Tag: ದಾವಣೆಗೆರೆ

  • ಅಕ್ಕಿಕಾಳಿನ ಆಕೃತಿ ನಿರ್ಮಿಸಿ, ಅನ್ನಭಾಗ್ಯ ಸ್ಮರಿಸಿದ ಸಿದ್ದು ಅಭಿಮಾನಿ

    ಅಕ್ಕಿಕಾಳಿನ ಆಕೃತಿ ನಿರ್ಮಿಸಿ, ಅನ್ನಭಾಗ್ಯ ಸ್ಮರಿಸಿದ ಸಿದ್ದು ಅಭಿಮಾನಿ

    ಚಾಮರಾಜನಗರ: ವಿಪಕ್ಷ ನಾಯಕ ಸಿದ್ದರಾಮಯ್ಯರ ಅಮೃತಮಹೋತ್ಸವಕ್ಕೆ ಸಾಗರೋಪಾದಿಯಲ್ಲಿ ಅಭಿಮಾನಿಗಳು ನೆರೆದಿದ್ದಾರೆ. ಲಕ್ಷಾಂತರ ಅಭಿಮಾನಿಗಳು ವಿವಿಧ ರೀತಿಯಲ್ಲಿ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

    ಒಂದೆಡೆ ಛಾಯಾಚಿತ್ರಗಳಲ್ಲಿ ಸಿದ್ದರಾಮಯ್ಯರ ಬದುಕು ಮತ್ತು ಸಾಧನೆ ಅನಾವರಣಗೊಳಿಸಲಾಗಿದೆ. ಕೆಲವು ಅಭಿಮಾನಿಗಳು ಎದೆಯ ಮೇಲೆ ಟ್ಯಾಟು ಹಾಕಿಸಿಕೊಂಡು ಸಂಭ್ರಮಿಸಿದ್ದಾರೆ. ಈ ನಡುವೆ ಯುವ ಕಲಾವಿದನೊಬ್ಬ ಅಕ್ಕಿ ಕಾಳಿನಲ್ಲಿ ಸಿದ್ದರಾಮಯ್ಯ ಅವರ ಪುತ್ಥಳಿ ನಿರ್ಮಿಸುವ ಮೂಲಕ ಅಭಿಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಷ್ಟಲಿಂಗ ಪೂಜೆ ಹೇಳಿಕೊಡಲು ದೆಹಲಿಗೆ ಬನ್ನಿ ಅಂದ ರಾಹುಲ್

    ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಟಿ.ಹೊಸೂರು ಗ್ರಾಮದ ಕಲಾವಿದ ಬಿ.ಮಹೇಶ್ ತಮ್ಮ ಕೈಳಕದಿಂದ ಅಕ್ಕಿ ಕಾಳಿನಲ್ಲಿ ಸಿದ್ದರಾಮಯ್ಯರ ಆಕೃತಿ ನಿರ್ಮಿಸಿ, ಅನ್ನಭಾಗ್ಯ ಯೋಜನೆಯನ್ನು ಸ್ಮರಿಸಿದ್ದಾರೆ. ಇದನ್ನೂ ಓದಿ: ಈಡಿಗ-ಬಿಲ್ಲವ ಸಮುದಾಯದ ಯುವಕರನ್ನು ಬಿಜೆಪಿ ಯೂಸ್ & ಥ್ರೋ ಮಾಡುತ್ತಿದೆ: ಪ್ರಣವಾನಂದ ಸ್ವಾಮೀಜಿ

    ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದ ನಂತರ ಮೊದಲು ಘೋಷಣೆ ಮಾಡಿದ ಮಹತ್ವ ಪೂರ್ಣ ಯೋಜನೆಯೇ ಅನ್ನಭಾಗ್ಯ. ಅವರ 75ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಈ ಯೋಜನೆಯನ್ನು ನೆನಪಿಸುವ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ. ಸಮಾರಂಭದಲ್ಲಿ ಅಕ್ಕಿ ಕಾಳಿನ ಪ್ರತಿಮೆಯನ್ನು ಸಿದ್ದರಾಮಯ್ಯರಿಗೆ ಕೊಡಲು ಅಭಿಮಾನಿ ಮಹೇಶ್ ತೆರಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಾಮನೂರು ಶಿವಶಂಕರಪ್ಪ ಮನೆಗೆ ಡಿ ಬಾಸ್ ಭೇಟಿ

    ಶಾಮನೂರು ಶಿವಶಂಕರಪ್ಪ ಮನೆಗೆ ಡಿ ಬಾಸ್ ಭೇಟಿ

    – ದಾವಣೆಗೆರೆಯ ಮಾಜಿ ಸಚಿವರ ಮನೆಗೆ ಭೇಟಿ

    ದಾವಣಗೆರೆ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿ ಪ್ರೀತಿ ಇರುವುದು ತಿಳಿದೇ ಇದೆ. ಅದೇ ರೀತಿ ಇದೀಗ ಗೋವು ಸಾಕಣೆ ಹಾಗೂ ಕುದುರೆ ಸಾಕಣೆ ಕುರಿತು ಮಾಹಿತಿ ಪಡೆಯಲು ಶಾಸಕ, ಮಾಜಿ ಸಚಿವ, ಶಾಮನೂರು ಶಿವಶಂಕರಪ್ಪನವರ ಫಾರ್ಮ್ ಹೌಸ್‍ಗೆ ಭೇಟಿ ನೀಡಿದ್ದಾರೆ.

    ಇಂದು ಮಧ್ಯಾಹ್ನದಿಂದ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿಯಲ್ಲಿನ ಶಾಮನೂರ ಅವರ ತೋಟಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿನ ಗೋ ಪಾಲನೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ನಂತರ ದಾವಣಗೆರೆ ನಗರದ ಕಲ್ಲೇಶ್ವರ ರೈಸ್ ಮಿಲ್ ಬಳಿ ಕುದುರೆಗಳ ಪಾಲನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ವೇಳೆ ನಟ ದರ್ಶನ್‍ಗೆ ಶಾಸಕ ಶಾಮನೂರ ಶಿವಶಂಕರಪ್ಪ ಪುತ್ರ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಾಥ್ ನೀಡಿದ್ದಾರೆ.

