Tag: ದಿಗ್ವಿಜಯ್ ಸಿಂಗ್

  • ಖಾತೆಗೆ 15 ಲಕ್ಷ ರೂ. ಬಂತೇ – ದಿಗ್ವಿಜಯ್ ಪ್ರಶ್ನೆಗೆ ವೇದಿಕೆಯಲ್ಲೇ ಉತ್ತರ ಕೊಟ್ಟ ಯುವಕ

    ಖಾತೆಗೆ 15 ಲಕ್ಷ ರೂ. ಬಂತೇ – ದಿಗ್ವಿಜಯ್ ಪ್ರಶ್ನೆಗೆ ವೇದಿಕೆಯಲ್ಲೇ ಉತ್ತರ ಕೊಟ್ಟ ಯುವಕ

    ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಪಕ್ಷಗಳ ನಡುವಿನ ಆರೋಪ ಪ್ರತ್ಯಾರೋಪ ಹೆಚ್ಚಾಗುತ್ತಿದ್ದು, ಇಂದು ಕೂಡ ಕಾಂಗ್ರೆಸ್ ಹಿರಿಯ ನಾಯಕ, ಭೋಪಾಲ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಬಿಜೆಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಭೋಪಾಲ್ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಅವರು ಇಂದು ಕಾರ್ಯಕತರ ಸಮಾವೇಶದಲ್ಲಿ ಮಾತನಾಡಿ,”ಪ್ರಧಾನಿ ಮೋದಿ ನಿಮ್ಮ ಖಾತೆಗೆ 15 ಲಕ್ಷ ರೂ. ಹಾಕುತ್ತೇನೆ ಎಂದು ಭರವಸೆ ನೀಡಿದ್ದರು. ಅಧಿಕಾರಕ್ಕೆ ಬಂದು 5 ವರ್ಷ ಕಳೆದಿದ್ದು, 15 ಲಕ್ಷ ರೂ. ಬಂದಿದ್ಯಾ?” ಎಂದು ಪ್ರಶ್ನಿಸಿದ್ದರು.

    ಈ ವೇಳೆ,”ಯುವಕನೊಬ್ಬ ನನ್ನ ಖಾತೆಗೆ ಬಂದಿದೆ” ಎಂದು ಕೈ ಮೇಲೆತ್ತಿ ಉತ್ತರ ನೀಡಿದ್ದ. ಇದನ್ನು ಕಂಡ ದಿಗ್ವಿಜಯ್ ಸಿಂಗ್ ಆಶ್ಚರ್ಯಗೊಂಡು,”ಹೌದೇ? ಬಂದಿದ್ದರೆ ಜನರಿಗೆ ತಿಳಿಸು ಬಾ” ಎಂದು ವೇದಿಕೆಗೆ ಯುವಕನನ್ನು ಕರೆದಿದ್ದಾರೆ.

    ವೇದಿಕೆಗೆ ತೆರಳಿದ ಯುವಕ,”ನನ್ನ ಖಾತೆಗೆ 15 ಲಕ್ಷ ರೂ. ಬಂದಿದೆ. ಪ್ರಧಾನಿ ಮೋದಿ ಅವರು ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್ ನಡೆಸುವ ಮೂಲಕ ಉಗ್ರರನ್ನು ನಾಶ ಮಾಡಿ 15 ಲಕ್ಷ ರೂ. ಹಾಕಿದ್ದಾರೆ” ಎಂದು ಭಾಷಣ ಮಾಡಿದ್ದಾನೆ.

    ಯುವಕನ ಉತ್ತರದಿಂದ ಸಿಡಿಮಿಡಿಗೊಂಡ ದಿಗ್ವಿಜಯ್ ಸಿಂಗ್ ತಕ್ಷಣ ಆತನನ್ನು ವೇದಿಕೆಯಿಂದ ಕೆಳಗಿಳಿಸಿದ್ದಾರೆ. 15 ಲಕ್ಷ ರೂ. ಬಂತೇ ಎಂದಷ್ಟೇ ನಾನು ಕೇಳಿದ್ದೇ ಎಂದು ಕೋಪದಿಂದಲೇ ನಂತರ ಭಾಷಣ ಮುಂದುವರಿಸಿದರು.

  • 2019 ಲೋಕಸಮಯ: ದಿಗ್ವಿಜಯ್ ಸಿಂಗ್ ವಿರುದ್ಧ ಸಾಧ್ವಿ ಪ್ರಜ್ಞಾಸಿಂಗ್ ಸ್ಪರ್ಧೆ?

    2019 ಲೋಕಸಮಯ: ದಿಗ್ವಿಜಯ್ ಸಿಂಗ್ ವಿರುದ್ಧ ಸಾಧ್ವಿ ಪ್ರಜ್ಞಾಸಿಂಗ್ ಸ್ಪರ್ಧೆ?

    ಭೋಪಾಲ್: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಭೋಪಾಲ್ ನಿಂದ ಚುನಾವಣಾ ಕಣಕ್ಕೆ ಇಳಿಯುವ ಸಾಧ್ಯತೆಯಿದೆ.

    ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪ್ರಜ್ಞಾ ಸಿಂಗ್, ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದು, ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆಲುವು ಪಡೆಯುವುದು ನಿಶ್ಚಿತ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಮಹಾರಾಷ್ಟ್ರದ ಬಿಜೆಪಿ ನಾಯಕರಾದ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ರಾಮ್ ಲಾಲ್ ಅವರನ್ನು ಪ್ರಜ್ಞಾಸಿಂಗ್ ಭೇಟಿ ಮಾಡಿದ್ದಾರೆ ಎನ್ನಲಾಗಿದ್ದು, ಸದ್ಯ ಭೋಪಾಲ್ ಬಿಜೆಪಿ ಅಭ್ಯರ್ಥಿಯಾಗಿರುವ ಅಲೋಕ್ ಸಂಜರ್ ಕೂಡ ಪ್ರಜ್ಞಾರ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೇಶದ ವಿರುದ್ಧ ಮಾತನಾಡುವ ದ್ರೋಹಿಗಳ ವಿರುದ್ಧ ಸ್ಪರ್ಧೆ ಮಾಡುವ ಇಚ್ಛೆ ಇದ್ದು, ಪಕ್ಷ ನನಗೆ ಟಿಕೆಟ್ ನೀಡುವ ವಿಶ್ವಾಸ ಇದೆ ಎಂದು ಪ್ರಜ್ಞಾ ಸಿಂಗ್ ತಿಳಿಸಿದ್ದಾರೆ.

