Tag: ದಾವೋಸ್

  • ಫಾರಿನ್ ಟೂರ್‌ಗೆ ಹೊಸ ಲುಕ್‍ನಲ್ಲಿ ಕಾಣಿಸಿಕೊಂಡ ರಾಜಾಹುಲಿ

    ಫಾರಿನ್ ಟೂರ್‌ಗೆ ಹೊಸ ಲುಕ್‍ನಲ್ಲಿ ಕಾಣಿಸಿಕೊಂಡ ರಾಜಾಹುಲಿ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಸದಾಕಾಲ ಹೊರಗೆ ಕಾಣಿಸಿಕೊಳ್ಳೋದು ತಮ್ಮ ನೆಚ್ಚಿನ ಶ್ವೇತ ವರ್ಣದ ಸಫಾರಿ ಡ್ರೆಸ್‍ನಲ್ಲೇ. ಅವರಿಗೂ ಬಿಳಿ ಸಫಾರಿಗೂ ಅವಿನಾಭಾವ ನಂಟು. ಆದರೆ ಅಪರೂಪವೆಂದರೂ ಸರಿಯೇ ಕೆಲವೊಮ್ಮೆ ಮಾತ್ರ ಯಡಿಯೂರಪ್ಪನವರು ತಮ್ಮ ಬಿಳಿ ಸಫಾರಿಗೆ ರಜೆ ಕೊಡುತ್ತಾರೆ. ಆ ಸಂದರ್ಭ ಇಂದು ಮತ್ತೆ ಬಂದಿದೆ. ಯಡಿಯೂರಪ್ಪನವರು ಇಂದು ಅಪರೂಪಕ್ಕೆ ಸೂಟು ಬೂಟು ಧರಿಸಿ ಮಿಂಚುತ್ತಿದ್ದರು. ಸ್ವಿಟ್ಜರ್ಲೆಂಡ್ ಗೆ ಹೊರಟ ಹಿನ್ನೆಲೆಯಲ್ಲಿ ಸಿಎಂ ಇಂದು ತಮ್ಮ ಬಿಳಿ ಬಣ್ಣದ ಸಫಾರಿ ಬದಲು ಸೂಟು ಬೂಟು ಧರಿಸಿದ್ದರು.

    ಸ್ವಿಟ್ಜರ್ಲೆಂಡ್‍ನ ದಾವೋಸ್ ಗೆ ಹೊರಟ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಬೆಳಗ್ಗೆಯೇ ಸೂಟು ಧರಿಸಿ ಸಿದ್ಧವಾಗಿದ್ರು. ವಿಮಾನ ನಿಲ್ದಾಣಕ್ಕೆ ಹೊರಡಲು ತಮ್ಮ ಧವಳಗಿರಿ ನಿವಾಸದಿಂದ ಇಂದು ಬೆಳಗ್ಗೆ ಹೊರಗೆ ಬಂದ ಯಡಿಯೂರಪ್ಪನವರನ್ನು ಕಂಡು ಎಲ್ಲರೂ ಅಚ್ಚರಿಗೊಂಡರು. ಯಡಿಯೂರಪ್ಪನವರು ಮದುಮಗನಂತೆ ಸೂಟ್ ಧರಿಸಿದ್ದರು. ಇನ್ ಮಾಡಿದ್ದ ವೈಟ್ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್, ಕಪ್ಪು ಶೂ, ಶರ್ಟ್ ಮೇಲೆ ನೇವಿ ಗ್ರೇ ಬಣ್ಣದ ಕೋಟ್ ಧರಿಸಿ ಸಿಎಂ ಮಿಂಚುತ್ತಿದ್ರು.