    ಇಂದು ಸಂಜೆ ವರೆಗೆ ವಿವಿಧ ಫಾರ್ಮ್ ಹೌಸ್‍ಗೆ ದರ್ಶನ್ ಭೇಟಿ ನೀಡಿದ್ದು, ಮಾಹಿತಿ ಸಂಗ್ರಹಿಸಿದ್ದಾರೆ. ನಂತರ ರಾತ್ರಿ ಎಸ್‍ಎಸ್ ಮನೆಯಲ್ಲಿಯೇ ಊಟ ಮಾಡಿದ್ದಾರೆ. ಇಂದು ದಾವಣಗೆರೆಯಲ್ಲಿಯೇ ವಾಸ್ತವ್ಯ ಹೂಡಲಿದ್ದು, ಬಾಪೂಜಿ ಗೆಸ್ಟ್ ಹೌಸ್‍ನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

    ಬೆಳಗ್ಗೆ ಮತ್ತೆ ಕೆಲ ಪ್ರಗತಿಪರ ರೈತರನ್ನು ಡಿ ಬಾಸ್ ಭೇಟಿ ಮಾಡಲಿದ್ದು, ವಿವಿಧ ವಿಚಾರಗಳ ಕುರಿತು ಚರ್ಚಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವೇಳೆ ನಟ ದರ್ಶನ್ ನೋಡಿದ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದಿದ್ದರು.

  • ಚಂದ್ರಗ್ರಹಣ ಬೆಳದಿಂಗಳಲ್ಲಿ ಪ್ರಸಾದ ಸ್ವೀಕರಿಸಿದ ಮುರುಘಾ ಶರಣರು

    ಚಂದ್ರಗ್ರಹಣ ಬೆಳದಿಂಗಳಲ್ಲಿ ಪ್ರಸಾದ ಸ್ವೀಕರಿಸಿದ ಮುರುಘಾ ಶರಣರು

    ದಾವಣೆಗೆರೆ: ಚಂದ್ರಗ್ರಹಣದ ಹಿನ್ನೆಲೆ ದೇಶಾದ್ಯಂತ ಕೆಲ ದೇವಾಲಯಗಳಲ್ಲಿ ಪೂಜೆ ಹೋಮ ಹವನ ಮಾಡಿ ಗ್ರಹಣ ದೋಷವನ್ನು ನಿವಾರಣೆ ಮಾಡಿಕೊಳ್ಳಲು ಪೂಜೆ ಮಾಡಿರುತ್ತಾರೆ. ಆದರೆ ದಾವಣಗೆರೆಯ ಮುರುಘಾ ಶ್ರೀ ಡಾ. ಶಿವಮೂರ್ತಿ ಮುರುಘಾ ಶರಣರು ಗ್ರಹಣದ ವೇಳೆಯೇ ಭಕ್ತರೊಂದಿಗೆ ಪ್ರಸಾದ ಸ್ವೀಕರಿಸಿದರು.

    ಜಯದೇವ ವೃತ್ತದ ಬಳಿ ಇರುವ ಶಿವಯೋಗಿ ಮಂದಿರದಲ್ಲಿ ಪ್ರಸಾದ ಸ್ವೀಕರಿಸಿದ ಡಾ.ಶಿವಮೂರ್ತಿ ಮುರಘಾ ಶರಣರು, ಗ್ರಹಣದ ಬಗ್ಗೆ ವೈಜ್ಞಾನಿಕ ತಿಳುವಳಿಕೆ ನೀಡಿದರು. ಗ್ರಹಣ ಆರಂಭ ಆಗುತ್ತಿದ್ದಂತೆ ಇಷ್ಟಲಿಂಗಪೂಜೆ ಮಾಡಿ ಪ್ರಸಾದ ಸ್ವೀಕರಿಸಿ ಭಕ್ತರಿಗೂ ಕೂಡ ಪ್ರಸಾದ ಸ್ವೀಕರಿಸಲು ಹೇಳಿ ಬೆಳದಿಂಗಳ ಬೆಳಕಿನಲ್ಲಿ ಪ್ರಸಾದ ಸ್ವೀಕರಿಸಿದರು.

    ಸೂರ್ಯ ಹಾಗೂ ಚಂದ್ರಗ್ರಹಣಗಳು ಒಂದು ವಿಸ್ಮಯಗಳು ಅವುಗಳನ್ನು ನೋಡಿ ಖುಷಿ ಪಡಬೇಕು. ಅದನ್ನು ಬಿಟ್ಟು ಗ್ರಹಣದ ಸಮಯದಲ್ಲಿ ಮೂಡ ನಂಬಿಕೆಗಳನ್ನು ನಂಬಿ ಅವುಗಳನ್ನು ವೀಕ್ಷಿಸಲು ಜನರು ತಪ್ಪಿಸಿಕೊಳ್ಳುತ್ತಿದ್ದಾರೆ. ಸೂರ್ಯ ಗ್ರಹಣ ಇದ್ದಾಗ ಮನೆಯಲ್ಲಿನ ನೀರನ್ನು ಖಾಲಿ ಮಾಡುತ್ತಾರೆ. ಆದರೆ ಅದೇ ನೀರು ಸಾಗರೋಪಾದಿಯಲ್ಲಿ ಇರುತ್ತೆ ಅದನ್ನು ಚಲ್ಲುವುದಕ್ಕೆ ಆಗುತ್ತಾ. ಗ್ರಹಣ ಸಂದರ್ಭದಲ್ಲಿ ಯಾವ ದೇವರು ಕೂಡ ಮಲಿನವಾಗುವುದಿಲ್ಲ. ಆದರೆ ನಮ್ಮ ಜನ ಮೂಡ ನಂಬಿಕೆಯಿಂದ ದೇವಸ್ಥಾನವನ್ನು ನೀರಿನಿಂದ ಶುದ್ಧಿ ಮಾಡುತ್ತಾರೆ. ಜೀವನದಲ್ಲಿ ಇಂತಹುಗಳ ಬಗ್ಗೆ ನಂಬಿಕೆ ಇರಲಿ, ಆದರೆ ಅಂಧಾನುಕರಣೆ ಇರಬಾರದು ಎಂದು ಡಾ.ಶಿವಮೂರ್ತಿ ಮುರಘಾ ಶರಣರು ಭಕ್ತರಿಗೆ ತಿಳಿಸಿದರು.