    1989 ರ ನಂತರ ಕಾಂಗ್ರೆಸ್ ಭೋಪಾಲ್ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಪಡೆದಿಲ್ಲ. ಕಳೆದ ಚುನಾವಣೆಯಲ್ಲೂ ಬಿಜೆಪಿಯ ಅಲೋಕ್ ಸಂಜರ್ 3.7 ಲಕ್ಷ ಮತಗಳಿಂದ ಗೆಲುವು ಪಡೆದಿದ್ದರು. 2008ರ ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರಿಂದ ಬಂಧನಕ್ಕೆ ಒಳಗಾದ ಸ್ವಾಧ್ವಿ ಕಳೆದ ವರ್ಷ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ತಾನು ಕೃತ್ಯದಲ್ಲಿ ಭಾಗಿಯಾಗದೇ ಇದ್ದರೂ ನನ್ನ ಮೇಲೆ ಯುಪಿಎ ಸರ್ಕಾರ ಸುಳ್ಳು ಆರೋಪವನ್ನು ಹೊರಿಸಿತ್ತು ಎಂದು ಸಾಧ್ವಿ ಮಾಧ್ಯಮವೊಂದರ ಸಂದರ್ಶನದಲ್ಲಿ ತಿಳಿಸಿದ್ದರು.

    ದಿಗ್ವಿಜಯ್ ಸಿಂಗ್ ಅವರನ್ನು ಬಿಜೆಪಿ ನಾಯಕರು ಹಿಂದೂ ವಿರೋಧಿ ನಾಯಕ ಎಂದೇ ಬಿಂಬಿಸುತ್ತಿದ್ದಾರೆ. ದಿಗ್ವಿಜಯ್ ಅವರು ಮಾಲೆಗಾಂವ್ ಸ್ಫೋಟದ ಬಳಿಕ ‘ಹಿಂದು ಉಗ್ರಗಾಮಿಗಳು’ ಎಂದು ಕರೆದು ಬಿಜೆಪಿ ಆರೋಪಿಗಳನ್ನು ಬೆಂಬಲಿಸುತ್ತಿದೆ ಎಂದು ಹೇಳಿಕೆ ನೀಡುತ್ತಿದ್ದರು. ಈಗ ದಿಗ್ವಿಜಯ್ ಅವರಿಗೆ ಕೌಂಟರ್ ಕೊಡಲೆಂದು ಬಿಜೆಪಿ ಭೋಪಾಲ್ ನಿಂದ ಸಾಧ್ವಿ ಅವರಿಗೆ ಟಿಕೆಟ್ ನೀಡಲು ಮುಂದಾಗಿದೆ ಎನ್ನಲಾಗುತ್ತಿದೆ.

  • ದೇಶಕ್ಕೆ ಗಾಂಧಿ ಬೇಕೇ ಹೊರತು, ಹಿಟ್ಲರ್, ಮೋದಿಗಳಲ್ಲ: ದಿಗ್ವಿಜಯ್ ಸಿಂಗ್

    ದೇಶಕ್ಕೆ ಗಾಂಧಿ ಬೇಕೇ ಹೊರತು, ಹಿಟ್ಲರ್, ಮೋದಿಗಳಲ್ಲ: ದಿಗ್ವಿಜಯ್ ಸಿಂಗ್

    ನವದೆಹಲಿ: ದೇಶಕ್ಕೆ ಮಹಾತ್ಮಾ ಗಾಂಧಿ, ಮಾರ್ಟಿನ್ ಲೂಥರ್ ಕಿಂಗ್ ಅವರತಂಹ ನಾಯಕರು ಬೇಕೇ ಹೊರತು, ಸರ್ವಾಧಿಕಾರಿಗಳಾದ ಹಿಟ್ಲರ್, ಮುಸ್ಲೋನಿ, ಮೋದಿಗಳಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ.

    ನ್ಯೂಜಿಲ್ಯಾಂಡ್‍ನಲ್ಲಿ ನಡೆದ ಮಸೀದಿ ದಾಳಿಯನ್ನು ಖಂಡಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದಾರೆ. ಇದನ್ನು ರೀ ಟ್ವೀಟ್ ಮಾಡಿದ ದಿಗ್ವಜಯ್ ಸಿಂಗ್ ಅವರು, ಕೇಂದ್ರ ಸರ್ಕಾರ ಹಾಗು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ರಾಹುಲ್ ಜೀ ಅವರ ಮಾತನ್ನು ನಾನು ಒಪ್ಪಿಕೊಳ್ಳುತ್ತೇನೆ. ಜಗತ್ತು ಪ್ರೀತಿ, ಶಾಂತಿಯ ಸಿದ್ಧಾಂತವನ್ನು ಬಯಸುತ್ತದೆ. ಹೀಗಾಗಿ ಮಹಾವೀರ್ ಹಾಗೂ ಗೌತಮ ಬುದ್ಧನ ಶಾಂತಿ ಹಾಗೂ ಸಹಬಾಳ್ವೆಯನ್ನು ಜನರಿಗೆ ನೀಡಲು ಯತ್ನಿಸಬೇಕೇ ಹೊರತು ದ್ವೇಷ, ಯುದ್ಧಗಳನ್ನಲ್ಲ ಎಂದು ದಿಗ್ವಜಯ್ ಸಿಂಗ್ ತಿಳಿಸಿದ್ದಾರೆ.