    ಇವತ್ತಷ್ಟೇ ಅಲ್ಲ, ದಾವೋಸ್ ಶೃಂಗ ಸಭೆ ನಡೆಯುವ ಐದು ದಿನಗಳೂ ಸಿಎಂ ಸೂಟ್ ಧರಿಸುತ್ತಾರೆ. ಐದು ದಿನಗಳಿಗೆ ಐದು ವಿವಿಧ ಬಣ್ಣಗಳ ವೈವಿಧ್ಯಮಯ ಸೂಟ್ಸ್ ಗಳನ್ನು ಮುಖ್ಯಮಂತ್ರಿಗಳು ತಮ್ಮೊಂದಿಗೆ ಕೊಂಡೊಯ್ದಿದ್ದಾರೆ. ದಿನಕ್ಕೊಂದು ಸೂಟ್ಸ್ ಧರಿಸಿ ಸಿಎಂ ಜಾಗತಿಕ ಮಟ್ಟದ ಉದ್ಯಮಿಗಳ ಜೊತೆ ಸಂವಾದ ನಡೆಸಲಿದ್ದಾರೆ. ಸಿಎಂ ತಮ್ಮ ಜೊತೆ ನಾಲ್ಕು ಸೂಟ್ ಕೇಸ್ ಗಳಲ್ಲಿ ಸೂಟ್ ಗಳು, ಚಳಿ ತಡೆಯಲು ಬೆಚ್ಚನೆಯ ಉಡುಪುಗಳು, ಸಾದಾ ಉಡುಪುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ದಾವೋಸ್ ನಲ್ಲಿ ಚಳಿ ತಡೆಯಲು ಒಂದಷ್ಟು ಸ್ವೆಟರ್, ಸಾಕ್ಸ್, ಗ್ಲೌಸ್ ಗಳನ್ನು ಮಕ್ಕಳು ಸಹ ಯಡಿಯೂರಪ್ಪಗೆ ಕೊಟ್ಟು ಕಳಿಸಿದ್ದಾರಂತೆ. ಒಟ್ಟಿನಲ್ಲಿ ಮುಖ್ಯಮಂತ್ರಿಗಳು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡೇ ಫಾರಿನ್ ಗೆ ಹೊರಟಿದ್ದಾರೆ.

  • ಇಂದಿನಿಂದ ಸಿಎಂ ಬಿಎಸ್‍ವೈ & ಟೀಂ ವಿದೇಶ ಪ್ರವಾಸ

    ಇಂದಿನಿಂದ ಸಿಎಂ ಬಿಎಸ್‍ವೈ & ಟೀಂ ವಿದೇಶ ಪ್ರವಾಸ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ನಿಯೋಗದ ಜೊತೆಗೆ ಇಂದು ಬೆಳಗ್ಗೆ 10.25ಕ್ಕೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವೋಸ್ ಗೆ ಪ್ರಯಾಣ ಬೆಳೆಸಲಿದ್ದಾರೆ.

    ಸ್ವಿಟ್ಜರ್ಲೆಂಡ್‍ನ ದಾವೋಸ್ ನಲ್ಲಿ ಇದೇ 20ರಿಂದ 23 ರವರೆಗೆ ನಡೆಯಲಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಬಿಎಸ್‍ವೈ ನೇತೃತ್ವದ ನಿಯೋಗ ಭಾಗವಹಿಸುತ್ತಿದೆ. ಸಿಎಂ ನೇತೃತ್ವದ ನಿಯೋಗದಲ್ಲಿ ಸಿಎಂ ಸೇರಿ ಒಟ್ಟು 10 ಜನ ಇರಲಿದ್ದಾರೆ.