    ಈ ವೇಳೆ ಸ್ವಾಮೀಜಿ ಜೊತೆ ಭೋವಿ ಗುರುಪೀಠ ಇಮ್ಮಡಿ ಸಿದ್ದರಾಮ ಸ್ವಾಮೀಜಿ, ಸಿರಸಿ ಮಲ್ಲಿಕಾರ್ಜುನ ಸ್ವಾಮೀಜಿ, ದಾವಣಗೆರೆಯ ಬಸವಪ್ರಭು ಸ್ವಾಮೀಜಿ ಹಾಗೂ ಭಕ್ತರು ಸೇರಿ ಪ್ರಸಾದ ಸ್ವೀಕಾರಿಸಿದರು.

  • ಶಾಸಕರ ಜನಸಂಪರ್ಕ ಕಚೇರಿಗೆ ಓಡೋಡಿ ಬಂದ ರೇಣುಕಾಚಾರ್ಯ

    ಶಾಸಕರ ಜನಸಂಪರ್ಕ ಕಚೇರಿಗೆ ಓಡೋಡಿ ಬಂದ ರೇಣುಕಾಚಾರ್ಯ

    ದಾವಣಗೆರೆ: ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ನೀಡಬೇಕಾಗಿದ್ದ ಪರಿಹಾರ ಸಾಮಗ್ರಿಗಳನ್ನು ಶಾಸಕರ ಜನ ಸಂಪರ್ಕ ಕಚೇರಿಯಲ್ಲಿ ಇಟ್ಟುಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ಪಬ್ಲಿಕ್ ಟಿವಿ ವರದಿ ಮಾಡುತ್ತಿದಂತೆ ಶಾಸಕ ರೇಣುಕಾಚಾರ್ಯ ಅವರು ಓಡೋಡಿ ಬಂದು ಸ್ಪಷ್ಟನೆ ನೀಡಿದ್ದಾರೆ.

    ಜಿಲ್ಲೆಯ ಹೊನ್ನಾಳಿ ತಾಲೂಕಿನ ಸುತ್ತಾಮುತ್ತ ಕಳೆದ ನಾಲ್ಕೈದು ತಿಂಗಳ ಹಿಂದೆ ತುಂಗಾಭದ್ರ ನದಿಯ ನೀರು ಹೆಚ್ಚಾದ ಹಿನ್ನೆಲೆಯಲ್ಲಿ ಪ್ರವಾಹ ಉಂಟಾಗಿತ್ತು. ಇದರಿಂದ ತಾಲ್ಲೂಕಿನ ಸುತ್ತ ಮುತ್ತಲಿನ ಗ್ರಾಮದ ಜನರು ನಿರಾಶ್ರಿತರಿಗೆ ನೆರವಾಗಲು ಅಗತ್ಯ ಸಾಮಗ್ರಿಗಳನ್ನು ಹಾಗೂ ದವಸ ಧಾನ್ಯಗಳನ್ನು ನೀಡಿದ್ದರು. ಆದರೆ ಶಾಸಕ ರೇಣುಕಾಚಾರ್ಯ ಅವರಿಗೆ ಒಪ್ಪಿಸಿದ ಸಾಮಗ್ರಿಗಳನ್ನು ನಿರಾಶ್ರಿತರಿಗೆ ನೀಡದೆ ಶಾಸಕರ ಜನ ಸಂಪರ್ಕ ಕೇಂದ್ರದಲ್ಲಿ ಸಂಗ್ರಹಿಸಿಡಲಾಗಿತ್ತು. ಕಿಂಟ್ವಾಲ್ ಗಟ್ಟಲೆ ಸಾಮಗ್ರಿಗಳನ್ನು ಹೆಚ್ಚು ದಿನಗಳ ಕಾಲ ಸಂಗ್ರಹಿಸಿಟ್ಟ ಕಾರಣ ಹಾಳಾಗುವ ಹಂತಕ್ಕೆ ತಲುಪಿದ್ದವು, ಈ ಕುರಿತ ವರದಿಯನ್ನು ಪಬ್ಲಿಕ್ ಟಿವಿ ಪ್ರಸಾರ ಮಾಡಿತ್ತು.

    ವರದಿ ಪ್ರಸಾರವಾಗುತ್ತಿದಂತೆ ಎಚ್ಚೆತ್ತ ಶಾಸಕ ರೇಣುಚಾರ್ಯ ಅವರು, ಕೂಡಲೇ ಸ್ಥಳಕ್ಕೆ ಓಡೋಡಿ ಬಂದು, ಸಾಮಗ್ರಿಗಳನ್ನು ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಹೊನ್ನಾಳಿಯಲ್ಲಿರುವ ನನ್ನ ಕಚೇರಿಗೆ ಇದೂವರೆಗೂ ನಾನು ಆಗಮಿಸಿಲ್ಲ. ಸಂಗ್ರಹಿಸಿದ್ದ 46 ಲಕ್ಷ ರೂ. ಹಣವನ್ನು ಸಿಎಂ ಪರಿಹಾರ ನಿಧಿ ನೀಡಿದ್ದೇವೆ. ರೈತರಿಗೆ ಪರಿಹಾರವಾಗಿ ನೀಡಿದ್ದ ಹಣ ಅವರ ಬ್ಯಾಂಕ್ ಖಾತೆ ಜಮೆ ಮಾಡಿದ್ದೇವೆ. 7000 ಬಟ್ಟೆ, 35 ಸಾವಿರ ಕ್ವಿಂಟಾಲ್ ಅಕ್ಕಿಯನ್ನು ತಾಲೂಕು ಅಧಿಕಾರಿಗಳಿಗೆ ನೀಡಲಾಗಿದೆ ಎಂದರು.

