Tag: ದಳ

  • ಟೈಮ್ಸ್‌ ನೌ ಸಮೀಕ್ಷೆ – NDA 366, INDIA 104 ಸೀಟ್‌: ಕರ್ನಾಟಕದಲ್ಲಿ ಬಿಜೆಪಿ ದಳ ಮೈತ್ರಿಗೆ 23 ಸ್ಥಾನ

    ಟೈಮ್ಸ್‌ ನೌ ಸಮೀಕ್ಷೆ – NDA 366, INDIA 104 ಸೀಟ್‌: ಕರ್ನಾಟಕದಲ್ಲಿ ಬಿಜೆಪಿ ದಳ ಮೈತ್ರಿಗೆ 23 ಸ್ಥಾನ

    ನವದೆಹಲಿ: ಈಗ ಲೋಕಸಭಾ ಚುನಾವಣೆ (Lok Sabha Election) ನಡೆದರೆ ಬಿಜೆಪಿ (BJP) ನೇತೃತ್ವದ ಎನ್‌ಡಿಎ (NDA) 366 ಸ್ಥಾನ ಗಳಿಸಿದರೆ ಕರ್ನಾಟಕದಲ್ಲಿ (Karnataka) ಬಿಜೆಪಿ-ಜೆಡಿಎಸ್‌ (BJP-JDS) ಮೈತ್ರಿಕೂಟ 23 ಸ್ಥಾನ ಗೆಲ್ಲಲಿದೆ ಎಂದು ಟೈಮ್ಸ್‌ ನೌ ಸಮೀಕ್ಷೆ ತಿಳಿಸಿದೆ.

    ಸಮೀಕ್ಷೆ ಏನು ಹೇಳಿದೆ?
    ಗುಜರಾತ್‌, ಛತ್ತೀಸ್‌ಗಢ, ದೆಹಲಿಯ ಎಲ್ಲ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದ್ದು ಒಟ್ಟು 366 ಸ್ಥಾನಗಳನ್ನು ಎನ್‌ಡಿಎ ಒಕ್ಕೂಟ ಗಳಿಸಲಿದೆ. INDIA ಒಕ್ಕೂಟ 104, ಇತರರು 73 ಸ್ಥಾನ ಗಳಿಸಲಿದೆ.  ಇದನ್ನೂ ಓದಿ: ಉದ್ಘಾಟನೆ ದಿನವೇ ಬಾಗಿಲು ಮುಚ್ಚಿದ ತುಮಕೂರು KSRTC ಹೈಟೆಕ್‌ ಬಸ್ ನಿಲ್ದಾಣ!

    ಶೇಕಡಾವಾರುಮತ ಪ್ರಮಾಣದಲ್ಲಿ ಎನ್‌ಡಿಎ 41.8% ಮತ ಪಡೆದರೆ INDIA ಒಕ್ಕೂಟ 28.6% ಮತ ಪಡೆಯಲಿದ್ದಾರೆ. ಇತರರು 29.6% ಮತ ಗಳಿಸಲಿದ್ದಾರೆ ಎಂದು ಹೇಳಿದೆ. ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ ಬಿಜೆಪಿ 77 ಸ್ಥಾನಗಳನ್ನು ಗೆಲ್ಲಲಿದೆ. ನಿತೀಶ್‌ಕುಮಾರ್‌ ಸೇರ್ಪಡೆಯಿಂದ ಬಿಹಾರದಲ್ಲಿ ಎನ್‌ಡಿಎ 35 ಸೀಟುಗಳನ್ನು ಗೆಲ್ಲಲಿದ್ದು, ಇತರ ಪಕ್ಷಗಳು 5 ಸ್ಥಾನಗಳಿಗೆ ತೃಪ್ತಿಪಡಬೇಕಾಗುತ್ತದೆ.

