Tag: ದಲೈಲಾಮ

  • 30 ದಿನಗಳ ವಿಶ್ರಾಂತಿಗಾಗಿ ಮೈಸೂರಿನ ಬೈಲಕುಪ್ಪೆಗೆ 14ನೇ ದಲೈಲಾಮ ಆಗಮನ!

    30 ದಿನಗಳ ವಿಶ್ರಾಂತಿಗಾಗಿ ಮೈಸೂರಿನ ಬೈಲಕುಪ್ಪೆಗೆ 14ನೇ ದಲೈಲಾಮ ಆಗಮನ!

    ಮಡಿಕೇರಿ: ಟಿಬೆಟಿಯನ್ನರ ಸಾಂಪ್ರದಾಯಿಕ ಧರ್ಮಗುರುಗಳಾದ 14ನೇ ದಲೈಲಾಮ (14th Dalai Lama) ಅವರು 30 ದಿನಗಳ ವಿಶ್ರಾಂತಿಗಾಗಿ ಬೈಲಕುಪ್ಪೆಯ ಟಿಬೆಟಿಯನ್‌ ಕ್ಯಾಂಪ್‌ಗೆ (Tibetan Camp) ಆಗಮಿಸಿದ್ದಾರೆ.

    ಭಾನುವಾರ ಮಧ್ಯಾಹ್ನ ಬೆಂಗಳೂರಿನಿಂದ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿ, ಬೈಲಕುಪ್ಪೆಯ 4ನೇ ಕ್ಯಾಂಪಿನಲ್ಲಿರುವ ಎಲಿಫ್ಯಾಡ್‌ಗೇ ಸುರಕ್ಷಿತವಾಗಿ ಬಂದಿಳಿದರು.

    ದಲೈಲಾಮ ಅವರು ಆಗಮಿಸುತ್ತಿದ್ದಂತೆ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಟಿಬೇಟಿಯನ್ನರು, 6 ಕಿಮೀ ರಸ್ತೆ ಯುದ್ದಕ್ಕೂ ಟಿಬೆಟಿಯನ್ ಮಾದರಿಯ ಉಡುಪುಗಳನ್ನು ಧರಿಸಿ ಬೆಳಗ್ಗೆ 6 ಗಂಟೆಯಿಂದಲೇ ತಮ್ಮ ನೆಚ್ಚಿನ ಗುರುಗಳ ದರ್ಶನಕ್ಕೆ ಕಾದುಕುಳಿತಿದ್ದರು.

    ಜೆಡ್ ಪ್ಲಸ್ ಭದ್ರತೆ ಹೊಂದಿರುವ ದಲೈಲಾಮ ಅವರು ಆಗಮಿಸುತ್ತಿದ್ದಂತೆ, ಸುಮಾರು 250ಕ್ಕೂ ಹೆಚ್ಚು ಪೊಲೀಸ್ ಭದ್ರತೆಯಲ್ಲಿ ಎಲಿಫ್ಯಾಡ್ ನಿಂದ ಕಾರಿನ ಮುಖಾಂತರ ಲಕ್ಷ್ಮಿಪುರ ಗ್ರಾಮದಲ್ಲಿರುವ ತಶಿಲಾಂಪು ದೇವಸ್ಥಾನಕ್ಕೆ ತೆರಳಿದರು. ಈ ವೇಳೆ ಬೌದ್ಧ ಬಿಕ್ಕುಗಳು ಬಗೆ-ಬಗೆಯ ಹೂಗಳನ್ನು ಚೆಲ್ಲುತ್ತಾ ಆತ್ಮೀಯವಾಗಿ ದೇವಸ್ಥಾನದ ಒಳಗೆ ಬರಮಾಡಿಕೊಂಡರು. ಇಲ್ಲಿನ ಸ್ಥಳೀಯ ಟಿಬೆಟಿಯನ್ನರು ಸಾಂಪ್ರದಾಯಿಕ ನೃತ್ಯಗಳನ್ನು ಸಹ ಮಾಡಿದ ದೃಶ್ಯ ಕಂಡುಬಂದಿತು.

    ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಎಸ್‌ಪಿ ನಾಗೇಶ್, ಡಿವೈಎಸ್ಪಿ ಗೋಪಾಲಕೃಷ್ಣ, ವೃತ್ತ ನಿರೀಕ್ಷಕ ದೀಪಕ್, ಬೈಲಕುಪ್ಪೆ ಠಾಣಾಧಿಕಾರಿ ಅಜಯ್ ಕುಮಾರ್, ಸ್ಥಳೀಯ ಸೆಟಲ್ಮೆಂಟ್ ಅಧಿಕಾರಿಗಳಾದ ಗ್ಯಾಲಕ್, ಚಿಮ್ಮಿ ದೊರ್ಜಿ, ಟಿಡಿಎಲ್ ಸೊಸೈಟಿ ಅಧ್ಯಕ್ಷ ಜೋಡೆನ್, ಇಂಡೋ ಟಿಬೆಟಿಯನ್ ಫ್ರೆಂಡ್ಶಿಪ್ ಅಧ್ಯಕ್ಷ ಜವರೇಗೌಡ, ಸುತ್ತ ಮುತ್ತ ಟಿಬೆಟಿಯನ್ ದೇವಸ್ಥಾನದ ಹಿರಿಯ ಬೌದ್ಧ ಗುರುಗಳು ಇದ್ದರು.

  • ಧರ್ಮಶಾಲಾದಲ್ಲಿ ದಲೈಲಾಮ ಭೇಟಿಯಾದ ನ್ಯಾನ್ಸಿ ಪೆಲೋಸಿ- ಕಣ್ಣು ಕೆಂಪಗಾಗಿಸಿದ ಚೀನಾ

    ಧರ್ಮಶಾಲಾದಲ್ಲಿ ದಲೈಲಾಮ ಭೇಟಿಯಾದ ನ್ಯಾನ್ಸಿ ಪೆಲೋಸಿ- ಕಣ್ಣು ಕೆಂಪಗಾಗಿಸಿದ ಚೀನಾ

    ನವದೆಹಲಿ: ಭಾರತ ಪ್ರವಾಸದಲ್ಲಿರುವ ಅಮೆರಿಕಾದ ಹಿರಿಯ ರಾಜಕಾರಣಿ ನ್ಯಾನ್ಸಿ ಪೆಲೋಸಿ (Nancy Pelosi) ನೇತೃತ್ವದ ನಿಯೋಗ ಧರ್ಮಶಾಲಾದಲ್ಲಿ ಟಿಬೆಟ್ ಮುಖ್ಯಸ್ಥ ದಲೈಲಾಮ (Dalai Lama) ಅವರನ್ನು ಭೇಟಿ ಮಾಡಿರೋದು ಚೀನಾದ (China) ಕಣ್ಣು ಕೆಂಪಗಾಗಿಸಿದೆ.