    ಜಿಲ್ಲಾಧಿಕಾರಿಗಳು ತಾಲೂಕು ಅಧಿಕಾರಿಗಳಿಗೆ ಸಂಗ್ರಹಿಸಿರುವ ವಸ್ತುಗಳನ್ನು ಜನರಿಗೆ ತಲುಪಿಸಲು ಹೇಳಿದ್ದರು. ಆದರೆ ಸದ್ಯ ಸಾಮಾಗ್ರಿಗಳನ್ನು ತಲುಪಿಸುವ ಕಾರ್ಯ ವಿಳಂಬವಾಗಿದೆ. ನಾನು ಚುನಾವಣಾ ಕಾರ್ಯದಲ್ಲಿ ತೊಡಗಿದ್ದ ಕಾರಣದಿಂದ ವಿತರಣೆ ಮಾಡಲು ತಡವಾಗಿದೆ. ಇಲ್ಲಿರುವ ಯಾವುದೇ ಸಾಮಗ್ರಿಗಳು ದುರ್ಬಳಕೆ ಆಗಿಲ್ಲ, ಇನ್ನೊಂದು ವಾರದಲ್ಲಿ ಸಾಮಾಗ್ರಿಗಳನ್ನು ಸಂತ್ರಸ್ತರಿಗೆ ವಿತರಣೆ ಮಾಡುತ್ತೇನೆ. ಯಾವುದೇ ವಸ್ತುಗಳು ಹಾಳಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

  • ಗ್ರಾಮಸ್ಥರ ನಿದ್ದೆಗೆಡಿಸಿದ ನಾಡಾ ಬಾಂಬ್‍ಗಳು- ಎರಡು ನಾಯಿಗಳು ಬಲಿ

    ಗ್ರಾಮಸ್ಥರ ನಿದ್ದೆಗೆಡಿಸಿದ ನಾಡಾ ಬಾಂಬ್‍ಗಳು- ಎರಡು ನಾಯಿಗಳು ಬಲಿ

    ದಾವಣೆಗೆರೆ: ಕಾಡು ಪ್ರಾಣಿಗಳಿಗಾಗಿ ಇಡುವ ನಾಡ ಬಾಂಬ್‍ನಿಂದಾಗಿ ಗ್ರಾಮದ ರೈತರು ಜಮೀನುಗಳಿಗೆ ಹೋಗಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ.

    ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಕಡತಿ ಗ್ರಾಮದ ರೈತರು ಪ್ರತಿ ದಿನ ಆತಂಕದಲ್ಲಿ ಜೀವನ ಸಾಗಿಸುತ್ತಿದ್ದು, ತುಂಗಭದ್ರ ನದಿಗೆ ಹೊಂದಿಕೊಂಡಿರುವ ಈ ಗ್ರಾಮದಲ್ಲಿ ಕಬ್ಬು, ಭತ್ತ, ಜೋಳ ಸೇರಿದಂತೆ ವಿವಿಧ ಬೆಳೆಗಳನ್ನ ಬೆಳೆಯುತ್ತಾರೆ. ಕಾಡು ಪ್ರಾಣಿಗಳಿಂದ ಬೆಳೆಗಳನ್ನು ಉಳಿಸಿಕೊಳ್ಳಲು ಹಾಗೂ ಕಾಡು ಪ್ರಾಣಿಗಳನ್ನು ಬೇಟೆಯಾಡಲು ನಾಡ ಬಾಂಬ್ ಗಳ ಮೊರೆ ಹೋಗಿದ್ದಾರೆ.

    ಹೀಗೆ ಕಾಡು ಪ್ರಾಣಿಗಳ ಕಾಟವನ್ನು ತಪ್ಪಿಸಲು ಇಟ್ಟಿದ್ದ ನಾಡ ಬಾಂಬ್‍ಗಳು ಗ್ರಾಮಸ್ಥರಿಗೆ ಮುಳುವಾಗಿವೆ. ನಾಡ ಬಾಂಬ್ ತಿಂದು ಎರಡು ನಾಯಿಗಳು ಸಾವನ್ನಪ್ಪಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ರೈತರು ರಾತ್ರಿ ವೇಳೆ ಬೆಳೆಗೆ ನೀರು ಹಾಯಿಸಲು ಹೋಗುತ್ತಿದ್ದರು. ಇದೀಗ ನಾಡ ಬಾಂಬ್ ನಿಂದ ಹೊಲಕ್ಕೆ ಹೋಗಲು ಭಯಪಡುವಂತಾಗಿದೆ.

    ಕೆಲ ರೈತರು ಬೆಳೆಗಳನ್ನು ರಕ್ಷಿಸಿಕೊಳ್ಳಲು ನಾಡ ಬಾಂಬ್ ಬಳಸುತ್ತಾರೆ, ಇನ್ನೂ ಕೆಲವರು ಕಾಡು ಪ್ರಾಣಿಗಳನ್ನು ಭೇಟಿಯಾಡಲು ನಾಡ ಬಾಂಬ್ ಬಳಸುತ್ತಾರೆ. ಬಾಂಬ್‍ಗಳನ್ನು ಮಾಂಸದುಂಡೆಯೊಳಗೆ ಇರುವುದರಿಂದ ಕಾಡು ಪ್ರಾಣಿಗಳ ಬದಲಾಗಿ ಸಾಕು ನಾಯಿಗಳು ಸಾಯುತ್ತಿದ್ದು ಗ್ರಾಮಸ್ಥರನ್ನು ಚಿಂತೆಗೀಡು ಮಾಡಿದೆ. ನಾಯಿಗಳು ಸಾವನ್ನಪ್ಪಿದರೆ ಸರಿ ಆದರೆ ಮಕ್ಕಳು ಇದನ್ನು ತುಳಿದರೆ ಏನು ಕಥೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

