Tag: ದಾವೋಸ್

  • ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ: ಬೊಮ್ಮಾಯಿ

    ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ: ಬೊಮ್ಮಾಯಿ

    ಬೆಂಗಳೂರು: ಈ ಬಾರಿಯ ಶೃಂಗಸಭೆಯಲ್ಲಿ ಕರ್ನಾಟಕ ಅತೀ ಹೆಚ್ಚು ಆಕರ್ಷಣೆಯಾಗಿತ್ತು. ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

    ದಾವೋಸ್ ಪ್ರವಾಸದ ನಂತರ ಇಂದು ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರತಿ ಬಾರಿಯೂ ದಾವೋಸ್ ಆರ್ಥಿಕ ಶೃಂಗಸಭೆ ಜನವರಿಯಲ್ಲಿ ನಡೆಯುತ್ತದೆ. ಆದರೆ ಎರಡು ವರ್ಷಗಳಿಂದ ಕೋವಿಡ್-19 ಕಾರಣ ನಡೆದಿರಲಿಲ್ಲ. ಈ ವರ್ಷ ಮೇ ತಿಂಗಳಿನಲ್ಲಿ ನಡೆದಿದೆ. ಹಿಂದೆ ನಮ್ಮ ರಾಜ್ಯದಿಂದ ದೇವೇಗೌಡರು, ಎಸ್‍ಎಂ ಕೃಷ್ಣ, ಯಡಿಯೂರಪ್ಪ ಭಾಗವಹಿಸಿದ್ದರು ಎಂದರು. ಇದನ್ನೂ ಓದಿ:  ಮದುವೆ ಮನೆಯಲ್ಲೂ MES ಕಿರಿಕ್ – ಕನ್ನಡ ಸಾಂಗ್ ಹಾಕಿದ್ದಕ್ಕೆ ವಧು, ವರ, ಕನ್ನಡಿಗರ ಮೇಲೆ ಹಲ್ಲೆ

    ಈ ಬಾರಿಯ ಶೃಂಗಸಭೆ ಕುತೂಹಲ ಹುಟ್ಟಿಸಿತ್ತು. ಕೋವಿಡ್ ಬಳಿಕ ಆರ್ಥಿಕ ಹಿಂಜರಿತ ಇತ್ತು. ಆರ್ಥಿಕ ಹಿಂಜರಿತ, ಪರಿಸರದಲ್ಲಿನ ಬದಲಾವಣೆ ಬಗ್ಗೆ ಚರ್ಚಿಸಲಾಯಿತು. ದಾವೋಸ್ ಶೃಂಗ ಸಭೆಯಲ್ಲಿ ಭಾರತದಲ್ಲಿ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ವಹಿಸಿದ್ದರು. ನವೀಕರಿಸಬಹುದಾದ ಇಂಧನಗಳ ಮೇಲೆ ಉದ್ಯಮಿಗಳಿಗೆ ಹೂಡಿಕೆಗೆ ಹೆಚ್ಚು ಆಸಕ್ತಿ ನೀಡಿಲಾಗಿತ್ತು. ಅತೀ ಹೆಚ್ಚು ಆಕರ್ಷಣೆ ಆಗಿದ್ದು ಕರ್ನಾಟಕ. ರಾಜ್ಯದ ಎಲ್ಲ ರಂಗಗಳಲ್ಲೂ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ತೋರಿದ್ದಾರೆ ಎಂದು ತಿಳಿಸಿದರು.

    ಉದ್ಯಮಿಗಳ ಜೊತೆ ಹಲವು ಸುತ್ತಿನ ಮಾತುಕತೆಗಳನ್ನು ನಡೆಸಲಾಯಿತು. ಮಣ್ಣಿನ ಕುರಿತ ಒಂದು ಸಮಾಲೋಚನೆಯಲ್ಲೂ ನಾನು ಭಾಗವಹಿಸಿದ್ದೆ. ಹಲವು ಕಂಪೆನಿಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಮುಂದಾಗಿವೆ. ಜ್ಯುಬಿಲೆಂಟ್ ಇಂಡಿಯಾ ಗ್ರೂಪ್ 700 ಕೋಟಿ ರೂ. ಬಂಡವಾಳ ಹೂಡಿಕೆಗೆ ನಿರ್ಧಾರಿದೆ. ದೇವನಹಳ್ಳಿ ಬಳಿ ಇವರು 10 ಎಕರೆ ಜಮೀನು ಖರೀದಿಸಿದ್ದಾರೆ. ಹಿಟಾಚಿ ಎನರ್ಜಿ ಸಂಸ್ಥೆಯೂ ಹೂಡಿಕೆಗೆ ಮುಂದಾಗಿದೆ. ಇವರು 2 ಸಾವಿರ ಇಂಜಿನಿಯರ್‌ಗಳನ್ನು ಈ ವರ್ಷ ನೇಮಕ ಮಾಡಿಕೊಳ್ಳಲಿದ್ದಾರೆ. ಇದನ್ನೂ ಓದಿ: ದಾಳಿ ವೇಳೆ ಸಿಬಿಐ ನನ್ನ ವೈಯಕ್ತಿಕ ದಾಖಲೆಗಳನ್ನು ವಶಪಡಿಸಿಕೊಂಡಿದೆ – ಕಾರ್ತಿ ಚಿದಂಬರಂ ಆರೋಪ

    ಸೀಮೆನ್ಸ್ ಹೆಲ್ದೀನಿಯರ್ಸ್ ಗ್ರೂಪ್‍ನವರು ಆರೋಗ್ಯ ಕ್ಷೇತ್ರದಲ್ಲಿ 1,600 ಕೋಟಿ ಬಂಡವಾಳ ಹೂಡುತ್ತಿದೆ. ಅನ್ ಇನ್ಬೇವ್ ಸಂಸ್ಥೆಯು ನಾನ್ ಆಲ್ಕೋಹಾಲಿಕ್ ಪಾನೀಯ ಉತ್ಪಾದನೆಗೆ ಮುಂದೆ ಬಂದಿದ್ದಾರೆ. ನೆಸ್ಲೆ ಸಂಸ್ಥೆಯವರ ಉದ್ಯಮ ಈಗಾಗಲೇ ನಂಜನಗೂಡಿನಲ್ಲಿದೆ. ಹೆಚ್ಚುವರಿಯಾಗಿ 700 ಕೋಟಿ ರೂ. ಬಂಡವಾಳ ಹೂಡಿಕೆಗೆ ನೆಸ್ಲೆ ಮುಂದಾಗಿದೆ. ದಸ್ಸಾಲ್ಸ್ ಸಿಸ್ಟಮ್ಸ್‍ನವರು 300 ಕೋಟಿ ರೂ. ಹೂಡಿಕೆಗೆ ಉತ್ಸುಕತೆ ತೋರಿದ್ದಾರೆ. ಮಿತ್ತಲ್ ಸಂಸ್ಥೆಯವರು 6 ಸಾವಿರ ಕೋಟಿ ರೂ. ಬಂಡವಾಳ ಹೂಡಲು ಆಸಕ್ತಿ ತೋರಿದೆ ಎಂದು ಹೇಳಿದರು.

    ಭಾರತಿ ಎಂಟರ್ ಪ್ರೈಸಸ್ ಮೆಗಾ ಡಾಟಾ ಸೆಂಟರ್ ತೆರೆಯಲು ಮುಂದಾಗಿದೆ. ಅದಾನಿ ಗ್ರೂಪ್, ದಾಲ್ಮಿಯಾ ಸಿಮೆಂಟ್, ಜಾನ್ಸನ್ ಕಂಟ್ರೋಲ್ಸ್, ಹನಿವೆಕ್, ಐಬಿಎಂ, ಐಕಿಯ ಸ್ಟೋರ್ಸ್, ಆಕ್ಸಿಸ್ ಬ್ಯಾಂಕ್‍ಗಳು ವಿವಿಧ ವಲಯಗಳಲ್ಲಿ ಹೂಡಿಕೆ ಮಾಡುವುದರ ಬಗ್ಗೆ ಚರ್ಚಿಸಲಾಗಿದೆ. ದಾವೋಸ್ ಆರ್ಥಿಕ ಶೃಂಗ ಸಭೆಯಲ್ಲಿ ರಾಜ್ಯಕ್ಕೆ ಒಟ್ಟು 59,350 ಕೋಟಿ ರೂಗಳ ಬಂಡವಾಳ ಹೂಡಿಕೆ ಆಕರ್ಷಿಸಲು ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ನವೆಂಬರ್‍ನಲ್ಲಿ ಎರಡು ಸಮ್ಮೇಳನಗಳು ನಡೆಯಲಿವೆ. ವಿಶ್ವ ಬಂಡವಾಳ ಹೂಡಿಕೆ ಸಮ್ಮೇಳನ ಮತ್ತು ಬೆಂಗಳೂರು ಟೆಕ್ ಸಮ್ಮಿಟ್‍ಗಳು ನಡೆಯಲಿವೆ. ಈ ಸಮ್ಮೇಳನದಲ್ಲಿ ಹಲವಾರು ಜಾಗತಿಕ ಉದ್ಯಮಿಗಳಿಗೆ ಆಹ್ವಾನಿಸಲಾಗಿದೆ ಎಂದರು.

