ಸ್ವಾಮೀಜಿ ಪರ ನಾಮಪತ್ರ ವಾಪಸ್ ಪಡೆಯಲು ಬಂದಿದ್ದ ಸಚಿನ್ ಪಾಟೀಲ್ ಪ್ರತಿಕ್ರಿಯಿಸಿ, ಸ್ವಾಮೀಜಿ ಅವರ ನಾಮಪತ್ರ ವಾಪಸ್ ಪಡೆದಿದ್ದೇವೆ. ದಿಂಗಾಲೇಶ್ವರ ಸ್ವಾಮೀಜಿ ಅವರ ಆದೇಶದಂತೆ ನಾಮಪತ್ರ ಹಿಂದಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
ದಿಂಗಾಲೇಶ್ವರ ಶ್ರೀಗಳ ನಾಮಪತ್ರ ವಾಪಸ್ ಪಡೆಯುವಲ್ಲಿ ಉಸ್ತುವಾರಿ ಸಚಿವ ಸಂತೋಷ ಲಾಡ್ (Santosh Lad) ಯಶಸ್ವಿಯಾಗಿದ್ದಾರೆ. ಇಂದು ಬೆಳಗಿನ ಜಾವ ನಾಲ್ಕು ಗಂಟೆಯವರೆಗೂ ಹುಬ್ಬಳ್ಳಿ ಖಾಸಗಿ ಹೋಟೆಲಿನಲ್ಲಿ ವಚನಾನಂದ ಶ್ರೀಗಳ ಮಧ್ಯಸ್ಥಿಕೆಯಲ್ಲಿ ಮನವೊಲಿಸುವ ಕಾರ್ಯ ನಡೆದಿತ್ತು.
ದಿಂಗಾಲೇಶ್ವರ ಶ್ರೀ ಕಣದಿಂದ ಹಿಂದಕ್ಕೆ ಸರಿದ ಕಾರಣ ಧಾರವಾಡದಲ್ಲಿ ಪ್ರಹ್ಲಾದ್ ಜೋಶಿ ಹಾಗೂ ವಿನೋದ್ ಅಸೂಟಿ (Vinod Asuti) ನಡುವೆ ನೇರ ಹಣಾಹಣಿ ನಡೆಯಲಿದೆ.
ಹುಬ್ಬಳ್ಳಿ: ಜಗದೀಶ್ ಶೆಟ್ಟರ್ (Jagadeesh Shettar Birthday) ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ದಿಂಗಾಲೇಶ್ವರ ಸ್ವಾಮೀಜಿ (Dingaleshwara Swamiji) ಪ್ರಚೋದಾನಾಕಾರಿ ಭಾಷಣವನ್ನು ಮಾಡಿದ್ದಾರೆ.
ನಮ್ಮ ಸಮಾಜದ ನಾಯಕರು, ಮಠಾಧೀಪತಿಗಳ ಕೈಯಲ್ಲಿ ಆಯುಧ ಕೊಡಬೇಕು. ಆಯುಧ ಕೊಟ್ಟು ಮಠ ಮಾನ್ಯಗಳು, ಗಣ್ಯರ ರಕ್ಷಣೆ ಮಾಡಬೇಕು ಎಂದು ಪುರಾಣದ ಮಾತು ಉಲ್ಲೇಖಿಸಿ ಆಯುಧ ಕೊಡಬೇಕು ಎಂದು ಸ್ವಾಮೀಜಿ ಹೇಳಿದ್ದು, ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
ದೇವಿ ಕಡೆ ಸ್ವತಂತ್ರ ಆಯುಧ ಇರಲಿಲ್ಲ. ಎಲ್ಲರೂ ಒಂದು ಆಯುಧ ಕೊಟ್ಟಿರುವ ಕಾರಣಕ್ಕೆ ದುಷ್ಟರ ಸಂಹಾರ ಮಾಡಿದಳು. ಇದನ್ನು ಹೇಳೋಕೆ ಕಾರಣ, ನಮ್ಮ ನಾಯಕರುಗಳಿಗೆ ಒಬ್ಬೊಬ್ಬರು ಆಯುಧ ಕೊಡಬೇಕು. ಸಮಾಜದಲ್ಲಿ ಬಲಿಷ್ಠ ಆಗುವ ವ್ಯಕ್ತಿಗಳಿಗೆ ತೊಂದರೆ ಕೊಡುವ ಕೆಲಸ ಈ ನಾಡಿನಲ್ಲಿದೆ. ಮಠಾಧಿಪತಿಗಳಿಗೂ ಇದು ತಪ್ಪಿಲ್ಲ. ಮಠಾಧಿಪತಿಗಳನ್ನು ತೇಜೋವಧೆ ಮಾಡುವ ಕೆಲಸ ನಡೆಯುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ- ದೆಹಲಿಗೆ ಹೊರಟ ಫೈರ್ ಬ್ರ್ಯಾಂಡ್ ಲೀಡರ್ಸ್
ನಮ್ಮ ಮಠಗಳನ್ನ (Mutt) ನಾಶ ಮಾಡುವುದರ ಜೊತೆಗೆ ಎರಡನೇ ಹಂತದ ನಾಯಕರನ್ನು ರಾಜಕೀಯವಾಗಿ ನಾಶ ಮಾಡುವ ವ್ಯವಸ್ಥೆ ಇದೆ. ಹುಟ್ಟುಹಬ್ಬದಲ್ಲಿ ಇದನ್ನು ಹೇಳಬೇಕೋ ಬೇಡವೋ, ಆದರೆ ನಮ್ಮ ಭಾವನೆ ಹೇಳುತ್ತೇನೆ. ಯಾರ ಅಧಃಪತನವನ್ನೂ ನಾವು ಸಹಿಸಬಾರದು. ಮಠಾಧೀಪತಿಗಳು, ರಾಜಕೀಯ ನಾಯಕರು ಸಮಾಜಕ್ಕೆ ಆಧಾರಸ್ತಂಭವಿದ್ದಂತೆ. ಲಿಂಗಾಯತ ನಾಯಕರು ಕಂಬ ಗಟ್ಟಿಯಾಗಿರಬೇಕು ಎಲ್ಲರೂ ಎಚ್ಚೆತ್ತುಕೊಳ್ಳೋ ಕಾಲ ಬಂದಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.