    ರಾಹುಲ್ ಗಾಂಧಿ ಹೇಳಿದ್ದೇನು?:
    ನ್ಯೂಜಿಲ್ಯಾಂಡ್‍ನಲ್ಲಿ ಉಗ್ರರು ನಡೆಸಿದ ಅಮಾನವೀಯ ಕೃತ್ಯ ಖಂಡನೀಯವಾಗಿದೆ. ವಿಶ್ವದಲ್ಲಿ ಸಹಾನುಭೂತಿ ಮತ್ತು ತಿಳುವಳಿಕೆ ಅವಶ್ಯಕವಾಗಿದೆ. ಭಯೋತ್ಪಾದನೆಯನ್ನು ದ್ವೇಷಿಸಬೇಕೇ ಹೊತು ಧರ್ಮವನಲ್ಲ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಂತಾಪ ತಿಳಿಸುತ್ತಿರುವೆ. ಜೊತೆಗೆ ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಧಾನಿ ಮೋದಿಗೆ ದಿಗ್ವಿಜಯ್ ಸಿಂಗ್ ಚಾಲೆಂಜ್

    ಪ್ರಧಾನಿ ಮೋದಿಗೆ ದಿಗ್ವಿಜಯ್ ಸಿಂಗ್ ಚಾಲೆಂಜ್

    ನವದೆಹಲಿ: ನಿಮಗೆ ಅಷ್ಟೊಂದು ಧೈರ್ಯವಿದ್ದರೆ, ದಯವಿಟ್ಟು ನನ್ನ ವಿರುದ್ಧ ಕೇಸ್ ಹಾಕಿ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲೆಸೆದಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಸಿಂಗ್, ನೀವು ಹಾಗೂ ನಿಮ್ಮ ಸಚಿವರು ನನ್ನನ್ನು ಪಾಕಿಸ್ತಾನಕ್ಕೆ ಬೆಂಬಲಿಸುವವ ಹಾಗೂ ದೇಶದ್ರೋಹಿ ಎಂದು ಹೇಳಿದ್ದೀರಿ. ನಾನು ಆ ಟ್ವೀಟನ್ನು ದೆಹಲಿಯಿಂದಲೇ ಮಾಡಿದ್ದೆ. ಹೀಗಾಗಿ ದೆಹಲಿಯಲ್ಲಿರುವ ಪೊಲೀಸರು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತಾರಲ್ಲವೇ..? ಹೀಗಾಗಿ ನಿಮಗೆ ಧೈರ್ಯವಿದ್ದರೆ ನನ್ನ ವಿರುದ್ಧ ಕೇಸ್ ದಾಖಲಿಸಿ ಎಂದು ಚಾಲೆಂಜ್ ಹಾಕಿದ್ದಾರೆ.

    ಸಿಂಗ್ ಮಾಡಿದ್ದ ಟ್ವೀಟ್ ನಲ್ಲೇನಿತ್ತು..?
    ದಿಗ್ವಿಜಯ ಸಿಂಗ್ ಅವರು ಮಂಗಳವಾರ ಏರ್ ಸ್ಟ್ರೈಕ್ ನಡೆಸಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲದೆ ಪುಲ್ವಾಮಾ ದಾಳಿ ಒಂದು ಘಟನೆ ಆಕ್ಸಿಡೆಂಟ್ ಮಾತ್ರ ಎಂದು ಶಂಕೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಪುಲ್ವಾಮಾ ದುರ್ಘಟನೆಯ ನಂತರ ಭಾರತೀಯ ವಾಯುಪಡೆ ನಡೆಸಿದ ದಾಳಿಯಿಂದ ಪಾಕಿಸ್ತಾನದಲ್ಲಿರುವ ಉಗ್ರಗಾಮಿ ಶಿಬಿರಗಳು ನಾಶವಾಗಿರುವ ಬಗ್ಗೆ ವಿದೇಶಿ ಮಾಧ್ಯಮಗಳು ಅನುಮಾನ ವ್ಯಕ್ತಪಡಿಸಿವೆ. ಇದು ಸರ್ಕಾರ ನೀಡುತ್ತಿರುವ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಕೂಡ ಅವರು ಹೇಳಿದ್ದರು.

    ಈ ಹೇಳಿಕೆಗೆ ವಿಕೆ ಸಿಂಗ್ ತಿರುಗೇಟು ನೀಡಿ ದಿಗ್ವಿಜಯ್ ಸಿಂಗ್ ಸೇರಿದಂತೆ ಏರ್ ಸ್ಟ್ರೈಕ್ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಬಗ್ಗೆ ಕಿಡಿಕಾರಿದ್ದರು. ನಾನು ದಿಗ್ವಿಜಯ್ ಸಿಂಗ್‍ರನ್ನು ಗೌರವದಿಂದ ಪ್ರಶ್ನೆ ಮಾಡುತ್ತಿದ್ದೇನೆ. ರಾಜೀವ್ ಗಾಂಧಿ ಅವರ ಹತ್ಯೆ ಅಪಘಾತವೇ ಅಥವಾ ಉಗ್ರರ ದಾಳಿಯೇ ಎಂದು ಪ್ರಶ್ನಿಸಿದ್ದರು.

    ಏರ್ ಸ್ಟ್ರೈಕ್ ನಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಪ್ರಶ್ನೆಗೆ ವಾಯುಸೇನೆ ಉತ್ತರ ನೀಡಿರಲಿಲ್ಲ. ಏರ್ ಚೀಫ್ ಮಾರ್ಷಲ್ ಧನೋವಾ ಅವರು ಸತ್ತವರ ಹೆಣವನ್ನು ಲೆಕ್ಕಹಾಕುವುದು ನಮ್ಮ ಕೆಲಸವಲ್ಲ. ನಮಗೆ ಏನು ಗುರಿಯನ್ನು ನೀಡಲಾಗಿತ್ತೋ ಆ ಗುರಿಯನ್ನು ಯಶಸ್ವಿಯಾಗಿ ಹೊಡೆದು ಹಾಕಿದ್ದೇವೆ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪುಲ್ವಾಮಾ ದಾಳಿ ಆಕ್ಸಿಡೆಂಟ್ ಅನ್ನೋದಕ್ಕೆ ನಿಮ್ಮ ಬಳಿ ದಾಖಲೆ ಇದೆಯಾ? ಹುತಾತ್ಮ ಯೋಧನ ಪತ್ನಿ