    ಪಶ್ಚಿಮ ಬಂಗಾಳದ ಒಟ್ಟು 42 ಸ್ಥಾನಗಳಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ (TMC) 26 ಕ್ಷೇತ್ರಗಳನ್ನು ಗೆಲ್ಲಲಿದೆ. ತಮಿಳುನಾಡಿನಲ್ಲಿ ಎನ್‌ಡಿಎ ಒಂದು ಹಾಗೂ ಇಂಡಿಯಾ ಮೈತ್ರಿಕೂಟ 36 ಸ್ಥಾನವನ್ನು ಪಡೆಯಲಿದೆ. ಇದನ್ನೂ ಓದಿ: ಶ್ರೀಕೃಷ್ಣ ಪಾಂಡವರಿಗಾಗಿ 5 ಗ್ರಾಮಗಳನ್ನ ಕೇಳಿದ, ನಾವು 3 ಸ್ಥಳ ಕೇಳುತ್ತಿದ್ದೇವೆ – ʻಮಹಾಭಾರತʼದ ಪಾಠ ಹೇಳಿದ ಯೋಗಿ

    ಕರ್ನಾಟಕದಲ್ಲಿ ಎಷ್ಟು?
    ರಾಜ್ಯದಲ್ಲಿ ಬಿಜೆಪಿ 21, ದಳ 2 ಸ್ಥಾನ ಗೆದ್ದುಕೊಂಡರೆ ಕಾಂಗ್ರೆಸ್‌ 5 ಸ್ಥಾನಗಳನ್ನು ಗಳಿಸಲಿದೆ ಎಂದು ಈ ಸಮೀಕ್ಷೆ ಹೇಳಿದೆ. ಮತಗಳ ಶೇಕಡಾವಾರು ಪ್ರಮಾಣದಲ್ಲಿ ಬಿಜೆಪಿ 46.2% ಕಾಂಗ್ರೆಸ್‌ 42.3% ಜೆಡಿಎಸ್‌ 8.4% ಹಾಗೂ ಇತರ ಪಕ್ಷಗಳು 3.1%ರಷ್ಟು ಮತ ಗಳಿಸಿಕೊಳ್ಳಲಿವೆ.

    ಸಿದ್ದರಾಮಯ್ಯ ಸಾಧನೆ ಕುರಿತು 18% ರಷ್ಟು ತೃಪ್ತಿ ವ್ಯಕ್ತಪಡಿಸಿದ್ದು, 27%ರಷ್ಟು ಮಂದಿ ಪರವಾಗಿಲ್ಲ ಎಂದಿದ್ದಾರೆ. 34%ರಷ್ಟು ಮಂದಿ ಅತೃಪ್ತಿ ವ್ಯಕ್ತಪಡಿಸಿದ್ದು, 21%ರಷ್ಟು ಮಂದಿ ಪ್ರತಿಕ್ರಿಯಿಸಿಲ್ಲ.

     

  • ಹಳೆ ದೋಸ್ತಿಗಳ ನಡುವೆ ಮತ್ತೆ ಚಿಗುರಿದ ಸ್ನೇಹ

    ಹಳೆ ದೋಸ್ತಿಗಳ ನಡುವೆ ಮತ್ತೆ ಚಿಗುರಿದ ಸ್ನೇಹ

    ಬೆಂಗಳೂರು: ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿ ದಿನ ಸುಮ್ಮನಿದ್ದ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರುಗಳು ಏಕಾಏಕಿಯಾಗಿ ಈಗ ಸಕ್ರೀಯವಾಗಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿ ಪರಿಷತ್ ಹಾದಿ ಸುಗಮ ಎಂದುಕೊಂಡಿದ್ದವರಿಗೆ ಕಾಂಗ್ರೆಸ್ ಜೆಡಿಎಸ್ ಒಟ್ಟಾಗಿ ಅನಿರೀಕ್ಷಿತ ಸವಾಲು ಎಸೆದಿವೆ.

    ಕಾಂಗ್ರೆಸ್ ಮುಖಂಡ ಅನಿಲ್ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದು ಬಿಜೆಪಿಗೆ ಸಡನ್ ಶಾಕ್ ಎದುರಾಗಿದೆ. ಸಂಖ್ಯಾ ಬಲದಲ್ಲಿ ಬಿಜೆಪಿ ಮುಂದಿದೆ. ಆದರೆ ಸಂಪುಟ ಗೊಂದಲದಲ್ಲಿ ಶುರುವಾದ ಸಣ್ಣ ಅಸಮಧಾನ ಭುಗಿಲೆದ್ದರೆ ಎನ್ನುವ ಆತಂಕ ಸಹಜವಾಗಿಯೇ ಕಮಲ ಪಾಳಯದ ನೆಮ್ಮದಿ ಕೆಡಿಸಿದೆ.