    ಇದೇ ವೇಳೆ ಲಕ್ಷ್ಮಿ ಮಿತ್ತಲ್ ಜೊತೆ ಆಪರೇಷನ್ ಕಮಲದ ಮಾತುಕತೆ ವಿಚಾರವಾಗಿ ಮಾತನಾಡಿದ ಅವರು, ಲಕ್ಷ್ಮಿ ಮಿತ್ತಲ್ ಅವರ ಜೊತೆ ಹೂಡಿಕೆ ಬಗ್ಗೆ ಮಾತಾಡಿದ್ದೇವೆ. ಆ ಮಾತುಕತೆ ಬಳಿಕ ರಾಜಕೀಯ ಪರಿಸ್ಥಿತಿ ಬಗ್ಗೆ ಮಾತಾಡಿದ್ದೇವೆ. ಉದ್ಯಮಿಗಳು ಸಹಜವಾಗಿ ರಾಜ್ಯಗಳ ರಾಜಕೀಯ ಪರಿಸ್ಥಿತಿ ತಿಳಿದುಕೊಳ್ಳುತ್ತಾರೆ. ಎಲ್ಲ ಉದ್ಯಮಿಗಳೂ ರಾಜಕೀಯ ಪರಿಸ್ಥಿತಿ ಕೇಳಿದರು ಎಂದು ಹೇಳಿದರು.

    ನಂತರ ಯಾರೇ ಹೂಡಿಕೆಗೆ ಮುಂದಾದರೂ ಇಲ್ಲಿನ ಕಾನೂನು ಪಾಲಿಸಿ ಅವಕಾಶ ಕೊಡುತ್ತೇವೆ. ಲುಲು ಸಂಸ್ಥೆ ಜೊತೆ ಹೂಡಿಕೆ ಮಾಡಿಕೊಳ್ಳಬಾರದು ಅಂತ ಏನಿಲ್ಲ. ರಾಜಾಜಿನಗರದಲ್ಲಿರುವ ಲುಲು ಮಾರ್ಕೆಟ್ ಹಿಂದಿನ ಸರ್ಕಾರವಿದ್ದಾಗ ಬಂತು. ಅದು ಕಾನೂನು ಬದ್ಧವಾಗಿದೆಯಾ ಇಲ್ಲವೋ ಮಾಹಿತಿ ತರಿಸಿಕೊಳ್ಳುತ್ತೇನೆ. ದಾವೋಸ್ ಒಪ್ಪಂದಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದರು.

  • ದಾವೋಸ್ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ತೆರೆ: ಐತಿಹಾಸಿಕ 52 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ರಾಜ್ಯದ ಜೊತೆ ಒಪ್ಪಂದ

    ದಾವೋಸ್ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ತೆರೆ: ಐತಿಹಾಸಿಕ 52 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ರಾಜ್ಯದ ಜೊತೆ ಒಪ್ಪಂದ

    ಬರ್ನ್: ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದ್ದು, ಕರ್ನಾಟಕ ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರಥಮ ಬಾರಿಗೆ 2 ಮಹತ್ವದ ಕಂಪನಿಗಳ ಜೊತೆ ಒಟ್ಟು 52 ಸಾವಿರ ಕೋಟಿ ರೂ. ಮೊತ್ತದ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ.

    ಇದು ಕರ್ನಾಟಕ ರಾಜ್ಯದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಸಾಕ್ಷಿ. ಇತ್ತೀಚಿನ ದಿನಗಳ ರಾಜ್ಯಕ್ಕೆ ಹರಿದು ಬರುತ್ತಿರುವ ಬಹುದೊಡ್ಡ ಮೊತ್ತದ ಬಂಡವಾಳ ಇದಾಗಿದೆ. ಹಲವಾರು ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿವೆ. ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಕಂಪನಿಗಳು ಹೂಡಿಕೆ ಮಾಡಲಿರುವ ಬಂಡವಾಳದಿಂದ ಸಾವಿರಾರು ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಠಿ ಆಗಲಿವೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ಆಸಕ್ತಿಯಿಂದ ಸರ್ಕಾರ ಬೃಹತ್ ಪ್ರಮಾಣದಲ್ಲಿ ಬಂಡವಾಳ ಆಕರ್ಷಿಸುವಲ್ಲಿ ಯಶಸ್ವಿಯಾಗುತ್ತಿದೆ. ಇದನ್ನೂ ಓದಿ: ಪಿಎಸ್‍ಐ ಪರೀಕ್ಷೆ ಅಕ್ರಮ: ಕಿಂಗ್‍ಪಿನ್ ಆರ್.ಡಿ.ಪಾಟೀಲ್ ಮತ್ತೆ ಸಿಐಡಿ ವಶಕ್ಕೆ! 

    ನವೀಕರಿಸಬಹುದಾದ ಇಂಧನ ವಲಯದಲ್ಲಿ ರೆನ್ಯೂ ಪವರ್ ಕಂಪನಿ 50,000 ಕೋಟಿ ರೂ.ಗಳ ಬಂಡವಾಳ ಹೂಡಲು ಕರ್ನಾಟಕ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಕರ್ನಾಟಕದ ಇಂಧನ ಕ್ಷೇತ್ರದಲ್ಲಿ ಈ ಒಪ್ಪಂದ ಪ್ರಮುಖ ಮೈಲಿಗಲ್ಲಾಗಿದೆ. ಮೆ.ಲುಲು ಗ್ರೂಪ್ ಇಂಟರ್ನ್ಯಾಷನಲ್ ಸಂಸ್ಥೆಯು ರಾಜ್ಯದಲ್ಲಿ ಸುಮಾರು 2000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಮಾಡಿಕೊಳ್ಳಲಾಯಿತು. ಇವೆರಡೂ ಒಪ್ಪಂದಗಳು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿದೆ.

    ಕರ್ನಾಟಕದಲ್ಲಿ ಕೈಗಾರಿಕೆ ಹಾಗೂ ಉದ್ಯಮಗಳ ಸ್ಥಾಪನೆಗೆ ಪೂರಕವಾಗಿ ಎರಡು ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ಸಂಶೋಧನೆಗೆ ಹೆಚ್ಚು ಪ್ರೋತ್ಸಾಹವನ್ನು ನೀಡುವ ಆರ್ ಎಂಡ್ ಡಿ ಪಾಲಿಸಿ, ಹೆಚ್ಚು ಉದ್ಯೋಗವನ್ನು ಒದಗಿಸುವ ಉದ್ಯಮಗಳಿಗೆ ಹೆಚ್ಚು ಪ್ರೋತ್ಸಾಹಕ ನೀತಿಗಳನ್ನು ಜಾರಿಗೆ ತರಲಾಗಿದೆ. ಈ ಎರಡೂ ನೀತಿಗಳ ಲಾಭಗಳನ್ನು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವ ಸಂಸ್ಥೆಗಳು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

    ಇದೇ ಸಂದರ್ಭದ ನವೆಂಬರ್‍ನಲ್ಲಿ ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಬೆಂಗಳೂರು ಟೆಕ್ ಸಮ್ಮಿಟ್‍ನಲ್ಲಿ ಪಾಲ್ಗೊಳ್ಳುವಂತೆ ಹೂಡಿಕೆದಾರರಿಗೆ ಆಹ್ವಾನ ನೀಡಲಾಯಿತು.

    ಬಂಡವಾಳ ಹೂಡಿಕೆ ಸಂಸ್ಥೆಯ ವಿವರಗಳು:

    ಮೆ. ಲುಲು ಗ್ರೂಪ್ ಇಂಟರ್ನ್ಯಾಷನಲ್:
    ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಒಪ್ಪಂದಕ್ಕೆ ಸಹಿ ಹಾಕಿದೆ. 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

    ರೆನ್ಯೂ ಪವರ್ ಪ್ರೈ.ಲಿ:
    ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು. ಈ ಕಂಪೆನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು 2 ಹಂತಗಳಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದು, ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

    ಮೊದಲ ಹಂತದಲ್ಲಿ ಈಗಾಗಲೇ ಜಾರಿಯಲ್ಲಿರುವ ಯೋಜನೆಗಳಿಗೆ 11,900 ಕೋಟಿ ರೂ.ಗಳ ಬಂಡವಾಳ ಹೂಡಿ, ಮುಂದಿನ 2 ವರ್ಷಗಳಲ್ಲಿ ಯೋಜನೆಗಳು ಕಾರ್ಯಾರಂಭ ಮಾಡಲಾಗುತ್ತದೆ.

