Tag: ದಾನಿಶ್ ಸೇಠ್

  • ಮೋಹನ್ ಲಾಲ್ ಜೊತೆ ನಟಿಸಲಿದ್ದಾರೆ ದಾನಿಶ್ ಸೇಠ್

    ಮೋಹನ್ ಲಾಲ್ ಜೊತೆ ನಟಿಸಲಿದ್ದಾರೆ ದಾನಿಶ್ ಸೇಠ್

    ನ್ನಡದ ಪ್ರತಿಭಾನ್ವಿತ ನಟ ದಾನಿಶ್ ಸೇಠ್ (Danish Sait) ಇದೀಗ ಮಾಲಿವುಡ್‌ನತ್ತ (Mollywood) ಮುಖ ಮಾಡಿದ್ದಾರೆ. ಮಲಯಾಳಂನ ಸೂಪರ್ ಸ್ಟಾರ್ ಮೋಹನ್ ಲಾಲ್ (MohanLal) ಜೊತೆ ದಾನಿಶ್ ಸೇಠ್ ತೆರೆಹಂಚಿಕೊಳ್ಳಲಿದ್ದಾರೆ.

    `ಹಂಬಲ್ ಪೊಲಿಟಿಶಿಯನ್ ನೊಗ್‌ರಾಜ್’ ಖ್ಯಾತಿಯ ದಾನಿಶ್ ವಿಭಿನ್ನ ಶೈಲಿಯ ನಿರೂಪಣೆ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ್ದಾರೆ. `ಹಂಬಲ್ ಪೊಲಿಟಿಶಿಯನ್ ನೊಗ್‌ರಾಜ್’, ಫ್ರೆಂಚ್ ಬಿರಿಯಾನಿ, ಒನ್ ಕಟ್ ಟು ಕಟ್ ಸಿನಿಮಾ ಮೂಲಕ ನಟರಾಗಿಯೂ ಗಮನ ಸೆಳೆದಿದ್ದಾರೆ. ಇವರೀಗ ಮಲಯಾಳಂ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

    ಮಲಯಾಳಂನ ಸೂಪರ್‌ಸ್ಟಾರ್ ಮೋಹನ್‌ಲಾಲ್ ಅವರಿಗೆ ಲಿಜು ಜೋಸ್ (Liju Jose) ನಿರ್ದೇಶನ ಮಾಡುತ್ತಿರುವ `ಮಲೈ ಕೋಟೆ ವಾಲಿಬಾನ್’ ಸಿನಿಮಾದಲ್ಲಿ ದಾನಿಶ್ ಸೇಠ್ ಪ್ರಮುಖ ಪಾತ್ರಕ್ಕೆ ಆಯ್ಕೆಯಾಗಿ, ಈಗಾಗಲೇ ಇದರ ಚಿತ್ರಿಕರಣದಲ್ಲಿ ತೊಡಗಿಕೊಂಡಿದ್ದಾರೆ. ಈಗಾಗಲೇ 15 ದಿನಗಳಿಂದ ಚಿತ್ರಿಕರಣದಲ್ಲಿ ಭಾಗಿಯಾಗಿರುವ ದಾನಿಶ್ ಇನ್ನೂ ಒಂದೆರಡು ತಿಂಗಳು ಶೂಟಿಂಗ್ ನಡೆಯಲಿದೆ. ಇದನ್ನೂ ಓದಿ: ಮತ್ತೆ ರಶ್ಮಿಕಾ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ವಿಜಯ್ ದೇವರಕೊಂಡ

    ಈಗಾಗಲೇ ಹಾಸ್ಯಮಯ ಪಾತ್ರಗಳ ಮೂಲಕ ಗುರುತಿಸಿಕೊಂಡಿರುವ ದಾನಿಶ್ ಈ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಸ್ಯದಿಂದ ಸಿಕ್ಕಾಪಟ್ಟೆ ದೂರವಿರುವ ರೋಲ್‌ನಲ್ಲಿ ನಟ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಮೋಹನ್ ಲಾಲ್ ಜೊತೆ ಕನ್ನಡದ ನಟ ಮಾಲಿವುಡ್‌ಗೆ ಎಂಟ್ರಿ ಕೊಡ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಪ್ಪು ಆಸೆ ಕೊನೆಗೂ ಈಡೇರಲೇ ಇಲ್ಲ – ಖ್ಯಾತ ನಟನ ಬಗ್ಗೆ ಪುನೀತ್ ಮಾತು