    ಇತ್ತೀಚಿಗೆ ಅಮೆರಿಕ ಸಂಸತ್‌ನಲ್ಲಿ ದಿ ರಿಸಾಲ್ವ್ ಟಿಬೆಟ್ ಆಕ್ಟ್‌ಗೆ ಅನುಮೋದನೆ ನೀಡಲಾಗಿತ್ತು. ಇದರ ಪ್ರಕಾರ, ಟಿಬೆಟ್ (Tibet) ನಾಯಕರೊಂದಿಗೆ ಚೀನಾ ಚರ್ಚೆ ಆರಂಭಿಸಬೇಕು. ನೆಲದ ಸಂಸ್ಕೃತಿ ಕಾಪಾಡುವ ನಿಟ್ಟಿನಲ್ಲಿ ಒಪ್ಪಂದಕ್ಕೆ ಬರಬೇಕು ಎಂದು ಅಮೆರಿಕ ಕೋರಲಿದೆ. ಅಲ್ಲದೇ ಟಿಬೆಟ್ ಇತಿಹಾಸ, ಜನರ ಬಗ್ಗೆ ಚೀನಾ ಹಬ್ಬಿಸುವ ಸುಳ್ಳು ಸುದ್ದಿಗಳ ತಡೆಗೆ ಅಮೆರಿಕ ವಿದೇಶಾಂಗ ಇಲಾಖೆ ಕೆಲಸ ಮಾಡಲಿದೆ. ಇದಕ್ಕಾಗಿ ದೇಣಿಗೆ ಸಂಗ್ರಹಿಸಲು ಅವಕಾಶ ಸಿಗಲಿದೆ. ಬೈಡನ್ ಸಹಿ ಹಾಕಿದ ನಂತರ ಈ ಕಾಯ್ದೆ ಅನುಷ್ಠಾನಕ್ಕೆ ಬರಲಿದೆ. ಆದರೆ ಇದು ಜಾರಿಗೆ ಬರದಂತೆ ಮಾಡಲು ಅಮೆರಿಕ ಮೇಲೆ ಚೀನಾ ಒತ್ತಡ ಹೇರುತ್ತಿದೆ. ಇದನ್ನೂ ಓದಿ: ಕೇಂದ್ರ ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ವೇವ್ ಘಟಕ ಸ್ಥಾಪಿಸಲು ನಡ್ಡಾ ಸೂಚನೆ

    ಇದೀಗ ಪೆಲೋಸಿ-ದಲೈಲಾಮ ಭೇಟಿಯನ್ನು ಚೀನಾ ತೀವ್ರವಾಗಿ ಖಂಡಿಸಿದೆ. ಈ ಹಿಂದೆ ಟಿಬೆಟ್ ವಿಚಾರದಲ್ಲಿ ಅಮೆರಿಕಗೆ ನೀಡಿದ ಭರವಸೆಗಳಿಗೆ ಕಟಿಬದ್ಧರಾಗಿದ್ದೇವೆ. ದಲೈಲಾಮ ಜೊತೆ ಸಂಪರ್ಕ ಬೇಡ. ಜಗತ್ತಿಗೆ ತಪ್ಪು ಸಂದೇಶ ತಲುಪಿಸೋದನ್ನು ನಿಲ್ಲಿಸಿ ಎಂದು ಗುಡುಗಿದೆ. ಟಿಬೆಟ್ ಎಂದೆಂದಿಗೂ ಚೀನಾಗೆ ಅವಿಭಾಜ್ಯ ಅಂಗ. ಇದನ್ನು ಉಳಿಸಿಕೊಳ್ಳಲು ಯಾವುದೇ ಕ್ರಮಕ್ಕೆ ಬೇಕಾದರೂ ಮುಂದಾಗುತ್ತೇವೆ ಎಂದು ಬೀಜಿಂಗ್ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ತೆಪ್ಪ ಮುಳುಗಿ ಮೂವರು ಪ್ರವಾಸಿಗರು ದುರ್ಮರಣ

  • ರಾಜ್ಯಾದ್ಯಂತ ಕಟ್ಟೆಚ್ಚರ – ತಲೆ ಕೆಡಿಸಿಕೊಳ್ಳದ ರಾಮನಗರ ಪೊಲೀಸರು

    ರಾಜ್ಯಾದ್ಯಂತ ಕಟ್ಟೆಚ್ಚರ – ತಲೆ ಕೆಡಿಸಿಕೊಳ್ಳದ ರಾಮನಗರ ಪೊಲೀಸರು

    ರಾಮನಗರ: ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು ಬಿಗಿ ಬಂದೋಬಸ್ತ್ ಜೊತೆಗೆ ತಪಾಸಣೆಯನ್ನು ನಡೆಸಲಾಗುತ್ತಿದೆ. ಆದರೆ ಸಿಎಂ ತವರು ಕ್ಷೇತ್ರದಲ್ಲಿ ಮಾತ್ರ ಪೊಲೀಸರು ಇನ್ನೂ ಚುನಾವಣೆಯ ಗುಂಗಿನಿಂದ ಹೊರಬಂದಿಲ್ಲ.

