Tag: ದಸರಾ

  • ದಸರಾ ಜಂಬೂ ಸವಾರಿಗೆ ಆನೆಗಳ ಭರ್ಜರಿ ತಾಲೀಮು

    ದಸರಾ ಜಂಬೂ ಸವಾರಿಗೆ ಆನೆಗಳ ಭರ್ಜರಿ ತಾಲೀಮು

    ಮೈಸೂರು: ವಿಶ್ವವಿಖ್ಯಾತ ದಸರಾ ಹಬ್ಬ ಈಗಾಗಲೇ ಶುರುವಾಗಿದ್ದು, ಅರಮನೆ ಮುಂದೆ ಹಲವು ತಯಾರಿಗಳು ನಡೆಯುತ್ತಿವೆ. ಅದರಲ್ಲಿ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಇನ್ನು ನಾಲ್ಕು ದಿನಗಳು ಬಾಕಿ ಇರುವಾಗಲೇ ಇಂದು ಅರಮನೆ ಮೈದಾನದಲ್ಲಿ ಆನೆಗಳ ತಾಲೀಮು ಭರ್ಜರಿಯಾಗಿ ನಡೆಯಿತು.

    ಮೈಸೂರಿನ ಎಸಿಪಿ ಶೈಲೇಂದ್ರ ಮತ್ತು ಇನ್ಸ್ ಪೆಕ್ಟರ್ ಚಂದ್ರಶೇಖರ್ ಅಂಬಾರಿ ಹೋರುವ ಅರ್ಜುನನಿಗೆ ಪುಷ್ಪ ಎರಚುವ ಮೂಲಕ ಆನೆಗಳ ತಾಲಿಮಿಗೆ ಚಾಲನೆ ನೀಡಿದರು. ವಿಜಯದಶಮಿಯಂದು ಅಂಬಾರಿ ಹೊರುವ ಅರ್ಜುನ ಮತ್ತು ಸಾಥ್ ನೀಡುವ ಆನೆಗಳಿಗೆ ಸರತಿ ಸಾಲಿನ ಪೂರ್ವನಿಗದಿಗಾಗಿ ಇಂದು ತಾಲೀಮು ಕಾರ್ಯ ನಡೆಯಿತು. ಇಂದು ನಿಗದಿಯಾಗಿದ್ದ ಮರದ ಅಂಬಾರಿ ಹೋರುವ ತಾಲಿಮನ್ನು ರದ್ದುಗೊಳಿಸಲಾಯಿತು. ಅಂಬಾರಿ ನಡೆಯುವ ಸಮಯದಲ್ಲಿ ಯಾವುದೇ ರೀತಿಯ ಅಡಚಣೆಗಳು ನಡೆಯಬಾರದು ಎಂಬ ದೃಷ್ಟಿಯಿಂದ ಈ ತಾಲೀಮು ಕಾರ್ಯ ನಡೆಯುತ್ತದೆ.

    ವಿಜಯ ದಶಮಿಯಂದು ಅಂಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಲಿದ್ದಾರೆ. ಇನ್ನೂ ತಾಲೀಮಿನ ವೇಳೆ ಕೆ.ಎಸ್.ಆರ್.ಪಿ, ಡಿ.ಎ.ಆರ್, ಸಿ.ಎ.ಆರ್, ಅಶ್ವರೋಹಿ ದಳ, ಹೋಮ್ ಗಾರ್ಡ್ ಸಿಬ್ಬಂದಿಗಳ ಪೂರ್ವ ಪಥಸಂಚಲನವೂ ಕೂಡ ನಡೆಯಿತು.

  • ಮೈಸೂರಿನಲ್ಲಿ ಜಿಟಿಜಿಟಿ ಮಳೆ ನಡುವೆ ಯುವಕರ ಟ್ರೀಣ್ ಟ್ರೀಣ್ ಸೈಕಲ್ ಸಾವರಿ

    ಮೈಸೂರಿನಲ್ಲಿ ಜಿಟಿಜಿಟಿ ಮಳೆ ನಡುವೆ ಯುವಕರ ಟ್ರೀಣ್ ಟ್ರೀಣ್ ಸೈಕಲ್ ಸಾವರಿ

    ಮೈಸೂರು: ನಾಡಹಬ್ಬ ಮೈಸೂರು ದಸರಾ ಹಿನ್ನೆಲೆಯಲ್ಲಿ ಇಂದು ಯುವಕರು ಟ್ರೀಣ್ ಟ್ರೀಣ್ ಸೈಕಲ್ ಏರಿ ಮೈಸೂರಿನ ಇತಿಹಾಸದ ಬಗ್ಗೆ ಹಾಗೂ ಮಹತ್ವದ ಬಗ್ಗೆ ಪರಿಚಯ ಮಾಡಿಕೊಂಡರು.