  • ಬೀರಲಿಂಗೇಶ್ವರ ಕಾರ್ತಿಕೋತ್ಸವದಲ್ಲೊಂದು ಪವಾಡ

    ಬೀರಲಿಂಗೇಶ್ವರ ಕಾರ್ತಿಕೋತ್ಸವದಲ್ಲೊಂದು ಪವಾಡ

    ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೋಡಿ ಗ್ರಾಮದಲ್ಲಿ ಬೀರಲಿಂಗೇಶ್ವರ ಕಾರ್ತಿಕೋತ್ಸದ ಹಿನ್ನೆಲೆಯಲ್ಲಿ ಲೋಳೆಸರಕ್ಕೆ ಎರಡು ಕುಡುಗೋಲು ಹಾಕಿ ಅದಕ್ಕೆ 50 ಕೆಜಿ ತೂಕದ ಕಲ್ಲು ಕಟ್ಟಿ ತೂಗಿಬಿಡಲಾಗುತ್ತದೆ.

    ಗ್ರಾಮದಲ್ಲಿ ಪ್ರತಿ ಕಾರ್ತಿಕಾ ಮಾಸದಲ್ಲಿ ಹುಣ್ಣಿಮೆಗಿಂತ ಮೊದಲು ಈ ಕಾರ್ತಿಕೋತ್ಸವ ನಡೆಯುತ್ತದೆ. ಈ ಕಾರ್ತಿಕೋತ್ಸವದಲ್ಲಿ ಪವಾಡವೇ ಪ್ರಮುಖವಾದ ಕಾರ್ಯಕ್ರಮ. ಬೀರಲಿಂಗೇಶ್ವರ ದೇವಾಲಯದಲ್ಲಿ ಒಂದು ಲೋಳೆಸರ (ಅಲೋವೆರಾ)ಕ್ಕೆ ಎರಡು ಕುಡುಗೋಲನ್ನು ಹಾಕಿ, ಅದಕ್ಕೆ 50 ಕೆ.ಜಿ ತೂಕದ ಕಲ್ಲಿನ ಗುಂಡನ್ನು ತೂಗುಬಿಡುತ್ತಾರೆ. ಸಾಮಾನ್ಯವಾದ ಲೋಳೆಸರಕ್ಕೆ 50 ಕೆಜಿ ತೂಕದ ಕಲ್ಲಿನ ಗುಂಡನ್ನು ತೂಗಿ ಹಾಕಿದ್ದರೂ ತಡೆದುಕೊಳ್ಳುವ ಶಕ್ತಿ ಇದೆ ಎನ್ನುವುದೇ ಇಲ್ಲಿನ ಪವಾಡವಾಗಿದೆ.

    ಕಾರ್ತಿಕ ಮಾಸದಲ್ಲಿ ಬೀರಲಿಂಗೇಶ್ವರ ದೇವಾಲಯದ ಆರ್ಚಕರು ಉಪವಾಸವಿದ್ದು ಈ ಪವಾಡ ನಡೆಸುತ್ತಾರೆ. ಈ ಪವಾಡವನ್ನು ನೋಡಿ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿಗಳು ಕೂಡ ಅಚ್ಚರಿಗೊಂಡಿದ್ದಾರೆ. ಬೆಳ್ಳೂಡಿ ಗ್ರಾಮ ಬೀರಲಿಂಗೇಶ್ವರ ದೇವಸ್ಥಾನದ ಪೂಜಾರಿಗಳಿಂದ ಪವಾಡ ನಡೆಯುತ್ತಿದ್ದು, ಪ್ರತಿ ವರ್ಷ ಪವಾಡವನ್ನು ನೋಡಲು ದೂರದೂರಿನಿಂದ ಜನರು ಆಗಮಿಸಿ ಅಪರೂಪದ ಸನ್ನಿವೇಶವನ್ನು ನೋಡಿ ಆಶ್ಚರ್ಯ ಪಡುತ್ತಾರೆ.

    ಪ್ರತಿ ವರ್ಷವೂ ಇದೇ ರೀತಿಯಾದಂತಹ ಪವಾಡ ನಡೆಯುತ್ತಿದ್ದು, ಸಂಜೆ ವೇಳೆ ತುಂಬಿದ ಕೊಡಕ್ಕೆ ಪೂಜಿಸಿದ ಬಟ್ಟೆ ಕಟ್ಟಿ ಅದನ್ನು ಉಲ್ಟಾ ಮಾಡಿ ನೇತು ಹಾಕುತ್ತಾರೆ. ತುಂಬಿದ ಕೊಡದಿಂದ ಒಂದು ಹನಿ ನೀರು ಸಹ ಹೊರ ಬರುವುದಿಲ್ಲ. ಇದೆಲ್ಲ ಬೀರಲಿಂಗೇಶ್ವರ ದೇವರ ಪವಾಡ ಎಂದು ಅರ್ಚಕರು ಹೇಳುತ್ತಾರೆ

  • 200 ರೂ.ಗೆ ಬೇಸಿಕ್ ಮೊಬೈಲ್, ಸಿಕ್ಕಿದ್ದು ನೂರು ಜನರಿಗೆ ಮಾತ್ರ

    200 ರೂ.ಗೆ ಬೇಸಿಕ್ ಮೊಬೈಲ್, ಸಿಕ್ಕಿದ್ದು ನೂರು ಜನರಿಗೆ ಮಾತ್ರ

    – 500ಕ್ಕೂ ಹೆಚ್ಚು ಜನರಿಗೆ ನಿರಾಸೆ ಮಾಡಿದ ಶೋ ರೂಂ

    ದಾವಣಗೆರೆ: 200 ರೂ.ಗೆ ಬೇಸಿಕ್ ಮೊಬೈಲ್ ಎಂದರೆ ಯಾರು ಬಿಡಲ್ಲ. ಇಂದು ದಾವಣಗೆರೆಯಲ್ಲಿಯೂ ಅದೇ ರೀತಿಯಾಗಿದ್ದು, 500 ಜನರ ಸರತಿಯ ಪೈಕಿ ಕೇವಲ 100 ಜನರಿಗೆ ಮೊಬೈಲ್ ಸಿಕ್ಕಿದ್ದು, ಉಳಿದವರು ನಿರಾಸೆಯಿಂದ ಮನೆಗೆ ತೆರಳಿದ್ದಾರೆ.