    ಪುಲ್ವಾಮಾ ದಾಳಿ ಆಕ್ಸಿಡೆಂಟ್ ಅನ್ನೋದಕ್ಕೆ ನಿಮ್ಮ ಬಳಿ ದಾಖಲೆ ಇದೆಯಾ? ಹುತಾತ್ಮ ಯೋಧನ ಪತ್ನಿ

    ಮಂಡ್ಯ: ಪುಲ್ವಾಮಾ ಪ್ರಕರಣ ಒಂದು ಆಕ್ಸಿಡೆಂಟ್ ಎಂದ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿಕೆಗೆ ಹುತಾತ್ಮ ಯೋಧ ಗುರು ಪತ್ನಿ ಕಣ್ಣೀರು ಹಾಕುತ್ತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಹುತಾತ್ಮ ಯೋಧ ಗುರು ಅವರ ಪತ್ನಿ ಕಲಾವತಿ, ಸೈನಿಕರ ಪ್ರಾಣಕ್ಕೆ ಬೆಲೆಯೇ ಇಲ್ಲವೆ? ಚಳಿ, ಮಳೆ, ಬಿಸಿಲೆನ್ನದೆ, ತಿನ್ನಲು ಊಟ ಇಲ್ಲದೆ ದೇಶ ಕಾಯುತ್ತಾರೆ. ಅಂಥವರ ಪ್ರಾಣಕ್ಕೆ ಬೆಲೆ ಕಟ್ಟಬೇಡಿ. ಯಾವ ಉದ್ದೇಶದಿಂದ ಆಕ್ಸಿಡೆಂಟ್ ಎಂಬ ಪದ ಬಳಸಿದ್ದೀರಿ ಗೊತ್ತಿಲ್ಲ. ನಿಮ್ಮ ಬಳಿ ದಾಖಲೆ ಇದ್ದರೆ ತೋರಿಸಿ. ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರನ್ನು ಕಳೆದುಕೊಂಡು ಅವರ ಕುಟುಂಬಗಳು ಎಷ್ಟು ಕಷ್ಟ ಪಡುತ್ತಿದೆ ನಿಮಗೆ ಗೊತ್ತೆ? ಆಪ್ತರನ್ನು ಕಳೆದುಕೊಂಡಿದ್ದರೆ ನಿಮಗೆ ನಮ್ಮ ನೋವು ಗೊತ್ತಾಗುತ್ತಿತ್ತು. ಈ ರೀತಿ ಹೇಳಲು ನಿಮಗೆ ಹೇಗೆ ಧೈರ್ಯ ಬಂತು? ಪುಲ್ವಾಮಾ ದಾಳಿ ಒಂದು ಆಕ್ಸಿಡೆಂಟ್ ಅಂತ ಹೇಳಿ ಯೋಧರ ಸಾವಿಗೆ ಅವಮಾನ ಮಾಡಬೇಡಿ ಎಂದು ದಿಗ್ವಿಜಯ್ ಸಿಂಗ್ ಹೇಳಿಕೆಗೆ ಆಕ್ರೋಶ ಹೊರಹಾಕಿದ್ದಾರೆ.

    ನಮ್ಮ ಪರಿಸ್ಥಿತಿ ಅವರಿಗೆ ಗೊತ್ತಿಲ್ಲ. ನಿಮ್ಮ ಮನೆಯಲ್ಲಿ, ನಿಮ್ಮ ಮನೆ ಮಕ್ಕಳು ಈ ರೀತಿ ಮೃತಪಟ್ಟಿದ್ದರೆ ಏನು ಮಾಡುತ್ತಿದ್ದಿರಿ? ಕಳೆದುಕೊಂಡಿರುವ ನೋವು ನಮಗೆ ಗೊತ್ತು. ದೇಶಕ್ಕಾಗಿ ಪ್ರಾಣ ಕೊಟ್ಟಿರುವುದಕ್ಕೆ ಬೆಲೆಯೇ ಇಲ್ವಾ? ದಯವಿಟ್ಟು ಅಪಪ್ರಚಾರ ಮಾಡಬೇಡಿ. ಸತ್ಯ ತಿಳಿದು ಮಾತನಾಡಿ. ದಯಮಾಡಿ ಆಕ್ಸಿಡೆಂಟ್ ಎಂಬ ಪದ ಬಳಸಬೇಡಿ ಎಂದು ಕಣ್ಣೀರು ಹಾಕುತ್ತ ಕಲಾವತಿ ಅವರು ವಿನಂತಿ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಧ್ಯಪ್ರದೇಶ ಕೈ ನಾಯಕನ ವಿರುದ್ಧ ಜಾಮೀನು ರಹಿತ ವಾರೆಂಟ್!

    ಮಧ್ಯಪ್ರದೇಶ ಕೈ ನಾಯಕನ ವಿರುದ್ಧ ಜಾಮೀನು ರಹಿತ ವಾರೆಂಟ್!

    ಹೈದರಾಬಾದ್: ಮಾನನಷ್ಟ ಹೇಳಿಕೆ ನೀಡಿದ್ದ ಆರೋಪದಡಿ ಮಧ್ಯಪ್ರದೇಶದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಹೈದರಾಬಾದ್ ಕೋರ್ಟ್ ಜಾಮೀನುರಹಿತ ವಾರೆಂಟ್ ಜಾರಿ ಮಾಡಿದೆ.

    ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ (ಎಐಎಂಐಎಂ) ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ದಿಗ್ವಿಜಯ್ ಸಿಂಗ್ ಹೇಳಿಕೆ ನೀಡಿದ್ದರು. ಈ ಕುರಿತು ವಿಚಾರಣೆ ನಡೆಸಿದ್ದ ನಾಂಪಲ್ಲಿಯ 8ನೇ ಎಸಿಎಂಎಂ ನ್ಯಾಯಾಲಯವು ದಿಗ್ವಿಜಯ ಸಿಂಗ್ ಅವರಿಗೆ ವಾರೆಂಟ್ ಜಾರಿ ಮಾಡಿದೆ.

    ಏನಿದು ಪ್ರಕರಣ?:
    ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಣಕ್ಕಾಗಿ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಅವರು 2016ರಲ್ಲಿ ಹೇಳಿಕೆ ನೀಡಿದ್ದರು.