    ಮೈಸೂರಿನ ದಿವಾನ್ ರಂಗರ್ಚಾಲು ಪುರಭವನದ ಮುಂದೆ ಜಿಲ್ಲಾಧಿಕಾರಿ ರಂದೀಪ್ ಈ ಟ್ರೀಣ್ ಟ್ರೀಣ್ ಸೈಕಲ್ ಸವಾರಿಗೆ ಚಾಲನೆ ನೀಡಿದ್ದರು. ಮಂಜಿನ ಹಾಗೆ ಬೀಳುತ್ತಿದ್ದ ಮಳೆಯ ಪುಟ್ಟ ಪುಟ್ಟ ಹನಿಗಳು ಒಂದು ಕಡೆಯಾದ್ರೆ ಮತ್ತೊಂದೆಡೆ ಯುವಕರು ಸೈಕಲ್ ಏರಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು.

    ಈ ವೇಳೆ ಜಿಲ್ಲಾಧಿಕಾರಿ ರಂದೀಪ್ ಹಾಗು ಮೇಯರ್ ರವಿಕುಮಾರ್ ಯುವಕರೊಂದಿಗೆ ಸೈಕಲ್ ಸವಾರಿ ನಡೆಸಿದ್ದು ವಿಶೇಷವಾಗಿತ್ತು.

  • ಮೈಸೂರು ದಸರಾ: ಅಕ್ಕಿ ರೊಟ್ಟಿ ಬದನೆಕಾಯಿ ಗೊಜ್ಜು ಮಾಡಿದ್ರು ಅತ್ತೆ, ಸೊಸೆ

    ಮೈಸೂರು ದಸರಾ: ಅಕ್ಕಿ ರೊಟ್ಟಿ ಬದನೆಕಾಯಿ ಗೊಜ್ಜು ಮಾಡಿದ್ರು ಅತ್ತೆ, ಸೊಸೆ

    ಮೈಸೂರು: ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಅನ್ನೋ ಗಾದೆ ಮಾತು ಇದೆ. ಆದರೆ ಮೈಸೂರು ದಸರಾ ಮಹೋತ್ಸವದ ಕಾರ್ಯಕ್ರಮವೊಂದರಲ್ಲಿ ಅತ್ತೆ ಹಾಗೂ ಸೊಸೆ ಇಬ್ಬರಿಗೂ ಒಂದೇ ವೇದಿಕೆಯಲ್ಲಿ ಸ್ಪರ್ಧಿಸಿ ಮನೋರಂಜನೆ ನೀಡಿದ್ದಾರೆ.

    ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಸ್ಕೌಟ್ ಅಂಡ್ ಗೈಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಆಹಾರ ಮೇಳದಲ್ಲಿ ಗುರುವಾರ ಅತ್ತೆ ಸೊಸೆಯರಿಗೆ ಅಕ್ಕಿ ರೊಟ್ಟಿ ಹಾಗೂ ಬದನೆಕಾಯಿ ಗೊಜ್ಜು ಮಾಡುವ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

    ಅತ್ತೆ ಸೊಸೆ ಇಬ್ಬರೂ ಒಂದುಗೂಡಿ ಅಕ್ಕಿ ರೊಟ್ಟಿ ಹಾಗೂ ಬದನೆಕಾಯಿ ಗೊಜ್ಜು ಮಾಡುವುದರಲ್ಲಿ ಫುಲ್ ಬ್ಯೂಸಿಯಾಗಿದ್ರು. 20 ಮಂದಿ ಅತ್ತೆ, ಸೊಸೆ ಜೋಡಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು ಅಕ್ಕಿ ರೊಟ್ಟಿ ಬದನೆಕಾಯಿ ಗೊಜ್ಜು ಮಾಡಿದ್ರು. ಸುಮಾರು 2 ಗಂಟೆಗಳ ಕಾಲ ಅಕ್ಕಿ ರೊಟ್ಟಿ ಬದನೆಕಾಯಿ ಗೊಜ್ಜು ಮಾಡುವ ಮೂಲಕ ಅತ್ತೆ ಸೊಸೆಯರು ಫುಲ್ ಎಂಜಾಯ್ ಮಾಡಿದ್ದರು.