    ದಾವಣಗೆರೆಯಲ್ಲಿ ಸಂಗೀತಾ ಮೊಬೈಲ್ ಶೋ ರೂಮ್ ಉದ್ಘಾಟನೆ ಅಂಗವಾಗಿ 200 ರೂಪಾಯಿಗೆ ಬೇಸಿಕ್ ಮಾಡಲ್ ಮೊಬೈಲ್ ವಿತರಣೆ ಮಾಡಲಾಗುತ್ತಿತ್ತು. ಈ ವೇಳೆ ನೂಕು ನುಗ್ಗಲು ಸಂಭವಿಸಿ ಜನರನ್ನು ನಿರ್ವಹಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

    200 ರೂಪಾಯಿಗೆ ಮೊಬೈಲ್ ಸಿಗುತ್ತೆ ಎಂದು ಪ್ರಕಟಣೆ ಹೊರಡಿಸಲಾಗಿತ್ತು. ಪ್ರಕಟಣೆ ನೋಡಿದ ಜನರು ಮೊಬೈಲ್ ಖರೀದಿಗೆ ದೌಡಾಯಿಸಿದ್ದಾರೆ. ಕೇವಲ ದಾವಣಗೆರೆ ಅಷ್ಟೆ ಅಲ್ಲದೇ, ಹರಿಹರ ಮತ್ತು ಸುತ್ತಲಿನ ಭಾಗಗಳ ಜನರು ಬಂದಿದ್ದು, ಜಾತ್ರೆಯಲ್ಲಿ ಉಂಡವನೇ ಜಾಣ ಅಂದುಕೊಂಡು ಮೊಬೈಲ್ ಪಡೆಯಲು ಜನರು ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದರು.

    ಈ ಸುದ್ದಿ ಒಬ್ಬರಿಂದ ಮತ್ತೊಬ್ಬರಿಗೆ ಹರಡಿ ಕಡಿಮೆ ಬೆಲೆಗೆ ಮೊಬೈಲ್ ಸಿಗುತ್ತೆ ಅಂದುಕೊಂಡು ಸಾವಿರಾರು ಜನರು ಆಗಮಿಸಿದ್ದರು. ಹೀಗಾಗಿ, ಅಂಗಡಿ ಮುಂದೆ ಭಾರೀ ಗದ್ದಲ ನೂಕು ನುಗ್ಗಲು ಉಂಟಾಗಿ ಪರಿಸ್ಥಿತಿ ಕೈ ಮೀರುವ ಹಂತಕ್ಕೆ ತಲುಪಿತ್ತು. ಪರಿಸ್ಥಿತಿ ಅರಿತ ಬಡಾವಣೆ ಠಾಣೆ ಪೊಲೀಸರು ಕಡೆಗೂ ಹರಸಾಹಸ ಪಟ್ಟು ಜನಸಂದಣಿಯನ್ನು ನಿಯಂತ್ರಿಸಿದ್ದು, ಬ್ಯಾರಿಕೇಡ್‍ಗಳನ್ನು ಹಾಕಿ ಪರಿಸ್ಥಿತಿಯನ್ನು ಹತೊಟಿಗೆ ತಂದರು.

    ಮೊದಲು ಬಂದ ಕೇವಲ 100 ಜನರಿಗೆ ಮಾತ್ರ ಮೊಬೈಲ್ ನೀಡಿದ್ದು, ಸರತಿ ಸಾಲಿನಲ್ಲಿ ನಿಂತಿದ್ದ ಐನೂರಕ್ಕೂ ಹೆಚ್ಚು ಮಂದಿಗೆ ಮೊಬೈಲ್ ಸಿಗಲಿಲ್ಲ. ಹೀಗಾಗಿ, ಶೋ ರೂಂ ವಿರುದ್ಧವೂ ಜನರ ಬೇಸರ ಕೇಳಿ ಬಂದಿತು. ಮೊದಲು ಬಂದವರು ಮೊಬೈಲ್ ತೆಗೆದುಕೊಂಡು ಸಂತಸ ಪಟ್ಟರೆ ನಂತರ ಬಂದವರು ಮೊಬೈಲ್ ಸಿಗದೆ ನಿರಾಸೆ ಅನುಭವಿಸುವಂತಾಯಿತು.

  • ರಣ ಮಳೆಗೆ ತತ್ತರಿಸಿದ ಬೆಣ್ಣೆ ನಗರಿ – ಕೊಚ್ಚಿಹೋದ ಬೈಕ್, ಬಸ್‍ಸ್ಟಾಪ್ ಜಲಾವೃತ

    ರಣ ಮಳೆಗೆ ತತ್ತರಿಸಿದ ಬೆಣ್ಣೆ ನಗರಿ – ಕೊಚ್ಚಿಹೋದ ಬೈಕ್, ಬಸ್‍ಸ್ಟಾಪ್ ಜಲಾವೃತ

    ಬೆಂಗಳೂರು/ದಾವಣಗೆರೆ: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮಳೆ ಆರ್ಭಟಿಸಿದ್ದು, ಮೆಜೆಸ್ಟಿಕ್, ಕಾರ್ಪೋರೇಷನ್, ಕೆ.ಆರ್. ಮಾರ್ಕೆಟ್, ಶಾಂತಿನಗರ, ಎಲೆಕ್ಟ್ರಾನಿಕ್ ಸಿಟಿ, ಬೊಮ್ಮನಹಳ್ಳಿ, ಹೆಬ್ಬಾಳ, ಸದಾಶಿವನಗರ ಮತ್ತು ವಿಜಯನಗರ ಸೇರಿ ಹಲವೆಡೆ ಭಾರೀ ಮಳೆ ಆಗಿದೆ.