    ನಾನ್ ಅಫಿಶಿಯಲ್ ಗ್ರೂಪ್ ನಲ್ಲಿ ಮೂವರು ಪ್ರಯಾಣ ಬೆಳೆಸಲಿದ್ದಾರೆ. ಸಿಎಂ ಯಡಿಯೂರಪ್ಪ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮತ್ತು ಸಿಎಂ ರಾಜಕೀಯ ಸಲಹೆಗಾರ ಮರಂಕಲ್ ವಿದೇಶದತ್ತ ಪ್ರಯಾಣಿಸಲಿದ್ದಾರೆ. ಆಫಿಶಿಯಲ್ ಗ್ರೂಪ್ ನಲ್ಲಿ ಮೂವರು ಐಎಎಸ್ ಅಧಿಕಾರಿಗಳು ಸೇರಿ 7 ಅಧಿಕಾರಿಗಳು ದಾವೋಸ್ ಗೆ ಹೊರಟಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ ಭಾಸ್ಕರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಸಿಎಂ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತ ಗುಂಜನ್ ಕೃಷ್ಣ, ಸಿಎಂ ವಿಶೇಷ ಕರ್ತವ್ಯಾಧಿಕಾರಿ ಕೆ.ಪಿ ರುದ್ರಪ್ಪಯ್ಯ ಮತ್ತು ಪಿಎಸ್ ದವಳೇಶ್ವರ್ ದಾವೋಸ್ ಗೆ ಹೊರಟಿದ್ದಾರೆ.

    ದಾವೋಸ್ ಶೃಂಗ ಸಭೆಯಲ್ಲಿ ಈವರೆಗೆ 35 ಜಾಗತಿಕ ಮಟ್ಟದ ಉದ್ಯಮಿಗಳ ಜೊತೆ ಸಿಎಂ ನೇತೃತ್ವದ ನಿಯೋಗ ಸಂವಾದ ನಡೆಸಲಿದೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆ ಸ್ನೇಹಿ ವಾತಾವರಣ, ಸೌಲಭ್ಯಗಳ ಕುರಿತು ಹೂಡಿಕೆದಾರರಿಗೆ ರಾಜ್ಯದ ನಿಯೋಗ ಮನವರಿಕೆ ಮಾಡಿಕೊಡಲಿದೆ. ಜೊತೆಗೆ ರಾಜ್ಯದಲ್ಲಿ ಬಂಡವಾಳ ಹೂಡಲು ವಿದೇಶೀ ಹೂಡಿಕೆದಾರರನ್ನು ಸಿಎಂ ಆಹ್ವಾನಿಸಲಿದ್ದಾರೆ. ಜನವರಿ 24 ರ ರಾತ್ರಿ ಸಿಎಂ ಮತ್ತು ನಿಯೋಗ ಬೆಂಗಳೂರಿಗೆ ವಾಪಸ್ಸಾಗಲಿದೆ.

  • ಚಳಿಯ ಭಯವಿದ್ದರೂ ವಿದೇಶ ಪ್ರಯಾಣಕ್ಕೆ ಓಕೆ ಎಂದ ಬಿಎಸ್‍ವೈ

    ಚಳಿಯ ಭಯವಿದ್ದರೂ ವಿದೇಶ ಪ್ರಯಾಣಕ್ಕೆ ಓಕೆ ಎಂದ ಬಿಎಸ್‍ವೈ

    ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿದೇಶ ಪ್ರಯಾಣಕ್ಕೆ ಕೊನೆಗೂ ಒಪ್ಪಿಗೆ ಸಿಕ್ಕಿದೆ. ಚಳಿಯ ಭಯದಿಂದ ಪ್ರವಾಸಕ್ಕೆ ಹಿಂದೆ ಮುಂದೆ ನೋಡುತ್ತಿದ್ದ ಬಿಎಸ್‍ವೈ ಅವರೇ ಸ್ವತಃ ಪ್ರಯಾಣಕ್ಕೆ ನಿನ್ನೆ ಒಪ್ಪಿಗೆ ಸೂಚಿಸಿದ್ದಾರೆ.