    ಸಂಖ್ಯಾ ಬಲದ ಕೊರತೆಯಿಂದ ಸುಮ್ಮನಿದ್ದ ಕಾಂಗ್ರೆಸ್ ಜೆಡಿಎಸ್ ಬಿಜೆಪಿಯ ಅಸಮಧಾನದ ಲಾಭ ಸಿಗಬಹುದು ಎನ್ನುವ ಆಸೆಯಲ್ಲಿ ತೆರೆಮರೆಯಲ್ಲೇ ಕೈ ಜೋಡಿಸಲು ಮುಂದಾಗಿವೆ. ಸಂಪುಟ ವಿಸ್ತರಣೆ, ಮೂಲ ಹಾಗೂ ವಲಸಿಗ ಗಲಾಟೆ ಎಲ್ಲವು ಸೇರಿ ಗೊಂದಲ ಹೆಚ್ಚಾದರೆ ಮುಂದಿನ ದಿನಗಳಲ್ಲಾದರೂ ಅದರ ಲಾಭ ಪಡೆಯಬಹುದು ಎನ್ನುವ ಆಸೆ ಹಳೆ ದೋಸ್ತಿಗಳಲ್ಲಿ ಚಿಗುರಿದಂತಿದೆ.

    ಸಿಕ್ಕ ಅವಕಾಶವನ್ನ ಬಳಸಿಕೊಂಡು ಬಿಜೆಪಿಗೆ ಟಕ್ಕರ್ ನೀಡುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಬಿಜೆಪಿ ಪರಿಷತ್ ಅಖಾಡದಲ್ಲಿ ಕೈ ಜೋಡಿಸಲು ಮುಂದಾದಂತಿದೆ. ಈ ಪ್ರಯತ್ನದಲ್ಲಿ ಎಷ್ಟರ ಮಟ್ಟಿಗೆ ಲಾಭ ಸಿಗುತ್ತದೋ ಗೊತ್ತಿಲ್ಲ. ಆದರೆ ತೆರೆ ಮರೆ ಪ್ರಯತ್ನದಲ್ಲಿ ದೋಸ್ತಿಗಳ ನಡುವೆ ಪರಸ್ಪರ ವಿಶ್ವಾಸ ಮೂಡಿದರೆ ಮುಂದಿನ ದಿನಗಳಲ್ಲಿ ಇಬ್ಬರು ಸೇರಿಕೊಂಡು ಪರಿಸ್ಥಿತಿಯ ಲಾಭ ಪಡೆಯಬಹುದು ಎನ್ನುವ ಲೆಕ್ಕಾಚಾರವಂತು ಇದ್ದಂತಿದೆ.

  • ಮಲಗಿದ್ದಾಳೆಂದು ಬಾಗಿಲು ಲಾಕ್ ಮಾಡ್ಕೊಂಡು ಹೋದ ಪೋಷಕರು – ಅಗ್ನಿ ದುರಂತದಲ್ಲಿ ಮಗಳು ಸಾವು

    ಮಲಗಿದ್ದಾಳೆಂದು ಬಾಗಿಲು ಲಾಕ್ ಮಾಡ್ಕೊಂಡು ಹೋದ ಪೋಷಕರು – ಅಗ್ನಿ ದುರಂತದಲ್ಲಿ ಮಗಳು ಸಾವು

    ಮುಂಬೈ: ಅಪಾರ್ಟ್‌ಮೆಂಟಿನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪ್ರಾಪ್ತೆಯೊಬ್ಬಳು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮುಂಬೈ ಉಪನಗರ ಇಲಾಖೆಯ ದಾದರ್ ನಲ್ಲಿ ನಡೆದಿದೆ.