    ಎರಡನೇ ಹಂತದಲ್ಲಿ ನವೀಕರಿಸಬಹುದಾದ ಇಂಧನ ಹಾಗೂ ಗ್ರೀನ್ ಹೈಡ್ರೋಜನ್ ಘಟಕಗಳನ್ನು ಮುಂದಿನ 5 ವರ್ಷಗಳಲ್ಲಿ ಸ್ಥಾಪಿಸಲು 37,500 ಕೋಟಿ ರೂ.ಗಳ ಬಂಡವಾಳವನ್ನು ಹೂಡಿಕೆ ಮಾಡಲಾಗುತ್ತದೆ. ಈ ಎರಡು ಹಂತದ ಯೋಜನೆಗಳಿಂದ ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

    ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿದ ಸಂಸ್ಥೆಗಳು:

    ಸೀಮೆನ್ಸ್ ಸಂಸ್ಥೆ:
    ಬೆಂಗಳೂರಿನಲ್ಲಿ 2 ಯೋಜನೆಗಳನ್ನು ಸೀಮೆನ್ಸ್ ಸಂಸ್ಥೆ ಕೈಗೆತ್ತಿಕೊಳ್ಳಲಿದೆ. ಆಧುನಿಕ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹಕಗಳನ್ನು ಕರ್ನಾಟಕ ಸರ್ಕಾರ ಒದಗಿಸುವ ಭರವಸೆ ನೀಡಿದೆ. ಬಿಯಾಂಡ್ ಬೆಂಗಳೂರು ಯೋಜನೆಯಡಿ ತುಮಕೂರು, ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರು ನಗರಗಳಲ್ಲಿಯೂ ಹೂಡಿಕೆ ಮಾಡುವ ಕುರಿತು ರಾಜ್ಯ ಸರ್ಕಾರ ಮತ್ತು ಸೀಮನ್ಸ್ ಸಂಸ್ಥೆ ಮಾತುಕತೆ ನಡೆಸಿತು.

    ದಸ್ಸಾಲ್ಸ್ ಸಿಸ್ಟಮ್ಸ್:
    ರಾಜ್ಯದಲ್ಲಿ ವಿದ್ಯುತ್ ವಾಹನಗಳು ಮತ್ತು ಕೇಂದ್ರ ಉತ್ಪಾದನಾ ತಾಂತ್ರಿಕ ಸಂಸ್ಥೆಯ ಸಹಯೋಗದಲ್ಲಿ ಆಧುನಿಕ ಉತ್ಪಾದನೆ ಕ್ಷೇತ್ರ , ವಿದ್ಯಾರ್ಥಿಗಳಿಗೆ ಕೈಗಾರಿಕೆ 4.0, ಡಿಜಿಟಲ್ ತಂತ್ರಜ್ಞಾನದ ಬಗ್ಗೆ ತರಬೇತಿ ,ರಾಜ್ಯದ ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಹೂಡಿಕೆ ಮಾಡಲು ದಸ್ಸಾಲ್ಸ್ ಸಿಸ್ಟಮ್ಸ್ ಉತ್ಸುಕತೆ ತೋರಿದರು. ಇದನ್ನೂ ಓದಿ: ಗೃಹಿಣಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಿಯಕರ ಅರೆಸ್ಟ್ 

    ನೆಸ್ಟ್ಲೆ ಸಂಸ್ಥೆ:
    ನಂಜನಗೂಡಿನಲ್ಲಿ ನೆಸ್ಟ್ಲೆ ಇನ್ಸೆಂಟ್ ಕಾಫಿ ಕಾರ್ಖಾನೆಯನ್ನು ನವೀಕರಣ ಹಾಗೂ ವಿಸ್ತರಣಾ ಕಾರ್ಯಕ್ಕೆ ನೆಸ್ಟ್ಲೆ ಸಂಸ್ಥೆ ಮುಂದಾಗಿದ್ದಾರೆ.

    ಮೆಗಾ ಡಾಟಾ ಸೆಂಟರ್:
    ಭಾರ್ತಿ ಎಂಟರ್ ಪ್ರೈಸಸ್ ನ ಅಧ್ಯಕ್ಷ ಹಾಗೂ ಸಿಇಓ ಸುನಿಲ್ ಭಾರ್ತಿ ಮಿತ್ತಲ್ ಅವರು ರಾಜ್ಯದಲ್ಲಿ ಇನ್ನೊಂದು ಮೆಗಾ ಡಾಟಾ ಸೆಂಟರ್ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರವು ಎಲ್ಲ ಅಗತ್ಯ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

    Davos 2

    ಬೆಂಗಳೂರಿನಲ್ಲಿ ಐಕಿಯ ಸ್ಟೋರ್:
    ಇಂಗ್ಕಾ ಗ್ರೂಪ್ (ಐಕಿಯ) ಸಿ.ಇ.ಓ. ಜೆಸ್ಪರ್ ಬ್ರಾಡಿನ್ ಅವರು ರಾಜ್ಯದಲ್ಲಿ ಐಕಿಯ ಸ್ಟೋರ್ ತೆರೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿ, ಜೂನ್‍ನಲ್ಲಿ ನಾಗಸಂದ್ರದಲ್ಲಿ ಐಕಿಯ ಸ್ಟೋರ್ ತೆರೆಯಲಿದ್ದು, ಜೆಸ್ಪರ್ ಬ್ರಾಡಿನ್ ಅವರು ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಇದೇ ಸಂದರ್ಭದಲ್ಲಿ ಐಕಿಯದ ಭಾರತೀಯ ಕೇಂದ್ರ ಕಚೇರಿಯೂ ಬೆಂಗಳೂರಿನಲ್ಲಿದ್ದು ಪೀಠೋಪಕರಣಗಳ ತಯಾರಿಕೆಯ ಸಂದರ್ಭದಲ್ಲಿ ಬಿದಿರು ಮತ್ತಿತರ ಸ್ಥಳೀಯ ವಸ್ತುಗಳ ವ್ಯಾಪಕ ಬಳಕೆಯ ಕುರಿತೂ ಸಹ ಚರ್ಚಿಸಲಾಯಿತು.

    ಆಕ್ಸಿಸ್ ಬ್ಯಾಂಕ್:
    ಆಕ್ಸಿಸ್ ಬ್ಯಾಂಕ್ ಸಂಸ್ಥೆಯು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಕಾರ್ಯಕ್ರಮಗಳಡಿ ರಾಜ್ಯದ ಕೆಲವು ಇಂಜಿನಿಯರಿಂಗ್ ಹಾಗೂ ವಿಶ್ವವಿದ್ಯಾಲಯಗಳ ಉನ್ನತೀಕರಣ ಯೋಜನೆಯನ್ನು ಹಮ್ಮಿಕೊಳ್ಳಲು ಸಲಹೆ ನೀಡಲಾಯಿತು.

    ನೋಕಿಯಾ ಸಂಸ್ಥೆ:
    ಕರ್ನಾಟಕದಲ್ಲಿ ಟೆಲಿಕಾಂ ಉತ್ಪನ್ನಗಳ ಉತ್ಪಾದನೆಯ ಅವಕಾಶಗಳನ್ನು ಬಳಸಿಕೊಳ್ಳಲು ನೋಕಿಯಾ ಸಂಸ್ಥೆಯ ಮುಖ್ಯಸ್ಥರಿಗೆ ಸಲಹೆ ನೀಡಲಾಯಿತು.

    ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಕರ್ನಾಟಕ ಪೆವಿಲಿಯನ್‍ನಲ್ಲಿ ಹೀರೋ ಮೋಟೋಕಾರ್ಪ್, ಎಬಿಇನ್‍ಬೇವ್ ಸಂಸ್ಥೆ, ಅರ್ಸೆಲರ್ ಮಿತ್ತಲ್, ಅದಾನಿ ಗ್ರೂಪ್, ಜಾನ್ಸನ್ ಕಂಟ್ರೋಲ್ಸ್‍ನ ಸಿಇಓ ಜಾರ್ಜ್ ಒಲಿವರ್, ಹನಿವೆಲ್ ಕಂಪೆನಿ, ಐಬಿಎಂ, ಬೈಜೂಸ್, ಮೀಶೋ ಸಂಸ್ಥೆಯ ಮುಖ್ಯಸ್ಥರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗಳ ಅವಕಾಶಗಳ ಬಗ್ಗೆ ಮಾತುಕತೆ ನಡೆಸಿದರು.

    ಈ ಸಂದರ್ಭದಲ್ಲಿ ಹವಾಮಾನ ಬದಲಾವಣೆ ಮತ್ತು ಪರಿಸರ ಮಾಲಿನ್ಯ ಕುರಿತ ಗೋಷ್ಠಿಯಲ್ಲಿ ಭಾಗವಹಿಸಿ ಈಶ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಚರ್ಚೆ ನಡೆಸಲಾಯಿತು. ಈ ವೇಳೆ, ರಾಜ್ಯದಲ್ಲಿ ಪರಿಸರ ಹಾಗೂ ಮಣ್ಣಿನ ಸಂರಕ್ಷಣೆ ಕುರಿತು ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

    ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ, ಬಿಟಿ, ಉನ್ನತ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಸಿಎಂ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಮೊದಲಾದ ಹಿರಿಯ ಅಧಿಕಾರಿಗಳು ರಾಜ್ಯದ ತಂಡದಲ್ಲಿದ್ದರು.

  • ಪುಟಿನ್‌ನೊಂದಿಗೆ ನೇರ ಮಾತುಕತೆಗೆ ನಾನು ಸಿದ್ಧ: ಝೆಲೆನ್ಸ್ಕಿ

    ಪುಟಿನ್‌ನೊಂದಿಗೆ ನೇರ ಮಾತುಕತೆಗೆ ನಾನು ಸಿದ್ಧ: ಝೆಲೆನ್ಸ್ಕಿ

    ಬರ್ನ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಬುಧವಾರ ಯುದ್ಧವನ್ನು ನಿಲ್ಲಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಧ್ಯವರ್ತಿಗಳ ಬದಲು ನೇರವಾಗಿ ಮಾತನಾಡಲು ಸಿದ್ದನಿದ್ದೇನೆ ಎಂದು ತಿಳಿಸಿದ್ದಾರೆ.

    ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯ ವೇದಿಕೆಯಲ್ಲಿ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಝೆಲೆನ್ಸ್ಕಿ, ಉಕ್ರೇನ್‌ನ ಎಲ್ಲಾ ಪ್ರದೇಶಗಳು ಯುದ್ಧದ ಪರಿಣಾಮದಿಂದ ಚೇತರಿಸಿಕೊಳ್ಳುವವರೆಗೂ ಹೋರಾಡಲಿದೆ. ಇದು ಮಾತುಕತೆಯ ಮೊದಲ ಹೆಜ್ಜೆಯಾಗಬಹುದು ಎಂದು ಹೇಳಿದರು. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ಇಂದಿಗೆ 3 ತಿಂಗಳು – ಪುಟ್ಟ ರಾಷ್ಟ್ರ ವಶಕ್ಕೆ ತಿಣುಕಾಟ

    ಇದಕ್ಕೂ ಮೊದಲು ರಷ್ಯಾದೊಂದಿಗೆ ಮಧ್ಯವರ್ತಿಗಳ ಮೂಲಕ ಮಾತುಕತೆ ನಡೆಸಿ ಯುದ್ಧವನ್ನು ನಿಲ್ಲಿಸುವ ಬಗ್ಗೆ ಚರ್ಚಿಸಲು ಝೆಲೆನ್ಸ್ಕಿ ಮುಂದಾಗಿದ್ದರು. ಆದರೆ ರಷ್ಯಾ ಅಧ್ಯಕ್ಷ ಇದಾವುದಕ್ಕೂ ಬಗ್ಗುವುದಿಲ್ಲ ಎಂಬುದು ಖಾತ್ರಿಯಾಗಿರುವುದರಿಂದ ಉಕ್ರೇನ್ ಅಧ್ಯಕ್ಷ ನೇರ ಮಾತುಕತೆ ನಡೆಸಲು ಸಿದ್ದರಿದ್ದಾರೆ ಎಂದಿದ್ದಾರೆ.

    ಕಳೆದ ವಾರ ಝೆಲೆನ್ಸ್ಕಿ ರಾಜತಾಂತ್ರಿಕತೆ ಇಲ್ಲದೇ ಯುದ್ಧವನ್ನು ನಿಲ್ಲಿಸುವುದು ಅಸಾಧ್ಯ ಎಂದು ತಿಳಿಸಿದ್ದರು. ಉಕ್ರೇನ್‌ನ 2ನೇ ಮುಖ್ಯ ನಗರವಾದ ಖಾರ್ಕೀವ್‌ನಲ್ಲಿ ನಮ್ಮ ಪಡೆ ರಷ್ಯಾ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತಿದೆ. ಆದರೆ ಡಾನ್ಬಾಸ್ ನಗರದಲ್ಲಿ ರಕ್ತಸಿಕ್ತ ಪರಿಸ್ಥಿತಿ ಉಂಟಾಗಿದೆ. ಅಲ್ಲಿ ನಮ್ಮ ಹಲವು ನಾಗರಿಕರನ್ನು ಕಳೆದುಕೊಂಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ದಾವೋಸ್‌ನಲ್ಲೂ ಆಪರೇಷನ್ ಕಮಲದ ಸದ್ದು- ಸಿಎಂಗೆ ನೀವು ಸ್ಟೇಬಲ್ ಇದ್ದೀರಾ ಎಂದ ಮಿತ್ತಲ್

    ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿ 3 ತಿಂಗಳು ಕಳೆದಿದೆ. ಜಗತ್ತಿನ 2ನೇ ಅತೀ ದೊಡ್ಡ ರಾಷ್ಟ್ರ ಪುಟ್ಟ ಉಕ್ರೇನ್ ಅನ್ನು ಇನ್ನೂ ಕೂಡಾ ಸಂಪೂರ್ಣವಾಗಿ ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಉಕ್ರೇನ್ ರಾಜಧಾನಿ ಕೀವ್ ನಗರದ ಮೇಲೆ ದಾಳಿ ನಡೆಸಿ ಅಪಾರ ಸಾವು-ನೋವು ಮಾಡಿದೆ ಬಿಟ್ಟರೆ, ಸಣ್ಣ ಪುಟ್ಟ ಗೆಲುವು ಸಾಧಿಸಿದೆ.

  • ದಾವೋಸ್‌ನಲ್ಲೂ ಆಪರೇಷನ್ ಕಮಲದ ಸದ್ದು- ಸಿಎಂಗೆ ನೀವು ಸ್ಟೇಬಲ್ ಇದ್ದೀರಾ ಎಂದ ಮಿತ್ತಲ್

    ದಾವೋಸ್‌ನಲ್ಲೂ ಆಪರೇಷನ್ ಕಮಲದ ಸದ್ದು- ಸಿಎಂಗೆ ನೀವು ಸ್ಟೇಬಲ್ ಇದ್ದೀರಾ ಎಂದ ಮಿತ್ತಲ್

    ಬರ್ನ್: ಸ್ವಿಟ್ಜರ್ಲೆಂಡಿನ ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕಾನಮಿ ಫೋರಂ ಸಮಾವೇಶದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಪರೇಷನ್ ಕಮಲದ ಬಗ್ಗೆ ಮಾತನಾಡಿರುವುದು ಕೇಳಿಬಂದಿದೆ.

    CM WITH MITTAl (1)

    ಉದ್ಯಮಿ ಲಕ್ಷ್ಮೀ ಮಿತ್ತಲ್ ಜೊತೆಗಿನ ಸಮಾಲೋಚನೆ ವೇಳೆ ಆಪರೇಷನ್ ಕಮಲದ ಕುರಿತು ಮಾತನಾಡಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ಮಿತ್ತಲ್ ಮಾತುಕತೆ ನಡೆದಿರುವುದು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಿಎಂ ದಾವೋಸ್‌ಗೆ ಭೇಟಿ ನೀಡಿರುವ ಉದ್ದೇಶವೇನು? ಎಂದು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಲುಲು ಗ್ರೂಪ್‍ನೊಂದಿಗೆ 2,000 ಕೋಟಿ ರೂ. ಹೂಡಿಕೆ ಒಪ್ಪಂದ – ಪ್ರತಿಷ್ಠಿತ ಕಂಪನಿಗಳೊಂದಿಗೆ ಬೊಮ್ಮಾಯಿ ಚರ್ಚೆ

    ಸಿಎಂ ಬಂಡವಾಳ ಹೂಡಿಕೆದಾರರನ್ನು ಆಹ್ವಾನಿಸಲು ಹೋಗಿದ್ದಾರಾ? ಅಥವಾ ಮತ್ತಷ್ಟು ಶಾಸಕರ ಖರೀದಿಗೆ ಪ್ಲಾನ್ ಮಾಡ್ತಿರಬಹುದಾ? ವ್ಯಾಪಕ ಟೀಕೆಗೆ ಒಳಗಾಗಿದ್ದಾರೆ. ಇದನ್ನೂ ಓದಿ: ಲೋಕ ಕಲ್ಯಾಣ, ವಿಶ್ವಶಾಂತಿಗಾಗಿ ಅಹಿಂಸಾ ಮಾರ್ಗ ಅನುಸರಿಸಿ: ಗೆಹ್ಲೋಟ್

    ವೀಡಿಯೋ ಮಾತುಕತೆ ಹೀಗಿದೆ..

    ಲಕ್ಷ್ಮೀ ಮಿತ್ತಲ್: ರಾಜ್ಯದಲ್ಲಿ ನಿಮ್ಮ ಶಾಸಕರ ಸಂಖ್ಯೆ ಎಷ್ಟು?
    ಸಿಎಂ: 119 ಶಾಸಕರು ಇದ್ದಾರೆ

    ಮಿತ್ತಲ್: ವಿಧಾನಸಭೆಯ ಸ್ಥಾನಗಳೆಷ್ಟು?
    ಸಿಎಂ: 224

    ಮಿತ್ತಲ್: ಹಾಗಿದ್ರೆ ಉಳಿದ 2-3 ಸೀಟ್‌ಗಳ ಚಿಂತೆ ಇಲ್ಲ ನಿಮಗೆ
    ಸಿಎಂ: ಅಷ್ಟಕ್ಕೂ ನಾವು ಗೆದ್ದಿದ್ದು 104 ಸೀಟ್‌ಗಳು. 17 ಜನ ಬೇರೆ ಪಕ್ಷಗಳಿಂದ ನಮ್ಮ ಪಕ್ಷಕ್ಕೆ ಸೇರ್ಪಡೆಯಾದರು. ಈ ಪೈಕಿ 15 ಜನ ಚುನಾವಣೆಯಲ್ಲಿ  ಮರು ಆಯ್ಕೆ ಆಗಿದ್ದಾರೆ. ಹೀಗಾಗಿ ನಾವು 119 ಇದ್ದೇವೆ.

    ಮಿತ್ತಲ್: ಈಗ ನೀವು ಸ್ಟೇಬಲ್ ಇದೀರಾ ತಾನೇ?
    ಸಿಎಂ: ಹೌದು, ನಾವು ಸ್ಟೇಬಲ್ ಇದ್ದೇವೆ.