ಗದಗ: ಲಿಂಗೈಕ್ಯ ತೋಂಟದಾರ್ಯ ಸಿದ್ಧಲಿಂಗ ಶ್ರೀಗಳ ಜನ್ಮ ದಿನವನ್ನು ಭಾವೈಕ್ಯತಾ ದಿನ ಎಂದು ಘೋಷಿಸಿದ ಸಿಎಂ ಕ್ರಮವನ್ನು ದಿಂಗಾಲೇಶ್ವರ ಸ್ವಾಮೀಜಿ ತೀವ್ರವಾಗಿ ವಿರೋಧಿಸಿದ್ದಾರೆ.
ಆರ್ಎಸ್ಎಸ್ ಬಗ್ಗೆ, ಬ್ರಾಹ್ಮಣರ ಬಗ್ಗೆ ಬಾಯಿಗೆ ಬಂದಂತೆ ತೋಂಟದಾರ್ಯ ಶ್ರೀಗಳು ಮಾತನಾಡುತ್ತಿದ್ರು. ಜಾತಿ ಜಾತಿ ನಡ್ವೆ ತಂದಿಡ್ತಾ ಇದ್ರು. ಅಂಥವರ ಹೆಸರಲ್ಲಿ ಭಾವೈಕ್ಯ ದಿನ ಎಂದು ಘೋಷಿಸಿದ್ದು ತಪ್ಪು. ಸಿಎಂ ತಮ್ಮ ಹೇಳಿಕೆ ಹಿಂಪಡೆಯಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಒತ್ತಾಯ ಮಾಡಿದ್ದಾರೆ. ಇದಕ್ಕೆ ಸಚಿವ ಸಿಸಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂತಹ ಆರೋಪ ಮಾಡೋದು ಸರಿಯಲ್ಲ. ದಿಂಗಾಲೇಶ್ವರರ ಮಠಕ್ಕೆ ಅನುದಾನ ಕೊಟ್ಟಿಲ್ಲ ಅಂತಾ ಹೀಗೆಲ್ಲಾ ಮಾತಾಡ್ತಾ ಇದ್ದಾರೆ. ನಿಮ್ಮ ಪೂರ್ವಾಶ್ರಮದ ಕತೆ ನಮಗೂ ಗೊತ್ತು. ಮೂರುಸಾವಿರ ಮಠದ ಗದ್ದುಗೆಯನ್ನು ತೋಳ್ಬಲದ ಮೂಲಕ ಏರಲು ನೋಡಿದ್ರಿ.. ನೀವು ಪೀಠದಲ್ಲಿದ್ದೀರಿ ಎಂಬ ಕಾರಣಕ್ಕೆ ಸ್ವಾಮೀಜಿ ಎಂದು ಒಪ್ಪಿದ್ದೀವಿ ಅಷ್ಟೇ ಎಂದು ಸಿಸಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ದಿಂಗಾಲೇಶ್ವರ ಶ್ರೀಗಳು ತಿರುಗೇಟು ನೀಡಿದ್ದಾರೆ. ವ್ಯಕ್ತಿ ವಿಚಾರಗಳ ಚರ್ಚೆಗೆ ವೇದಿಕೆ ನಿರ್ಮಾಣವಾಗಲಿ ಎಂದು ಸವಾಲ್ ಹಾಕಿದ್ದಾರೆ.
ಸ್ವಾಮೀಜಿ ಆರೋಪಕ್ಕೆ ಬಿಜೆಪಿ ಗರಂ: ಮಠಗಳ ಅನುದಾನಕ್ಕೂ 30 ಪರ್ಸೆಂಟ್ ಕಮೀಷನ್ ಕೊಡ್ಬೇಕಿದೆ ಎಂಬ ದಿಂಗಾಲೇಶ್ವರ ಸ್ವಾಮೀಜಿ ಆರೋಪ ಬಗ್ಗೆ ಪರ ವಿರೋಧದ ಮಾತುಗಳು ಕೇಳಿಬರುತ್ತಿವೆ. ಬೊಮ್ಮಾಯಿ ಸರ್ಕಾರದಲ್ಲಿ ಮಠಗಳಿಂದ 30% ಕಮೀಷನ್ ಪಡೆಯೋದು ಸರ್ವೇ ಸಾಮಾನ್ಯ ಆಗಿದೆ. ಕರ್ನಾಟಕ ಭ್ರಷ್ಟಾಚಾರದ ದುರ್ವಾಸನೆ ಎಲ್ಲೆಡೆಯೂ ಹಬ್ಬಿದೆ.. ಮುಖ್ಯಮಂತ್ರಿಗಳು ತನಿಖೆಗೆ ಆದೇಶ ನೀಡದೇ ಪುರಾವೆ ಕೇಳುತ್ತಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಆದರೆ ಸ್ವಾಮೀಜಿ ಹೇಳಿಕೆಗೆ ಬಿಎಸ್ವೈ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸಿಸಿ ಪಾಟೀಲರಂತೂ ಸ್ವಾಮೀಜಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಉಡುಪಿಯ ಪಲಿಮಾರು ಶ್ರೀಗಳು, ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಗೆ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ. ಇದರ ಹಿಂದೆ ಬೇರೇನೋ ಇದೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ: ಉತ್ತರ ಕರ್ನಾಟಕದ ಹೆಮ್ಮೆಯ ಮಠದಲ್ಲಿ ಒಂದಾಗಿರುವ ಮೂರು ಸಾವಿರ ಮಠದ ಉತ್ತರಾಧಿಕಾರ ವಿವಾದ ಮುಗಿಯದ ಅಧ್ಯಾಯದಂತಾಗಿದ್ದು, ದಿನದಿಂದ ದಿನಕ್ಕೆ ಒಂದಿಲ್ಲೊಂದು ರೀತಿಯಲ್ಲಿ ಗೊಂದಲಗಳು ಸೃಷ್ಟಿಯಾಗುತ್ತಲೆ ಇದೆ.