  • ನಾನು ಹೊರಗೆ ಒರಟ, ಆದ್ರೆ ಒಳಗೆ ಮೃದು: ಸಿಎಂ

    ನಾನು ಹೊರಗೆ ಒರಟ, ಆದ್ರೆ ಒಳಗೆ ಮೃದು: ಸಿಎಂ

    – ವೇದಿಕೆಯಲ್ಲಿದ್ದ ಪ್ರತಾಪ್ ಸಿಂಹಗೂ ತಮಾಷೆ ಮಾಡಿದ್ರು ಸಿದ್ದರಾಮಯ್ಯ

    ಮೈಸೂರು: ರಾಜಕೀಯ ವಿಚಾರ ಹಾಗೂ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಹೊರಗೆ ಒರಟ, ಒಳಗೆ ಮೃದು. ಆದರೆ ಕವಿ ನಿಸಾರ್ ಅಹಮದ್ ಅವರು ಹೊರಗೂ ಮೃದು ಒಳಗೂ ಮೃದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

    ದಸರಾ ಹಬ್ಬ ತುಂಬಾ ವೈಶಿಷ್ಟ್ಯತೆಯಿಂದ ಕೂಡಿದ್ದು, ಹಲವು ವಿಚಾರಗಳನ್ನು ಅಡಗಿಸಿಕೊಂಡಿದೆ. ದಸರಾ ವಿಶ್ವವಿಖ್ಯಾತಿ ಪಡೆದಿರುವುದು ನಮ್ಮ ದೇಶದ ಸಂಸ್ಕೃತಿಗೆ ಹಿಡಿದ ಕನ್ನಡಿ. ದಸರಾ ನೋಡಲು ದೇಶ ವಿದೇಶದಿಂದ ಪ್ರವಾಸಿಗರು ಬಂದು ಜಂಬೂಸವಾರಿಯನ್ನ ಕಣ್ತುಂಬಿಕೊಂಡು ಹಾಡಿ ಹೊಗಳುತ್ತಾರೆ ಅಂತ ಹೇಳಿದ್ರು.

    ನಾನೂ ಕೂಡ ಮೈಸೂರಿನವನು. ಚಿಕ್ಕವನಿದ್ದಾಗ ನನ್ನ ತಂದೆ ಹೆಗಲ ಮೇಲೆ ಕೂರಿಸಿಕೊಂಡು ನನಗೆ ದಸರಾ ತೋರಿಸಿದ್ದರು. ತಾಯಿಯ ಮಹಿಮೆ ಎಂತಹದು ಎಂದರೆ ಅಂದು ದಸರಾ ವೀಕ್ಷಣೆ ಮಾಡಿದ್ದೆ. ಆದರೆ ಈಗ ನಾನೇ ದಸರಾ ನಡೆಸಿದ್ದೇನೆ. ಅಲ್ಲದೇ ತಾಯಿ ಚಾಮುಂಡಿ ಕೃಪೆಯಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದು ಸಂತಸದ ವಿಚಾರ ಎಂದರು.

    ಮುಂದಿನ ದಸರಾ ನಮ್ದೆ: ದಸರಾ ಕಾರ್ಯಕ್ರಮದಲ್ಲಿ ಮುಂದಿನ ದಸರಾ ಆಚರಣೆ ಬಗ್ಗೆ ವಿಚಾರ ಪ್ರಸ್ತಾಪ ನಡೆಯಿತು. ಈ ಐದು ವರ್ಷ ನಾನೇ ದಸರಾ ನಡೆಸಿದ್ದು, ಮುಂದಿನ ಐದು ವರ್ಷ ದಸರಾ ಉತ್ಸವವನ್ನು ನಾನೇ ನಡೆಸುತ್ತೇನೆ. ಹಿರಿಯ ನಾಯಕರಾದ ಜಿ.ಟಿ.ದೇವೇಗೌಡರೂ ಸಹ ನನಗೆ ವಿಶ್ ಮಾಡಿದ್ದಾರೆ. ಮುಂದಿನ ಐದು ವರ್ಷ ನಾನೇ ಉತ್ಸವ ಆಚರಣೆ ನಡೆಸುವಂತೆ ನೀನೂ ಕೂಡ ವಿಶ್ ಮಾಡಿಬಿಡು ಎಂದು ವೇದಿಕೆಯಲ್ಲಿದ್ದ ಸಂಸದ ಪ್ರತಾಪ್ ಸಿಂಹಗೆ ತಮಾಷೆ ಮಾಡಿದರು.