  • ಲುಲು ಗ್ರೂಪ್‍ನೊಂದಿಗೆ 2,000 ಕೋಟಿ ರೂ. ಹೂಡಿಕೆ ಒಪ್ಪಂದ – ಪ್ರತಿಷ್ಠಿತ ಕಂಪನಿಗಳೊಂದಿಗೆ ಬೊಮ್ಮಾಯಿ ಚರ್ಚೆ

    ಲುಲು ಗ್ರೂಪ್‍ನೊಂದಿಗೆ 2,000 ಕೋಟಿ ರೂ. ಹೂಡಿಕೆ ಒಪ್ಪಂದ – ಪ್ರತಿಷ್ಠಿತ ಕಂಪನಿಗಳೊಂದಿಗೆ ಬೊಮ್ಮಾಯಿ ಚರ್ಚೆ

    ಬರ್ನ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಇಂದು ಸ್ವಿಟ್ಜರ್ಲೆಂಡಿನ ದಾವೋಸ್‍ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಲುಲು ಗ್ರೂಪ್ ಇಂಟರ್ ನ್ಯಾಷನಲ್‍ನ ನಿರ್ದೇಶಕ ಎ.ವಿ.ಅನಂತ ರಾಮನ್ ಅವರೊಂದಿಗೆ ಕರ್ನಾಟಕದಲ್ಲಿ 2000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಮಾಡಲಾಯಿತು.

    ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಲೋಕ ಕಲ್ಯಾಣ, ವಿಶ್ವಶಾಂತಿಗಾಗಿ ಅಹಿಂಸಾ ಮಾರ್ಗ ಅನುಸರಿಸಿ: ಗೆಹ್ಲೋಟ್

    ವಿಶ್ವದ ಪ್ರಮುಖ ಸಂಸ್ಥೆಗಳೊಂದಿಗೆ ಸಿಎಂ ಚರ್ಚೆ
    ಬಸವರಾಜ ಬೊಮ್ಮಾಯಿ ಅವರು ಇಂದು ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಜ್ಯೂಬಿಲಿಯಂಟ್ ಗ್ರೂಪ್, ಹಿಟಾಚಿ, ದಸ್ಸಾಲ್ಸ್ ಸಿಸ್ಟಮ್ಸ್, ನೆಸ್ಟ್ಲೆ ಹಾಗೂ ಸೀಮನ್ಸ್ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿದರು.

    ಜ್ಯೂಬಿಲಿಯಂಟ್ ಗ್ರೂಪ್
    ಕರ್ನಾಟಕದಲ್ಲಿ ಫಾರ್ಮಾ ಮತ್ತು ಎಫ್‍ಎಂಸಿಜಿ ವಲಯದಲ್ಲಿ ಹೂಡಿಕೆಯ ಅವಕಾಶಗಳನ್ನು ಅನ್ವೇಷಿಸುವಂತೆ ತಿಳಿಸಿದ ಮುಖ್ಯ ಮಂತ್ರಿಗಳು, ಧಾರವಾಡದಲ್ಲಿ ಎಫ್‍ಎಂಸಿಜಿ ವಲಯದಲ್ಲಿ ಹೂಡಿಕೆಗೆ ವಿಶೇಷ ಪ್ರೋತ್ಸಾಹಕ ಪ್ಯಾಕೇಜ್‍ನ್ನು ಸಹ ಪರಿಗಣಿಸಬಹುದಾಗಿದೆ ಎಂದರು. ಇದನ್ನೂ ಓದಿ: ಭಾರತದ ಸ್ಮಾರ್ಟ್ ಸಿಟಿ, 5ಜಿ ಯೋಜನೆಗೆ ಕೊಡುಗೆ ನೀಡಲು ಮುಂದಾದ ಜಪಾನ್

    ಜ್ಯೂಬಿಲಿಯಂಟ್ ಫುಡ್ ವಕ್ರ್ಸ್ ನೂತನ ಕೇಂದ್ರೀಕೃತ ಪಾಕಶಾಲೆ ಪ್ರಾರಂಭಿಸಲು ಹಾಗೂ ಜ್ಯೂಬಿಲಿಯಂಟ್ ಬಯೋಸಿಸ್ ರಾಜ್ಯ ದೇವನಹಳ್ಳಿಯಲ್ಲಿ 10 ಎಕರೆ ಪ್ರದೇಶದಲ್ಲಿ ನೂತನವಾಗಿ ಆರ್ ಅಂಡ್ ಡಿ ಸೆಂಟರ್ ಸ್ಥಾಪಿಸಲು ತೀರ್ಮಾನಿಸಿದೆ. ಪ್ರಸ್ತುತ ರಾಜ್ಯದಲ್ಲಿ 9,000 ಜನರು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ.

    ಹಿಟಾಚಿ ಎನರ್ಜಿ:
    ಹಿಟಾಚಿ ಎನರ್ಜಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ನಡೆದ ಮಾತುಕತೆಯ ಸಂದರ್ಭದಲ್ಲಿ ಇವಿ ಚಾರ್ಜಿಂಗ್‍ಗಾಗಿ ಮೂಲಸೌಕರ್ಯ ಘಟಕ ಸ್ಥಾಪನೆಗೆ ಯೋಜಿಸುತ್ತಿರುವುದಾಗಿ ತಿಳಿಸಿದೆ. ಬೆಂಗಳೂರಿನಲ್ಲಿ ಪ್ರತಿಭೆಯ ಲಭ್ಯತೆ ಇರುವುದರಿಂದ ನವೀಕರಿಸಬಹುದಾದ ಇಂಧನ ಮತ್ತು ಡಿಜಿಟಲೀಕರಣದ ಅವಕಾಶಗಳ ಬಗ್ಗೆ ಆಸಕ್ತಿ ತೋರಿದೆ. ದೊಡ್ಡಬಳ್ಳಾಪುರದಲ್ಲಿ ಇಂಧನ ಗುಣಮಟ್ಟ ಉಪಕರಣ ಘಟಕವನ್ನು ಉದ್ಘಾಟಿಸುತ್ತಿದ್ದಾರೆ. ಸಾವಿರ ಇಂಜಿನಿಯರ್‌ಗಳನ್ನು ಹೊಂದಿರುವ ಎಂಜಿನಿಯರಿಂಗ್ ಕೇಂದ್ರವನ್ನು ನಿರ್ಮಿಸುತ್ತಿದ್ದಾರೆ. ಹಿಟಾಚಿ ಸಂಸ್ಥೆಯ ಕೇಂದ್ರ ಸ್ಥಾನ ಬೆಂಗಳೂರಿನಲ್ಲಿದೆ.

    ಸೀಮೆನ್ಸ್:
    ಬೆಂಗಳೂರಿನಲ್ಲಿ 2 ಯೋಜನೆಗಳನ್ನು ಸೀಮೆನ್ಸ್ ಸಂಸ್ಥೆ ಕೈಗೆತ್ತಿಕೊಳ್ಳಲಿದೆ. ಮ್ಯಾಗ್ನೆಟಿಕ್ ಇಮೇಜಿಂಗ್ ಮತ್ತು ಡಯಾಗ್ನಾಸ್ಟಿಕ್ಸ್ ಮೇಲೆ ಕೇಂದ್ರೀಕೃತವಾದ ಆರ್ ಅಂಡ್ ಡಿ ಆರೋಗ್ಯ ಯೋಜನೆ. ಸ್ಥಳೀಯ ಮಾರುಕಟ್ಟೆಗಳಿಗೆ ಮಾರಾಟ ಮಾಡಲು ವೈದ್ಯಕೀಯ ಸಲಕರಣೆಗಳನ್ನು ಉತ್ಪಾದಿಸುವ ಘಟಕವನ್ನು ಬೊಮ್ಮಸಂದ್ರದಲ್ಲಿ ಸ್ಥಾಪಿಸಲು ಸೆಪ್ಟೆಂಬರ್ 2022ರಲ್ಲಿ ಶಂಕುಸ್ಥಾಪನೆಗೆ ಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯ ಮಂತ್ರಿಗಳನ್ನು ಸಂಸ್ಥೆ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಸೀಮನ್ಸ್ ಸಂಸ್ಥೆ 2,500 ಎಂಜಿನಿಯರ್‌ಗಳನ್ನು ಹೊಂದಿದೆ. ಇದನ್ನೂ ಓದಿ: ಸದ್ಗುರು ಜೊತೆ ಮಂಡಿ ನೋವಿನ ಬಗ್ಗೆ ಹೇಳಿಕೊಂಡ ಸಿಎಂ

    ಆಧುನಿಕ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹಕಕಗಳನ್ನು ಕರ್ನಾಟಕ ಸರ್ಕಾರ ಒದಗಿಸುವ ಭರವಸೆ ನೀಡಿದೆ. ಬಿಯಾಂಡ್ ಬೆಂಗಳೂರು ಯೋಜನೆಯಡಿ ತುಮಕೂರು, ಹುಬ್ಬಳ್ಳಿ- ಧಾರವಾಡ ಮತ್ತು ಮೈಸೂರು ನಗರಗಳಲ್ಲಿಯೂ ಹೂಡಿಕೆ ಮಾಡುವ ಕುರಿತು ರಾಜ್ಯ ಸರ್ಕಾರ ಮತ್ತು ಸೀಮನ್ಸ್ ಸಂಸ್ಥೆ ಮಾತುಕತೆ ನಡೆಸಿತು.