ಒಂದು ಕಡೆ ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ನಾನೇ ಉತ್ತರಾಧಿಕಾರ ಎಂದು ಹೇಳುತ್ತಿದ್ದಾರೆ. ಮತ್ತೊಂದು ಕಡೆಯಲ್ಲಿ ಘಟಪ್ರಭಾದ ಮಲ್ಲಿಕಾರ್ಜುನ ಸ್ವಾಮೀಜಿ ನಾನು ಶ್ರೀ ಮಠದ ಉತ್ತರಾಧಿಕಾರ ಎಂದು ಹೇಳುತ್ತಿದ್ದಾರೆ. ಅಲ್ಲದೇ ಮೂಜಗು ಅವರು ಉತ್ತರಾಧಿಕಾರದ ಕುರಿತು ಯಾವುದೇ ಸ್ಪಷ್ಟನೆ ನೀಡದಿರುವುದು ಗೊಂದಲಕ್ಕೆ ಕಾರಣವಾಗಿದ್ದು, ದಿಂಗಾಲೇಶ್ವರ ಬೆಂಬಲಿಗರು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಿ ದಿಂಗಾಲೇಶ್ವರ ಸ್ವಾಮೀಜಿಯವರನ್ನು ಶ್ರೀ ಮಠದ ಉತ್ತರಾಧಿಕಾರ ಎಂದು ಘೋಷಣೆ ಮಾಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಸೋಶಿಯಲ್ ವಾರ್ ನಡೆಸಿದ್ದಾರೆ. ಇದನ್ನೂ ಓದಿ: ಸತ್ಯ ಮುಚ್ಚಿ ಹಾಕುವ ಯತ್ನ ನಡೀತಿದೆ: ದಿಂಗಾಲೇಶ್ವರ ಸ್ವಾಮೀಜಿ
– ನಡು ರಸ್ತೆಯಲ್ಲೇ ಶ್ರೀಗಳ ಭಾಷಣ
– 45 ದಿನದ ಗಡವು ನೀಡಿದ ದಿಂಗಾಲೇಶ್ವರ ಶ್ರೀ
ಹುಬ್ಬಳ್ಳಿ: ಮೂರುಸಾವಿರ ಮಠ ಉತ್ತರಾಧಿಕಾರವಾಗಿ ಇಂದು ಕೂಡ ಸತ್ಯ ದರ್ಶನವಾಗಲಿಲ್ಲ. ಸತ್ಯವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಬಾಲೇಹೊಸೂರಿನ ದಿಂಗಾಲೇಶ್ವರ ಶ್ರೀಗಳು ಹೇಳಿದ್ದಾರೆ.
ಮೂರು ಸಾವಿರ ಮಠದಲ್ಲಿ ಇಂದು ದತ್ತದರ್ಶನಕ್ಕೆ ಆಹ್ವಾನ ನೀಡಿದ್ದರು. ಆದರೆ ಅವರಿಗೆ ಮಠ ಪ್ರವೇಶಿಸಿದಂತೆ ಬ್ಯಾರಿಕೇಡ್ ಹಾಕಲಾಗಿತ್ತು. ಹೀಗಾಗಿ ಮೂರು ಸಾವಿರ ಮಠದ ಹೊರಭಾಗದಲ್ಲಿಯೇ ಭಕ್ತರನ್ನು ಉದ್ದೇಶಿಸಿ ದಿಂಗಾಲೇಶ್ವರ ಸ್ವಾಮೀಜಿಗಳು ಮಾತನಾಡಿದರು.
ಬಳಿಕ ಮಠ ಪ್ರವೇಶಿಸಿದ ಅವರು, ಜಗದ್ಗುರು ಗುರುಸಿದ್ದೇಶ್ವರ ಮಹಾಶಿವಯೋಗಿಗಳ ಗದ್ದುಗೆ ದರ್ಶನ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು, ನಾವು ಯಾವುದೇ ಗಲಾಟೆ ಮಾಡಲು ಬಂದಿಲ್ಲ. ಮಠದ ಮೇಲೆ ಅಭಿಮಾನ ಉಳ್ಳವರು. ಮುಂದಿನ 45 ದಿನಗಳಲ್ಲಿ ವ್ಯಾಜ್ಯ ಇತ್ಯರ್ಥವಾಗಬೇಕು. ಅಲ್ಲಿಯವರೆಗೆ ಬಾಯಿ ಮೆಚ್ಚಿಕೊಂಡು ಕೂರುತ್ತೇನೆ. ಜಗದ್ಗುರುಗಳು, ಮಠದ ಶ್ರೀಗಳು ಇತ್ಯರ್ಥ ಪಡಿಸಬೇಕು ಎಂಬ ಗಡುವು ನೀಡಿದರು.
ಶನಿವಾರ ರಾತ್ರಿ ಕೆಲವರು ನಮ್ಮ ಬಳಿ ಬಂದಿದ್ದರು. ಸತ್ಯ ದರ್ಶನ ನಿಲ್ಲಿಸಲು ಒತ್ತಡ ಹೇರಿದ್ದರು. ನಮ್ಮ ಗುರುಗಳನ್ನು ಕಟ್ಟಿಹಾಕುವ ಯತ್ನ ನಡೆದಿದೆ. ಇದರಲ್ಲಿ ಕೆಲ ಕಾವಿಧಾರಿಗಳ ಕುತಂತ್ರವಿದೆ. ಈ ಭಾರೀ ಸತ್ಯ ದರ್ಶನ ಆಗಿಲ್ಲ. ಕೋರ್ಟಿನಲ್ಲಿ ಇತ್ಯರ್ಥ ಬೇಡ ಎಂದರು.