  • ದಸರಾದ ಎಡವಟ್ಟು: ಪ್ರವೀಣ್ ಗೋಡ್ಖಿಂಡಿ ಪಿಟೀಲು ವಾದಕರಂತೆ!

    ದಸರಾದ ಎಡವಟ್ಟು: ಪ್ರವೀಣ್ ಗೋಡ್ಖಿಂಡಿ ಪಿಟೀಲು ವಾದಕರಂತೆ!

    ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ 2017ರ ಅಧಿಕೃತ ಆಮಂತ್ರಣ ಪತ್ರದಲ್ಲಿ ಎಡವಟ್ಟಾಗಿದ್ದು, ಕೊಳಲು ವಾದಕರಾಗಿ ವಿಶ್ವ ಪ್ರಸಿದ್ಧಿ ಪಡೆದಿರುವ ಪ್ರವೀಣ್ ಗೋಡ್ಖಿಂಡಿ ಅವರನ್ನು ಪಿಟೀಲುವಾದಕ ಎಂದು ಉಲ್ಲೇಖಿಸಲಾಗಿದೆ.

    ಸೆ.28 ರಂದು ಜಯತೀರ್ಥ ಮೇವುಂಡಿ ಹಾಗೂ ಪ್ರವೀಣ್ ಗೋಡ್ಖಿಂಡಿಯ ಜುಗಲ್‍ ಬಂದಿ ಕಾರ್ಯಕ್ರಮ ನಡೆಯಲಿದೆ. ಆದರೆ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿಗೋಡ್ಖಿಂಡಿಯವರನ್ನ ಪಿಟೀಲು ವಾದಕ ಎಂದು ಉಲ್ಲೇಖಿಸಲಾಗಿದೆ. ಈ ತಪ್ಪು ಮುದ್ರಣದಿಂದಾಗಿ ದಸರಾ ಉಪ ಸಮಿತಿ ಮುಜುಗರಕ್ಕೀಡಾಗಿದೆ.

    ಈ ಬಗ್ಗೆ ವಾಟ್ಸಾಪ್ ಗಳಲ್ಲಿಯೂ ಚರ್ಚೆ ಆರಂಭವಾಗಿದೆ. ಗ್ರೂಪ್ ಒಂದರಲ್ಲಿ ಗೋಡ್ಖಿಂಡಿ ಅವರು `ನಾನು ಪಿಟೀಲು ನುಡಿಸೋದು ನನಗೆ ಗೊತ್ತಿಲ್ವಲ್ಲ’ ಅಂತ ಆಶ್ವರ್ಯ ವ್ಯಕ್ತಪಡಿಸಿದ್ದಾರೆ.

    ಈ ವಿಚಾರ ಪ್ರಕಟವಾದ ಬಳಿಕ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉಸ್ತುವಾರಿಯನ್ನು ಹೊತ್ತ ಅಧಿಕಾರಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗುತ್ತಿದೆ.

  • ನವರಾತ್ರಿ, ಮೊಹರಂ ಆಚರಣೆಗೆ ಷರತ್ತುಗಳನ್ನು ಹಾಕಿದ ಉತ್ತರಪ್ರದೇಶ ಸಿಎಂ

    ನವರಾತ್ರಿ, ಮೊಹರಂ ಆಚರಣೆಗೆ ಷರತ್ತುಗಳನ್ನು ಹಾಕಿದ ಉತ್ತರಪ್ರದೇಶ ಸಿಎಂ

    ಲಕ್ನೌ: ಸೆಪ್ಟೆಂಬರ್ 21 ಇದೇ ಗುರುವಾರದಿಂದ ನವರಾತ್ರಿ ಹಬ್ಬ ಆರಂಭವಾಗಲಿದೆ. ಇದೇ ಹೊತ್ತಲ್ಲಿ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ದುರ್ಗಾ ಪೂಜೆ, ದಸರಾ ಹಾಗೂ ಮೊಹರಂ ಆಚರಣೆಗೆ ಹಲವು ಷರತ್ತುಗಳನ್ನ ವಿಧಿಸಿದೆ.