    ದಸ್ಸಾಲ್ಸ್ ಸಿಸ್ಟಮ್ಸ್:
    ರಾಜ್ಯದಲ್ಲಿ ವಿದ್ಯುತ್ ವಾಹನಗಳು ಮತ್ತು ಕೇಂದ್ರ ಉತ್ಪಾದನಾ ತಾಂತ್ರಿಕ ಸಂಸ್ಥೆಯ ಸಹಯೋಗದಲ್ಲಿ ಆಧುನಿಕ ಉತ್ಪಾದನೆ ಕ್ಷೇತ್ರ, ವಿದ್ಯಾರ್ಥಿಗಳಿಗೆ ಕೈಗಾರಿಕೆ 4.0, ಡಿಜಿಟಲ್ ತಂತ್ರಜ್ಞಾನದ ಬಗ್ಗೆ ತರಬೇತಿ, ರಾಜ್ಯದ ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಹೂಡಿಕೆ ಮಾಡಲು ದಸ್ಸಾಲ್ಸ್ ಸಿಸ್ಟಮ್ಸ್ ಉತ್ಸುಕತೆ ತೋರಿದರು.

    ನೆಸ್ಟ್ಲೆ ಸಂಸ್ಥೆ:
    ನಂಜನಗೂಡಿನಲ್ಲಿ ನೆಸ್ಟ್ಲೆ ಇನ್ಸೆಂಟ್ ಕಾಫಿ ಕಾರ್ಖಾನೆಯನ್ನು ನವೀಕರಣ ಹಾಗೂ ವಿಸ್ತರಣಾ ಕಾರ್ಯಕ್ಕೆ ನೆಸ್ಟ್ಲೆ ಸಂಸ್ಥೆ ಮುಂದಾಗಿದೆ.

    ಈ ಸಂದರ್ಭದಲ್ಲಿ ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

  • ಸದ್ಗುರು ಜೊತೆ ಮಂಡಿ ನೋವಿನ ಬಗ್ಗೆ ಹೇಳಿಕೊಂಡ ಸಿಎಂ

    ಸದ್ಗುರು ಜೊತೆ ಮಂಡಿ ನೋವಿನ ಬಗ್ಗೆ ಹೇಳಿಕೊಂಡ ಸಿಎಂ

    ಬರ್ನ್: ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ತೆರಳಿದ್ದಾರೆ. ಈ ವೇಳೆ ಬೊಮ್ಮಾಯಿ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಭೇಟಿ ಮಾಡಿದರು.

    ಹವಾಮಾನ ಬದಲಾವಣೆ ಹಾಗೂ ಪರಿಸರ ಮಾಲಿನ್ಯ ಕುರಿತ ಗೋಷ್ಠಿಗೂ ಮುನ್ನ ಸದ್ಗುರು ಬೊಮ್ಮಾಯಿಯವರನ್ನು ಭೇಟಿ ಮಾಡಿದರು. ಸಿಎಂ ನಡೆದು ಬರುತ್ತಿದ್ದುದನ್ನು ನೋಡಿ ಸದ್ಗುರು ಏನಾಗಿದೆ ಎಂದು ವಿಚಾರಿಸಿದರು. ಈ ವೇಳೆ ಬೊಮ್ಮಾಯಿ ತಮ್ಮ ಮಂಡಿ ನೋವಿನ ಸಮಸ್ಯೆ ಬಗ್ಗೆ ಜಗ್ಗಿ ವಾಸುದೇವ್ ಬಳಿ ಹೇಳಿಕೊಂಡರು. ಇದನ್ನೂ ಓದಿ: ಪರಿಷತ್‌ ಚುನಾವಣೆ – ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಕಾಂಗ್ರೆಸ್-ಬಿಜೆಪಿಯಲ್ಲಿ ಇನ್ನೂ ಅಂತಿಮವಾಗದ ಅಭ್ಯರ್ಥಿಗಳು

    ಶೃಂಗಸಭೆಯಲ್ಲಿ ಸಿಎಂ ಬೊಮ್ಮಾಯಿ ನೀಲಿ ಬಣ್ಣದ ಸೂಟ್ ಧರಿಸಿ ಮಿಂಚಿದ್ದಾರೆ. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಇಲಾಖೆ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ಹಾಗೂ ಸಿಎಂ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಸಿಎಂಗೆ ಸಾತ್ ನೀಡಿದ್ದಾರೆ. ಇದನ್ನೂ ಓದಿ: ಕುವೆಂಪು, ನಾಡಗೀತೆಗೆ ಅವಮಾನ- ರೋಹಿತ್ ಚಕ್ರತೀರ್ಥರ ಮೇಲೆ ಮುಗಿಬಿದ್ದ ಕಾಂಗ್ರೆಸ್

    ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾರತವನ್ನು ಬಸವರಾಜ ಬೊಮ್ಮಾಯಿ ಪ್ರತಿನಿಧಿಸುತ್ತಿದ್ದಾರೆ. ಸಿಎಂ ಜೊತೆ 8 ಜನರ ತಂಡ ದಾವೋಸ್‌ಗೆ ತೆರಳಿದ್ದು, ಸಿಎಂ ಆದ ಬಳಿಕ ಬೊಮ್ಮಾಯಿಯವರಿಗೆ ಇದು ಮೊದಲ ವಿದೇಶ ಪ್ರವಾಸವಾಗಿದೆ.

  • ರಾಜತಾಂತ್ರಿಕತೆಯಿಂದ ಮಾತ್ರ ಯುದ್ಧ ನಿಲ್ಲಿಸಲು ಸಾಧ್ಯ: ಝೆಲೆನ್ಸ್ಕಿ

    ರಾಜತಾಂತ್ರಿಕತೆಯಿಂದ ಮಾತ್ರ ಯುದ್ಧ ನಿಲ್ಲಿಸಲು ಸಾಧ್ಯ: ಝೆಲೆನ್ಸ್ಕಿ

    ಕೀವ್: ರಾಜತಾಂತ್ರಿಕತೆಯಿಂದ ಮಾತ್ರ ರಷ್ಯಾ – ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗೊಳಿಸಬಹುದು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

    ಉಕ್ರೇನ್‍ಗೆ ಭೇಟಿ ನೀಡುತ್ತಿರುವ ಪೋರ್ಚುಗೀಸ್ ಪ್ರಧಾನಿ ಆಂಟೋನಿಯೊ ಕೋಸ್ಟಾ ಅವರೊಂದಿಗೆ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ಸಂಪೂರ್ಣ ಮಿಲಿಟರಿ ವಿಜಯಕ್ಕಿಂತ ರಾಜತಾಂತ್ರಿಕ ಪ್ರಗತಿಯಿಂದ ಮಾತ್ರ ರಷ್ಯಾದೊಂದಿಗಿನ ಯುದ್ಧವನ್ನು ಕೊನೆಗೊಳಿಸಬಹುದು ಎಂದು ಹೇಳಿದ್ದಾರೆ.

    Russia-UkraineWar

    ಯುದ್ಧವು ರಕ್ತಮಯವಾಗಿರುತ್ತದೆ, ಹೋರಾಟ ಇರುತ್ತದೆ. ಆದರೆ ರಾಜತಾಂತ್ರಿಕತೆಯ ಮೂಲಕ ಮಾತ್ರ ಯುದ್ಧವನ್ನು ಕೊನೆಗೊಳಿಸಬಹುದು. ಉಕ್ರೇನ್ ಮತ್ತು ರಷ್ಯಾ ನಡುವಿನ ಚರ್ಚೆಗಳು ನಿರ್ಣಾಯಕವಾಗಿ ನಡೆಯುತ್ತವೆ. ಅದು ಯಾವ ಸ್ವರೂಪದಲ್ಲಿ ನನಗೆ ಗೊತ್ತಿಲ್ಲ. ಆದರೆ ಫಲಿತಾಂಶವು ಉಕ್ರೇನ್‍ಗೆ “ನ್ಯಾಯಯುತ” ಎಂದು ಝೆಲೆನ್ಸ್ಕಿ ಭರವಸೆ ನೀಡಿದರು. ಇದನ್ನೂ ಓದಿ: ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮುಖಭಂಗ, ಬಿಜೆಪಿಯಿಂದ ಸ್ಪರ್ಧಿಸಿದ ಗಂಡ-ಹೆಂಡತಿ ಜಯಭೇರಿ

    ಫಿನ್‍ಲ್ಯಾಂಡ್ ನ್ಯಾಟೋ ಸದಸ್ಯತ್ವ ಪಡೆಯಲು ಅರ್ಜಿ ಸಲ್ಲಿಸುತ್ತಿದ್ದಂತೆ ರಷ್ಯಾ ನೈಸರ್ಗಿಕ ಅನಿಲ ಸರಬರಾಜನ್ನು ನಿಷೇಧಿಸಿದೆ. ಜೊತೆಗೆ 963 ಅಮೆರಿಕವನ್ನು ರಷ್ಯಾ ಪ್ರವೇಶಿಸದಂತೆ ನಿಷೇಧಿಸಿದೆ. ಈ ಯುದ್ಧದಿಂದಾಗಿ 64 ಲಕ್ಷ ಉಕ್ರೇನಿಯನ್ನರು ದೇಶದಿಂದ ಪಲಾಯನ ಮಾಡಿದ್ದಾರೆ. ಹಾಗಾಗಿ ಈ ಯುದ್ಧವನ್ನು ಬಗೆಹರಿಸಲು ರಾಜತಾಂತ್ರಿಕತೆಯೊಂದೆ ಪರಿಹಾರ ಎಂದು ರಷ್ಯಾ ಅಧ್ಯಕ್ಷ ವೊಲೋಡಿಮಿರ್ ಝಲೆನ್ಸ್ಕಿ ಹೇಳಿದ್ದಾರೆ. ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

    ಈಗಾಗಲೇ ಮಾರಿಯುಪೋಲ್ ಉಕ್ಕಿನ ಸ್ಥಾವರದಿಂದ ಸುಮಾರು 2,500 ಉಕ್ರೇನಿಯನ್ ಸೈನಿಕರನ್ನು ಸೆರೆಹಿಡಿಯಲಾಗಿದೆ. 20,000 ಕ್ಕೂ ಹೆಚ್ಚು ಉಕ್ರೇನಿಯನ್ ಪ್ರಜೆಗಳು ಹತ್ಯೆಯಾಗಿದ್ದಾರೆ ಎಂದು ವರದಿಯಾಗಿದೆ.