ಆಸ್ತಿ, ಅಧಿಕಾರ, ಪಟ್ಟಕ್ಕಾಗಿ ಪಟ್ಟಾಧಿಕಾರ ಬೇಡ:
ನಾನು ಮೂರುಸಾವಿರ ಮಠದ ಆಸ್ತಿಗೆ ಆಸೆ ಪಟ್ಟಿಲ್ಲ. ಆದರೆ ನಾನು ಉತ್ತರಾಧಿಕಾರಿ ಎಂದು ಗೊತ್ತಾದ ಮೇಲೆಯೇ ನನ್ನ ಮೇಲೆ ಕೊಲೆ ಪ್ರಕರಣ ಹೊರಿಸಲಾಗಿತ್ತು. ಅಷ್ಟೇ ಅಲ್ಲದೆ ಕೊಲೆಗೂ ಪ್ರಯತ್ನ ನಡೆದಿವೆ. ನಾನು ದೊಡ್ಡ ಮಠದ ಸ್ವಾಮೀಜಿಯಾಗಬೇಕು ಅಂದುಕೊಂಡಿಲ್ಲ. ದೊಡ್ಡ ಮಟ್ಟದ ಸ್ವಾಮೀಜಿಯಾಗಬೇಕು ಅಂದುಕೊಂಡಿದ್ದೇನೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ನಾನು ಸ್ವಯಂ ಪ್ರೇರಣೆಯಿಂದ ಸನ್ಯಾಸಿಯಾಗಿದ್ದೇನೆ. ನನ್ನನ್ನು ಯಾರೂ ಕೂಡ ಸನ್ಯಾಸಿಯನ್ನಾಗಿ ಮಾಡಿಲ್ಲ. ಬಾಲೇಹೊಸೂರಿನ ಮಠಕ್ಕೆ ನೇಮಕ ಮಾಡಿದಾಗ ಮಠದ ಆರ್ಥಿಕ ಸ್ಥಿತಿ ಸರಿಯಿರಲಿಲ್ಲ. ಆ ಪರಿಸ್ಥಿತಿಯಲ್ಲಿ ನಾನು ಮಠದ ಅಧಿಕಾರ ವಹಿಸಿಕೊಂಡೆ. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಎರಡು ತಿಂಗಳು ಗಂಜಿ ತಿಂದು ಬದುಕಿದ್ದೇನೆ. ಔಷದ ತರಲು ಕೂಡ ಹಣ ವಿರಲಿಲ್ಲ. ಇಂದು ಕರ್ನಾಟಕವೇ ಗಮನ ಹರಿಸುವಂತೆ ಮಠವನ್ನು ಬೆಳೆಸಿದ್ದೇನೆ ಎಂದು ಹೇಳಿದರು.
2006ರಲ್ಲಿ ಮೂಜಗು ಶ್ರೀಗಳು ದೂರವಾಣಿ ಕರೆ ಮಾಡಿ ಆರ್ಥಿಕ ಹಾಗೂ ಕಾನೂನು ಮುಗಟ್ಟಿನಲ್ಲಿ ಸಿಲುಕಿಕೊಂಡಿದ್ದೇನೆ ಎಂದು ಹೇಳಿದ್ದರು. ತಕ್ಷಣವೇ ಮುಂಬೈ ಕಾರ್ಯಕ್ರಮ ಮೊಟಕುಗೊಳಿಸಿ ಮೂರುಸಾವಿರ ಮಠಕ್ಕೆ ಬಂದೆ. ಮೂರು ಸಾವಿರ ಮಠದ ಅಭಿವೃದ್ಧಿಗೆ ಸಾಕಷ್ಟು ದುಡಿದಿದ್ದೇನೆ. ಸಿರಗೇರಿ ಜಗದ್ಗುರು ಕರೆದುಕೊಂಡು ಹೋಗಿ ಮೂರು ಸಾವಿರ ಮಠದ ಇತ್ಯರ್ಥಕ್ಕೆ ಅಂಗಲಾಚಿದ್ದೇವೆ. ಮಠದ ನ್ಯಾಯ ನಿರ್ಣಯ ಸುಪ್ರೀಂಕೋರ್ಟ್ ವೆರೆಗೂ ಹೋಯಿತು. ರುದ್ರಮುನಿ ಸ್ವಾಮೀಜಿ ಉತ್ತರಾಧಿಕಾರ ವಿವಾದದಲ್ಲಿ ಒಂದು ಕೋಟಿ ರೂ.ವನ್ನು ನೀಡುವಂತಾಗಿತ್ತು. ಕೂಡಲೇ ಫೋನ್ ಮಾಡಿ ವಿವಿಧ ಪ್ರದೇಶದ ಭಕ್ತರಿಂದ ಹಣ ಪಡೆದೆ. ಅದರಲ್ಲಿ ಹಾವೇರಿ ಬ್ಯಾಡಗಿ 50 ಲಕ್ಷ ರೂ., ಲಕ್ಷ್ಮೇಶ್ವರದ ಭಕ್ತರು 15 ಲಕ್ಷ ರೂ., ಬೆಳಗಾವಿ 5 ಲಕ್ಷ ರೂ., ಹಾವನೂರ 5 ಲಕ್ಷ ರೂ., ಬಾಲೆಹೊಸೂರಿನ 5 ಲಕ್ಷ ರೂ., ಸಿಕ್ಕಿದೆ. ಆ ಹಣವನ್ನು ಪಡೆದು ವ್ಯವಹಾರವನ್ನು ನಿಭಾಯಿಸಿದ್ದೆ ಎಂದು ನೆನೆದರು.
ಅಲ್ಲದೇ ಕೋಲ್ಕತ್ತಾಗೆ ಹೋಗಲು ಬಾಲೆಹೊಸೂರಿನ ಸ್ವಂತ ಹಣವನ್ನು 25 ಲಕ್ಷ ನೀಡಿದ್ದೇವೆ. 2006ರಿಂದ ಮೂಜಗು ಶ್ರೀಗಳು, ಈ ಮಠಕ್ಕೆ ನೀವೇ ಕುಳಿತು ಕೊಳ್ಳಿ ಎಂದಿದ್ದರು. ಆ ಸಂದರ್ಭದಲ್ಲಿ ನಾನು ಒಪ್ಪಲಿಲ್ಲ. ಆದರೂ ಒಪ್ಪಿಸಲು ಮುಂದಾದರೂ ಎಂದರು.