    ದುರ್ಗಾ ಪೂಜೆ ಮೆರವಣಿಗೆ ವೇಳೆ ದುರ್ಗಾ ಮಾತೆಯ ಮೂರ್ತಿ ಹಾಗೂ ಮೊಹರಂನ ಮೆರವಣಿಗೆ ವೇಳೆ ಹೊತ್ತೊಯ್ಯಲಾಗುವ ತಝಿಯಾಗಳು ಇಷ್ಟೇ ಎತ್ತರ ಇರಬೇಕೆಂದು ನಿರ್ಬಂಧ ಹೇರಲಾಗಿದೆ. ಹಾಗೂ ಡಿಜೆ(ಹಾಡು-ನೃತ್ಯಕ್ಕೂ) ನಿಷೇಧ ಹೇರಿದ್ದಾರೆ. ಧ್ವನಿವರ್ಧಕಗಳ ಬಳಕೆಗೆ ಸರ್ಕಾರದ ಅನುಮತಿ ಕಡ್ಡಾಯವಾಗಿ ಪಡೆಯಬೇಕು. ಮೊದಲೇ ನಿಗದಿಪಡಿಸಿದ ಮಾರ್ಗ ಹೊರತುಪಡಿಸಿ ಬೇರೆ ಮಾರ್ಗದಲ್ಲಿ ಮೆರವಣಿಗೆ ಸಾಗುವಂತಿಲ್ಲ ಎಂದು ಷರತ್ತು ವಿಧಿಸಲಾಗಿದೆ.

    ಸೆಪ್ಟೆಂಬರ್ 26 ರಂದು 4 ದಿನಗಳ ಕಾಲ ದುರ್ಗಾ ಪೂಜೆ ನಡೆಯಲಿದೆ. ಸೆಪ್ಟೆಂಬರ್ 30 ರಂದು ವಿಜಯದಶಮಿ ಆಚರಿಸಲಾಗುತ್ತದೆ. ಹಾಗೇ ಆಕ್ಟೋಬರ್ 1ರಂದು ಮೊಹರಂ ಇದೆ. ಧ್ವನಿ ವರ್ಧಕಗಳ ಬಳಕೆ ಹಾಗೂ ಮೆರವಣಿಗೆ ಹೋಗುವ ಮಾರ್ಗದ ವಿಚಾರವಾಗಿ ಈ ಹಿಂದೆ ಹಿಂದೂ ಹಾಗೂ ಮುಸ್ಲಿಮರ ನಡುವೆ ಗಲಾಟೆ ಆದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಆ ಘಟನೆ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲು ದುರ್ಗಾ ಮಾತೆಯ ಮೆರವಣಿಗೆ ಹಾಗೂ ಮೊಹರಂ ಮೆರವಣಿಗೆ ಸಾಗುವ ಮಾರ್ಗವನ್ನು ರಾಜ್ಯ ಸರ್ಕಾರವೇ ನಿರ್ಧರಿಸಲಿದೆ.

    ದಸರಾ ಹಬ್ಬ ಕೊನೆಯಾದ ಮಾರನೇ ದಿನವೇ ಮೊಹರಂ ಇರೋದು ವಿಶೇಷ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡೋ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ.

  • ಮೈಸೂರು ವಿಶ್ವವಿದ್ಯಾಲಯಕ್ಕೆ ಮಹಿಷಾಸುರನ ಹೆಸರಿಡಬೇಕು- ಪ್ರಾಧ್ಯಾಪಕರ ಒತ್ತಾಯ

    ಮೈಸೂರು ವಿಶ್ವವಿದ್ಯಾಲಯಕ್ಕೆ ಮಹಿಷಾಸುರನ ಹೆಸರಿಡಬೇಕು- ಪ್ರಾಧ್ಯಾಪಕರ ಒತ್ತಾಯ

    ಮೈಸೂರು: ಮೈಸೂರು ವಿಶ್ವವಿದ್ಯಾಲಯಕ್ಕೆ ಮಹಿಷಾಸುರನ ಹೆಸರು ಇಡಬೇಕು. ಮಹಿಷಾಸುರನ ಹೆಸರನ್ನು ಅಜರಾಮರವಾಗಿಸಲು ಮೈಸೂರು ವಿವಿಗೆ ಮರುನಾಮಕರಣ ಮಾಡಬೇಕು ಎಂದು ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಮಹೇಶ್ಚಂದ್ರಗುರು ಹೇಳಿದ್ದಾರೆ.