    ಶ್ರಾವಣಿ ಚಾವನ್(16) ಮೃತ ಬಾಲಕಿ. ಈಕೆ ಅಪಾರ್ಟ್‌ಮೆಂಟ್‌ ರೂಮಿನಲ್ಲಿ ಮಲಗಿದ್ದಳು. ಆದರೆ ಆಕೆಯ ಪೋಷಕರು ಬಾಗಿಲು ಲಾಕ್ ಮಾಡಿದ ಪರಿಣಾಮ ಅಪಾರ್ಟ್‌ಮೆಂಟಿನಲ್ಲಿ ಬೆಂಕಿ ಹೊತ್ತಿಕೊಂಡಾಗ ಹೊರಗೆ ಬರಲು ಸಾಧ್ಯವಾಗದೇ ಒಳಗೆ ಉಸಿರುಗಟ್ಟಿ ಬಾಲಕಿ ಮೃತಪಟ್ಟಿದ್ದಾಳೆ.

    ಶ್ರಾವಣಿ ತಂದೆ – ತಾಯಿ ಮದುವೆಗೆ ಹೋಗಲು ತಯಾರಿ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಬಾಲಕಿ ರೂಮಿನಲ್ಲಿ ಮಲಗಿದ್ದಳು. ಮಗಳು ನಿದ್ದೆ ಮಾಡಿ ಎದ್ದು ಓದಿಕೊಳ್ಳಲಿ ಎಂದು ಪೋಷಕರು ಮನೆಗೆ ಬೀಗ ಹಾಕಿ ಹೋಗಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

    ಮಧ್ಯಾಹ್ನ ಸುಮಾರು 1.45 ನಿಮಿಷಕ್ಕೆ ಐದು ಅಂತಸ್ತಿನ ಅಪಾರ್ಟ್‌ಮೆಂಟಿನಲ್ಲಿ ಮೂರನೇ ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡಿತು. ಬೆಂಕಿ ಶ್ರಾವಣಿ ಮಲಗಿದ್ದ ರೂಮಿಗೂ ಆವರಿಸಿಕೊಂಡಿದೆ. ಇತ್ತ ಪೋಷಕರು ಹೊರಗಿಂದ ಬಾಗಿಲು ಲಾಕ್ ಮಾಡಿದ್ದರಿಂದ ಬೆಂಕಿ ಮಧ್ಯೆ ಸಿಲುಕಿದ ಶ್ರಾವಣಿ ಹೊರಗಡೆ ಬರಲು ಸಾಧ್ಯವಾಗಿಲ್ಲ. ಜೊತೆಗೆ ಹೊಗೆಯಿಂದ ಉಸಿರಾಡಲು ಆಗಲಿಲ್ಲ. ಕೊನೆಗೆ ಶ್ರಾವಣಿ ಪ್ರಜ್ಞೆ ಕಳೆದುಕೊಂಡಿದ್ದಳು.

    ಮಾಹಿತಿ ತಿಳಿದು ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಆಕೆಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಶ್ರಾವಣಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಇತ್ತ ಅಪಾರ್ಟ್‌ಮೆಂಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ಅಗ್ನಿಶಾಮಕ ತಂಡ ಸತತ 3 ಗಂಟೆಯ ಕಾಲದ ಬಳಿಕ ನಂದಿಸಿದ್ದಾರೆ.

    ಈ ಅಗ್ನಿ ಅವಘಡದಿಂದ ವಯರ್ ಗಳು, ಅನೇಕ ಮನೆಗಳ ಬೆಲೆಬಾಳುವ ವಸ್ತುಗಳು ಸಹ ಸುಟ್ಟು ಕರಕಲಾಗಿವೆ. ಅಪಾರ್ಟ್‌ಮೆಂಟಿಗೆ ಅಳವಡಿಸಿದ್ದ ಏರ್ ಕಂಡಿಷನರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

    ಅಪಾರ್ಟ್‌ಮೆಂಟಿನಲ್ಲಿ ಬೆಂಕಿ ಹೊತ್ತಿಕೊಂಡ ಸ್ಥಳದಲ್ಲಿ ಖಾಲಿ ಸೀಮೆಎಣ್ಣೆ ಡಬ್ಬ ಪತ್ತೆಯಾಗಿದೆ. ಹೀಗಾಗಿ ಈ ಕುರಿತು ತನಿಖೆ ಮುಂದುವರಿಸಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.