    ದಿಗ್ವಿಜಯ್ ಸಿಂಗ್ ಮಾನನಷ್ಟ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅಸಾದುದ್ದೀನ್ ಓವೈಸಿ ಹೈದರಾಬಾದ್‍ನ ಕೋರ್ಟ್ ಮೆಟ್ಟಿಲೇರಿದ್ದರು. ದೂರು ದಾಖಲಿಸಿಕೊಂಡಿದ್ದ ಹೈದರಾಬಾದ್‍ನ ನಾಂಪಲ್ಲಿಯ 8ನೇ ಎಸಿಎಂಎಂ ನ್ಯಾಯಾಲಯವು ವಿಚಾರಣೆ ನಡೆಸಿತ್ತು. ಆದರೆ ದಿಗ್ವಿಜಯ್ ಸಿಂಗ್ ವಿಚಾರಣೆಗೆ ಹಾಜರಾಗದೆ ನಿರಂತರವಾಗಿ ಗೈರು ಉಳಿದಿದ್ದರು. ಇದರಿಂದಾಗಿ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

    ದಿಗ್ವಿಜಯ್ ಸಿಂಗ್ ಅವರು ಅನೇಕ ಬಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ವಾರೆಂಟ್ ಜಾರಿಯಾಗಿದ್ದು ಇದೇ ಮೊದಲೇನಲ್ಲ. 2017 ಫೆಬ್ರವರಿ 21ರಂದು ಟ್ವೀಟ್ ಮಾಡಿದ್ದ ದಿಗ್ವಿಜಯ್ ಸಿಂಗ್ ಅವರು, ‘ಮದರಸಾ ಹಾಗೂ ಆರ್‌ಎಸ್‌ಎಸ್ ನಡೆಸುತ್ತಿರುವ ಸರಸ್ವತಿ ಶಿಶು ಮಂದಿರ್ ನಲ್ಲಿ ಯಾವುದಾರೂ ವ್ಯತ್ಯಾಸವಿದೆಯೇ? ನನ್ನ ಅಭಿಪ್ರಾಯದ ಪ್ರಕಾರ ಎರಡೂ ದ್ವೇಷವನ್ನೇ ಬಿತ್ತುತ್ತಿವೆ ಎಂದಿದ್ದರು. ಈ ಕುರಿತು ಕಿಡಿಕಾರಿದ್ದ ಆರ್‌ಎಸ್‌ಎಸ್ ಹಾಗೂ ಮದರಸಾ ದಿಗ್ವಿಜಯ್ ಸಿಂಗ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದವು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾನು ಪ್ರಚಾರಕ್ಕಿಳಿದ್ರೆ, ಕಾಂಗ್ರೆಸ್ಸಿಗೆ ಸೋಲಾಗುತ್ತೆ: ದಿಗ್ವಿಜಯ್ ಸಿಂಗ್

    ನಾನು ಪ್ರಚಾರಕ್ಕಿಳಿದ್ರೆ, ಕಾಂಗ್ರೆಸ್ಸಿಗೆ ಸೋಲಾಗುತ್ತೆ: ದಿಗ್ವಿಜಯ್ ಸಿಂಗ್

    ನವದೆಹಲಿ: ಕಾಂಗ್ರೆಸ್ ಪರವಾಗಿ ನಾನು ಪ್ರಚಾರ ನಡೆಸಿದ್ದೆ ಆದರೆ, ಪಕ್ಷಕ್ಕೆ ಸೋಲಾಗುತ್ತದೆ ಎಂದು ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಗೊಂದಲದ ಹೇಳಿಕೆಯನ್ನು ನೀಡಿದ್ದಾರೆ.

    ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷದಿಂದ ಯಾರಿಗೇ ಟಿಕೆಟ್ ನೀಡಿದರೂ, ಅಥವಾ ಶತ್ರುಗಳಿಗೇ ಟಿಕೆಟ್ ನೀಡಿದರೂ ಅವರನ್ನು ನೀವು ಗೆಲ್ಲಿಸಿ. ಚುನಾವಣೆಯಲ್ಲಿ ಅಭ್ಯರ್ಥಿಗಳ ಪರ ನಾನು ಪ್ರಚಾರವಾಗಲಿ, ಭಾಷಣ ಮಾಡುವುದಿಲ್ಲ. ಒಂದು ವೇಳೆ ನಾನು ಭಾಷಣ ಮಾಡಿದರೇ, ಕಾಂಗ್ರೆಸ್ಸಿಗೆ ಅಲ್ಪ ಮತಗಳು ಬೀಳುತ್ತವೆ. ಹೀಗಾಗಿ ನಾನು ಇದಕ್ಕೆ ಮುಂದಾಗುವಿದಲ್ಲವೆಂದು ಹೇಳಿದ್ದಾರೆ.

    ದಿಗ್ವಿಜಯ್ ಸಿಂಗ್ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಾದೇಶಿಕ ಸಮಿತಿ ಅಧ್ಯಕ್ಷ ಕಮಲ್ ನಾಥ್, ಅವರು ಯಾವ ಸಂದರ್ಭದಲ್ಲಿ ಆ ರೀತಿ ಹೇಳಿಕೆ ನೀಡಿದ್ದಾರೆ ಎನ್ನುವುದು ತಿಳಿದಿಲ್ಲ. ಈ ಬಗ್ಗೆ ಚರ್ಚಿಸಿ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

    ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆದರೆ ಕಾಂಗ್ರೆಸ್ಸಿನ ಹಿರಿಯ ನಾಯಕರೊಬ್ಬರು ಗೊಂದಲದ ಹೇಳಿಕೆ ನೀಡಿರುವುದು ಈಗ ಚರ್ಚೆಗೆ ಕಾರಣವಾಗಿದೆ.