ದಾಖಲೆಗಳ ಸಮೇತವಾಗಿ ಮಾತನಾಡಲು ವಕೀಲರನ್ನು ಕರೆದುಕೊಂಡು ಬಂದಿದ್ದೇನೆ. ನನ್ನನ್ನು ಮಠಾಧಿಪತಿ ಮಾಡಬಾರದು ಎಂದು ಕುತಂತ್ರ ಮಾಡಿದ್ದಾರೆ. ಅಲ್ಲದೇ ಸುಮಾರು ಬಾರಿ ನಾನು ಹುಬ್ಬಳ್ಳಿಗೆ ಬಂದಾಗ ಎಲ್ಲಿಯೂ ನನ್ನನ್ನು ಮಠಾಧಿಪತಿ ಮಾಡಲು ಹೇಳಿಲ್ಲ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ನೆಹರು ಓಲೇಕಾರ, ಜಿ.ಎಸ್.ಗಡ್ಡದೇವರಮಠ, ಪ್ರಕಾಶ ಬೆಂಡಿಗೇರಿ, ಮಾಂತೇಶ ಗಿರಿಮಠ, ಸಿದ್ದಣ್ಣ ಶೆಟ್ಟರ್, ಡಿ.ಟಿ.ಪಾಟೀಲ, ಶಿವಾನಂದ ಮುತ್ತಣ್ಣವರ ಸೇರಿದಂತೆ ಇತರರು ಇದ್ದರು.
ಸ್ವಚ್ಛತಾ ಕಾರ್ಯ:
ದಿಂಗಾಲೇಶ್ವರ ಸ್ವಾಮೀಜಿಗಳು ನೇತೃತ್ವದಲ್ಲಿ ಇಂದು ಮೂರು ಸಾವಿರ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಸತ್ಯದರ್ಶನ ಸಭೆಗೆ ಆಗಮಿಸಿದ್ದ ಭಕ್ತರಿಗೆ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಸಭೆಯ ನಂತರದಲ್ಲಿ ದಿಂಗಾಲೇಶ್ವರ ಸ್ವಾಮೀಜಿಯವರು ಕಸ ಗೂಡಿಸುವ ಮೂಲಕ ಸ್ವಚ್ಛತಾ ಕಾರ್ಯ ಕೈಗೊಂಡರು.
ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಂದ ಆಗಮಿಸಿದ್ದ ಭಕ್ತಾಧಿಗಳಿಗೆ ಹಾಗೂ ದಿಂಗಾಲೇಶ್ವರ ಸ್ವಾಮೀಜಿಗಳಿಗೆ ಬೆಂಬಲಿಗರಿಗೆ ಮಠದ ಹೊರಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಪ್ರಸಾದ ವ್ಯವಸ್ಥೆ ನಂತರದಲ್ಲಿ ಬಿದ್ದಿರುವ ಕಸವನ್ನು ದಿಂಗಾಲೇಶ್ವರ ಸ್ವಾಮೀಜಿ ಅವರು ಗೂಡಿಸುವ ಮೂಲಕ ಸಾರ್ವಜನಿಕ ಪ್ರಶಂಸೆಗೆ ಪಾತ್ರರಾದರು.
ಹುಬ್ಬಳ್ಳಿ: ಜಿಲ್ಲೆಯ ಮೂರು ಸಾವಿರ ಮಠದ ಉತ್ತರಾಧಿಕಾರಿ ವಿವಾದ ತಾರಕಕ್ಕೇರಿದ್ದು, ಉತ್ತರಾಧಿಕಾರಿ ದಿಂಗಾಲೇಶ್ವರ ಸ್ವಾಮೀಜಿ ತಮ್ಮನ್ನ ಉತ್ತರಾಧಿಕಾರಿಯಾಗಿ ನೇಮಕ ಮಾಡಿದ್ದು ಸತ್ಯವೋ ಸುಳ್ಳೋ ಅನ್ನೋ ಬಗ್ಗೆ ಇಂದು ಸತ್ಯ ದರ್ಶನಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಠದ ಆವರಣದಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ದಿಂಗಾಲೇಶ್ವರ ಸ್ವಾಮೀಜಿ ಇಂದು ಸತ್ಯ ದರ್ಶನಕ್ಕೆ ಮುಂದಾಗಿದ್ದು. ಬೆಳಗ್ಗೆ 11 ಗಂಟೆಗೆ ನೆಹರು ಮೈದಾನದಿಂದ ಮೆರವಣಿಗೆ ಮೂಲಕ ಆಗಮಿಸಿ ಮಠದ ಆವರಣದಲ್ಲಿ ಸತ್ಯ ದರ್ಶನ ಸಭೆ ನಡೆಸಲಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ಕರೆ ನೀಡಿದ ಹಿನ್ನೆಲೆಯಲ್ಲಿ ಮಠಕ್ಕೆ ಇಂದು ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಮಠದ ಆವರಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ದಿಂಗಾಲೇಶ್ವರ ಸ್ವಾಮೀಜಿ ನಡೆಸಲು ಮುಂದಾಗಿರುವ ಸತ್ಯ ದರ್ಶನ ಸಭೆಗೆ ಮಠದ ಆಡಳಿತ ಅನುಮತಿ ನಿರಾಕರಿಸಿದ್ದು, ಮಧ್ಯ ರಾತ್ರಿವರೆಗೂ ನಡೆದ ಸಂಧಾನ ಸಭೆ ವಿಫಲವಾಗಿದೆ. ಈ ಹಿನ್ನೆಲೆ ಮಠದ ಕತೃ ಗದ್ದುಗೆಗೆ ಬರೋ ಭಕ್ತರ ದರ್ಶನಕ್ಕಾಗಿ ವಿಶೇಷ ಬ್ಯಾರಿಕೇಡ್ ಹಾಕಲಾಗಿದೆ. ಅಲ್ಲದೇ ಮಠದ ಆವರಣದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಸತ್ಯ ದರ್ಶನಕ್ಕೆ ಮುಂದಾಗಿರುವುದರಿಂದ ಇಂದು ಎನಾಗುತ್ತೋ ಎನೋ ಎನ್ನುವ ಆತಂಕ ಮಠದ ಭಕ್ತರದ್ದಾಗಿದೆ.