    ಅಪ್ಪು ಆಸೆ ಕೊನೆಗೂ ಈಡೇರಲೇ ಇಲ್ಲ – ಖ್ಯಾತ ನಟನ ಬಗ್ಗೆ ಪುನೀತ್ ಮಾತು

    ಬೆಂಗಳೂರು: ಹೃದಯಾಘಾತದಿಂದ ನಟ ಪುನೀತ್ ರಾಜ್‍ಕುಮಾರ್ ನಿಧನರಾದ ಸುದ್ದಿ ಕನ್ನಡ ಚಿತ್ರರಂಗ ಹಾಗೂ ಅಭಿಮಾನಿಗಳಿಗೆ ನಿಜಕ್ಕೂ ಆಘಾತಕಾರಿ ವಿಷಯವಾಗಿದೆ. ಪುನೀತ್ ನಿಧನಕ್ಕೆ ಕನ್ನಡ ಚಿತ್ರರಂಗದ ನಟ-ನಟಿಯರು ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ಸೂಚಿಸಿದ್ದಾರೆ. ಚಿತ್ರರಂಗದಲ್ಲಿ ತನ್ನ ಮಾರ್ಗದರ್ಶಕ ಅಪ್ಪು ನಿಧನಕ್ಕೆ ಸಂತಾಪ ಸೂಚಿಸಿರುವ ನಟ ದಾನಿಶ್ ಸೇಠ್ ಅವರು, ಪುನೀತ್ ರಾಜ್‍ಕುಮಾರ್ ಅವರ ಕೊನೆಗೂ ಈಡೇರದ ಒಂದು ಆಸೆಯ ಕುರಿತು ಇನ್‍ಸ್ಟಾ ಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

    DANISH SAIT

    “ನಾನು ಛಿದ್ರಗೊಂಡಿದ್ದೇನೆ, ಹೃದಯ ಚೂರಾಗಿ ಹೋಗಿದೆ. ನನ್ನ ಬಾಯಲ್ಲಿ ಪದಗಳೇ ಹೊರಡದಾಗಿದೆ” ಎಂದು ದಾನಿಶ್ ನೋವಿನಿಂದ ಇನ್‍ಸ್ಟಾದಲ್ಲಿ ಬರೆದುಕೊಂಡಿದ್ದಾರೆ.

    INSTA

    ನನ್ನ ಪುನೀತ್ ಅಣ್ಣ ಇನ್ನಿಲ್ಲ, ಆತ ವಿಶ್ವದಲ್ಲೇ ಒಬ್ಬ ಅತ್ಯುತ್ತಮ ಮಾನವೀಯ ವ್ಯಕ್ತಿ ಎಂದು ಸ್ಮರಿಸಿದ್ದಾರೆ. ಇದನ್ನೂ ಓದಿ: 30 ವರ್ಷದ ಒಡನಾಟ ಹೇಗೆ ಮರೆಯಲಿ: ಜಗ್ಗೇಶ್ ಕಣ್ಣೀರು

    ಪುನೀತ್ ರಾಜ್‍ಕುಮಾರ್ ಅವರ ಪಿಆರ್‍ಕೆ ಪ್ರೊಡಕ್ಷನ್‍ನ ಬೆಂಬಲದೊಂದಿಗೆ ಫ್ರೆಂಚ್ ಬಿರಿಯಾನಿ ಕಳೆದ ವರ್ಷ ಜುಲೈನಲ್ಲಿ ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಬಿಡುಗಡೆಯಾಯಿತು. ಪುನೀತ್ ರಾಜ್‍ಕುಮಾರ್ ಒಮ್ಮೆ ಜೆಫ್ ಬೆಜೋಸ್ ಜೊತೆ ಅಮೆಜಾನ್ ಕಾರ್ಯಕ್ರಮಕ್ಕೆ ಹಾಜರಾಗಿದ್ದರು. ಇದು ಸಿನಿಮಾ ತಾರೆಯರ ಗ್ಯಾಲಕ್ಸಿಯೊಂದಿಗಿನ ಕಾರ್ಯಕ್ರಮವಾಗಿದ್ದರಿಂದ ಎಲ್ಲರೂ ಪರಸ್ಪರ ಭೇಟಿಯಾಗುವುದು ಹಾಗೂ ಜೆಫ್ ಬೆಜೋಸ್ ಅವರೊಂದಿಗೆ ಫೋಟೊ ಕ್ಲಿಕ್ಕಿಸಿಕೊಳ್ಳುವಲ್ಲಿ ನಿರತರಾಗಿದ್ದರು.