    ಸ್ವಿಜರ್ಲ್ಯಾಂಡ್ ದಾವೋಸ್‍ನಲ್ಲಿ ಜನವರಿ 21ರಿಂದ 24ರ ತನಕ ನಡೆಯಲಿರುವ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ಸಿಎಂ ಯಡಿಯೂರಪ್ಪ ರಾಜ್ಯದ ಪರವಾಗಿ ಭಾಗವಹಿಸಲಿದ್ದಾರೆ. ಸಿಎಂ ಬಿಎಸ್‍ವೈರೊಂದಿಗೆ ತೆರಳಿರುವ 13 ಮಂದಿ ತಂಡ ಕೂಡ ಸದ್ಯ ಅಂತಿಮವಾಗಿದೆ.

    ಬಿಎಸ್‍ವೈ ವಿದೇಶ ಪ್ರವಾಸಕ್ಕೆ 13 ಜನ ತಂಡ ಫಿಕ್ಸ್ ಆಗಿದ್ದು, ಅಧಿಕೃತ ಅಧಿಕಾರಿಗಳಲ್ಲದ ಗುಂಪಿನಲ್ಲಿ ಮೂವರು ಪ್ರಯಾಣ ಬೆಳಸಲಿದ್ದಾರೆ. ಸಿಎಂ ಬಿಎಸ್‍ವೈ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಸಿಎಂ ರಾಜಕೀಯ ಸಲಹೆಗಾರ ಕೂಡ ವಿದೇಶಕ್ಕೆ ತೆರಳಲಿದ್ದಾರೆ. ಉಳಿದಂತೆ ಅಧಿಕೃತ ಗ್ರೂಪ್‍ನಲ್ಲಿ ಮೂವರು ಐಎಎಸ್ ಅಧಿಕಾರಿಗಳು ಸೇರಿ ಆಪ್ತ ಕಾರ್ಯದರ್ಶಿಗಳು, ವಿವಿಧ ಅಧಿಕಾರಿಗಳು ಸೇರಿದಂತೆ 10 ಮಂದಿ ವಿದೇಶ ಪ್ರಯಾಣ ಮಾಡಲಿದ್ದಾರೆ. ಜ.19ರಂದು ಮಧ್ಯರಾತ್ರಿ ಸ್ವಿಜರ್ಲ್ಯಾಂಡ್‍ಗೆ ಬಿಎಸ್‍ವೈ ನೇತೃತ್ವದ 13 ಜನರ ತಂಡ ಪ್ರಯಾಣ ಬೆಳಸಲಿದ್ದು, ಜ.26ರ ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

    ವಿಶ್ವ ಆರ್ಥಿಕ ಸಮ್ಮೇಳನಕ್ಕೆ ದೇಶದ ಮೂವರು ಮುಖ್ಯಮಂತ್ರಿಗಳಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ಮಧ್ಯಪ್ರದೇಶದ ಸಿಎಂ ಕಮಲನಾಥ್ ಮತ್ತು ಕರ್ನಾಟಕದ ಸಿಎಂ ಯಡಿಯೂರಪ್ಪಗೆ ಆಹ್ವಾನವಿದೆ. ಆದರೆ ಚಳಿಯ ಕಾರಣ ನೀಡಿ ಯಡಿಯೂರಪ್ಪ ವಿದೇಶಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದರು ಎನ್ನಲಾಗಿತ್ತು. ಬಿಜೆಪಿ ಅಧಿಕಾರ ಇರುವ ರಾಜ್ಯಯೊಂದಕ್ಕೆ ಮಾತ್ರ ಆಹ್ವಾನ ನೀಡಲಾಗಿದ್ದು, ಇಂತಹ ಸನ್ನಿವೇಶದಲ್ಲಿ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗಳಿಗೆ ಗೈರು ಹಾಜರಾದರೆ ಬೇರೆ ಅರ್ಥ ಬರುತ್ತದೆ ಎಂದು ದಾವೋಸ್‍ಗೆ ತೆರಳಲು ಸಿಎಮ ತೀರ್ಮಾನಿಸಿದ್ದಾರೆ ಎಂಂದು ಆಪ್ತ ಮೂಲಗಳು ತಿಳಿಸಿವೆ.