ಷ ಜೈಲು ಶಿಕ್ಷೆ

    ಪಂಜಾಬಿ ಖ್ಯಾತ ಗಾಯಕ ದಲೇರ್ ಮೆಹಂದಿಗೆ ಎರಡು ವರ್ಷ ಜೈಲು ಶಿಕ್ಷೆ

    ಬಾಲಿವುಡ್ ನ ಖ್ಯಾತ ಗಾಯಕ ದಲೇರ್ ಮೆಹಂದಿಗೆ ಮಾನವ ಕಳ್ಳಸಾಗಣೆ ಸಂಬಂಧಿಸಿದ ಪ್ರಕರಣಕ್ಕೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. 2003ರ ಪ್ರಕರಣಕ್ಕೆ ಸಂಬಂಧಿಸಿದ ಶಿಕ್ಷೆ ಇದಾಗಿದ್ದು, ಪಟಿಯಾಲ ನ್ಯಾಯಾಲಯವು ಶಿಕ್ಷೆಗೆ ಆದೇಶಿಸಿದೆ.

    ಮಾನವ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ದಲೇರ್ ಮೆಹಂದಿ ದೋಷಿಯೆಂದು ಸಾಬೀತಾಗುತ್ತಿದ್ದಂತೆಯೇ ದಲೇರಿ ಭಾವುಕರಾಗಿದ್ದರು. 2003ರಲ್ಲಿ ದಲೇರ್ ಮೆಹಂದಿ ಮತ್ತು ಆತನ ಸಹೋದರ ಶಂಶೇರ್ ಸಿಂಗ್ ವಿರುದ್ಧ ಒಟ್ಟು 31 ಪ್ರಕರಣಗಳು ದಾಖಲಾಗಿದ್ದವು. ಇವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈ ಶಿಕ್ಷೆಯ ವಿರುದ್ಧ ಅವರು ಮೇಲ್ಮನವಿ ಸಲ್ಲಿಸಿದ್ದರು. ಪಟಿಯಾಲ ಜಿಲ್ಲಾ ನ್ಯಾಯಾಲಯವು ಅದನ್ನು ವಜಾಗೊಳಿಸಿದೆ. ಇದನ್ನೂ ಓದಿ:ರಾಮ್ ಗೋಪಾಲ್ ವರ್ಮಾ ‘ಲಡಕಿ’ ನೋಡಿ ಬೆಚ್ಚಿ ಬಿದ್ದರಂತೆ ಸೆನ್ಸಾರ್ ಟೀಮ್

    19 ವರ್ಷಗಳ ಹಿಂದೆ ದಲೇರ್ ಮತ್ತು ಸಹೋದರ ಜನರನ್ನು ಅಕ್ರಮವಾಗಿ ವಿದೇಶಕ್ಕೆ ಕಳುಹಿಸಲು ಹಣ ತಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಮಾನವ ಕಳ್ಳಸಾಗಣೆ ಮತ್ತು ಪಿತೂರಿಗಾಗಿ ಅವರ ಮೇಲೆ ಆರೋಪ ಹೊರಿಸಲಾಗಿತ್ತು. 2018ರಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಜಾಮೀನಿನ ಮೇಲೆ ಬಿಡುಗಡೆಯಾಗಿ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಆ ಮೇಲ್ಮನಿವಿ ಕೂಡ ವಜಾಗೊಂಡಿದ್ದು, ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಎತ್ತಿ ಹಿಡಿದಿದೆ.

    Live Tv
    [brid partner=56869869 player=32851 video=960834 autoplay=true]

  • ಪಂಜಾಬಿ ಪಾಪ್ ಸಿಂಗರ್ ದಲೇರ್ ಮೆಹಂದಿ ಬಿಜೆಪಿಗೆ ಸೇರ್ಪಡೆ

    ಪಂಜಾಬಿ ಪಾಪ್ ಸಿಂಗರ್ ದಲೇರ್ ಮೆಹಂದಿ ಬಿಜೆಪಿಗೆ ಸೇರ್ಪಡೆ

    ನವದೆಹಲಿ: ನಟ ಸನ್ನಿ ಡಿಯೋಲ್ ಬೆನ್ನಲ್ಲೇ ಖ್ಯಾತ ಪಂಜಾಬಿ ಪಾಪ್ ಸಿಂಗರ್ ದಲೇರ್ ಮೆಹಂದಿ ಅವರು ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ಕೇಂದ್ರ ಸಚಿವ ವಿಜಯ್ ಗೋಯಲ್ ಹಾಗೂ ದೆಹಲಿಯ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಅವರ ಸಮ್ಮುಖದಲ್ಲಿ ದಲೇರ್ ಮೆಹಂದಿ ಬಿಜೆಪಿ ಸೇರಿದರು. ದಲೇರ್ ಮೆಹಂದಿ ಅವರು ತಮ್ಮ ಮೊದಲ ಆಲ್ಬಂ ‘ಬೋಲೊ ತಾರಾ ರಾ’ ಮೂಲಕ ಪ್ರಖ್ಯಾತರಾಗಿರುವ ದಲೇರ್ ಮೆಹಂದಿ ಹಲವು ಹಿಂದಿ ಸಿನಿಮಾಗಳಿಗೆ ಹಾಡಿದ್ದಾರೆ.

    ದಲೇರ್ ಮೆಹಂದಿ ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಅಭಿವೃದ್ಧಿಯತ್ತ ಕೊಂಡೆಯ್ಯುತ್ತಿದ್ದಾರೆ. ಹೀಗಾಗಿ ಈ ಬಾರಿ ಬಿಜೆಪಿಗೆ ಎಲ್ಲರೂ ಬೆಂಬಲ ನೀಡಬೇಕು ಎಂದು ಮನವಿ ಮಾಡಿಕೊಂಡರು.

    ಈ ವೇಳೆ ವಾಯುವ್ಯ ದೆಹಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹನ್ಸ್ ರಾಜ್ ಹನ್ಸ್, ಚಾಂದನಿ ಚೌಕ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ್ ಹಾಗೂ ಮಾಜಿ ಕ್ರಿಕೆಟರ್, ಪೂರ್ವ ದೆಹಲಿ ಕ್ಷೇತ್ರದ ಅಭ್ಯರ್ಥಿ ಗೌತಮ್ ಗಂಭೀರ್ ಭಾಗಿಯಾಗಿದ್ದರು.

    ಈ ಮೂಲಕ ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಭಾರೀ ಸಂಖ್ಯೆಯಲ್ಲಿ ಸೆಲೆಬ್ರಿಟಿಗಳು ರಾಜಕೀಯಕ್ಕೆ ಸೇರುತ್ತಿದ್ದಾರೆ. ನಟಿ ಜಯಪ್ರದಾ, ಕ್ರಿಕೆಟರ್ ಗೌತಮ್ ಗಂಭೀರ್, ನಟ ಸನ್ನಿ ಡಿಯೋಲ್ ಬಿಜೆಪಿ ಮನೆ ಸೇರಿದ್ದರೆ, ನಟಿ ಊರ್ಮಿಳಾ ಮಾತೊಂಡ್ಕರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.