    ಸುಮಾರು ಎರಡೂವರೆ ವರ್ಷಗಳ ನಂತರ, ಸ್ವಿಸ್ ಸ್ಕೀ ರೆಸಾರ್ಟ್ ಪಟ್ಟಣವಾದ ದಾವೋಸ್ ಮತ್ತೊಮ್ಮೆ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯನ್ನು ಆಯೋಜಿಸಲು ಸಿದ್ಧವಾಗಿದೆ. ಭಾರತ ಸೇರಿದಂತೆ ಹಲವಾರು ಜಾಗತಿಕ ನಾಯಕರು ಉಕ್ರೇನ್ ಕುರಿತು ಚರ್ಚಿಸುವ ನಿರೀಕ್ಷೆಯಿದೆ.

  • ದಾವೋಸ್‍ಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ

    ದಾವೋಸ್‍ಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಪತ್ನಿ ಹಾಗೂ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ 8 ಮಂದಿ ಜೊತೆ ಇಂದು ದಾವೋಸ್‍ಗೆ ತೆರಳಿದ್ದಾರೆ.

    ಹೌದು. ದಾವೋಸ್ ನಲ್ಲಿ ವಿಶ್ವ ಆರ್ಥಿಕ ಶೃಂಗ ಸಭೆ ಇದೆ. ಈ ಶೃಂಗಸಭೆಯಲ್ಲಿ ಸಿಎಂ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ. ಹೀಗಾಗಿ ಸಿಎಂ ಬೊಮ್ಮಾಯಿ ದಾವೋಸ್ ಪ್ರವಾಸಕ್ಕೆ ತೆರಳಿದ್ದಾರೆ. ಈ ಮೂಲಕ ಬೊಮ್ಮಾಯಿ ಅವರು ಎರಡನೇ ಬಾರಿಗೆ ದಾವೋಸ್ ಶೃಂಗ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಹಿಂದೆ ಜಲಸಂಪನ್ಮೂಲ ಖಾತೆ ಸಚಿವರಾಗಿದ್ದಾಗ ದಾವೋಸ್‍ಗೆ ತೆರಳಿದ್ದರು. ಸಿಎಂ ಆದ ಬಳಿಕ ಇದೀಗ ಎರಡನೇ ಬಾರಿಗೆ ದಾವೋಸ್ ಗೆ ಪ್ರಯಾಣ ಮಾಡಿದ್ದಾರೆ.

    ಈಗಾಗಲೇ ಬೆಂಗಳೂರಿನಿಂದ ವಿಮಾನದ ಮೂಲಕ ಪ್ರಯಾಣ ಬೆಳೆಸಿರುವ ಸಿಎಂ, ಇಂದು ಮಧ್ಯಾಹ್ನ 12.45 ಕ್ಕೆ ದುಬೈಗೆ ತಲುಪಲಿದ್ದಾರೆ. ದುಬೈನಿಂದ ಮಧ್ಯಾಹ್ನ 3.35 ಕ್ಕೆ ಸ್ವಿಟ್ಜರ್ಲೆಂಡ್ ನ ಜ್ಯೂರಿಚ್ ಗೆ ಹೋಗಿ ರಾತ್ರಿ 8.20 ರಿಂದ ಜ್ಯೂರಿಚ್ ನಿಂದ ದಾವೋಸ್ ರಸ್ತೆ ಮಾರ್ಗದ ಮೂಲಕ ಪ್ರಯಾಣ ಮಾಡಲಿದ್ದಾರೆ. ರಾತ್ರಿ 12ಕ್ಕೆ ಸಿಎಂ ನೇತೃತ್ವದ ನಿಯೋಗ ದಾವೋಸ್ ತಲುಪಲಿದೆ. ಇದನ್ನೂ ಓದಿ: ತುಂಗಭದ್ರಾ ಡ್ಯಾಂನ ಹಿನ್ನೀರಿನಲ್ಲಿ ಬೆಳೆದ ಬೆಳೆ ನೀರು ಪಾಲು – ರೈತ ಕಣ್ಣೀರು

    ದಾವೋಸ್‍ಗೆ ತೆರಳುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಇವತ್ತು ದಾವೋಸ್ ಗೆ ಹೋಗುತ್ತಿದ್ದೇವೆ. ನಾಳೆಯಿಂದ ಸೆಷನ್ ಆರಂಭವಾಗಲಿದೆ. ನಾಳೆ, ನಾಡಿದ್ದು ಎರಡು ಸೆಷನ್ ಗಳಲ್ಲಿ ಭಾಗವಹಿಸುತ್ತೇವೆ. ವಿಶ್ವದ ಪ್ರಖ್ಯಾತ ಕೈಗಾರಿಕೋದ್ಯಮದ ಉದ್ಯಮಿಗಳ ಭೇಟಿ ಮಾಡುತ್ತೇವೆ. ಅಲ್ಲಿನ ಕಾರ್ಯಕ್ರಮಗಳನ್ನು ಮಾಧ್ಯಮಗಳಿಗೆ ನಿರಂತರವಾಗಿ ತಲುಪಿಸುತ್ತೇವೆ. ಕೆಲವು ರಾಷ್ಟ್ರೀಯ ಮಾಧ್ಯಮಗಳೂ ಬಂದಿರುತ್ತವೆ ಎಂದರು.

    ಭಾರತಕ್ಕೆ ಎಫ್‍ಡಿಐ ಬಹಳಷ್ಟು ಬಂದಿದೆ. ಅದರಲ್ಲಿ ಕರ್ನಾಟಕ ನಂಬರ್ ಒನ್ ಸ್ಥಾನದಲ್ಲಿದೆ. ಕಳೆದ ನಾಲ್ಕು ಆರ್ಥಿಕ ತ್ರೈಮಾಸಿಕಗಳಲ್ಲಿ ರಾಜ್ಯಕ್ಕೆ ಹೆಚ್ಚು ಎಫ್‍ಡಿಐ ಹರಿದು ಬಂದಿದೆ. ಹೀಗಾಗಿ ನಮಗೆ ಉತ್ಸಾಹ ಇದೆ. ಇನ್ನೂ ಹಲವು ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ನವೆಂಬರ್ ನಲ್ಲಿ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಇದೆ. ಈ ಬಾರಿ ಕೈಗಾರಿಕೆಗಳ ಸ್ಥಾಪನೆಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ತೇವೆ. ಅನೇಕ ಒಡಂಬಡಿಕೆಗಳಿಗೆ ಒಪ್ಪಂದ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.

    PETROL

    ಇದೇ ವೇಳೆ ಕೇಂದ್ರದಿಂದ ಪೆಟ್ರೋಲ್, ಡೀಸೆಲ್ ಇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲೂ ಇಳಿಕೆ ಮಾಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕೇಂದ್ರದಿಂದ ನಿನ್ನೆ ರಾತ್ರಿ ದರ ಇಳಿಕೆ ಆಗಿದೆ. ರಾಜ್ಯದಲ್ಲೂ ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದರು.

    ಸಿಎಂ ಜೊತೆ ಧರ್ಮಪತ್ನಿ ಚೆನ್ನಮ್ಮ, ಮುರುಗೇಶ್ ನಿರಾಣಿ ಮತ್ತು ನಿರಾಣಿ ಪತ್ನಿ, ನಿರಾಣಿ ಪಿಎ ಶರಣಬಸಪ್ಪ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತು ಅವರ ಪಿಎ, ಸಿಎಂ ಒಎಸ್‍ಡಿ ರೋಹನ್ ಬಿರಾದಾರ್ ಹೀಗೆ ಒಟ್ಟು ಮಂದಿ ದಾವೋಸ್‍ಗೆ ಪ್ರಯಾಣ ಬೆಳೆಸಿದ್ದಾರೆ.