    ಸರಣಿ ಬಾಂಬ್ ಸ್ಫೋಟ ನಡೆದು ಮೂರು ದಿನಗಳೇ ಕಳೆದರೂ ಇನ್ನೂ ಕೂಡ ಆಯಾಕಟ್ಟಿನ ಜಾಗಗಳಲ್ಲಿ ತಪಾಸಣೆಯಿರಲಿ, ಪೇದೆಗಳಿಂದ ಬೀಟ್ ಕೂಡ ಮಾಡಿಸಲು ಸಾಧ್ಯವಾಗಿಲ್ಲ.

    ಈ ಹಿಂದೆ ಭೌದ್ದ ಧರ್ಮಗುರು ದಲೈಲಾಮರ ಹತ್ಯೆಗೆ ಸಂಚು ರೂಪಿಸಿದ್ದ ಮೋಸ್ಟ್ ವಾಂಟೆಡ್ ಉಗ್ರ ಮುನಿರಲ್ ಶೇಖ್ ಹಾಗೂ ಆತನ ಸಹಚರರು ರಾಮನಗರದಲ್ಲಿ ಸೆರೆ ಸಿಕ್ಕಿದ್ದರು. ಅಲ್ಲದೇ ಬೆಂಗಳೂರು ನಗರ ಹಾಗೂ ಚನ್ನಪಟ್ಟಣದಲ್ಲಿ ಕೇರಳ ಮೂಲದ 10 ಮಂದಿ ಆರೋಪಿಗಳು ಬಾಂಬ್ ಸ್ಫೋಟಿಸುವ ಸಂಚು ರೂಪಿಸಿದ್ದರು. ಇಷ್ಟೆಲ್ಲ ನಡೆದರೂ ಕೂಡ ಪೊಲೀಸರು ಮಾತ್ರ ಯಾವುದಕ್ಕೂ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ.

    ರಾಮನಗರದಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಹಾಗೂ ಗುಪ್ತಚರ ದಳದ ಅಧಿಕಾರಿಗಳ ತಂಡ ಆಗಾಗ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿರುವ ವಿಚಾರ ಗೊತ್ತಿದ್ದರೂ ಪೊಲೀಸರು ಮಾತ್ರ ಎಚ್ಚೆತ್ತುಕೊಳ್ಳದಿರುವುದು ಸಾರ್ವಜನಿಕರ ಆತಂಕ ಹಾಗೂ ಆಕ್ರೋಶಕ್ಕೂ ಕಾರಣವಾಗಿದೆ.

  • ಬೌದ್ಧ ಧರ್ಮಗುರು ದಲೈಲಾಮ ಹತ್ಯೆಗೆ ಸಂಚು – ರಾಮನಗರದಲ್ಲಿ ಸೆರೆ ಸಿಕ್ಕ ಉಗ್ರರಿಂದ ಸ್ಫೋಟಕ ಮಾಹಿತಿ

    ಬೌದ್ಧ ಧರ್ಮಗುರು ದಲೈಲಾಮ ಹತ್ಯೆಗೆ ಸಂಚು – ರಾಮನಗರದಲ್ಲಿ ಸೆರೆ ಸಿಕ್ಕ ಉಗ್ರರಿಂದ ಸ್ಫೋಟಕ ಮಾಹಿತಿ

    ಬೆಂಗಳೂರು: ಬೌದ್ಧ ಧರ್ಮಗುರು ದಲೈಲಾಮ ಹತ್ಯೆಗೆ ಸಂಚು ರೂಪಿಸಿಲಾಗಿತ್ತು ಅನ್ನೋ ಭಯಾನಕ ಮಾಹಿತಿ ಎನ್‍ಐಎ ತನಿಖೆಯಿಂದ ಬಯಲಾಗಿದೆ.