    ಬಿಎಸ್‍ಪಿ ಮಾಯಾವತಿಯವರು ಮಧ್ಯಪ್ರದೇಶ ಹಾಗೂ ರಾಜಸ್ಥಾನ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ಸಿನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲವೆಂದು ನೇರವಾಗಿ ಹೇಳಿದ್ದರು. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಮೈತ್ರಿಗೆ ಒಪ್ಪಿಗೆ ಸೂಚಿಸಿದ್ದರೂ ಮಧ್ಯಪ್ರದೇಶ ಹಿರಿಯ ಮುಖಂಡರು ಮೈತ್ರಿಗೆ ಅಡ್ಡವಾಗಿದ್ದಾರೆ ಎಂದು ಮಾಯಾವತಿ ತನ್ನ ಆಪ್ತರ ಜೊತೆ ಹೇಳಿಕೊಂಡಿದ್ದರು ಎಂದು ವರದಿಯಾಗಿತ್ತು. ಈ ವಿಚಾರ ಮಧ್ಯಪ್ರದೇಶ ಚುನಾವಣೆಯಲ್ಲಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ದಿಗ್ವಿಜಯ್ ಸಿಂಗ್ ಅವರು ಪ್ರಚಾರದ ವಿಚಾರವಾಗಿ ಗೊಂದಲಕಾರಿ ಹೇಳಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ‘ರಾಮಪಥ’ ನಿರ್ಮಾಣಕ್ಕೆ ಕಾಂಗ್ರೆಸ್ ಬದ್ಧ: ದಿಗ್ವಿಜಯ್ ಸಿಂಗ್

    ‘ರಾಮಪಥ’ ನಿರ್ಮಾಣಕ್ಕೆ ಕಾಂಗ್ರೆಸ್ ಬದ್ಧ: ದಿಗ್ವಿಜಯ್ ಸಿಂಗ್

    ಭೋಪಾಲ್: ಪೌರಾಣಿಕ ಮಾರ್ಗ ‘ರಾಮಪಥ’ ನಿರ್ಮಿಸಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

    ಹಿಂದೂಗಳ ಆರಾಧ್ಯದೇವ ಶ್ರೀರಾಮ 14 ವರ್ಷಗಳ ವನವಾಸದ 11 ವರ್ಷ ಮಧ್ಯಪ್ರದೇಶ ಅರಣ್ಯ ಪ್ರದೇಶದಲ್ಲಿ ಸಂಚರಿಸಿದ ಎಂದು ಹೇಳಲಾಗುವ ಮಾರ್ಗವನ್ನು ಕಾಂಗ್ರೆಸ್ ಸರ್ವೆ ನಡೆಸಿ ನಿರ್ಮಾಣ ಮಾಡಲಾಗುತ್ತದೆ. ರಾಮಪಥದ ಜೊತೆಗೆ ‘ನರ್ಮದಾ ಪರಿಕ್ರಮ ಪಥ’ ನಿರ್ಮಿಸಲಾಗುವುದು. ರಾಮಪಥ ನಿರ್ಮಾಣಕ್ಕಾಗಿ ಜನರು ಕಾಂಗ್ರೆಸ್ ಅಧಿಕಾರಕ್ಕೆ ತರಬೇಕಿದೆ ಎಂದು ದಿಗ್ವಿಜಯ್ ಸಿಂಗ್ ಮನವಿ ಮಾಡಿಕೊಂಡಿದ್ದಾರೆ.

    ಆಡಳಿತ ಬಿಜೆಪಿ ಸರ್ಕಾರ ಚುನಾವಣೆಗೂ ಮುನ್ನ ರಾಮಪಥ ನಿರ್ಮಿಸಲಾಗುವುದು ಎಂದು ಭರವಸೆ ನೀಡಿತ್ತು. ಅಧಿಕಾರ ಗದ್ದುಗೆ ಹಿಡಿದ ಬಿಜೆಪಿ ಕೊಟ್ಟ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಮಧ್ಯಪ್ರದೇಶದ ಗಡಿ ಭಾಗದವರೆಗೂ ರಾಮಪಥವನ್ನು ನಾವು ನಿರ್ಮಿಸುತ್ತೇವೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಗೋ ಮಾತೆಯ ಬಗ್ಗೆ ದೊಡ್ಡ ಮಾತುಗಳನ್ನಾಗಿ ಗೆದ್ದ ಬಳಿಕ ಮರೆತು ಬಿಡ್ತಾರೆ. ಇದೂವರೆಗೂ ರಾಜ್ಯದಲ್ಲಿ ಗೋ ಶಾಲೆ ನಿರ್ಮಿಸಲು ವಿಫಲವಾಗಿದ್ದು, ಸರ್ಕಾರದ ಆಡಳಿತ ವೈಖರಿಗೆ ಕೈಗನ್ನಡಿಯಾಗಿದೆ. ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿದ್ರೆ ಗೋವುಗಳಿಗಾಗಿ ಪ್ರತಿ ಪಂಚಾಯ್ತಿ ಮಟ್ಟದಲ್ಲಿ ‘ಗೋ ಶಾಲೆ’ ಆರಂಭಿಸಲಾಗುವುದು ಎಂದು ದಿಗ್ವಿಜಯ್ ಸಿಂಗ್ ಭರವಸೆ ನೀಡಿದರು.

    ಏನಿದು ನರ್ಮದಾ ಪರಿಕ್ರಮ ಪಥ?
    ನರ್ಮದಾ ನದಿಗೆ ಪ್ರದಕ್ಷಿಣೆ ಹಾಕುವ ಧಾರ್ಮಿಕ ಪದ್ಧತಿಗೆ ‘ನರ್ಮದಾ ಪರಿಕ್ರಮ’ ಎಂದು ಕರೆಯುತ್ತಾರೆ. ಒಟ್ಟು 3,300 ಕಿ.ಮೀ. ಉದ್ದದ ನರ್ಮದಾ ನದಿಗೆ ಭಕ್ತರು ಪ್ರದಕ್ಷಿಣೆ ಹಾಕುತ್ತಾರೆ. ಈ ಹಿನ್ನೆಲೆಯಲ್ಲಿ ಭಕ್ತಾದಿಗಳಿಗಾಗಿ ಸುಸಜ್ಜಿತ ಮತ್ತು ಮೂಲಭೂತ ಸೌಕರ್ಯಯುಳ್ಳ ಮಾರ್ಗ ಅಭಿವೃದ್ಧಿ ಆಗಬೇಕಿದೆ.