ಮೂರು ಸಾವಿರ ಮಠದ ಜಗದ್ಗುರುಗಳಾದ ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿಗಳು ಸಹ ಸದ್ಯಕ್ಕೆ ಉತ್ತರಾಧಿಕಾರಿ ಅವಶ್ಯಕತೆಯಿಲ್ಲ. ಮಠವನ್ನು ನೋಡಿಕೊಂಡು ಹೋಗುವ ಸಾಮರ್ಥ್ಯ ತಮಗಿದ್ದು, ಉತ್ತರಾಧಿಕಾರಿ ವಿವಾದ ತಮ್ಮ ಮನಸ್ಸಿಗೆ ನೋವುಂಟು ಮಾಡಿದೆ ಎಂದಿದ್ದಾರೆ.
ಈ ಮಧ್ಯೆ ಇಂದು ದಿಂಗಾಲೇಶ್ವರ ಸ್ವಾಮೀಜಿಗಳು ಮಠದಲ್ಲಿ ತಮ್ಮನ್ನು ಉತ್ತರಾಧಿಕಾರಿಯಾಗಿ ನೇಮಿಸಿದ್ದು ಸುಳ್ಳೋ? ಸತ್ಯವೋ? ಅನ್ನೋದು ಬಹಿರಂಗವಾಗಲಿ ಎಂದು ದಾಖಲೆಗಳ ಪ್ರದರ್ಶನಕ್ಕೆ ಮುಂದಾದರೆ, ಇತ್ತ ಬೆಳಗಾವಿ ಜಿಲ್ಲೆಯ ಘಟಪ್ರಭಾದ ಮಲ್ಲಿಕಾರ್ಜುನ ದೇವರು ಸ್ವಾಮೀಜಿ ಸಹ ಇಂದು ಮಠಕ್ಕೆ ಭೇಟಿ ನೀಡುವುದಾಗಿ ತಿಳಿಸಿದ ಪರಿಣಾಮ ಮಠದ ಆವರಣದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದೆ.
ಹುಬ್ಬಳ್ಳಿ: ಮೂರುಸಾವಿರ ಮಠದ ಉತ್ತರಾಧಿಕಾರಿ ವಿಚಾರಕ್ಕೆ ಸಂಬಂಧಿಸಿದಂತೆ ಫೆ. 23ರಂದು ಸತ್ಯದರ್ಶನ ಸಭೆ ನಡೆಸಲು ವಿರೋಧ ವ್ಯಕ್ತವಾಗುತ್ತಿದ್ದು, ಮೂರುಸಾವಿರ ಮಠದ ಉನ್ನತಾಧಿಕಾರ ಸಮಿತಿ ಸದಸ್ಯರೂ ಆಗಿರುವ ಮೋಹನ್ ಲಿಂಬಿಕಾಯಿ ಈ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಈ ಕುರಿತು ಪ್ರತಿಕ್ರಿಯಸಿದ ಅವರು, ಮೂರು ಸಾವಿರ ಮಠದ ಉತ್ತರಾಧಿಕಾರಕ್ಕೆ ಸಂಬಂಧಿಸಿದಂತೆ ಯಾರೋ ಬಂದು ಸಭೆ ನಡೆಸುತ್ತೇವೆ ಅಂದರೆ ಅವಕಾಶ ಕೊಡುವುದಿಲ್ಲ. ಫೆ.23ರಂದು ಸತ್ಯದರ್ಶನ ಸಭೆ ನಡೆಸಲು ಬಿಡುವುದಿಲ್ಲ ಎಂದು ಮೋಹನ್ ಲಿಂಬಿಕಾಯಿ ಹೇಳಿದ್ದಾರೆ.
ಹುಬ್ಬಳ್ಳಿಯ ಮೂರು ಸಾವಿರ ಮಠದ ಉತ್ತರಾಧಿಕಾರಿಯನ್ನಾಗಿ ತಮ್ಮನ್ನೇ ನೇಮಕ ಮಾಡಬೇಕೆಂಬುದರ ಕುರಿತು ಬಾಲೇಹೊಸುರಿನ ದಿಂಗಾಲೇಶ್ವರ ಸ್ವಾಮೀಜಿ ಇದೇ ಭಾನುವಾರ ಮಠದ ಆವರಣದಲ್ಲಿ ಸತ್ಯ ದರ್ಶನ ಸಭೆ ಕರೆದಿದ್ದಾರೆ. ಆದರೆ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದು, ಸಭೆ ನಡೆಸಲು ಅವಕಾಶ ನೀಡುವುದಿಲ್ಲವೆಂದು ಹಲವರು ಪಟ್ಟು ಹಿಡಿದಿದ್ದಾರೆ. ಇದೀಗ ಮೋಹನ್ ಲಿಂಬಿಕಾಯಿಯವರು ಸಹ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಹಾಲಿ ಪೀಠಾಧ್ಯಕ್ಷ ಮೂಜಗು ಸ್ವಾಮೀಜಿ ಮಠವನ್ನು ನಡೆಸಲು ಸಮರ್ಥರಿದ್ದಾರೆ. ಯಾರೋ 52 ಜನ ಸಹಿ ಹಾಕಿದ ತಕ್ಷಣ ಉತ್ತರಾಧಿಕಾರಿ ನೇಮಕ ಆಗುವುದಿಲ್ಲ. ಸರ್ವಾಧಿಕಾರಿಯಂತೆ ಉತ್ತರಾಧಿಕಾರಿ ನೇಮಕ ನಡೆಯುವುದಿಲ್ಲ ಎಂದು ಮೋಹನ್ ಲಿಂಬಿಕಾಯಿ ಸ್ಪಷ್ಟಪಡಿಸಿದ್ದಾರೆ.