    ಇದೇ ಸಂದರ್ಭದಲ್ಲಿ ನಗರದ ಬೆಂಗಳೂರು-ಮೈಸೂರು ಹೆದ್ದಾರಿಯ ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಮೀಪದ ವೃತ್ತದಲ್ಲಿ ಮಹಿಷಾಸುರನ ಬೃಹತ್ ಪ್ರತಿಮೆ ನಿರ್ಮಿಸಬೇಕು. ರಾಜ್ಯ ಸರ್ಕಾರ ಮಹಿಷ ಹಬ್ಬಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಮಹೇಶ್ಚಂದ್ರಗುರು ಆಗ್ರಹಿಸಿದರು.

    ಇಂದು ದಲಿತ ಸಂಘಟನೆಗಳು, ಪ್ರಗತಿಪರ ಒಕ್ಕೂಟ ಮೈಸೂರಿನಲ್ಲಿ ಮಹಿಷಾ ದಸರಾ ಮೆರವಣಿಗೆಯನ್ನು ಆಯೋಜನೆ ಮಾಡಿತ್ತು. ಬೆಳ್ಳಿ ರಥದಲ್ಲಿ ಮಹಿಷಾಸುರನ ಭಾವಚಿತ್ರವಿಟ್ಟು ಮೈಸೂರಿನ ಪುರಭವನದಿಂದ ಚಾಮುಂಡಿಬೆಟ್ಟದ ಮೇಲಿನ ಮಹಿಷಾಸುರನ ಪ್ರತಿಮೆವರೆಗೂ ಮೆರವಣಿಗೆ ಮಾಡಲಾಯಿತು. ಚಾಮುಂಡಿ ದಸರಾಕ್ಕಿಂತಾ ಮಹಿಷಾ ದಸರಾ ಮುಖ್ಯ ಎಂದು ಸಾರುವ ಉದ್ದೇಶದಿಂದ ಈ ಮೆರವಣಿಗೆಯನ್ನು ಕೈಗೊಳ್ಳಲಾಗಿದೆ. ಸಾಹಿತಿ ಕೆ.ಎಸ್. ಭಗವಾನ್, ಮಹೇಶ್ಚಂದ್ರಗುರು ಸೇರಿ ಹಲವರು ಭಾಗಿಯಾಗಿದ್ದಾರೆ.

  • ಮೈಸೂರಿನಲ್ಲಿ ದಸರಾಗೆ ತಯಾರಿ: ಇಂದಿನಿಂದ ಅರ್ಜುನನಿಗೆ ಮರದ ಅಂಬಾರಿ ಹೊರುವ ತಾಲೀಮು

    ಮೈಸೂರಿನಲ್ಲಿ ದಸರಾಗೆ ತಯಾರಿ: ಇಂದಿನಿಂದ ಅರ್ಜುನನಿಗೆ ಮರದ ಅಂಬಾರಿ ಹೊರುವ ತಾಲೀಮು

    ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂ ಸವಾರಿಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ದಸರಾ ಗಜಪಡೆಯ ತಾಲೀಮು ಜೋರಿದೆ.

    ಇಷ್ಟು ದಿನ ಮಣ್ಣಿನ ಮೂಟೆಗಳನ್ನು ಬೆನ್ನ ಮೇಲೆ ಹೊತ್ತು ತಾಲೀಮು ನಡೆಸುತ್ತಿದ್ದ ಅರ್ಜುನನಿಗೆ ಇವತ್ತಿನಿಂದ ಮರದ ಅಂಬಾರಿ ಕಟ್ಟಿ ತಾಲೀಮು ಆರಂಭಿಸಲಾಯಿತು. 750 ಕೆಜಿ ಚಿನ್ನದ ಅಂಬಾರಿ ಹೊತ್ತು ಅರ್ಜುನ ಸಾಗಬೇಕಿರುವ ಕಾರಣ ಇವತ್ತಿನಿಂದ 250 ಕೆಜಿ ತೂಕದ ಮರದ ಅಂಬಾರಿ ಹಾಗೂ 500 ಕೆಜಿ ತೂಕದ ಮರಳಿನ ಮೂಟೆಗಳನ್ನು ಅರ್ಜನನ ಬೆನ್ನಿಗೆ ಕಟ್ಟಿ ತಾಲೀಮು ಶುರು ಮಾಡಲಾಯಿತು.