    ಮಳೆಯಿಂದ ಹಲವೆಡೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಸಹ ಉಂಟಾಗಿತ್ತು. ಇನ್ನು ಕೆ.ಆರ್ ಸರ್ಕಲ್, ಕೋರಮಂಗಲ, ಓಕಳಿಪುರಂ ಅಂಡರ್ ಪಾಸ್‍ನಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡಿದ್ದಾರೆ. ಶಾಂತಿನಗರದಲ್ಲಿರುವ ಡಿಸಿ ಕಚೇರಿ ನೀರಿನಿಂದ ಜಲಾವೃತವಾಗಿತ್ತು.

    ದಾವಣಗೆರೆ:
    ಇತ್ತ ಸತತ ನಾಲ್ಕೈದು ಗಂಟೆಗಳ ಕಾಲ ಸುರಿದ ಮಳೆಗೆ ದಾವಣಗೆರೆ ಜನತೆ ತತ್ತರಿಸಿ ಹೋಗಿದ್ದಾರೆ. ವರ್ಷದ ಇದೇ ಮೊದಲ ಬಾರಿಗೆ ಈ ರೀತಿ ಮಳೆಯಾಗಿದ್ದು, ನಿಟ್ಟುವಳ್ಳಿಯ ಶ್ರೀರಾಮ ನಗರ, ಭಾಷಾ ನಗರ, ಹಾಗೂ ಭರತ್ ಕಾಲೋನಿ ಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಜನರು ನೀರನ್ನು ಹೊರ ಹಾಕಿದ್ದಾರೆ.

    ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣ ಸಂಪೂರ್ಣ ಮುಳುಗಡೆಯಾಗಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ತಂಗುದಾಣದಲ್ಲಿ ನೀರು ನುಗ್ಗಿದ್ದು, ಅನಿವಾರ್ಯವಾಗಿ ಪ್ರಯಾಣಿಕರು ಅಲ್ಲಿಯೇ ಮಲಗುವಂತ ಪರಿಸ್ಥಿತಿ ಎದುರಾಗಿತ್ತು. ರಭಸವಾಗಿ ಹರಿಯುವ ಮಳೆ ನೀರಿಗೆ ಹತ್ತಾರು ಬೈಕ್ ಗಳು ಕೊಚ್ಚಿ ಹೋಗಿವೆ. ರಸ್ತೆ ಕಾಣದ ಕಾರ್ ಗಳು ಗುಂಡಿಗೆ ಇಳಿದಿವೆ.

    ಸಂಚಾರಿ ಠಾಣೆಯಲ್ಲಿ ಸಂಪೂರ್ಣವಾಗಿ ನೀರು ತುಂಬಿದ್ದು, ಸಿಬ್ಬಂದಿಗಳು ನೀರಿನಲ್ಲೇ ನಿಲ್ಲುವ ಪರಿಸ್ಥಿತಿ ಉಂಟಾಗಿತ್ತು. ಅಲ್ಲದೇ ಆಯುಧ ಪೂಜೆ ಇರುವ ಹಿನ್ನೆಲೆಯಲ್ಲಿ ಹೂವಿನ ಮಾರುಕಟ್ಟೆಗೆ ಜಿಲ್ಲೆಯ ನಾನಾ ಕಡೆಗಳಿಂದ ರೈತರು ಹೂವುಗಳನ್ನು ತೆಗೆದುಕೊಂಡು ಬಂದಿದ್ದರು. ಆದರೆ ಮಳೆಯಿಂದಾಗಿ ನಷ್ಟವನ್ನು ಅನುಭವಿಸುವಂತಾಗಿದೆ.

    ಆಯುಧ ಪೂಜೆಗೆ ಒಳ್ಳೆಯ ಬೆಲೆಗೆ ಹೂವು ಮಾರಾಟವಾಗುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದ ರೈತರಿಗೆ ಮಳೆರಾಯ ತಣ್ಣೀರು ಎರಚಿದಂತಾಯಿತು. ಕೆಲ ರೈತರ ಹೂವಿನ ಗಂಟುಗಳು ನೀರಿನಲ್ಲಿ ಕೊಚ್ಚಿ ಹೋದರೆ ಮತ್ತೊಂದು ಕಡೆ ದಲ್ಲಾಳಿಗಳು ಇದನ್ನೇ ಬಂಡವಾಳ ಮಾಡಿಕೊಂಡು ಕಡಿಮೆ ಬೆಲೆಗೆ ಕೊಂಡುಕೊಳ್ಳುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉಕ್ಕಡಗಾತ್ರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಮುಳುಗಡೆ!

    ಉಕ್ಕಡಗಾತ್ರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಮುಳುಗಡೆ!

    – ಇತ್ತ ದೇವಾಲಯ ಮುಂಭಾಗದವರೆಗೂ ನೀರು

    ದಾವಣಗೆರೆ: ತುಂಗಾಭದ್ರಾ ನದಿ ನೀರಿನ ಮಟ್ಟ ಹೆಚ್ಚಾದ ಪರಿಣಾಮ ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿಯ ಅಜ್ಜಯ್ಯನ ದೇವಸ್ಥಾನ ಮುಂಭಾಗದವರೆಗೂ ನೀರು ಬಂದಿದೆ.