ಧಾರವಾಡ: ದುಷ್ಕರ್ಮಿಗಳು ನಾನು ಗುಂಡಾ, ಅಯೋಗ್ಯ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ. ನಾನು ಗುಂಡಾ, ಅಯೋಗ್ಯ ಆಗಿದ್ದರೆ ಅದನ್ನ ತುಂಬಿದ ಸಭೆಯಲ್ಲಿ ಸಾಬೀತು ಪಡಿಸಲಿ. ಆರೋಪವನ್ನ ಸಾಬೀತು ಮಾಡಿದರೇ ಮೂರುಸಾವಿರ ಮಠದ ಕರ್ತೃ ಗದ್ದುಗೆ ಎದುರೇ ಪ್ರಾಣ ಬಿಡುತ್ತೇನೆ ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಸವಾಲ್ ಹಾಕಿದ್ದಾರೆ.
ಧಾರವಾಡ ಲಿಂಗಾಯತ ಭವನದಲ್ಲಿ ನಡೆದ ಭಕ್ತರ ಮತ್ತು ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ನಾನು ಮೂರುಸಾವಿರ ಮಠದ ಗದ್ದುಗೆಗಾಗಿ ಸಭೆಗಳನ್ನು ಮಾಡುತ್ತಿಲ್ಲ. ಮಠಕ್ಕೆ ಸುತ್ತಿದ ವಿವಾದ ಬಗೆಹರಿಸಲು ಭಕ್ತರು ಸಭೆ ಮಾಡುತ್ತಿದ್ದೇನೆ ಎಂದರು. ನಾನು ಮೂರುಸಾವಿರ ಮಠದ ಜಗದ್ಗುರುಗಳನ್ನು ಭೇಟಿ ಮಾಡುತ್ತೇನೆ. ನಾವು ಮಠಕ್ಕೆ ಸ್ವಾಮೀಜಿಯಾಗಲು ಖಾವಿಧಾರಿಯಾಗಿಲ್ಲ, ಸಮಾಜಕ್ಕಾಗಿ ನಾವು ಖಾವಿಧಾರಿಯಾಗಿದ್ದೇವೆ. ಸ್ವಾಮೀತ್ವಕ್ಕೆ ಮಠವೇ ಬೇಕಾಗಿಲ್ಲ. ಆದರೆ ಈಗ ನನ್ನ ಗೌರವದ ಪ್ರಶ್ನೆ ಬಂದಿದೆ ಹೀಗಾಗಿ ನಾನು ಮುಂದೆ ಬಂದಿದ್ದೇನೆ ಎಂದು ಸಭೆಯಲ್ಲಿ ತಿಳಿಸಿದರು.
ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೂ ಮತ್ತು ಮೂರುಸಾವಿರ ಮಠ ಜಗದ್ಗುಗಳ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅವರು ಗುರು ನಾನು ಶಿಷ್ಯ. ಆದರೆ ಕೆಲವರು ನಮ್ಮಿಬ್ಬರ ಮಧ್ಯೆ ಭಿನ್ನಾಭಿಪ್ರಾಯ ತಂದಿಟ್ಟಿದ್ದಾರೆ. ಕೆಲವರ ರಾಜಕೀಯದಿಂದ ಹೀಗಾಗಿದೆ. ಅವರನ್ನು ಮಠದಿಂದ ದೂರ ಮಾಡಲು ಈಗ ಹೋರಾಟ ನಡೆದಿದೆ ಎಂದು ಕಿಡಿಕಾರಿದರು.
ನನ್ನ ಉತ್ತರಾಧಿಕಾರಿ ಪತ್ರ ಆದ ನಂತರದಲ್ಲಿ ಉಳಿದ ಚಟುವಟಿಕೆಗಳು ನಡೆದಿವೆ. ದಿಂಗಾಲೇಶ್ವರ ಸ್ವಾಮೀಜಿ ಬರಬೇಕು ಎಂದು ಭಕ್ತರು ಬಯಸಿದ್ದಾರೆ. ಆದರೆ ಕೆಲವರು ದಿಂಗಾಲೇಶ್ವರ ಸ್ವಾಮೀಜಿ ಬರಬಾರದು ಎಂದು ಕೆಟ್ಟ ಪ್ರಯತ್ನ ಮಾಡಿದ್ದಾರೆ. ನಾನು ಮಠಕ್ಕೆ ಅನ್ಯಾಯ ಮಾಡಿದ್ದರೆ, ದ್ರೋಹ ಮಾಡಿದ್ದರೆ ಸಾಬೀತು ಮಾಡಿ ತೋರಿಸಲಿ ಎಂದು ಸವಾಲ್ ಹಾಕಿದರ. ಹಾಗೆಯೇ ಮಠದಲ್ಲಿ ರಾಜಕೀಯ ಮಾಡುವವರನ್ನ ದೂರ ಮಾಡುತ್ತೇನೆ ಎಂದು ಸ್ವಾಮೀಜಿ ಹರಿಹಾಯ್ದರು.
ಹುಬ್ಬಳ್ಳಿ: 35 ವರ್ಷಗಳ ರಾಜಕೀಯ ಜೀವನದಲ್ಲಿ ಹೊರಟ್ಟಿ ಅವರು ಉತ್ತರ ಕರ್ನಾಟಕ ಭಾಗಕ್ಕೆ ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಬಾಳೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಸವಾಲು ಹಾಕಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೌರವಯುತ ಸ್ಥಾನದಲ್ಲಿರುವ ಹೊರಟ್ಟಿ ತಮ್ಮ ಘನತೆಗೆ ತಕ್ಕ ಹಾಗೇ ನಾಲಿಗೆ ಮೇಲೆ ಹಿಡಿತ ಇರಬೇಕು. ಪದೇ ಪದೇ ನಮ್ಮ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಾರೆ. ಅವರು ಯಾಕೆ ನಮ್ಮ ತೇಜೋವಧೆ ಮಾಡುತ್ತಾರೆ ಎಂಬುದನ್ನು ಬಹಿರಂಗ ಪಡಿಸಲಿ. ಇದಕ್ಕೂ ಮುನ್ನ ಅವರ 35 ವರ್ಷದ ರಾಜಕೀಯ ಜೀವನದಲ್ಲಿ ಈ ಭಾಗಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಸವಾಲು ಹಾಕಿದರು.