    ಮೈಸೂರು ಅರಮನೆ ಆವರಣದಲ್ಲಿ ಅರ್ಜುನನ ಬೆನ್ನಿಗೆ ಮರದ ಅಂಬಾರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಟ್ಟಿದರು. ಡಿಸಿಎಫ್ ಏಡುಕುಂಡಲ, ಆನೆ ವೈದ್ಯ ಡಾ.ನಾಗರಾಜ್ ಮರದ ಅಂಬಾರಿಗೆ ಪೂಜೆ ಸಲ್ಲಿಸಿದರು. ಮರದ ಅಂಬಾರಿ ಹೊತ್ತು ಸಾಗುವ ಕ್ಯಾಪ್ಟನ್ ಅರ್ಜುನನಿಗೆ ಕುಮ್ಕಿ ಆನೆಗಳಾದ ವಿಜಯ, ವರಲಕ್ಷ್ಮಿ ಸಾಥ್ ನೀಡಿದವು.

  • ನನ್ನ ಪಾತ್ರ ಇರಲ್ಲ, ದಸರಾ ಉಸ್ತುವಾರಿ ಅಮ್ಮನೇ ನೋಡಿಕೊಳ್ಳುತ್ತಾರೆ: ಯದುವೀರ್ ಒಡೆಯರ್

    ನನ್ನ ಪಾತ್ರ ಇರಲ್ಲ, ದಸರಾ ಉಸ್ತುವಾರಿ ಅಮ್ಮನೇ ನೋಡಿಕೊಳ್ಳುತ್ತಾರೆ: ಯದುವೀರ್ ಒಡೆಯರ್

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2017ರ ಅರಮನೆಯಲ್ಲಿ ಸಿಂಹಾಸನ ಜೋಡಣೆಯಲ್ಲಿ ನನ್ನ ಪಾತ್ರ ಇರುವುದಿಲ್ಲ. ಎಲ್ಲ ಕಾರ್ಯಕ್ರಮಗಳನ್ನು ಅಮ್ಮನೆ ನೋಡಿಕೊಳ್ಳುತ್ತಾರೆ ಎಂದು ಯದುವಂಶದ ಮಹಾರಾಜ ಯದುವೀರ್ ಒಡೆಯರ್ ಹೇಳಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂದು ಸಂಪ್ರದಾಯದಂತೆ ಸಿಂಹಾಸನ ಜೋಡಣೆಯಾಗಿದೆ. ಎಲ್ಲ ಕಾರ್ಯಕ್ರಮಗಳು ಅರಮನೆ ಸಂಪ್ರದಾಯದಲ್ಲಿ ನಡೆಯಲಿವೆ. ಅಮ್ಮನೆ ಎಲ್ಲ ಉಸ್ತುವಾರಿ ವಹಿಸಿಕೊಂಡು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

    ವಿಜಯದಶಮಿಯ ಕಾರ್ಯಕ್ರಮಗಳು ಸಹ ನಿಗದಿಯಂತೆ ನಡೆಯಲಿವೆ. ಹಿರಿಯರು ನಡೆಸಿಕೊಂಡು ಬಂದಿರುವಂತೆ ಸಂಪ್ರದಾಯದ ಬದ್ಧವಾಗಿ ದಸರಾ ನಡೆಯಲಿದೆ. ನಾನು ಸಹ ದಸರಾ ಪೂಜೆಗಳಿಗೆ ಸಿದ್ಧವಾಗುತ್ತಿದ್ದೇನೆ. ಕಂಕಣಧಾರಣೆ ಕಾರ್ಯಕ್ರಮವು ನಿಗದಿಯಂತೆ ನಡೆಯಲಿದೆ ಎಂದು ಹೇಳಿದರು.

     

  • ಅಭಿಮಾನಿಗಳಿಗೆ ದಸರಾ ಗಿಫ್ಟ್ ಕೊಡಲಿದ್ದಾರೆ ಅಜಯ್ ದೇವಗನ್!

    ಮುಂಬೈ: ನಟ ಅಜಯ್ ದೇವಗನ್ ತಮ್ಮ ದಸರಾ ಹಬ್ಬದಂದು ತಮ್ಮ ಮುಂಬರುವ `ಗೋಲ್ಮಾಲ್ ಅಗೇನ್’ ಚಿತ್ರದ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳಿಗೆ ಹಬ್ಬದ ಗಿಫ್ಟ್ ಕೊಡಲಿದ್ದಾರೆ.