    PANKAJ TRIPATHI

    ಆದರೆ, ಆ ಸ್ಥಳದಲ್ಲಿ ಪುನೀತ್ ರಾಜ್‍ಕುಮಾರ್ ಅವರು ಎಲ್ಲರಿಗಿಂತ ಭಿನ್ನವಾಗಿ ಕಾಣಿಸಿಕೊಂಡರು. ಆಗ ಅಮೆಜಾನ್ ಪ್ರೈಮ್ ವಿಡಿಯೊ ತಂಡ ಪುನೀತ್ ಅವರ ಬಳಿಗೆ ಹೋಗಿ, “ಅಪ್ಪು, ನೀವು ಯಾಕೆ ಯಾರೊಂದಿಗೂ ಫೋಟೊ ತೆಗೆದುಕೊಳ್ಳುತ್ತಿಲ್ಲ? ಎಲ್ಲರಿಂದಲೂ ದೂರ ಹೋಗಿ ಸುಮ್ಮನೆ ಯಾಕೆ ನಿಂತಿದ್ದೀರಿ? ಯಾರ ಹೆಸರನ್ನಾದರೂ ಹೇಳಿ ಅವರನ್ನು ನಿಮ್ಮ ಬಳಿಗೆ ಫೋಟೊ ತೆಗೆಸಿಕೊಳ್ಳಲು ಕರೆತರುತ್ತೇವೆ” ಎಂದು ಕೇಳಿತಂತೆ. ಆಗ ಪುನೀತ್ ಅವರು ನಸು ನಗುತ್ತಲೇ, “ನಿಜವಾಗಿಯೂ? ನಾನು ನಟ ಪಂಕಜ್ ತ್ರಿಪಾಠಿ ಅವರನ್ನು ಭೇಟಿಯಾಗಬೇಕು” ಎಂದು ಮನದಾಸೆ ವ್ಯಕ್ತಪಡಿಸಿದ್ದರಂತೆ.  ಇದನ್ನೂ ಓದಿ: ಅಪ್ಪು ಕುಟುಂಬವನ್ನು ವೈಯಕ್ತಿಕವಾಗಿ ಭೇಟಿ ಮಾಡುತ್ತೇನೆ: ರಮ್ಯಾ

    ಸಿನಿಮಾರಂಗದಲ್ಲಿ ನಟ ಪಂಕಜ್ ತ್ರಿಪಾಠಿ ಇಂದು ಎಲ್ಲರಿಗೂ ಚಿರಪರಿಚಿತ. ಆದರೆ 2012ರಲ್ಲಿ ತೆರೆಕಂಡ “ಗ್ಯಾಂಗ್ಸ್ ಆಫ್ ವಸ್ಸೆಯ್‍ಪುರ” ಸಿನಿಮಾಗೂ ಮುಂಚೆ ತಾನು ಚಿತ್ರರಂಗದಲ್ಲಿ ಗುರುತಿಸಿಕೊಳ್ಳಲು ಸಾಕಷ್ಟು ಹೋರಾಟ ನಡೆಸಿದ್ದರು ಎಂಬುದು ಪುನೀತ್ ಅವರ ಅಭಿಪ್ರಾಯವಾಗಿತ್ತು.

    PUNEET

    “ನನ್ನ ಅಪ್ಪು ಅಣ್ಣ ಯಾವಾಗಲೂ ಕಿಕ್ಕಿರಿದ ಕೋಣೆಯಲ್ಲಿ ಪ್ರತಿಭೆಯನ್ನು ಗುರುತಿಸುತ್ತಿದ್ದರು” ಸೇಠ್ ಸ್ಮರಿಸಿದ್ದಾರೆ.