    ಅಕ್ಟೋಬರ್ 1, 2017ರಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ‘ರಾಮ ಗಮನ ಪಥ’ ನಿರ್ಮಿಸುತ್ತೇವೆ ಎಂಬ ಭರವಸೆ ನೀಡಿದ್ದರು. ರಾಮಪಥ ಮಧ್ಯಪ್ರದೇಶದ ಸಾತ್ನಾ, ಪನ್ನಾ, ಶಾದೋಲ್, ಜಬಲ್ಪುರ ಮತ್ತು ವಿದಿಶಾ ಜಿಲ್ಲೆಗಳಲ್ಲಿ ನಿರ್ಮಾಣ ಆಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಜೆಪಿ ವಿರುದ್ಧ ಕಿಡಿಕಾರಲು ಹೋಗಿ ಎಡವಟ್ಟು: ಕ್ಷಮೆ ಕೇಳಿದ ದಿಗ್ವಿಜಯ್ ಸಿಂಗ್

    ಬಿಜೆಪಿ ವಿರುದ್ಧ ಕಿಡಿಕಾರಲು ಹೋಗಿ ಎಡವಟ್ಟು: ಕ್ಷಮೆ ಕೇಳಿದ ದಿಗ್ವಿಜಯ್ ಸಿಂಗ್

    ನವದೆಹಲಿ: ಭೋಪಾಲ್ ನಗರ ಮೆಟ್ರೋ ಸೇತುವೆ ಚಿತ್ರ ಎಂದು ಫೇಕ್ ಫೋಟೋವನ್ನು ಟ್ವೀಟ್ ಮಾಡಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ತಪ್ಪಿನ ಅರಿವಾಗಿ ಕ್ಷಮೆ ಕೇಳಿದ್ದಾರೆ.

    ತಮ್ಮ ಟ್ವಿಟ್ಟರ್ ಖಾತೆಯಿಂದ ಫೋಟೋವೊಂದನ್ನು ಶನಿವಾರ ಟ್ವೀಟ್ ಮಾಡಿದ್ದ ಅವರು, ಇದು ಮಧ್ಯಪ್ರದೇಶದ ಭೋಪಾಲ್ ನಗರದ ಸೇತುವೆಯಾಗಿದ್ದು, ಈಗಾಗಲೇ ಸೇತುವೆಗೆ ಡ್ಯಾಮೇಜ್ ಆಗಿದೆ. ಬಿಜೆಪಿ ನಾಯಕರು ಕೇವಲ ಸಿದ್ಧಾಂತಗಳನ್ನು ಮಾತನಾಡುತ್ತಾರೆ. ಆದರೆ ಇದು ಅವರಿಗೆ ತಿಳಿಯುವುದಿಲ್ಲ ಎಂದು ಬರೆದುಕೊಂಡಿದ್ದರು. ಅಲ್ಲದೇ ತಮ್ಮ ಟ್ವೀಟ್ ನಲ್ಲಿ ವಾರಣಾಸಿ ಸೇತುವೆ ಕುಸಿತ ಕುರಿತು ಉಲ್ಲೇಖಿಸಿ ಇಂತಹ ಘಟನೆ ಮರುಕಳಿಸದಂತೆ ಎಚ್ಚರವಹಿಸಲು ಕೋರಿದ್ದರು.

    https://twitter.com/digvijaya_28/status/1005679859732008961

    ಈ ಫೋಟೋ ಹಿಂದಿನ ಸತ್ಯಾಂಶವನ್ನು ಬಿಚ್ಚಿಟ್ಟ ಹಿರಿಯ ಪತ್ರಕರ್ತರೊಬ್ಬರು 2016ರ ಚಿತ್ರವನ್ನು ನೀವು ಅಪ್ಲೋಡ್ ಮಾಡಿದ್ದೀರಿ. ಪಾಕಿಸ್ತಾನದ ರಾವಲ್ಪಿಂಡಿ ಮೆಟ್ರೋ ಸೇತುವೆ ಚಿತ್ರ ಎಂದು ಮರು ಟ್ವೀಟ್ ಮಾಡಿದ್ದರು. ಅಲ್ಲದೇ ತೆಲಂಗಾಣ ಸಚಿವ, ತೆಲಂಗಾಣ ರಾಷ್ಟ್ರ ಸಮಿತಿಯ ನಾಯಕ ಕೆಟಿ ರಾಮರಾವ್ ಅವರು ಸಹ ಚಿತ್ರದ ಕುರಿತು ಮಾಹಿತಿ ಹಂಚಿಕೊಂಡಿದ್ದರು.

    ಪತ್ರಕರ್ತರ ಸ್ಪಷ್ಟನೆ ಕೇಳುತ್ತಿದಂತೆ ಎಚ್ಚೆತ್ತ ದಿಗ್ವಿಜಯ್ ಸಿಂಗ್ ಅವರು ತನ್ನ ಸ್ನೇಹಿತ ಕಳುಹಿಸಿದ ಚಿತ್ರವನ್ನು ತಾನು ಟ್ವೀಟ್ ಮಾಡಿದ್ದು, ಈ ಕುರಿತು ಮಾಹಿತಿ ಪಡೆದಿರಲಿಲ್ಲ ಎಂದು ಕ್ಷಮೆ ಕೇಳಿದ್ದಾರೆ.

    ಇದೇ ಮೊದಲಲ್ಲ: ಈ ಹಿಂದೆಯೂ ಕಾಂಗ್ರೆಸ್ ಹಿರಿಯ ನಾಯಕರಾದ ದಿಗ್ವಿಜಯ್ ಸಿಂಗ್ ಅವರು ಟ್ವೀಟ್‍ರಲ್ಲಿ ಪೋಸ್ಟ್ ಮಾಡಿ ಹಲವು ಎಡವಟ್ಟುಗಳನ್ನು ಮಾಡಿಕೊಂಡಿದ್ದರು. ಒಮ್ಮೆ ಕಾಂಗ್ರೆಸ್ ಸಂಸದೆ ರಾಜಕುಮಾರಿ ರತ್ನಾಸಿಂಗ್ ಅವರ ಬಗ್ಗೆ ಟ್ವೀಟ್ ಮಾಡಿ ರಾಜೀವ್ ಗಾಂಧಿ ಬದಲಾಗಿ ರಾಹುಲ್ ಗಾಂಧಿ ಸಂಪುಟದಲ್ಲಿ ಕಾರ್ಯನಿರ್ವಹಿಸಿದ್ದರು ಎಂದು ಟ್ವೀಟ್ ಮಾಡಿ ಬಳಿಕ ಡಿಲೀಟ್ ಮಾಡಿದ್ದರು. ಅಲ್ಲದೇ ಅಮೆರಿಕ ಅಧ್ಯಕ್ಷ ಟ್ರಂಪ್ ಹಾಗೂ ಪೋಪ್ ಕುರಿತ ಫೇಕ್ ವಿಡಿಯೋ ಟ್ವೀಟ್ ಮಾಡಿ ಪ್ರಮಾದ ಎಸಗಿದ್ದರು.