  • ಸಿಎಂ ದಾವೋಸ್‌ ಪ್ರವಾಸ ಫಿಕ್ಸ್‌ – ಬೊಮ್ಮಾಯಿ ಜೊತೆ ಇಬ್ಬರು ಸಚಿವರೂ ಪ್ರಯಾಣ

    ಸಿಎಂ ದಾವೋಸ್‌ ಪ್ರವಾಸ ಫಿಕ್ಸ್‌ – ಬೊಮ್ಮಾಯಿ ಜೊತೆ ಇಬ್ಬರು ಸಚಿವರೂ ಪ್ರಯಾಣ

    ಬೆಂಗಳೂರು: ಬಿಜೆಪಿಯಲ್ಲಿ ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದಾವೋಸ್‌ ಪ್ರವಾಸ ಕೊನೆಗೂ ಫಿಕ್ಸ್‌ ಆಗಿದೆ.

    ಇದೇ ಮೇ 22 ರ ಬೆಳಗ್ಗೆ ಸಿಎಂ ದಾವೋಸ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ. ನಂತರ ಮೇ 26 ರಂದು ವಾಪಸ್‌ ಆಗಲಿದ್ದಾರೆ. ಇದನ್ನೂ ಓದಿ: PSI ಪ್ರಕರಣದ ನಿಜವಾದ ಕಿಂಗ್‍ಪಿನ್‍ಗಳು ಬೆಂಗಳೂರಲ್ಲೇ ಇದ್ದಾರೆ, ಬಂಧಿತರೇ ಬೇರೆ: ಪ್ರಿಯಾಂಕ್ ಖರ್ಗೆ ಬಾಂಬ್

    ಒಟ್ಟು ಐದು ದಿನಗಳ ಕಾಲ ವಿದೇಶ ಪ್ರವಾಸ ಮಾಡಲಿದ್ದಾರೆ. ಈ ವೇಳೆ ಸಿಎಂ ಜೊತೆಗೆ ದಾವೋಸ್‌ಗೆ ಇಬ್ಬರು ಸಚಿವರೂ ಪ್ರಯಾಣ ಬೆಳೆಸಲಿದ್ದಾರೆ. ಸಿಎಂ ಜೊತೆಗೆ ಐಟಿ ಬಿಟಿ ಸಚಿವ ಡಾ.ಅಶ್ವಥ್‌ ನಾರಾಯಣ ಮತ್ತು ಬೃಹತ್‌ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಪ್ರವಾಸ ಕೈಗೊಳ್ಳಲಿದ್ದಾರೆ.

    ಹಲವು ಕಾರಣಗಳಿಗಾಗಿ ಮುಖ್ಯಮಂತ್ರಿಗಳ ಲಂಡನ್‌ ಪ್ರವಾಸ ರದ್ದಾಗಿತ್ತು. ಇದರ ಬೆನ್ನಲ್ಲೇ ದಾವೋಸ್‌ ಪ್ರವಾಸವೂ ರದ್ದಾಗುವ ಸಾಧ್ಯತೆ ಇದೆ ಎಂದು ಸುದ್ದಿ ಹರಡಿತ್ತು. ಆದರೆ ದಾವೋಸ್‌ ಪ್ರವಾಸ ಕೊನೆಗೂ ಫಿಕ್ಸ್‌ ಆಗಿದೆ. ಇದನ್ನೂ ಓದಿ: ಸಚಿವ ಸಂಪುಟದಲ್ಲಿ ಬದಲಾವಣೆ ಮಾಡುವುದು ಸಿಎಂ ನಿರ್ಧಾರಕ್ಕೆ ಬಿಟ್ಟಿದ್ದು: ಅರುಣ್ ಸಿಂಗ್

  • ಸಿಎಂ ದಾವೋಸ್ ಪ್ರವಾಸ ನಾಳೆ ನಿರ್ಧಾರ: ಕುತೂಹಲ ಮೂಡಿಸಿದ ಬಿಜೆಪಿ ಹೈಕಮಾಂಡ್ ಸಂದೇಶ

    ಸಿಎಂ ದಾವೋಸ್ ಪ್ರವಾಸ ನಾಳೆ ನಿರ್ಧಾರ: ಕುತೂಹಲ ಮೂಡಿಸಿದ ಬಿಜೆಪಿ ಹೈಕಮಾಂಡ್ ಸಂದೇಶ

    ಬೆಂಗಳೂರು: ಬಿಜೆಪಿಯಲ್ಲಿ ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಲಂಡನ್ ಪ್ರವಾಸವೂ ರದ್ದಾಗಿದ್ದು, ದಾವೋಸ್ ಪ್ರವಾಸವೂ ರದ್ದಾಗುವ ಸಾಧ್ಯತೆ ಇದೆ. ನಾಳೆ ಮಹತ್ವದ ನಿರ್ಧಾರ ಹೊರಬೀಳುವ ಬಗ್ಗೆ ನಾನಾ ಚರ್ಚೆಗಳು ಆಗುತ್ತಿದ್ದು, ಹೈಕಮಾಂಡ್ ಸಂದೇಶ ಕುತೂಹಲ ಹುಟ್ಟುಹಾಕಿದೆ.

    ಬಿಜೆಪಿ ಹೈಕಮಾಂಡ್‌ನ ಆ ಸಂದೇಶ ನಾಳೆಯೇ ಬಂದು ಬಿಡುತ್ತೋ? ಮುಂದಿನ ವಾರ ಬರುತ್ತೋ ಎಂಬ ಬಗ್ಗೆ ಮೊದಲ ಸಾಲಿನ ನಾಯಕರಲ್ಲೇ ಗೊಂದಲ ಇದೆ. ಈ ನಡುವೆ ಸಿಎಂ ವಿದೇಶ ಪ್ರವಾಸದಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಮೇ 18, 19 ರಂದು ತೆರಳಬೇಕಿದ್ದ ಲಂಡನ್ ಪ್ರವಾಸ ರದ್ದುಗೊಳಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ದಾವೋಸ್ ಪ್ರವಾಸಕ್ಕೂ ತೆರಳುವುದು ಅನುಮಾನವಾಗಿದೆ. ಸ್ವತಃ ಬಸವರಾಜ ಬೊಮ್ಮಾಯಿ ಅವರೇ ಮಾತನಾಡಿ, ದಾವೋಸ್‌ಗೆ ಹೋಗುವುದರ ಬಗ್ಗೆ ನಾಳೆ ತೀರ್ಮಾನ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮೇ 16ಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭ – 30 ಸಾವಿರ ವಿದ್ಯಾರ್ಥಿಗಳ ಪೋಷಕರಿಗೆ ಪತ್ರ ಬರೆದ ರಮೇಶ್ ಜಾರಕಿಹೊಳಿ

    ಇದೆಲ್ಲದರ ನಡುವೆ ಇವತ್ತು ದೆಹಲಿಯಿಂದ ವಾಪಸ್ ಬಂದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ಕೊಟ್ಟು ಮಾತುಕತೆ ನಡೆಸಿದರು. 20 ನಿಮಿಷ ಬಿಎಸ್‌ವೈ ಜೊತೆ ಚರ್ಚೆ ನಡೆಸಿದ ಸಿಎಂ ದೆಹಲಿ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದರು. ಅಮಿತ್ ಶಾ ಏನ್ ಹೇಳಿದ್ರು? ಏನ್ ಮಾಡ್ತಾರಂತೆ ಎಂದು ಸಿಎಂ ಬಳಿ ಯಡಿಯೂರಪ್ಪ ಮಾಹಿತಿ ಕೇಳಿದಾಗ, ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಏನ್ ಮಾಡ್ತೀವಿ ಅಂತಾ ನಾಲ್ಕೈದು ದಿನದಲ್ಲಿ ತಿಳಿಸ್ತೀವಿ ಅಂತಷ್ಟೇ ಅಮಿತ್ ಶಾ ಹೇಳಿದ್ದಾರೆ. ನನಗೂ ಸ್ಪಷ್ಟವಾದ ಸಂದೇಶ ಸಿಗಲಿಲ್ಲ. ಆದರೆ ಮಹತ್ವದ ನಿರ್ಧಾರ ಮಾಡುವುದಾಗಿ ಹೇಳಿದ್ದಾರೆ ಎಂದು ಸಿಎಂ ವಿವರಿಸಿದ್ದಾರೆ ಎನ್ನಲಾಗಿದೆ.

    ಇನ್ನೊಂದೆಡೆ ನಾಳೆ ಬೆಳಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದು, ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ ಕೂಡ ನಡೆಯಲಿದ್ದು, ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಒಟ್ಟಿನಲ್ಲಿ ಸಿಎಂ ವಿದೇಶ ಪ್ರವಾಸ ರದ್ದಾಗಿದ್ದು, ವಾರದೊಳಗೆ ಸಂದೇಶ ರವಾನೆ ಮಾಡ್ತೀವಿ ಅಂತಾ ಅಮಿತ್ ಶಾ ಹೇಳಿದ್ದಾರೆ. ಇದೆಲ್ಲವನ್ನೂ ನೋಡಿದಾಗ ಆ ಬದಲಾವಣೆ ಮುಂದಿನ ವಾರದೊಳಗೆ ಆಗಬಹುದಾ ಎಂಬ ಕುತೂಹಲ ಮನೆ ಮಾಡಿದೆ. ಇದನ್ನೂ ಓದಿ: ಲಿಡ್ಕರ್ ಮೂಲಕ ಸ್ವಯಂ ಉದ್ಯೋಗ ಒದಗಿಸಲು ಆದ್ಯತೆ: ಬೊಮ್ಮಾಯಿ