    ಕಳೆದ ವಾರ ತೆರೆಕಂಡಿರೋ ಅಜಯ್ ನಟನೆಯ `ಬಾದ್ ಶಾಹೋ’ ಬಾಕ್ಸ್ ಆಫೀಸ್ ನಲ್ಲಿ ಹಣ ದೋಚುತ್ತಿದೆ. ಸಿನಿಮಾ ಇದೂವರೆಗೂ ಬರೋಬ್ಬರಿ 70 ಕೋಟಿ ರೂ.ಗೆ ಅಧಿಕ ಸಂಪಾದನೆ ಮಾಡಿದೆ ಎಂದು ಚಿತ್ರದ ಮೂಲಗಳು ಸ್ಪಷ್ಟಪಡಿಸಿವೆ.

    ಈಗಾಗಲೇ ಮೂರು ಆವೃತ್ತಿಗಳಲ್ಲಿ ತೆರೆಕಂಡಿರೋ ಗೋಲ್ಮಾಲ್ ಈಗ ನಾಲ್ಕನೇಯ ಬಾರಿಗೆ ಮತ್ತೊಮ್ಮೆ ಅಭಿಮಾನಿಗಳನ್ನು ರಂಜಿಸಲು ಬರಲಿದೆ. ಸಿನಿಮಾ ಸೆಟ್ಟೇರಿದಾಗಿನಿಂದಲೂ ಕುತೂಹಲ ಹುಟ್ಟಿಸಿರುವ ಚಿತ್ರದ ಮೊದಲ ಟ್ರೇಲರ್ ಸೆಪ್ಟಂಬರ್ 29ರಂದು ಬಿಡುಗಡೆಯಾಗಲಿದೆ. 2006ರಲ್ಲಿ ಮೊದಲ ಬಾರಿಗೆ ಗೋಲ್ಮಾಲ್ ತೆರೆಕಂಡು ನೋಡುಗರನ್ನು ನಗಿಸುವ ಮೂಲಕ ಯಶಸ್ವಿಯಾಗಿತ್ತು. ಮುಂದೆ ಗೋಲ್ಮಾಲ್ ರಿಟರ್ನ್ (2008) ಮತ್ತು ಗೋಲ್ಮಾಲ್ (2010) ರಲ್ಲಿ ತೆರೆಕಂಡಿದ್ದವು. ಈಗ ಇದೇ ಸಿನಿಮಾದ ಮುಂದುವರೆದ ಭಾಗ ದೀಪಾವಳಿಯಂದು ದೇಶಾದ್ಯಂತ ಬಿಡುಗೆಯಗಾಲಿದೆ.

    ಗೋಲ್ಮಾಲ್ ಅಗೇನ್ ಸಿನಿಮಾದಲ್ಲಿ ಅಜಯ್ ದೇವಗನ್‍ಗೆ ಜೊತೆಯಾಗಿ ಪರಿಣೀತಿ ಚೋಪ್ರಾ ಜೋಡಿಯಾಗಿದ್ದಾರೆ. ಇನ್ನುಳಿದಂತೆ ಮೊದಲಿನ ಆವೃತ್ತಿಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ಅರ್ಷದ್ ವಾರ್ಸಿ, ತುಶಾರ್ ಕಪೂರ್, ಕುನಾಳ್ ಕೇಮು ಸೇರಿದಂತೆ ದೊಡ್ಡ ತಾರಗಣವನ್ನು ಚಿತ್ರ ಹೊಂದಿದೆ. ಗೋಲ್ಮಾಲ್ ಅಗೇನ್‍ಗೆ ರೋಹಿತ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳುವ ಜೊತೆಗೆ ಅಜಯ್ ದೇವಗನ್ ಜೊತೆಗೆ ಬಂಡವಾಳನ್ನೂ ಹೂಡಿದ್ದಾರೆ.

    https://www.instagram.com/p/BY93WjHFs_9/?tagged=golmaalagain

    https://www.instagram.com/p/BY9_5HJgSEz/?tagged=golmaalagain

    https://www.instagram.com/p/BXuocLljX-c/?tagged=golmaalagain

    https://www.instagram.com/p/BY5yGhPH5io/?tagged=golmaalagain

    https://www.instagram.com/p/BY52bHEDCLo/?tagged=golmaalagain

    https://www.instagram.com/p/BY1bgkYDLZm/?tagged=golmaalagain

    https://www.instagram.com/p/BYtZV6slBaO/?tagged=golmaalagain

    https://www.instagram.com/p/BYflPLODeFW/?tagged=golmaalagain

    https://www.instagram.com/p/BYOIx7_Fef6/?tagged=golmaalagain