  • ಕಲ್ಲು ತೂರುವವರ ಬದಲು ಅರುಂಧತಿ ರಾಯ್‍ನ ಜೀಪಿಗೆ ಕಟ್ಟಿ: ಬಿಜೆಪಿ ಸಂಸದ ಪರೇಶ್ ರಾವಲ್

    ಕಲ್ಲು ತೂರುವವರ ಬದಲು ಅರುಂಧತಿ ರಾಯ್‍ನ ಜೀಪಿಗೆ ಕಟ್ಟಿ: ಬಿಜೆಪಿ ಸಂಸದ ಪರೇಶ್ ರಾವಲ್

    ನವದೆಹಲಿ: ಕಲ್ಲು ತೂರಾಟ ನಡೆಸುವವರನ್ನು ಜೀಪಿಗೆ ಕಟ್ಟುವ ಬದಲು ಲೇಖಕಿ ಅರುಂಧತಿ ರಾಯ್ ಅವರನ್ನು ಕಟ್ಟಿ ಎಂದು ಬಿಜೆಪಿ ಸಂಸದ ಪರೇಶ್ ರಾವಲ್ ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ.

    ಕಾಶ್ಮೀರದಲ್ಲಿ ಸೈನಿಕರ ಮೇಲೆ ಕಲ್ಲು ತೂರಾಟ ನಡೆಸುವವರನ್ನು ಸೇನೆಯ ಜೀಪಿನ ಮುಂಭಾಗಕ್ಕೆ ಕಟ್ಟಿದ್ದರ ಹಿನ್ನೆಲೆಯಲ್ಲಿ, ಕಲ್ಲು ತೂರಾಟ ನಡೆಸುವವರ ಬದಲು ಲೇಖಕಿ ಅರುಂಧತಿ ರಾಯ್ ಅವರನ್ನು ಕಟ್ಟಿ ಎಂದು ಪರೇಶ್ ರಾವಲ್ ಟ್ವೀಟ್ ಮಾಡಿದ್ದಾರೆ. ಪರೇಶ್ ರಾವಲ್ ಭಾನುವಾರ ರಾತ್ರಿ ಈ ರೀತಿಯಾಗಿ ಟ್ವಿಟ್ಟರ್‍ನಲ್ಲಿ ಬರೆದುಕೊಂಡಿದ್ದು, ಈ ಹೇಳಿಕೆಯ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ.

    ಅರುಂಧತಿ ರಾಯ್ ಭಾರತೀಯ ಸೇನೆಯ ವಿರುದ್ಧ ಮಾತನಾಡಿದ್ದರು ಎಂಬ ಹಿನ್ನೆಲೆಯಲ್ಲಿ ರಾವಲ್ ಈ ರೀತಿ ಟ್ವೀಟ್ ಮಾಡಿದ್ದಾರೆಂದು ವರದಿಯಾಗಿದೆ.

    ಇದನ್ನೂ ಓದಿ: ಕಲ್ಲು ತೂರಿದ್ದ ಯುವಕನನ್ನು ಜೀಪಿಗೆ ಕಟ್ಟಿ ಮೆರವಣಿಗೆ ಮಾಡಿದ್ದ ಅಧಿಕಾರಿಗೆ ಸೇನೆಯಿಂದ ಪ್ರಶಸ್ತಿ

    ಪರೇಶ್ ರಾವಲ್ ಟ್ವೀಟ್‍ಗೆ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದು, `ನಿಮಗೆ ಅರುಂಧತಿ ರಾಯ್ ಸಿಗದಿದ್ರೆ, ಪತ್ರಕರ್ತೆ ಸಾಗಾರಿಕಾ ಘೋಷ್ ಅವರನ್ನು ಜೀಪಿನ ಮುಂಭಾಗಕ್ಕೆ ಕಟ್ಟಬಹುದು. ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್‍ಗೆ ಪ್ರತಿಕ್ರಿಯಿಸಿರುವ ರಾವಲ್ `ನಮ್ಮ ಮುಂದೆ ಹಲವು ಆಯ್ಕೆಗಳಿವೆ’ ಎಂದು ಹೇಳಿದ್ದಾರೆ.

    ಪರೇಶ್ ರಾವಲ್ ಟ್ವೀಟ್‍ಗೆ ಅರುಂಧತಿ ರಾಯ್ ಇದೂವರೆಗೂ ಪ್ರತಿಕ್ರಿಯೆ ನೀಡಿಲ್ಲ. ಆದರೆ ಪತ್ರಕರ್ತೆ ಸಾಗರಿಕಾ ಘೋಷ್ ಪ್ರತಿಕ್ರಿಯಿಸಿದ್ದು, `ಅದ್ಭುತ ಸರ್, ತುಂಬಾ ಒಳ್ಳೆಯದು. ನೀವೊಬ್ಬ ಮಾದರಿ ಸಂಸದೀಯ ಪಟು’ ಎಂದು ವ್ಯಂಗ್ಯ ಮಾಡಿದ್ದಾರೆ.

    ಈ ಟ್ವೀಟ್‍ಗೆ ಕಾಂಗ್ರೆಸ್‍ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಪ್ರತಿಕ್ರಿಯಿಸಿ, `ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಬಿಜೆಪಿ ನಡುವೆ ಮೈತ್ರಿ ಬೆಸೆದವರನ್ನು ಯಾಕೆ ಜೀಪಿಗೆ ಕಟ್ಟಬಾರದು’ ಎಂದಿದ್ದಾರೆ.

     

    https://twitter.com/SirPareshRawal/status/866345474722320388