    ತುಂಗಾ ಹಾಗೂ ಭದ್ರಾ ನದಿಯ ನೀರು ಹೆಚ್ಚಾಗಿದ್ದು, ಬಳ್ಳಾರಿ ಸಮೀಪದ ಟಿಬಿ ಡ್ಯಾಂಗೆ ನೀರು ಬಿಡಲಾಗುತ್ತಿದೆ. ಆದರೆ ಕಳೆದ ಎರಡು ದಿನಗಳಿಂದ ನೀರಿನ ಹರಿವು ಜೋರಾಗಿದೆ. ಇದರ ಪರಿಣಾಮ ಉಕ್ಕಡಗಾತ್ರಿ ಅಜ್ಜಯ್ಯನ ದೇವಸ್ಥಾನದ ಮುಂಭಾಗದವರೆಗೂ ನೀರು ನಿಂತಿದ್ದು, ಸಾಕಷ್ಟು ಅಂಗಡಿ ಶೆಡ್ ಗಳು ಮುಳುಗಡೆಗೊಂಡಿವೆ.

    ಪ್ರತಿನಿತ್ಯ ನೂರಾರು ಭಕ್ತರು ಬಂದು ದೇವರ ದರ್ಶನ ಪಡೆಯುತ್ತಿದ್ದರು. ಅದರಲ್ಲೂ ಅಮಾವಾಸ್ಯೆ ದಿನದಂದು ಸಾವಿರಾರು ಭಕ್ತರು ಹೊಳೆಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಪಡೆಯುತ್ತಾರೆ. ಆದರೆ ಹೊಳೆಯಲ್ಲಿ ಸ್ನಾನ ಮಾಡುವಾಗ ಯಾವುದೇ ರೀತಿಯ ಸೂಚನಾ ಫಲಕಗಳು ಹಾಕಿಲ್ಲ. ಇದರಿಂದ ಭಯದ ವಾತಾವರಣದಲ್ಲಿ ಭಕ್ತರು ಹೊಳೆಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಪಡೆಯುತ್ತಿದ್ದಾರೆ.

    ತುಂಗಾಭದ್ರಾ ನದಿಯ ನೀರಿನ ಮಟ್ಟ ಹೆಚ್ಚಾದ ಪರಿಣಾಮ ಹರಿಹರ ತಾಲೂಕಿನ ಉಕ್ಕಡಗಾತ್ರಿ ಗ್ರಾಮಕ್ಕೆ ಸಂಪರ್ಕ ಹೊಂದುವ ರಸ್ತೆ ಸಂಪೂರ್ಣ ಮುಳುಗಡೆಗೊಂಡಿದೆ. ಹರಿಹರದಿಂದ ಉಕ್ಕಡಗಾತ್ರಿಗೆ ಇದೊಂದೆ ರಸ್ತೆ ಇದ್ದು ರಸ್ತೆಯ ಸೇತುವೆ ಮುಳುಗಡೆಗೊಂಡಿದೆ. ಗ್ರಾಮಕ್ಕೆ ಹೋಗಬೇಕು ಎಂದರೆ ಎಂಟು ಕಿ.ಮೀ ಸುತ್ತಿಕೊಂಡು ಬರಬೇಕಾದ ಪರಿಸ್ಥಿತಿ ಎದುರಾಗಿದೆ. ಹಲವು ಬಾರಿ ಸಚಿವರಿಗೆ ಮತ್ತು ಶಾಸಕರಿಗೆ ಸಮಸ್ಯೆ ಬಗ್ಗೆ ಮನವರಿಕೆ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ ಅಂತ ಸ್ಥಳೀಯರು ದೂರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ನಿಧಿ ಆಸೆಗೆ ದೇವಸ್ಥಾನವನ್ನೇ ವಿಘ್ನಗೊಳಿಸಿದ ಖದೀಮರು!

    ನಿಧಿ ಆಸೆಗೆ ದೇವಸ್ಥಾನವನ್ನೇ ವಿಘ್ನಗೊಳಿಸಿದ ಖದೀಮರು!

    ದಾವಣಗೆರೆ: ನಿಧಿ ಆಸೆಗಾಗಿ ಖದೀಮರು ದೇವಸ್ಥಾನವನ್ನೇ ವಿಘ್ನಗೊಳಿಸಿದ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ತೆಲಿಗಿ ಗ್ರಾಮದಲ್ಲಿ ನಡೆದಿದೆ.

    ತೆಲಿಗಿ ಗ್ರಾಮದ ಕೆರೆಯ ಮೇಲಿರುವ ಕೋಡಿ ಬಸವೇಶ್ವರ ದೇವಸ್ಥಾನದಲ್ಲಿ ನಿಧಿಗಾಗಿ ಬಸವೇಶ್ವರ ವಿಗ್ರಹದ ಕೆಳಗೆ ನಾಲ್ಕೈದು ಅಡಿಯಷ್ಟು ಗುಂಡಿ ತೆಗೆದಿದ್ದಾರೆ. ಗುಂಡಿ ತೆಗೆದ ಜಾಗದಲ್ಲಿ ಪೂಜೆ ಮಾಡಿದ್ದಾರೆ. ಬೆಳಗ್ಗೆ ಗ್ರಾಮಸ್ಥರು ದೇವಸ್ಥಾನಕ್ಕೆ ಪೂಜೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.

    ಕೋಡಿ ಬಸವೇಶ್ವರ ದೇವಸ್ಥಾನದ ವಿಗ್ರಹದ ಕೆಳಗೆ ನಿಧಿ ಇದೆ ಎನ್ನುವ ಗಾಳಿಸುದ್ದಿ ಬಹಳ ದಿನಗಳಿಂದ ಹರಿದಾಡುತ್ತಿತ್ತು. ಆದ್ದರಿಂದ ಈ ನಿಧಿ ಆಸೆಗೆ ಕಳ್ಳರು ದೇವಸ್ಥಾನದ ವಿಗ್ರಹದ ಕೆಳಗೆ ಗುಂಡಿ ತೆಗೆದಿದ್ದಾರೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

    ಈ ಘಟನೆ ಹಲವಾಗಿಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.