ಇದೇ ವೇಳೆ ಲಿಂಗಾಯತ ಧರ್ಮವನ್ನು ಒಡೆಯಲು ಒಂದ ರಾಜಕಾರಣಿಗಳು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಯಾಕೆ ಒಂದಾಗುತ್ತಿಲ್ಲ ಎಂದು ಪ್ರಶ್ನಿಸಿದ ಅವರು ಆಡಳಿತರೂಢ ಸರ್ಕಾರದ ಮಲತಾಯಿ ಧೋರಣೆಯೇ ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಕಾರಣ. ಈ ಕೂಗು ನನ್ನದೊಬ್ಬನದ್ದಲ್ಲ, ಈ ಭಾಗದ ಜನರ ಕೂಗು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೆ ನನ್ನ ಬೆಂಬಲವೂ ಇದೆ ಎಂದು ಸ್ಪಷ್ಟಪಡಿಸಿದರು.
ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ಭಾನುವಾರ ಮಾತನಾಡಿದ್ದ ಬಸವರಾಜ್ ಹೊರಟ್ಟಿ ಅವರು, ದಿಂಗಾಲೇಶ್ವರ ಸ್ವಾಮೀಜಿಗೆ ಮಾಡಲು ಕೆಲಸವಿಲ್ಲ. ಅದಕ್ಕಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ವಿಚಾರದಲ್ಲಿ ಮೂಗು ತೋರಿಸುತ್ತಿದ್ದಾರೆ. ಇನ್ನು ಕೆಲವು ಸ್ವಾಮೀಜಿಗಳು ಅವರ ಹಾಗೆಯೇ ಮಾಡುತ್ತಿದ್ದಾರೆ. ಸ್ವಾಮೀಜಿಗಳಿಗೆ ಏಕೆ ರಾಜಕೀಯ ಬೇಕು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಸಂಪೂರ್ಣ ನನ್ನ ವಿರೋಧವಿದೆ. ಅಖಂಡ ಕರ್ನಾಟಕ ನಿರ್ಮಾಣಕ್ಕೆ ಅನೇಕ ನಾಯಕರು, ಹೋರಾಟಗಾರರು ಶ್ರಮಿಸಿದ್ದಾರೆ. ಈಗ ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ ಎಂದು ಹೇಳಿದ್ದರು.
ವಿಜಯಪುರ: ರಾಜಕೀಯ ವಿಚಾರಗಳಲ್ಲಿ ಸ್ವಾಮೀಜಿಗಳು ಭಾಗಿಯಾಗಬಾರದು ಎಂದು ಹಂಗಾಮಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ಮಾತನಾಡಿದ ಅವರು, ದಿಂಗಾಲೇಶ್ವರ ಸ್ವಾಮೀಜಿಗೆ ಮಾಡಲು ಕೆಲಸವಿಲ್ಲ. ಅದಕ್ಕಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ವಿಚಾರದಲ್ಲಿ ಮೂಗು ತೋರಿಸುತ್ತಿದ್ದಾರೆ. ಇನ್ನು ಕೆಲವು ಸ್ವಾಮೀಜಿಗಳು ಅವರ ಹಾಗೆಯೇ ಮಾಡುತ್ತಿದ್ದಾರೆ. ಸ್ವಾಮೀಜಿಗಳಿಗೆ ಏಕೆ ಬೇಕು ರಾಜಕೀಯ ಎಂದು ಪ್ರಶ್ನಿಸಿದರು.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಸಂಪೂರ್ಣ ನನ್ನ ವಿರೋಧವಿದೆ. ಅಖಂಡ ಕರ್ನಾಟಕ ನಿರ್ಮಾಣಕ್ಕೆ ಅನೇಕ ನಾಯಕರು, ಹೋರಾಟಗಾರರು ಶ್ರಮಿಸಿದ್ದಾರೆ. ಈಗ ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ. ಈ ಕುರಿತು ನಿನ್ನೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೊತೆಗೆ ಚರ್ಚೆ ಮಾಡಿರುವೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಮುಂದಿನ ಕೆಲವು ದಿನಗಳಲ್ಲಿ ಉತ್ತರ ಕರ್ನಾಟಕದಲ್ಲಿ ಸಭೆ ಕರೆಯುವ ನಿರ್ಧಾರ ಕೈಗೊಂಡಿದ್ದಾರೆ. ಆಗ ತಮ್ಮ ನಿರ್ಧಾರವನ್ನು ತಿಳಿಸಲಿದ್ದಾರೆ ಎಂದು ಹೇಳಿದರು.
ವಿಜಯಪುರ, ಹುಬ್ಬಳ್ಳಿ ಅಥವಾ ಬೆಳಗಾವಿಯಲ್ಲಿ ಸಭೆಯನ್ನು ನಡೆಸುವ ನಿರ್ಧಾರ ಮಾಡಲಾಗುತ್ತದೆ. ಸಭೆಯಲ್ಲಿ ಹೋರಾಟಗಾರು, ಮಠಾಧೀಶರು ಭಾಗವಹಿಸುತ್ತಾರೆ. ಆಗ ಚರ್ಚಿಸಿ, ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದ್ದು ನಿಜವಾದರೆ ಸರಿಪಡಿಸುವ ಕ್ರಮ ಕೈಗೊಳ್ಳಲಾಗುವುದು. ಆದರೆ ವೈಯಕ್ತಿಕ ರಾಜಕಾರಣಕ್ಕಾಗಿ ಪ್ರತ್ಯೇಕ ರಾಜ್ಯ ಬಗ್ಗೆ ವಿಚಾರ ಮಾಡಬಾರದು ಎಂದು ತಿಳಿಸಿದರು.