    ಉಗ್ರರ ಸಂಚಿನ ಕುರಿತಂತೆ ಎನ್‍ಐಎ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ದಲೈಲಾಮ ಅವರನ್ನು ಮುಗಿಸಲು ರಾಜ್ಯದ ರಾಮನಗರದಲ್ಲೇ ಸಂಚು ರೂಪಿಸಿರುವುದಾಗಿ ಎನ್‍ಐಎ ನಡೆಸಿದ ಕಾರ್ಯಾಚರಣೆ ವೇಳೆ ಬೆಳಕಿಗೆ ಬಂದಿದೆ. ಪರಿಣಾಮ ಬೌದ್ಧ ಧರ್ಮಗುರು ದಲೈಲಾಮ ಪ್ರಾಣ ಉಳಿದಿದೆ.

    ಚಾರ್ಜ್ ಶೀಟ್ ನಲ್ಲಿ ಏನಿದೆ?
    2018ರ ಜನವರಿ 18ರಂದು ಬಿಹಾರದ ಬೋಧ್ ಗಯಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಲೈಲಾಮ ಮತ್ತು ಬಿಹಾರ ರಾಜ್ಯಪಾಲರನ್ನು ಜೊತೆಯಲ್ಲೇ ಬಾಂಬ್ ಬಿಟ್ಟು ಉಡಾಯಿಸಲು ಸ್ಕೆಚ್ ರೂಪಿಸಿದ್ದರು. ಇದರ ಮಾಹಿತಿ ಅರಿತ ಎನ್‍ಐಎ ರಂಗಕ್ಕಿಳಿದು ಮೂವರನ್ನು ಅರೆಸ್ಟ್ ಮಾಡಿತ್ತು. ಇದು ವಿಫಲವಾದ ಬೆನ್ನಲ್ಲೇ ಲಾಮ ಹತ್ಯೆಗೆ ಮತ್ತೊಂದು ಸ್ಕೆಚ್ ಅನ್ನು ಕರ್ನಾಟಕದಲ್ಲಿ ರೂಪಿಸಲಾಗ್ತಿತ್ತು. ಅದರಲ್ಲೂ ರಾಮನಗರದ ಮನೆಯೊಂದರಲ್ಲಿ ಲಾಮ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಬೋಧ್‍ಗಯಾದಲ್ಲಿ ಬಂಧಿಸಲ್ಪಟ್ಟಿದ್ದ ಮೂವರು ಉಗ್ರರ ವಿಚಾರಣೆ ವೇಳೆ ರಾಮನಗರದಲ್ಲಿ ರೂಪಿಸಲಾಗ್ತಿದ್ದ ಸಂಚಿನ ಬಗ್ಗೆ ಬಾಯ್ಬಿಟ್ಟಿದ್ದರು.

    ಆಗಸ್ಟ್ 7ರಂದು ರಾಜ್ಯಕ್ಕೆ ಧಾವಿಸಿದ ಎನ್‍ಐಎ ತಂಡ, ರಾಮನಗರಕ್ಕೆ ತೆರಳಿ ಜೆಎಂಬಿ ಉಗ್ರ ಮುನೀರ್‍ನನ್ನು ಯಶಸ್ವಿಯಾಗಿ ಬೇಟೆಯಾಡಿತ್ತು. ಮುನೀರ್ ನನ್ನು ವಶಕ್ಕೆ ಪಡೆದಿದ್ದರಿಂದ ಸಂಭವಿಸಬಹುದಾಗಿದ್ದ ಘನಘೋರ ದುರಂತವನ್ನ ಎನ್‍ಐಎ ತಪ್ಪಿಸಿತ್ತು. ಬಾಂಬ್ ಸ್ಫೋಟಿಸಿ ದಲೈಲಾಮ ಹತ್ಯೆಗೆ ಮುನೀರ್ ಸಂಚು ನಡೆಸಿದ್ದ ವಿಚಾರ ಎನ್‍ಐಎ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

    1959ರಲ್ಲಿ ಚೀನಾದಿಂದ ಎದುರಾಗಿದ್ದ ಪ್ರಾಣಕಂಟಕದಿಂದ ಪಾರಾಗಲು ಟಿಬೆಟ್‍ನಿಂದ ದಲೈಲಾಮ ರಾತ್ರೋರಾತ್ರಿ ಆಶ್ರಯ ಅರಸಿ ಭಾರತಕ್ಕೆ ಬಂದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv